ಮಡಿಕೇರಿ NEWS DESK ಅ.1 : ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದಲ್ಲಿ 150ಕ್ಕೂ ಅಧಿಕ ವರ್ಷಗಳಿಂದ ಪಾಲ್ಗೊಳ್ಳುತ್ತಾ ದಶಮಂಟಪಗಳ ಸಾರಥಿ ಎಂದೇ ಖ್ಯಾತಿಯಾಗಿರುವ ಪೇಟೆ ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿಯ ಉತ್ಸವ ಆಚರಣೆಗೆ ಸಜ್ಜಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಆರ್.ಎಸ್. ಶಿವಮೂರ್ತಿ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್ ಗಳನ್ನು ಬಳಸಲಾಗುತ್ತಿದ್ದು, ಶ್ರೀ ಕೃಷ್ಣನಿಂದ ಗೀತೋಪದೇಶ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ದಿಂಡಿಗಲ್ನ ಸೆಲ್ವಂ ಎಲೆಕ್ಟ್ರಿಕ್ಸ್ ನವರು ಲೈಟಿಂಗ್ ಬೋರ್ಡ್ ಅಳವಡಿಸಲಿದ್ದು, ಕೊಣನೂರಿನ ಪಿಂಟೋ ಸೌಂಡ್ಸ್ನವರು ಧ್ವನಿವರ್ಧಕ ಹಾಗೂ ಸ್ಟುಡಿಯೋ ಸೆಟ್ಟಿಂಗ್ಸ್ ವ್ಯವಸ್ಥೆ ಮಾಡಲಿದ್ದಾರೆ. ಪ್ಲಾಟ್ಫಾರಂ ನಿರ್ಮಾಣ, ನೆಟ್ವರ್ಕ್ ಹಾಗೂ ಟ್ರ್ಯಾಕ್ಟರ್ ಸೆಟ್ಟಿಂಗ್ಸ್ ಮಡಿಕೇರಿ ಎಸ್ಕೆವೈಸಿ ತಂಡದವರು ಮಾಡಲಿದ್ದಾರೆ. ಒಟ್ಟು 4 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಸಮಿತಿ ಸದಸ್ಯರೇ ಕಲಾಕೃತಿಗಳನ್ನು ರಚಿಸಲಿದ್ದಾರೆ. ಒಟ್ಟು ರೂ. 10 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದೆ ಎಂದು ಶಿವಮೂರ್ತಿ ಮಾಹಿತಿ ನೀಡಿದರು.
ಲೇಖಕ: admin
ಗೋಣಿಕೊಪ್ಪ NEWS DESK ಅ.1 (ಜಗದೀಶ್ ಜೋಡುಬೀಟಿ) : ಗೋಣಿಕೊಪ್ಪ ದಸರಾದ ಪ್ರಮುಖ ಅಕರ್ಷಣೆಯಾದ ಶೋಭಾಯತ್ರೆಗೆ ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಮಂಟಪ ಸಮಿತಿಗಳು ಆಕರ್ಷಕ ಕಲಾಕೃತಿಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡಿವೆ. ಪೌರಾಣಿಕ ಕಥೆಗಳನ್ನು ಆಧರಿಸಿ ಕಲಾಕೃತಿಗಳನ್ನು ನಿರ್ಮಿಸಲಾಗುತ್ತಿದೆ. ಜೆಸಿಬಿ ,ಟ್ಯಾಕ್ಟರ್, ಹಿಟಾಚಿ, ಲಾರಿ, ವ್ಯಾನ್ ಸೇರಿದಂತೆ ಇನ್ನಿತರ ವಾಹನಗಳನ್ನು ಬಳಸುವ ಮೂಲಕ ಜನಾಕರ್ಷಣೆಯ ಕಲಾಕೃತಿಗಳ ಅಳವಡಿಕೆಗೆ ತಯಾರಿ ನಡೆಯುತ್ತಿದೆ. ಪ್ರತಿ ವರ್ಷದಂತೆ ಎಂಟು ಮಂಟಪಗಳು ಪೈಪೋಟಿಗೆ ಇಳಿದು ಕಲಾಕೃತಿಯನ್ನು ನಿರ್ಮಿಸುತ್ತಿದೆ. ಶ್ರೀ ಕಾವೇರಿ ದಸರಾ ಸಮಿತಿಯ ಚಾಮುಂಡಿ ದೇವಿ ಹೊತ್ತ ಮಂಟಪವು ಮೊದಲ ಸಾಲಿನಲ್ಲಿ ಮೆರವಣಿಗೆ ಹೊರಡಲಿದೆ. ವಿಜಯದಶಮಿ ಮಧ್ಯಾಹ್ನ ಸ್ಥಬ್ಧ ಚಿತ್ರ ಮೆರವಣಿಗೆಯನ್ನು ಆಕರ್ಷಣೆಯಾವಾಗಿಸುವ ನಾಡ ಹಬ್ಬ ದಸರಾ ಸಮಿತಿಯ 36ನೇವರ್ಷದ ಅಚಾರಣೆಯಾಗಿ ಭಾರತಾಂಭೆ ಭಾವಚಿತ್ರ ಹೊತ್ತ ಮಂಟಪ ಸಾಗಲಿದೆ. ಇತರ ಏಂಟು ಮಂಟಪಗಳು ಮೆರವಣಿಗೆಯಲ್ಲಿ ಒಂದರ ಹಿಂದೆ ಒಂದರಂತೆ 47ನೇ ದಸರಾಜನೋತ್ಸವದ ಆಕರ್ಷಣೆಗೆ ಮೆರುಗು ನೀಡಲಿದೆ. 36ನೇ ವರ್ಷದಲ್ಲಿ ನಾಡಹಬ್ಬ ದಸರಾ ಸಮಿತಿ, 20ನೇ ವರ್ಷದಲ್ಲಿ ಅರುವತೊಕ್ಲು ಕಾಡ್ಲಯಪ್ಪ…
ಗೋಣಿಕೊಪ್ಪ NEWS DESK ಅ.1 (ಜಗದೀಶ್ ಜೋಡುಬೀಟಿ) : ಗೋಣಿಕೊಪ್ಪ ದಸರಾದ ಕಾವೇರಿ ಕಲಾ ವೇದಿಕೆಯಲ್ಲಿ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಗಳು ಸಂಭ್ರಮಿಸಿದವು. ಸೈಕ್ಲೋನ್ ಡ್ಯಾನ್ಸ್ ಅಕಾಡೆಮಿ, ಸುವೃತ ನಾಟ್ಯಾಲಯ, ವಿಧ್ಯಾರ್ಥಿಗಳ ನೃತ್ಯ, ಗಾಯಕರುಗಳಾದ ಅನ್ವಿತ್ಕುಮಾರ್, ಪ್ರಜ್ಞಾ ಮರಾಠೆ ಇವರ ಹಾಡು ವೈವಿಧ್ಯಮಯ ಭಾವನೆಗಳಿಂದ ಗಮನ ಸೆಳೆಯಿತು. ಎರಡು ಸಹಸ್ರಕ್ಕೂ ಹೆಚ್ಚು ಜನರ ಉಪಸ್ಥಿತಿಯಲ್ಲಿ ವೇದಿಕೆಯಲ್ಲಿ 260ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ನಡೆದ ನೃತ್ಯ, ಗಾಯನ ಕಲಾ ಸಾಮರ್ಥ್ಯ ಪ್ರದರ್ಶನ ಪ್ರೇಕ್ಷಕರನ್ನು ಮುಧಗೊಳಿಸುವಲ್ಲಿ ಸಾರ್ಥಕತೆ ಖಂಡಿತು. ಸೈಕ್ಲೋನ್ ಡ್ಯಾನ್ಸ್ ಅಕಾಡೆಮಿ ವಿಧ್ಯಾರ್ಥಿಗಳ ವಿವಿಧ ನೃತ್ಯ ಪ್ರದರ್ಶನಗಳಿಂದ ಭಾವನಾತ್ಮಕ ಮತ್ತು ಕಲಾತ್ಮಕ ಅನುಭವಗಳನ್ನು ಪ್ರೇಕ್ಷಕರಿಗೆ ನೀಡಿದರು. ಸುವೃತ ನಾಟ್ಯಾಲಯದ ಮಕ್ಕಳ ಸ್ಪಂದನಾತ್ಮಕ ನೃತ್ಯದ ದೃಶ್ಯಗಳು ಪ್ರೇಕ್ಷಕರಲ್ಲಿ ಹೊಸ ಆಲೋಚನೆಗಳನ್ನು ಮೂಡಿಸಿದವು. ಅನ್ವಿತ್ಕುಮಾರ್ ಮತ್ತು ಪ್ರಜ್ಞಾ ಮರಾಠೆ ಅವರ ಕಂಠದಲ್ಲಿ ಮೂಡಿ ಬಂದ ಗಾಯನ ಪ್ರೇಕ್ಷಕರಿಗೆ ಸಂಭ್ರವಾಗಿ ತಲುಪಿತು. ಭರತನಾಟ್ಯ, ಜನಪದ ಕುಣಿತ, ಸಿನಿಮಾ ಗೀತೆ, ಮಹಾಭಾರತ ನೃತ್ಯ ರೂಪಕ, ಮಾಣಿಪುರಿ ಸ್ಟಿಕ್ ಡ್ಯಾನ್ಸ್, ನಿಸರ್ಗ ಕಲಾ…
ಮಡಿಕೇರಿ NEWS DESK ಅ.1 : ವಿಜಯ ದಶಮಿಯ ದಿನವಾದ ಅಕ್ಟೋಬರ್ 2 ರಂದು ಮಡಿಕೇರಿಯಲ್ಲಿ ದಶಮಂಟಪಗಳ ಶೋಭಾಯಾತ್ರೆಯನ್ನು ಮತ್ತು ಗಾಂಧಿ ಮೈದಾನದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಜಿಲ್ಲೆಯ, ಹೊರ ಜಿಲ್ಲೆಯ, ರಾಜ್ಯದ, ಹೊರ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆ ಇದೆ. ಅ.3 ರಂದು ದಶ ಮಂಟಪಗಳ ಪ್ರದರ್ಶನ ಮುಗಿದ ನಂತರ ಐಜಿ ವೃತ್ತ, ಮಹದೇವಪೇಟೆಗಾಗಿ ಬನ್ನಿ ಮಂಟಪಕ್ಕೆ ತೆರಳಿ ಪೂಜೆ ಸಲ್ಲಿಸಿ ದೇವಸ್ಥಾನಗಳಿಗೆ ತೆರಳಲು ರಾತ್ರಿ 8 ಗಂಟೆ ಆಗಲಿದೆ. ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಸೇರುವುದಲ್ಲದೇ, ವಾಹನ ಸಂಚಾರವು ಹೆಚ್ಚು ಇರಲಿರುವುದರಿಂದ ಅಕ್ಟೋಬರ್ 3 ರಂದು ಮಡಿಕೇರಿ ನಗರದ ಸಂತೆ ರದ್ದುಗೊಳಿಸಲಾಗಿದೆ ಎಂದು ನಗರಸಭೆಯ ಪೌರಾಯುಕ್ತ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.
ಗೋಣಿಕೊಪ್ಪ NEWS DESK ಅ.1 : ಗೋಣಿಕೊಪ್ಪಲು ನಗರದ ಉಮಾಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ, ಪೊನ್ನಂಪೇಟೆ ರಸ್ತೆ ಜಂಕ್ಷನ್ನಿಂದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, ಪೊನ್ನಂಪೇಟೆ ರಸ್ತೆ, ಬೈಪಾಸ್ ರಸ್ತೆ ಜಂಕ್ಷನ್ನಿಂದ ಐಪಿ ಜಂಕ್ಷನ್ವರೆಗೆ, ಪಾಲಿಬೆಟ್ಟ ರಸ್ತೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ರಸ್ತೆಯವರೆಗೆ ಮುಖ್ಯ ಬೀದಿಯಲ್ಲಿ ರಸ್ತೆಯ ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ. ಮೈಸೂರಿನಿಂದ ತಿತಿಮತಿ, ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಬರುವ ವಾಹನಗಳು- ತಿತಿಮತಿ, ಪಾಲಿಬೆಟ್ಟ, ಅಮ್ಮತ್ತಿ ಮಾರ್ಗವಾಗಿ ವಿರಾಜಪೇಟೆಗೆ ಹೋಗುವುದು. ವಿರಾಜಪೇಟೆಯಿಂದ ಗೋಣಿಕೊಪ್ಪ-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಕೈಕೇರಿ ಗ್ರಾಮದ ಕಳತ್ಮಾಡ್-ಅತ್ತೂರು ಶಾಲೆ ಜಂಕ್ಷನ್- ಪಾಲಿಬೆಟ್ಟದ ಟಾಟಾ ಸ್ಟೋರ್ ಜಂಕ್ಷನ್-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವುದು. ಕೇರಳದಿಂದ ಪೆರುಂಬಾಡಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಪೆರುಂಬಾಡಿ-ವಿರಾಜಪೇಟೆ-ಅಮ್ಮತ್ತಿ-ಸಿದ್ದಾಪುರ-ಪಿರಿಯಾಪಟ್ಟಣ-ಮೈಸೂರು ಮೂಲಕ ಹೋಗುವುದು. ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ-ಕಾನೂರು-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು-ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು. ಬಾಳಲೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು-ಬಾಳಲೆ-ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು. ಕುಟ್ಟ, ಶ್ರೀಮಂಗಲ, ಕಾನೂರು ಕಡೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ…
ಮಡಿಕೇರಿ NEWS DESK ಅ.1 : ಸೋಮವಾರಪೇಟೆ ಕಡೆಯಿಂದ ಬರುವ ವಾಹನಗಳು ಸಂಪಿಗೆ ಕಟ್ಟೆ ಕಡೆಯಿಂದ ಎ.ವಿ.ಶಾಲೆ, ಮುತ್ತಪ್ಪ ದೇವಸ್ಥಾನ ಮುಂದೆ ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸುವುದು. ಎಸ್.ಪಿ ಕಚೇರಿ ಜಂಕ್ಷನ್, ಮುಂದೆ ಐಟಿಐ ಜಂಕ್ಷನ್ ಕಡೆಯಿಂದ ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದು. ಮೈಸೂರು ರಸ್ತೆ ಮತ್ತು ಸಿದ್ದಾಪುರ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಚೈನ್ಗೇಟ್ ಮುಖಾಂತರ ತೆರಳಿ ಮ್ಯಾನ್ಸ್ ಕಾಂಪೌAಡ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ವಿರಾಜಪೇಟೆ, ಮೂರ್ನಾಡು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಮೇಕೇರಿ ಶಾಲಾ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮಂಗಳೂರು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ನೇತಾಜಿ ಮೈದಾನ ಮತ್ತು ದುರ್ಗ ಭಗವತಿ ದೇವಸ್ಥಾನ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಗಾಳಿಬೀಡು ಅಬ್ಬಿಪಾಲ್ಸ್, ಕಾಲೂರು ಕಡೆಯಿಂದ ಬರುವ ವಾಹನಗಳು ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ನಿಲುಗಡೆಗೊಳಿಸುವುದು. ಭಾಗಮಂಡಲ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ಪಪ್ಪೀಸ್ ಗ್ಲಾಸ್ ಹೌಸ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮೈಸೂರು, ಸಿದ್ದಾಪುರ ಕಡೆಯಿಂದ ಬರುವ…
ಮಡಿಕೇರಿ NEWS DESK ಸೆ.30 : ಮಡಿಕೇರಿ ನಗರ ಮತ್ತು ಗೋಣಿಕೊಪ್ಪ ಪಟ್ಟಣದಲ್ಲಿ ನಡೆಯಲಿರುವ ನಾಡಹಬ್ಬ ದಸರಾ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5)ರಲ್ಲಿ ದತ್ತವಾದ ಅಧಿಕಾರದಂತೆ ಅಕ್ಟೋಬರ್ 2 ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್, 3 ರಂದು ಬೆಳಗ್ಗೆ 10 ಗಂಟೆ ವರೆಗೆ ಮಡಿಕೇರಿ ನಗರ ಮತ್ತು ಗೋಣಿಕೊಪ್ಪ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ. ದಿನಾಂಕ 02-10-2025 ರಂದು ಮಧ್ಯಾಹ್ನ 2 ಗಂಟೆಯಿಂದ ದಿನಾಂಕ 03-10-2025 ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ…
ಮಡಿಕೇರಿ NEWS DESK ಸೆ.30: ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ವೈಭವದ ದಸರಾ ಆಚರಣೆ ಹಿನ್ನೆಲೆಯಲ್ಲಿ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಹಿಂದಿನ ಸಾಲಿಗಿಂತಲೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ಮತ್ತು ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ನೀಡಿದ ಎಸ್.ಪಿ. ರಾಮರಾಜನ್ ಅವರು ಈ ಬಾರಿ ಮಡಿಕೇರಿ ದಸರಾಕ್ಕೆ ಕೆಎಸ್ಆರ್ಪಿ, ಡಿಎಆರ್ ಸಹಿತ ಒಟ್ಟು 1500 ಹಾಗೂ ಗೋಣಿಕೊಪ್ಪ ದಸರಾ ಕಾರ್ಯಕ್ರಮಕ್ಕೆ 600 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಗೆ ಬಳಸಿಕೊಳ್ಳಲಾಗುತ್ತಿದೆ. ಮಹಿಳೆಯರ ಸುರಕ್ಷತೆ, ಜನ ಸಂದಣಿ ಏರ್ಪಡುವ ಸ್ಥಳಗಳಲ್ಲಿ ಸೂಕ್ತ ನಿಯಂತ್ರಣಕ್ಕೆ ಜಂಬೋ ತಂಡಗಳನ್ನು ರಚಿಸಲಾಗಿದೆ. ಓರ್ವ ಮಹಿಳಾ ಮತ್ತು ಓರ್ವ ಎಸ್.ಐ. ದರ್ಜೆಯ ಅಧಿಕಾರಿ ಸಹಿತ 10ರಿಂದ 15 ಮಂದಿ ಸಿಬ್ಬಂದಿಗಳು ಈ ತಂಡದಲ್ಲಿರಲಿದ್ದು, ಅಹಿತಕರ ಘಟನೆಗಳ ಬಗ್ಗೆ ಹದ್ದಿನ ಕಣ್ಣಿಡಲಿದ್ದಾರೆ. ಮಡಿಕೇರಿಯಲ್ಲಿ 10 ಮತ್ತು…
ಮಡಿಕೇರಿ NEWS DESK ಸೆ.30 : ರಾಜ್ಯ ಸರಕಾರದ ವತಿಯಿಂದ ಇದೇ ಸೆ.22 ರಿಂದ ಅ.7ರ ವರೆಗೆ ನಡೆಯಲಿರುವ ಜಾತಿವಾರು ಗಣತಿಯ ಸಂದರ್ಭ ಜಾತಿ, ಭಾಷೆ ಮತ್ತು ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ಬರೆಸುವ ಮೂಲಕ ಆ್ಯನಿಮಿಸ್ಟಿಕ್ ಏಕ-ಜನಾಂಗೀಯ ಆದಿಮಸಂಜಾತ ಕೊಡವರ ಸಮಗ್ರ ಸಬಲೀಕರಣಕ್ಕೆ ಕೊಡವರು ಕಟಿಬದ್ಧರಾಗಿರಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕರೆ ನೀಡಿದ್ದಾರೆ. ಸಿಎನ್ಸಿ ಸಂಘಟನೆ ವತಿಯಿಂದ ಬೇಂಗ್ ನಾಡಿನ ಚೇರಂಬಾಣೆಯಲ್ಲಿ ನಡೆದ 14ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹಿಂದೂ ಧರ್ಮದ ಬಗ್ಗೆ ವಿಶ್ಲೇಷಿಸಿ ಹಿಂದೂ ಎನ್ನುವುದು ಒಂದು ಧರ್ಮವಲ್ಲ. ಅದೊಂದು ಜೀವನ ಶೈಲಿ ಎಂದು ಬಹಳ ಸೊಗಸಾಗಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಈ ಸಂಬಂಧ “ಹಿಂದೂ ಒಂದು ಧರ್ಮವಲ್ಲ, ಅದೊಂದು ಜೀವನ ಶೈಲಿ” ಎಂದು ಹೊರಡಿಸಿದ ತೀರ್ಪನ್ನು ಕೂಡ ಮೋದಿಯವರು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ…
ಮಡಿಕೇರಿ NEWS DESK ಸೆ.30 : ರಸ್ತೆ ಅವ್ಯವಸ್ಥೆ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಿಂದ ಮುಜುಗರಗೊಂಡಿರುವ ಕಾಂಗ್ರೆಸ್ಸಿಗರು ಜನರ ಹಾದಿ ತಪ್ಪಿಸುವುದಕ್ಕಾಗಿ ಅನುದಾನ ಮತ್ತು ಅಭಿವೃದ್ಧಿಯ ವಿಚಾರದಲ್ಲಿ ಕಟ್ಟುಕಥೆ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ 1266 ಕೋಟಿ ರೂ. ಅನುದಾನ ಬಂದಿದ್ದರೆ ಅಭಿವೃದ್ಧಿ ಕಾರ್ಯಗಳನ್ನು ಸಾಕ್ಷೀಕರಿಸಲಿ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಾಗ ಮತ್ತು ಸರಕಾರ ಹಾದಿ ತಪ್ಪಿದಾಗ ಎಚ್ಚರಿಸುವ ಕಾರ್ಯವನ್ನು ವಿರೋಧ ಪಕ್ಷಗಳು ಮಾಡುತ್ತವೆ. ಪ್ರಸ್ತುತ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿ ಕೂಡ ಇದನ್ನೇ ಮಾಡುತ್ತಿದೆ. ಪ್ರತಿಭಟನೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಮರೆತು ಜನರ ಹಿತವನ್ನು ಕಡೆಗಣಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಮರ್ಪಕವಾಗಿ ರಸ್ತೆಯನ್ನು ಅಭಿವೃದ್ಧಿ ಪಡಿಸದ ಜನಪ್ರತಿನಿಧಿಗಳು ಈಗ ಮಳೆಯ ನೆಪವೊಡ್ಡಿ ಕಾಲಹರಣ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ. 1266 ಕೋಟಿ ರೂ. ಅನುದಾನ ತಂದಿರುವುದಾಗಿ ಕಾಗದದ ಮೂಲಕ ತೋರಿಸುತ್ತಿರುವವರು ಈ…






