ವಿರಾಜಪೇಟೆ ನ.12 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ವಿದ್ಯಾರ್ಥಿ ಬಳಗದ ವತಿಯಿಂದ ಕೊಡಗಿನ ಕನ್ನಡ ನುಡಿ ವೈಭವದ ಹಬ್ಬ ನುಡಿ ಉತ್ಸವ-2025 ರ ಲಾಂಛನವನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜರುಗುವ ಈ ಕಾರ್ಯಕ್ರಮವು ಸಂಭ್ರಮದ ಕಾರ್ಯಕ್ರಮವಾಗಿದ್ದು, ನಮ್ಮ ನಾಡಿನ ಹೆಮ್ಮೆಯ ಹಬ್ಬವು ಆಗಿದೆ. ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಕನ್ನಡ ನಾಡು ಪ್ರಾಚೀನ ಇತಿಹಾಸವನ್ನು ಹೊಂದಿದ್ದು, ರಾಜ್ಯೋತ್ಸವದ ಆಚರಣೆಯು ನಾವು ನಾಡಿಗೆ ಸಲ್ಲಿಸುವ ಗೌರವವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಡಗು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ನ ನುಡಿ ಉತ್ಸವ ಸಮಿತಿಯ ಸಂಚಾಲಕರು ಹಾಗೂ ಪತ್ರಕರ್ತರಾದ ಅಬ್ದುಲ್ ರೆಹಮಾನ್ ಮಾತನಾಡಿ, ಕನ್ನಡಮ್ಮನ ಸೇವೆಗೆ ನಾವು ಸದಾ ಸಿದ್ಧರಿರಬೇಕು. ವಿರಾಜಪೇಟೆಯ ಈ…
ಲೇಖಕ: admin
ಮಡಿಕೇರಿ ನ.12 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಜಿಲ್ಲೆಯ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಇದೇ ನ.14 ರಿಂದ 20ರವರೆಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಆಯೋಜಿಸಲಾಗಿದೆ ಎಂದು ಯೂನಿಯನ್ ಜಿಲ್ಲಾಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನ.14 ರಂದು ನಡೆಯಲಿದ್ದು, ಸಮಾರೋಪ ಸಮಾರಂಭ ನ.20 ರಂದು ಮಡಿಕೇರಿಯ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ‘ಉನ್ನತಿ ಭವನ’ದ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು. *ಪ್ರಶಸ್ತಿ ಪ್ರದಾನ* ಮಡಿಕೇರಿಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿಯನ್ನು ಪೊನ್ನಂಪೇಟೆಯ ಹಿರಿಯ ಸಹಕಾರಿಗಳಾದ ಚಿರಿಯಂಡ ಕೆ.ಉತ್ತಪ್ಪ ಅವರಿಗೆ ಪ್ರದಾನ ಮಾಡಲಾಗುತ್ತದೆ. ‘ಶ್ರೇಷ್ಠ ಸಹಕಾರಿ ಪ್ರಶಸಿ’್ತಯನ್ನು ಈ ಬಾರಿ ಸೋಮವಾರಪೇಟೆ ತಾಲ್ಲೂಕಿನ ಶುಂಠಿ ಗ್ರಾಮದ ಎಚ್.ಎಸ್.ಮುದ್ದಪ್ಪ, ಮಡಿಕೇರಿ ತಾಲ್ಲೂಕಿನ…
ಬೆಂಗಳೂರು ನ.11 NEWS DESK : ಬೆಂಗಳೂರಿನ ಗಾಂಧಿನಗರದಲ್ಲಿ ನೂತನ ಕುರುಬ ಸಮಾಜದ ವಿದ್ಯಾರ್ಥಿನಿಲಯ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮತ್ತು ತಿಂತಿಣಿ ಮಠದ ಸಿದ್ದರಾಮೇಶ್ವರ ನಂದಾಪುರಿ ಸ್ವಾಮೀಜಿಯವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಬೈರತಿ ಸುರೇಶ್ ಸೇರಿ ಕರ್ನಾಟಕ ರಾಜ್ಯ ಪ್ರದೇಶ ಕುರುಬರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಮಾಜದ ಹಾಲಿ / ಮಾಜಿ ಸಚಿವರುಗಳು, ಶಾಸಕರುಗಳು ಸೇರಿ ಹಲವು ಗಣ್ಯರುಗಳು ಉಪಸ್ಥಿತರಿದ್ದರು.
ಮಂಡ್ಯ ನ.12 NEWS DESK : ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು.ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ, ತಿಂಗಳ ಹಿಂದೆ ಬಿದ್ದು ಸೊಂಟ ಪೆಟ್ಟಾಗಿ, ಆಪರೇಷನ್ ಆಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಂಜೆ ಸ್ವಗ್ರಾಮ ನೊದೆಕೊಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಲಿದೆ ಎಂದು ಮೃತರ ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ.
ಮೂರ್ನಾಡು ನ.12 NEWS DESK : ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾಗಿ ತೇಲಪಂಡ ಸಿ. ಸುಬ್ಬಯ್ಯ ಆಯ್ಕೆಯಾಗಿದ್ದಾರೆ. ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಪುದಿಯೊಕ್ಕಡ ಕಾಶಿ ಕರುಂಬಯ್ಯ ಅವರ ಆರೋಗ್ಯದಲ್ಲಿ ಏರುಪೇರು ಇದ್ದು, ಸೇವೆಯಲ್ಲಿ ಮುಂದುವರೆಯಲು ಸಾಧ್ಯವಾಗದಕಾರಣ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಸಮಾಜದ ಅಧ್ಯಕ್ಷರಾಗಿ ತೇಲಪಂಡ ಸಿ. ಸುಬ್ಬಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಕೋಟೇರ ಎ.ರಾಜ, ಗೌ. ಕಾರ್ಯದರ್ಶಿಯಾಗಿ ಚಂಗಂಡ ಸೂರಜ್ ತಮ್ಮಯ್ಯ, ಖಜಾಂಚಿಯಾಗಿ ಅಮ್ಮಟಂಡ ಎಮ್. ದೇವಯ್ಯ, ನಿರ್ದೇಶಕರುಗಳಾಗಿ ತಿರುಟೆರ ಕಾಶಿ, ಪೋತಂಡರಾಜ, ಅಮ್ಮಟಂಡ ಮನು, ಮುಂಡಂಡ ತಿಮ್ಮಣ್ಣ, ಪಳಂಗಂಡ ಹರೀಶ್, ಮಚ್ಚಾರಂಡ ಸುಬ್ರಮಣಿ, ಚೇನಂಡ ಲಾಲ, ಮುಕ್ಕಾಟಿರ ಹರೀಶ್, ಚೌರೀರ ಅಪ್ಪಣ್ಣ, ಮಂಡೆಪಂಡ ಕುಟ್ಟಯ್ಯ, ಚೌರೀರ ಪ್ರಕಾಶ್, ಅಚ್ಚಕಾಳಿರ ಅಯ್ಯಪ್ಪ, ಮುಂಡಂಡ ಜಮುನ, ಪಾಂಡಂಡ ಸ್ವಾತಿ ಮತ್ತು ಕುಂಜಿಲಂಡ ಗ್ರೇಸಿ ಅವರುಗಳು ಆಡಳಿತ ಮಂಡಳಿಯಲ್ಲಿ ತಮ್ಮದೆ ಸ್ಥಾನಗಳಲ್ಲಿ ಮುಂದುವರೆಯುತ್ತಾರೆ. ಮೂಡೇರ ಮನು ಮಾದಪ್ಪ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿ : ಟಿ.ಸಿ.…
ಮಡಿಕೇರಿ ನ.12 NEWS DESK : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯಚಿತ್ರ ಇಂಡಿಯನ್ ಪನೋರಮಾಗೆ ಆಯ್ಕೆಯಾಗಿದೆ. ಗೋವಾದಲ್ಲಿ ನಡೆಯುವ 56ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನ.27ರಂದು ‘ಉಮ್ಮತ್ತಾಟ್’ ಪ್ರದರ್ಶನಗೊಳ್ಳಲಿದೆ. ‘ಉಮ್ಮತ್ತಾಟ್’ ಕೊಡವ ಜಾನಪದ ನೃತ್ಯ ಪ್ರಕಾರವಾಗಿದ್ದು, ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕಲೆಯ ಮೇಲೆ ಸಾಕ್ಷ್ಯಚಿತ್ರ ಬೆಳಕು ಚೆಲ್ಲಿದೆ. ಒಟ್ಟು 13 ನೃತ್ಯ ಪ್ರಕಾರಗಳನ್ನು ಚಿತ್ರೀಕರಿಸಲಾಗಿದ್ದು, 153 ಕಲಾವಿದರು ನೃತ್ಯ ಮಾಡಿದ್ದಾರೆ. ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ದೇಶನದ ಸಾಕ್ಷ್ಯಚಿತ್ರಕ್ಕೆ ‘ಉಮ್ಮತ್ತಾಟ್’ ತರಬೇತುದಾರರಾದ ಕಲಾವಿದೆ ಬೊಳ್ಳಜಿರ ಯಮುನಾ ಅಯ್ಯಪ್ಪ ಅವರ ಸಹ ನಿರ್ದೇಶನವಿದ್ದು, ನಿರೂಪಣೆಯನ್ನು ಕೂಡ ಮಾಡಿದ್ದಾರೆ. ವಸ್ತ್ರ ವಿನ್ಯಾಸ ಮತ್ತು ನೃತ್ಯ ಪ್ರದರ್ಶನಕ್ಕೆ ಸಹಕಾರ ನೀಡಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತೆ, ನೃತ್ಯ ಮತ್ತು ನೃತ್ಯ ಸಂಗೀತ ಭರತನಾಟ್ಯದ ಕುರಿತು ಮಂಡಿಸಿದ ಪ್ರಬಂಧಕ್ಕೆ ಕೇಂದ್ರ ಸರಕಾರದ ಜೂನಿಯರ್ ಫೆಲೋಶಿಪ್ ಪಡೆದಿರುವ ಅಂತರರಾಷ್ಟ್ರೀಯ ಮಟ್ಟದ…
ವಿರಾಜಪೇಟೆ ನ.12 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಯಮುಡಿ ಕಾರ್ಯಕ್ಷೇತ್ರ, ಪೊನ್ನಪ್ಪಸಂತೆ ಸರ್ಕಾರಿ ಅನುದಾನಿತ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷ ಸೀನ ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯರಾದ ಡಾ. ಗಾನಶ್ರೀ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಹದಿ ಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಅಲ್ಲದೆ ತಮ್ಮ ಓದಿನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳಾದ ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರ ಹಾನಿಕಾರವಲ್ಲದೆ ನಮ್ಮ ಪರಿವಾರಕ್ಕೂ ಹಾನಿಯನ್ನು ಉಂಟುಮಾಡುತ್ತದೆ. ಈ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆಗಳು ಬರಬಹುದು. ಒಂದು ವೇಳೆ ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆಯನ್ನು ಕಂಡಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳು ಏಕಾಗ್ರತೆ ಕೊರತೆ ಹಾಗೂ ಕಲಿಕೆಯ ಮೇಲಿನ…
ಮಡಿಕೇರಿ ನ.12 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನ.14 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಪೊನ್ನಂಪೇಟೆಯ ಚಿರಿಯಪಂಡ ಕೆ. ಉತ್ತಪ್ಪ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ, ಸೋಮವಾರಪೇಟೆ ತಾಲೂಕಿನ ಶುಂಠಿ ಗ್ರಾಮದ ಎಚ್.ಎಸ್. ಮುದ್ದಪ್ಪ, ಮಡಿಕೇರಿ ತಾಲೂಕು ಅರುವತ್ತೋಕ್ಲು ಗ್ರಾಮದ ತಳೂರು ಎ. ಕಿಶೋರ್ ಅವರಿಗೆ ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಮತ್ತು ಶನಿವಾರಸಂತೆಯ ನಿವಾಸಿ ದೇವಾಂಬಿಕ ಮಹೇಶ್ ಅವರಿಗೆ ‘ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ‘ಉನ್ನತಿ ಭವನ’ದ ಸಭಾಂಗಣದಲ್ಲಿ ನ.20 ರಂದು ಏರ್ಪಡಿಸಲಾಗಿದೆ. :: ಚಿರಿಯಪಂಡ ಕೆ. ಉತ್ತಪ್ಪ – ಕೊಡಗು ಸಹಕಾರ ರತ್ನ :: ಜಿಲ್ಲೆಗೊಬ್ಬರಂತೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ…
ಕುಶಾಲನಗರ ನ.12 NEWS DESK : ಕ್ರೀಡೆ ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯವನ್ನು ರೂಪಿಸುತ್ತದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಹಾಗೂ ಫಾತಿಮಾ ವಿದ್ಯಾ ಸಂಸ್ಥೆ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಎರಡು ದಿನ ಇಲ್ಲಿನ ಜಂಪ್ ಸ್ಮ್ಯಾಶ್ ಒಳಾಂಗಣದಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗ ಮಟ್ಟದ 14 ಮತ್ತು 17 ವಯೋಮಿತಿಯ ಬಾಲಕ, ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು. ಕ್ರೀಡಾ ಸಾಧನೆಗೆ ನಮ್ಮ ಸರ್ಕಾರದ ಉದ್ಯೋಗ ನೇಮಕಾತಿಯಲ್ಲಿ ಶೇ.2 ಅವಕಾಶ ನೀಡಲಾಗಿದೆ.ಈ ಅವಕಾಶವನ್ನು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯೆಸ್.ಪಲ್ಲೇದ್ ಮಾತನಾಡಿ,ಮೈಸೂರು ವಿಭಾಗದ ಎಲ್ಲಾ ಎಂಟು ಜಿಲ್ಲೆಗಳಿಗೆ ಊಟ,ಉಪಾಹಾರ ಮತ್ತು ವಸತಿ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಹಾಗೆ ಜಂಪ್ ಸ್ಮ್ಯಾಶ್ ಅಕಾಡೆಮಿಯ ವ್ಯವಸ್ಥಾಪಕರಾದ ವಕೀಲ ಶರತ್ ಉಚಿತವಾಗಿ ಅಂಕಣದ ವ್ಯವಸ್ಥೆ…
ಸುಂಟಿಕೊಪ್ಪ ನ.12 NEWS DESK : ಎಷ್ಟೇ ದೊಡ್ಡ ಪದವಿಗಳನ್ನು ಪಡೆದುಕೊಂಡರೇ ದೊಡ್ಡವರಾಗುವುದಿಲ್ಲ. ಜೀವನದಲ್ಲಿ ಸಂಸ್ಕಾರ ಹಾಗೂ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ನಡೆದುಕೊಳ್ಳುವವರೇ ನಿಜವಾದ ಪದವಿಧರರು ಎಂದು ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸತೀಶ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್ಬೈಲ್ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಮಂಜಿಕೆರೆ ಸಮುದಾಯ ಭವನದಲ್ಲಿ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪೋಷಕರೆ ಶಿಕ್ಷಕರು. ಮಕ್ಕಳು 14 ವರ್ಷದವರೆಗೆ ಪೋಷಕರನ್ನು ಅನುಸರಿಸಿಕೊಂಡು ಮುನ್ನಡೆಯುತ್ತಾರೆ ಆ ಸಂದರ್ಭದಲ್ಲಿ ಪೋಷಕರು ಮನೆಗಳಲ್ಲಿ ಅನ್ಯೋನ್ಯತೆ, ಉತ್ತಮ ವಾತವರಣವನ್ನು ನಿರ್ಮಿಸಿಕೊಡಲ್ಲಿ ಮಾತ್ರ ಮಕ್ಕಳಿಂದ ಭವಿಷ್ಯವನ್ನು ಎದುರು ನೋಡಬಹುದಾಗಿದೆ. ಮನೆಯೇ ಮೊದಲ ಗುರುವಾಗಿದ್ದು ಶಿಕ್ಷಕರಲ್ಲಾವೆಂದು ಅವರು ಬಣ್ಣಿಸಿದರು. ಮಕ್ಕಳು ಪ್ರೌಢಶಾಲೆಯನ್ನು ಮುಗಿಸಿ ಪದವಿ ಕಾಲೇಜುಗಳಿಗೆ ಸೇರಿಸುವ ಮುನ್ನ ಪೋಷಕರು ಮಕ್ಕಳೊಂದಿಗೆ ಚರ್ಚಿಸಿ ಮಕ್ಕಳ ಆಸಕ್ತಿ ಮತ್ತು ಅಭಿರುಚಿಯ ಬಗ್ಗೆ ಆರಿತು ಅಂತಹ ಶಿಕ್ಷಣಗಳಿಗೆ ಪ್ರೋತ್ಸಾಹಿಸಬೇಕು ಇದಿರಂದ ಮಕ್ಕಳು ಸಂಪನ್ಮೂಲ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವೆಂದು…






