ಲೇಖಕ: admin

ಮಡಿಕೇರಿ ಮೇ.19 NEWS DESK : ಮುಂಗಾರು ಆರಂಭ ಹಿನ್ನೆಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಗ್ಯಾರಂಟಿ ಸಮಿತಿ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾನ್ಸೂನ್ ಪ್ರಾರಂಭವಾಗುತ್ತಿದು, ತಾಲ್ಲೂಕಿನ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲು ಪೊನ್ನಂಪೇಟೆ ಹಾಗೂ ವಿರಾಜಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾಯಿತು. ಮಳೆಗಾಲ ಸಂದರ್ಭದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕಿದೆ, ಆ ದಿಸೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಪ್ರಶಾಂತ್ ಅವರು ಸಲಹೆ ಮಾಡಿದರು. ಸೆಸ್ಕ್ ಇಲಾಖೆಯವರು ಮುಂಜಾಗ್ರತಾ ಕ್ರಮ ವಹಿಸಿ, ಹೆಚ್ಚಾಗಿ ಮಳೆ ಬೀಳುವ ಗ್ರಾ.ಪಂ.ಗಳಲ್ಲಿ ಸೆಸ್ಕ್ ಇಲಾಖೆಯಿಂದ ಜಂಗಲ್ ಕಟ್ಟಿಂಗ್ ಮಾಡಿಸಿಕೊಳ್ಳಿ ಹಾಗೂ ಅಂಗನವಾಡಿ ಮತ್ತು ಶಾಲೆಗಳ ಸುತ್ತಾ-ಮುತ್ತಾ ಇರುವಂತಹ ಅಪಾಯಕಾರಿ ಮರಗಳನ್ನು ತೆರೆವುಗೊಳಿಸಿ ಯಾವುದೇ ಮಕ್ಕಳಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮವಹಿಸಿ ಎಂದು ವಿರಾಜಪೇಟೆ…

Read More

ತುಮಕೂರು ಮೇ 19 NEWS DESK : ದುಬಾರೆ ಆನೆ ಶಿಬಿರದಲ್ಲಿ ದಸರಾ ಆನೆ ಕಂಜನ್ ಮತ್ತು ಮಕನಾ ಆನೆ ಮಾರ್ತಾಂಡ ನಡುವೆ ನಡೆದ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅನಿರೀಕ್ಷಿತವಾದ ಮತ್ತು ಊಹಿಸಲೂ ಆಗದ ದುರ್ಘಟನೆಯಲ್ಲಿ ಒಬ್ಬ ಪ್ರವಾಸಿ ಮಹಿಳೆ ಮತ್ತು ಒಂದು ಆನೆ ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ ಎಂದು ತಿಳಿಸಿರುವ ಅವರು ಸಂತಾಪ ಸೂಚಿಸಿದ್ದಾರೆ. ಹಾಸನ ಜಿಲ್ಲೆ ಆಲೂರಿನಲ್ಲಿ 2023 ರಲ್ಲಿ ಸೆರೆ ಹಿಡಿಯಲಾಗಿದ್ದ 53 ವರ್ಷದ ಮಾರ್ತಾಂಡ 4500 ಕೆ.ಜಿ. ತೂಕವಿತ್ತು. ಹಾಸನ ಜಿಲ್ಲೆ ಯಸಳೂರಿನ ಬಳಿ 2014ರಲ್ಲಿ ಸೆರೆ ಹಿಡಿಯಲಾಗಿದ್ದ 26 ವರ್ಷದ ಕಂಜನ್ 3 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದ್ದ. ಇನ್ನು ಮುಂದೆ ದಸರಾ ಮಹೋತ್ಸವಕ್ಕೆ ಈ ಆನೆಯನ್ನು ಬಳಸದಂತೆ ಸೂಚಿಸಿರುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Read More

ಬೆಂಗಳೂರು ಮೇ 19 NEWS DESK : ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದುಬಾರೆ ಶಿಬಿರದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಸೂಚನೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.”ಈ ಘಟನೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದೇನೆ. ಘಟನೆಗೆ ನಿಖರ ಕಾರಣಗಳೇನು ಮತ್ತು ಪ್ರವಾಸಿ ಮಾರ್ಗಸೂಚಿ ನಿರ್ವಹಣೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ,” ಎಂದು ಸಚಿವರು ತಿಳಿಸಿದ್ದಾರೆ. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಆನೆ ಶಿಬಿರಗಳಲ್ಲಿ ಕಟ್ಟುನಿಟ್ಟಾಗಿ ಪ್ರವಾಸಿಗರ…

Read More

ಸೋಮವಾರಪೇಟೆ ಮೇ 19 NEWS DESK : ಪಟ್ಟಣದ ಸ್ವಚ್ಛತೆಗೆ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಅವರು ಹೇಳಿದರು. ಎಂ.ಜಿ. ರಸ್ತೆಯ ಯೂನಿಯನ್ ಬ್ಯಾಂಕ್‍ಗೆ ಸೇರಿದ ಜಾಗದಲ್ಲಿ ಸಂಗ್ರಹವಾಗಿರುವ ತ್ಯಾಜ್ಯ ವಿಲೇವಾರಿಗೆ ಕ್ರಮ ತೆಗೆದುಕೊಂಡು ನಂತರ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರೊಂದಿಗೆ ಕಸವಿಲೇವಾರಿಯ ಬಗ್ಗೆ ಕೆಲವು ಸಲಹೆಗಳನ್ನು ನೀಡಿದರು. ಪಟ್ಟಣದ ಸ್ವಚ್ಚತೆಗೆ ಸಾರ್ವಜನಿಕರು ಕೈಜೋಡಿಸಬೇಕು. ರಸ್ತೆ ಬದಿಯಲ್ಲಿ ಕಸವನ್ನು ಎಸೆದರೆ, ಇಡೀ ಪರಿಸರ ಗಬ್ಬೆದ್ದು ನಾರುತ್ತದೆ. ಸಾಂಕ್ರಾಮಿಕ ರೋಗಗಳು ಹರಡಿ ದೊಡ್ಡ ಮಟ್ಟದ ಸಮಸ್ಯೆಯಾಗುತ್ತದೆ. ಈ ರಸ್ತೆಯಲ್ಲಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ತೆರಳುತ್ತಾರೆ. ಅವರ ಕಷ್ಟವನ್ನು ನಾವೆಲ್ಲರೂ ಕೇಳಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಯೂನಿಯನ್ ಬ್ಯಾಂಕ್‍ನವರು ತಮ್ಮ ಜಾಗದ ಸುತ್ತ ಬೇಲಿ ಹಾಕಿಸಿಕೊಂಡು ಭದ್ರಪಡಿಸಿಕೊಳ್ಳಬೇಕು. ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು ಎಂದು ಬ್ಯಾಂಕ್ ಅಧಿಕಾರಿಗೆ ಸೂಚಿಸಿದರು. ರಸ್ತೆ ಬದಿಯಲ್ಲಿ ಕಸ ಸಂಗ್ರಹವಾಗುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರ ಅಳವಡಿಸಿ ನಿರ್ವಹಣೆ ಮಾಡಬೇಕು. ಅನಾಗರಿಕರಂತೆ ರಸ್ತೆ ಬದಿಯಲ್ಲಿ ಕಸ ಎಸೆಯುವವರು ಸಿಕ್ಕಿಬಿದ್ದರೆ, ಕಾನೂನು ಕ್ರಮ…

Read More

ಸೋಮವಾರಪೇಟೆ ಮೇ 19 NEWS DESK : ಜಿಲ್ಲಾ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುವ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭಾ ಪ್ರಶಸ್ತಿಗೆ ತಾಲ್ಲೂಕಿನ ಬೆಂಕಳ್ಳಿ-ಕೊತ್ನಳ್ಳಿ ಗ್ರಾಮದ ವಿದ್ಯಾರ್ಥಿನಿ ಸಿ.ಎಸ್.ಆದ್ವಿ ಭಾಜನರಾಗಿದ್ದಾರೆ. 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 623 ಅಂಕಗಳನ್ನು ಪಡೆದು ಜಿಲ್ಲೆಯ ಟಾಪರ್ ಅಗಿದ್ದರು. ಶೇ. 99.68 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 4ನೇ ಸ್ಥಾನ ಗಳಿಸಿದ್ದರು. ಸೋಮವಾರಪೇಟೆ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಿದ್ಯಾರ್ಥಿಯಾಗಿದ್ದರು. ಬೆಂಕಳ್ಳಿ ಗ್ರಾಮದ ರೈತರಾದ ಸಿ.ಎಸ್.ಪ್ರಗತಿ, ಸಿ.ಟಿ.ಸತೀಶ್ ಅವರ ಪುತ್ರಿಯಾಗಿರುವ ಆದ್ವಿ, ತಮ್ಮೂರಿಗೆ ಸರ್ಕಾರಿ ಬಸ್ ಸೌಲಭ್ಯವಿಲ್ಲದ ಹಿನ್ನೆಲೆಯಲ್ಲಿ ಸರ್ಕಾರದ ಬಾಲಕಿಯರ ಹಾಸ್ಟೇಲ್‍ನಲ್ಲಿ ವಾಸವಿದ್ದು, ಪರೀಕ್ಷೆಗೆ ತಯಾರಿ ನಡೆಸಿ ಯಶ ಕಂಡಿದ್ದರು.

Read More

ಗೋಣಿಕೊಪ್ಪ ಮೇ 19 NEWS DESK : ಕೊಡಗು ಹಿಂದೂ ಮಲಯಾಳಿ ಸಮಾಜದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮತ್ತು ಮಹಾಸಭೆಯು ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜದ ಅಧ್ಯಕ್ಷರಾದ ಕೆ.ಪಿ.ಪ್ರಶಾಂತ್‍ಕುಮಾರ್ ಅವರು, ಎಲ್ಲರೂ ಒಗ್ಗಟ್ಟಿನಿಂದ ಮುಂದುವರಿದರೆ ಸಮಾಜದ ಅಭಿವೃದ್ಧಿ ಸಾಧ್ಯವಿದೆ. ಸದಸ್ಯತ್ವ ಅಭಿಯನದೊಂದಿಗೆ ಮರಣ ನಿಧಿ ಸ್ಥಾಪಿಸುವುದು ಕೂಡ ಸದಸ್ಯರ ಕುಟುಂಬಕ್ಕೆ ನೆರವಾಗಲಿದೆ. ಸಮಾಜದಲ್ಲಿ ಆರ್ಥಿಕ ಕ್ರೋಡೀಕರಣದ ಮೂಲಕ ಸ್ವಂತಜಾಗ ಖರೀದಿಸಿ ಸಮಾಜದ ಕಟ್ಟಡ ನಿರ್ಮಿಸಲು ಮುಂದಾಗಲು ಎಲ್ಲರ ಸಹಕಾರ ಅಗತ್ಯ ಎಂದರು. ಗೌರವ ಅಧ್ಯಕ್ಷ ಪಿ.ಎಸ್.ಶರತ್‍ಕಾಂತ್, ಖಜಾಂಜಿ ಶಾಜಿಅಚ್ಚುತನ್, ಉಪಾಧ್ಯಕ್ಷರುಗಳಾದ ಕೆ.ಜಿ.ಪ್ರಸಾದ್, ಸಿ.ಕೆ.ವೇಣುಗೋಪಾಲ್, ಪುಷ್ಪ ಮನೋಜ್, ಶ್ರೀಜಾ ಪ್ರದೀಪ್, ಸಂಘಟನಾ ಕಾರ್ಯದರ್ಶಿ ಟಿ.ಜಿ.ಮನು ಕುಮಾರ್, ಸರಳ ಮಣಿಲಾಲ್, ಸಹ ಕಾರ್ಯದರ್ಶಿ ಬಿಂದು ಸಾಜಿ, ಕಾನೂನು ಸಲಹೆಗಾರ ಕೆ.ಬಿ.ಸಂಜೀವ್, ನಿರ್ದೇಶಕರುಗಳಾದ ಪಿ.ಜಿ.ರಾಜಶೇಖರ್, ಪಿ.ವಿ.ಚಂದ್ರ, ರತೀಶ್‍ಕುಮಾರ್, ವಿ.ಎನ್.ರೀನಾ, ಸುನಿತಾಕಣ್ಣನ್, ಪಾಲಿಬೆಟ್ಟ ಉಪ ಸಮಿತಿಯಅಧ್ಯಕ್ಷಪಿ.ವೈ. ಮುರುಳಿ, ಕಾರ್ಯದರ್ಶಿ ಮನೋಜ್‍ಕುಮಾರ್ ಬಂಡೆ ಇದ್ದರು. : ಸನ್ಮಾನ :…

Read More

ಮಡಿಕೇರಿ ಮೇ 19 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಭಗವತಿ ದೇವಿ, ಪಾರ್ವತಿ ದೇವಿ, ಸರಸ್ವತಿ, ಮಹಾಲಕ್ಷ್ಮಿ ಹಾಗೂ ದುರ್ಗಿ ಸಂಕಲ್ಪದಲ್ಲಿರುವ ದೇವಿಗೆ ಮೇ 31 ರಂದು “ಪೊಂಗಾಲ ಸೇವೆ” ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಮುತ್ತಪ್ಪ ದೇವಾಲಯ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ರಾಮನ್ ಅವರು ಭಾನುವಾರ ಬೆಳಿಗ್ಗೆ 8.30 ರಿಂದ ಆರಂಭಗೊಳ್ಳುವ “ಪೊಂಗಾಲ ಉತ್ಸವ” ದ ಕುರಿತು ಮಾಹಿತಿ ನೀಡಿದರು. ಪೊಂಗಾಲ ಮಹೋತ್ಸವವು ಕೇರಳದ ತಿರುವನಂತಪುರಂನಲ್ಲಿರುವ ಅಟ್ಟುಂಗಾಲ್ ಭಗವತಿ ಕ್ಷೇತ್ರದಲ್ಲಿ ಲಕ್ಷಾಂತರ ಮಹಿಳಾ ಭಕ್ತಾದಿಗಳಿಂದ ನಡೆಸಲ್ಪಡುವ ಶ್ರೇಷ್ಠವಾದ ಸೇವೆಯಾಗಿರುತ್ತದೆ. ಇತ್ತೀಚೆಗೆ ಇನ್‍ಫೆÇೀಸಿಸನ ಡಾ| ಸುಧಾ ಮೂರ್ತಿಯವರು ಕೂಡ ಈ ಪೊಂಗಾಲ ಸೇವೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಿದ್ದರು. ಅಂತಹ ಪವಿತ್ರವಾದ ಪೂಜೆಯನ್ನು ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಭಗವತಿ ದೇವಿಯ ಸನ್ನಿಧಿಯಲ್ಲಿ ನಡೆಯಲಿರುವುದು ಕೊಡಗಿನ ಸರ್ವ ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗೆ ದೊರಕಿದ ಸದಾವಕಾಶವಾಗಿದೆ ಎಂದರು.…

Read More

ಮಡಿಕೇರಿ ಮೇ 19 NEWS DESK : ಮಂಡ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯಾಪ್ತಿಯ ಮಡಿಕೇರಿ ವಿಸ್ತರಣಾ ಘಟಕ ಹಾಗೂ ಅರಣ್ಯ ಮಹಾ ವಿದ್ಯಾಲಯ, ರೇನ್ಫೊರೆಸ್ಟ್ ಮತ್ತು ಬೈಫ್ ಸಬಲ ಯೋಜನೆಯ ವತಿಯಿಂದ ಮೇ 23 ರಂದು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ “ವಿಶ್ವ ಜೇನು ದಿನಾಚರಣೆ-2026” ನಡೆಯಲಿದೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಮಡಿಕೇರಿ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥರಾದ ಡಾ.ಆರ್.ಎನ್.ಕೆಂಚರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿ, ಕೃಷಿಯಲ್ಲಿನ ರಾಸಾಯನಿಕ ಗೊಬ್ಬರಗಳ ಬಳಕೆ, ಆಹಾರದ ಅಲಭ್ಯತೆ ಮೊದಲಾದ ಕಾರಣಗಳಿಂದ ಇತ್ತೀಚಿನ ದಿನಗಳಲ್ಲಿ ಜೇನುಹುಳುಗಳ ಸಂಖ್ಯೆ ಕ್ಷೀಣಿಸುತ್ತಿದೆ.ಈ ಹಿನ್ನೆಲೆಯಲ್ಲಿ ವಿವಿಧ ಬೆಳೆಗಳಲ್ಲಿ ಪರಾಗಸ್ಪರ್ಶಕ್ಕೆ ಅತ್ಯವಶ್ಯಕವಾಗಿರುವ ಜೇನು ಹುಳುಗಳನ್ನು ಸಂರಕ್ಷಿಸುವ ಮತ್ತು ಜೇನು ಕೃಷಿಯನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವ ಜೇನು ದಿನಾಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದೆಯೆಂದು ಮಾಹಿತಿಯನ್ನಿತ್ತರು. ವಿಶ್ವ ಜೇನು ದಿನಾಚರಣೆಯನ್ನು ಅಂದು ಬೆಳಗ್ಗೆ 10.30 ಗಂಟೆಗೆ ಮಂಡ್ಯದ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ.ಕೆ.ಸಿ.ನಾರಾಯಣ ಸ್ವಾಮಿ ಉದ್ಘಾಟಿಸಲಿದ್ದಾರೆ. ಮುಖ್ಯ…

Read More

ಮಡಿಕೇರಿ ಮೇ 19 NEWS DESK : “ಆನ್ ಲೈನ್” ಔಷಧಿಗಳ ಮಾರಾಟವನ್ನು ಸ್ಥಗಿತಗೊಳಿಸಬೇಕೆನ್ನುವ ಪ್ರಮುಖ ಬೇಡಿಕೆಯನ್ನು ಮುಂದಿರಿಸಿಕೊಂಡು ಮೇ 20 ರಂದು ನಡೆಯಲಿರುವ ಔಷಧಿ ವ್ಯಾಪಾರಸ್ಥರ ರಾಷ್ಟ್ರೀಯ ಮಟ್ಟದ ಪ್ರತಿಭಟನೆಯ ಭಾಗವಾಗಿ ಕೊಡಗು ಜಿಲ್ಲಾ ವ್ಯಾಪ್ತಿಯ ಎಲ್ಲಾ ಔಷಧಿಯಂಗಡಿಗಳು ಅಂದು ಮುಚ್ಚಲ್ಪಡಲಿವೆ. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘಟನೆಯ ಅಧ್ಯಕ್ಷರು, ರಾಜ್ಯ ಸಂಘÀಟನೆಯ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಸಂಘಟನೆಯ ಸಂಘಟನಾ ಕಾರ್ಯದರ್ಶಿಗಳಾದ ಎ.ಕೆ.ಜೀವನ್ ಪ್ರತಿಭಟನೆಯ ಕುರಿತು ಮಾಹಿತಿ ನೀಡಿದರು. ರಾಷ್ಟ್ರವ್ಯಾಪಿ 12.50 ಲಕ್ಷ ಔಷಧಿ ವ್ಯಾಪಾರಸ್ಥರಿದ್ದಾರಾದರೆ, ರಾಜ್ಯದಲ್ಲಿ 26 ಸಾವಿರ ಹಾಗೂ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 200 ಔಷಧ ವ್ಯಾಪಾರಸ್ಥರಿದ್ದಾರೆ. ಇವರೆಲ್ಲರೂ ತಮ್ಮ ಔಷಧಿಯಂಗಡಿಗಳನ್ನು ಒಂದು ದಿನದ ಮಟ್ಟಿಗೆ ಮುಚ್ಚಿ ಪ್ರತಿಭಟನೆ ನಡೆಸಲಿದ್ದಾರೆಂದು ತಿಳಿಸಿದರು. ಪ್ರತಿಭಟನೆಯ ಸಂದರ್ಭ ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗಬಾರದೆನ್ನುವ ಉದ್ದೇಶದಿಂದ ಆಸ್ಪತ್ರೆಗಳಲ್ಲಿ ಇರುವ ಔಷಧಿಯಂಗಡಿಗಳನ್ನು ತೆರೆದಿಡಲು ಅವಕಾಶ ನೀಡಲಾಗಿದೆಯೆಂದು ಜೀವನ್ ಮಾಹಿತಿಯನ್ನಿತ್ತರು. :: ಕೊರೋನ ಸಂದರ್ಭದ ಆದೇಶ ಹಿಂಪಡೆಯಿರಿ :: ಕೊರೋನಾ ಮಹಾ ಮಾರಿ…

Read More

ಕುಶಾಲನಗರ ಮೇ 19 NEWS DESK : ವಿದ್ಯಾರ್ಥಿಗಳು ತರಗತಿಯಪಾಠಗಳಿಗೆ ಮಾತ್ರ ಸೀಮಿತವಾಗದೇ ಸಂಗೀತ, ಕಲೆ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯ, ಸಾಮಥ್ರ್ಯವನ್ನು ಪ್ರದರ್ಶಿಸಬೇಕು. ಅದಕ್ಕೆ ಈ ಯುವ ವೈಭವ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಕಲ್ಪಿಸಿಕೊಟ್ಟಿದೆ. ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ. ಇಂತಹ ಪ್ರಯತ್ನಗಳು ಹೀಗೆಯೇ ಮುಂದುವರೆಯಲಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾಕ್ಟರ್ ಮಂತರ್ ಗೌಡ ಅಭಿಮತ ವ್ಯಕ್ತಪಡಿಸಿದರು. ಚಿಕ್ಕ ಅಳುವಾರದ ಜ್ಞಾನ ಕಾವೇರಿ ಆವರಣದ ಕೊಡಗು ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಅಂತರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಯುವ ವೈಭವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಇದ್ದರೂ ಎಲ್ಲ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆಯ ವಿಶ್ವವಿದ್ಯಾಲಯಗಳತ್ತ ಮುಖ ಮಾಡುತ್ತಿರುವುದು ಬೇಸರದ ಸಂಗತಿ. ನಮ್ಮ ಜಿಲ್ಲೆಯ ವಿಶ್ವವಿದ್ಯಾಲಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಾಲಕರು, ಶಿಕ್ಷಕರು ಮಕ್ಕಳಿಗೆ ನಮ್ಮ ವಿಶ್ವವಿದ್ಯಾಲಯದಲ್ಲಿ ಕಲಿಯಲು ಪ್ರೋತ್ಸಾಹ ನೀಡಿ ವಿವಿಯನ್ನುಹೆಮ್ಮರವಾಗಿ…

Read More