ಲೇಖಕ: admin

ಮಡಿಕೇರಿ ಸೆ.28 NEWS DESK  : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಆರನೇ ದಿನವಾದ ಇಂದು ಶ್ರೀ ದಂಡಿನ ಮಾರಿಯಮ್ಮ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಸೆ.28 ರಂದು ಗುಲಾಬಿ ಹೂವಿನ ಅಲಂಕಾರ ಪೂಜೆ ನಡೆಯಲಿದೆ.

Read More

ಮಡಿಕೇರಿ ಸೆ.27 NEWS DESK : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ವೇದಿಕೆಯಲ್ಲಿ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಯಿತು. ಸಾಂಸ್ಕೃತಿಕ ವೈವಿಧ್ಯದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ, ಬಾಲ್ಯ ವಿವಾಹ ತಡೆಗಟ್ಟುವಿಕೆ, ಮಹಿಳಾ ಪೊಲೀಸರು ನವಶಕ್ತಿ ವೈಭವ ನೃತ್ಯ, ಸಮೂಹ ಗೀತೆ ಮುಂತಾದ ಕಾರ್ಯಕ್ರಮಗಳು ಕಿಕ್ಕಿರಿದ ಜನರನ್ನು ಮುದಗೊಳಿಸುವಲ್ಲಿ ಯಶಸ್ವಿಯಾಯಿತು.

Read More

ವಿರಾಜಪೇಟೆ ಸೆ.27 NEWS DESK :  ಸಮಾಜದಲ್ಲಿ ಆರೋಗ್ಯ ಹಾಗೂ ಸ್ವಚ್ಛತಾ ಜಾಗೃತಿಯನ್ನು ಮೂಡಿಸುವುದರಲ್ಲಿ ಎನ್ ಎಸ್ ಎಸ್ ನ ಪಾತ್ರ ಹಿರಿದಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ಅಭಿಪ್ರಾಯಪಟ್ಟರು. ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಎನ್.ಎಸ್.ಎಸ್ ದಿನಾಚರಣೆಯ ಪ್ರಯುಕ್ತ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ಹಾಗೂ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡುತ್ತಾ ಮಾತನಾಡಿದರು. ಸ್ವಚ್ಛತೆ ಎಂಬುವುದು ನಮ್ಮ ಮನೆಗಳಿಂದಲೇ ಆರಂಭವಾಗಬೇಕು. ಸಮಾಜದಲ್ಲಿ ಪ್ರತಿಯೊಬ್ಬರು ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪಣ ತೊಡಬೇಕು. ರಾಷ್ಟ್ರಾದ್ಯಂತ ಎನ್ ಎಸ್ ಎಸ್ ಘಟಕವು ಸ್ವಯಂ ಸೇವಕರನ್ನು ಹೊಂದಿದ್ದು, ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಎನ್.ಎಸ್.ಎಸ್ ಸ್ವಯಂ ಸೇವಕರ ಪಾತ್ರ ಅಪಾರವಾಗಿದೆ ಎಂದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಬಿ.ಡಿ.ಹೇಮ ಆರೋಗ್ಯ ಜಾಗೃತಿ ಹಾಗೂ ಸ್ವಚ್ಛತಾ ಕ್ರಮಗಳ ಕುರಿತು ಮಾತನಾಡಿದರು. ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಶ್ರಮಿಸಿ ಎಂದು ಕರೆ ನೀಡಿದರು. ಎನ್.ಎಸ್.ಎಸ್ ಘಟಕದ ಸ್ವಯಂ ಸೇವಾ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ತರಗತಿಗಳಿಗೆ…

Read More

ವಿರಾಜಪೇಟೆ ಸೆ.27 NEWS DESK : ಆಧಿಶಕ್ತಿ ಟ್ಯುಟೋರಿಯಲ್ಸ್ ನಲ್ಲಿ ಎತ್ನಿಕ್ ಡೇ ಹಾಗೂ ಪ್ರತಿಭಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ಕರಣ್ ಕುಮಾರ್, ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿಗೆ ಹಾಜರಾಗುವ ಮೂಲಕ ಶ್ರದ್ಧೆಯಿಂದ ಓದಬೇಕು. ಸಂಸ್ಥೆಯಲ್ಲಿ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯನ್ನು ಕಲ್ಪಿಸಲಾಗಿದೆ ಎಂದರು. ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಸಂಸ್ಥೆಗೆ ಉತ್ತಮ ಫಲಿತಾಂಶವನ್ನು ನೀಡಿ ಎಂದು ಕರೆ ನೀಡಿದರು. ಈ ಸಂದರ್ಭ ಎಂ.ಎಚ್.ಸಮಿನ, ಜೀಸ್ಮ ಎಂ.ಎಸ್., ಗಗನ್, ಗೀತಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Read More

ಮಡಿಕೇರಿ ಸೆ.27 NEWS DESK : ಕೆ.ವಿ.ವಿ ಎಜುಕೇಶನಲ್ ಟ್ರಸ್ಟ್  ವತಿಯಿಂದ  ವಿರಾಜಪೇಟೆ ಕಾವೇರಿ ಕಾಲೇಜಿನ ಆವರಣದಲ್ಲಿ ನೂತನವಾಗಿ   ಪ್ರಾರಂಭವಾದ ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ಕಾಲೇಜಿನ ಪ್ರಥಮ ವರ್ಷದ ಮೊದಲ ಬ್ಯಾಚ್ ನ  ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ  ಓರಿಯಂಟೇಷನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೆ.ವಿ.ವಿ ಎಜುಕೇಶನ್ ಟ್ರಸ್ಟ್ ನ ಮುಖ್ಯಸ್ಥರಾದ ಜಿ.ಎನ್.ನಾಗೇಂದ್ರ ಮಾತನಾಡಿ, ಕಾವೇರಿ ಕಾನೂನು ಕಾಲೇಜಿನ ಧ್ಯೇಯೊದ್ದೇಶಗಳನ್ನು ತಿಳಿಸಿ ತಮ್ಮ  ಟ್ರಸ್ಟ್  ಭಾರತದಾತ್ಯಂತ ವಿದ್ಯಾರ್ಥಿಗಳಿಗಾಗಿ ಕಾನೂನು ಶಿಕ್ಷಣವನ್ನು ನೀಡಲು ವಿವಿಧ ಶಾಖೆಗಳನ್ನು ಆರಂಭಿಸಿದ್ದು, ಗುಣಾತ್ಮಕ ಶಿಕ್ಷಣ ಮತ್ತು ಕಾನೂನು ಸೇವೆಗಳನ್ನು ಉತ್ತಮ ರೀತಿಯಲ್ಲಿ ಒದಗಿಸುತ್ತ ಬರುವುದರೊಂದಿಗೆ ವಿದ್ಯಾರ್ಥಿಗಳಿಗೆ ಆರಂಭಿಕ ಹಂತದಲ್ಲಿ ನ್ಯಾಯಾಧೀಶರ ಪರೀಕ್ಷೆಗೆ ಸಿದ್ದಪಡಿಸಲಾಗುವುದು ಹಾಗೂ ನ್ಯಾಯಾಲಯಗಳಲ್ಲಿ ನಡೆಯುವ ಪ್ರಕ್ರಿಯೆಗಳ ತರಬೇತಿಯನ್ನು ಮೊದಲ ಸೆಮಿಸ್ಟರ್  ಹಂತದಲ್ಲಿಯೇ ಆರಂಭಿಸಲಾಗುತ್ತದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ವಿನೀತಾ ಮಾತನಾಡಿ, ಕಾನೂನು ಶಿಕ್ಷಣದ ಇತಿಹಾಸ ಮತ್ತು ಕಾನೂನು ಶಿಕ್ಷಣದ ಪ್ರಾಮುಖ್ಯತೆಯನ್ನು ವಿವರಿಸಿದರು. ಕಾನೂನು ಶಿಕ್ಷಣವನ್ನು ಪಡೆದಂತವರು ಉತ್ತಮ ಸಮಾಜ ನಿರ್ಮಾಣಕ್ಕೆ ತಮ್ಮ ಕೊಡುಗೆಯನ್ನು…

Read More

ವಿರಾಜಪೇಟೆ ಸೆ.27 NEWS DESK : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ದೇವಾಲಯದ ಒಳ ಆವರಣದಲ್ಲಿರುವ ವನದುರ್ಗೆ ಗುಡಿಯಲ್ಲಿ ವಿಶೇಷ ಪೂಜೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನ ಮೂರ್ತಿ ಭಟ್ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ಜರುಗಿತು. ಅರ್ಚಕರು ನವರಾತ್ರಿ ಉತ್ಸವದ ಪ್ರಯುಕ್ತ ಮುಂಜಾನೆಯಿಂದಲೇ ಪ್ರಾರ್ಥನೆ, ಸಂಕಲ್ಪ ಪೂಜೆ, ದೇವಿಗೆ ಅಲಂಕಾರ, ಪುಷ್ಪಾರ್ಚನೆ, ಕುಂಕುಮಾರ್ಚನೆ ಸೇರಿದಂತೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ನಂತರ ದೇವಿ ಅಷ್ಟೋತ್ತರವನ್ನು ಪಾರಾಯಣ ಮಾಡಿದರು. ನೈವೇದ್ಯವನ್ನು ಅರ್ಪಿಸಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ದೇವಸ್ಥಾನದ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ನಾಗಗುಡಿಗಳಲ್ಲೂ ಪೂಜೆಯನ್ನು ನೆರವೇರಿಸಲಾಯಿತು. ವನದುರ್ಗೆಗೆ ಮಹಾ ಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಹಾಜರಿದ್ದರು.

Read More

ನಾಪೋಕ್ಲು ಸೆ.27 NEWS DESK : ಸ್ಕ್ಯಾಡ್ಸ್ ಮಂಗಳೂರು (SKADS) ವತಿಯಿಂದ ನೀಡಲಾಗುವ ಪ್ರಥಮ ಪ್ರಶಸ್ತಿ ಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದೆ. ಸ್ಕ್ಯಾಡ್ಸ್ ಮಂಗಳೂರು (SKADS) ಸಂಸ್ಥೆಯೊಂದಿಗೆ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ವ್ಯವಹಾರ ನಡೆಸಿದ ಸಹಕಾರ ಸಂಘಕ್ಕೆ ಕೊಡ ಮಾಡುವ  ಪ್ರಶಸ್ತಿಯನ್ನು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ಕಂಬಳಿಯವರು ಹಾಗೂ ಸಂಸ್ಥೆಯ ನಿರ್ದೇಶಕರುಗಳು ಪ್ರಶಸ್ತಿ ನೀಡಿ ಗೌರವಿಸಿದರು. ಸಂಸ್ಥೆಯ ಅಧ್ಯಕ್ಷರಾದ  ನಾಗೇಶ್ ಕುಂದಲ್ಪಾಡಿ ಅವರ ಪರವಾಗಿ ನಿರ್ದೇಶಕರಾದ ಪ್ರಮೀಳಾ ಬಂಗಾರಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ವರದಿ : ದುಗ್ಗಳ ಸದಾನಂದ.

Read More

ವಿರಾಜಪೇಟೆ ಸೆ.27 NEWS DESK : ಪ್ರತಿಯೊಬ್ಬರೂ ಕೂಡ ಪ್ರಕೃತಿಯ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಕೃತಿಯು ಮಾನವನಿಗೆ ಒಂದು ವರವಾಗಿದ್ದು ಭಾವನಾತ್ಮಕವಾಗಿಯೂ, ಆರೋಗ್ಯದ ದೃಷ್ಟಿಯಿಂದಲೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಪರಿಸರ ಅಧ್ಯಯನವನ್ನು ನಾವು ಪ್ರಾಯೋಗಿಕವಾಗಿ ಅಧ್ಯಯನ ಮಾಡಬೇಕು. ಪರಿಸರದಲ್ಲಿ ನಾವು ಕಲಿಯುವ ಪಾಠವು ಆರೋಗ್ಯವನ್ನು ಉತ್ತಮಪಡಿಸುವುದಲ್ಲದೆ ಸುಂದರ ಸಮಾಜದ ಸೃಷ್ಟಿಗೂ ಕಾರಣವಾಗುತ್ತದೆ. ಆದುದರಿಂದ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮೌಲ್ಯಯುತವಾದ ಶಿಕ್ಷಣವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು. ಸತ್ಯ, ಪ್ರಾಮಾಣಿಕತೆ, ನ್ಯಾಯಪರವಾದ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಉಪನ್ಯಾಸವನ್ನು ನೀಡಿದ ಪತ್ರಕರ್ತರು ಹಾಗೂ ಬರಹಗಾರರಾದ ಉಷಾ ಪ್ರೀತಂ ಮಾತನಾಡಿ, ಕೊಡಗು ಪ್ರಕೃತಿ ಸೌಂದರ್ಯದ ನಾಡು.…

Read More

ಕುಶಾಲನಗರ ಸೆ.27 NEWS DESK : ಖ್ಯಾತ ಕಾದಂಬರಿಕಾರರೂ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರೂ ಆದ ಎಸ್.ಎಲ್.ಭೈರಪ್ಪ ಅವರ ಅಗಲುವಿಕೆಯ ಕುರಿತು ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಿರಿ ಬಳಗದ ವತಿಯಿಂದ ಕುಶಾಲನಗರ ಪಟ್ಟಣದಲ್ಲಿ ಜಂಟಿಯಾಗಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಸಾಹಿತ್ಯಾಭಿಮಾನಿಗಳು ಕಂಬನಿ ಮಿಡಿದರು. ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಿದ್ದ ಕಾದಂಬರಿಕಾರ ಭೈರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಒಂದು ನಿಮಿಷ ಕಾಲ ಮೌನಾಚರಣೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದ್ದ ಎಸ್.ಎಲ್.ಭೈರಪ್ಪ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿ, ತಮ್ಮ ಕಾದಂಬರಿ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಎಸ್.ಎಲ್.ಭೈರಪ್ಪ ಅವರ ಕೃತಿಗಳು ಹಲವಾರು ಭಾಷೆಗಳಿಗೆಅನುವಾದವಾಗಿರುವುದು ಅವರ ಸಾಹಿತ್ಯ ಶಕ್ತಿಗೆ ಸಾಕ್ಷಿಯಾಗಿದೆ ಎಂದರು. ಜಿಲ್ಲಾ ಕಸಾಪ ಸಮಿತಿಯ ಸದಸ್ಯ ಎಂ.ಎನ್.ವೆಂಕಟನಾಯಕ್ ಮಾತನಾಡಿ, ವಂಶವೃಕ್ಷ, ದಾಟು, ತಂತು ಮುಂತಾದ ಪ್ರಮುಖ ಕಾದಂಬರಿಗಳ ಮೂಲಕ ಕನ್ನಡ…

Read More

ಮಡಿಕೇರಿ ಸೆ.27 NEWS DESK  : ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ಜೆ ಸೋಮಣ್ಣ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ 2025-26ನೇ ಸಾಲಿನ ಕಾಲೇಜಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾಯಕರಾಗಬೇಕಾದರೆ ವಿನಯ ಬೆಳೆಸಿಕೊಳ್ಳಬೇಕು. ವಿಚಾರ ವಿನಿಮಯ ತಿಳಿದುಕೊಳ್ಳಬೇಕು. ಯುವ ಪೀಳಿಗೆಯ ಮೇಲೆ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಜವಾಬ್ದಾರಿ ಇದೆ. ಅದನ್ನು ಅರಿತುಕೊಂಡು ಮುನ್ನಡೆಯಬೇಕು ಎಂದರು. ಮಾನವೀಯತೆಯ ಭದ್ರ ಬುನಾದಿ ಮೇಲೆ ನಮ್ಮ ಸಮಾಜ ಕಟ್ಟಲಾಗಿದೆ. ಅಂತಹ ಸಮಾಜ ಉಳಿಸಿಕೊಳ್ಳಬೇಕು. ಭಾರತ ಸಮಾಜವಾದಿ ರಾಷ್ಟ್ರವಾಗಿದೆ. ಭಾರತದ ಹೆಸರು ದೇಶ ವಿದೇಶದಲ್ಲಿ ಮೊಳಗುವಂತೆ ಯುವ ಪೀಳಿಗೆಯು ಸಾಧಿಸಬೇಕೆಂದು ತಿಳಿಸಿದರು. ಪಂಪ ಹೇಳಿದಂತೆ ಮಾನವ ಕುಲ ಒಂದೇ, ಭಾರತವು ಸಮಾಜವಾದಿ, ಸರ್ವಧರ್ಮ ರಾಷ್ಟ್ರ ವಿದ್ಯಾರ್ಥಿಗಳು ಇದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು. ಸಂವಿಧಾನ ಉಳಿಯಬೇಕೆಂದರೆ ಯುವ ಪೀಳಿಗೆಯೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ರಾಜಕೀಯ,…

Read More