ಸುಂಟಿಕೊಪ್ಪ ನ.12 NEWS DESK : ಎಷ್ಟೇ ದೊಡ್ಡ ಪದವಿಗಳನ್ನು ಪಡೆದುಕೊಂಡರೇ ದೊಡ್ಡವರಾಗುವುದಿಲ್ಲ. ಜೀವನದಲ್ಲಿ ಸಂಸ್ಕಾರ ಹಾಗೂ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ನಡೆದುಕೊಳ್ಳುವವರೇ ನಿಜವಾದ ಪದವಿಧರರು ಎಂದು ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸತೀಶ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್ಬೈಲ್ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಮಂಜಿಕೆರೆ ಸಮುದಾಯ ಭವನದಲ್ಲಿ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪೋಷಕರೆ ಶಿಕ್ಷಕರು. ಮಕ್ಕಳು 14 ವರ್ಷದವರೆಗೆ ಪೋಷಕರನ್ನು ಅನುಸರಿಸಿಕೊಂಡು ಮುನ್ನಡೆಯುತ್ತಾರೆ ಆ ಸಂದರ್ಭದಲ್ಲಿ ಪೋಷಕರು ಮನೆಗಳಲ್ಲಿ ಅನ್ಯೋನ್ಯತೆ, ಉತ್ತಮ ವಾತವರಣವನ್ನು ನಿರ್ಮಿಸಿಕೊಡಲ್ಲಿ ಮಾತ್ರ ಮಕ್ಕಳಿಂದ ಭವಿಷ್ಯವನ್ನು ಎದುರು ನೋಡಬಹುದಾಗಿದೆ. ಮನೆಯೇ ಮೊದಲ ಗುರುವಾಗಿದ್ದು ಶಿಕ್ಷಕರಲ್ಲಾವೆಂದು ಅವರು ಬಣ್ಣಿಸಿದರು. ಮಕ್ಕಳು ಪ್ರೌಢಶಾಲೆಯನ್ನು ಮುಗಿಸಿ ಪದವಿ ಕಾಲೇಜುಗಳಿಗೆ ಸೇರಿಸುವ ಮುನ್ನ ಪೋಷಕರು ಮಕ್ಕಳೊಂದಿಗೆ ಚರ್ಚಿಸಿ ಮಕ್ಕಳ ಆಸಕ್ತಿ ಮತ್ತು ಅಭಿರುಚಿಯ ಬಗ್ಗೆ ಆರಿತು ಅಂತಹ ಶಿಕ್ಷಣಗಳಿಗೆ ಪ್ರೋತ್ಸಾಹಿಸಬೇಕು ಇದಿರಂದ ಮಕ್ಕಳು ಸಂಪನ್ಮೂಲ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವೆಂದು…
ಲೇಖಕ: admin
ಮಡಿಕೇರಿ ನ.12 NEWS DESK : ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಈ ಕಚೇರಿಯು ಕೊಡಗು ಜಿಲ್ಲಾ ಪಂಚಾಯತ್ ಕಟ್ಟಡದಿಂದ ನಗರದ ಕಾನ್ವೆಂಟ್ ಜಂಕ್ಷನ್ ಸಮೀಪ, ಲೋಕೋಪಯೋಗಿ ಇಲಾಖೆಯ ಕಟ್ಟಡದ ಹತ್ತಿರ ನೂತನವಾಗಿ ನಿರ್ಮಾಣವಾಗಿರುವ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ ಇವರ ಕಚೇರಿಗೆ ಸ್ಥಳಾಂತರವಾಗಿದೆ. ಇನ್ನು ಮುಂದೆ ಪತ್ರ ವ್ಯವಹಾರವನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕಾನ್ವೆಂಟ್ ಜಂಕ್ಷನ್ ಸಮೀಪ, ಲೋಕೋಪಯೋಗಿ ಇಲಾಖೆ ಕಟ್ಟಡ ಹತ್ತಿರ ಕೊಡಗು ಜಿಲ್ಲೆ, ಮಡಿಕೇರಿ ವಿಳಾಸಕ್ಕೆ ತಲುಪಿಸಲು ಹಾಗು ಸಾರ್ವಜನಿಕರು/ ಪರಿಶಿಷ್ಟ ಪಂಗಡದವರು ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ಕೋರಿದ್ದಾರೆ.
ಮಡಿಕೇರಿ ನ.11 NEWS DESK : ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ನ.13 ರಂದು ಪೊನ್ನಂಪೇಟೆಯಿಂದ ಗೋಣಿಕೊಪ್ಪದವರೆಗೆ ನಡೆಯುವ ‘ಏಕತಾ ಯಾತ್ರೆ’ ಯಲ್ಲಿ ಬಿಜೆಪಿ ಭಾಗಿಯಾಗಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 9.30 ಗಂಟೆಗೆ ಪೊನ್ನಂಪೇಟೆಯಿಂದ ಏಕತಾ ಪಾದಯಾತ್ರೆ ಆರಂಭಗೊಂಡು ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನವರೆಗೆ ಸಾಗಲಿದೆ. ‘ಏಕತಾ ಯಾತ್ರೆ’ ಮೂಲಕ ರಾಷ್ಟ್ರದ ಏಕತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಬಿಜೆಪಿ ಸ್ಮರಿಸುತ್ತದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತದೆ ಎಂದು ಹೇಳಿದ್ದಾರೆ. ಮೈಸೂರು, ಕೊಡಗು ಸಂಸದರಾದ ಯದುವೀರ್ ಒಡೆಯರ್ ಅವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರುಗಳು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಪ್ರಮುಖರು ಏಕತಾ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ…
ಮಡಿಕೇರಿ ನ.11 NEWS DESK : ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವರು ರಾಜ್ಯಾದ್ಯಾದಂತ ದರಖಾಸ್ ಪೋಡಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ಮಂಜೂರಾದ ಜಮೀನನ್ನು ಅನುಬಂಧ-1 ರಡಿ ಸರ್ವೆ ಮಾಡಲಾಗುತ್ತಿದೆ. ಮನೆ ಮನೆಗೆ ತೆರಳಿ ಮಾಹಿತಿ ಪಡೆದು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ 2344 ದರಖಾಸ್ ಪೋಡಿ ಅಭಿಯಾನಡಿ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 1500ಕ್ಕೂ ಹೆಚ್ಚು ಕಡತ ವಿಲೇವಾರಿ ಮಾಡಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ 42 ಲಕ್ಷ ಜಮೀನು ಮೃತರ ಹೆಸರಿನಲ್ಲಿದ್ದು, ಇದನ್ನು ಸಹ ಪಟ್ಟಿ ಮಾಡಲಾಗಿದೆ. ಈ ಪೌತಿ ಖಾತೆ ಆಂದೋಲನಡಿ ರೈತರ ಮನೆ ಬಾಗಿಲಿಗೆ ಹೋಗಿÀ್ಕುಟುಂಬದವರ ಹೆಸರಿಗೆ ಖಾತೆ ಮಾಡುವ ಕಾರ್ಯ…
ಮಡಿಕೇರಿ ನ.11 NEWS DESK : ಕೊಡವ ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (ಎಐಎಂಎಲ್) ವಿಭಾಗದ ವಿದ್ಯಾರ್ಥಿ ಸಂಘ “ಅವಿನ್ಯಂ” ವತಿಯಿಂದ “ಇನ್ಸ್ಪೈರ್-2025” ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿ.ಟಿ.ಯು. ಶೈಕ್ಷಣಿಕ ಸಭಾ ಸದಸ್ಯರು ಹಾಗೂ ಮಂಗಳೂರು ಕ್ಯಾನರಾ ಎಂಜಿನಿಯರಿಂಗ್ ಕಾಲೇಜಿನ ಉಪಪ್ರಾಚಾರ್ಯರಾದ ಡಾ.ಡೆಮಿಯನ್ ಆಂಟೋನಿ ಡಿ’ಮೆಲ್ಲೊ ಪಾಲ್ಗೊಂಡು ಮಾತನಾಡಿ, “ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಕೇಂದ್ರೀಕರಿಸಿ, ಜೀವನದಲ್ಲಿ ಶಿಸ್ತನ್ನು ಪಾಲಿಸುವುದು ಯಶಸ್ಸಿನ ಮೂಲ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪ್ರಾಚಾರ್ಯರಾದ ಡಾ. ಎಂ.ಬಸವರಾಜ್ ಮಾತನಾಡಿ, ವಿದ್ಯಾರ್ಥಿಗಳು ಪ್ರಸ್ತುತ ತಂತ್ರಜ್ಞಾನಗಳ ನವೀಕರಣದೊಂದಿಗೆ ಸದಾ ಹೊಸ ವಿಷಯಗಳನ್ನು ಕಲಿಯಲು ಸಿದ್ಧರಾಗಿರಬೇಕು ಎಂದು ಕರೆ ನೀಡಿದರು. ಮಂಗಳೂರು ಕ್ಯಾನರಾ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಡಾ. ಸುನೀಲ್ ಕುಮಾರ್, ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯ ಪ್ರೊಫೆಸರ್ ಡಾ. ರಾಜು ಹಾಗೂ ನವಿಗೊ ಸೊಲ್ಯೂಷನ್ಸ್, ಮಂಗಳೂರುನ ಸಿನಿಯರ್ ಸಾಫ್ಟ್ವೇರ್ ಇಂಜಿನಿಯರ್ ಮತ್ತು ಟೀಮ್…
ಮಡಿಕೇರಿ ನ.11 NEWS DESK : ಜ್ಞಾನೋದಯ ಆಂಗ್ಲ ಮಾದ್ಯಮ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಲವು ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಹೆಚ್.ಆರ್.ಪ್ರಜ್ಞಾ ಪ್ರಥಮ, ಕ್ಲೇ ಮಾಡಲಿಂಗ್ ಬಿ.ಆರ್.ಚಂದನ್ ಪ್ರಥಮ, ಮಿಮಿಕ್ರಿ ಎ.ಜೆ.ದಿಲನ್ ಪ್ರಥಮ, ರಸಪ್ರಶ್ನೆ ಸ್ಪರ್ಧೆಯಲ್ಲಿ ರೋಷನ್ ದೇಶ್ ಪ್ರೇಮ್ ಮತ್ತು ಚಂದ್ರಶೇಖರ್ ಪಟೇಲ್ ಪ್ರಥಮ, ಅಭಿನಯ ಗೀತೆಯಲ್ಲಿ ನೇಹಾಶ್ರೀ ಪ್ರಥಮ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪಿ.ಎಲ್.ಹಿತಾಶ್ರೀ ದ್ವಿತೀಯ, ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪಿ.ಎಂ.ಡಯಾನ ದ್ವಿತೀಯ, ಭಾವಗೀತೆ ಬಿ.ಡಿ.ಪೃಥ್ವಿ ದ್ವಿತೀಯ, ಜಾನಪದ ನೃತ್ಯ ಕೀರ್ತಿ ಮತ್ತು ತಂಡ ದ್ವಿತೀಯ, ರಂಗೋಲಿ ಸ್ಪರ್ಧೆಯಲ್ಲಿ ಲಕ್ಷ್ಮಿ ದ್ವಿತೀಯ, ಜಾನಪದ ಗೀತೆ ಸ್ಪರ್ಧೆಯಲ್ಲಿ ಸಿಂಚನ ತೃತೀಯ, ಆಶುಭಾಷಣ ಸ್ಪರ್ಧೆಯಲ್ಲಿ ಹೆಚ್.ಪಿ.ದೇವಿಕಾ ತೃತೀಯ, ಕಥೆ ಹೇಳುವುದು ನೇಹಾಶ್ರೀ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಸಹಕಾರ ಹಾಗೂ ಮಾರ್ಗದರ್ಶನ ನೀಡಿದ ಎಲ್ಲಾ ಶಿಕ್ಷಕರಿಗೆ, ಬೋಧಕೇತರ ಮತ್ತು…
ಮಡಿಕೇರಿ ನ.11 NEWS DESK : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನಾಪೋಕ್ಲು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವತಿಯಿಂದ ನಡೆದ 14 ಮತ್ತು 17 ವಯೋಮಿತಿಯ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಪಿ. ಎನ್. ಜೀವ ನಾಣಯ್ಯ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪಿ.ಸಿ.ಶರಣ್ ಚಂಗಪ್ಪ ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ, ಆಶಿಕ್ ಮಂದಣ್ಣ ಜಾವೇಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸ್ವರೂಪ ಕೆ.ಬಿ., ದೈಹಿಕ ಶಿಕ್ಷಕಿ ಕರವಂಡ ಸೀಮಾ ಗಣಪತಿ ಇದ್ದರು.
ಮಡಿಕೇರಿ ನ.11 NEWS DESK : ದಾವಣಗೆರೆಯಲ್ಲಿ ನಡೆದ 14ರ ವಯೋಮಿತಿಯ 60 ಕೆ.ಜಿ.ವಿಭಾಗದ ಕರಾಟೆ ಪಂದ್ಯಾವಳಿಯಲ್ಲಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮನೀಶ್ ತೃತೀಯ ಬಹುಮಾನ ಪಡೆದುಕೊಂಡಿದ್ದಾನೆ. ಮನೀಶ್ ಹೊಸ ತೋಟ ಜಿಎಂಪಿ ಶಾಲೆಯ ದೈಹಿಕ ಶಿಕ್ಷಕಿ ಕೆಂಚಮ್ಮ ಹಾಗೂ ಅಂಬರೀಶ್ ದಂಪತಿಯ ಪುತ್ರ. ಇವನು ಕರಾಟೆ ತರಬೇತುದಾರರಾದ ಮುಖೇಶ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ.
ನಾಪೋಕ್ಲು ನ.11 NEWS DESK : ಚೆರಿಯಪರಂಬುವಿನ ಆಟದ ಮೈದಾನದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಕಕ್ಕಬ್ಬೆ ಪ್ರೌಢಶಾಲೆಯ ವಿದ್ಯಾರ್ಥಿನಿ ಪಿ.ಕೆ.ಫಾತಿಮತ್ ಫಜ್ಞ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಕೇಟೊಳಿರ ಕುಟ್ಟಪ್ಪ, ಬಾತ್ಮಿದಾರರಾದ ಸುಧಾ ಗಣಪತಿ, ಮುಖ್ಯ ಶಿಕ್ಷಕ ಅನಿಲ್ ರಾಜ್ ಶ್ಲಾಘನೆ ವ್ಯಕ್ತಪಡಿಸಿದ್ದು, ದೈಹಿಕ ಶಿಕ್ಷಣ ಶಿಕ್ಷಕ ಬೋಪಣ್ಣ ಮಾರ್ಗದರ್ಶನ ನೀಡಿದ್ದರು. ವರದಿ : ದುಗ್ಗಳ ಸದಾನಂದ.
ಮೂರ್ನಾಡು ನ.11 NEWS DESK : ಲಯನ್ಸ್ ಕ್ಲಬ್ ಶತಮಾನೋತ್ಸವ ದಾಟಿ ತನ್ನ ಸೇವೆಯನ್ನು ಮುಂದುವರೆಸುತ್ತಿದ್ದರೂ, ಇಲ್ಲಿ ಸದಸ್ಯತ್ವ ಪಡೆದುಕೊಳ್ಳುವ ಯುವ ಸಮುದಾಯದ ಕಡಿಮೆಯಾಗುತ್ತಿದೆ ಎಂದು ಲಯನ್ಸ್ ಸಂಸ್ಥೆಯ ಪ್ರಾದೇಶಿಕ ಅಧ್ಯಕ್ಷ ಲಯನ್ ಡಾ. ಪಂಚಮ್ತಿಮ್ಮಯ್ಯ ಹೇಳಿದರು. ಮೂರ್ನಾಡು ಕೊಡವ ಸಮಾಜದಲ್ಲಿ ಮೂರ್ನಾಡು ಮತ್ತು ವಿರಾಜಪೇಟೆ ಲಯನ್ಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಪ್ರಾದೇಶಿಕ ಅಧ್ಯಕ್ಷರ ಭೇಟಿಯ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ಲಬ್ನ ವತಿಯಿಂದ ಪ್ರಪಂಚದಾದ್ಯಂತ ಹಲವಾರು ರೀತಿಯಲ್ಲಿ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದ್ದು, ಇಲ್ಲಿ ವಯಸ್ಸಾದವರ ಸಂಖ್ಯೆಯೆ ಹೆಚ್ಚಿದೆ. ಯುವ ಸಮುದಾಯ ಕ್ಲಬ್ನ ಕಡೆ ಆಕರ್ಷಣೆ ಕಳೆದುಕೊಳ್ಳುತ್ತಿದೆ. ಇವರನ್ನು ಕ್ಲಬ್ನ ಕಡೆಗೆ ಮುಖ ಮಾಡುವಂತಹ ಕಾರ್ಯಗಳು ನಮ್ಮಿಂದ ಆಗಬೇಕಿದೆ. ಅದಕ್ಕಾಗಿ ಪ್ರತಿಯೊಂದು ಲಯನ್ಸ್ ಸಂಸ್ಥೆಗಳಲ್ಲಿ ಲಿಯೊಕ್ಲಬ್ ಪ್ರಾರಂಭಿಸಿ, ಅಲ್ಲಿ ಯುವ ಜನತೆಯನ್ನು ಕ್ಲಬ್ನ ಕಡೆಗೆ ಸೆಳೆಯುವ ಕಾರ್ಯವಾಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರು ಆಸಕ್ತಿ ತೋರಬೇಕು ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮೂರ್ನಾಡು ಲಯನ್ಸ್ ಕ್ಲಬ್ನ ಅಧ್ಯಕ್ಷ…






