ಮಡಿಕೇರಿ NEWS DESK ಅ.5 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮತ್ತು ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಜನಗಣತಿಯ ಸಂದರ್ಭ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೊಡಗು ಗೌಡ ಸಮಾಜದ ಹುಣಸೂರು ಅಧ್ಯಕ್ಷ ಕಾಳೇರಮ್ಮನ ಪೂಣಚ್ಚ(ಸೋನಾ) ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದ್ದು, ಎರಡೂ ಪ್ರಕ್ರಿಯೆಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು…
ಲೇಖಕ: admin
ಮಡಿಕೇರಿ NEWS DESK ಅ.5 : ಲಕ್ಡಿಕೋಟೆಯಲ್ಲಿ 18ನೇ ಶತಮಾನದಲ್ಲಿ 3ನೇ ಮತ್ತು 4ನೇ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಹೋರಾಡಿ ಹುತಾತ್ಮರಾದ ಧೈರ್ಯಶಾಲಿ ಕೊಡವ ಯೋಧರಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗೌರವ ನಮನ ಸಲ್ಲಿಸಿತು. ಕೊಡವ ಯೋಧರಿಗೆ ಗೌರವ ಅರ್ಪಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಆಂಗ್ಲೋ-ಮೈಸೂರು ಯುದ್ಧಗಳು ಭಾರತೀಯ ಇತಿಹಾಸದಲ್ಲಿ ಮಹತ್ವದ ಘಟನೆಗಳಾಗಿದ್ದು, ಕೊಡವ ಯೋಧರ ಕೊಡುಗೆಯನ್ನು ಗುರುತಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಪ್ರಾರ್ಥನೆ ಮತ್ತು ನಮನ ಸಲ್ಲಿಸುವ ಕಾರ್ಯವು ಕೊಡವ ಯೋಧರ ಶೌರ್ಯ, ತ್ಯಾಗ ಹಾಗೂ ಪರಂಪರೆಯನ್ನು ಗೌರವಿಸುವ ಒಂದು ಸಂಪ್ರದಾಯವಾಗಿದೆ. ಸಮುದಾಯದ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕ ಸಾಧಿಸಲು ಇದು ಅರ್ಥಪೂರ್ಣ ಮಾರ್ಗವಾಗಿದೆ. ಶೌರ್ಯ ಮತ್ತು ಸಮರ ಕೌಶಲ್ಯಗಳಿಗೆ ಹೆಸರುವಾಸಿಯಾದ ಕೊಡವ ಯೋಧರು, ಮೈಸೂರು ಸುಲ್ತಾನರ ವಿರುದ್ಧ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯೊಂದಿಗೆ ಮಿಲಿಟರಿ ಮೈತ್ರಿಯನ್ನು ರಚಿಸಿಕೊಂಡರು. ಆಂಗ್ಲೋ-ಮೈಸೂರು ಯುದ್ಧಗಳ ಸಂದರ್ಭದಲ್ಲಿ ಈ ಮೈತ್ರಿ ಮಹತ್ವದ್ದಾಗಿತ್ತು ಎಂದು ತಿಳಿಸಿದರು. ಜನರಲ್ ಸರ್ ಆರ್ಥರ್ ವೆಲ್ಲೆಸ್ಲಿ ನೇತೃತ್ವದಲ್ಲಿ…
ಮಡಿಕೇರಿ NEWS DESK ಅ.4 : ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಜಾಥಾ ಕಾಯ೯ಕ್ರಮದಲ್ಲಿ ಒತ್ತೋರ್ಮೆರ ಕೊಡವ ಕೂಟದ ಸದಸ್ಯರು ಕೊಡಗಿನ ಸಾಂಪ್ರದಾಯವನ್ನು ಪ್ರದರ್ಶಿಸುವ ಮೂಲಕ ಜನ ಮೆಚ್ಚುಗೆಗೆ ಪಾತ್ರರಾದರು. ಅರಮನೆ ಮೈದಾನದಿಂದ ಬನ್ನಿ ಮಂಟಪದವರೆಗೆ ನಡೆದ ಈ ಮೆರವಣಿಗೆಯಲ್ಲಿ ಕೊಡವರ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ತಳಿಯತಕ್ಕಿ ದೀಪ ಹಿಡಿದು, ದುಡಿ ಕೊಟ್ಟ್ ಪಾಟ್,ನ ಜೊತೆಗೆ ಕೊಡವ ಸಂಸ್ಕೃತಿಯ ಅಂಗವಾದ ಒಡಿಕತ್ತಿ, ಬಿಲ್ಲು ಬಾಣ, ಬಜಿ೯ ಹಿಡಿದು ವಾಲಕತಾಟ್ ಗೆ ನೃತ್ಯ ಮಾಡುವ ಮೂಲಕ ಜಾಥಾ ನಡೆಸಲಾಯಿತು. ಕೊಡಗಿನ ವಾಲಗ ತಂಡದ ಪಾಯೋಜಕತ್ವವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗು ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಅವರು ನೀಡಿದರು. ಕಾಯ೯ಕ್ರಮದಲ್ಲಿ ಒತ್ತೋರ್ಮೆರ ಕೊಡವ ಕೂಟದ ಸ್ಥಾಪಕ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯಕ್ರಮ ಸಂಚಾಲಕ ಕಾಳಮಂಡ ರಾಬಿನ್ ಅಚ್ಚಮ್ಮ, ಮಾಚಂಗಡ ಸಚಿನ್ ತಿಮ್ಮಯ್ಯ ಹಾಗೂ ಕಾಯಪಂಡ ಇಶಾನ್ ಪೂಣಚ್ಚ , ಪೊನ್ನೋಲತಂಡ ಶರಣು ತಮ್ಮಯ್ಯ , ಕೇಳಪ್ಪಂಡ ಲಿಂಕಿತ್…
ಕುಶಾಲನಗರ NEWS DESK ಅ.4 : ಅತ್ಯಂತ ಹೆಮ್ಮೆಯ ಹಾಗೂ ಸಾಧನೆಯ ಕ್ಷಣದಲ್ಲಿ, ಸೈನಿಕ ಶಾಲೆ ಕೊಡಗಿನಲ್ಲಿ 23 ವಿದ್ಯಾರ್ಥಿಗಳು ಯು ಪಿ ಎಸ್ ಸಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್ ಡಿ ಎ )ಲಿಖಿತ ಪರೀಕ್ಷೆ 2025ರಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗುವ ಮೂಲಕ ಇತಿಹಾಸ ನಿರ್ಮಿಸಿದೆ. ಈ ಸ್ಮರಣೀಯ ಸಾಧನೆ ಸಂಸ್ಥೆಯ ಶಿಸ್ತು, ನಾಯಕತ್ವ ಹಾಗೂ ಶ್ರೇಷ್ಠತೆಗೆ ನೀಡಿದ ಬದ್ಧತೆಯ ಕುರಿತು ಸ್ಫೂರ್ತಿಯ ಸಾಕ್ಷಿಯಾಗಿದೆ. ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರ ದೃಷ್ಟಿಪೂರ್ವಕ ಮಾರ್ಗದರ್ಶನದಲ್ಲಿ, ಶಾಲೆಯು ಸದಾ ಯುವ ಮನಸ್ಸುಗಳನ್ನು ಭವಿಷ್ಯದ ಸೈನಿಕ ನಾಯಕರಾಗಿ ರೂಪಿಸಲು ಶ್ರಮಿಸುತ್ತಿದೆ. ಈ ವರ್ಷದ ಅದ್ಭುತ ಫಲಿತಾಂಶವು ವಿದ್ಯಾರ್ಥಿಗಳ ಶ್ರಮ, ಶಿಕ್ಷಕರ ಅವಿರತ ಪ್ರಯತ್ನಗಳು ಮತ್ತು ಶೈಕ್ಷಣಿಕ ಶಿಸ್ತನ್ನು ಸೈನಿಕ ಮೌಲ್ಯಗಳೊಂದಿಗೆ ಸಂಯೋಜಿಸಲ್ಪಟ್ಟ ತರಬೇತಿ ವ್ಯವಸ್ಥೆಯ ಫಲವಾಗಿದೆ. ಯೋಜಿತ ಕಾರ್ಯತಂತ್ರವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಉಪ ಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಷಾಜಿ , ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ ಪ್ರಕಾಶ್ ರಾವ್, ಹಿರಿಯ ಶಿಕ್ಷಕರಾದ…
ಮಡಿಕೇರಿ NEWS DESK ಅ.4 : ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ (Coorg Women Coffee Awareness Body – CWCAB) ವತಿಯಿಂದ ಅಂತರರಾಷ್ಟ್ರೀಯ ಕಾಫಿ ದಿನವನ್ನು (ಅಕ್ಟೋಬರ್ 1) ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KOIMS)ಯ ಬೋಧಕ ಆಸ್ಪತ್ರೆಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ, ಕಾಫಿ ಉತ್ಪಾದನೆಯನ್ನು ಹೆಚ್ಚಿಸುವ ಗುರಿ ಹಾಗೂ ಆರೋಗ್ಯದ ದೃಷ್ಟಿಯಿಂದ ಕಾಫಿ ಸೇವನೆಯ ಮಹತ್ವದ ಬಗ್ಗೆ ಗಣ್ಯರು ಮಾತನಾಡಿದರು. *2047ಕ್ಕೆ 7 ಲಕ್ಷ ಟನ್ ಉತ್ಪಾದನೆಗೆ ಸಂಕಲ್ಪ* ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ (CPA)ನ ಮಾಜಿ ಅಧ್ಯಕ್ಷ ಎನ್.ಎ. ಅಪ್ಪಯ್ಯ ಅವರು, ಭಾರತೀಯ ಕಾಫಿಯನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಪಡಿಸುವಲ್ಲಿ ಕಾಫಿ ಡೇ ಸಂಸ್ಥಾಪಕ ದಿ. ಸಿದ್ಧಾರ್ಥ್ ಅವರ ಕೊಡುಗೆಯನ್ನು ಸ್ಮರಿಸಿದರು. ಭಾರತಕ್ಕೆ ಕಾಫಿ ಪರಿಚಯವಾಗಿ 400 ವರ್ಷಗಳು ಸಂದಿವೆ ಎಂಬ ಅಂಶವನ್ನು ಉಲ್ಲೇಖಿಸಿದರು. ಅವರು ಮಾತನಾಡಿ,ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ದಿನೇಶ್ ದೇವವೃಂದರವರು “2047ರ ವೇಳೆಗೆ ಭಾರತವು 7 ಲಕ್ಷ …
ಮಡಿಕೇರಿ NEWS DESK ಅ.4 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳಿಗೆ ಬಹುಮಾನ ವಿತರಿಸುವ ಸಂದರ್ಭ ಉಂಟಾದ ಕಹಿ ಘಟನೆಗೆ ವಿಷಾದ ವ್ಯಕ್ತಪಡಿಸುವುದಲ್ಲದೆ ಸರ್ವರಲ್ಲಿ ಕ್ಷಮೆಯಾಚಿಸುವುದಾಗಿ ಮಡಿಕೇರಿ ದಸರಾ ದಶಮಂಟಪ ಸಮಿತಿ ತಿಳಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ದಶಮಂಟಪ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ಸಾರ್ವಜನಿಕರು, ಜನಪ್ರತಿನಿಧಿಗಳು, ದೇವಾಲಯ ಸಮಿತಿಗಳು ಹಾಗೂ ಸರ್ವ ಅಧಿಕಾರಿ ವರ್ಗದ ಸಹಕಾರದಿಂದ ಈ ಬಾರಿಯ ಮಡಿಕೇರಿ ದಸರಾ ಜನೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಆದರೆ ಕೊನೆಯ ದಿನ ವಿಜಯದಶಮಿಯಂದು ಬಹುಮಾನ ಘೋಷಿಸುವ ಸಂದರ್ಭ ಉಂಟಾದ ಘಟನೆ ಕುರಿತು ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳಿಗೆ ಬೇಸರವಿದ್ದು, ದಶಮಂಟಪ ಸಮಿತಿಯ ಪರವಾಗಿ ಸರ್ವರಲ್ಲಿ ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ನಗರ ದಸರಾ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕ್ಷಮೆಯಾಚಿಸುತ್ತೇವೆ. ಪೊಲೀಸ್ ಇಲಾಖೆ ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿದ್ದು, ಎಲ್ಲರ ಸುರಕ್ಷತೆಗೆ ಆದ್ಯತೆ ನೀಡಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ…
ಮಡಿಕೇರಿ NEWS DESK ಅ.3 : ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯೊಂದಿಗೆ ಮಡಿಕೇರಿ ದಸರಾ ಜನೋತ್ಸವಕ್ಕೆ ವೈಭವದ ತೆರೆ ಬಿದ್ದಿದೆ. ರಾಜ್ಯ ಮತ್ತು ಹೊರ ರಾಜ್ಯಗಳ ಸಾವಿರಾರು ಮಂದಿ ವಿದ್ಯುತ್ ಅಲಂಕೃತ ಬೃಹತ್ ಮಂಟಪಗಳ ಶೋಭಾಯಾತ್ರೆಗೆ ಸಾಕ್ಷಿಯಾದರು. ಆದರೆ ಡಿಜೆ ಶಬ್ಧಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಿದ್ದ ಕಾರಣ ನೆರೆದಿದ್ದ ಯುವ ಸಮೂಹ ನಿರಾಶೆ ವ್ಯಕ್ತಪಡಿಸಿತು. ಕಳೆದ 150 ವರ್ಷಗಳಿಂದ ನಾಡಹಬ್ಬ ಮಡಿಕೇರಿ ದಸರಾಕ್ಕೆ ಧಾರ್ಮಿಕ ಹಾಗೂ ಸಾಂಪ್ರದಾಯಿಕವಾಗಿ ಮೆರಗನ್ನು ನೀಡುತ್ತಿರುವ ಪೇಟೆ ಶ್ರೀರಾಮ ಮಂದಿರದ ಶ್ರೀ ಕೃಷ್ಣನಿಂದ ಗೀತೋಪದೇಶವಾಗುವ ಕಥಾ ಸಾರಾಂಶದ ಮಂಟಪ ನಗರ ಸಂಚಾರವನ್ನು ಆರಂಭಿಸಿದ ನಂತರ ಉಳಿದ ಮಂಟಪಗಳ ಶೋಭಾಯಾತ್ರೆಗೆ ಚಾಲನೆ ದೊರೆಯಿತು. ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾಗಿರುವ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ದಸರಾ ಮಂಟಪ ಸಮಿತಿ 50ನೇ ವರ್ಷದ ಉತ್ಸವ ಆಚರಣೆಯ ಹಿನ್ನೆಲೆ ವಿಷ್ಣು ಪುರಾಣದಿಂದ ಆಯ್ದ ದೇವ-ದೇವತೆಗಳ ಕಾಳಗ, ಶರಬಾವತಾರ ಹಾಗೂ ಪ್ರತ್ಯುಂಗ ದೇವಿಯಿಂದ ನರಸಿಂಹನ ಉಗ್ರ ಶಮನದ ಕಥಾ ಸಾರಾಂಶವನ್ನು ಮಂಟಪದಲ್ಲಿ…
ಮಡಿಕೇರಿ NEWS DESK ಅ.3 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮಿಯಾಲ-ಅರಮೇರಿ ರಸ್ತೆ ರೂ.40 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಹೊಂದಿದೆ. ದಶಕಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ರಸ್ತೆಯಿಂದ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿತ್ತು. ಈ ಹಿಂದೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಈ ಭಾಗಕ್ಕೆ ಭೇಟಿ ನೀಡಿದ ಸಂದರ್ಭ, ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಈ ರಸ್ತೆಯ ಅಭಿವೃದ್ಧಿ ಬಗ್ಗೆ ಮನವಿ ಸಲ್ಲಿಸಿದ್ದರು. ರಸ್ತೆಯ ಅಭಿವೃದ್ಧಿಯ ಅವಶ್ಯಕತೆಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ತಮ್ಮ ನಿಧಿಯಿಂದ ರೂ.40 ಲಕ್ಷ ಅನುದಾನ ಒದಗಿಸಿದ್ದರು. ಇದೀಗ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗಾಗಿ ಶಾಸಕರ ಆಗಮನವನ್ನು ಎದುರು ನೋಡುತ್ತಿದ್ದಾರೆ. ಈ ರಸ್ತೆ ನಿರ್ಮಿಸಲು ಹಾಗೂ ಅನುದಾನ ಒದಗಿಸಲು ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರಾ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷ ಕಾಳಮಾಂಡ ಬೇಬಿ, ಪ್ರಮುಖರಾದ ಕುಂಡಚ್ಚಿರ ಮಂಜು ದೇವಯ್ಯ, ಪಂಚಾಯಿತಿ…
ಮಡಿಕೇರಿ NEWS DESK ಅ.3 ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಗಲಾಟೆ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ವೇದಿಕೆಯನ್ನೇರಿದ ಡಿವೈಎಸ್ಪಿಯೊಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ವೈಭವದ ಮಡಿಕೇರಿ ದಸರಾ ಜನೋತ್ಸವದ ಅಂತಿಮ ಹಂತದಲ್ಲಿ ಕಹಿ ಘಟನೆಯೊಂದು ನಡೆದಿದೆ. ರಾತ್ರಿಪೂರ್ತಿ ನಗರದ ಮುಖ್ಯ ರಸ್ತೆಗಳಲ್ಲಿ ಆಕರ್ಷಕ ಶೋಭಾಯಾತ್ರೆ ನಡೆಸಿದ ಮಂಟಪಗಳಿಗೆ ಬಹುಮಾನ ಘೋಷಿಸುವ ಸಂದರ್ಭ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯನ್ನೇರಿದ ಕರವಲೆ ಶ್ರೀ ಭಗವತಿ ದೇವಾಲಯ ಮಂಟಪದ ಸದಸ್ಯರು ತೀರ್ಪು ಸರಿಯಿಲ್ಲವೆಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ‘ಮೋಸ, ಮೋಸ’ ಎಂದು ಘೋಷಣೆಗಳನ್ನು ಕೂಗುತ್ತಾ ವೇದಿಕೆ ಮೇಲೆ ಹೋದ ದೊಡ್ಡ ಸಂಖ್ಯೆಯ ಯುವಕರು ಅಲ್ಲಿದ್ದ ವಸ್ತುಗಳನ್ನು ಎಸೆಯಲು ಆರಂಭಿಸಿದರು. ಈ ಸಂದರ್ಭ ಎಚ್ಚೆತ್ತುಕೊಂಡ ಪೊಲೀಸರು ವೇದಿಕೆಗೆ ಬಂದು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಗಲಾಟೆ ಮಾಡುತ್ತಿದ್ದ ಯುವಕರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ…
ಮಡಿಕೇರಿ NEWS DESK ಅ.3 : ಮಡಿಕೇರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅನುಷ್ಠಾನ ಇಲಾಖೆಗಳು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಮುಂದಿನ ದಿನಗಳಲ್ಲಿಯೂ ಸಹ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಸರ್ಕಾರದ ಮಹಾತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲು ಶ್ರಮಿಸಬೇಕು ಹಾಗೂ ಗ್ಯಾರಂಟಿ ಯೋಜನೆಗೆ ಸಂಬAಧಿಸಿದAತೆ ಗ್ರಾಮಪಂಚಾಯತಿ ಮಟ್ಟದಲ್ಲಿ ಫಲಾನುಭವಿಗಳ ಕುಂದುಕೊರತೆ ಸಭೆಯನ್ನು ಮಾಡಬೇಕು ಎಂದು ಸಭೆಯಲ್ಲಿ ತಿಳಿಸಿದರು. ಗೃಹಲಕ್ಷ್ಮಿ ಯೋಜನೆ:-ಶಿಶುಅಭಿವೃದ್ದಿ ಅಧಿಕಾರಿ ಅವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ ಜೂನ್ ಮಾಹೆಯ ಅಂತ್ಯಕ್ಕೆ ಹಣ ಮಂಜೂರಾಗಿರುವ ಒಟ್ಟು ಫಲಾನುಭವಿಗಳ ಸಂಖ್ಯೆ 30,307, ಪಾವತಿಯಾದ ಒಟ್ಟು ಮೊತ್ತ ಜೂನ್ ಮಾಹೆಯ ಅಂತ್ಯಕ್ಕೆ 6,06,14,000 ರೂ. NPCI,e-KYC ಮಾಡಿಸಲು ಬಾಕಿ…






