ಲೇಖಕ: admin

ಮಡಿಕೇರಿ ನ.7 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರು ತಿಳಿಸಿದ್ದಾರೆ. ಜಿಲ್ಲಾ ಪ್ರಚಾರ ಸಮಿತಿಯ ಉಪಾಧ್ಯಕ್ಷರುಗಳಾಗಿ ಮೋಹನ್ ಮೌರ್ಯ, ಬಾಚುಮಂಡ ಲವ ಚಿಣ್ಣಪ್ಪ, ಕೋಶಾಧಿಕಾರಿಯಾಗಿ ಎ.ಕೆ.ಹ್ಯಾರಿಸ್, ಜಿಲ್ಲಾ ಸಂಯೋಜಕರಾಗಿ ಹೆಚ್.ನಟೇಶ್ ಗೌಡ, ಕೇಟೋಳಿರ ಮೋಹನ್ ರಾಜ್, ಎಸ್.ಸಿ.ಶರತ್ ಶೇಖರ್, ಮತ್ರಂಡ ದಿಲ್ಲು, ಜಿಲ್ಲಾ ಜಂಟಿ ಸಂಯೋಜಕರಾಗಿ ಕೆ.ನಂಜುಂಡ ಸ್ವಾಮಿ, ಪುದಿಯನೆರವನ ರೇವತಿ ರಮೇಶ್, ಇಸಾಕ್ ಖಾನ್, ಪಂಕಜ, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಸದಾನಂದ ಬಂಗೇರ, ಜುಬೈರ್, ಹೆಚ್.ಡಿ.ಗಣೇಶ್, ಶಬರೀಶ್ ಶೆಟ್ಟಿ, ಪಿ.ಜಿ.ಶೇಖರ್, ರಾಫಿಕ್, ಬಾಲಚಂದ್ರ ನಾಯರ್, ಜಾನಕಿ ವೆಂಕಟೇಶ್, ಔರಂಗಜೇಬ್, ವಿ.ಎಸ್.ಸಾಜಿ ಹಾಗೂ ಜುಲೇಕಾಬಿ ನೇಮಕಗೊಂಡಿದ್ದಾರೆ. ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನಂತೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಆದೇಶ ಪತ್ರ ನೀಡಿದ್ದಾರೆ…

Read More

ಮಡಿಕೇರಿ ನ.7 NEWS DESK : ಗೋಣಿಕೊಪ್ಪದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಕಾಲೇಜಿ ನ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 400 ಮೀಟರ್ ಹರ್ಡಲ್ಸ್ ನಲ್ಲಿ ಖುಷಿ. ಕೆ.ಎಂ. ಪ್ರಥಮ ಮತ್ತು ಸಾಗರ್ ಟಿ.ಎಸ್. ದ್ವಿತೀಯ ಸ್ಥಾನ ಪಡೆದು ಕಲುಬುರ್ಗಿ ಯಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ಕೆ.ಕೆ.ದೀಪಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಪಿ.ಪವನ್ ಸಾಗರ್ ಸಂತೋಷ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ನ.7 NEWS DESK : ಪೊನ್ನಂಪೇಟೆ ತಾಲ್ಲೂಕಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು ನೀರಾವರಿ ನಿಗಮ ಅನುದಾನದಲ್ಲಿ ಕ್ಷೇತ್ರಾದ್ಯಂತ ಕೈಗೊಳ್ಳಬೇಕಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ಪಡೆದರು. ಈ ಸಂದರ್ಭ ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳಮಾಡ ಲಾಲಾ ಅಪ್ಪಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷರು ಅಣ್ಣೀರ ಹರೀಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಸೋಮವಾರಪೇಟೆ ನ.7 NEWS DESK : ಜಿಲ್ಲೆಯ 3 ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. 5 ವರ್ಷ ಆಡಳಿತಾವಧಿ ಮುಗಿಸಿರುವ ಕುಶಾಲನಗರ ಹಾಗೂ ವಿರಾಜಪೇಟೆ ಪುರಸಭೆಗೆ ಉಪವಿಭಾಗಾಧಿಕಾರಿಗಳು, ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ತಹಶೀಲ್ದಾರರನ್ನು 4/11/25 ರಿಂದ ಜಾರಿಗೆ ಬರುವಂತೆ ಆಡಳಿತಾಧಿಕಾರಿಗಳನ್ನಾಗಿ ನೇಮಿಸಿ ರಾಜ್ಯ ನಗರಾಭಿವೃದ್ಧಿ ಇಲಾಖೆಯ ಅದೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ರಾಜ್ಯದ ಒಟ್ಟು 53 ಪುರಸಭೆ, 42 ನಗರಸಭೆ ಹಾಗೂ 23 ಪಟ್ಟಣ ಪಂಚಾಯ್ತಿಯ ಆಡಳಿತಾವಧಿ ಮುಗಿದಿರುವ ಹಿನ್ನಲೆಯಲ್ಲಿ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಮುಂದೆ ಸರ್ಕಾರ ವಾರ್ಡ್ವಿಂಗಡನೆ,ಮೀಸಲಾತಿ ನಿಗದಿಪಡಿಸ ಬೇಕಾಗಿರುವುದರಿಂದ ಮುಂದಿನ 4, 5 ತಿಂಗಳು ಆಡಳಿತಾಧಿಕಾರಿಗಳ ಆಡಳಿತನಡೆಯುವ ಸಾಧ್ಯತೆ ಇದೆ.

Read More

ಮಡಿಕೇರಿ ನ.7 NEWS DESK : ಪೊನ್ನಂಪೇಟೆಯ ನೂತನ ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಚಾಲನೆ ನೀಡಿದರು. ಇತ್ತೀಚಿಗಷ್ಟೇ ನೂತನ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಿಸಿದ ಬಳಿಕ, ಪೊನ್ನಂಪೇಟೆ ತಾಲೂಕಿನ ವಿವಿಧ ಆಡಳಿತ ಕಟ್ಟಡಗಳ ನಿರ್ಮಾಣ/ಮೇಲ್ದರ್ಜೆ ಕಾಮಗಾರಿಗಳಿಗೆ ಶಾಸಕರು ಸರಕಾರದಿಂದ 8 ಕೋಟಿ 60 ಲಕ್ಷ ಅನುದಾನ ಒದಗಿಸುತ್ತಿದ್ದಾರೆ. ಅದರಂತೆ ಕಂದಾಯ ಸಚಿವರೊಂದಿಗೆ ತಾಲೂಕು ಕಚೇರಿ ಕಟ್ಟಡಕ್ಕೆ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದರು. ಈ ಸಂದರ್ಭ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಪ್ರಶಾಂತ್ ಕಾಳಿಮಾಡ, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಉಪಾಧ್ಯಕ್ಷ ಅಲಿರ ರಶೀದ್, ಸದಸ್ಯರು, ಜಿಲ್ಲಾ ಮಟ್ಟದ…

Read More

ಮಡಿಕೇರಿ ನ.7 NEWS DESK : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ನಲ್ಲಿ ನ.8 ರಿಂದ ಕರಿಮಣಿ ಮೇಳ ಆರಂಭಗೊಳ್ಳಲಿದ್ದು, ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸ್ಥಳೀಯವಾಗಿ ಕರಿಮಣಿ ಸರ ಎಂದು ಕರೆಯಲ್ಪಡುವ ಮಂಗಳಸೂತ್ರವು ಪ್ರತಿಯೊಂದು ವಿವಾಹಿತ ಮಹಿಳೆಯರು ದಾಂಪತ್ಯದ ಶಾಶ್ವತ ಬಂಧವನ್ನು ಸಂಕೇತಿಸಲು ಧರಿಸುವ ಹಾರವಾಗಿದೆ. ಈ ಸರಳವಾದ ಹಾರವು ಹಲವಾರು ದಶಕಗಳಿಂದ ಹಲವಾರು ರೂಪಗಳನ್ನು ಪಡೆದುಕೊಂಡಿದೆ. ಆದರೆ ಅದರ ಸಂಪ್ರದಾಯಗಳು ಮತ್ತು ಪ್ರಸ್ತುತತೆ ಒಂದೇ ಆಗಿವೆ. ಆದುದರಿಂದ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ನ.8 ರಿಂದ ಕರಿಮಣಿ ಮೇಳವನ್ನು ಆಯೋಜಿಸಿದ್ದು, ಈ ಪ್ರಯುಕ್ತ ಹಳೆಯ ಚಿನ್ನ ಅಥವಾ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿ ಹಳೇ ಚಿನ್ನಕ್ಕೆ ಪ್ರತೀ ಗ್ರಾಂಗೆ ರೂ. 100 ಅಧಿಕ ದರ ಪಡೆಯಬಹುದು. ನಮ್ಮಲ್ಲಿ ಸುಮಾರು 1500ಕ್ಕೂ ಮಿಕ್ಕಿದ ಕರಿಮಣಿ ಸರಗಳ ವಿನೂತನ ಕಲೆಕ್ಷನ್‌ಗಳು ಉಡುಗೊರೆಗಳೊಂದಿಗೆ ಗ್ರಾಹಕರ ಆಯ್ಕೆಗೆ ತಕ್ಕಂತೆ…

Read More

ಮಡಿಕೇರಿ ನ.7 NEWS DESK : ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ವಿರಾಜಪೇಟೆ ಕರ್ನಾಟಕ ಸಂಘದ ಶಾಲಾ ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಫರ್ಧೆಗಳನ್ನು ಆಯೋಜಿಸಿದ್ದರು. ಶಾಲಾ ವಿಭಾಗದಲ್ಲಿ ತ್ರಿವೇಣಿ ಆಂಗ್ಲ ಮಾಧ್ಯಮ ಸಂಸ್ಥೆಯ ಪ್ರಾಥಮಿಕ ವಿಭಾಗವು ನೃತ್ಯದಲ್ಲಿ ಪ್ರಥಮ ಬಹುಮಾನ, ಫ್ರೌಢಶಾಲಾ ಬಾಲಕಿಯರು ನೃತ್ಯ ವಿ‌ಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದರು. ಸಾರ್ವಜನಿಕ ವಿಭಾಗದಲ್ಲಿ ಸಂಸ್ಥೆಯ ಶಿಕ್ಷಕಿ ಆಶಾ, ಅಕ್ಕಮ್ಮ , ಕೊಡವ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದರೆ. ಮತ್ತೊಬ್ಬ ಶಿಕ್ಷಕಿ ಜ್ಯೋತಿ, ಕನ್ನಡ ಗಾಯನದಲ್ಲಿ ತೃತೀಯ ಸ್ಥಾನಗಳಿಸಿದರು.

Read More

ಮಡಿಕೇರಿ ನ.7 NEWS DESK : ಮರಗೋಡು ಎಸ್ ಕೆ ಎಫ್ ಸಿ  ವತಿಯಿಂದ ಪ್ರಥಮ ಬಾರಿಗೆ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯವು ನ.8 ಮತ್ತು 9  ಮರಗೋಡುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಮೊಗೇರ ಜನಾಂಗದ ಕ್ರೀಡಾಪಟುಗಳಿಗೆ ಮಾತ್ರ ಸೀಮಿತವಾಗಿದ್ದು, ಒಟ್ಟು 7 ಮಾಲೀಕತ್ವದ 7 ತಂಡಗಳು ಪಾಲ್ಗೊಳ್ಳಲಿದೆ. ಮ್ಯಾಡ್ರಿಡ್ ಎಫ್ ಸಿ ಸುಂಟಿಕೊಪ್ಪ, ಸ್ಟಾರ್ ಬಾಯ್ಸ್ ಅಭ್ಯತ್ ಮಂಗಲ, ಎಂ ಎಫ್ ಸಿ ಅಮ್ಮತಿ, ಅಮೃತ ಮೊಗೇರ ಫ್ರೆಂಡ್ಸ್ ಸಿದ್ದಾಪುರ, ಸೋಕರ್ ಯುನೈಟೆಡ್ ಅಮ್ಮತಿ, ಭಗವತಿ ಹಾಲುಗುಂದ, ಎಸ್ ಕೆ ಎಫ್ ಸಿ ಮರಗೋಡು, ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ. ಪಂದ್ಯ ಕೂಟದ ಚಾಂಪಿಯನ್ ತಂಡಕ್ಕೆ 44444 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 22222 ನಗದು ಹಾಗೂ ಆಕರ್ಷಕ ಟ್ರೊಫಿ ತೃತೀಯ ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೊಫಿ ಹಾಗೆಯೇ ವೈಯಕ್ತಿಕ ಟ್ರೊಫಿಗಳು ಕೂಡ ಕ್ರೀಡಾಪಟುಗಳಿಗೆ ಸಿಗಲಿದೆ. ಕ್ರೀಡಾ…

Read More

ಮಡಿಕೇರಿ ನ.7 NEWS DESK  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಕನಕದಾಸರ ಜಯಂತಿ ಆಚರಣೆಯು ನ.8 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೊಡಗು ಜಿಲ್ಲಾ ಕುರುಬ ಸಂಘದ ಅಧ್ಯಕ್ಷರಾದ ಎಚ್.ಎಸ್.ಮಹೇಶ್, ಕೊಡಗು ಜಿಲ್ಲಾ…

Read More

ಮಡಿಕೇರಿ ನ.7 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕಗಳ ಪದಾಧಿಕಾರಿಗಳ ಸಭೆ  ನಡೆಯಿತು. ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂದಿನ ತಿಂಗಳು ವಿರಾಜಪೇಟೆ ಕ್ಷೇತ್ರದ ಹಿಂದುಳಿದ ವರ್ಗಗಳ ಘಟಕದ ಬೃಹತ್ ಸಮಾವೇಶ ಆಯೋಜಿಸುವ ಬಗ್ಗೆ ಚರ್ಚಿಸಿದ ಶಾಸಕರು, ಸಮಾವೇಶಕ್ಕೆ ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುವುದಾಗಿ ತಿಳಿಸಿದರು. ಈ ಸಮಾವೇಶದ ಪೂರ್ವಭಾವಿ ತಯಾರಿಯ ಬಗ್ಗೆ ಮಾಹಿತಿ ನೀಡಿದ ಶಾಸಕರು, ಸಮಾವೇಶದ ಯಶಸ್ವಿಗೆ ಕೈಗೊಳ್ಳಬೇಕಾದ ಎಲ್ಲಾ ಕಾರ್ಯಕ್ರಮಗಳನ್ನು ಬಗ್ಗೆ ಪದಾಧಿಕಾರಿಗಳಿಗೆ ಮನವರಿಕೆ ಮಾಡಿದರು. ಸಭೆಯಲ್ಲಿ ಹಿಂದುಳಿದ ವರ್ಗಗಳ ಘಟಕಗಳ ಜಿಲ್ಲಾಧ್ಯಕ್ಷ ಬಾನಂಡ ಪ್ರತ್ಯು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ,  ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ಜಿಲ್ಲಾ ಯುವ…

Read More