ಮಡಿಕೇರಿ ಅ.8 NEWS DESK : ಜಿಲ್ಲೆಯ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯ ಸಿದ್ಧಪಡಿಸಲಾಗಿದೆ. ಸಾರ್ವಜನಿಕರು https://kscbcselfdeclaration.karnataka.gov.in/ನಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಲಿಂಕ್ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆ ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಿದೆ. ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು, ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ…
ಲೇಖಕ: admin
ಮಡಿಕೇರಿ ಅ.8 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ರೂಢಿ ಸಂಪ್ರದಾಯದಂತೆ, “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಅ.17 ರಂದು ಮಧ್ಯಾಹ್ನ 1.44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಆಗಮಿಸುತ್ತಾಳೆ. ಈ ವರ್ಷ ಮಧ್ಯಾಹ್ನ ಸಮಯದಲ್ಲಿ ತೀರ್ಥೋದ್ಭವವು ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾವೇರಿ ಮಾತೆಯ ದರ್ಶನವನ್ನು ಪಡೆಯಲು ಆಗಮಿಸುವ ನಿರೀಕ್ಷೆಯಿರುವುದರಿಂದ, ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಕೈಗೊಳ್ಳುತ್ತಿದೆ. ಜಾತ್ರಾ ಮಹೋತ್ಸದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮ ನಡೆಸಲು ಹಾಗೂ ಇತರೆ ನಿರ್ವಹಣೆಗಾಗಿ ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ರೂ.2 ಕೋಟಿ ಅನುದಾನವನ್ನು ಹಾಗೂ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರದ ವತಿಯಿಂದ ಮುಜರಾಯಿ ಇಲಾಖೆಯ ಮೂಲಕ ರೂ.75 ಲಕ್ಷಗಳ ಅನುದಾನವನ್ನು ಮಂಜೂರು ಮಾಡಿ ಆದೇಶಿಸಿದೆ. ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ, ಬ್ಯಾರಿಕೇಡ್ ಅಳವಡಿಕೆ, ವೇದಿಕೆ ನಿರ್ಮಾಣ, ಮಳೆಯಿಂದ ರಕ್ಷಣೆಗಾಗಿ ಮೆಟಲ್ ಶೀಟ್, ಪೆಂಡಾಲ್ಗಳು, ಹೂವಿನ ಅಲಂಕಾರ,…
ಮಡಿಕೇರಿ ಅ.8 NEWS DESK : ಕೊಯವ ಸಮಾಜದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸುವ ಕಾರ್ಯಕ್ರಮ ಮೂರ್ನಾಡಿನ ಪ್ರಗತಿ ಕಟ್ಟಡದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಇಬ್ಬರು ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಸೇನಾಧಿಕಾರಿ ಹಾಗೂ ನಿವೃತ್ತ ಪೊಲೀಸ್ ಉಪಠಾಣಾಧಿಕಾರಿ ಜಿಲ್ಲಂಡ ಸನ್ನು ಚೀಯಣ್ಣ ಅವರು, ಭಾರತೀಯ ಸೇನೆಯಲ್ಲಿ ಸೇವೆ ಮಾಡುವುದು ಮಹಾಭಾಗ್ಯದ ಕೆಲಸ. ಶಿಸ್ತು, ಸಮಯ ಪಾಲನೆ, ನಿಷ್ಠೆ, ಪ್ರಾಮಾಣಿಕತೆ, ದೇಶಾಭಿಮಾನವನ್ನು ಮೈಗೂಡಿಸಿಕೊಂಡು ಸೇವೆ ಮಾಡಿದರೆ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು. ಯುವ ಪೀಳಿಗೆ ಉನ್ನತ ಶಿಕ್ಷಣ ಪಡೆದು ಸೇನೆಯಲ್ಲಿ ಸೇವೆ ಸಲ್ಲಿಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಮತ್ತು ಇರುವ ಅವಕಾಶಗಳನ್ನು ಬಳಸಿಕೊಂಡು ಸೈನಿಕರಿಂದ ಅಧಿಕಾರಿಯವರೆಗೆ ಬಡ್ತಿ ಹೊಂದಲು ಸಾಧ್ಯವಿದೆ ಎಂದು ಸಲಹೆ ನೀಡಿದರು. ನಿವೃತ್ತ ಎಎಸ್ಐ ನೇಂದುಮಂಡ ಪ್ರಕಾಶ್ ಮಾತನಾಡಿ, ದೇಶದ ಗಡಿಯ ಭದ್ರತೆ ಎಷ್ಟು ಮುಖ್ಯವೋ, ದೇಶದ ಆಂತರಿಕ ಭದ್ರತೆಯೂ ಅಷ್ಟೇ ಮುಖ್ಯ ಎಂದು…
ಮುಂಬೈ ಅ.8 NEWS DESK : ಪ್ರಧಾನಿ ನರೇಂದ್ರ ಮೋದಿ 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು. 1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು ಭಾರತದ ವಾಯುಯಾನ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಭಾರೀ ಸಂಚಾರ ಹೊರೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ. ಪ್ರಧಾನಿ ಮೋದಿ ಅವರು ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟನೆಗೆ ಮುನ್ನ, ವಿಮಾನ ನಿಲ್ದಾಣದ ಒಳಗೆ ಒಂದು ಸುತ್ತು ಓಡಾಡಿ, ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಕೇಂದ್ರ ಸಚಿವ ಮುರಳೀಧರ್ ಮೊಹೋಲ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯಪಾಲ ಆಚಾರ್ಯ ದೇವವ್ರತ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.
ಮಡಿಕೇರಿ ಅ.8 NEWS DESK : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಪಾದರಕ್ಷೆ ಎಸೆಯಲು ಪ್ರಯತ್ನಿಸಿದ ಪ್ರಕರಣವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಕೃತ್ಯವೆಸಗಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲಿನ ದಾಳಿ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವ ಮೂಲಕ ದಾಳಿಯ ಪ್ರಯತ್ನದ ಹಿಂದಿರುವ ಹುನ್ನಾರವನ್ನು ಬಯಲಿಗೆಳೆಯಬೇಕು ಮತ್ತು ಕೃತ್ಯವೆಸಗಿದ ವಕೀಲನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ, ಬದಲಾಗಿ ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗ ಕೆಲವು ಸನಾತನವಾದಿಗಳು ಇದನ್ನು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕುಳಿತು ನ್ಯಾಯ ನೀಡುವುದನ್ನು ಒಪ್ಪದ…
ಬೆಂಗಳೂರು ಅ.8 NEWS DESK : ರಕ್ಷಣಾ ಸಚಿವಾಲಯದ (ಸೇನೆಯ) ಕೇಂದ್ರ ಕಚೇರಿಯ ಪರವಾಗಿ 515 ಸೇನಾ ನೆಲೆ ಕಾರ್ಯಾಗಾರ (ಎಬಿಡಬ್ಲೂ) ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್ಗಳ ಮಹಾನಿರ್ದೇಶಕರು ಮತ್ತು ಇಂಡಿಅಸ್ತ್ರ (IndyASTRA) ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪರವಾಗಿ ಭಾರತೀಯ ಸೇನಾ ಭೂ ವ್ಯವಸ್ಥೆಗಳಿಗಾಗಿ ಕೃತಕ ಬುದ್ಧಿಮತ್ತೆ ಆಧರಿಸಿದ ಡ್ರೋನ್ ಸಾಮರ್ಥ್ಯಗಳನ್ನು ವೇಗಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿದೆ. ಪಾಲುದಾರಿಕೆಯು ಕಾರ್ಯಾಚರಣೆಯ ಅಗತ್ಯತೆಗಳು ಮತ್ತು ಆತ್ಮನಿರ್ಭರ ಭಾರತದ ದೂರದೃಷ್ಟಿಯೊಂದಿಗೆ ಹೊಂದಿಕೆಯಾಗುತ್ತದೆ. ಈ ಸಹಯೋಗವನ್ನು 515 ಎಬಿಡಬ್ಲೂ ಮೂಲಕ ಸಂಯೋಜಿಸಲಾಗುತ್ತದೆ. ಕೃತಕ ಬುದ್ಧಿಮತ್ತೆ ಆಧರಿಸಿದ ಫ್ಲೈಟ್ ಕಂಟ್ರೋಲ್ ಸಿಸ್ಟಮ್ (ಎಫ್ ಸಿಎಸ್ ) ಮತ್ತು ಸ್ಟ್ಯಾಂಡರ್ಡ್ ಡ್ರೋನ್ ಆಪರೇಟಿಂಗ್ ಪ್ಲಾಟ್ಫಾರ್ಮ್ (ಎಸ್ ಡಿಒಪಿ) ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿ ಡ್ರೋನ್ ತಯಾರಿಕೆಯಲ್ಲಿ ತಂತ್ರಜ್ಞಾನ ಬಳಸಿಕೊಂಡು ಸಕ್ರಿಯಗೊಳಿಸುವುದು ಒಪ್ಪಂದದ ಉದ್ದೇಶವಾಗಿದೆ. ಡ್ರೋನ್ ತಂತ್ರಜ್ಞಾನಗಳ ಸಮಗ್ರ ಮೌಲ್ಯಮಾಪನಕ್ಕಾಗಿ IndyASTRA 515 ಎಬಿಡ್ಲೂಗೆ ತಾಂತ್ರಿಕ ಸಲಹೆಯನ್ನು ಒದಗಿಸುತ್ತದೆ. ಅದರಲ್ಲಿ ಉಪವ್ಯವಸ್ಥೆಯ ವಿಮರ್ಶೆಗಳು, ಏಕೀಕರಣ ಸಿದ್ಧತೆ ಮತ್ತು ಸೇನಾ ಮಾನದಂಡಗಳ…
ವಿರಾಜಪೇಟೆ, ಅ.7 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಅ.12 ರಂದು ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ವಿತರಣೆ ಮತ್ತು ಸಮುದಾಯದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ವಿರಾಜಪೇಟೆಯಲ್ಲಿ ಅಯೋಜಿಸಲಾಗಿದೆ ಎಂದು ಕೆ.ಎಂ.ಎ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಶ್ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10.30 ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ಅರಮೇರಿ ಶ್ರೀ ಕಳಂಚೇರಿ ಮಠದ ಪೀಠಾಧಿಪತಿಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಆಗಮಿಸಲಿದ್ದಾರೆ. ಬೆಂಗಳೂರಿನ ಹೈಕೋರ್ಟ್ ವಕೀಲರಾಗಿರುವ ಕುವೇoಡ ಹೆಚ್. ಹಿದಾಯತುಲ್ಲಾ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಅವರು ಎಂದು ವಿವರಿಸಿದರು. ರಾಜ್ಯದ ಪ್ರಸಿದ್ಧ ಶಿಕ್ಷಣ ತಜ್ಞರು ಹಾಗೂ ವ್ಯಕ್ತಿತ್ವ-ಕಲಿಕೆ-ಪ್ರೇರಣ ತರಬೇತುದಾರರಾಗಿರುವ ಮೈಸೂರಿನ ಆರ್.ಎ. ಚೇತನ್ ರಾಮ್ ಅವರು ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ…
ನಾಪೋಕ್ಲು ಅ.8 NEWS DESK : ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯ್ತಿಯ ವಿಶೇಷ ಸಾಧನೆ, ಕೆಲಸ ಕಾರ್ಯಗಳ ಮಾಹಿತಿಯನ್ನು ಒಳಗೊಂಡ ಮುನ್ನೋಟ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಪಂಚಾಯತಿ ಸಭಾಂಗಣದಲ್ಲಿ ಪಂಚಾಯತಿ ಅಧ್ಯಕ್ಷರಾದ ಬಿ.ಎಸ್.ಕುಶನ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮಾನ್ಯ ಸಭೆಯಲ್ಲಿ ಮುನ್ನೋಟ ಪುಸ್ತಕ ಅನಾವರಣಗೊಳಿಸಲಾಯಿತು. ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಮಾತನಾಡಿ, ಕಳೆದ 2020-21 ರಿಂದ 2025-26ನೇ ಸಾಲಿನಲ್ಲಿ ಅತ್ಯುತ್ತಮ ಸಮಾಜಮುಖಿ ಕೆಲಸಗಳು ಉತ್ತಮವಾಗಿ ಕಾರ್ಯರೂಪಕ್ಕೆ ತರಳಾಗಿದೆ ಎಂದರು. ಈ ಬಾರಿಯ ಸದಸ್ಯರೆಲ್ಲರೂ ಒಗ್ಗಟಾಗಿ ಎಲ್ಲರು ಒಂದೇ ಮನಸ್ಸಿಂದ ನಿಸ್ವಾರ್ಥವಾಗಿ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಯಿತು ಎಂದು ಎಲ್ಲ ಪ್ರತಿನಿಧಿಗಳನ್ನು ಶ್ಲಾಘಿಸಿದರು. ಕೊಡಗಿನ ಪಂಚಾಯಿತಿಗಳಲ್ಲಿ ಇದೇ ಮೊದಲ ಬಾರಿಗೆ ಪಂಚಾಯಿತಿಯ ಐದು ವರ್ಷಗಳ ಸಾಧನೆ ಕಾರ್ಯವನ್ನು ಬರವಣಿಗೆಯ ರೂಪದಲ್ಲಿ ಪಾರದರ್ಶಕವಾಗಿ ಹಾಗೂ ಎಲ್ಲಾ ಸಮುದಾಯದ ಜನರಿಗೆ ಅನುಕೂಲವಾಗುವಂತೆ ಸಮಾಜಮುಖಿ ಕೆಲಸಗಳನ್ನು ಮಾಡಿ 22 ಪುಟಗಳ ಮುನ್ನೋಟ ಪುಸ್ತಕವನ್ನು ಸಾರ್ವಜನಿಕರಿಗೆ ಮುಂದಿನ…
ನಾಪೋಕ್ಲು ಅ.8 NEWS DESK : ಕೊಡಗು ಗೌಡ ಸಮಾಜಗಳ ಒಕ್ಕೂಟದ ನೇತೃತ್ವದಲ್ಲಿ ಕರಿಕೆ ಗೌಡ ಸಮಾಜದ ಸಮುದಾಯ ಬಾಂಧವರ ಸಭೆಯು ಕರಿಕೆ ಸಹಕಾರ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಮಾಜ ನಡೆದು ಬಂದ ಹಾದಿ ಮತ್ತು ಮುಂದಿನ ದಿನಗಳ ಅಭಿವೃದ್ಧಿಯ ಚಿಂತನೆಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು. ನಂತರ ನಿರ್ಲಕ್ಷಕ್ಕೆ ಒಳಗಾಗಿದ್ದ ಗಡಿ ಭಾಗದ ಸಮಾಜದ ಅಭಿವೃದ್ಧಿಗೆ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಕರಿಕೆ ಗೌಡ ಸಮಾಜ ವ್ಯಾಪ್ತಿಯ ಗೌಡ ಮಹಿಳಾ ಒಕ್ಕೂಟವನ್ನು ಮತ್ತು ಯುವ ವೇದಿಕೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸದ್ಯದಲ್ಲೇ ಕ್ರಮ ಕೈಗೊಳ್ಳುವಂತೆ ಮತ್ತು ಸಮಾಜಕ್ಕೆ ಲಭ್ಯವಿರುವ, ಖರೀದಿ ಜಾಗವನ್ನು ಪರಿಶೀಲಿಸಿ ಈ ಜಾಗಕ್ಕೆ ಬದಲಿ ವ್ಯವಸ್ಥೆ ಏನಾದರೂ ಲಭ್ಯವಿದ್ದಲ್ಲಿ ಅಕ್ಟೋಬರ್ ತಿಂಗಳ ಒಳಗಡೆ ಸಲಹೆ ಸೂಚನೆಗಳನ್ನು ನೀಡಿ ಪರಾಮರ್ಶಿಸುವಂತೆ ತೀರ್ಮಾನಿಸಲಾಯಿತು. ಯಾವುದೇ ಸಮರ್ಪಕ ಸ್ಥಳ ಲಭ್ಯವಾಗದಿದ್ದಲ್ಲಿ ನವೆಂಬರ್ ತಿಂಗಳ ಮೊದಲ ವಾರದಿಂದಲೇ ಸಮಾಜದ ನಿವೇಶನದ ದಾಖಲೆಗಳ ಕೆಲಸ ಕಾರ್ಯಗಳನ್ನು ಆರಂಭಿಸಲು ನಿರ್ಧರಿಸಲಾಯಿತು. ಅದಕ್ಕೆ ಪೂರಕವಾಗಿ ಗೌಡ ಸಮಾಜದ ಕಟ್ಟಡ ನಿರ್ಮಾಣ…
ವಿರಾಜಪೇಟೆ ಅ.8 NEWS DESK : ಸ್ವಚ್ಛತೆ ಹಾಗೂ ನೈರ್ಮಲ್ಯದ ಪಾಠಗಳನ್ನು ಯಾರಿಂದಲೂ ಬೋಧಿಸಿ ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ. ಸ್ವಚ್ಛತೆ ಎಂಬುದು ಪ್ರತಿಯೊಬ್ಬರಲ್ಲೂ ಸ್ವ ಇಚ್ಛೆಯಿಂದ ಬಂದಾಗ ಸ್ವಚ್ಛ ಪರಿಸರ ನಿರ್ಮಿಸಲು ಸಾಧ್ಯ ಎಂದು ನರಿಯಂದಡ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ನಡೆಯುತ್ತಿರುವ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನ ನಡೆದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಆರೋಗ್ಯವೇ ದೊಡ್ಡ ಭಾಗ್ಯ. ಆರೋಗ್ಯ ಉತ್ತಮವಾಗಿರಲು ನೈರ್ಮಲ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಮನೆಯಲ್ಲಿ ಹಸಿ ಕಸ ಒಣ ಕಸಗಳನ್ನು ಬೇರ್ಪಡಿಸಿ ಹಸಿ ಕಸವನ್ನು ಕಾಂಪೋಸ್ಟ್ ಗೊಬ್ಬರವಾಗಿ ಪರಿವರ್ತಿಸಿ ಗಿಡಗಳಿಗೆ ಬಳಸಿಕೊಳ್ಳಬೇಕು. ಒಣ ಕಸಗಳನ್ನು ಸ್ವಚ್ಛತಾ ಕರ್ಮಿಗಳಿಗೆ ನೀಡಿ ಪರಿಸರ ಮಾಲಿನ್ಯವಾಗದಂತೆ ಪ್ರತಿಯೊಬ್ಬರು ಗಮನ ಹರಿಸಿದರೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು…






