ಲೇಖಕ: admin

ಬೆಂಗಳೂರು ನ.6 NEWS DESK : ಸ್ಯಾಂಡಲ್‌ವುಡ್‌ನಲ್ಲಿ ಪೋಷಕ ನಟ ಹಾಗೂ ಖಳನಟರಾಗಿ ಖ್ಯಾತಿ ಪಡೆದಿದ್ದ ಹರೀಶ್ ರಾಯ್ ಇಂದು (ಗುರುವಾರ) ನಿಧನರಾಗಿದ್ದಾರೆ. ಅವರು ಬಹು ಕಾಲದಿಂದ ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌  ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಹೆಂಡತಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ತಮಿಳಿನಲ್ಲೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂಡರ್​ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್​ವುಡ್​ನ ಟಾಪ್ ಸಿನಿಮಾ ಕೆಜಿಎಫ್​​ ಚಾಪ್ಟರ್-1 ಹಾಗೂ ಕೆಜಿಎಫ್​​ ಚಾಪ್ಟರ್-2 ರಲ್ಲಿ ಅಭಿನಯಿಸಿದ್ದಾರೆ.

Read More

ಮಡಿಕೇರಿ ನ.6 NEWS DESK : ವಿರಾಜಪೇಟೆ ಕ್ಷೇತ್ರದ ಸಾರಿಗೆ ಸಮಸ್ಯೆಗಳು ಹಾಗೂ ಕೊಡಗು ಜಿಲ್ಲಾ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಾರಿಗೆ ಸಚಿವರ ಗಮನ ಸೆಳೆದರು. ಕೊಡಗಿನಲ್ಲಿ ಚಲಿಸುವ ಎಲ್ಲಾ ಆಟೋರಿಕ್ಷಾ ಗಳಿಗೆ ಜಿಲ್ಲಾ ಪರವಾನಿಗೆ ಅನುಮತಿ ನೀಡಬೇಕು. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಹಾಗೂ ಪೊನ್ನಂಪೇಟೆ ವಾಹನ ತಪಾಸಣೆ ಕ್ಯಾಂಪ್ ತೆರೆಯಲು ಹಾಗೂ ವಿರಾಜಪೇಟೆಯಲ್ಲಿ ಡಿಪೋ ಆರಂಭಿಸಲು ಮನವಿ ಸಲ್ಲಿಸಿದರು. ಈ ಬಗ್ಗೆ  ಸಚಿವರು ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಆಟೋ ಮಾಲೀಕರ ಮತ್ತು ಚಾಲಕರ ಸಂಘ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ನ.6 NEWS DESK : ತಿತಿಮತಿ ಸಮುದಾಯ ಭವನದಲ್ಲಿ ನಡೆದ  ದೇವರಪುರ ಹಾಗೂ ತಿತಿಮತಿ ಶಕ್ತಿಕೇಂದ್ರಗಳ ಕಾರ್ಯಕರ್ತರ ಸಭೆಯಲ್ಲಿ‌ ಸಂಸದ ಯದುವೀರ್ ಒಡೆಯರ್ ಅವರು ಪಾಲ್ಗೊಂಡರು. ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಉಪಾಧ್ಯಕ್ಷ ಅರುಣ್ ಭೀಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್, ನೆಲ್ಲೀರ ಚಲನ್, ವಿರಾಜಪೇಟೆ ಮಂಡಲ ಪ್ರ.ಕಾರ್ಯದರ್ಶಿಗಳಾದ ಅಜಿತ್ ಕರುಂಬಯ್ಯ, ಮುದ್ದಿಯಡ ಮಂಜು, ತಿತಿಮತಿ ಶಕ್ತಿ ಕೇಂದ್ರ ಅಧ್ಯಕ್ಷ ಅಪ್ಪಿ, ದೇವರಪುರ ಶಕ್ತಿ ಕೇಂದ್ರ ಅಧ್ಯಕ್ಷ ಮಂಜು ಭಾಗವಹಿಸಿದರು. ಈ ಸಂದರ್ಭ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

Read More

ಮಡಿಕೇರಿ NEWS DESK  ನ.5 : ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಸಂದೇಶಗಳನ್ನು ರವಾನಿಸಿರುವ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಗೌಡ ಸಮಾಜಗಳ ಒಕ್ಕೂಟ ದೂರು ದಾಖಲಿಸಿದೆ. ಕಳೆದ ಅ.31 ರಂದು ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಫೇಸ್‌ಬುಕ್ ಖಾತೆಯಲ್ಲಿ ‘ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಸ್ಮರಿಸುವ’ ಎಂಬ ಪೋಸ್ಟ್ನಲ್ಲಿ ಹಲವಾರು ಪರ ವಿರೋಧ ಚರ್ಚೆ ನಡೆದಿದೆ. ಈ ಪೋಸ್ಟ್ನಲ್ಲಿ ಅರೆಯಡ ರಾಜ ಎಂಬ ವ್ಯಕ್ತಿ ಕೊಡಗಿನ ಇತಿಹಾಸವನ್ನು ತಿರುಚಿ ಹಾಲೇರಿ ರಾಜ ವಂಶಸ್ಥರನ್ನು ಹೀನಾಯವಾಗಿ ನಿಂದಿಸಿ, ಅಪ್ಪಯ್ಯಗೌಡರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶಗಳನ್ನು ಹಾಕಿದ್ದಲ್ಲದೆ ಗೌಡ ಜನಾಂಗದವರನ್ನು ನಿಂದಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. ಈ ರೀತಿಯ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟಿರುವ ರಾಜ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹಾಗೂ…

Read More

ಮಡಿಕೇರಿ ನ.5 NEWS DESK : ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27 ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ ‘ಕೊಡವ’ ಎಂದು ಹೆಮ್ಮೆಯಿಂದ ಗುರುತಿಸಿಕೊಂಡಾಗ ಮಾತ್ರ ಸಂವಿಧಾನಬದ್ಧ ಹಕ್ಕನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಸಿಎನ್‍ಸಿ ವತಿಯಿಂದ ಬಿಟ್ಟಂಗಾಲದಲ್ಲಿ ನಡೆದ 18ನೇ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು 16ನೇ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು. ಮುಂದೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿರುವ ಈ ಜನಗಣತಿಯು ಕೊಡವರ ರಾಜಕೀಯ ಸಬಲೀಕರಣ, ಸ್ವಯಂ ನಿರ್ಧಾರದ ಹಕ್ಕು ಸ್ಥಾಪಿಸಲು ಮೆಟ್ಟಿಲಾಗಲಿದೆ. ಅಲ್ಲದೆ ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರಿಯಲು ಪೂರಕವಾಗಲಿದೆ ಎಂದು ತಿಳಿಸಿದರು. ಕೊಡವಲ್ಯಾಂಡ್ ಭೂ ರಾಜಕೀಯ…

Read More

ಮಡಿಕೇರಿ ನ.5 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮವನ್ನು ತ್ವರಿತವಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಇಂಧನ, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರವಾಸೋದ್ಯಮ, ಬೃಹತ್ ಮತ್ತು ಸಣ್ಣ ನೀರಾವರಿ, ಶಾಲಾ ಶಿಕ್ಷಣ, ಕಾರ್ಮಿಕ, ಲೋಕೋಪಯೋಗಿ, ಕೈಮಗ್ಗ ಮತ್ತು ಜವಳಿ, ಅರಣ್ಯ, ನಗರಾಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡೆ, ಆಯುಷ್, ಕೌಶಲ್ಯಾಭಿವೃದ್ಧಿ, ಪಂಚಾಯತ್ ರಾಜ್, ಕೈಗಾರಿಕೆ, ನಗರಾಭಿವೃದ್ಧಿ, ಪದವಿ ಪೂರ್ವ ಶಿಕ್ಷಣ, ಹೀಗೆ ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕಾಗಿ ಇಂತಿಷ್ಟು ಹಣ ಮೀಸಲಿರಿಸಿದ್ದು, ಆದಷ್ಟು…

Read More

ಮಡಿಕೇರಿ ನ.5 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾ ಸಮಿತಿಯ ಸಭೆಯು ನಗರದ ವ್ಯಾಲಿವ್ಯೂ ಹೊಟೇಲಿನ ಸಭಾಂಗಣದಲ್ಲಿ ನಡೆಯಿತು. ಅಸೋಸಿಯೇಷನ್‍ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಆಶ್ರಯದಲ್ಲಿ ನಡೆಯಲಿರುವ ಕ್ರಿಸ್ಮಸ್ ಗಾಯನ ಸ್ಪರ್ಧೆ ಬಗ್ಗೆ ಚರ್ಚಿಸಲಾಯಿತು. ವೈಯುಕ್ತಿಕ ಕಾರಣದಿಂದ ತೆರವಾಗಿದ್ದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸೋಮವಾರಪೇಟೆಯ ಒ.ಎಲ್.ವಿ ದೇವಾಲಯಕ್ಕೆ ಸೇರಿದ ಅಂತೋಣಿ ಡಿಸೋಜ ಅವರನ್ನು ಸಭೆಯಲ್ಲಿ ಸರ್ವನು ಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಅಸೋಸಿಯೇಷನ್ ಸದಸ್ಯರಾದ ಜೋಸೆಫ್, ರೋಡ್ರಿಗಸ್, ಜೂಡಿ ಡೇವಿಡ್ ವಾಜ್, ಜೇಮ್ಸ್ ಡಿಸೋಜ, ವಿ.ಎ.ಲಾರೆನ್ಸ್ ಹಾಜರಿದ್ದರು.

Read More

ಮಡಿಕೇರಿ ನ.5 NEWS DESK : ಮಹಿಷಾಸುರ ಮರ್ದಿನಿ ದೇವಾಲಯದ ಜೀರ್ಣೋದ್ಧಾರಕ್ಕೆ ಅನುದಾನ ಒದಗಿಸುವಂತೆ ದೇವಾಲಯದ ಸಮಿತಿ  ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ದೇವಾಲಯ ಸಮಿತಿ ಪ್ರಮುಖರು ಮಹಿಷಾಸುರ ಮರ್ದಿನಿ ದೇವಸ್ಥಾನ ತಾವೂರು ಭಾಗಮಂಡಲ ಕೊಡಗು ಜಿಲ್ಲೆಯಲ್ಲಿರುವ ದೇವಸ್ಥಾನವು ಅತ್ಯಂತ ಪುರಾತನ ದೇವಸ್ಥಾನ ವಾಗಿದ್ದು, ಇದೀಗ ಶೀತಲಗೊಂಡಿದೆ. ಜೀರ್ಣೋದ್ಧಾರ ಮಾಡಲು ಅಗತ್ಯವಿರುವುದರಿಂದ 50 ಲಕ್ಷ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಅನುದಾನ ಬಿಡುಗಡೆ ಮಾಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು. ನಿಯೋಗದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಕೋಳಿ ಬೈಲು ಸಿ ವೆಂಕಟೇಶ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕುದುಕುಳಿ ಸಿ.ಅಶ್ವಥ್ ಹಾಗೂ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ನ.5 NEWS DESK : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ಆಡಳಿತಾಧಿಕಾರಿ ಜೀವನ್ ಅವರ ಅಧ್ಯಕ್ಷತೆಯಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನಾ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಆನಂದ್. ಎನ್ ಅವರು ಮಾತನಾಡಿ ಸಾರ್ವಜನಿಕರಲ್ಲಿ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು. ನವೆಂಬರ್-24 ರಿಂದ ಡಿಸೆಂಬರ್ 09 ರವರೆಗೆ 14 ದಿನಗಳ ಕಾಲ “ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನಾ” ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯಿಂದ ಮನೆ ಮನೆಗೆ ಭೇಟಿ ನೀಡಿ ಚರ್ಮ ಮತ್ತು ನರಗಳ ತಪಾಸಣೆ ನಡೆಸಲಾಗುತ್ತದೆ, ಕುಷ್ಠರೋಗ ದೃಢಪಟ್ಟ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು. ಸಕಾಲಕ್ಕೆ ಚಿಕಿತ್ಸೆ ಪಡೆಯುವುದರಿಂದ ಅಂಗವೈಕಲ್ಯತೆ ತಡೆಗಟ್ಟಬಹುದು. ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ಹೆಚ್ಚು ಕುಷ್ಠರೋಗ ಪ್ರಕರಣ ಎಲ್ಲಿ ಪತ್ತೆಯಾಗಿದೆಯೋ ಆ 13 ಪ್ರಾಥಮಿಕ ಆರೋಗ್ಯ ಕೇಂದ್ರದ 18 ಗ್ರಾಮಗಳಲ್ಲಿ ಒಟ್ಟು 17,399 ಮನೆಗಳಿದ್ದು ಒಟ್ಟು…

Read More

ಮಡಿಕೇರಿ ನ.5 NEWS DESK : ಕೊಡಗು ಜಿಲ್ಲೆಯ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾಪ್ರತಿಭೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ಜಿಲ್ಲೆಯ ಪ್ರತಿಭಾವಂತ ಕಲಾವಿದರೂ ಸೇರಿದಂತೆ ಕಲಾಪ್ರದರ್ಶನಗಳಿಗೆ ಸೂಕ್ತ ಕಲಾಭವನದ ಕನಸು ಶೀಘ್ರ ಸಾಕಾರಗೊಳ್ಳಬೇಕು ಎಂದು ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ. ಅವರು ಕರೆ ನೀಡಿದ್ದಾರೆ.  ನಗರದ ಗಾಂಧಿ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿತ ಕಲಾಪ್ರತಿಭೋತ್ಸವದ ಎರಡನೇ ದಿನದ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗಿನಲ್ಲಿ ವರ್ಷದ 5-6 ತಿಂಗಳು ಧಾರಾಕಾರ ಮಳೆಯಿಂದಾಗಿ ಯಾವುದೇ ಸಾಂಸ್ಕೃತಿಕ ಚಟುವಟಿಕೆ ಕೈಗೊಳ್ಳಲು ಕಷ್ಟಸಾಧ್ಯವಾಗಿತ್ತು, ಹೀಗಿದ್ದರೂ ಜಿಲ್ಲೆಯಲ್ಲಿನ ಅನೇಕ ಉದಯೋನ್ಮುಖ ಕಲಾಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 8 ವರ್ಷಗಳ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾಪ್ರತಿಭೋತ್ಸವದಂತಹ ಕಾರ್ಯಕ್ರಮ ಮರು ಚಾಲನೆಗೊಂಡಿರುವುದು ಶ್ಲಾಘನೀಯ ಎಂದರು. ನೈಜ ಪ್ರತಿಭೆಗಳಿಗೆ ಕೊಡಗು ಎಂದೂ ನಿರಾಶೆ ಉಂಟು ಮಾಡುವುದಿಲ್ಲ. ಕಲಾಸಕ್ತ ಯುವಪೀಳಿಗೆ ಕಲಾಪ್ರತಿಭೋತ್ಸವದಂತಹ ಮತ್ತಷ್ಟು ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಂಡು ತಮ್ಮೊಳಗಿನ ಕಲಾ ಪ್ರತಿಭೆಗೆ…

Read More