ಸೋಮವಾರಪೇಟೆ ಸೆ.29 NEWS DESK : ಟೀಮ್ 12 ಆಫ್ ರೋಡರ್ಸ್ ವತಿಯಿಂದ ತಾಲ್ಲೂಕಿನ ಕೊತ್ನಳ್ಳಿ, ಕುಡಿಗಾಣ, ಬೆಂಕಳ್ಳಿ ಗ್ರಾಮಗಳ ಖಾಸಗಿ ಜಮೀನಿನಲ್ಲಿ ನಡೆದ ಜೀಪ್ ಆಫ್ರೋಡ್ ರ್ಯಾಲಿ ಗ್ರಾಮೀಣ ಜನರನ್ನು ರಂಜಿಸಿತು. ಕೊತ್ನಳ್ಳಿ ಗ್ರಾಮಸ್ಥರು ರ್ಯಾಲಿಗೆ ಚಾಲನೆ ನೀಡಿದರು. ಟ್ರ್ಯಾಕ್ನಲ್ಲಿ ಜೀಪ್ ತೆರಳುತ್ತಿದ್ದಂತೆ ಧಾರಾಕಾರ ಮಳೆ ಸುರಿಯಲು ಪ್ರಾರಂಭಿಸಿತು. ಕಡಿದಾದ ರಸ್ತೆಯಲ್ಲಿ ಅನೇಕ ವಾಹನಗಳು ಸಿಲುಕಿಕೊಂಡವು. ನಂತರ ಟ್ರಾಕ್ಟರ್ ಮತ್ತು ಕ್ರೇನ್ ಬಳಸಿ ವಾಹನಗಳನ್ನು ಟ್ರಾಕ್ಗಳಿಗೆ ತರಲಾಯಿತು. ಅತೀ ಹೆಚ್ಚು ಮಳೆಬೀಳುವ ಕುಡಿಗಾಣ, ಕೊತ್ತನಳ್ಳಿ ಗ್ರಾಮದ ಖಾಸಗಿ ಜಾಗದ ಕಾಫಿ, ಏಲಕ್ಕಿ ತೋಟಗಳ ಕಚ್ಚಾರಸ್ತೆಯಲ್ಲಿ ತೆರಳುವುದು ಚಾಲಕರಿಗೆ ಸವಾಲಾಗಿ ಪರಿಣಮಿಸಿತು. ರಾಜ್ಯದ ವಿವಿಧ ಭಾಗಗಳಿಂದ 125 ವಾಹನಗಳಲ್ಲಿ 250 ರಷ್ಟು ಸ್ಪರ್ಧಿಗಳು ಭಾಗವಹಿಸಿದ್ದರು. ಖಾಸಗಿ ಜಮೀನಿನಲ್ಲೇ ಆಫ್ರೋಡ್ ರ್ಯಾಲಿಯನ್ನು ಆಯೋಜಿಸಿಲಾಗಿದೆ. ಆರಣ್ಯ ಪ್ರದೇಶದಲ್ಲಿ ಯಾವುದೇ ಟ್ರ್ಯಾಕ್ ಇರುವುದಿಲ್ಲ. ಕಾಫಿ, ಏಲಕ್ಕಿ ತೋಟದ ರಸ್ತೆಯಲ್ಲಿ ನಡೆಯಲಿದೆ. ಆಫ್ರೋಡ್ ಸ್ಫೋಟ್ರ್ಸ್ ಇವೆಂಟ್ ಆಗಿರುವುದರಿಂದ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಲಾಗಿದೆ. ರ್ಯಾಲಿ ಆಯೋಜನೆಗೆ ಮೊದಲು…
ಲೇಖಕ: admin
ಮಡಿಕೇರಿ, ಸೆ.29 NEWS DESK : ಕಾಲೇಜು ಹಂತಗಳಲ್ಲಿ ವಾರ್ಷಿಕ ವಿಶೇಷ ಶಿಬಿರಗಳ ಆಯೋಜನೆಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಜೊತೆಯಲ್ಲಿ ಬದುಕಿನ ಮೌಲ್ಯ ಗಳನ್ನು ಕಲಿಸಿಕೊಡುತ್ತದೆ. ಜೊತೆಯಲ್ಲಿ ವಿದ್ಯಾರ್ಥಿಗಳ ಅಭಿರುಚಿಯನ್ನು ಗುರುತಿಸುವ ಕಾರ್ಯವಾಗುವುದು ಎಂದು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಕೀಯ ಅಧಿಕಾರಿ ಡಾ. ಎಂ.ಯು. ಚೇತನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಮಹಾತ್ಮ ಗಾಂಧಿ ಸ್ಮಾರಕ ಪದವಿ ಕಾಲೇಜಿನ ವತಿಯಿಂದ ಬಸವನಹಳ್ಳಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ಹಮ್ಮಿಕೊಂಡಿರುವ 2025-26ನೇ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆರೋಗ್ಯದ ಕಾಳಜಿ ಮತ್ತು ಅಂಗಾಂಗ ದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಮಗ್ರವಾದ ಮಾಹಿತಿಯನ್ನು ತಿಳಿಸಿದರು. ವಿಶೇಷ ಆಹ್ವಾನಿತರಾಗಿದ್ದ ಪತ್ರಕರ್ತ ಕೆ.ಕೆ.ನಾಗರಾಜ ಶೆಟ್ಟಿ ಮಾತಾನಾಡಿ ಇಂತಹ ಶಿಬಿರಗಳ ಮೂಲಕ ಸೇವಾ ಮನೋಭಾವ ಬೆಳೆಸಿಕೊಳ್ಳುವುದರ ಜೊತೆಯಲ್ಲಿ ನಾಯಕತ್ವದ ಗುಣಗಳು, ಧೈರ್ಯ ಮತ್ತು ದೃಡಸಂಕಲ್ಪವನ್ನು ಕಲಿಸಿಕೊಡುತ್ತದೆ.ಸಂಘಟನಾತ್ಮಕ ವಾಗಿ ಕಾರ್ಯ ನಿರ್ವಹಿಸುವ,ಅದರ ನಿರ್ವಹಣೆ ಮತ್ತು ಆದರ್ಶ ಜೀವನ ಮೌಲ್ಯ…
ಮಡಿಕೇರಿ NEWS DESK ಸೆ.28 : ಮಳೆಯ ವಾತಾವರಣದ ನಡುವೆಯೂ, ನಗರದ ಗಾಂಧಿ ಮೈದಾನದಲ್ಲಿ ಮಡಿಕೇರಿ ದಸರೆಯ ಭಾಗವಾಗಿರುವ ‘ಮಹಿಳಾ ದಸರಾ’ವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು. ಮಹಿಳೆಯರಲ್ಲಿನ ಕ್ರಿಯಾಶೀಲತೆಗೆ ಒತ್ತು ನೀಡಿ, ಅವರಲ್ಲಿನ ಪ್ರತಿಭಾ ಅನಾವರಣಕ್ಕೆ ಕಾರ್ಯಕ್ರಮ ಪೂರಕವಾಗಿತ್ತು. ಮಡಿಕೇರಿ ನಗರ ದಸರಾ ಸಮಿತಿ, ದಸರಾ ಸಾಂಸ್ಕೃತಿಕ ಸಮಿತಿಯ ಸಂಯುಕ್ತಾಶ್ರಯದಲ್ಲಿ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಆಯೋಜಿತ ಮಹಿಳಾ ದಸರಾ ಸಮಾರಂಭವನ್ನು ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ ಅವರು, ಉದ್ಘಾಟಿಸಿದರು. ದಸರಾ ಉತ್ಸವದ ಭಾಗವೇ ಆಗಿರುವ ಮಹಿಳಾ ದಸರಾ ಉತ್ಸವದಲ್ಲಿ ಮಹಿಳೆಯರು ಹೆಚ್ಚಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ತೋರಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಎಂಎಲ್ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಮಾತನಾಡಿ, ಐತಿಹಾಸಿಕ ಮಡಿಕೇರಿ ದಸರಾ ಉತ್ಸವ ಯಶಸ್ವಿಯಾಗಿ ನಡೆಯುವುದಕ್ಕೆ ಪೂರಕವಾಗಿ ಶಾಸಕರು ಮುತುವರ್ಜಿ ವಹಿಸಿ ಸರ್ಕಾರದಿಂದ ಅಗತ್ಯ ಅನುದಾನವನ್ನು ಒದಗಿಸಿದ್ದಾರೆ. ಹೀಗಿದ್ದೂ ದಸರಾ ಕಾರ್ಯಕ್ರಮಗಳ ವ್ಯವಸ್ಥಿತ ಆಯೋಜನೆಗೆ ಅಗತ್ಯವಾದ ಪೂರ್ವ ಭಾವಿ…
ಮಡಿಕೇರಿ NEWS DESK ಸೆ.28 : ಇತ್ತೀಚೆಗೆ ಮಡಿಕೇರಿಗೆ ಭೇಟಿ ನೀಡಿದ್ದ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಅವರೊಂದಿಗೆ ಕೂರ್ಗ್ ಹೋಟೆಲ್ ರೆಸಾರ್ಟ್ಸ್ ಎಸೋಸಿಯೇಷನ್ ಮತ್ತು ಹೋಂಸ್ಟೇ ಪದಾಧಿಕಾರಿಗಳು ಭೇಟಿಯಾಗಿ ಕಾಫಿಯ ಬಗ್ಗೆ ಚರ್ಚಿಸಿದರು. ನಗರದ ಹೋಟೆಲ್ ವ್ಯಾಲ್ಯೂ ಸಭಾಂಗಣದಲ್ಲಿ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ಹಾಗೂ ಕಾಫಿ ಮಂಡಳಿಯ ಉಪ ನಿರ್ದೇಶಕ ಚಂದ್ರಶೇಖರ್ ಅವರೊಂದಿಗೆ ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕಾರ್ಯಪ್ಪ ಮತ್ತು ಹೋಂಸ್ಟೇ ಅಸೋಸಿಯೇಷನ್ ಜಿಲ್ಲಾಧ್ಯ ಕ್ಷೆ ಮೋಂತಿ ಗಣೇಶ್ ಇವರ ಸಮ್ಮುಖದಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ಅವರು ಕೊಡಗಿನ ಹಾಗೂ ಭಾರತದ ಕಾಫಿಯನ್ನು ಪುನಶ್ಚೇತನ ಮತ್ತು ಉತ್ತಮ ಗುಣಮಟ್ಟದ ಆಯ್ಕೆಯ ಬಗ್ಗೆ ವಿಶ್ವ ಮಟ್ಟದಲ್ಲಿ ಪ್ರಖ್ಯಾತಿ ಪಡಿಸಲು ಯಾವ ರೀತಿಯಲ್ಲಿ ಕ್ರಮವಹಿಸಬೇಕು ಎಂಬುದರ ಕುರಿತು ವಿವರಿಸಿದ ರು. ಕೊಡಗಿನ ಕಾಫಿಯನ್ನು ಉತ್ಕೃಷ್ಟ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಹಾಗೂ ಗುಣಮಟ್ಟ ಕಾಪಾಡುವ ವಿಜಯಗಳ ಬಗ್ಗೆ ಕಾಫಿ…
ಮಡಿಕೇರಿ NEWS DESK ಸೆ.28 : ಪ್ರವಾಸಿಗರ ದಟ್ಟಣೆಯ ಹಿನ್ನೆಲೆಯಲ್ಲಿ ಮಡಿಕೇರಿ ಸಮೀಪದ ಅಬ್ಬಿಫಾಲ್ಸ್ನಲ್ಲಿ ಹಸಿ ಕಸ ಮತ್ತು ಒಣ ಕಸದ ಪ್ರತ್ಯೇಕ ವಿಂಗಡಣೆಯ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿ ಸಯ್ಯದ್ ಖಾಜಾ ಮೊಹಿದ್ದೀನ್ ತಿಳಿಸಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಜಿಲ್ಲಾ ವರ್ತಕರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಾಲಿನ್ಯ ನಿಯಂತ್ರಣ ಸಂಬಂಧ ನಡೆದ ಚರ್ಚೆಯಲ್ಲಿ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಪರವಾಗಿ ವಿಚಾರ ಮಂಡಿಸಿದ ಜಿಲ್ಲಾ ಚೇಂಬರ್ನ ಮಾಜಿ ಅಧ್ಯಕ್ಷ ಜಿ. ಚಿದ್ವಿಲಾಸ್ ಅವರು, ಜಿಲ್ಲೆಯಲ್ಲಿ ಒಟ್ಟಾರೆ ಅವೈಜ್ಞಾನಿಕವಾಗಿ ಕಸ ಸಂಗ್ರಹಾತಿ ನಡೆಯುತ್ತಿದೆ ಎಂದು ಹೇಳಿದರು. ಪ್ರವಾಸಿಗರಿಗೆ ಕಸವನ್ನು ಹಾಕಲು ಸೂಕ್ತ ವ್ಯವಸ್ಥೆ ಇಲ್ಲದ್ದರಿಂದ ರಸ್ತೆ ಬದಿಯಲ್ಲಿಯೇ ಕಸದ ಬ್ಯಾಗ್ಗಳನ್ನು ಎಸೆದು ಹೋಗುತ್ತಿದ್ದು ಈ ಹಿಂದೆ ಅಲ್ಲಲ್ಲೇ ಕಸದ ಬುಟ್ಟಿಗಳನಿಟ್ಟು ಅವುಗಳಿಗೆ ಕಸವನ್ನು ಹಾಕುವ ವ್ಯವಸ್ಥೆ ಇತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಆ ವ್ಯವಸ್ಥೆಯನ್ನು ತೆಗೆದುಹಾಕಿದ್ದರಿಂದ ಅತ್ಯಂತ ಅವೈಜ್ಞಾನಿಕವಾಗಿ ರಸ್ತೆ…
ಮೈಸೂರು NEWS DESK ಸೆ.27 : ಮೈಸೂರು ದಸರಾ ಮಹೋತ್ಸವ -2025 ರ ಅಂಗವಾಗಿ ಪಿ. ಕಾಳಿಂಗರಾವ್ ಸಭಾಂಗಣ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದ *ರಾಜ್ಯಮಟ್ಟದ ದಸರಾ ಯೋಗಾಸನ* ಸ್ಪರ್ಧೆಯಲ್ಲಿ ವಿಶೇಷ ಚೇತನರ ವಿಭಾಗದಲ್ಲಿ ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿ ಸುಮೇಶ್ ಕೆ.ಪಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಯೋಗ ಶಿಕ್ಷಕರಾಗಿರುವ ಶಿವರಾಜ್ ಎಸ್.ಸಿ ಅವರು ಸುಮೇಶ್ ಗೆ ತರಬೇತಿ ನೀಡಿದ್ದಾರೆ. ಸುಮೇಶ್ ಚಿನ್ನದ ಪದಕ, ನಗದು ಬಹುಮಾನ ಮತ್ತು ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಇವರು ಸಿದ್ದಾಪುರ ಗುಹ್ಯ ಗ್ರಾಮದ ನಿವಾಸಿ ಪ್ರೇಮಾ ನಂದ ಕೆ.ಸಿ ಹಾಗೂ ಮೀನಾಕ್ಷಿ ಅವರ ಪುತ್ರ.
ಮಡಿಕೇರಿ NEWS DESK ಸೆ.28 : ಕಳೆದ 25 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಅತಿಹೆಚ್ಚು ಮಳೆಯಾಗುವ ಕೊಡಗು ಜಿಲ್ಲೆಯಲ್ಲಿ ಸರ್ವಋತು ರಸ್ತೆಗಳನ್ನು ನಿರ್ಮಿಸಲಾಗದ ಬಿಜೆಪಿ ಮಂದಿ ಇಂದು ಶಾಸಕದ್ವಯರ ಜನಪ್ರಿಯತೆಯನ್ನು ಸಹಿಸದೆ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಬಗರ್ ಹುಕುಂ ಸಮಿತಿಯ ಸದಸ್ಯ ಜೆ.ಎಲ್.ಜನಾರ್ಧನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ 25 ವರ್ಷಗಳಿಂದ ಅವೈಜ್ಞಾನಿಕ ರೂಪದ ಮತ್ತು ಕಳಪೆ ಗುಣಮಟ್ಟದ ಕಾಮಗಾರಿಗಳನ್ನು ಮಾಡಿರುವುದೇ ಇಂದು ಜಿಲ್ಲೆಯ ರಸ್ತೆಗಳು ಇಷ್ಟೊಂದು ಹದಗೆಡಲು ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ಜನ ನಿರಂತರವಾಗಿ ಅಧಿಕಾರವನ್ನು ನೀಡಿದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಕಾರಣ ಈ ಬಾರಿ ಇಬ್ಬರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿದ್ದಾರೆ. ಚುನಾವಣೆ ಸಂದರ್ಭ ನೀಡಿದ ಭರವಸೆಯಂತೆ ಶಾಸಕದ್ವಯರು ಅಭಿವೃದ್ಧಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಗ್ರಾಮೀಣ ರಸ್ತೆ, ಸೇತುವೆಗಳು ಅಭಿವೃದ್ಧಿ ಹೊಂದುತ್ತಿವೆ, ಬಡವರ ನಿವೇಶನ, ಮನೆಗಳಿಗೆ ಹಕ್ಕುಪತ್ರ ದೊರೆಯುತ್ತಿದೆ. ಕ್ರೀಡಾಂಗಣಗಳು ಅಭಿವೃದ್ಧಿಯಾಗುತ್ತಿವೆ, ಅರ್ಧದಲ್ಲೇ ನಿಂತಿದ್ದ…
ಮಡಿಕೇರಿ NEWS DESK ಸೆ.28 : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮರಂದೋಡ ಯವಕಪಾಡಿ ನಾಲಡಿ ಗೌಡ ಸಮಾಜದ ಕಾರ್ಯದರ್ಶಿ ಚಂಡೀರ ರೋಷನ್ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ನಡೆಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು…
ಮಡಿಕೇರಿ NEWS DESK ಸೆ.28 : ಇತರರನ್ನು ಕೊಡವ ಗುಂಪುಗಳನ್ನಾಗಿ ಪರಿವರ್ತಿಸಲು ಅಥವಾ ಮತಾಂತರಿಸಲು ಅಥವಾ ಧರ್ಮದೀಕ್ಷೆ ನೀಡಲು ‘ಕೊಡವಯಿಸಂ’ ಒಂದು ಮಿಷನರಿ ಧರ್ಮವಲ್ಲ. ಈ ವಿಚಾರದಲ್ಲಿ ಯಾರೂ ಮೂರ್ಖತನ ಪ್ರದರ್ಶಿಸಬಾರದು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಾತಿ ಜನಗಣತಿಯ ಸಂದರ್ಭ ಧರ್ಮ, ಜಾತಿ ಮತ್ತು ಭಾಷೆ ಈ ಮೂರೂ ಕಾಲಂಗಳಲ್ಲಿ ‘ಕೊಡವ’ ಎಂದು ಮಾತ್ರ ನಮೂದಿಸುವಂತೆ ಕೊಡವರಿಗೆ ಮತ್ತೊಮ್ಮೆ ಕರೆ ನೀಡುವುದಾಗಿ ತಿಳಿಸಿದ್ದಾರೆ. ಸರಕಾರಿ ಜಾತಿ ಜನಗಣತಿಯಲ್ಲಿ ಮೂರು ನಿಗಧಿತ ಕಾಲಂಗಳಲ್ಲಿ ನಮ್ಮನ್ನು ಕೊಡವ ಎಂದು ನೋಂದಾಯಿಸುವ ಮೂಲಕ ದಾಖಲೀರಣಕ್ಕಾಗಿ ಪ್ರತಿಪಾದಿಸುವುದು ಮತ್ತು ಪ್ರಚಾರ ಮಾಡುವುದು ನಮ್ಮ ಕಾನೂನುಬದ್ಧ ಕಾಳಜಿ ಹಾಗೂ ಹಕ್ಕಾಗಿದೆ. ಆದರೆ ಕೊಡವ ಕಾಲಂಗಳಲ್ಲಿ ಕೊಡವರಲ್ಲದವರ ಪ್ರವೇಶವನ್ನು ಪ್ರತಿಪಾದಿಸುವ ಹಕ್ಕು ನಮಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡವರು ಒಂದೇ ಜನಾಂಗೀಯ, ಆದಿಮಸಂಜಾತ ಆನಿಮಿಸ್ಟಿಕ್ ಸಮುದಾಯದವರಾಗಿದ್ದು, ಇವರು ಕೊಡವಲ್ಯಾಂಡ್ಗೆ ಮಾತ್ರ ಸೀಮಿತವಾಗಿದ್ದಾರೆ. ಕೊಡವಲ್ಯಾಂಡ್ ಎಂದು ಕರೆಯಲ್ಪಡುವ ಕೊಡವರ…
ಮಡಿಕೇರಿ NEWS DESK ಸೆ.27 : ಶ್ರೀ ಓಂಕಾರೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನೂತನ ಆಡಳಿತ ಮಂಡಳಿ ಪ್ರಸಕ್ತ ಸಾಲಿನ ಮಾರ್ಚ್ನಲ್ಲಿ ರಚನೆಯಾಯಿತು. ಆ ಬಳಿಕ ದೇವಸ್ಥಾನದ ಸ್ವತ್ತುಗಳ ಬಗ್ಗೆ ಪಾರದರ್ಶಕತೆಯನ್ನು ಕಂಡುಕೊಳ್ಳ್ಳುವ ಸಲುವಾಗಿ ಸಮಿತಿಯ ವ್ಯಾಪ್ತಿಗೆ ಒಳಪಡುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಕೋಟೆ ಶ್ರೀ ಮಹಾಗಣಪತಿ ದೇವಾಲಯಗಳಲ್ಲಿನ ಚಿನ್ನ, ಬೆಳ್ಳಿ ಮತ್ತು ಇತರೆ ಆಭರಣಗಳ ಮೌಲ್ಯಮಾಪನವನ್ನು ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಿತಿಯ ಸದಸ್ಯರು, ಅರ್ಚಕ ವೃಂದ, ದೇವಾಲಯ ಸಿಬ್ಬಂದಿ, ಆರಕ್ಷಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ವಿಡಿಯೋ ಚಿತ್ರೀಕರಣದೊಂದಿಗೆ ಇದೇ ಸಾಲಿನ ಜೂ.11 ರಂದು ಮೌಲ್ಯಮಾಪನ ನಡೆಸಲಾಯಿತೆಂದು ವಿವರಿಸಿದರು. ಮೌಲ್ಯಮಾಪನದಂತೆ ಶ್ರೀ ಓಂಕಾರೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ 22 ಗ್ರಾಂ 100 ಮಿಲಿ ಗ್ರಾಂ ಚಿನ್ನ, 83 ಕೆ.ಜಿ 472 ಗ್ರಾಂ ಬೆಳ್ಳಿ ಆಭರಣಗಳು, 40 ಕೆ.ಜಿ. 810 ಗ್ರಾಂ…






