ವಿರಾಜಪೇಟೆ, ಅ.7 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಅ.12 ರಂದು ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ವಿತರಣೆ ಮತ್ತು ಸಮುದಾಯದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ವಿರಾಜಪೇಟೆಯಲ್ಲಿ ಅಯೋಜಿಸಲಾಗಿದೆ ಎಂದು ಕೆ.ಎಂ.ಎ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಶ್ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10.30 ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ಅರಮೇರಿ ಶ್ರೀ ಕಳಂಚೇರಿ ಮಠದ ಪೀಠಾಧಿಪತಿಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಆಗಮಿಸಲಿದ್ದಾರೆ. ಬೆಂಗಳೂರಿನ ಹೈಕೋರ್ಟ್ ವಕೀಲರಾಗಿರುವ ಕುವೇoಡ ಹೆಚ್. ಹಿದಾಯತುಲ್ಲಾ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಅವರು ಎಂದು ವಿವರಿಸಿದರು. ರಾಜ್ಯದ ಪ್ರಸಿದ್ಧ ಶಿಕ್ಷಣ ತಜ್ಞರು ಹಾಗೂ ವ್ಯಕ್ತಿತ್ವ-ಕಲಿಕೆ-ಪ್ರೇರಣ ತರಬೇತುದಾರರಾಗಿರುವ ಮೈಸೂರಿನ ಆರ್.ಎ. ಚೇತನ್ ರಾಮ್ ಅವರು ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ…
ಲೇಖಕ: admin
ನಾಪೋಕ್ಲು ಅ.8 NEWS DESK : ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯ್ತಿಯ ವಿಶೇಷ ಸಾಧನೆ, ಕೆಲಸ ಕಾರ್ಯಗಳ ಮಾಹಿತಿಯನ್ನು ಒಳಗೊಂಡ ಮುನ್ನೋಟ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಪಂಚಾಯತಿ ಸಭಾಂಗಣದಲ್ಲಿ ಪಂಚಾಯತಿ ಅಧ್ಯಕ್ಷರಾದ ಬಿ.ಎಸ್.ಕುಶನ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಸಾಮಾನ್ಯ ಸಭೆಯಲ್ಲಿ ಮುನ್ನೋಟ ಪುಸ್ತಕ ಅನಾವರಣಗೊಳಿಸಲಾಯಿತು. ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಮಾತನಾಡಿ, ಕಳೆದ 2020-21 ರಿಂದ 2025-26ನೇ ಸಾಲಿನಲ್ಲಿ ಅತ್ಯುತ್ತಮ ಸಮಾಜಮುಖಿ ಕೆಲಸಗಳು ಉತ್ತಮವಾಗಿ ಕಾರ್ಯರೂಪಕ್ಕೆ ತರಳಾಗಿದೆ ಎಂದರು. ಈ ಬಾರಿಯ ಸದಸ್ಯರೆಲ್ಲರೂ ಒಗ್ಗಟಾಗಿ ಎಲ್ಲರು ಒಂದೇ ಮನಸ್ಸಿಂದ ನಿಸ್ವಾರ್ಥವಾಗಿ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಯಿತು ಎಂದು ಎಲ್ಲ ಪ್ರತಿನಿಧಿಗಳನ್ನು ಶ್ಲಾಘಿಸಿದರು. ಕೊಡಗಿನ ಪಂಚಾಯಿತಿಗಳಲ್ಲಿ ಇದೇ ಮೊದಲ ಬಾರಿಗೆ ಪಂಚಾಯಿತಿಯ ಐದು ವರ್ಷಗಳ ಸಾಧನೆ ಕಾರ್ಯವನ್ನು ಬರವಣಿಗೆಯ ರೂಪದಲ್ಲಿ ಪಾರದರ್ಶಕವಾಗಿ ಹಾಗೂ ಎಲ್ಲಾ ಸಮುದಾಯದ ಜನರಿಗೆ ಅನುಕೂಲವಾಗುವಂತೆ ಸಮಾಜಮುಖಿ ಕೆಲಸಗಳನ್ನು ಮಾಡಿ 22 ಪುಟಗಳ ಮುನ್ನೋಟ ಪುಸ್ತಕವನ್ನು ಸಾರ್ವಜನಿಕರಿಗೆ ಮುಂದಿನ…
ನಾಪೋಕ್ಲು ಅ.8 NEWS DESK : ಕೊಡಗು ಗೌಡ ಸಮಾಜಗಳ ಒಕ್ಕೂಟದ ನೇತೃತ್ವದಲ್ಲಿ ಕರಿಕೆ ಗೌಡ ಸಮಾಜದ ಸಮುದಾಯ ಬಾಂಧವರ ಸಭೆಯು ಕರಿಕೆ ಸಹಕಾರ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಮಾಜ ನಡೆದು ಬಂದ ಹಾದಿ ಮತ್ತು ಮುಂದಿನ ದಿನಗಳ ಅಭಿವೃದ್ಧಿಯ ಚಿಂತನೆಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು. ನಂತರ ನಿರ್ಲಕ್ಷಕ್ಕೆ ಒಳಗಾಗಿದ್ದ ಗಡಿ ಭಾಗದ ಸಮಾಜದ ಅಭಿವೃದ್ಧಿಗೆ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಕರಿಕೆ ಗೌಡ ಸಮಾಜ ವ್ಯಾಪ್ತಿಯ ಗೌಡ ಮಹಿಳಾ ಒಕ್ಕೂಟವನ್ನು ಮತ್ತು ಯುವ ವೇದಿಕೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸದ್ಯದಲ್ಲೇ ಕ್ರಮ ಕೈಗೊಳ್ಳುವಂತೆ ಮತ್ತು ಸಮಾಜಕ್ಕೆ ಲಭ್ಯವಿರುವ, ಖರೀದಿ ಜಾಗವನ್ನು ಪರಿಶೀಲಿಸಿ ಈ ಜಾಗಕ್ಕೆ ಬದಲಿ ವ್ಯವಸ್ಥೆ ಏನಾದರೂ ಲಭ್ಯವಿದ್ದಲ್ಲಿ ಅಕ್ಟೋಬರ್ ತಿಂಗಳ ಒಳಗಡೆ ಸಲಹೆ ಸೂಚನೆಗಳನ್ನು ನೀಡಿ ಪರಾಮರ್ಶಿಸುವಂತೆ ತೀರ್ಮಾನಿಸಲಾಯಿತು. ಯಾವುದೇ ಸಮರ್ಪಕ ಸ್ಥಳ ಲಭ್ಯವಾಗದಿದ್ದಲ್ಲಿ ನವೆಂಬರ್ ತಿಂಗಳ ಮೊದಲ ವಾರದಿಂದಲೇ ಸಮಾಜದ ನಿವೇಶನದ ದಾಖಲೆಗಳ ಕೆಲಸ ಕಾರ್ಯಗಳನ್ನು ಆರಂಭಿಸಲು ನಿರ್ಧರಿಸಲಾಯಿತು. ಅದಕ್ಕೆ ಪೂರಕವಾಗಿ ಗೌಡ ಸಮಾಜದ ಕಟ್ಟಡ ನಿರ್ಮಾಣ…
ವಿರಾಜಪೇಟೆ ಅ.8 NEWS DESK : ಸ್ವಚ್ಛತೆ ಹಾಗೂ ನೈರ್ಮಲ್ಯದ ಪಾಠಗಳನ್ನು ಯಾರಿಂದಲೂ ಬೋಧಿಸಿ ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ. ಸ್ವಚ್ಛತೆ ಎಂಬುದು ಪ್ರತಿಯೊಬ್ಬರಲ್ಲೂ ಸ್ವ ಇಚ್ಛೆಯಿಂದ ಬಂದಾಗ ಸ್ವಚ್ಛ ಪರಿಸರ ನಿರ್ಮಿಸಲು ಸಾಧ್ಯ ಎಂದು ನರಿಯಂದಡ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ನಡೆಯುತ್ತಿರುವ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನ ನಡೆದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಆರೋಗ್ಯವೇ ದೊಡ್ಡ ಭಾಗ್ಯ. ಆರೋಗ್ಯ ಉತ್ತಮವಾಗಿರಲು ನೈರ್ಮಲ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಮನೆಯಲ್ಲಿ ಹಸಿ ಕಸ ಒಣ ಕಸಗಳನ್ನು ಬೇರ್ಪಡಿಸಿ ಹಸಿ ಕಸವನ್ನು ಕಾಂಪೋಸ್ಟ್ ಗೊಬ್ಬರವಾಗಿ ಪರಿವರ್ತಿಸಿ ಗಿಡಗಳಿಗೆ ಬಳಸಿಕೊಳ್ಳಬೇಕು. ಒಣ ಕಸಗಳನ್ನು ಸ್ವಚ್ಛತಾ ಕರ್ಮಿಗಳಿಗೆ ನೀಡಿ ಪರಿಸರ ಮಾಲಿನ್ಯವಾಗದಂತೆ ಪ್ರತಿಯೊಬ್ಬರು ಗಮನ ಹರಿಸಿದರೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು…
ಬೆಂಗಳೂರು ಅ.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರಧಾನ ಸಮಾರಂಭ ಮತ್ತು 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಅಮೋಘ ಸೇವೆ ಸಲ್ಲಿಸಿದ ಅರಣ್ಯ ಸಿಬ್ಬಂದಿಗಳಿಗೆ ಪದಕ ನೀಡಿ, ಗೌರವಿಸಿದರು. ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ರಾಯಭಾರಿಗಳಾದ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಮಡಿಕೇರಿ ಅ.8 NEWS DESK : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಚೆಪ್ಪುಡಿರ ಅರುಣ್ ಮಾಚಯ್ಯ ಅವರನ್ನು ಕಾಂಗ್ರೆಸ್ ಮುಖಂಡ ಅಪ್ರು ರವೀಂದ್ರ ಹಾಗೂ ಬೆಂಬಲಿಗರು ಸನ್ಮಾನಿಸಿ ಗೌರವಿಸಿದರು. ಅರುಣ್ ಮಾಚಯ್ಯ ಅವರ ಸ್ವಗೃಹಕ್ಕೆ ಭೇಟಿ ನೀಡಿದ ಅಪ್ರು ರವೀಂದ್ರ ನೇತೃತ್ವದ ನಿಯೋಗ ಆತ್ಮೀಯವಾಗಿ ಸನ್ಮಾನಿಸಿ ಮುಂದಿನ ಸಾರ್ವಜನಿಕ ಜೀವನ ಮತ್ತಷ್ಟು ಯಶಸ್ಸಿನತ್ತ ಸಾಗಲಿ ಎಂದು ಶುಭ ಹಾರೈಸಿತು. ವಿನೋದ್ ಪೂಜಾರಿ, ಅರುಣ, ಸುಜಾತ, ವಿನೋದ್ ಬಿ.ಎಂ, ಪರಿಚನ ಪ್ರಬಿ, ಪರಿಚನ ಮಹೇಶ್, ಅಕ್ಷಿತ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ಬೆಂಗಳೂರು ಅ.8 NEWS DESK : ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು. ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು…
ಸುಂಟಿಕೊಪ್ಪ ಅ.8 NEWS DESK : ಕುಶಾಲನಗರ ತಾಲ್ಲೂಕಿನ ನಾಕೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಸಮಸ್ತ ಮಲೆಯಾಳಿ ಭಾಷಿಗರ ಹಿಂದೂ ಮಲೆಯಾಳಿ ಸಮಾಜದ ವತಿಯಿಂದ ಮೂರನೇ ವರ್ಷದ ಓಣಂ ಆಚರಣೆ ತಾ.12 ರಂದು ಕಾನ್ ಬೈಲ್ ನಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಕಲ್ಲೂರು ಬಸವೇಶ್ವರ ದೇವಾಲಯ ದಿಂದ ಕಾನ್ ಬೈಲ್ ಶಾಲೆಯವರೆಗೂ ಚಂಡೆ ಮೇಳದೊಂದಿಗೆ ಮೆರವಣಿಗೆ ಇರುತ್ತದೆ. ಬಳಿಕ ಕಾನ್ ಬೈಲ್ ನ ಸರ್ಕಾರಿ ಶಾಲಾ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಚಿವ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಓಣಂ ಅಂಗವಾಗಿ ಮಲೆಯಾಳಿ ಹಿಂದೂ ಸಮಾಜ ಬಾಂಧವರಿಗೆ ಪೂಕಳಂ ಸ್ಪರ್ಧೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಬಳಿಕ ತಿರುವಾದಿರ ನೃತ್ಯ ದೊಂದಿಗೆ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕೇರಳದ ವಿಶೇಷ ಬಾಣಸಿಗರಿಂದ ತಯಾರಿಸಿದ ಓಣಂ ಸದ್ಯ ಏರ್ಪಡಿಸಲಾಗಿದೆ ಎಂದು ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಕೆ.ಜಿ.ರಾಜ ತಿಳಿಸಿದ್ದಾರೆ.…
ಮಡಿಕೇರಿ ಅ.8 NEWS DESK : ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಕೆ.ಇ.ಉತ್ತಯ್ಯ ಅವರನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.
ವಿರಾಜಪೇಟೆ ಅ.8 NEWS DESK : “ವಿಶ್ವದ ಅಗ್ರ 2% ವಿಜ್ಞಾನಿಗಳು” (2025ರ ಸಮೀಕ್ಷೆ) ಪಟ್ಟಿಯಲ್ಲಿ ಡಾ.ಉತ್ತಪ್ಪ ಯು.ಟಿ. ಅವರು ತಮ್ಮ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ಪ್ರತಿ ವರ್ಷ ಅಮೆರಿಕಾದ ಸ್ಟ್ಯಾಂಫರ್ಡ್ ವಿಶ್ವವಿದ್ಯಾಲಯದ ಪ್ರೊ. ಪಿ.ಎ.ಜಾನ್ ಇಯೋನಿಡಿಸ್ ಅವರು, ಎಲ್ಸೆವಿಯರ್ (Elsevier) ಮತ್ತು ಸ್ಕೋಪಸ್ Scopus ಸಂಸ್ಥೆಗಳ ಸಹಯೋಗದೊಂದಿಗೆ “ವಿಶ್ವದ ಅಗ್ರ 2% ವಿಜ್ಞಾನಿಗಳು” ಎಂಬ ಪಟ್ಟಿಯನ್ನು ಪ್ರಕಟಿಸುತ್ತಾರೆ. ಈ ಪಟ್ಟಿ ವಿಶ್ವದಾದ್ಯಂತದ ಸುಮಾರು 2% ವಿಜ್ಞಾನಿಗಳಲ್ಲಿ ಅತ್ಯಂತ ಪ್ರಭಾವಶಾಲಿ ವಿಜ್ಞಾನಿಗಳನ್ನು ಗುರುತಿಸುವುದು. ಈ ಸಮೀಕ್ಷೆ ಮಾನದಂಡಿತ ಉಲ್ಲೇಖ (citation) ಅಂಶಗಳು ಮತ್ತು ಸಂಯುಕ್ತ ವೈಜ್ಞಾನಿಕ ಪರಿಣಾಮದ ಸೂಚ್ಯಂಕಗಳ ಆಧಾರದ ಮೇಲೆ ಮಾಡಲ್ಪಟ್ಟಿದೆ. ಡಾ. ಉತಪ್ಪ ಯು.ಟಿ. ಅವರು ಪ್ರಸ್ತುತ ಚೀನಾದ ಶೆನ್ಜೆನ್ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಮತ್ತು ಪರಿಸರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೋಸ್ಟ್-ಡಾಕ್ಟರಲ್ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಮೊದಲು ಅವರು ದಕ್ಷಿಣ ಕೊರಿಯಾದ ಚೋನ್ನಮ್ ನ್ಯಾಷನಲ್ ಯುನಿವರ್ಸಿಟಿಯಲ್ಲಿ (2021-2022) ಪೋಸ್ಟ್-ಡಾಕ್ಟರಲ್ ಫೆಲೋ ಆಗಿ ಹಾಗೂ ಯಾಂಗ್ನಮ್ ಯುನಿವರ್ಸಿಟಿಯಲ್ಲಿ (2022-2023) ಸಂಶೋಧನಾ ಪ್ರಾಧ್ಯಾಪಕರಾಗಿ ಸೇವೆ…






