ಮಡಿಕೇರಿ ನ.11 NEWS DESK : ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ 5 ದಶಕಗಳ ಸಾಥ೯ಕ ಸೇವೆ ಸ್ಮರಣೀಯವಾಗಿದೆ ಎಂದು ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಶ್ಲಾಘಿಸಿದ್ದಾರೆ. ನಗರದ ಕೊಡವ ಸಮಾಜದಲ್ಲಿ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಸುವಣ೯ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಇನ್ನರ್ ವೀಲ್ ಜಿಲ್ಲೆ 318 ರ ಅಧ್ಯಕ್ಷೆ ಶಬರಿ ಕಡಿದಾಳ್, ಇನ್ನರ್ ವೀಲ್ ಸಂಸ್ಥೆಯು ಮಡಿಕೇರಿ ವ್ಯಾಪ್ತಿಯಲ್ಲಿ 50 ವಷ೯ಗಳಿಂದ ಸೇವಾ ಕಾಯ೯ ಹಮ್ಮಿಕೊಳ್ಳುವ ಮೂಲಕ ಜನಸೇವೆಯಲ್ಲಿ ಸಕ್ರಿಯವಾಗಿ ಕಾಯ೯ಪ್ರವೖತ್ತವಾಗಿರುವುದು ಸಂತೋಷದ ವಿಚಾರ. ಜನರಿಗೆ ಈ ಸೇವಾ ಕಾಯ೯ಗಳ ನಿಜವಾದ ಪ್ರಯೋಜನ ತಲುಪಿದಾಗ ಸೇವೆಗೆ ನಿಜವಾದ ಸಾಥ೯ಕತೆ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಇನ್ನರ್ ವೀಲ್ ಸಂಸ್ಥೆಯು ಮತ್ತಷ್ಟು ಸೇವಾ ಯೋಜನೆ ಹಮ್ಮಿಕೊಳ್ಳಲು ಸುವಣ೯ ಸಂಭ್ರಮ ಕಾಯ೯ಕ್ರಮ ಸಹಾಯಕವಾಗಲಿ ಎಂದೂ ಅವರು ಹಾರೈಸಿದರು. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯನ್ನು 50 ವಷ೯ಗಳ ಹಿಂದೆ ಸ್ಥಾಪಿಸಿದ್ದ ಡಾ.ಜಯಲಕ್ಷ್ಮಿ ಪಾಟ್ಕರ್ ಅವರು ಗೌರವಾಪ೯ಣೆ…
ಲೇಖಕ: admin
ಕುಶಾಲನಗರ ನ.11 NEWS DESK : ಭಾರತ ದೇಶದ ಮೂಲ ನಿವಾಸಿಗಳ ಮೂಲ ಧರ್ಮ ಬೌದ್ಧ ಧರ್ಮವಾಗಿದ್ದು, ಭಗವಾನ್ ಬುದ್ಧ ನಮ್ಮ ಮೂಲ ಗುರು ಅವರ ಪಂಚಶೀಲ ತತ್ವಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಹೋಗಬೇಕು. ಮುಂದಿನ ಪೀಳಿಗೆಗೆ ಬುದ್ಧನ ವಿಚಾರಧಾರೆಯನ್ನು ಮನದಟ್ಟು ಮಾಡಿಕೊಡಬೇಕು ಎಂದು ಕರ್ನಾಟಕ ಬುದ್ಧ ಧಮ್ಮ ಸಮಿತಿ ಒಕ್ಕೂಟದ ಗೌರವಾಧ್ಯಕ್ಷ ಬಿ.ಗೋಪಾಲ್ ಹೇಳಿದರು. ಕರ್ನಾಟಕ ಬುದ್ಧ ಧಮ್ಮ ಸಮಿತಿಗಳ ಒಕ್ಕೂಟದ ವತಿಯಿಂದ ಕುಶಾಲನಗರ ಮಹಾಲಕ್ಷ್ಮಿ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಬುದ್ಧ ಧಮ್ಮ ಚಿಂತನ ಮಂಥನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೌರ್ಯ ಸಾಮ್ರಾಜ್ಯದಲ್ಲಿ ಸಾಮ್ರಾಟ ಅಶೋಕ ಚಕ್ರವರ್ತಿ ಆಳ್ವಿಕೆ ಸಂದರ್ಭ ಬೌದ್ಧ ಧರ್ಮ ಸುಂದರವಾದ ಪ್ರೀತಿ, ಸಹಬಾಳ್ವೆ, ಸಹೋದರತ್ವವನ್ನು ಬಿತ್ತಿ ಜನಸಾಮಾನ್ಯರಲ್ಲಿ ಉತ್ತಮ ಬಾಂಧವ್ಯದ ಬುನಾದಿ ಹಾಕಿ ಕೊಟ್ಟಿತ್ತು ಎಂದು ಹೇಳಿದರು. ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿವೃತ್ತ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿದ್ದಪ್ಪ ಮಾತನಾಡಿ, ಭಗವಾನ್ ಬುದ್ಧನ ವಿಚಾರಧಾರೆಯನ್ನು ಮೈಗೂಡಿಸಿಕೊಳ್ಳಬೇಕು. ಪ್ರತಿ ದಿನ ಅರ್ಧ…
ಮಡಿಕೇರಿ ನ.11 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಇಂಗ್ಲಿಷ್ ವಿಭಾಗದ ಜಾಯ್ಸ್ ಸಾಹಿತ್ಯ ಸಂಘದ ಆಶ್ರಯದಲ್ಲಿ “ಬಿಯಾಂಡ್ ದಿ ಬುಕ್ ಆ್ಯಕ್ಟಿವಿಟಿ – ಲಿಟ್ ಅಪ್” ಎಂಬ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಸಾಹಿತ್ಯ ವಿದ್ಯಾರ್ಥಿ ಶಿಫಾ ಅವರು ಚಟುವಟಿಕೆಯ ಉದ್ದೇಶಗಳ ಬಗ್ಗೆ ಸಂಕ್ಷಿಪ್ತವಾಗಿ ಪರಿಚಯಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಮತ್ತು ಜಾಯ್ಸ್ ಸಾಹಿತ್ಯ ಸಂಘದ ಅಧ್ಯಕ್ಷೆ ಪ್ರೊ. ನಯನಾ ಕಶ್ಯಪ್ ಮಾತನಾಡಿ, ಜಾಯ್ಸ್ ಸಾಹಿತ್ಯ ಸಂಘವು ವಿದ್ಯಾರ್ಥಿಗಳ ಒಳಗಿರುವ ಚಿಂತನೆ ಮತ್ತು ಪ್ರತಿಭೆಗೆ ವೇದಿಕೆ ಒದಗಿಸುವ ಉದ್ದೇಶದಿಂದ ಪ್ರತಿವರ್ಷ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ,” ಎಂದು ವಿವರಿಸಿದರು. ಪ್ರಾಂಶುಪಾಲರಾದ ಮೇಜರ್ ರಾಘವ ಬಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸಾಹಿತ್ಯದ ಮೌಲ್ಯವನ್ನು ಜೀವನದ ಬೆಳಕಾಗಿ ಪರಿಗಣಿಸುವಂತೆ ಕರೆ ನೀಡಿದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವ ಜೊತೆಗೆ ಮಾತನಾಡುವ, ಆಲೋಚಿಸುವ ಮತ್ತು ಅಭಿವ್ಯಕ್ತಿಯ ಕೌಶಲ್ಯವನ್ನು ಹೆಚ್ಚಿಸುತ್ತವೆ,” ಎಂದು ಹೇಳಿದರು. ವಿದ್ಯಾರ್ಥಿಗಳಿಂದ…
ವಿರಾಜಪೇಟೆ ನ.11 NEWS DESK : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ವಿರಾಜಪೇಟೆ ತಾಲ್ಲೂಕು ಸಮಿತಿ ವತಿಯಿಂದ ವಿರಾಜಪೇಟೆ ಕಚೇರಿಯಲ್ಲಿ ಸೆಸ್ಕ್ ಉಪವಿಭಾಗದ ಸಹಾಯಕ ಅಭಿಯಂತರರಾದ ಅಭಿಷೇಕ್ ಅವರು ವರ್ಗಾವಣೆ ಗೊಂಡ ಹಿನ್ನಲೆಯಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಎಂ.ಗಣೇಶ ಹಾಗೂ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ಕೆ.ಎಂ.ಹಂಸ, ಕಾರ್ಯದರ್ಶಿ ಎನ್.ಜಿ.ಚಂದ್ರಶೇಖರ್ ಮತ್ತು ಸದಸ್ಯರಾದ ರಾಜ, ರಫೀಕ್, ನೌಸರ್, ಯೂಸುಫ್, ರಾಜೇಶ್, ಮನು ಉಪಸ್ತಿತರಿದ್ದರು.
ವಿರಾಜಪೇಟೆ ನ.11 NEWS DESK : ವಿರಾಜಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ಪೋಷಕ -ಶಿಕ್ಷಕರ ಸಭೆಯನ್ನು ಸಭೆಯು ನ.12 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲಾ ಪೋಷಕರು ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸುವಂತೆ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಡಿಕೇರಿ ನ.11 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ “ನನ್ನ ಕಲ್ಪನೆಯ ಸ್ವಚ್ಛ ಕೊಡಗು” ಎಂಬ ವಿಚಾರವಾಗಿ ಪ್ರಬಂಧ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಆಯೋಜಿಸುತ್ತಿದ್ದು, ಜಿಲ್ಲೆಯಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಬಹುದೆಂದು ಕೋರಲಾಗಿದೆ. ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು, ಐದರಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಕೈ ಬರಹ ಅಥವಾ ಡಿಟಿಪಿ ಮಾಡಿ ಕಳುಹಿಸಬೇಕು. ಕಡ್ಡಾಯವಾಗಿ ಕನ್ನಡದಲ್ಲಿಯೇ ಬರೆಯಬೇಕು. ಪ್ರಬಂಧವು 200 ವಾಕ್ಯಗಳನ್ನು ಮೀರಬಾರದು. ಯಾವುದೇ ರೀತಿಯ ಕೃತಕ ಬುದ್ದಿ ಮತ್ತೆಯನ್ನು(ಎ.ಐ) ಉಪಯೋಗಿಸುವಂತಿಲ್ಲ. ದಿನಾಂಕ 30/11/2025ರ ಒಳಗೆ ಕೆಳಗಿನ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು, ವಿದ್ಯಾರ್ಥಿಯ ಹೆಸರು, ತರಗತಿ, ವ್ಯಾಸಂಗ ಮಾಡುತ್ತಿರುವ ಶಾಲೆ, ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರ ನೀಡಲಾಗುವುದು. ಆಯ್ದ ಪ್ರಬಂಧಗಳನ್ನು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟಿಸಲಾಗುವುದು. ಆಯ್ದ ಸಲಹೆಗಳನ್ನು,…
ಮಡಿಕೇರಿ ನ.11 NEWS DESK : ಕೊಡಗಿನಲ್ಲಿ ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೇದಾರ ಸಮಸ್ಯೆಯ ಕುರಿತು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕೋರಿಕೆ ಮೇರೆಗೆ ರಚಿತವಾದ, ಕರ್ನಾಟಕ ವಿಧಾನಸಭೆ ಪರಿಶೀಲನ ಸಮಿತಿಯ 2ನೇ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆಯಿತು. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಹಲವು ಮಹತ್ವದ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಲಾಯಿತು.
ವಿರಾಜಪೇಟೆ ನ.11 NEWS DESK : ವಿರಾಜಪೇಟೆ ತಾಲೂಕಿನ ಕಣ್ಣಂಗಾಲ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೆ.ಎಸ್. ಗೋಪಾಲ ಕೃಷ್ಣ (ಗೋಪಿ ) ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ .ವಿ. ಜಿ. ಪಾರ್ಥ, ಗೌ :ಕಾರ್ಯದರ್ಶಿ. ವಿ.ವಿ. ಮಹಾಲಕ್ಷ್ಮಿ ಖಜಾಂಚಿ ವಿ. ಬಿ ಮಧು, ಸಾಮಾಜಿಕ ಜಾಲತಾಣದ ಸಂಯೋಜಕಿ, ಪಂಚಮಿ ಅಭಿಷೇಕ್, ನಿರ್ದೇಶಕರಾಗಿ ವಿ. ಪಿ. ಜೀವನ್ ಕುಮಾರ್, ಕೆ. ಪಿ. ಅಜಿತ್, ವಿ. ಟಿ. ರಾಕೇಶ್, ವಿ. ಕೆ. ರಂಜು, ಸೌ ಮ್ಯ, ವಿ. ಸಿ. ಕಿರಣ್, ನಮೃತ ಗೌರಿ ಶಂಕರ್ ಆಯ್ಕೆಯಾಗಿದ್ದಾರೆ ಎಂದು ಅಧ್ಯಕ್ಷ ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.
ಮಡಿಕೇರಿ NEWS DESK ನ.10 : ಕೊಡವರು ರಾಷ್ಟ್ರೀಯ ಜನಗಣತಿಯ ಸಂದರ್ಭ ಸ್ವತಂತ್ರ್ಯವಾಗಿ ‘ಕೊಡವ’ ಎಂದು ಗುರುತಿಸಿಕೊಳ್ಳುವಂತೆ ಸಿಎನ್ಸಿ ಕರೆ ನೀಡಿದೆ. ಆದರೆ ಈ ಕರೆಗೆ ವಿರುದ್ಧವಾಗಿ ಕೆಲವು ಪಟ್ಟಭದ್ರಹಿತಾಸಕ್ತಿಗಳು ಈ ರೀತಿ ಪ್ರತ್ಯೇಕವಾಗಿ ಗುರುತಿಸಿಕೊಂಡರೆ ಕೊಡವರಿಗೆ ರಕ್ಷಣೆ ಇರುವುದಿಲ್ಲ ಎಂದು ಅಪಪ್ರಚಾರ ಮಾಡುವ ಮೂಲಕ ಕೊಡವರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುದಿಕೇರಿಯಲ್ಲಿ ಸಿಎನ್ಸಿ ವತಿಯಿಂದ ನಡೆದ 19ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊಡವರನ್ನು ನಿರಂತರವಾಗಿ ವಂಚಿಸುತ್ತಿರುವ ಕೆಲವು ಕೂಟಗಳ ಬಗ್ಗೆ ಕೊಡವರು ಎಚ್ಚರಿಕೆಯಿಂದ ಇರಬೇಕೆಂದು ಕರೆ ನೀಡಿದರು. ಕೊಡವರು ಸಂವಿಧಾನದ ಭದ್ರತೆ ಬೇಕೆಂದು ಕೇಳುವ ಸಂದರ್ಭ ಕೆಲವು ಕೂಟ ಕೊಡವರನ್ನು ಸದಾಕಾಲ ವಂಚಿಸಲು ತೊಡಗಿದೆ. ಅವರ ಕಾರ್ಯಾಸೂಚಿ ಕೊಡವರಿಗೆ ಏನೇನು ದೊರಕಬಾರದು ಎಂಬುದಾಗಿದೆ. ನೀವು ದೇಶವನ್ನು ರಕ್ಷಣೆ ಮಾಡಿದ ಜನ, ಶೂರರು, ಧೀರರು ಎಂದು ಹೊಗಳಿ ಹೊನ್ನಶೂಲಕ್ಕೇರಿಸಿ…
ಮಡಿಕೇರಿ NEWS DESK ನ.10 : ಕಾಡಾನೆ ದಾಳಿಗೆ ಸಿಲುಕಿ ತೋಟದ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಸಮೀಪದ ಕಾಫಿ ತೋಟವೊಂದರಲ್ಲಿ ನಡೆದಿದೆ. ತೋಟದ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ಹನುಮಂತ (57) ಎಂಬುವವರೇ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಜೊತೆಯಲ್ಲಿದ್ದ ಮತ್ತೋರ್ವ ಕಾರ್ಮಿಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ಮತ್ತು ಸೂಕ್ತ ಕ್ರಮದ ಭರವಸೆ ನೀಡಿದರು. ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಲ್ಲಿ ಅರಣ್ಯ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಾರ್ಮಿಕ ಸಂಘಟನೆಯ ಮುಖಂಡ ಹೆಚ್.ಎಂ.ಸೋಮಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಡಾನೆ ದಾಳಿಯ ಆತಂಕದಿಂದ ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದು, ಈ ಸಮಸ್ಯೆಯನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಜಿ.ಪಂ ಮಾಜಿ ಸದಸ್ಯ ವಿಜು ಸುಬ್ರಮಣಿ ಮಾತನಾಡಿ ಸರಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾಡಾನೆ ಉಪಟಳ ಹೆಚ್ಚಾಗಲು ಕಾರಣ ಎಂದು ಆರೋಪಿಸಿದರು.






