ಲೇಖಕ: admin

ಮಡಿಕೇರಿ NEWS DESK ನ.11 : ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕ ಡಾ.ಮಂತರ್ ಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ನ.14 ರಂದು ಗಾಳಿಬೀಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ ಅವರು ತಿಳಿಸಿದ್ದಾರೆ. ಶುಕ್ರವಾರ ಮಡಿಕೇರಿ-ಗಾಳಿಬೀಡು ರಸ್ತೆ ಅಭಿವೃದ್ಧಿಯ 3.50 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗುವುದು. ಅಲ್ಲದೆ ಶಾಸಕರ ಹುಟ್ಟುಹಬ್ಬದ ಹಿನ್ನೆಲೆ ಗಾಳಿಬೀಡು ಪಂಚಾಯತ್ ವ್ಯಾಪ್ತಿಯಲ್ಲಿರುವ ವಿಶೇಷ ಚೇತನ ಕುಟುಂಬಗಳಿಗೆ ತಮ್ಮ ನೇತೃತ್ವದಲ್ಲಿ ಉಚಿತ ರೇಷನ್ ಕಿಟ್‌ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ನ.11 NEWS DESK : ರಾಜ್ಯ ಆಯುಕ್ತರ ಕಚೇರಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ, ಬೆಂಗಳೂರು ರಾಜ್ಯ ಆಯುಕ್ತಾಲಯವು 2025 ರ ಡಿಸೆಂಬರ್, 5 ರಿಂದ 7 ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಷ್ಟ್ರ ಮಟ್ಟದ ಪರ್ಪಲ್ ಫೆಸ್ಟ್ ಕಾರ್ಯಕ್ರಮ ಆಚರಿಸುತ್ತಿದೆ. ಇದರಲ್ಲಿ ಕೊಡಗು ಜಿಲ್ಲೆಯಲ್ಲಿ ವಿವಿಧ ಕೇತ್ರಗಳಲ್ಲಿ ಸಾಧನೆಗೈದಿರುವ ವಿಕಲಚೇತನ ವ್ಯಕ್ತಿಗಳನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ನ.16 ರೊಳಗೆ ಗೂಗಲ್ ಫಾರ್ಮ್ https://forms.gle/7pMqcgCySATEvNVm6 ಮೂಲಕ ಅಥವಾ ಆಯುಕ್ತರು ಅಂಗವಿಕಲರ ವ್ಯಕಿಗಳ ಹಕ್ಕುಗಳ ಅಧಿನಿಯಮ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು. ರಾಯಭಾರಿಯ ಆಯ್ಕೆಗಾಗಿ ಅರ್ಜಿ ನಮೂನೆಯನ್ನು ಹಾಗೂ ರಾಯಭಾರಿಯಾಗಿ ಆಯ್ಕೆಯಾಗಲು ಇರಬೇಕಾದ ಮಾನದಂಡಗಳ ಮಾರ್ಗಸೂಚಿಯ ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿಂದ ಪಡೆಯಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ನ.11 NEWS DESK : ಜಿಲ್ಲೆಯಲ್ಲಿ 2025-26 ನೇ ಸಾಲಿನ “ಅಕ್ಕ ಪಡೆ” ಯೋಜನೆಯನ್ನು ಅನುಷ್ಠಾನಗೊಳಿಸಲು ಎನ್‍ಸಿಸಿ ಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಯಮಗಳು ಹಾಗೂ ಆಯ್ಕೆಯ ಮಾನದಂಡಗಳಿಗೆ ಒಳಪಟ್ಟು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ “ಅಕ್ಕ ಪಡೆ” ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎನ್‍ಸಿಸಿಯಲ್ಲಿ ಸಿ ಪ್ರಮಾಣಪತ್ರ ಪಡೆದಿರುವ ದೈಹಿಕ ಸದೃಢತೆ ಹೊಂದಿರುವ, ಉತ್ತಮ ನಡವಳಿಕೆ, ಸಂವಹನ ಕಲೆ, ಕಾರ್ಯ ದಕ್ಷತೆ ಉಳ್ಳ ಮತ್ತು ಪಾಳಿಗಳಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರುವ 35 ರಿಂದ 45 ವರ್ಷ ಒಳಗಿರುವ 5 ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಯ ಗುತ್ತಿಗೆ ಅವಧಿ 11 ತಿಂಗಳಿಗೆ ಸೀಮಿತವಾಗಿದೆ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಲ್ಲಿ…

Read More

ಮಡಿಕೇರಿ ನ.11 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ. ಘಟಕ, ರಾಜ್ಯಶಾಸ್ತ್ರ ವಿಭಾಗ ಹಾಗೂ ವಿರಾಜಪೇಟೆ ತಾಲ್ಲೂಕು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘದ ಸಂಯುಕ್ತ  ಆಶ್ರಯದಲ್ಲಿ  ‘ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌ.ನ್ಯಾ.ನಟರಾಜ್‌,  ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಇತಿಹಾಸ, ಬೆಳವಣಿಗೆಯನ್ನು ವಿವರಿಸುತ್ತಾ ಸಾರ್ವಜನಿಕ ಜೀವನದಲ್ಲಿ ಕಾನೂನಿನ ಅರಿವು ಮತ್ತು ಮಹತ್ವವನ್ನು ತಿಳಿಸಿದರು. ಯುವ ಸಮುದಾಯದಲ್ಲಿ ಕಾನೂನಿನ ಜಾಗೃತಿಯ ಕೊರತೆಯಿಂದಾಗಿ ದಿನನಿತ್ಯದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಕಾನೂನಿನ ಬೆಂಬಲವನ್ನು ಪಡೆಯುವಂತೆ ಕಿವಿ ಮಾತು ಹೇಳಿದರು. ವಿರಾಜಪೇಟೆ ಜೆ.ಎಂ.ಎಫ್.ಸಿ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌ.ನ್ಯಾ. ಮಂಜುನಾಥ ಆರ್. ಮಾತನಾಡಿ, ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ನಾಗರೀಕರಿಗೆ ಇರಬೇಕಾದ ವಿವಿಧ ಕಾನೂನುಗಳ ಬಗ್ಗೆ ತಿಳಿಸಿದರು. ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ.ಪೂವಣ್ಣ ಮಾತನಾಡಿ, ಕಾನೂನು ಎಂಬುದು ಕೇವಲ ನ್ಯಾಯಾಲಯಕ್ಕಾಗಲೀ, ವಕೀಲರಿಗಾಗಲೀ ಮಾತ್ರವೇ ಸೀಮಿತವಲ್ಲ.…

Read More

ಮಡಿಕೇರಿ ನ.11 NEWS DESK : ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ನೀಡಲ್ಪಟ್ಟ ಮೆಡಿಕಲ್ ಇಕ್ಯೂಪ್ ಮೆಂಟ್ ಬ್ಯಾಂಕ್ ಗೆ ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಚಾಲನೆ ನೀಡಿದರು. ಮಡಿಕೇರಿಯ ಅಶ್ವಿನಿ ಆಸ್ಪತ್ರೆಯ ಆವರಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಇನ್ನರ್ ವೀಲ್ ಮಡಿಕೇರಿ ಸಂಸ್ಥೆಗೆ 50 ವಷ೯ಗಳ ಸಂಭ್ರಮದ ಸಂದಭ೯ ಅಶ್ವಿನಿ ಆಸ್ಪತ್ರೆಯ ಮೂಲಕ ಅಗತ್ಯವಿರುವ ರೋಗಿಗಳಿಗೆ ಉಪಕರಣಗಳನ್ನು ನೀಡುವ ಯೋಜನೆ ಚಾಲನೆಗೊಂಡಿತು. ಅಶ್ವಿನಿ ಆಸ್ಪತ್ರೆಗೆ ಇನ್ನರ್ ವೀಲ್ ಸಂಸ್ಥೆಯಿಂದ 4 ವೀ್ಲ್ ಚೇರ್, 4ಕ್ರಚಸ್, 3 ವಾಕರ್ , 2, ವಾಟರ್ ಬೆಡ್, ಸುಸಜ್ಜಿತ ಬೆಡ್ ಸೇರಿದಂತೆ ಅಂದಾಜು 1.20 ಲಕ್ಷ ರು. ಮೌಲ್ಯದ ಆರೋಗ್ಯ ಉಪಕರಣಗಳನ್ನು ನೀಡಲಾಯಿತು. ಶಬರಿ ಕಡಿದಾಳ್ ಮಾತನಾಡಿ, ಇದೊಂದು ಅತ್ಯಗತ್ಯ ಯೋಜನೆಯಾಗಿದ್ದು, ಸುವಣ೯ ಸಂಭ್ರಮದ ಸಾಥ೯ಕತೆಯನ್ನು ಈ ಯೋಜನೆ ಹೆಚ್ಚಿಸಿದೆ ಎಂದು ಶ್ಲಾಘಿಸಿದರಲ್ಲದೇ, ಅನೇಕರ ಮನೆಗಳಲ್ಲಿ ಬಳಕೆಯಾಗಿ ಮೂಲೆಸೇರಿರುವ ಉತ್ತಮ ಕಾಯ೯ನಿವ೯ಹಣೆಯ ವೈದ್ಯಕೀಯ ಪರಿಕರಗಳನ್ನು ಕೂಡ ಅಶ್ವಿನಿ ಆಸ್ಪತ್ರೆ, ಇನ್ನರ್…

Read More

ಮಡಿಕೇರಿ ನ.11 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿನ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರ ನಿಯೋಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅವರ ಪ್ರಮುಖ ಬೇಡಿಕೆಗಳಾದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ಖಾಯಂಗೊಳಿಸುವುದು, ದಿನಗೂಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದ ನೌಕರರನ್ನು ಹೊರಗುತ್ತಿಗೆ ಮಾರ್ಪಡಿಸಿರುವುದು. ಆರ್ಥಿಕ ಇಲಾಖೆಯ ಹೊರಡಿಸಿರುವ ಸುತ್ತೋಲೆಯನ್ನು ಮಾರ್ಪಡಿಸುವುದು. ದಿನಗೂಲಿ ಸೇವಾ ಅವಧಿ, ಸೇವಾ ಸೇವಾ ಹಿರಿತನ ವನ್ಯಜೀವಿ ಘಟಕಗಳಲ್ಲಿ ಈ ಪಿಎಫ್, ಇ ಎಸ್ ಐ ಸಮರ್ಪಕವಾಗಿ ನಿರ್ವಹಣೆ, ವಿಮಾಸೌಲಭ್ಯ ಸೇರಿದಂತೆ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಸಂಘವು ಮನವಿ ಸಲ್ಲಿಸಿದರು. ಇದೆ ಸಂದರ್ಭ ಕೊಡಗಿನ ಜಮ್ಮಮಾಲೆ ಸಮಸ್ಯೆಯ ಶೀಘ್ರ ಇತ್ಯರ್ಥಪಡಿಸುವ ಬಗ್ಗೆ ಚರ್ಚಿಸಲಾಯಿತು. ಮನವಿ ಸ್ವೀಕರಿಸಿದ  ಸಚಿವರು ತಮ್ಮ ಬೇಡಿಕೆಗಳನ್ನು ಪರಿಗಣಿಸುವ…

Read More

ಮಡಿಕೇರಿ ನ.11 NEWS DESK : ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ನ.12 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ನಗರದ ಗೌಳಿಬೀದಿ ಮಡಿಕೇರಿಯಲ್ಲಿರುವ ಲೋಕಾಯುಕ್ತ ಕಚೇರಿ ದೂ.ಸಂ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಅವರು ತಿಳಿಸಿದ್ದಾರೆ.

Read More

ಮಡಿಕೇರಿ ನ.11 NEWS DESK : ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವರು ರಾಜ್ಯಾದ್ಯಾದಂತ ದರಖಾಸ್ ಪೋಡಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ಮಂಜೂರಾದ ಜಮೀನನ್ನು ಅನುಬಂಧ-1 ರಡಿ ಸರ್ವೆ ಮಾಡಲಾಗುತ್ತಿದೆ. ಮನೆ ಮನೆಗೆ ತೆರಳಿ ಮಾಹಿತಿ ಪಡೆದು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ 2344 ದರಖಾಸ್ ಪೋಡಿ ಅಭಿಯಾನಡಿ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 1500ಕ್ಕೂ ಹೆಚ್ಚು ಕಡತ ವಿಲೇವಾರಿ ಮಾಡಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ 42 ಲಕ್ಷ ಜಮೀನು ಮೃತರ ಹೆಸರಿನಲ್ಲಿದ್ದು, ಇದನ್ನು ಸಹ ಪಟ್ಟಿ ಮಾಡಲಾಗಿದೆ. ಈ ಪೌತಿ ಖಾತೆ ಆಂದೋಲನಡಿ ರೈತರ ಮನೆ ಬಾಗಿಲಿಗೆ ಹೋಗಿÀ್ಕುಟುಂಬದವರ ಹೆಸರಿಗೆ ಖಾತೆ ಮಾಡುವ ಕಾರ್ಯ…

Read More

ಮಡಿಕೇರಿ ನ.11 NEWS DESK :  ಚಿಕ್ಕಬಳ್ಳಾಪುರದಲ್ಲಿ ನಡೆದ 17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಶಾಲಾ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪದ ಸಂತ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರ್.ಜೀವಿಕ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರೆವೆರೆಂಟ ಫಾದರ್ ವಿಜಯಕುಮಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಸೆಲ್ವಾ ರಾಜ್ ಆರ್ ಅಭಿನಂದನೆ ಸಲ್ಲಿಸಿದ್ದಾರೆ. ಆರ್.ಜೀವಿಕ  ಸುಂಟಿಕೊಪ್ಪದ ನಿವಾಸಿ ಸೈನಿಕ ರಾಜಕುಮಾರ ಹಾಗೂ ಲಕ್ಷ್ಮಿ  ದಂಪತಿಯ ಪುತ್ರಿ. ಜೀವಿಕ ಕರಾಟೆ ತರಬೇತುದಾರರಾದ ಮುಖೇಶ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

Read More

ಸುಂಟಿಕೊಪ್ಪ ನ.11 NEWS DESK : ಪರಿಸರ ಕಾನೂನು ಪರೀಕ್ಷೆಯಲ್ಲಿ ದಿವ್ಯಶ್ರೀ. ಎಂ. ರಾಜ್ಯಕ್ಕೆ 5ನೇ ರ‍್ಯಾಂಕ್ ಗಳಿಸುವ ಮೂಲಕ ಉತ್ತಮ ಸಾಧನೆಯನ್ನು ತೋರಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾನಿಲಯದ ಹುಬ್ಬಳ್ಳಿಯಲ್ಲಿ ನಡೆದ 7 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾದೀಶ ಶಿವರಾಜ್.ವಿ.ಪಾಟೀಲ್ ಹಾಗೂ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾದ ಹೆಚ್.ಕೆ.ಪಾಟೀಲ್ ಅವರ ಸಮ್ಮುಖದಲ್ಲಿ ಚಿನ್ನದ ಪದಕ, ಪಾರಿತೋಷಕ ಹಾಗೂ ಅತ್ಯಧಿಕ ಅಂಕಗಳಿಸಿರುವುದಕ್ಕೆ ಸ್ಕಾಲರ್ ಶಿಪ್ ಸ್ವೀಕರಿಸಿರುತ್ತಾರೆ. ಎಂ.ದಿವ್ಯಶ್ರೀ ದಿವಂಗತ ಬಿ.ಎಸ್.ಮುತ್ತಪ್ಪ ಹಾಗೂ ಕುಸುಮ ದಂಪತಿಗಳ ಪುತ್ರಿಯಾಗಿದ್ದಾರೆ. ಪ್ರಸುತ್ತ ರಾಜ್ಯ ಉಚ್ಚನ್ಯಾಯಾಲಯದಲ್ಲಿ ವೃತ್ತಿ ನಡೆಸುತ್ತಿದ್ದು, ಮಡಿಕೇರಿಯಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಇನ್ಸ್ ಪೆಕ್ಟರ್ ಶಾಂತರಾಂ ಅವರ ಪತ್ನಿಯಾಗಿದ್ದಾರೆ.

Read More