ಲೇಖಕ: admin

ಮಡಿಕೇರಿ NEWS DESK ನ.25 : ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕೆಂದು ಮದ್ಯಪಾನ ವಿರೋಧಿ ಸಂಘಟನೆಗಳು ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ, ಮದ್ಯಪಾನ ವಿರೋಧಿ ಪ್ರತಿಭಟನಾಕಾರರ ನಿಯೋಗದ ಜೊತೆ ಕೂಲಂಕುಷ ಚರ್ಚೆ ನಡೆಸಿದರು. ಅಹವಾಲುಗಳನ್ನು ಆಲಿಸಿ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನಾಕಾರರ ಮನವಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

Read More

ಬೆಂಗಳೂರು NEWS DESK ನ.25 : ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು. ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ. ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ  ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌…

Read More

ಕುಶಾಲನಗರ, ನ.25 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಪರಿಷತ್ತಿನ ಕುಶಾಲನಗರ ತಾಲ್ಲೂಕು ಸಮಿತಿ ಹಾಗೂ ಪರಿಷತ್ತಿನ ಹೆಬ್ಬಾಲೆ ಹೋಬಳಿ ಘಟಕದ ವತಿಯಿಂದ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮದಲ್ಲಿ ಶ್ರೀ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಹೆಬ್ಬಾಲೆ ಬನಶಂಕರಿ ವಾರ್ಷಿಕ ಜಾತ್ರೆ ಅಂಗವಾಗಿ ಏರ್ಪಡಿಸಲಾಗಿದ್ದ ಗ್ರಾಮೀಣ ಕವಿಗೋಷ್ಠಿ ಶೋತೃಗಳ ಗಮನ ಸೆಳೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ 25 ಕ್ಕೂ ಹೆಚ್ಚು ಮಂದಿ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಿ ಪ್ರೇಕ್ಷಕರ ಗಮನ ಸೆಳೆದರು. ಕವಿಗೋಷ್ಠಿ ಕುರಿತು ಆಶಯ ಭಾಷಣ ಮಾಡಿದ ಕೊಡಗು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ಮಾತನಾಡಿ, ಸುಂದರ ಹಸಿರು ಪರಿಸರದಲ್ಲಿ ಏರ್ಪಡಿಸಿರುವ ಗ್ರಾಮದ ಜಾತ್ರೆಯ ಅಂಗವಾಗಿ ಏರ್ಪಡಿಸಿರುವ ಇಂತಹ ಕವಿಗೋಷ್ಠಿಗಳು ಸ್ಥಳೀಯ ಗ್ರಾಮೀಣ ಯುವ ಹಾಗೂ ಉದಯೋನ್ಮುಖ ಕವಿಗಳಿಗೆ ಭವಿಷ್ಯತ್ತಿನಲ್ಲಿ ಉತ್ತಮ ಕವಿಗಳಾಗಿ ರೂಪುಗೊಳ್ಳಲು ಉತ್ತಮ ಅವಕಾಶವನ್ನು ಒದಗಿಸುತ್ತವೆ ಎಂದರು. ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಕೆ…

Read More

ಮಡಿಕೇರಿ ನ.25 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ,  ಎಂ.ಎಸ್.ಎಂ.ಇ ನಿರ್ದೇಶನಾಲಯ, ಕೆ.ಸಿ.ಟಿ.ಯು. ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ  ಇವರ  ಸಂಯುಕ್ತ ಆಶ್ರಯದಲ್ಲಿ ಕೋವಿಡ್ ನಂತರ ನಷ್ಟಕ್ಕೆ ಒಳಗಾದ ಉದ್ಯಮಗಳ ಮರು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ರ್ಯಾಂಪ್ ಯೋಜನೆಯಡಿಯಲ್ಲಿ ಟ್ರೇಡ್ ರಿಸೀವೇಬಲ್ ಡಿಸ್ಕೌಂಟ್ ಸಿಸ್ಟಮ್(ಟ್ರೇಡ್ಸ್) ಯೋಜನೆ ಕುರಿತು ನಗರದ ಹೊಟೇಲ್ ರೆಡ್ ಬ್ರಿಕ್ಸ್‌ಇನ್‌ನಲ್ಲಿ ಎಂಎಸ್‍ಎಂಇ ಉದ್ದಿಮೆದಾರರಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಬೆಂಗಳೂರು ಟೆಕ್ಸಾಕ್‍ನ ಸಿಇಒ ಸಿದ್ದರಾಜು ಉದ್ಘಾಟಿಸಿ ರ್ಯಾಂಪ್ ಯೋಜನೆಯಡಿಯಲ್ಲಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಛೇಂಬರ್ ಆಫ್ ಕಾಮರ್ಸ್‍ನ ನಾಗೇಂದ್ರ ಪ್ರಸಾದ್ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಉದ್ದಿಮೆದಾರರಿಗೆ ಸಲಹೆ ನೀಡಿದರು. ನಿವೃತ್ತ ಐಆಒ ಆರ್.ಕೆ. ಬಾಲಚಂದ್ರ ಅವರು ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಉದ್ದಿಮೆದಾರರಿಗೆ  TReDS Online Flatform  ಬಗ್ಗೆ ವಿವರವಾದ ತಾಂತ್ರಿಕ ಉಪನ್ಯಾಸ ನೀಡಿದರು. ಜಿಲ್ಲಾ ಕೈಗಾರಿಕಾ…

Read More

ಮಡಿಕೇರಿ ನ.25 NEWS DESK : ಮಂಗಳೂರು ಶಾಖೆಯ ಮೈಕ್ರೋ, ಸಣ್ಣ ಮತ್ತು ಮಧ್ಯಮ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ (ಒSಒಇ ಆಈಔ), ಸಾಧಗುರು ಐಟಿಐ ಸಹಯೋಗದೊಂದಿಗೆ, ಉದ್ಯಮಶೀಲತೆ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಉದ್ಯಮ ಆರಂಭಿಸಲು ಹಾಗೂ ವಿಸ್ತರಿಸಲು ಆಸಕ್ತಿ ಹೊಂದಿರುವ ಹೊಸ ಹಾಗೂ ಇರುವ ಉದ್ಯಮಿಗಳಿಗೆ ಮಾರ್ಗದರ್ಶನ ಮತ್ತು ಸಬಲಿಕೆ ನೀಡುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ 75 ಮಂದಿ ಭಾಗವಹಿಸಿದ್ದರು. ಮಂಗಳೂರು ಶಾಖೆಯ ಎಂಎಸ್‍ಎಂಇ ಮತ್ತು ಕಾರ್ಯಕ್ರಮ ಸಂಯೋಜಕರಾದ ಸುಮನ್ ಎಸ್.ರಾಜು, ಐಇಡಿಎಸ್ ಅವರು ಚಾಲನೆ ನೀಡಿದರು. ಸುಮನ್ ಎಸ್.ರಾಜು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಣ್ಣ ಮತ್ತು ಮಧ್ಯಮ ಅಭಿವೃದ್ಧಿ ಮತ್ತು ಸೌಲಭ್ಯ ವತಿಯಿಂದ ವಿವಿಧ ಖಾತೆಗಳ ಅಡಿಯಲ್ಲಿ ಜಾರಿಗೆ ಬರುವ ಎಂಎಸ್‍ಎಂಇ ಯೋಜನೆಗಳ ಅನುಷ್ಠಾನ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ಜೊತೆಯಾಗಿಸಿ ಜಾಗೃತಿ ಕಾರ್ಯಕ್ರಮದ ಮೂಲಕ ಉದ್ಯಮಿಗಳಿಗೆ ನೆರವು ಒದಗಿಸಲಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅತಿಥಿಗಳು ತಾಂತ್ರಿಕ ಕ್ಷೇತ್ರಗಳಲ್ಲಿ ಭಾಗವಹಿಸಿದವರಿಗೆ ಅಮೂಲ್ಯ ಮಾಹಿತಿಯನ್ನು ನೀಡಿದರು. ಮಹಿಳಾ ಮತ್ತು…

Read More

ಕುಶಾಲನಗರ ನ.26 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಗ್ರಾಮ‌ಸಭೆಯು ನ.28 ರಂದು ಪಂಚಾಯಿತಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಲಿದೆ.‌ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಡಿ.ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಗ್ರಾಮ ಸಭೆಗೆ ಹಾಜರಾಗುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.

Read More

ಮಡಿಕೇರಿ ನ.25 NEWS DESK : ಪತ್ರಕರ್ತರು ಸಮಾಜಕ್ಕೆ ಹೊರೆಯಾಗಬಾರದು ದೊರೆಯಾಗಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್.ಬಿ. ಮದನ್ ಗೌಡ ಕರೆ ನೀಡಿದರು.  ನಗರದ ಕೊಡವ ಸಮಾಜ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಸಾಲಿನ ನೂತನ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಮಾಣ ವಚನ ಬೋಧಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಶತಮಾನೋತ್ಸವ ಹೊಸ್ತಿಲಿನಲ್ಲಿದೆ. 94 ವರ್ಷದ ಸುದೀರ್ಘ ಇತಿಹಾಸವಿರುವ, ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಸಂಘದ ಬೆಳವಣಿಗೆಯಲ್ಲಿ ಮಹನೀಯರು ಶ್ರಮ ಅಪಾರವಾಗಿದೆ. ರಾಜ್ಯದ 31 ಜಿಲ್ಲೆ, ಎಲ್ಲಾ ತಾಲೂಕು, ಹೋಬಳಿ ಮಟ್ಟದಲ್ಲೂ ಪತ್ರಕರ್ತರನ್ನು ಒಳಗೊಂಡ ಬಲಿಷ್ಠ ಸಂಘಟನೆಯಾಗಿ ಗುರುತಿಸಿಕೊಂಡಿದೆ. ಇದರೊಂದಿಗೆ ಕರುನಾಡಿನ ಪತ್ರಕರ್ತರ ಸಮಸ್ಯೆಗಳಿಗೆ ಮಿಡಿಯುವ ಕೆಲಸವನ್ನೂ ಸಂಘ ಮಾಡುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಸಂಘ ಸ್ಥಾಪನೆಯಾಗಿದ್ದು, ಇಂದಿರಾ ಗಾಂಧಿ ಅವರು ಕೇಂದ್ರ ಕಚೇರಿಗೆ ಬಂದಿದ್ದರು ಎಂದು ಸ್ಮರಿಸಿದರು. ಧಾವಂತ ಪತ್ರಿಕೋದ್ಯಮ, ಸೋಶಿಯಲ್ ಮೀಡಿಯಾದ ಭರಾಟೆಯಿಂದ ಸತ್ಯಾಸತ್ಯತೆ…

Read More

ಕುಶಾಲನಗರ ನ.25 NEWS DESK : ಕನ್ನಡ ನಾಡಿನ ನೆಲ – ಜಲ, ಆಚಾರ – ವಿಚಾರಗಳು,  ಇಲ್ಲಿನ ಸಂಸ್ಕಾರಗಳು ಹಾಗೂ ಮುಖ್ಯವಾಗಿ ಕನ್ನಡ  ಭಾಷೆಯನ್ನು ಈ ನೆಲದ ಪ್ರತಿಯೊಬ್ಬರು ಪೂಜ್ಯ ಬಾವದಿಂದ ಕಾಣಬೇಕು ಎಂದು  ಮಡಿಕೇರಿ ಸಾಹಿತಿ ಕೃಪಾ ದೇವರಾಜು ಕರೆ ನೀಡಿದರು. ಕುಶಾಲನಗರ ಸಮೀಪದ ಆವರ್ತಿ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ ನಾಡಿನ  ನೆಲ ಹಾಗೂ ಜಲವೇ ಶ್ರೇಷ್ಠ ಸಂಪತ್ತು. ಇಲ್ಲಿನ ಸಂಸ್ಕೃತಿ ಹಾಗೂ ಪರಂಪರೆ ಅಪೂರ್ವವಾದುದು.  ಅನ್ಯ ಭಾಷೆಗಳ ಹಾವಳಿಯ ನಡುವೆಯೂ ಗಡಿ ಜಿಲ್ಲೆಗಳಲ್ಲಿ ಕನ್ನಡ ಇಲ್ಲಿನ ಪ್ರತಿ ವಾಸಿಗಳ ಜೀವನದ ಹಾಸು ಹೊಕ್ಕಾಗಬೇಕಿದೆ. ಎಲ್ಲರೂ ಈ ನಾಡು ನುಡಿಯನ್ನು ಗೌರವಿಸಬೇಕಿದೆ ಎಂದು ಕೃಪಾ ದೇವರಾಜು ಕರೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ  ಆವರ್ತಿ ಮಹಾದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಕೂರ್ಗಲ್ಲು ಶಿವಕುಮಾರ ಸ್ವಾಮಿ, ಬೆಟ್ಟದಪುರದ  ಪತ್ರಕರ್ತ ಶಿವದೇವ್, ಆವರ್ತಿ ಸರ್ಕಾರಿ ಶಾಲೆಯ…

Read More

ಮಡಿಕೇರಿ ನ.25 NEWS DESK : ಬೆಂಗಳೂರಿನ ಶಿರಂಗಳ್ಳಿ ಗ್ರಾಮಕಾರಡ ಒಕ್ಕೂಟದ ಸಂತೋಷ ಕೂಟ ಸಂಭ್ರಮದಿಂದ ನಡೆಯಿತು. ಬೆಂಗಳೂರಿನ ವಸಂತನಗರದ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ನಿಕಟ ಪೂರ್ವ ಎನ್.ಎಸ್.ಎಸ್ ನೊಡಲ್ ಅಧಿಕಾರಿ ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕ ಮಂದೆಯಂಡ ಡಾ.ವನಿತ್ ಕುಮಾರ್ ನಾಣಯ್ಯ ಕೊಡವ ಸಂಸ್ಕೃತಿ, ಪದ್ಧತಿ, ಆಚಾರ-ವಿಚಾರ ವಿಶಿಷ್ಟವಾಗಿದ್ದು ಅದರ ಉಳಿವು ಮತ್ತು ಬೆಳವಣಿಗೆಗೆ ಯುವ ಜನರು ಪ್ರಯತ್ನ ಪಡಬೇಕು ಎಂದು  ಅಭಿಪ್ರಾಯಪಟ್ಟರು. ಯುವ ಸಮೂಹ  ಉದ್ಯೋಗ ಆರಿಸಿ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ ವಾರಾಂತ್ಯದ ಮೋಜು ಮಸ್ತಿಯ ನೆಪದಲ್ಲಿ ಮಾದಕವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರ ಬದಲು ಕೊಡವ ಸಂಸ್ಕೃತಿಯ ಆಚರಣೆಗಳನ್ನು ಕಲಿಯುವಂತೆ ಆಗಬೇಕು. ಕೊಡಗಿನ ಮಣ್ಣಿನ ಗುಣ ವಿಶಿಷ್ಟವಾಗಿದ್ದು, ಅದನ್ನು ಉಳಿಸಲು  ತಮ್ಮ ಭೂಮಿಯಲ್ಲಿ ತಾವು ದುಡಿಯುವುದಲ್ಲದೆ ಜಮ್ಮ ಭೂಮಿಯ ಸಂರಕ್ಷಣೆಗೆ ಮುಂದಾಗಬೇಕಾಗಿದೆ ಎಂದು ತಿಳಿಸಿದರು. ರಾಜರ ಕಾಲದಲ್ಲಿ ಬಂದಿರುವ ಭೂಮಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನರ ಮೇಲಿದೆ.  ಹಬ್ಬಹರಿ…

Read More

ಚೆಟ್ಟಳ್ಳಿ ನ.25 NEWS DESK :  ಚೆಟ್ಟಳ್ಳಿಯಲ್ಲಿ ವಾರ್ಷಿಕ ನಾಗರ ಪಂಚಮಿಯನ್ನು ಶ್ರದ್ದಾಭಕ್ತಿಯಿಂದ ಅಚರಿಸಲಾಯಿತು. ಅರ್ಚಕರಾದ ರಾಧಕೃಷ್ಣ ಭಟ್ ಅವರು ಪುತ್ತರಿರ ಐನ್ ಮನೆಯ ಸಮೀಪದ ಪುರಾತನ ನಾಗ ನೆಲೆಯನ್ನು ಶುದ್ದಗೊಳಿಸಿ ಹೂವು, ಹಣ್ಣು ಪಾಯಸದ ಅರ್ಪಣೆಯೊಂದಿಗೆ ಮಹಾಪೂಜೆಯನ್ನು ನೆರವೇರಿಸಿದರು. ವರ್ಷಂಪ್ರತಿ ಪಂಚಮಿಯಂದು ನಾಗನೆಲೆಯಲ್ಲಿ ಪೂಜೆ ಸಲ್ಲಿಸಲ್ಲಿಸಲಾಗುತ್ತಿದ್ದು, ಎಲ್ಲರಿಗೂ ಒಳಿತನ್ನು ಮಾಡಲೆಂದು ಹಿರಿಯರಾದ ಪುತ್ತರಿರ ಗಣೇಶ್ ಭೀಮಯ್ಯ ಬೇಡಿಕೊಂಡರು. ನಂತರ ಪ್ರಸಾದ ವಿತರಣೆ ನೆರವೇರಿತು.

Read More