ಲೇಖಕ: admin

ಮಡಿಕೇರಿ ನ.3 NEWS DESK : ಮಡಿಕೇರಿ ನಗರದಿಂದ ವಿರಾಜಪೇಟೆಗೆ ತೆರಳುವ ರಸ್ತೆಯಲ್ಲಿ ಮೂರನೇ ಮೈಲು ಭಾಗದಲ್ಲಿ ಮರಳಿನ ತಡೆಗೋಡೆ ಅಪಾಯಕಾರಿ ಸ್ಥಿತಿಯಲ್ಲಿದ್ದು, ಬ್ಯಾರಿಕೇಡ್ ಅಳವಡಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ಅವರು ರಸ್ತೆಯ ಸ್ಥಿತಿಗತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನಿರಂತರ ಮಳೆಯಿಂದ ರಸ್ತೆ ಕುಸಿದ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಮರಳಿನ ತಡೆಗೋಡೆಯನ್ನು ನಿರ್ಮಿಸಲಾಗಿದೆ. ಆದರೆ ಈ ಅಪಾಯಕಾರಿ ತಿರುವಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಕಿರಿದಾದ ರಸ್ತೆಯಲ್ಲಿ ಸಾಗುವ ವಾಹನಗಳು ನಿಯಂತ್ರಣ ತಪ್ಪಿ ಉರುಳುವ ಸಾಧ್ಯತೆ ಇದೆ. ರಾತ್ರಿ ವೇಳೆ ಮತ್ತು ದಟ್ಟ ಮಂಜು ಕವಿದ ವಾತಾವರಣದಲ್ಲಿ ಅಪಾಯ ಎದುರಾಗಬಹುದು. ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ತಾತ್ಕಾಲಿಕ ಕ್ರಮವಾಗಿ ತುರ್ತಾಗಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಆಗ್ರಹಿಸಿದರು. ಈಗಾಗಲೇ ಮಳೆ ಸಂಪೂರ್ಣವಾಗಿ ನಿಂತು ಹೋಗಿದ್ದು, ತಕ್ಷಣ ತಡೆಗೋಡೆ ನಿರ್ಮಾಣದ ಕಾಮಗಾರಿಯನ್ನು ಆರಂಭಿಸಬೇಕು. ತಡೆಗೋಡೆ ಶಾಶ್ವತ ಪರಿಹಾರವಾಗುವುದರಿಂದ…

Read More

ಮಡಿಕೇರಿ ನ.3 NEWS DESK : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಕ್ಷಯ ಚಾರಿಟೇಬಲ್ ಟ್ರಸ್ಟ್ ರೋಟರಿ ರೆಡ್ ಕ್ರಾಸ್ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಮತ್ತು ಅಂಗಾಂಗ ದಾನ ನೋಂದಣಿ ಶಿಬಿರ ನಡೆಯಿತು. ಶಿಬಿರದಲ್ಲಿ 21 ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು. 14 ಫಲಾನುಭವಿಗಳಿಂದ ಅಂಗಾಂಗ ದಾನ ನೊಂದಣಿಗಳನ್ನು ಮಾಡಲಾಯಿತು. ರಕ್ತದಾನದ ಮಹತ್ವದ ಬಗ್ಗೆ ಡಾ.ವಿಶ್ವಾಸ್ ಅರಿವು ಮೂಡಿಸಿದರು. ಅಂಗಾಂಗದಾನ ನೋಂದಣಿಯ ಬಗ್ಗೆ DHEO ಶಾಂತಿ ಆರೋಗ್ಯ ಶಿಕ್ಷಣ ನೀಡಿ, ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಗಳಗಂಡ ರೋಗ ಮತ್ತು ರಕ್ತಹೀನತೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಹೆಚ್‍ಸಿ ಚೆನ್ನಯ್ಯನಕೋಟೆಎಎಂಒ ಡಾ. ಶಿವಪ್ಪ ಎಸಿಎಫ್  ಬಗ್ಗೆ ಮಾಹಿತಿ ನೀಡಿದರು. ವಿರಾಜಪೇಟೆ ತಾಲೂಕಿನ ಸುತ್ತಮುತ್ತಲಿನ ಹಾಡಿಗಳಲ್ಲಿ ಮಗುವಿಗೆ ಸೊಪ್ಪಿನ ರಸಗಳನ್ನು ಕುಡಿಸುತ್ತಿರುವುದರಿಂದ ಶಿಶುಮರಣವಾಗುತ್ತಿರುವ ಬಗ್ಗೆ ಎಲ್ಲಾ ಸಂಘ ಸಂಸ್ಥೆಯವರ ಸಮ್ಮುಖದಲ್ಲಿ ವಿಷಯ ಪ್ರಸ್ತಾಪಿಸಲಾಯಿತು ಮತ್ತು ಸಹಕಾರವನ್ನು ಕೋರಲಾಯಿತು.…

Read More

ಮಡಿಕೇರಿ ನ.3 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್5 ಹೊದ್ದೂರು ಹಾಗೂ ಎಫ್2 ನಾಪೋಕ್ಲು ಫೀಡರ್‍ನಲ್ಲಿ ನ.4 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕಕ್ಕಬೆ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೇರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ನ.3 NEWS DESK : 2024-25ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ನವೆಂಬರ್, 04 ರಿಂದ 10 ರವರೆಗೆ ಕೊಡಗು ಜಿಲ್ಲಾ ಮಟ್ಟದ ‘ಜಿಲ್ಲಾ ಕೋರಿಕೆ/ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ಮುಖಾಂತರ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ. ಅದರಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಜಿಲ್ಲಾ ಹಂತದ ಕೋರಿಕೆ / ಪರಸ್ಪರ ವರ್ಗಾವಣೆಯ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಯು ಪ್ರಾಥಮಿಕ ಶಾಲಾ ವಿಭಾಗಕ್ಕೆ ನ.4 ರಿಂದ 6 ರವರೆಗೆ ಹಾಗೂ ಪ್ರೌಢ ಶಾಲಾ ವಿಭಾಗಕ್ಕೆ ನವೆಂಬರ್, 07 ರಿಂದ 10 ರವರೆಗೆ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸಿಲಿಂಗ್‍ಗೆ ಸಮಯಕ್ಕೆ ಸರಿಯಾಗಿ ಸೂಕ್ತ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗುವಂತೆ…

Read More

ಮಡಿಕೇರಿ ನ.3 NEWS DESK : ಕನ್ನಡ ನಾಡು ನುಡಿ, ನೆಲ-ಜಲ, ಸಾಹಿತ್ಯ, ಸಂಸ್ಕøತಿಯ ಸಂರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ(ಹೆಚ್.ಶಿವರಾಮೇಗೌಡ)ಯ ಕೊಡಗು ಜಿಲ್ಲಾ ಘಟಕ ಕಟಿಬದ್ಧವಾಗಿ ಕಾರ್ಯನಿರ್ವಹಿಸಲಿದೆ ಎಂದು ನೂತನ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಅಕ್ಟೋಬರ್‍ನಲ್ಲಿ ಕರವೇ ಜಿಲ್ಲಾಧ್ಯಕ್ಷ ಸ್ಥಾನವನ್ನು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಯಿತು. ಶೀಘ್ರದಲ್ಲೆ ಕರವೇ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಸಂಘಟನೆಗಳು ಅಸ್ತಿತ್ವದಲ್ಲಿವೆ. ಕುಶಾಲನಗರ ಮತ್ತು ಪೊನ್ನಂಪೇಟೆ ತಾಲ್ಲೂಕು ಸಮಿತಿಗಳ ರಚನೆಯಾಗಬೇಕಾಗಿದೆ ಎಂದರು. ಜಿಲ್ಲಾ ವ್ಯಾಪ್ತಿಯಲ್ಲಿ ಮುಚ್ಚಲ್ಪಟ್ಟಿರುವ ಕನ್ನಡ ಶಾಲೆಗಳನ್ನು ಬಡ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸರ್ಕಾರ ಮತ್ತೆ ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಘಟನೆ ಕರವೇ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು. ಕರವೇ ಮಡಿಕೇರಿ ತಾಲ್ಲೂಕು ಅಧ್ಯಕ್ಷ ರವಿ ಗೌಡ ಅವರು ಮಾತನಾಡಿ, ಕನ್ನಡ ನಾಡಿನ ಎಲ್ಲೆಡೆಯೂ ಕನ್ನಡ…

Read More

ಮಡಿಕೇರಿ ನ.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್, ಸೋಮವಾರಪೇಟೆ, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕುಶಾಲನಗರದ  ಮೂಕಾಂಬಿಕಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಹೆಚ್ಚುವರಿ ಬೋಧನಾ ತರಬೇತಿ (ಟ್ಯೂಷನ್ ಕ್ಲಾಸ್) ಕಾರ್ಯಕ್ರಮ ನಡೆಯಿತು. ಮೂಕಾಂಬಿಕಾ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮುಳ್ಳುಸೋಗೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಿವನಾಂದ ಉದ್ಘಾಟಿಸಿ, ಮಾತನಾಡಿ ಗ್ರಾಮಾಂತರ ಪ್ರದೇಶದ  ವಿದ್ಯಾರ್ಥಿಗಳು  ಪ್ರತಿಭಾವಂತ ಮತ್ತು ಅಧ್ಯಯನಶೀಲರಾಗಿ ಹಾಗೂ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಅಂಕಗಳನ್ನು ಪಡೆಯಲು ಇಂತಹ ತರಗತಿಗಳ ಮೂಲಕ  ಕಲಿಯುವ ವಿಷಯ ಚೇತರಿಕೆ, ಮತ್ತು ಚೈತನ್ಯದ ಬೆಳವಣಿಗೆ ಸಹಕಾರಿಯಾಗುವುದು ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಕೂಡಿಗೆ ಪದವಿ ಪೂರ್ವ ಕಾಲೇಜು ಮಾಜಿ ಉಪಾಧ್ಯಕ್ಷ ಕೆ.ಕೆ‌.ನಾಗರಾಜಶೆಟ್ಟಿ ಮಾತಾನಾಡಿ, ಇಂದಿನ ಪೈಪೋಟಿಯ‌ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಧ್ಯಾಯ ಶೀಲರಾಗಬೇಕು. ವಿದ್ಯಾರ್ಥಿಗಳು ಪ್ರಸಕ್ತ ವಿದ್ಯಮಾನದ ಜೊತೆಯಲ್ಲಿ ಪಠ್ಯ ಪುಸ್ತಕದ ವಿಷಯಗಳನ್ನು ಹೆಚ್ಚು ಅರಿತುಕೊಂಡು ಮುಂದಿನ ದಿನಗಳಲ್ಲಿ  ಬರುವ ಪರೀಕ್ಷೆಯಲ್ಲಿ ಉತ್ತಮ…

Read More

ಸೋಮವಾರಪೇಟೆ ನ.3 NEWS DESK : ಸಿ ಆ್ಯಂಡ್ ಡಿ ಭೂಮಿ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾಫಿ ಬೆಳೆಗಾರರ ಸಂಘದ ಆಶ್ರಯದಲ್ಲಿ ಸೋಮವಾರ ಪಟ್ಟಣದ ಜೇಸಿ ವೇದಿಕೆಯಲ್ಲಿ ರೈತ ಜಾಗೃತಿ ಸಮಾವೇಶ ನಡೆಯಿತು. ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ರೈತರು, ಸರ್ಕಾರಗಳು ಪರವಾಗಿ ವರ್ತಿಸಬೇಕು. ರೈತರ ಆಸ್ತಿ ಸಮಸ್ಯೆಗಳನ್ನು ಕೂಡಲೆ ಬಗೆಹರಿಸುವಂತೆ ಆಗ್ರಹಿಸಿದರು. ನಂತರ ಜೇಸಿ ವೇದಿಕೆಯಲ್ಲಿ ನಡೆದ ಜಾಗೃತಿ ಸಭೆಯಲ್ಲಿ ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ಮಾತನಾಡಿ. ಸಿ ಆ್ಯಂಡ್ ಡಿ ಹೆಸರಿನಲ್ಲಿ ರೈತರು ಹಲವು ದಶಕಗಳಿಂದ ಕೃಷಿಭೂಮಿಯನ್ನು ಅರಣ್ಯ ಇಲಾಖೆ ಕಸಿದುಕೊಳ್ಳಲು ಪ್ರಯತ್ನಿಸಿದರು ಉಗ್ರಹೋರಾಟವನ್ನು ರೂಪಿಸಲಾಗುವುದು ಎಂದು ಎಚ್ಚರಿಸಿದರು. ಕಳೆದ ಒಂದೂವರೆ ವರ್ಷಗಳಿಂದ ರೈತ ಹೋರಾಟ ಸಮಿತಿಯ ನೇತೃತ್ವದಲ್ಲಿ ಅನೇಕ ಹೋರಾಟಗಳನ್ನು ಮಾಡಲಾಗಿದೆ. ಸಮಸ್ಯೆಗಳ ಬಗ್ಗೆ ಶಾಸಕರು, ಸಂಸದರು, ಮುಖ್ಯಮಂತ್ರಿಗಳು, ಅರಣ್ಯ ಹಾಗೂ ಕಂದಾಯ ಇಲಾಖಾ ಸಚಿವರನ್ನೂ ಭೇಟಿ…

Read More

ಮಡಿಕೇರಿ ನ.3 NEWS DESK : ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ರೋಗ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯ ರೋಗಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣಧಿಕಾರಿ ಡಾ.ಸನ್ನತ್ ಕುಮಾರ್ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳು ಡಾ.ಇಂದೂಧರ ಕೆ ಕಾರ್ಯಕ್ರಮ ಉದ್ಘಾಟಿಸಿದರು. ಮನೆ ಮನೆ ಭೇಟಿ ಮಾಡಿ ಕ್ಷಯ ರೋಗದ ಲಕ್ಷಣಗಳಿದ್ದರೆ ಕಫದ ಮಾದರಿಯ ಸಂಗ್ರಹಣೆ ಮಾಡಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಲು ವೈದ್ಯಾಧಿಕಾರಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಚಿನ್ಮಯಿ, ಸಿಬ್ಬಂದಿಗಳಾದ ಹಿರಿಯ ಪ್ರಾ. ಆ.ಸುರಕ್ಷಾಧಿಕಾರಿ, ಪಾರ್ವತಿ ಮತ್ತು ಕಿರಿಯ ಪ್ರಾ ಆ ಸುರಕ್ಷಾಧಿಕಾರಿ ಶ್ವೇತ ಮತ್ತು ದಿವ್ಯ,  ಹಿರಿಯ ಅರೋಗ್ಯ ನಿರೀಕ್ಷೆಣಾಧಿಕಾರಿ ಮಹೇಶ್, S T L S ಪುಟ್ಟರಾಜು ಮತ್ತು ಜಿಲ್ಲಾ ಮೇಲ್ವಿಚಾರಕರಾದ ಶ್ರೀಧರ್, ಎಲ್ಲಾ ಆಶಾ ಕಾರ್ಯಕರ್ತೆ  ಭಾಗವಹಿಸಿದರು.

Read More

ಮಡಿಕೇರಿ ನ.3 NEWS DESK : ಕೂಡಿಗೆ ಗ್ರಾಮ ಪಂಚಾಯತಿಯ ಮಾಸಿಕ ಸಭೆಯ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ.ಗಿರೀಶ್ ಕುಮಾರ್ ನವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಶುಚಿತ್ವಕ್ಕೆ ಹೆಚ್ಚಿನ ಅಧ್ಯತೆ ನೀಡುವುದರ ಜೊತೆಯಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ‌ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಗುಣವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಬಗ್ಗೆ ಚರ್ಚೆಗಳು ನಡೆದವು. ಪ್ರಮುಖವಾಗಿ ಈಗಾಗಲೇ ಕೂಡಿಗೆಯಿಂದ ಹೆಬ್ಬಾಲೆರವರೆಗೆ ನಿಗದಿತ ಅಪಘಾತ ವಲಯದ ಹಾಸನ ಹೆದ್ದಾರಿ ರಸ್ತೆಯ ಕಾಮಗಾರಿಯು ನಡೆಯುತ್ತಿದ್ದು, ರಸ್ತೆಯ ಅಗಲಿಕರಣದ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯವರು ರಸ್ತೆಗೆ ಹೊಂದಿಕೊಂಡಂತೆ ಇರುವ ಮರ ಮತ್ತು ಮನೆಯ ಚಾವಣಿಗಳನ್ನು ಇಲಾಖೆಯ ನಿಯಮಾನುಸಾರ ತೆರವುಗೊಳಸಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಸಂಬಂಧಿಸಿದವರಿಗೆ ಪತ್ರ ವ್ಯವಹಾರ ಮಾಡಲು ಸಭೆಯಲ್ಲಿ ಸೂಚನೆ ನೀಡಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿ ಅಧ್ಯಕ್ಷ ಕೆ.ಟಿ.ಗರೀಶ್, ಸಭೆಯಲ್ಲಿ…

Read More

ಮಡಿಕೇರಿ ನ.3 NEWS DESK : ರೋಟರಿ ಮಿಸ್ಟಿ ಹಿಲ್ಸ್ ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್  ವತಿಯಿಂದ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾಥಿ೯ಗಳಿಗೆ ಶೈಕ್ಷಣಿಕ ತರಬೇತಿ ಕಾಯಾ೯ಗಾರಕ್ಕೆ ಚಾಲನೆ ದೊರೆಯಿತು. ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿತ ತರಬೇತಿ ಕಾಯಾ೯ಗಾರವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ, ಸೈನಿಕ ಶಾಲೆ ಎಂಬುದು ಕೇವಲ ಶಿಕ್ಷಣದ ಕೇಂದ್ರವಲ್ಲ ಅದು ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ.  ಸೈನಿಕಶಾಲೆಯಲ್ಲಿ  ಕಲಿಯುವ ಮಕ್ಕಳು ನಾಳೆಯ ಭಾರತದ ಭದ್ರ ಕೈಗಳು, ದೇಶದ ಹೆಮ್ಮೆಯಾಗಿದ್ದಾರೆ ಎಂದು ಶ್ಲಾಘಿಸಿದರು. ಈ ಶಿಬಿರ ಕೇವಲ ಪರೀಕ್ಷೆಗೆ ತಯಾರಿ ಮಾತ್ರವಲ್ಲ  ಇದು ಶಿಸ್ತು, ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸುವ ವೇದಿಕೆ. ನಮ್ಮ ದೇಶದ ಶಕ್ತಿ, ದೇಶ ಸೇವೆ ಮಾಡಲು ಕನಸು ಕಾಣುವ   ಯುವಕ , ಯುವತಿಯರಲ್ಲಿದೆ ಎಂದೂ ಜೀವನ್ ಅಭಿಪ್ರಾಯಪಟ್ಟರು. ಸೈನಿಕ ಶಾಲೆಗೆ ಸೇರಲು ಇಚ್ಛೆ ಇರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಈ …

Read More