ಮಡಿಕೇರಿ NEWS DESK ಸೆ.27 : ಕರ್ನಾಟಕ ರಾಜ್ಯ ಸರಕಾರದಿಂದ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮತ್ತು ಜಾತಿ ಜನಗಣತಿಯಲ್ಲಿ ಹಾಗೂ ಮುಂದೆ ಕೇಂದ್ರ ಸರಕಾರ ನಡೆಸುವ ಗಣತಿಯ ಸಂದರ್ಭ ಸರ್ವ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಚೇರಳ ಗೌಡ ಸಮಾಜದ ಅಧ್ಯಕ್ಷ ಐಯಂಡ್ರ ರಾಘವಯ್ಯ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ…
ಲೇಖಕ: admin
ಮಡಿಕೇರಿ ಸೆ.27 : ಪ್ರಸ್ತುತ ನಡೆಯುತ್ತಿರುವ ಮತ್ತು ಮುಂದೆ ನಡೆಯಲಿರುವ ಜಾತಿ ಜನಗಣತಿಯ ಸಂದರ್ಭ ಕೊಡಗಿನ ಸರ್ವ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಬೆಂಗಳೂರಿನ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಬೆಂಗಳೂರು ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ GOWDA (ಗೌಡ) ಎಂದು ನಮೂದಿಸಲು…
ಮಡಿಕೇರಿ NEWS DESK ಸೆ.27 : ರಾಜ್ಯ ಸರಕಾರದ ಮೂಲಕ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯಲ್ಲಿ ಅರೆಭಾಷೆ ಗೌಡರು ಜಾತಿಯನ್ನು GOWDA (ಗೌಡ) ಎಂದು ನಮೂದಿಸುವಂತೆ ಚೇರಂಬಾಣೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ ಗಣಪತಿ ಅವರು ರಾಜ್ಯ ಸರಕಾರ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ನಡೆಸುವ ಗಣತಿಯ ಸಂದರ್ಭ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ‘ಅರೆಭಾಷೆ ಗೌಡ’ ಹಾಗೂ ಮಾತೃಭಾಷೆ ಕಾಲಂನಲ್ಲಿ ‘ಅರೆಭಾಷೆ’ ಎಂದು ನಮೂದಿಸುವಂತೆ ಕೋರಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ…
ಮಡಿಕೇರಿ NEWS DESK ಸೆ.27 : ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ ವತಿಯಿಂದ ಇಂದು ನಡೆದ ಮಹಿಳಾ ದಸರಾ ಕಾರ್ಯಕ್ರಮದ ಛದ್ಮವೇಷ ಸ್ಪರ್ಧೆಯಲ್ಲಿ ಆಶಿಕಾ ಸುಂದರೇಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ದೇವಿಯ ವೇಷಧಾರಿಯಾಗಿ ಅವರು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಆಶಿಕಾ ಅವರು ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಅವರ ಪತ್ನಿ.
ಮಡಿಕೇರಿ NEWS DESK ಸೆ.27 : ಕರ್ನಾಟಕ ರಾಜ್ಯ ಸರಕಾರದ ಸಮಾಜಿಕ ಮತ್ತು ಅರ್ಥಿಕ ಗಣತಿ ಸಮೀಕ್ಷೆಯಲ್ಲಿ ಕೊಡವ ಭಾಷಿಕ 21 ಸಮುದಾಯದವರು ಧರ್ಮದ ಕಾಲಂನಲ್ಲಿ ಕೊಡವ, ಜಾತಿಯ ಕಾಲಂನಲ್ಲಿ ಕೊಡವ ಮತ್ತು ಉಪಜಾತಿಯ ಕಾಲಂನಲ್ಲಿ ತಮ್ಮ ತಮ್ಮ ಜಾತಿಯ ಹೆಸರನ್ನು ನಮೂದಿಸಬೇಕೆಂದು ಮೂರ್ನಾಡಿನಲ್ಲಿ ನಡೆದ ಕೊಡವ ಸಾಹಿತ್ಯ ಅಕಾಡೆಮಿಯ ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ನೀಡಿರುವ ಹೇಳಿಕೆಗೆ ಕೊಡವ ಭಾಷಿಕ ಸಮುದಾಯಗಳ ಕೂಟದ ಸಹಮತವಿಲ್ಲವೆಂದು ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಭಾಷಿಕ ಸಮುದಾಯಗಳ ಕೂಟ ಮತ್ತು ವಿವಿಧ ಕೊಡವ ಭಾಷಿಕ ಸಮಾಜಗಳ ಪ್ರಮುಖರು ಸಾಧಕ ಬಾಧಕಗಳನ್ನು ಚರ್ಚಿಸಿ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿಯ ಕಾಲಂನಲ್ಲಿ ಭಾರತ ಸರಕಾರ ಮತ್ತು ಕರ್ನಾಟಕ ಸರಕಾರ ಜಾತಿವಾರು ಪಟ್ಟಿಯಲ್ಲಿ ಪ್ರಕಟಿಸಿರುವ ಜಾತಿಯ ಹೆಸರನ್ನು, ಭಾಷೆಯ ಕಾಲಂನಲ್ಲಿ ಕೊಡವ ಭಾಷೆ ಮತ್ತು ಉಪಜಾತಿ ಕಾಲಂನಲ್ಲಿ ಯಾವುದೂ ಅನ್ವಯಿಸುವುದಿಲ್ಲ ಎಂದು ನಮೂದಿಸಲು…
ಮಡಿಕೇರಿ ಸೆ.27 NEWS DESK : ಮಡಿಕೇರಿ ದಸರಾ ಪ್ರಯುಕ್ತ ನಡೆದ ಓಪನ್ ಕೇರಮ್ ಸ್ಪರ್ಧೆಯಲ್ಲಿ ಕಾವೇರಿಮನೆ ಭರತ್ 3ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಮಡಿಕೇರಿ ಸೆ.27 NEWS DESK : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃವಾಹಿನಿ ಮರಗೋಡು ಮತ್ತು ಮೂರ್ನಾಡು ಘಟಕದ ಸಹಯೋಗದಲ್ಲಿ ಮರಗೋಡಿನ ಶಿವ ಪಾರ್ವತಿ ದೇವಾಲಯದಲ್ಲಿ ಗೋಪೂಜೆ ಮತ್ತು ದುರ್ಗಾಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹಿರಿಯರಾದ ಭಾಗೀರಥಿ ಹುಲಿತಾಳ ಅವರು ದೇವರ ಮೇಲಿನ ನಂಬಿಕೆ ಮತ್ತು ಗೋವುಗಳ ಸಾಕಾಣೆಯ ಮಹತ್ವವನ್ನು ತಿಳಿಸಿದರು. ಬೌದ್ಧಿಕ್ ಮಹಾಬಲೇಶ್ವರ್ ಭಟ್ ಮಾತನಾಡಿ ಗೋವುಗಳ ಪೂಜೆಯಿಂದ ಐಶ್ವರ್ಯ, ಆರೋಗ್ಯ ಸಮೃದ್ಧಿಯಾಗುತ್ತದೆ. ಹಾಲು ಮತ್ತು ಗೋಮೂತ್ರ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ ಎಂದು ಹೇಳಿದರು. ಅರ್ಚಕರಾದ ಅಮಿತ್ ಕೇದಿರಾಯ್ ಸಂಸ್ಕಾರದ ಬಗ್ಗೆ ವಿವರಿಸಿದರು. ಮರಗೋಡು ಘಟಕದ ಮಾತೃಶಕ್ತಿ ಪ್ರಮುಖ್ ಗುಡ್ಡೆಮನೆ ರೋಹಿಣಿ ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯಾ ಕರ ಸೇವಕರನ್ನು ಫಲತಾಂಬೂಲ ನೀಡಿ ಗೌರವಿಸಲಾಯಿತು. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಕೋಶಾಧ್ಯಕ್ಷ ಸಂಪತ್ ಕುಮಾರ್, ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಸಹ ಕಾರ್ಯದರ್ಶಿ ಯತೀಶ್, ಪ್ರಸಾರ ಪ್ರಮುಖ್ ಶಾನ್…
ಮಡಿಕೇರಿ ಸೆ.27 NEWS DESK : ‘ವಿ’ ಫೈವ್ ಮಹಿಳಾ ಒಕ್ಕೂಟದಿಂದ ಅ.4 ರಂದು “ಬಾಳೆಲೆ ನಮ್ಮೆ” ಕಾರ್ಯಕ್ರಮ ನಡೆಯಲಿದೆ. ಬಾಳೆಲೆ ಕೊಡವ ಸಮಾಜದಲ್ಲಿ ಬೆಳಿಗ್ಗೆ 10ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ‘ವಿ ” ಪೖವ್ ಮಹಿಳಾ ಒಕ್ಕೂಟದಿಂದ ಗೃಹಿಣಿಯರು ಮನೆಯಲ್ಲಿ ತಯಾರಿಸಿದ ಉತ್ಪನ್ನಗಳ, ಬೆಳದ ಗಿಡಗಳ, ಗೃಹ ಉಪಯೋಗಿ ವಸ್ತುಗಳ ಕೃಷಿ ಉತ್ಫನ್ನಗಳ, ರೖತಾಪಿ ವರ್ಗಕ್ಕೆ ಬೇಕಾದ ಕೃಷಿ ಯಂತ್ರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ ಕಲ್ಪಿಸಲಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಮಾರಾಟ ಹಾಗೂ ಪ್ರದರ್ಶನಕ್ಕೆ ನೊಂದಣಿ ಮಾಡಿಕೊಂಡು ಭಾಗವಹಿಸುವವರಿಗೆ ಅಚ್ಚುಕಟ್ಟಾಗಿ ಸ್ಥಳಾವಕಾಶ ಮಾಡಿಕೊಡಲಾಗುವುದು. ಜಿಲ್ಲೆಯ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಹಿಳಾ ಒಕ್ಕೂಟದ ಸಂಚಾಲಕರಾದ ಮಲಚೀರ ದೃಷ್ಯ, ಸದಸ್ಯರುಗಳಾದ ಪೊರಂಗಡ ಅರ್ಚನ, ಮಾಪಂಗಡ ಪ್ರೀತ್ನಿ, ಅದೇಂಗಡ ಗ್ರೀಷ್ಮ, ಕೊದಂಡ ರಷ್ಮಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8971653900 ಸಂಪರ್ಕಿಸಬಹುದಾಗಿದೆ.
ಸುಂಟಿಕೊಪ್ಪ ಸೆ.27 NEWS DESK : ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಹಗಲಿರುಳು ಸೇವೆ ಸಲ್ಲಿಸಿ ನಗರ ಸೌಂದರ್ಯವನ್ನು ಹೆಚ್ಚಿಸಲು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪೌರ ಕಾರ್ಮಿಕರ ಸೇವೆ ಅನನ್ಯವಾದದ್ದು ಎಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪಂಚಾಯಿತಿ ಪೌರ ಕಾರ್ಮಿಕರು ಹಾಗೂ ನೀರು ಗಂಟಿಗಳನ್ನು ಸನ್ಮಾನಿಸಿ ಮಾತನಾಡಿದರು. ಪೌರಕಾರ್ಮಿಕರು ಹಾಗೂ ನೀರುಗಂಟಿಗಳು ಕರ್ತವ್ಯ ನಿರ್ವಹಿಸಿದಿದ್ದರೇ ನಗರ, ಗ್ರಾಮಗಳು ಸ್ವಚ್ಛತೆ ಹಾಗೂ ಆರೋಗ್ಯವಂತರಾಗಿರಲು ಸಾಧ್ಯವಿಲ್ಲ ಎಂದು ಹೇಳಿದರು. ಅವರುಗಳು ನಿರ್ವಹಿಸುವ ಕಾರ್ಯವನ್ನು ಸಾಮಾನ್ಯ ನಾಗರೀಕರು ನಿರ್ವಹಿಸಲು ಸಾಧ್ಯವೇ ಇಲ್ಲಾವೆಂದರಲ್ಲದೆ ಅವರ ಸೇವೆಯನ್ನು ಪ್ರಶಂಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಪಟ್ಟಣ ಪ್ರದೇಶಕ್ಕೆ ಹತ್ತಿರವಾಗಿರುವ ದೊಡ್ಡ ಗ್ರಾಮ ಪಂಚಾಯಿಗಳಲ್ಲಿ ಪೌರಕಾರ್ಮಿಕರ ಮತ್ತು ನೀರು ಗಂಟಿಗಳು ಸೇವೆಯಿದ್ದು ಇವರುಗಳು ಅವಿರತ ಪರಿಶ್ರಮದಿಂದ ಪ್ರತಿ ಬಡಾವಣೆಗಳು ನೈರ್ಮಲ್ಯ ಮುಕ್ತ ಪ್ರದೇಶವಾಗಿ ಕಾಣುತ್ತದೆ. ಆದರೆ ಪೌರಕಾರ್ಮಿಕರನ್ನು ಕಡೆಗಣಿಸದೆ ಗೌರವಯುತ್ತವಾಗಿ ನಡೆಸಿಕೊಳ್ಳುವ ಕಾರ್ಯವು ನಡೆಯಬೇಕಿದೆ.…
ಮೂರ್ನಾಡು ಸೆ.27 NEWS DESK : ಮೂರ್ನಾಡು ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ 17ನೇ ವರ್ಷದ ಓಣಂ ಹಬ್ಬವು ಸೆ.28 ರಂದು ನಡೆಯಲಿದೆ. ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬದ ಪ್ರಯುಕ್ತ ಬೆಳಿಗ್ಗೆ 7.30 ಗಂಟೆಗೆ ಹೂವಿನ ರಂಗೋಲಿ(ಪೂಕಳಂ) ಸ್ಪರ್ಧೆ ನಡೆಯಲಿದೆ. ನಂತರ ಹಿಂದೂ ಮಲಯಾಳಿ ಸಮುದಾಯದವರಿಂದ ಮೂರ್ನಾಡಿನ ಮುಖ್ಯ ಬೀದಿಯಲ್ಲಿ ನಡೆಯುವ ಮೆರವಣಿಗೆಯಲ್ಲಿ ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಮಹನೀಯರು, ಚೆಂಡೆ ಮೇಳದವರು, ಮಾವೇಲಿ ಪಾತ್ರಧಾರಿಗಳು ಪಾಲ್ಗೊಳ್ಳಲಿದ್ದಾರೆ. ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಬಾಬು ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಸಕ ಡಾ.ಮಂಥರ್ಗೌಡ, ಮಾಜಿ ಶಾಸಕ ಅಪ್ಪಚ್ಚುರಂಜನ್, ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಅಧ್ಯಕ್ಷ ವಿ.ಎಂ.ವಿಜಯನ್, ಜಿಲ್ಲಾ ಪೊಲೀಸ್ ವೃತ್ತ ನೀರಿಕ್ಷಕ ಹೆಚ್.ವಿ.ಚಂದ್ರಶೇಖರ್, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಎನ್.ವಿ. ಉನ್ನಿಕೃಷ್ಣ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಸ್ಥಾಪಕಾಧ್ಯಕ್ಷ…






