ಲೇಖಕ: admin

ಮಡಿಕೇರಿ ಸೆ.29 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಎಂ.ಎಸ್.ಎಂ.ಇ ನಿರ್ದೇಶನಾಲಯ, ಕೆ.ಸಿ.ಟಿ.ಯು. ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಸಂಯುಕ್ತ ಆಶ್ರಯದಲ್ಲಿ ಕೋವಿಡ್ ನಂತರ ನಷ್ಟಕ್ಕೆ ಒಳಗಾದ ಉದ್ಯಮಗಳ ಮರು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಆರ್‍ಎಎಂಪಿ ಯೋಜನೆಯಡಿಯಲ್ಲಿ ಟ್ರೇಡ್ಸ್ ಹಾಗೂ ಇಎಸ್‍ಎಂ ಯೋಜನೆ ಕುರಿತು ಕುಶಾಲನಗರದ ಖಾಸಗಿ ಹೋಟೆಲ್‍ನಲ್ಲಿ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು.  ಕಾರ್ಯಕ್ರಮವನ್ನು ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೆಂಗಳೂರು ಟೆಕ್ಸಾಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿದ್ದರಾಜು ವಹಿಸಿದ್ದರು.  ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಕೆ.ಶಿವಲಿಂಗಯ್ಯ,   ಗ್ರಾಮೀಣ ಕೈಗಾರಿಕೆಗಳು ಉಪ ನಿರ್ದೇಶಕರಾದ ರಘು ಸಿ.ಎನ್. ಉಪನಿರ್ದೇಶಕರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನಿವೃತ್ತ ಲೀಡ್ ಡಿಸ್ಟ್ರಿಕ್ ಮ್ಯಾನೇಜರ್ ಆರ್.ಕೆ. ಬಾಲಚಂದ್ರ, ಮಡಿಕೇರಿ ಕೆ.ಎಸ್.ಎಫ್.ಸಿ. ಉಪ ವ್ಯವಸ್ಥಾಪಕರು(ಕಾನೂನು) ತೃಪ್ತಿ ಎಸ್., ಡಿ.ಎಸ್.ಎಂ.ಎಸ್. ಅಧ್ಯಕ್ಷರಾದ ಸಿ.ವಿ.ನಾಗೇಶ್, ಕೂಡಿಗೆ ರೆಸ್ಟಿ(ಆರ್‍ಎಸ್‍ಇಟಿಐ)ನ ಪ್ರಕಾಶ್ ಕುಮಾರ್, ಸಿಡಾಕ್‍ನ ಜಂಟಿ…

Read More

ಮಡಿಕೇರಿ ಸೆ.29 NEWS DESK : ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ, ಮೀಸಲಾತಿ ಹಾಗೂ ಸರ್ಕಾರದ ಕಾರ್ಯಕ್ರಮ ರೂಪಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆ ದಿಸೆಯಲ್ಲಿ ಸಮೀಕ್ಷೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮನವಿ ಮಾಡಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿದ್ದು, ರಾಜಕೀಯ ಪ್ರೇರಿತವಾಗಿದೆ ಎಂದರು. ಸಂವಿಧಾನ ಅರ್ಥ ಮಾಡಿಕೊಳ್ಳುವವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದಿಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಡಿ ಎಂದು ಬಹಿರಂಗವಾಗಿ ಹೇಳುತ್ತಾರೆ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಕೇಂದ್ರದವರು ಜಾತಿವಾರು ಜನಗಣತಿ ಮಾಡಲು ಮುಂದಾಗುತ್ತಿದ್ದಾರೆ. ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವುದು ಜಾತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.…

Read More

ಮೂರ್ನಾಡು ಸೆ.29 NEWS DESK : ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದÀ ಮುತ್ತಾರ್ಮುಡಿ ಗ್ರಾಮದಲ್ಲಿ ಆಯೋಜಿಸಲಾಗಿರುವ ಎನ್‍ಎಸ್‍ಎಸ್ ಶಿಬಿರದಲ್ಲಿ ಉಪನ್ಯಾಸ ಕಾರ್ಯಕ್ರಮ ಜರುಗಿತು. ಮೂರ್ನಾಡು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕ ಕಂಬಿರಂಡ ಬೋಪಣ್ಣ ನಶಾ ಮುಕ್ತ ಭಾರತ ಎಂಬ ವಿಷಯದ ಕುರಿತು ಮಾತನಾಡಿ, ಮಾದಕ ವಸ್ತುಗಳು ಮನುಷ್ಯನ ದೇಹ ಮತ್ತು ಮನಸ್ಸುಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಆರೋಗ್ಯಕರ ಸಮಾಜ ಮತ್ತು ಬಲಿಷ್ಠ ಭಾರತ ನಿರ್ಮಾಣದ ನಿಟ್ಟಿನಲ್ಲಿ ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಬೇಕು. ಆರೋಗ್ಯಕರ ಜೀವನ ನಡೆಸಲು ಮಾದಕ ವಸ್ತುಗಳ ಬಗ್ಗೆ ನಿರಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಮುಖ್ಯಅತಿಥಿಯಾಗಿ ಆಗಮಿಸಿದ್ದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೆಮ್ಮಡಿಯಂಡ ವೇಣುಅಪ್ಪಣ್ಣ ಮಾತನಾಡಿ, ಮಾದಕ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು. ಮತ್ತೋರ್ವ ಅತಿಥಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್‍ರೈ ಮಾತನಾಡಿ ಎನ್‍ಎನ್‍ಎಸ್ ಶಿಬಿರವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ…

Read More

ಮಡಿಕೇರಿ ಸೆ.28 NEWS DESK : ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.30 ರಂದು ಗಾಂಧಿ ಮೈದಾನದ ಕಲಾ ಸಂಭ್ರಮ ಸಭಾಂಗಣದಲ್ಲಿ 12ನೇ ವಷ೯ದ ಮಕ್ಕಳ ದಸರಾ ಆಯೋಜಿತವಾಗಿದೆ ಎಂದು ಮಕ್ಕಳ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಸಹಯೋಗದಲ್ಲಿ ಸೆ.30 ರಂದು ಮಂಗಳವಾರ ಬೆಳಗ್ಗೆ 9 ಗಂಟೆಯಿಂದಲೇ ಗಾಂಧಿ ಮೈದಾನದಲ್ಲಿ ಮಕ್ಕಳಿಗಾಗಿ ಮಕ್ಕಳ ಅಂಗಡಿ, ಸಂತೆ. ಮಂಟಪ , ಛದ್ಮವೇಷ ಕ್ಲೇ ಮಾಡೆಲಿಂಗ್ ಸ್ಪಧೆ೯ಗಳು ಆಯೋಜಿಸಲ್ಪಟ್ಟಿವೆ. ಜಿಲ್ಲಾದಿಕಾರಿ ವೆಂಕಟರಾಜಾ ಮಕ್ಕಳ ದಸರಾ ಉದ್ಘಾಟಿಸಲಿದ್ದು, ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ರೋಟರಿ ಮಿಸ್ಟಿ ಹಿಲ್ಸ್ , ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ದಸರಾ ಸಮಿತಿ ಅಧ್ಯಕ್ಷೆ ಕಲಾವತಿ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾಯಾ೯ಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾಯ೯ದಶಿ೯ ಅರುಣ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಈ ವಷ೯ ಅತ್ಯಧಿಕ ಸಂಖ್ಯೆಯಲ್ಲಿ ಸ್ಪಧಿ೯ಗಳು ಮಕ್ಕಳ ದಸರಾಕ್ಕೆ ನೋಂದಣಿ ಮಾಡಿಕೊಂಡಿರುವ ಹಿನ್ನಲೆಯಲ್ಲಿ…

Read More

ಸೋಮವಾರಪೇಟೆ ಸೆ.29 NEWS DESK : ಯುವ ಜನಾಂಗವು ಆರೋಗ್ಯಕ್ಕೆ ಹಾನಿಯುಂಟುಮಾಡುವ ದುಶ್ಚಟಗಳಂತಹ ಸಾಮಾಜಿಕ ಪಿಡುಗುಗಳಿಗೆ ದಾಸರಾಗದೆ ಉತ್ತಮ ಆರೋಗ್ಯ ಮತ್ತು ಜೀವನ ಕಂಡುಕೊಳ್ಳಲು ಸಂಕಲ್ಪ ತೊಡಬೇಕು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಮಾದಾಪುರ ಶ್ರೀಮತಿ ಡಿ.ಚನ್ನಮ್ಮ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ( ಎನ್ನೆಸ್ಸೆಸ್ ) ಘಟಕದ ವತಿಯಿಂದ “ನಶಾ ಮುಕ್ತ ಭಾರತ ಅಭಿಯಾನ:2025” ಎಂಬ ಕೇಂದ್ರ ವಿಷಯದಡಿ ಗರಗಂದೂರು ಗ್ರಾಮದಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಏರ್ಪಡಿಸಿದ್ದ ನಶಮುಕ್ತ ಭಾರತ ಅಭಿಯಾನದ ಮಹತ್ವ ಕುರಿತು ಉಪನ್ಯಾಸ ನೀಡಿದರು. ಸಮಾಜ ಹಾಗೂ ಆರೋಗ್ಯ ಹಾಳು ಮಾಡುವ ದುಶ್ಚಟಗಳಿಂದ ಎಲ್ಲರೂ ದೂರವಿದ್ದು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಯುವಕರು ದೇಶದ ಆಸ್ತಿಯಾಗಬೇಕೇ ವಿನಾಃ ಯುವಜನತೆ ಮಾದಕ ಪದಾರ್ಥಗಳ ನಶೆಯುಕ್ತ ಯಾವುದೇ ಪದಾರ್ಥಗಳನ್ನು ಸೇವಿಸದೇ…

Read More

ಮಡಿಕೇರಿ ಸೆ.29 NEWS DESK : ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ ವತಿಯಿಂದ ಭಾರತೀಯ ಕಾಫಿ ಮಂಡಳಿ, ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಮತ್ತು ಯುಪಿಎಎಸ್‍ಐ ಸಂಸ್ಥೆಗಳ ಸಹಯೋಗದಲ್ಲಿ ಕೊಡಗಿನ ವಿವಿಧೆಡೆ ಅಂತರರಾಷ್ಟ್ರೀಯ ಕಾಫಿ ದಿನವನ್ನು ಆಚರಿಸುತ್ತಿದೆ ಎಂದು ಸಂಸ್ಥೆ ಕಾರ್ಯದರ್ಶಿ ಅಪ್ಪನೆರವಂಡ ಅನಿತಾ ನಂದಾ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ ವಿಶ್ವಾದ್ಯಂತ ಕಾಫಿ ಬಳಕೆ ಮತ್ತು ಮೆಚ್ಚುಗೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆಯ ವಿಶೇಷ ದಿನದಂದು ಕೊಡಗಿನಾದ್ಯಂತ ನಾಲ್ಕು ಸ್ಥಳಗಳಲ್ಲಿ ಕಾಫಿ ವಿತರಣಾ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು. ಸೆ.30 ರಂದು ಬೆಳಿಗ್ಗೆ 10.40 ಗಂಟೆಗೆ ಪೊನ್ನಂಪೇಟೆ ಸಿಐಟಿ ಎಂಜಿನಿಯರಿಂಗ್ ಕಾಲೇಜು, ಅ.1 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಸರ್ಕಾರಿ ಆಸ್ಪತ್ರೆ ಹಾಗೂ ಮಾಲ್ದಾರೆ ಪಟ್ಟಣದಲ್ಲಿ, ಅ.4 ರಂದು ಸೋಮವಾರಪೇಟೆ ಚಿಕ್ಕ ಬಸಪ್ಪ ಕ್ಲಬ್ ನಲ್ಲಿ ಕಾರ್ಯಕ್ರಮ ನಡೆಸಿ, ಕಾಫಿ ವಿತರಿಸಲಾಗವುದೆಂದು…

Read More

ಮಡಿಕೇರಿ ಸೆ.29 NEWS DESK : ಹುದುಗೂರು ಸಮೀಪದ ಯಡವನಾಡು ಗ್ರಾಮದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಮದ ಉಮೇಶ್ ರಾಜ್ ಅರಸ್ ಮತ್ತು ಜೆ.ಕೆ.ರವಿ ಎಂಬುವರ ಜಮೀನಿಗೆ ದಾಳಿ ಮಾಡಿರುವ ಕಾಡಾನೆಗಳ ಹಿಂಡು ಭತ್ತದ ಗದ್ದೆಗಳನ್ನು ತುಳಿದು ತಿಂದು ಬಾರಿ ನಷ್ಟ ಪಡಿಸಿವೆ. ಅಲ್ಲದೆ ಅನೇಕ ಅಡಿಕೆ ಗಿಡಗಳನ್ನು ಹಾಳು ಮಾಡಿದೆ. ಮೀಸಲು ಅರಣ್ಯ ಪ್ರದೇಶದಿಂದ ಗ್ರಾಮಕ್ಕೆ ಲಗ್ಗೆ ಇಡುತ್ತಿರುವ ಕಾಡಾನೆಗಳು ಕೃಷಿಕರ ಗದ್ದೆ, ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣ ಬೆಳೆಗಳನ್ನು ಧ್ವಂಸ ಪಡಿಸಿ ನಷ್ಟ ಉಂಟು ಮಾಡುತ್ತಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಕಳೆದ ಸಾಲಿನಲ್ಲಿ ಬೆಳೆ ನಷ್ಟಗೊಳಗಾದವರಿಗೆ ಹುದುಗೂರು ಉಪ ವಲಯ ಅರಣ್ಯಾಧಿಕಾರಿಗಳು ಇದುವರೆಗೂ ಪರಿಹಾರವನ್ನು ನೀಡಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಸ್ಧಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸುವಂತೆ ರೈತರು ಆಗ್ರಹಿಸಿದ್ದಾರೆ.

Read More

ನಾಪೋಕ್ಲು ಸೆ.29 NEWS DESK : ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ವಾರ್ಷಿಕ ಶಿಬಿರದಲ್ಲಿ ಪಕ್ಷಿ ವೈವಿಧ್ಯತೆ ಮತ್ತು ಪ್ರಕೃತಿ ಎಂಬ ವಿಷಯದ ಕುರಿತು ವಿರಾಜಪೇಟೆಯ ವೈದ್ಯರು ಹಾಗೂ ಪಕ್ಷಿ ತಜ್ಞರಾದ ಡಾ. ಎಸ್.ವಿ .ನರಸಿಂಹನ್ ಅವರು ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಿದರು. ಪಕ್ಷಿಗಳಿಗೂ ಪ್ರಕೃತಿಗೂ ಇರುವ ಸಂಬಂಧ ಈ ವಿಚಾರಗಳನ್ನು ಸ್ಲೈಡ್ ಶೋ ಮುಖಾಂತರ ವಿದ್ಯಾರ್ಥಿಗಳಿಗೆ ವಿವರಿಸಿದರು. ಕುಟ್ರ ಹಕ್ಕಿ, ಸೂರಕ್ಕಿ, ಕಾಜಾಣ ಮಂಗಟ್ಟೆ ಹಕ್ಕಿ, ರಣಹದ್ದುಗಳು ಇವುಗಳ ಕಾರ್ಯವೈಕರಿ ಮರದ ಆರೋಗ್ಯ, ಪ್ರಕೃತಿ ಮಾನವ ಜೀವಿಗಳ ಉಳಿವಿಗೆ ಕೀಟಗಳ ಅಗತ್ಯತೆ, ಹಕ್ಕಿಗಳಿಂದ ಕೀಟ ನಿಯಂತ್ರಣ, ಪರಾಗಸ್ಪರ್ಶ, ಬೀಜ ಪ್ರಸರಣ, ಹಕ್ಕಿಗಳಿಂದ ಪರಿಸರ ನೈರ್ಮಲ್ಯ, ಹಕ್ಕಿಗಳನ್ನು ನೋಡಿ ವಿಜ್ಞಾನ ಬೆಳೆದದ್ದು ಈ ಮೊದಲಾದ ವಿಚಾರಗಳ ಬಗ್ಗೆ ಚಿತ್ರಗಳನ್ನು ತೋರಿಸಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂರ್ನಾಡು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ನಂದೇಟಿರ ರಾಜ ಮಾದಪ್ಪ ಸ್ವಚ್ಛತೆ ಎನ್ನುವುದು…

Read More

ನಾಪೋಕ್ಲು ಸೆ.29 NEWS DESK : ಹಿಂದೂ ಧರ್ಮದ ಪ್ರತಿಯೊಂದು ಮಂತ್ರದ ಸಾರ ಸರ್ವರ ಒಳಿತನ್ನು ಸಾಧಿಸುವುದೇ ಆಗಿದೆ ಎಂದು ಉಪನ್ಯಾಸಕ ಪಟ್ಟಡ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಮದೆ ಗ್ರಾಮದ ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಡೆದ ನವರಾತ್ರಿ ಉತ್ಸವದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಹಿಂದೂ ಧರ್ಮ ಪ್ರತಿಯೊಬ್ಬರ ಭಾವನೆಗಳಿಗೆ ಬೆಲೆ ನೀಡಿ, ಅವರಿಗಿಷ್ಟ ಬಂದ ರೀತಿಯಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಅವಕಾಶ ನೀಡಿದೆ. ಆದ್ದುದರಿಂದ ಇಲ್ಲಿ ಭಗವಂತನನ್ನು ಹಲವು ರೂಪದಲ್ಲಿ ಹಾಗೂ ಹಲವು ವಿಧಾನಗಳಲ್ಲಿ ಪೂಜಿಸುವ ಅವಕಾಶ ದೊರೆತಿದೆ ಎಂದರು. ಪ್ರಸ್ತುತ ಜಗತ್ತಿನ ಸಮಸ್ಯೆಗಳನ್ನು ಬಗೆಹರಿಸಲು ಹಿಂದೂ ಸಂಸ್ಕೃತಿಗೆ ಮಾತ್ರ ಸಾಧ್ಯವಿದೆ, ಏಕೆಂದರೆ ಹಿಂದೂ ಸಂಸ್ಕೃತಿ ಜಗತ್ತಿನ ಸರ್ವರ ಕಲ್ಯಾಣವನ್ನು ಬಯಸುತ್ತದೆ, ವಸುದೈವ ಕುಟುಂಬಕಂ, ಅಂದರೆ ಇಡೀ ಜಗತ್ತು ಒಂದೇ ಕುಟುಂಬಕ್ಕೆ ಸೇರಿದ್ದು ಎಂಬ ಭಾವನೆಯನ್ನು ಹೊಂದಿರುವ ಹಿಂದೂ ಸಂಸ್ಕೃತಿ ಅತ್ಯಂತ ಶ್ರೇಷ್ಠ ಸಂಸ್ಕೃತಿ ಎಂದು ಬಣ್ಣಿಸಿದರು. ಹಿಂದೂ ದೇವಾಲಯಗಳು ಹಾಗೂ ಮಠ ಮಂದಿರಗಳು ನಿತ್ಯ ನಿರಂತರವಾಗಿ ಅನ್ನದಾಸೋಹ,…

Read More

ನಾಪೋಕ್ಲು ಸೆ.29 NEWS DESK : ನಾಪೋಕ್ಲು ದವಸ ಭಂಡಾರದ 2024-25ನೇ ಸಾಲಿನ 90ನೇ  ವಾರ್ಷಿಕ ಮಹಾಸಭೆಯು ಭಗವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ದವಸ ಭಂಡಾರದ ಅಧ್ಯಕ್ಷರಾದ ಕಂಗಾಂಡ ಜಾಲಿ ಪೂವಪ್ಪ ಅವರ ಅಧಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದವಸ ಬಂಡಾರ ಅಭಿವೃದ್ಧಿ ಬಗ್ಗೆ ಚರ್ಚಿಸಿ ಒಮ್ಮತದ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಹಾಗೂ ಲೆಕ್ಕಪತ್ರಗಳನ್ನು ಸಭೆಗೆ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು.  ಸಭೆಯಲ್ಲಿ ಉಪಸ್ಥಿತರಿದ್ದ ಉದಯಶಂಕರ್, ಅಶೋಕ. ಅಂಬಿ ಕಾರ್ಯಪ್ಪ, ರಘು ಕರುಂಬಯ್ಯ, ಹಿರಿಯರಾದ  ಕಾವೇರಪ್ಪ ಸಂಸ್ಥೆಯ ಶ್ರೇಯೋಭಿವೃದ್ಧಿಯ ಬಗ್ಗೆ ಚರ್ಚಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ದವಸ ಭಂಡಾರದ ಉಪಾಧ್ಯಕ್ಷ ಶಿವಚಳಿಯಂಡ ಕಿಶೋರ್ ಬೋಪಣ್ಣ, ನಿರ್ದೇಶಕರುಗಳಾದ  ಶಿವಚಳಿಯಂಡ ಸುಭಾಷ್ ಸೋಮಯ್ಯ, ರಾಜೇಶ್ ತಮ್ಮಯ್ಯ, ಪಡಿಯಮ್ಮಂಡ  ಮನು ಮಹೇಶ್, ಅರೆಯಡ ವಿನೋದ್, ಅಶೋಕ, ಬೊಪ್ಪಂಡ ಕಾಳಪ್ಪ, ಅಜ್ಜೇಟ್ಟೀರ ರಾಣಿ, ಕುಂಬಂಡ ಚಿತ್ರಾ, ಕಾರ್ಯದರ್ಶಿ ಕುಂಬಂಡ ಕೇಶವ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More