ಪುತ್ತೂರು ಸೆ.27 NEWS DESK : ಕಾಲೇಜಿನಿಂದ ಬೀಳ್ಕೊಡುಗೆ ಎನ್ನುವುದು ಅಂತ್ಯವಲ್ಲ ಬದಲಾಗಿ ಜ್ಞಾನ, ಸ್ನೇಹ ಮತ್ತು ಅಪಾರ ಅನುಭವಗಳಿಂದ ಕೂಡಿದ ಜೀವನದ ಆರಂಭ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ಕಾಲೇಜಿನ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳನ್ನು ಬೀಳ್ಕೊಡುವ ಸಾಮಾರಂಭದಲ್ಲಿ ಮಾತಾಡಿದರು. ಇದುವರೆಗೆ ನೈತಿಕವಾಗಿ ಮತ್ತು ಸಾಮಾಜಿಕ ಜವಾಬ್ಧಾರಿಯುತವಾಗಿ ನಿಮ್ಮ ಜೀವನವನ್ನು ರೂಪಿಸಲು ಅಗತ್ಯವಾದ ತಿಳುವಳಿಕೆಯನ್ನು ಕಾಲೇಜು ನೀಡಿದೆ. ಇನ್ನು ಮುಂದೆ ಇದನ್ನು ಉಳಿಸಿ ಬೆಳೆಸುವ ಜವಾಬ್ಧಾರಿ ನಿಮ್ಮದು ಎಂದರು. ಜೀವನದ ಹೊಸ ಹಂತವನ್ನು ಆತ್ಮವಿಶ್ವಾಸ ಮತ್ತು ಸಮರ್ಪಣಾ ಮನೋಭಾವದಿಂದ ಪ್ರವೇಶಿಸಬೇಕು ಮತ್ತು ನಮ್ಮ ಏಳಿಗೆಗಾಗಿ ಅಪಾರ ತ್ಯಾಗವನ್ನು ಮಾಡುವ ಹೆತ್ತವರ ಆಶೋತ್ತರಗಳನ್ನು ಗಮನದಲ್ಲಿರಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಮಾತನಾಡಿ ಕಾಲೇಜಿನಲ್ಲಿ ಕಲಿತ ಪಾಠಗಳನ್ನು ಮತ್ತು ಸವಿನೆನಪುಗಳನ್ನು ಹೊತ್ತುಕೊಂಡು ಮುಂದುವರಿಯಿರಿ, ಏನಾದರೂ…
ಲೇಖಕ: admin
ಮಡಿಕೇರಿ ಸೆ.27 NEWS DESK : ಸಮಾಜದ ಏಳಿಗೆಗೆ ಶ್ರಮಿಸಿದವರನ್ನು, ಬಡವರ ಕಷ್ಟಕ್ಕೆ ನೆರವಾದವರನ್ನು, ನೊಂದವರಿಗೆ ನೆರವಾಗಿ ನಿಂತವರನ್ನು ಸದಾ ನೆನಪಿಸಿಕೊಳ್ಳುತ್ತಾ ಬರುತ್ತಿದ್ದಾರೆಯೇ ಹೊರತು ಶ್ರೀಮಂತರನ್ನು ನೆನೆಸಿಕೊಳ್ಳುವುದಿಲ್ಲವೆಂದು ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಹೇಳಿದರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಎನ್.ಎಸ್.ಎಸ್ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸಿನ ಕೂಸಾಗಿ ಹುಟ್ಟಿತು. ವಿದ್ಯಾರ್ಥಿಗಳನ್ನು ಶಿಕ್ಷಣದ ಹಂತದಲ್ಲಿ ಸಮಾಜ ಮುಖಿಯಾಗಿ ಬೆಳೆಸುವ ಗುರಿಯನ್ನು ಇದು ಹೊಂದಿದೆ. ಇಂದಿನ ಪ್ರಸ್ತುತ ಸಮಾಜವನ್ನು ನೋಡುವುದಾದರೆ ಮದರ್ ತೆರೇಸಾ, ಸರೋಜಿನಿ ನಾಯ್ಡುರಂತಹ ಪ್ರಮುಖ ಸಮಾಜ ಸುಧಾರಕರು ಸಮಾಜ ಸೇವಕರನ್ನು ನಾವು ನೆನಪಿಟ್ಟುಕೊಂಡಿರುವುದು ಅವರ ಶ್ರೀಮಂತಿ ಇಂದಲ್ಲ ಬದಲಾಗಿ ಸಮಾಜಕ್ಕೆ ಅವರು ನೀಡಿದಂತಹ ಸೇವೆಯ ಕಾರಣದಿಂದ. ಆದ್ದರಿಂದ ವಿದ್ಯಾರ್ಥಿಗಳು ಈ ಹಂತದಲ್ಲಿ ಸಮಾಜಕ್ಕೆ ತಮ್ಮಿಂದಾದಂತಹ ಸೇವೆಯನ್ನು ಸಲ್ಲಿಸಲು ಸದಾ ಸಿದ್ಧರಾಗಿರಬೇಕು. ಸೇವಾ ಮನೋಭಾವನೆ ಇದ್ದವರು ಸದಾ ಇತರರ ಹಿತವನ್ನು ಕಾಪಾಡುತ್ತಾ ಶ್ರೇಷ್ಠ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುತ್ತಾರೆ…
ಮಡಿಕೇರಿ ಸೆ.27 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೊಡಗು ಗೌಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಮೈಸೂರು ಅಧ್ಯಕ್ಷ ಚಂಡೀರ ಬಸಪ್ಪ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ…
ಮಡಿಕೇರಿ NEWS DESK ಸೆ.27 : ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಕೈಜೋಡಿಸುವ ಮೂಲಕ ಪಶ್ಚಿಮಘಟ್ಟದ ಜೀವವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿಶಾಸ್ತ್ರ ಸಂಶೋಧನಾ ಸಂಸ್ಥೆಯ ಮಾಹಿತಿ ಅಧಿಕಾರಿ ರೆನಿಟ ಮೆಥೈಯಿಸ್ ಅವರು ಕರೆ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಪ್ರಾಣಿಶಾಸ್ತ್ರ ವಿಭಾಗ ಮತ್ತು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿ ಶಾಸ್ತç ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ‘ಹವಮಾನ ಬದಲಾವಣೆ ಮತ್ತು ಪಶ್ಚಿಮ ಘಟ್ಟದ ಜೀವವೈವಿಧ್ಯತೆ’ ಕುರಿತು ಕಾರ್ಯಾಗಾರ ನಡೆಯಿತು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಮತ್ತು ಜಾಗೃತಿ ಮೂಡಿಸಬೇಕು. ಪರಿಸರದ ಕುರಿತು ಹೆಚ್ಚು ಅರಿವು ಮೂಡಿಸಿ ಪರಿಸರ ರಾಯಭಾರಿಗಳನ್ನಾಗಿ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಡಾ.ಮೇಜರ್ ಬಿ.ರಾಘವ ಅವರು, ಮಾನವನು ಆಧುನಿಕತೆಯ ಹೆಸರಿನಲ್ಲಿ ಹಲವು ಕಾರಣಗಳನ್ನು ನೀಡಿ ನಿಸರ್ಗವನ್ನು ಅತಿಕ್ರಮಣ…
ಮಡಿಕೇರಿ NEWS DESK ಸೆ.27 : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯ ಸಂದರ್ಭ ಕೊಡಗಿನ ಸರ್ವ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೊಡಗು ಗೌಡ ಮಾಜಿ ಯೋಧರ ಒಕ್ಕೂಟದ ಅಧ್ಯಕ್ಷ ತುಂತಜಿರ ದಯಾನಂದ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ GOWDA (ಗೌಡ) ಎಂದು ನಮೂದಿಸಲು ನಿರ್ಣಯ…
ಮೂರ್ನಾಡು ಸೆ.27 NEWS DESK : ಯೋಗಿ ನಾರಾಯಣ ಬಲಿಜ ಸಂಘದ ವತಿಯಿಂದ ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷರಾದ ಸಂಜಯ್ ರಾಜ್ ಹಾಗೂ ಕೊಡಗು ಪತ್ರಕರ್ತರ ಸಂಘದ ಖಜಾಂಚಿ ಟಿ.ಕೆ.ಸಂತೋಷ್ ಅವರನ್ನು ಸನ್ಮಾನಿಸಲಾಯಿತು. ಮೂರ್ನಾಡು ವಿಎಸ್ಎಸ್ ಸಭಾಂಗಣದಲ್ಲಿ ನಡೆದ ಸಂಘದ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಗಣೇಶ್ ನಾಯ್ಡು ಅವರು ವಹಿಸಿ, ಕೊಡಗು ಬಲಿಜ ಸಂಘದ ಸದಸ್ಯತ್ವ ನೋಂದಾವಣೆ ಹಾಗೂ ಸಂಘದ ಕಾರ್ಯಕ್ರಮದ ಬಗ್ಗೆ ಮಾತನಾಡಿದವರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಸುಬ್ರಮಣಿ. ಉಪಾಧ್ಯಕ್ಷರಾದ ಶ್ವೇತಾ ನರೇಂದ್ರ. ಮಡಿಕೇರಿ ತಾಲೂಕು ಕಾರ್ಯದರ್ಶಿ ಟಿ.ವಿ .ಲೋಕೇಶ್. ಸಂಘದ ಪದಾಧಿಕಾರಿಗಳಾದ ಬಾಲಕೃಷ್ಣ, ಎಲ್ಐಸಿ ಗಣೇಶ್ ರಮಿತಾ, ಯಶ್ವಂತ್, ನರೇಂದ್ರ, ವಿಜಯಕುಮಾರ್ ಅನಿತಾ ಮೊದಲಾದವರು ಹಾಜರಿದ್ದರು.
ಮಡಿಕೇರಿ ಸೆ.27 NEWS DESK : ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಕೈಜೋಡಿಸುವ ಮೂಲಕ ಪಶ್ಚಿಮಘಟ್ಟದ ಜೀವವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿಶಾಸ್ತ್ರ ಸಂಶೋಧನಾ ಸಂಸ್ಥೆಯ ಮಾಹಿತಿ ಅಧಿಕಾರಿ ರೆನಿಟ ಮೆಥೈಯಿಸ್ ಅವರು ಕರೆ ನೀಡಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಪ್ರಾಣಿಶಾಸ್ತ್ರ ವಿಭಾಗ ಮತ್ತು ಕರ್ನಾಟಕ ಪರಿಸರ ನಿರ್ವಹಣೆ ಹಾಗೂ ನೀತಿ ಶಾಸ್ತ್ರ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ‘ಹವಮಾನ ಬದಲಾವಣೆ ಮತ್ತು ಪಶ್ಚಿಮ ಘಟ್ಟದ ಜೀವವೈವಿಧ್ಯತೆ’ ಕುರಿತು ಕಾರ್ಯಾಗಾರ ನಡೆಯಿತು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಮತ್ತು ಜಾಗೃತಿ ಮೂಡಿಸಬೇಕು. ಪರಿಸರದ ಕುರಿತು ಹೆಚ್ಚು ಅರಿವು ಮೂಡಿಸಿ ಪರಿಸರ ರಾಯಭಾರಿಗಳನ್ನಾಗಿ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜ್ ನ ಪ್ರಾಂಶುಪಾಲ ಡಾ.ಮೇಜರ್ ಬಿ.ರಾಘವ ಅವರು, ಮಾನವನು ಆಧುನಿಕತೆಯ ಹೆಸರಿನಲ್ಲಿ ಹಲವು ಕಾರಣಗಳನ್ನು ನೀಡಿ ನಿಸರ್ಗವನ್ನು ಅತಿಕ್ರಮಣ…
ನಾಪೋಕ್ಲು ಸೆ.27 NEWS DESK : ನಾಪೋಕ್ಲು ಸಹಕಾರ ಮಹಿಳಾ ಸಮಾಜದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಾಜದ ಸಭಾಂಗಣದಲ್ಲಿ ನಡೆಯಿತು. ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಸಮಾಜದ ಅಧ್ಯಕ್ಷರಾದ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಕಟ್ಟಡದ ಮೇಲ್ಚಾವಣಿ ದುರಸ್ತಿ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಿಸಲಾಗಿದೆ. ನಮ್ಮಲ್ಲಿ ಒಟ್ಟು 350 ಸದಸ್ಯರಿದ್ದು, ಸಂಬಂಧಿಸಿದ ಇಲಾಖೆಗಳ ನಿರ್ದೇಶನಗಳನ್ನು ಪಾಲಿಸಿಕೊಂಡು ನೂತನ ಸದಸ್ಯರನ್ನು ಸೇರ್ಪಡೆಗೊಳ್ಳಲಾಗುತ್ತಿದೆ ಎಂದರು. ಸದಸ್ಯರಲ್ಲದವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗುವಂತೆ ಮನವಿ ಮಾಡಿಕೊಂಡರು. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಲಹೆ ಸಹಕಾರ ಅವಶ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿ ಸಭೆಯಲ್ಲಿ ಸದಸ್ಯರ ಪ್ರಶ್ನೆ, ಸಲಹೆ, ಸೂಚನೆಗಳಿಗೆ ಉತ್ತರಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಹಕಾರ ಮಹಿಳಾ ಸಮಾಜ ಉಪಾಧ್ಯಕ್ಷೆ ಬೊಪ್ಪಂಡ ಶೈಲಾ ಬೋಪಯ್ಯ, ನಿರ್ದೇಶಕರಾದ ಬಿದ್ದಾಟಂಡ ಗಿರಿಜಾ ಬೋಪಣ್ಣ, ಕೇಟೋಳಿರ ಶಾರದಾ ಪಳಂಗಪ್ಪ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಕುಂಡ್ಯೋಳಂಡ ಕವಿತಾ ಮುತ್ತಣ್ಣ, ಅಪ್ಪಾರಂಡ ಡೇಸಿ ತಿಮ್ಮಯ್ಯ, ಪುಲ್ಲೆರ ಪದ್ಮಿನಿ ಭೀಮಯ್ಯ, ಕಾರ್ಯದರ್ಶಿ…
ಮಡಿಕೇರಿ NEWS DESK ಸೆ.27 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ಸರ್ವ ಅರೆಭಾಷೆ ಗೌಡರು ನಮೂದಿಸಬೇಕೆಂದು ಕೊಡಗು ಗೌಡ ಯುವ ವೇದಿಕೆ ಮನವಿ ಮಾಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅವರು ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಉಪಜಾತಿ ಎನ್ನುವ ಕಾಲಂನಲ್ಲಿ ಅರೆಭಾಷೆ ಗೌಡ ಎಂದು ಸೂಚಿಸಬೇಕು. ಅರೆಭಾಷೆ ಗೌಡ ಸಮುದಾಯ ಬಾಂಧವರು ಈ ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಕಡ್ಡಾಯವಾಗಿ ರಾಜ್ಯ ಮತ್ತು ಕೇಂದ್ರದ ಗಣತಿಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ. ಮೂಲತಃ ಗೌಡರು ಒಕ್ಕಲಿಗ…
ನಾಪೋಕ್ಲು ಸೆ.27 NEWS DESK : ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಸಮಾರಂಭವನ್ನು ಅ.1 ರಂದು ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುಧಾ ಪೂಜೆ ಅಂಗವಾಗಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಹಳೆ ತಾಲೂಕಿನಿಂದ ಅಲಂಕೃತ ವಾಹನಗಳ ಮೆರವಣಿಗೆ ನಡೆಯಲಿದೆ. 4 ಗಂಟೆಗೆ ಮಾರುಕಟ್ಟೆ ಆವರಣದಲ್ಲಿ ವಾಹನಗಳ ಸಾಮೂಹಿಕ ಆಯುಧ ಪೂಜೆ ನಡೆಯಲಿದೆ ಎಂದರು. ಸೈಕಲ್, ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಸಂಘದ ವತಿಯಿಂದ ವಿತರಿಸಲಾಗುವುದು ಎಂದರು. ಸಂಜೆ 6 ಗಂಟೆಗೆ ನಾಲ್ಕು ನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ…






