ಮಡಿಕೇರಿ ನ.22 NEWS DESK : ಶನಿವಾರಸಂತೆ ವಿದ್ಯುತ್ ವಿತರಣಾ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3-ಶನಿವಾರಸಂತೆ ಟೌನ್ ಫೀಡರ್ನಲ್ಲಿ ನವೆಂಬರ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್ ಫೀಡರ್, ಶನಿವಾರಸಂತೆ ಪಟ್ಟಣ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಭಾವಿ ಸಭೆಯು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್ ಭೋಸರಾಜು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜ್, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾವರಿಷ್ಠ ಅಧಿಕಾರಿ ರಾಮರಾಜನ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೇಶವ್ ಕಮತ್, ಮಾಜಿ ಅಧ್ಯಕ್ಷರು ಟಿ.ಪಿ.ರಮೇಶ್, ತಾಲೂಕು ಅಧ್ಯಕ್ಷರು ರಾಜೇಶ್ ಪದ್ಮನಾಭ, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ನ.22 NEWS DESK : ಇತ್ತೀಚಿಗೆ ನಿಧನರಾದ ವಿರಾಜಪೇಟೆ ತಾಲ್ಲೂಕಿನ ನರಿಯಂದಡ ಗ್ರಾಮ ಪಂಚಾಯಿತಿಯ ಚೆಯ್ಯಂಡಾಣೆ ಭಾಗದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪೊಕುಲ್ರ0ಡ ಸಿದ್ಧಾರ್ಥ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ವಲಯ ಅಧ್ಯಕ್ಷರು ಕೋಡಿರ ವಿನೋದ್ ನಾಣಯ್ಯ, ಪಂಚಾಯಿತಿ ಸದಸ್ಯರು ಸುಬೈರ್, ಮಮ್ಮದ್, ಪಕ್ಷದ ಪ್ರಮುಖರು ಶೈಲಾ ಕುಟ್ಟಪ್ಪ, ಪ್ರಕಾಶ್ ಉಪಸ್ಥಿತರಿದ್ದರು.
ಮಡಿಕೇರಿ ನ.22 NEWS DESK : ಕಸ್ತೂರಿ ರಂಗನ್ ವರದಿ ವಿರೋಧ ಹೋರಾಟ ಸಮಿತಿಯವರು ಆಯೋಜಿಸಿದ ಸಿ ಮತ್ತು ಡಿ ಜಮೀನಿನ ಸಮಸ್ಯೆಯ ಕುರಿತಾದ ಚರ್ಚೆಯ ಸಭೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿದರು. ಕಸ್ತೂರಿರಂಗನ್ ವಿರೋಧಿ ಸಮಿತಿಯ ಪ್ರಮುಖರು ತಮ್ಮ ಆತಂಕವನ್ನು ಮಂಡಿಸಿ, ಸಿ ಮತ್ತು ಡಿ ಜಾಗದ ವಿಚಾರ ಕುರಿತು ತಮ್ಮ ಅನಿಸಿಕೆ ಹೇಳಿಕೊಂಡರು. ಬಳಿಕ ಮಾತನಾಡಿದ ಶಾಸಕರು ಸಿ ಮತ್ತು ಡಿ ಜಮೀನು ವಿಷಯದಲ್ಲಿ ಇರುವ ಕಾನೂನು ವಿಷಯಗಳನ್ನು ಸಭೆಗೆ ಮನವರಿಗೆ ಮಾಡಿದರಲ್ಲದೆ, ಮುಂದೆ ಯಾವ ರೀತಿ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು ಎಂದು ವಿವರಿಸಿದರು. ಹೋರಾಟ ಸಮಿತಿಯ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ, ಕರ್ನಾಟಕ ಕ್ರೀಡಾ ಉಪಾಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ಹಾಗೂ ಹೋರಾಟ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.…
ವಿರಾಜಪೇಟೆ ನ.22 NEWS DESK : ಚೆಯ್ಯಂಡಾಣೆಯ ಕೊಕೇರಿ “ನೀಲಿಯತ್ ಲೇಡೀಸ್ ಕ್ಲಬ್” ವತಿಯಿಂದ ಆಯೋಜಿಸಿದ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಚೆಯ್ಯಂಡಾಣೆಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಸಮಾಜದ ಎಲ್ಲಾ ಚಟುವಟಿಕೆಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿರುವುದು ಸಮಾಜದ ಏಳಿಗೆಗೆ ಉತ್ತಮವಾದ ಬೆಳವಣಿಗೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಎಲ್ಲಾ ರೀತಿಯ ಕ್ರೀಡೆಗಳಲ್ಲಿ ಮಹಿಳೆಯರ ಸಾಧನೆ ಅತ್ಯಂತ ಶ್ಲಾಘನೀಯವಾಗಿ ಮೂಡಿ ಬರುತ್ತಿದೆ. ವಿಶೇಷವಾಗಿ ಕ್ರೀಡೆಗೆ ಹೆಸರುವಾಸಿಯಾಗಿರುವ ನಮ್ಮ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಹಿಳೆಯರು/ಯುವತಿಯರು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವುದು ನಾಡಿಗೆ ಮಾತ್ರ ಅಲ್ಲ ದೇಶಕ್ಕೆ ಹೆಮ್ಮೆಯ ಸಂಗತಿ ಎಂದು ಬಣ್ಣಿಸಿದರು. ಇಂದಿನ ಈ ಮಹಿಳಾ ಕ್ರಿಕೆಟ್ ಪಂದ್ಯಾಟ ಇಂತಹದೇ ಪ್ರತಿಭೆಗಳ ಅನಾವರಣಕ್ಕೆ ಸಾಕ್ಷಿಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಪೆಮ್ಮಂಡ ನಂದ ನಾಣಯ್ಯ, ಪಂಚಾಯಿತಿ ಅಧ್ಯಕ್ಷರು ಪೆಮ್ಮಂಡ ಕೌಶಿ ಕಾವೇರಮ್ಮ, ಉಪಾಧ್ಯಕ್ಷರು ಕೋಡಿರ ವಿನೋದ್ ನಾಣಯ್ಯ, ಸದಸ್ಯರು…
ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಯ ಕಲೆ, ಕ್ರೀಡೆ, ಸಂಸ್ಕøತಿ, ಖಾದ್ಯ, ಕೊಡಗಿನ ದಿನಚರಿ, ಧೈವಿಕತೆ, ಅರಣ್ಯ, ಪ್ರವಾಸಿ ಸ್ಥಳ, ಧಾರ್ಮಿಕ ಸ್ಥಳ, ಪ್ರವಾಸೋದ್ಯಮ ಮತ್ತು ಸಾಹಸೋದ್ಯಮ, ಬೆಳೆ ಹಾಗೂ ಇತರೆ ಎಲ್ಲಾ ವಿಷಯಗಳ ಸಮಗ್ರ ಮಾಹಿತಿಯನ್ನೊಳಗೊಂಡ 160 ಪುಟಗಳ ಕನ್ನಡ ಹಾಗೂ ಆಂಗ್ಲ ಭಾμÉಯ ಕಾಫಿ ಟೇಬಲ್ ಪುಸ್ತಕವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಜಿ.ಪಂ.ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಉಪಕಾರ್ಯದರ್ಶಿ ಚಂದ್ರಶೇಖರ್, ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ಜೀವನ್ ಕುಮಾರ್ ಇತರರು ಇದ್ದರು.
ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ನೀರಾವರಿ ಇಲಾಖೆ ವ್ಯಾಪ್ತಿಯ ರಸ್ತೆಗಳು ಹದಗೆಟ್ಟಿದ್ದು, ಈಗಾಗಲೇ ಮಳೆಗಾಲ ಮುಗಿದಿರುವುದರಿಂದ ಶೀಘ್ರ ರಸ್ತೆ ಕಾಮಗಾರಿ ಕೈಗೊಂಡು ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚನೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮಳೆ ನಿಂತು 20 ದಿನಗಳಾಗಿದ್ದು, ಕೂಡಲೇ ಕಾಮಗಾರಿ ಆರಂಭಿಸಬೇಕು. ಸರ್ಕಾರದಿಂದಲೂ ಸಹ ರಸ್ತೆ ಕಾಮಗಾರಿಗೆ ಹಣ ಬಿಡುಗಡೆಯಾಗಿದ್ದು, ರಸ್ತೆ ಕಾಮಗಾರಿ ಕೈಗೊಂಡು ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡುವಂತೆ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದರು. ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ಕೆಲಸಗಳು ತೃಪ್ತಿದಾಯಕವಾಗಿಲ್ಲ. ಮಳೆ ನಿಂತು 20 ದಿನವಾದರೂ ಕಾಮಗಾರಿಯನ್ನು ಕೈಗೊಳ್ಳದಿರುವುದು ಬೇಸರ ತರಿಸಿದೆ ಎಂದು ಸಚಿವರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.…
ಮಡಿಕೇರಿ ನ.21 NEWS DESK : ಮಡಿಕೇರಿಯ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲ ಸಭೆ ನಡೆಯಿತು. ಸಭೆಯಲ್ಲಿ ಇಲಾಖೆವಾರು ವರದಿಯನ್ನು ಪಡೆದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಣ್ಣ ನೀರಾವರಿ ಹಾಗೂ ತಂತ್ರಜ್ಞಾನ ಸಚಿವರು ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು ಅವರೊಂದಿಗೆ ಚರ್ಚಿಸುತ್ತಾ ಪ್ರತಿಯೊಂದು ಇಲಾಖೆಯ ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿದರು. ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ವರದಿಯನ್ನು ಸಲ್ಲಿಸಿದರು. ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟರ್ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಕೆಡಿಪಿ ಸದಸ್ಯರುಗಳು ಹಾಗೂ ಎಲ್ಲಾ ಪ್ರಮುಖ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸೋಮವಾರಪೇಟೆ ನ.21 NEWS DESK : ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕಳಪೆ ಕಾಮಗಾರಿಯಾಗದಂತೆ ಇಂಜಿನಿಯರ್ಗಳು ನೋಡಿಕೊಳ್ಳಬೇಕು. ಕಳಪೆಯಾದರೆ ಕ್ಷಮೆಯ ಪ್ರಶ್ನೆಯೇ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಅರೇಯೂರು ಗ್ರಾಮದಲ್ಲಿ ನಡೆದ 14 ಕೋಟಿ ರೂ, ಗಳ ವೆಚ್ಚದ ಮಸಗೋಡು, ಅರೆಯೂರು, ಹೊಸಳ್ಳಿ, ಕಣಿವೆ ಮಾರ್ಗದ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ರಸ್ತೆ ಕಾಮಗಾರಿ ಮುರ್ನಾಲ್ಕು ದಿನಗಳಲ್ಲಿ ಪ್ರಾರಂಭವಾಗಲಿದೆ. 100 ದಿನಗಳ ಒಳಗೆ ಕಾಮಗಾರಿ ಮುಕ್ತಾಯಗೊಳಿಸಬೇಕಾಗಿದೆ. ಈ ಗ್ರಾಮಗಳ ರಸ್ತೆ ಕಾಮಗಾರಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ 14 ಕೋಟಿ ರೂ.ಗಳ ಅನುದಾನವನ್ನು ಸರ್ಕಾರ ನೀಡಿದೆ. ಗ್ರಾಮಸ್ಥರ ರಸ್ತೆ ಸಮಸ್ಯೆಯನ್ನು ಶಾಸಕರು ಅರ್ಥ ಮಾಡಿಕೊಂಡು ಅನುದಾನ ಕಲ್ಪಿಸಿರುವುದು ಶ್ಲಾಘನೀಯ. ಕಳೆದ 25 ವರ್ಷಗಳ ನಂತರ ಕೊಡಗಿನ ಜನತೆ ಡಾ.ಮಂತರ್ಗೌಡ ಮತ್ತು ಎ.ಎಸ್.ಪೊನ್ನಣ್ಣ ಅವರನ್ನು ಆಯ್ಕೆ ಮಾಡಿದ್ದಾರೆ. ಇಬ್ಬರು ಶಾಸಕರ ಬೇಡಿಕೆಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪ್ರೀತಿಯಿಂದ ಈಡೆರಿಸುತ್ತಿದ್ದಾರೆ ಎಂದು ಹೇಳಿದರು. ಕೊಡಗಿನಲ್ಲಿ ಹೆಚ್ಚಿನ…
ಪುತ್ತೂರು ನ.21 NEWS DESK : ಸ್ವಾಮೀ ವಿವೇಕಾನಂದರು ಬದುಕಿದ್ದು ಕೇವಲ 39 ವರ್ಷಗಳು ಮಾತ್ರ ಆದರೆ ಯುವಕರಿಗೆ ಮತ್ತು ಮನುಕುಲಕ್ಕೆ ಅವರು ನೀಡಿದ ಸಂದೇಶಕ್ಕೆ ಅಳಿವೇ ಇಲ್ಲ. ಇದರ ಒಂದಷ್ಟು ಭಾಗವನ್ನಾದರೂ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಇದರ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಭಾರತೀಯರು ಭಯದಲ್ಲೇ ಬದುಕುವವರು ಎನ್ನುವ ಮಾತಿದೆ. ಇದಕ್ಕೆ ಅನೇಕ ಕಾರಣಗಳೂ ಇವೆ. ಆದರೆ ಆ ಮಾತನ್ನು ತೊಡೆದು ಹಾಕಿ ಭಯಮುಕ್ತರಾಗಿ ಬದುಕುವ ವ್ಯಾಪಕ ಅವಕಾಶಗಳಿವೆ ಎಂದರು. ಮಂಗಳೂರಿನಲ್ಲಿ 250ಕ್ಕೂ ಹೆಚ್ಚು ಮನೆಯಲ್ಲೇ ಬೆಳೆದ ಕಂಪೆನಿಗಳಿವೆ ಇವು ಸುಮಾರು 25000 ಉದ್ಯೋಗಿಗಳಿಗೆ ಅವಕಾಶವನ್ನು ನೀಡುತ್ತಿದ್ದು ಸಧ್ಯದಲ್ಲೇ ಇದೊಂದು ಐಟಿ ಹಬ್ ಆಗಿ ಬೆಳೆಯಲಿದೆ ಎಂದರು. ಈ ನೆಲದ ಸಾಮಥ್ರ್ಯಕ್ಕೆ ಅನುಗುಣವಾಗಿ ಹೊಸತನದ ಪ್ರಾರಂಭಕ್ಕೆ ಸರ್ವ ಪ್ರಯತ್ನವನ್ನು ಮಾಡೋಣ,…






