ಮಡಿಕೇರಿ ನ.6 NEWS DESK : ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯಕ್ಕೆ ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯದ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.7 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಸತ್ಯಾಗ್ರಹ ನಡೆಸಿ ಸಿಎನ್ಸಿ ಬೇಡಿಕೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯಲಾಗುವುದು. ಕೊಡವರ ಸಾಂಪ್ರದಾಯಿಕ ಗನ್ (ತೋಕ್) ವಿನಾಯಿತಿಯನ್ನು ಸಂವಿಧಾನದ 25 ಮತ್ತು 26ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಬೇಕು. ಕೊಡವರಿಗೆ ಎಸ್ಟಿ ಟ್ಯಾಗ್ ನೀಡಬೇಕು, ಕೊಡವರ ರಾಜಕೀಯ ಸಬಲೀಕರಣಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಮತ್ತಿತರ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಲೇಖಕ: admin
ಮಡಿಕೇರಿ ನ.6 NEWS DESK : ವಿರಾಜಪೇಟೆಯ ಬಾಳುಗೋಡು ಕೊಡವ ಸಮಾಜದಲ್ಲಿ ಆಯೋಜನೆಗೊಂಡ, ಅಂತರ ಕೊಡವ ಸಮಾಜ ಹಾಕಿ ಕ್ರೀಡಾ ಮತ್ತು ವಿವಿಧ ಸಾಂಸ್ಕೃತಿಕ ಪೈಪೋಟಿ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ವಿಶೇಷವಾಗಿ ಕೋವಿಯಲ್ಲಿ ಗುರಿಗೆ ತಾಗಿಸುವ ಸ್ಪರ್ಧೆ ಯಲ್ಲಿ ಶಾಸಕರು ಭಾಗಿಯಾಗಿ ಬಂದೂಕಿನಿಂದ ಗುಂಡು ಹಾರಿಸಿ ಗುರಿಗೆ ತಾಗಿಸಿ ಎಲ್ಲರ ಗಮನ ಸೆಳೆದರು. ಈ ಕಾರ್ಯಕ್ರಮದಲ್ಲಿ, ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್, ರಾಜ್ಯ ಕ್ರೀಡಾ ಪ್ರಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬಾಳುಗೋಡು ಕೊಡವ ಸಮಾಜದ ಅಧ್ಯಕ್ಷರು ವಿಷ್ಣು ಕಾರ್ಯಪ್ಪ, ಎಲ್ಲಾ ಕೊಡವ ಸಮಾಜದ ಅಧ್ಯಕ್ಷರುಗಳು ಪ್ರಮುಖರು ಹಾಗೂ ಆಹ್ವಾನಿತ ಅತಿಥಿ ಗಣ್ಯರು ಉಪಸ್ಥಿತರಿದ್ದರು. ತಾವು ಶಾಸಕರಾಗಿ ಆಯ್ಕೆಯಾಗುವ ಮೊದಲೇ ಬಾಳುಗೋಡು ಕೊಡವ ಸಮಾಜದವರ ಮನವಿ ಮೇರೆಗೆ ವೈಯುಕ್ತಿಕವಾಗಿ ಅನೇಕ ಬಾರಿ ಸಮಾಜದ ಅಭಿವೃದ್ಧಿಗೆ ಸಹಾಯ ಮಾಡಿದ್ದರು. ಶಾಸಕರಾಗಿ ಆಯ್ಕೆಯಾದ…
ಮಡಿಕೇರಿ ನ.6 NEWS DESK : ಕುಶಾಲನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಧಾತ್ರಿ ಹೋಮ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಅವರ ನೇತೃತ್ವದಲ್ಲಿ ಜರುಗಿದ ಪೂಜಾ ಕೈಂಕರ್ಯಗಳಲ್ಲಿ ಕುಶಾಲನಗರ ವ್ಯಾಪ್ತಿಯ ಆರ್ಯ ವೈಶ್ಯ ಸಮುದಾಯದ ನೂರಾರು ಮಂದಿ ಪಾಲ್ಗೊಂಡು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಕಾರ್ತಿಕ ಮಾಸದಲ್ಲಿ ಪವಿತ್ರವಾದ ನಿಂಬೆ ಮತ್ತು ತುಳಸಿಗೆ ವಿವಾಹದ ದೈವಿಕ ಕೈಂಕರ್ಯದ ಧಾತ್ರಿ ಹೋಮಹವನಾದಿಗಳನ್ನು ಅರ್ಚಕರಾದ ಗಿರೀಶ್ ಭಟ್, ಯೋಗೇಶ್ ಭಟ್, ಕೃಷ್ಣಮೂರ್ತಿ ಭಟ್ ನಡೆಸಿಕೊಟ್ಟರು. ಇದೇ ಸಂದರ್ಭ ತುಳಸಿ ಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು. ಕುಶಾಲನಗರ ಆರ್ಯ ವೈಶ್ಯ ಮಂಡಳಿ, ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್, ಆರ್ಯ ವೈಶ್ಯ ಮಹಿಳಾ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ, ಪ್ರಮುಖರಾದ ಬಿ.ಎಲ್.ಸತ್ಯನಾರಾಯಣ, ಬಿ.ಆರ್.ನಟರಾಜ್, ಪಿ.ಎಸ್.ಪ್ರಶಾಂತ್, ಎಸ್.ಎನ್.ನಾಗೇಂದ್ರ, ಬಿ.ಎಲ್.ಅಶೋಕ್ ಕುಮಾರ್, ಕೆ.ಜೆ.ಸತೀಶ್, ಬಿ.ಎನ್.ವಸಂತ್ ಕುಮಾರ್, ಪಿ.ಪಿ.ಸತ್ಯನಾರಾಯಣ, ಕೆ.ಜೆ.ನಾಗೇಂದ್ರ, ಬಿ.ಎಲ್.ಉದಯಕುಮಾರ್, ಮಹಿಳಾ ಮಂಡಳಿ ಅಧ್ಯಕ್ಷೆ ವಾಣಿ ಮಹೇಶ್…
ಕಾರ್ಕಳ ನ.6 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ ಕನ್ನಡ ಸಾಹಿತ್ಯ ಸಂಘವನ್ನು ರಚಿಸಲಾಯಿತು. ಕನ್ನಡ ಸಾಹಿತ್ಯ ಸಂಘದ ಉದ್ಘಾಟಿಸಿ, ಮಾತನಾಡಿದ ವಿದ್ವಾಂಸರು, ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಪಾದೆಕಲ್ಲು ವಿಷ್ಣು ಭಟ್ಟರು “ಕನ್ನಡವನ್ನು ಉಳಿಸಿ ಬೆಳೆಸಬೇಕಾದ್ದು ಕನ್ನಡಿಗರಾದ ನಮ್ಮ ಕರ್ತವ್ಯ. ಸಾಹಿತ್ಯದ ಓದುವಿಕೆ ಮತ್ತು ಬರೆಯುವಿಕೆ ನಮ್ಮ ಅನುಭವಗಳನ್ನು ಹೆಚ್ಚಿಸುವ ಪ್ರಕ್ರಿಯೆ. ಆದ್ದರಿಂದ ಸಾಹಿತ್ಯವನ್ನು ಓದುವ ಆಸಕ್ತಿ ಬೆಳೆಸಿಕೊಳ್ಳಿ. ಭಾಷೆಯ ಬಗೆಗೆ ಹೆಚ್ಚಿನ ಗಮನ ಕೊಡಿ. ವಾಕ್ಯಗಳ ರಚನೆಯಲ್ಲಿ ತೊಡಗಿ, ಬಳಿಕ ಸಾಹಿತ್ಯ ರಚನೆಗೂ ಮುಂದಾಗಬೇಕು ಎನ್ನುತ್ತಾ ಕನ್ನಡ ಸಾಹಿತ್ಯದ ಕಾಲಘಟ್ಟಗಳು, ನಿಘಂಟುಗಳು, ಗದ್ಯ – ಪದ್ಯ ಕವಿಗಳ ವಿವರ, ಕವಿರಾಜಮಾರ್ಗ, ತಾಳೆಗರಿಗಳ ಉಲ್ಲೇಖದೊಂದಿಗೆ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಕುರಿತು ವಿವರಿಸಿದರು. ಕ್ರಿಯೇಟಿವ್ ಕನ್ನಡ ಸಾಹಿತ್ಯ ಸಂಘದ ಮೂಲಕ ಇನ್ನಷ್ಟು ಸೃಜನಾತ್ಮಕ ಸಾಹಿತ್ಯ ಕೃತಿಗಳು ಮೂಡಿ ಬರಲಿ” ಎಂದು ಹಾರೈಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ…
ಕುಶಾಲನಗರ ನ.6 NEWS DESK : 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣ ಮತ್ತು ಬಸವಾದಿ ಶರಣರದು ನಡೆ- ನುಡಿ ಸಿದ್ಧಾಂತ. ನುಡಿದಂತೆ ನಡೆದು ತೋರಿದ ಸಾತ್ವಿಕ ಧೀಮಂತರು, ಕಾಯಕ ಯೋಗಿಗಳು. ಅವರದು ದಯಾಮೂಲವಾದ ಧರ್ಮವಾಗಿತ್ತು ಎಂದು ಕೊಡ್ಲಿಪೇಟೆ ಕಲ್ಮಠದ ಮಹಾಂತ ಸ್ವಾಮೀಜಿ ಹೇಳಿದರು. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ ಹಾಗೂ ತೊರೆನೂರು ವಿರಕ್ತ ಮಠದ ವತಿಯಿಂದ ತೊರೆನೂರು ವಿರಕ್ತ ಮಠದಲ್ಲಿ ಬುಧವಾರ ಸಂಜೆ ನಡೆದ ಮಾಸಿಕ ಹುಣ್ಣಿಮೆ ಪೂಜಾ ಮಹೋತ್ಸವ ಹಾಗೂ ಶಿವಾನುಭವ ಗೋಷ್ಠಿಯಲ್ಲಿ 12ನೇ ಶತಮಾನದ ಶರಣರ ಸಾಮಾಜಿಕ ಮೌಲ್ಯಗಳು ಕುರಿತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದರು. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸುವ ಮೂಲಕ ಅವರನ್ನು ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಇದೆ. ಇದರಲ್ಲಿ ತಾಯಂದಿರ ಪಾತ್ರ ಪ್ರಮುಖವಾಗಿದೆ ಎಂದರು. ಅಂದು ಶರಣರು ಪೂಜೆಗಿಂತಲೂ ಹೆಚ್ಚಿನ ಮಹತ್ವವನ್ನು ದುಡಿಮೆಗೆ ಕೊಟ್ಟಿದ್ದರು. ಕಾಯಕ ಅವರ ಪಂಚಪ್ರಾಣವಾಗಿತ್ತು.…
ಮಡಿಕೇರಿ ನ.6 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಕುಶಾಲನಗರ ತಾಲೂಕಿನ ಹೇರೂರು ಗ್ರಾಮದಲ್ಲಿ ಬ್ಯಾಂಕ್ ನ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್ಥಿಕ ಸಮಲೋಚರಕ ನಬಿ ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ಹಾಗೂ ವಾರ್ಷಿಕವಾಗಿ 436 ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000 ರೂ ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ…
ನಾಪೋಕ್ಲು ನ.6 NEWS DESK : 2019-2022 ಅವಧಿಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ತಂಡ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಭೇಟಿ ಮಾಡಿದರು. ಚಿಕ್ಕಮಗಳೂರಿನ ಅವರ ಸ್ವಗೃಹದಲ್ಲಿ ಭೇಟಿಯಾದ ತಂಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವರಿಗೆ ಅಕಾಡೆಮಿ ಅವಧಿಯಲ್ಲಿ ಹಮ್ಮಿಕೊಂಡಿದ್ದ ಮಹತ್ತರ ಯೋಜನೆಗಳಾದ ಅರೆಭಾಷೆ ಪದಕೋಶ, ಅರೆಭಾಷೆ ವಿಶ್ವಕೋಶ, ಅರೆಭಾಷೆ ವಸ್ತುಕೋಶ, ಸಾಹೇಬ್ರು ಬಂದವೆ ನಾಟಕ ತಿರುಗಾಟ ಹಾಗೂ ಗ್ರಾಮ ವಾಸ್ತವ್ಯದ ಕಲಾಚಿತ್ರ ಮುಂತಾದ ಭಾಷೆ ಮತ್ತು ಸಂಸ್ಕೃತಿ ಅಭಿವೃದ್ಧಿ ಬಗೆಗೆ ಕಾಳಜಿ ವಹಿಸಿ ಮಾಡಿರುವ ಪ್ರಾದೇಶಿಕ ಮತ್ತು ಅರೆಭಾಷೆ ಸಮುದಾಯದ ಮೈಲಿಗಲ್ಲು ಹಾಗೂ ಹೆಮ್ಮೆಯ ಕೃತಿಗಳನ್ನು ನೀಡಿದರು. ಅಕಾಡೆಮಿಯ ಮಾಜಿ ಸದಸ್ಯರಾದ ಜಾನಕಿ ಬೆಳಿಯಪ್ಪ ಗೌಡ, ಪ್ರೇಮಾ ರಾಘವಯ್ಯ ಚೊಕ್ಕಾಡಿ, ಧನಂಜಯ ಅಗೋಳಿಕಜೆ, ಸ್ಮಿತಾ ಅಮೃತರಾಜ್, ದಂಬೆಕೋಡಿ ಆನಂದ ಗೌಡ, ಡಾ.ದಯಾನಂದ ಕೂಡಕಂಡಿ, ಕುಸುಮಾಧರ ಎ.ಟಿ., ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ ಮೊಂಟಡ್ಕ, ಡಾ.ವಿಶ್ವನಾಥ ಬದಿಕಾನ, ಡಾ.ಪುರುಷೋತ್ತಮ…
ಮಡಿಕೇರಿ ನ.6 NEWS DESK : ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ 49ನೇ ವರ್ಷದ ದಸರಾ ಮಹೋತ್ಸವದ ಶೋಭಾಯಾತ್ರೆಯಲ್ಲಿದ್ದ ಮೂರ್ತಿಗಳ ಶಾಂತಿಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ನಗರದ ಶ್ರೀ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ಸಂಜೆ ಶಾಂತಿಪೂಜೆ, ರಂಗಪೂಜೆ ಮತ್ತು ದೀಪಾರಾಧನೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜೆ ಪ್ರಾರ್ಥನೆ ನೆರವೇರಿಸಿದರು. ಇದೇ ಸಂದರ್ಭ ದಶ ದೇವಾಲಯದ ಎಲ್ಲಾ ಅಧ್ಯಕ್ಷರುಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯು ಮುಂದಿನ ವರ್ಷ 50ನೇ ವರ್ಷದ ದಸರಾ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು, ಸರ್ವರು ಸಹಕಾರ ನೀಡಬೇಕೆಂದು ಸಮಿತಿಯ ಅಧ್ಯಕ್ಷ ವಿಘ್ನೇಶ್ ಸಿ.ಯು ಮನವಿ ಮಾಡಿದರು.
ನಾಪೋಕ್ಲು ನ.6 NEWS DESK : ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ 171ನೇ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಓಣಂ ಆಚರಣೆಯನ್ನು ನ.23 ರಂದು ನಾಪೋಕ್ಲುವಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆಚರಣೆ ಸಮಿತಿ ಅಧ್ಯಕ್ಷ ಶ್ರೀಧರ್ ಹೇಳಿದರು. ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಜಯಂತಿ ಹಾಗೂ ಓಣಂ ಆಚರಣೆಯ ಪ್ರಯುಕ್ತ ಕ್ರಿಕೆಟ್, ಹಗ್ಗಜಗ್ಗಾಟ ಹಾಗೂ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ನ.23 ರಂದು ಮಾರುಕಟ್ಟೆ ಆವರಣದಿಂದ ಬೆಳಿಗ್ಗೆ 10 ಗಂಟೆಗೆ ಗುರುವಿನ ಅಲಂಕೃತ ಮಂಟಪವನ್ನು ಚಂಡೆಮೇಳಗಳೊಂದಿಗೆ ಮೆರವಣಿಗೆ ಸಾಗಿ ಶಾಲಾ ಮೈದಾನಕ್ಕೆ ಬರಲಿದೆ ಎಂದರು. ನ.19 ರಂದು ಬೆಳಿಗ್ಗೆ 9.30 ಗಂಟೆಗೆ ಕ್ರೀಡಾಕೂಟವನ್ನು ಎಸ್ಎನ್ಡಿಪಿ ಕೊಡಗು ಯೂನಿಯನ್ ಸಿದ್ದಾಪುರ ಘಟಕದ ಅಧ್ಯಕ್ಷ ವಿ.ಕೆ.ಲೋಕೇಶ್ ಉದ್ಘಾಟಿಸುವರು. ನ.23 ರಂದು ಬೆಳಿಗ್ಗೆ 10 ಗಂಟೆಗೆ ಮೆರವಣಿಗೆಯನ್ನು ಸಂಘಟನಾ ಕಾರ್ಯದರ್ಶಿ ಹಿತೇಶ್ (ಚಿನ್ನ) ಉದ್ಘಾಟಿಸಲಿದ್ದಾರೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ…
ನಾಪೋಕ್ಲು ನ.6 NEWS DESK : ಪಿಪಿ ಫೌಂಡೇಶನ್ ನೇತೃತ್ವದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್, ಹಿಂದೂ ಮಲೆಯಾಳಿ ಸಂಘ, ಆಟೋ ಚಾಲಕರ ಸಂಘ, ಎಸ್ಎನ್ಡಿಪಿ, ಟೌನ್ ಮುಸ್ಲಿಂ ಜಮಾತ್ ಸಹಯೋಗದೊಂದಿಗೆ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಪಿಪಿ ಫೌಂಡೇಶನ್ ಅಧ್ಯಕ್ಷರಾದ ಎಮ್ ಎಚ್ ಅಬ್ದುಲ್ಲ ಅವರು ಅಧ್ಯಕ್ಷತೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ತ ನಿಧಿ ವೈದ್ಯಾಧಿಕಾರಿ ಡಾ.ಕರುಂಬಯ್ಯ ಮಾತನಾಡಿ, ರಕ್ತದಾನ ಶ್ರೇಷ್ಠದಾನ ಇದರಿಂದ ಹಲವರ ಜೀವ ಉಳಿಸಬಹುದು. ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ರಕ್ತದಾನ ಮಾಡಬಹುದಾಗಿದೆ ಎಂದರು. ರಕ್ತದಾನದ ಬಗ್ಗೆ ಕೆಲವು ತಪ್ಪು ಅಭಿಪ್ರಾಯಗಳಿದ್ದು, ಇದು ಸರಿಯಲ್ಲ. ಒಂದು ಬಾರಿ ಶಿಬಿರಗಳನ್ನು ಏರ್ಪಡಿಸಿ ಹೆಚ್ಚು ರಕ್ತ ಸಂಗ್ರಹಿಸುವ ಬದಲು ರಕ್ತದ ಬೇಡಿಕೆಗೆ ಅನುಗುಣವಾಗಿ ತಿಂಗಳಿಗೆ ಒಂದು ಸಾರಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಒಳ್ಳೆಯದು ಎಂದರು. ರಕ್ತದಾನ ಶಿಬಿರಕ್ಕೆ ಸಂಘ ಸಂಸ್ಥೆಗಳು ನೆರವು ನೀಡಿವೆ. ಇಂತಹ ಸಂಘ ಸಂಸ್ಥೆಗಳಿಂದ ಪ್ರೇರಣೆಯಾಗಿ ಮತ್ತಷ್ಟು ಸಂಘ ಸಂಸ್ಥೆಗಳಿಂದ…






