ಲೇಖಕ: admin

ನಾಪೋಕ್ಲು ಅ.9 NEWS DESK : ಅಂತರಾಷ್ಟ್ರೀಯ ಮಟ್ಟದ ಮ್ಯಾರಥಾನ್ ನಲ್ಲಿ ಕರವಟ್ಟಿರ ಚೈತ್ರ ಪಳಂಗಪ್ಪ ಸಾಧನೆ ಮಾಡಿದ್ದಾರೆ. ಇವರು 72 ಕಿಲೋಮೀಟರ್ ಅಂತರದ ಖರ್ದುಂಗ್ ಲಾ ಪಾಸ್  ಸವಾಲನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ವಾರ್ಷಿಕ ಲಡಾಕ್ ಮ್ಯಾರಥಾನ್ ಭಾಗವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವ  ಖರ್ದುಂಗ್ ಲಾ ಪಾಸ್  72 ಕಿ.ಮೀ ಅಂತರದ ಓಟವು 17,600 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿರುವ ಪೌರಾಣಿಕ ಖರ್ದುಂಗ ಲಾ ಪಾಸ್ ಸೇರಿದಂತೆ ಅತ್ಯಂತ ಎತ್ತರದ ಭೂ ಪ್ರದೇಶದ ಮೂಲಕ ಹಾದು ಹೋಗಿದೆ. ಈ ಅದ್ಭುತ ಸಾಧನೆಯನ್ನು ಮಾಡಲು ಧೈರ್ಯ ಮಾಡುವ ಕ್ರೀಡಾಪಟುಗಳನ್ನು ಕರೆದುಕೊಂಡು ಹೋಗುವ ಚಾಲೆಂಜ್ ಸ್ವಯಂ ಶೋಧನೆಯ ಪ್ರಯಾಣ ಮತ್ತು ಅವರ ಅವಿನಾ ಭಾವ ಮನೋಭಾವಕ್ಕೆ ಸಾಕ್ಷಿಯಾಗಿದೆ. ಇಂತಹ ಕಠಿಣ ಆಯ್ಕೆಯನ್ನು ಚೈತ್ರ ಸವಾಲಾಗಿ ಸ್ವೀಕರಿಸಿ ಯಶಸ್ವಿಗೊಳಿಸಿದ್ದಾರೆ. ಇವರು ಕೊಡಗಿನ ಮಡಿಕೇರಿ ತಾಲ್ಲೂಕಿನ ಕಕ್ಕಬೆ ಗ್ರಾಮ ಪಂಚಾಯಿತಿಯ ಯವಕಪಾಡಿ ಗ್ರಾಮದ ನಿವಾಸಿ ನಿವೃತ್ತ ಸೈನಿಕ ಕರವಟ್ಟಿರ ಪಳಂಗಪ್ಪ ಮತ್ತು ಕಾಂತಿ ದಂಪತಿಯ ಪುತ್ರಿ. ವರದಿ :…

Read More

ನಾಪೋಕ್ಲು ಅ.9 NEWS DESK  : ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಲಯ ಹಾಗೂ ಸಂಪಾಜೆ ಪಯಸ್ವಿನಿ ಯುವಕ ಸಂಘದ ಆಶ್ರಯದಲ್ಲಿ ದ್ವಿತೀಯ ವರ್ಷದ (ಕೆಸರ್ದ ಪರ್ಬ) ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಎನ್.ಸಿ.ಅನಂತ ಉದ್ಘಾಟಿಸಿದರು. ಪಯಸ್ವಿನಿ ಯುವಕ ಸಂಘದ ಅಧ್ಯಕ್ಷ ದುಗ್ಗಳ ತೀರ್ಥಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ರಮಾದೇವಿ ಬಾಲಚಂದ್ರ ಕಳಗಿ, ಪಂಚಲಿಗೇಶ್ವರ ದೇವಸ್ಥಾನ ಸಂಪಾಜೆ ಅಧ್ಯಕ್ಷ ಜಯಕುಮಾರ್ ಚಿದ್ಕರ್, ಪಕೀರ ಅಂಬಟೆಕಜೆ ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಂಪಾಜೆ ಹಾಗೂ ಡಾ.ಸುಬ್ರಹ್ಮಣ್ಯ ಭಟ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಯಸ್ವಿನಿ ಸಂಘದ ಎಲ್ಲಾ ಪದಾಧಿಕಾರಿಗಳು ಅನೇಕ ಕ್ರೀಡಾ ಪ್ರೇಮಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು. ವಿಕ್ರಂತ್ ಸಂಪಾಜೆ ಹಾಗೂ ಸುಂದರ ಸಂಪಾಜೆ ನಿರೂಪಿಸಿದರು. ಪಂದ್ಯಾಟ ಕೂಟದ ವೀಕ್ಷಕ ವಿವರಣೆ ಯನ್ನು ಖ್ಯಾತ ವೀಕ್ಷಕ ವಿವರಣೆಗಾರರಾದ ಸುರೇಶ್ ಪಡೀಪಂಡ ಮಾಡಿದರು. ::…

Read More

ಕುಶಾಲನಗರ ಅ.9 NEWS DESK : ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮವು ಜರುಗಿತು. ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು. ಬಾಲಾಜಿ ಕನಷ್ಟ್ರಕ್ಷನ್ ಮಾಲೀಕರಾದ ಸಂದೀಪ್, ಎಂ.ಆರ್.ಬಾಲ ಸೌಮ್ಯ ಮತ್ತು ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು. ಸುನಂದ ಕೌಶಿಕ್ ಹಾಗೂ ಕುಟುಂಬಸ್ಥರು ಕಾವೇರಿ ಮಾತೆಗೆ ವಸ್ತ್ರ ವಿತರಿಸಿದರು. ಈ ವೇಳೆ ಮಾತನಾಡಿದ ಉದ್ಯಮಿ ಕೌಶಿಕ್, ಕಾವೇರಿ ನದಿಗೆ ತನ್ನದೆ ಪಾವಿತ್ರ್ಯತೆ ಇದೆ. ಈ ಬಗ್ಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಜನರಿಗೆ ಕಾವೇರಿ ಬಗ್ಗೆ ಪೂಜ್ಯ ಭಾವನೆ ಬರಬೇಕು. ನದಿಗೆ ಕಲುಷಿತ ನೀರನ್ನು ಹರಿಸಬಾರದು ಎಂಬ ಅರಿವು ಜನರಲ್ಲಿ ಬಂದಲ್ಲಿ ಮಾತ್ರ ಕಾವೇರಿ ಅಪವಿತ್ರವಾಗುವುದನ್ನು ತಪ್ಪಿಸಬಹುದು ಎಂದು ಹೇಳಿದರು. ಬಾಲಾಜಿ ಕನಷ್ಟ್ರಕ್ಷನ್ ಮಾಲೀಕರಾದ ಸಂದೀಪ್ ಮಾತನಾಡಿ, ಜೀವನದಿ ಕಾವೇರಿ ಮತ್ತು ಪರಿಸರದ ಉಳಿವಿಗೆ…

Read More

ಮಡಿಕೇರಿ ಅ.9 NEWS DESK : ಮಡಿಕೇರಿ ಸಮೀಪದ ಕಾಟಕೇರಿ ಹಾರ್ ಮಂದಿರ್ ವಸತಿ ಶಾಲೆಯಲ್ಲಿ ನಡೆದ ಬೆಂಕಿ ಆಕಸ್ಮಿಕದಲ್ಲಿ ಬಾಲಕನೋರ್ವ ಜೀವ ಕಳೆದುಕೊಂಡಿದ್ದಾನೆ. ಎರಡನೇ ತರಗತಿಯ ವಿದ್ಯಾರ್ಥಿ ಕೆ.ಎ.ಪುಷ್ಪಕ್, ಭಾಗಮಂಡಲ ಸಮೀಪದ ಚೆಟ್ಟಿಮಾನಿ ನಿವಾಸಿಯಾಗಿದ್ದಾನೆ. ಬಾಲಕನ ತಾಯಿ ತ್ರಿವೇಣಿ, ಕುಂದಚೇರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆ ಅನಿಲ್ ಕುಮಾರ್ ಕೃಷಿಕರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ. ಚೆಟ್ಟಿಮಾನಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇಂದು ನಸುಕಿನ ನಾಲ್ಕು ಗಂಟೆಗೆ ಈ ಘಟನೆ ನಡೆದಿದ್ದು 50 ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ.  

Read More

ನಾಪೋಕ್ಲು ಅ.9 NEWS DESK :  ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮವು ಏ.17 ರಿಂದ 24ರ ವರೆಗೆ ನಡೆಯಲಿದೆ. ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಯನ್ನು ಮರ್ಕಜ್ ಸಂಸ್ಥೆಯಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಹಾಗೂ ಕೊಡಗು ಜಿಲ್ಲಾ ಖಾಜಿಗಳಾದ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಜಮಾಯತ್ ಅಧ್ಯಕ್ಷರಾದ ಹುಸೇನ್ ಸಖಾಫಿ, ಮಾಜಿ ಅಧ್ಯಕ್ಷರಾದ ಅಬೂಬಕರ್, ಕೆ.ಎಸ್.ಮಜೀದ್, ಹನಿಫಾ, ಸಿ.ಎಂ.ಅಶ್ರಫ್, ಹ್ಯಾರಿಸ್, ಯೂಸುಫ್ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ NEWS DESK ಅ.8 : ಮಡಿಕೇರಿಯಲ್ಲಿ ನಡೆದ ದಸರಾ ದಶಮಂಟಪಗಳ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆ ಕಾನೂನು ಹೋರಾಟ ನಡೆಸಲು ದಶಮಂಟಪ ಸಮಿತಿಗಳು ನಿರ್ಧರಿಸಿವೆ. ದಸರಾ ಸಂದರ್ಭ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬೇಕೆಂದು ಸಮಿತಿ ವಾದ ಮಂಡಿಸಿದೆ. ರಾತ್ರಿ 10 ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕವನ್ನು ಬಳಸಬಾರದೆಂಬ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಶೋಭಾಯಾತ್ರೆ ಸಂದರ್ಭ ಧ್ವನಿವರ್ಧಕವನ್ನು ಬಳಸಲಾಗಿದೆ ಎಂದು ಆರೋಪಿಸಿ ನಗರ ಠಾಣೆಯಲ್ಲಿ 10 ಮಂಟಪ ಸಮಿತಿಗಳ ಒಟ್ಟು 62 ಮಂದಿ ವಿರುದ್ಧ ಪ್ರತ್ಯೇಕ 10 ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ದಶಮಂಟಪಗಳ ಸಮಿತಿ ನೇತೃತ್ವದಲ್ಲಿ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಠಾಣೆಗೆ ಹಾಜರಾಗಿ ವೃತ್ತ ನಿರೀಕ್ಷಕ ಪಿ.ಕೆ.ರಾಜು ಅವರೊಂದಿಗೆ ಸಮಾಲೋಚನೆ ನಡೆಸಿದರು. ಪೊಲೀಸರ ಸೂಚನೆಯಂತೆ ರಾತ್ರಿ 11 ಗಂಟೆಯ ನಂತರ ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಿದ್ದರೂ ಪ್ರಕರಣ ದಾಖಲಿಸಲಾಗಿದೆ…

Read More

ಮಡಿಕೇರಿ NEWS DESK ಅ.8 : ಮಡಿಕೇರಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜ್ (ಜೂನಿಯರ್ ಕಾಲೇಜ್) ನ ನಿವೃತ್ತ ಪ್ರಾಂಶುಪಾಲರಾದ ರೇಖಾ ಕಾಳಯ್ಯ (75) (ಕೊಕ್ಕಲೇರ ಬೊಳ್ಳಮ್ಮ) ಅವರು ಇಂದು ನಿಧನ ಹೊಂದಿದರು. ಪ್ರಸ್ತುತ ಜೂನಿಯರ್ ಕಾಲೇಜ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಬೃಹತ್ ಸಭಾಂಗಣದ ಪರಿಕಲ್ಪನೆ ಇವರದ್ದೇ ಆಗಿದೆ. ತಮ್ಮ ಅಧಿಕಾರವಧಿಯಲ್ಲಿ ವಿವಿಧೋದ್ದೇಶಕ್ಕಾಗಿ ಈ ಕಟ್ಟಡವನ್ನು ಸರಕಾರ ಮತ್ತು ದಾನಿಗಳ ನಿರ್ಮಿಸಿದರು. ಸರಕಾರಿ ಪದವಿ ಪೂರ್ವ ಕಾಲೇಜ್ ಗೆ ಕಾಯಕಲ್ಪ ನೀಡಿದ್ದ ರೇಖಾ ಕಾಳಯ್ಯ ಅವರು ಉತ್ತಮ ಇಂಗ್ಲೀಷ್ ಜ್ಞಾನದೊಂದಿಗೆ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರುವಾಗಿದ್ದರು. ಮೃತರ ಅಂತ್ಯಕ್ರಿಯೆ ಅ.9ರಂದು ಮಡಿಕೇರಿ ಕೊಡವ ಸಮಾಜದ ರುದ್ರಭೂಮಿಯಲ್ಲಿ ನಡೆಯಲಿದೆ. ರೇಖಾ ಕಾಳಯ್ಯ ಅವರ ನಿಧನಕ್ಕೆ ಹಳೆಯ ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

Read More

ಮಡಿಕೇರಿ NEWS DESK ಅ.8 : ನಗರದ ಕೊಡಗು ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿನ ರಕ್ತದ ಕೊರತೆಯನ್ನು ಮನಗಂಡು ಸ್ವತ: ರಕ್ತದಾನ ಮಾಡುವ ಮೂಲಕ ಧರ್ಮಗುರುಗಳು ಮಾದರಿಯಾದರು. ಎಸ್.ಕೆ.ಎಸ್.ಎಸ್.ಎಫ್ ಸಿದ್ದಾಪುರ ಶಾಖೆ ಮತ್ತು ಕೊಡಗು ಬ್ಲಡ್ ಡೋನರ್ಸ್ ಮಡಿಕೇರಿ ಇದರ ಸಂಯುಕ್ತಾಶ್ರಯದಲ್ಲಿ ಸಿದ್ದಾಪುರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. 60ಕ್ಕೂ ಹೆಚ್ಚು ರಕ್ತದಾನಿಗಳು ಸೇರಿದಂತೆ ಧರ್ಮಗುರುಗಳು ರಕ್ತದಾನ ಮಾಡಿದರು. ಎಸ್.ಕೆ.ಎಸ್.ಎಸ್.ಎಫ್ ಮತ್ತು ಕೊಡಗು ಬ್ಲಡ್ ಡೋನರ್ಸ್ ನ ಪದಾಧಿಕಾರಿಗಳು ಹಾಗೂ ಧರ್ಮಗುರುಗಳು ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾದರು.

Read More

ಮಡಿಕೇರಿ ಅ.8 NEWS DESK : ತುಂಡು ಕಾಮಗಾರಿ ಗುತ್ತಿಗೆದಾರನ ಬಿಲ್ ಮೊತ್ತ ಪಾವತಿಸಲು ರೂ.25 ಸಾವಿರ ಲಂಚ ಪಡೆದ ಆರೋಪದಡಿ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಸಮೀಪದ ಹಂಡ್ಲಿ ಗ್ರಾ.ಪಂ ಅಧ್ಯಕ್ಷೆ ಸುಧಾ ಹಿರೇಶ್ ಎಂಬುವವರನ್ನು ಕೊಡಗು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರಸಂತೆ ಹೋಬಳಿ ಒಡೆಯನಪುರ ಗ್ರಾಮ ನಿವಾಸಿ ಡಿ ದರ್ಜೆ ಗುತ್ತಿಗೆದಾರ ಹಮೀದ್ ಎಸ್.ಎ ಎಂಬುವವರು ಹಂಡ್ಲಿ ಗ್ರಾಮ ಪಂಚಾಯಿತಿಯಲ್ಲಿ ಪಡೆದಿರುವ ತುಂಡು ಗುತ್ತಿಗೆ ಕಾಮಗಾರಿಗಳ ಮೇಲುಸ್ತುವಾರಿ ನೋಡಿಕೊಳ್ಳಲು ಹುಲುಸೆ ಗ್ರಾಮದ ಭರತ್ ಎಂಬುವವರನ್ನು ನೇಮಿಸಿಕೊಂಡಿದ್ದರು. 15ನೇ ಹಣಕಾಸು ಅನುದಾನದಡಿ 2 ಕಾಮಗಾರಿಗಳು ಹಾಗೂ ಇತರೆ 6 ಕಾಮಗಾರಿಗಳ ಒಟ್ಟು ಮೊತ್ತ ರೂ.14,79,700 ಮಂಜೂರು ಮಾಡಲು ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಹಿರೇಶ್ ರೂ. 25 ಸಾವಿರ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಗುತ್ತಿಗೆದಾರ ಹಮೀದ್ ಎಸ್.ಎ ಅವರಿಗೆ ಭರತ್ ತಿಳಿಸಿದ ಸಂದರ್ಭ ಅಧ್ಯಕ್ಷರ ಮೇಲೆ ಲೋಕಾಯುಕ್ತಕ್ಕೆ ದೂರು ನೀಡುವಂತೆ ಹೇಳಿದ್ದರು. ಅದರಂತೆ ಭರತ್ ಮಡಿಕೇರಿ ಲೋಕಾಯುಕ್ತ…

Read More

ಮಡಿಕೇರಿ ಅ.8 NEWS DESK : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಹೆಗ್ಗಳ ಮಾರ್ಗದಲ್ಲಿ ಅ.9 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಆರ್ಜಿ, ಬೇಟೋಳಿ, ಹೆಗ್ಗಳ, ರಾಮನಗರ, ಪೆರುಂಬಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More