ಮಡಿಕೇರಿ NEWS DESK ಫೆ.9 : ನವ ದೆಹಲಿಯಲ್ಲಿ ರಾಜ್ಯ ಸಭಾ ಸದಸ್ಯ ಅಜಯ್ ಮಖಾನ್ ಅವರನ್ನು ಭೇಟಿಯಾದ ಚೇನಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಪ್ರಮುಖರು ಪೈನಲ್ ಪಂದ್ಯಾಟಕ್ಕೆ ಸಂಸದರನ್ನು ಆಹ್ವಾನಿಸಿದರು. 10 ವಷ೯ಗಳ ಹಿಂದೆಯೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಉದ್ದೇಶವನ್ನು ಶ್ಲಾಘಿಸಿ ಕೊಡಗಿನಲ್ಲಿ ಕ್ರೀಡೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದನ್ನು ಸ್ಮರಿಸಿಕೊಂಡ ಅಜಯ್ ಮಖಾನ್. ಈ ಬಾರಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಬರಲು ಸಮ್ಮತಿ ಸೂಚಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಸಹಕಾರದಲ್ಲಿ ರಾಜ್ಯ ಸಭಾ ಸದಸ್ಯ ಅಜಯ್ ಮಖಾನ್ ಅವರನ್ನು ನವದೆಹಲಿಯಲ್ಲಿ ಚೇನಂಡ ಕುಟುಂಬಸ್ಥರ ನಿಯೋಗ ಭೇಟಿ ಮಾಡಿತ್ತು. ನಿಯೋಗದಲ್ಲಿ ಚೇನಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಸಮಿತಿ ಅಧ್ಯಕ್ಷರಾದ ಕರುಂಬಯ್ಯ ಸಿ.ಪಿ. ಕಾಯಾ೯ಧ್ಯಕ್ಷ ದೀನಾ ಚೇನಂಡ , ವಿವೇಕ್ ಪೂಣಚ್ಚ, ಬ್ರಿಗೇಡಿಯರ್ ಸಿ.ಎನ್. ಚೀಯಣ್ಣ, ದ್ರೋಣಾಚಾಯ೯ ಪ್ರಶಸ್ತಿ ವಿಜೇತರಾದ ವಿಶುಕುಟ್ಟಪ್ಪ ಹಾಜರಿದ್ದರು.
ಲೇಖಕ: admin
ಮಡಿಕೇರಿ NEWS DESK ಫೆ.9 : ಮಡಿಕೇರಿಯ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.15 ರಂದು ವಿವಿಧ ಧಾರ್ಮಿಕ ಕೈಂಕರ್ಯಗಳು ಮತ್ತು ಭಕ್ತರ ಮೆರವಣಿಗೆ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಶಿವರಾತ್ರಿಯಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿರುವ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ. ದೇವಾಲಯದಲ್ಲಿ ಸ್ಥಾಪಿಸಲಾಗಿರುವ 52 ಅಡಿ ಎತ್ತರದ ಶಿವನ ವಿಗ್ರಹವನ್ನು 2016ರ ಮಾರ್ಚ್ 4 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಭೂಷಣ, ಕರ್ನಾಟಕ ರತ್ನ ಡಾ.ಶ್ರೀವೀರೇಂದ್ರ ಹೆಗ್ಗಡೆ ಅವರು ಲೋಕಾರ್ಪಣೆಗೊಳಿಸಿದರು. ಗರ್ಭಗುಡಿಯಲ್ಲಿ ಕಾಶಿಲಿಂಗ ಪ್ರತಿಷ್ಠಾಪನೆಯಾಗಿದ್ದು, ವಿಗ್ರಹದ ಸುತ್ತ ಪಂಚಲಿಂಗಗಳು ಮತ್ತು 109 ಲಿಂಗಗಳನ್ನು ಸ್ಥಾಪಿಸಲಾಗಿದೆ. ಈ ಲಿಂಗಗಳಿಗೆ ವಿಶೇಷ ಅಭಿಷೇಕ, ಅಲಂಕಾರ ಮತ್ತು ಪೂಜೆ ನೆರವೇರಲಿದೆ. ಭಕ್ತರಿಗೆ ಪಂಚಲಿಂಗಕ್ಕೆ ಪವಿತ್ರ ಗಂಗಾಜಲ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ ನೆರವೇರಲಿದ್ದು,…
ಮಡಿಕೇರಿ NEWS DESK ಫೆ.9 : ಚೇನಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಪೈನಲ್ ಗೆ ಮೇ 2 ರಂದು ಗೆ ನಾಪೋಕ್ಲುವಿಗೆ ಬರಲು ಕೇಂದ್ರ ಕ್ರೀಡಾ ಸಚಿವರಾದ ಡಾ. ಮಾನ್ಸೂಕ್ ಲಕ್ಷ್ಮಣಭಾಯ್ ಮಾಂಡವೀಯ ಸಮ್ಮತಿ ಸೂಚಿಸಿದ್ದಾರೆ. ಚೇನಂಡ ಕೊಡವ ಹಾಕಿ ಪಂದ್ಯಾವಳಿ ಸಮಿತಿಯ ಪ್ರಮುಖರ ನಿಯೋಗ ಇಂದು ನವದೆಹಲಿಯಲ್ಲಿ ಸಂಸದ ಯದುವೀರ್ ಒಡೆಯರ್ ಅವರ ನೇತೖತ್ವದಲ್ಲಿ ಕೇಂದ್ರ ಕ್ರೀಡಾ ಸಚಿವ ಮಾನ್ಸೂಕ್ ಮಾಂಡವೀಯ ಅವರನ್ನು ಭೇಟಿಯಾಗಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಬರುವಂತೆ ಆಹ್ವಾನ ನೀಡಿದ ಸಂದಭ೯, ಇದಕ್ಕೆ ಸಚಿವರು ಸಮ್ಮತಿ ಸೂಚಿಸಿದ್ದಾರೆ. ಕೊಡವ ಕುಟುಂಬಗಳ ನಡುವಿನ 26 ನೇ ವಷ೯ದ ಹಾಕಿ ಪಂದ್ಯಾವಳಿಗೆ ಖಂಡಿತಾ ಬರುವುದಾಗಿ ಹೇಳಿದ ಸಚಿವರು, ಕುಟುಂಬಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಒಗ್ಗಟ್ಟು, ಬೆಸುಗೆಯಾಗಿ ರೂಪಿಸಿರುವುದು ಮಾದರಿಯಾಗಿದೆ ಎಂದು ಹೆಮೆ ವ್ಯಕ್ತಪಡಿಸಿದರು. ಇದೇ ಸಂದಭ೯ ಚೇನಂಡ ಹಾಕಿ ಪಂದ್ಯಾವಳಿಯ ಬ್ರೋಷರ್ ನ್ನೂ ಸಚಿವರಿಗೆ ನೀಡಲಾಯಿತು. ಕೊಡವ ಕೌಟುಂಬಿಕ ಹಾಕಿ ಕ್ರೀಡೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ…
ಮಡಿಕೇರಿ NEWS DESK ಫೆ.9 : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಫೆ.11 ಮತ್ತು 12ರಂದು ನಾಗದೇವರ ಪುನಃಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಫೆ.11 ರಂದು ಸಂಜೆ 7 ಗಂಟೆಗೆ ಗುರುಗಣಪತಿ ಪೂಜೆ, ಪುಣ್ಯಾಹ ಸಂಕಲ್ಪ ‘ಆಶ್ಲೇಷಬಲಿ’ ಮಹಾಪೂಜೆ ನಡೆಯಲಿದೆ ಮತ್ತು ತೀರ್ಥಪ್ರಸಾದ ವಿತರಣೆಯಾಗಲಿದೆ. ಫೆ.12 ರಂದು ಬೆಳಗ್ಗೆ 9 ಗಂಟೆಯಿಂದ ಗುರುಗಣಪತಿ ಪೂಜೆ, ಗಣಪತಿ ಹೋಮ, ನವಕ ಪ್ರಧಾನ ಕಲಶ, ನವಕ ಪ್ರಧಾನ ಹೋಮ, ಕಲಶಾಭಿಷೇಕ, ಪವಮಾನ ಪಾರಾಯಣ, ಅಲಂಕಾರ ಪೂಜೆ, ಮಹಾಪೂಜೆ ಮತ್ತು ತೀರ್ಥಪ್ರಸಾದ ವಿತರಣೆ ನಡೆಯಲಿದೆ. ನಾಗದೇವರ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ಟ್ರಸ್ಟ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಮಡಿಕೇರಿ NEWS DESK ಫೆ.8 : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಕೋಡ್ಗಳನ್ನು ಹಿಂದಕ್ಕೆ ಪಡೆಯಬೇಕು, ವಿಬಿ ರಾಮ್ ಜಿ ಯೋಜನೆಯನ್ನು ರದ್ದುಗೊಳಿಸಿ, ಹಿಂದಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಆರಂಭಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು, ಸ್ವತಂತ್ರ ಒಕ್ಕೂಟಗಳಿಂದ ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಫೆ.12 ರಂದು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಕೇಂದ್ರ ಕಾರ್ಮಿಕ ಸಂಘಟನೆಗಳಿಂದ ನೀಡಲಾಗಿರುವ ಕರೆಯ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ ಎಂದರು. ಕಾರ್ಮಿಕ ಸಂಘಟನೆಗಳ ಹೋರಾಟದ ಹಿನ್ನೆಲೆಯಲ್ಲಿ ಫೆ.12ರಂದು ಬಂದ್ ಎನ್ನುವ ತಪ್ಪು ಮಾಹಿತಿಯನ್ನು ಸಾರ್ವಜನಿಕವಾಗಿ ನೀಡಲಾಗುತ್ತಿದೆ. ಆದರೆ, ಅಂದು ಕಾರ್ಮಿಕರು ದಿನದ ಕೆಲಸದಿಂದ ಹೊರಗುಳಿದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಹೋರಾಟದ ಹಿನ್ನೆಲೆಯಲ್ಲಿ ಬಂದ್ ಇರುವುದಿಲ್ಲವೆಂದು…
ಮಡಿಕೇರಿ NEWS DESK ಫೆ.8 : ಪ್ರಸಿದ್ಧ ಪ್ರವಾಸಿತಾಣ ಮಾಂದಲ್ ಪಟ್ಟಿಗೆ ತೆರಳುವ ಎಲ್ಲ ಬಾಡಿಗೆ ಜೀಪುಗಳಿಗೆ 2500ರೂ. ದರ ನಿಗದಿ ಮಾಡಲಾಗಿದೆ. ಪ್ರವಾಸಿಗರನ್ನು ಬಾಡಿಗೆ ಕರೆದೊಯ್ಯಲು ಬಿಳಿ ಬೋರ್ಡ್ ಜೀಪುಗಳಿಗೆ ಅವಕಾಶವಿಲ್ಲ ಎಂದು ಮಡಿಕೇರಿ ಜೀಪ್ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಉಣ್ಣಿಕೃಷ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಯಾವುದೇ ಪ್ರವಾಸಿಗರು ನೀಡಬಾರದು ಎಂದು ಮನವಿ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಜೀಪು ಚಾಲಕನೋರ್ವ ಪ್ರವಾಸಿಗರಿಂದ ದುಬಾರಿ ಹಣ ಪಡೆದಿರುವ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ವಿಚಾರದ ಕುರಿತು ಮಡಿಕೇರಿ ಮತ್ತು ನಂದಿಮೊಟ್ಟೆಯ ಜೀಪ್ ಮಾಲೀಕರ ಮತ್ತು ಚಾಲಕರ ಸಂಘಂದ ಸದಸ್ಯರ ಸಭೆ ನಡೆಸಿ ಏಕರೂಪದ ದರ ನಿಗದಿ ಮಾಡಲು ಒಮ್ಮತದ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು. ಮಾಂದಲ್ ಪಟ್ಟಿಗೆ ಬಾಡಿಗೆಗೆ ತೆರಳುವ 200ಕ್ಕೂ ಅಧಿಕ ಜೀಪುಗಳಿವೆ. ವೇಗದ ಸಂಚಾರ ಮತ್ತು ಬಾಡಿಗೆ ಪೈಪೋಟಿ ನಿಯಂತ್ರಿಸಲು ಜೀಪು ನಿಲ್ದಾಣದಲ್ಲಿ ಸರತಿ…
ಮಡಿಕೇರಿ NEWS DESK ಫೆ.8 : ಕೊಡಗು ಮೂಲದ ಉದ್ಯಮಿಯೊಬ್ಬರು ಕಾರಿನಲ್ಲಿ ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದ ನಿವಾಸಿ ಸಜೀರ್ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಕಾರಿನಲ್ಲಿದ್ದ ಸಜೀರ್ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಜೀರ್ ಅವರು ವ್ಯಕ್ತಿಯೊಬ್ಬರಿಗೆ 20 ಲಕ್ಷ ರೂ. ಸಾಲ ನೀಡಿದ್ದರು. ಆದರೆ ಹಣವನ್ನು ವಾಪಾಸ್ ನೀಡದ ಕಾರಣ ಮನನೊಂದ ಸಜೀರ್ ಆತನ ಮನೆ ಎದುರೇ ಕಾರಿನಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸಜೀರ್ ಮೃತಪಟ್ಟರೆ, ಉಳಿದ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕುಟ್ಟ ಗ್ರಾಮದಲ್ಲಿ ಸಜೀರ್ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಆತ್ಮಹತ್ಯೆಗೂ ಮೊದಲು ವಿಡಿಯೋ ಮಾಡಿದ್ದ ಅವರು ನಮ್ಮ ಸಾವಿಗೆ ಸಾಲ ಪಡೆದ ವ್ಯಕ್ತಿಯೇ ಕಾರಣವೆಂದು ಆರೋಪಿಸಿದ್ದಾರೆ.
ಮಡಿಕೇರಿ NEWS DESK ಫೆ.8 : ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೂರು ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಹಿಂದೂ ಸಮಾಜದಲ್ಲಿ ಧರ್ಮ ಮತ್ತು ಸಂಸ್ಕೃತಿಯ ಜಾಗೃತಿ ಮೂಡಿಸುವ “ವಿರಾಟ ಹಿಂದೂ ಸಂಗಮ”ವು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಹಿಂದೂ ಬಾಂಧವರ ಭವ್ಯ ಮೆರವಣಿಗೆಯೊಂದಿಗೆ ನಡೆಯಿತು. ನಗರದ ನಾಲ್ಕು ವಿಭಾಗಗಳಿಂದ ಸ್ತಬ್ಧ ಚಿತ್ರ, ಭಾರತಾಂಬೆಯ ಪಟ ಚಿತ್ರ, ಚಂಡೆಮೇಳ, ಭಜನಾ ತಂಡಗಳೊಂದಿಗೆ ಮಧ್ಯಾಹ್ನ ಮೆರವಣಿಗೆಯ ಮೂಲಕ ಸಾಗಿಬಂದ ಹಿಂದೂ ಬಾಂಧವರು ಇಲ್ಲಿನ ಚೌಕಿಯಲ್ಲಿ ಸಮಾವೇಶಗೊಂಡು, ಶಿಸ್ತುಬದ್ಧವಾಗಿ ಗಾಂಧಿ ಮೈದಾನದತ್ತ ಸಾಗುವುದರೊಂದಿಗೆ ನಗರದ ರಾಜಬೀದಿ ಸಂಪೂರ್ಣ ಕೇಸರಿಮಯವಾಗಿ ಮಾರ್ಪಟ್ಟಿತು. ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಸಂರಕ್ಷಣೆೆ ಮತ್ತು ಪುನರುತ್ಥಾನದ ಉದಾತ್ತ ಚಿಂತನೆಗಳೊಂದಿಗೆ ಹಿಂದೂ ಸಮಾಜವನ್ನು ಪ್ರೇರೇಪಿಸುವ ಉದ್ದೇಶಗಳನ್ನು ಹೊಂದಿದ್ದ ಕಾರ್ಯಕ್ರಮದ ಭಾಗವಾಗಿ, ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ನಗರದ ಕನ್ನಂಡಬಾಣೆ, ಪುಟಾಣಿ ನಗರವನ್ನು ಒಳಗೊಂಡ ಛತ್ರಪತಿ ವಿಭಾಗದ ಹಿಂದೂ ಬಾಂಧವರು ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿಯ ಮೇಲಿನ ಗೌಡ ಸಮಾಜದಲ್ಲಿ…
ಮಡಿಕೇರಿ NEWS DESK ಫೆ.8 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಕಾರು ಅಗ್ನಿಗಾಹುತಿಯಾದ ಘಟನೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಶಾಲನಗರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಕಾರು ಸಂಪೂರ್ಣ ಹಾನಿಗೀಡಾಗಿದ್ದು, ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.
ಮಡಿಕೇರಿ NEWS DESK ಫೆ.8 : ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಮತ್ತು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಶಾದಿ ಮಹಲ್ ಸಮುದಾಯ ಭವನದಲ್ಲಿ ನಡೆದ ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಗ್ರಾ.ಪಂ ಚುನಾವಣೆ ಸಮೀಪಿಸುತ್ತಿದ್ದು, ಸರ್ವರು ಒಗ್ಗೂಡಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕೆಂದು ತಿಳಿಸಿದರು. ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್ ಮಾತನಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಕೇಂದ್ರ ಸರಕಾರ ತೆಗೆದುಕೊಂಡಿರುವ ಧೋರಣೆಯನ್ನು ಖಂಡಿಸಿದರು. ವಲಯ, ಬ್ಲಾಕ್ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರದ ನಿಲುವನ್ನು ವಿರೋಧಿಸಲಾಗುವುದು, ಅಲ್ಲದೆ ಕಾರ್ಯಾಗಾರ ನಡೆಸಲಾಗುವುದು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕೆ.ಎಂ ಅವರು ಪಕ್ಷ ಸಂಘಟನೆಗೆ ಎಲ್ಲರೂ…






