ಲೇಖಕ: admin

ಮಡಿಕೇರಿ ಸೆ.26 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 22ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಸೆ.24ರ ಸಂಜೆಯಿಂದ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ವಾರ್ಷಿಕೊತ್ಸವದ ಅಂಗವಾಗಿ ಮುಂಜಾನೆಯಿಂದ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ವಾರ್ಷಿಕೋತ್ಸವ ಪ್ರಯುಕ್ತ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ಹಾಗೂ ತೀರ್ಥಪ್ರಸಾದ ವಿತರಿಸಲಾಯಿತು. ನಂತರ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿತ್ತು.

Read More

ಮಡಿಕೇರಿ ಸೆ.26 NEWS DESK : ಸರಕಾರಿ ಕಾರ್ಯಕ್ರಮ ಸೇರಿದಂತೆ ಎಲ್ಲಾ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆಯನ್ನು ನಿಷೇಧಿಸಬೇಕು ಮತ್ತು ನಗರಸಭೆ ನಗರದ 10 ಸ್ಥಳಗಳಲ್ಲಿ ಕುಡಿಯುವ ನೀರಿನ ಫಿಲ್ಟರ್ ಗಳನ್ನು ಅಳವಡಿಸಬೇಕು ಎಂದು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್‍ನ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಜಿಲ್ಲಾ ನಿರ್ದೇಶಕ ಧನಂಜಯ ಎಂ. ಅವರು ಸ್ವತ: ಸರಕಾರದ ಕಾರ್ಯದರ್ಶಿಗಳೇ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರು ಮತ್ತು ಪ್ಲಾಸ್ಟಿಕ್ ಲೋಟಗಳನ್ನು ಬಳಸಬಾರದೆಂದು ಆದೇಶ ಮಾಡಿದ್ದರೂ ಸರಕಾರಿ ಕಾರ್ಯಕ್ರಮಗಳಲ್ಲಿ ಕೂಡ ಇವುಗಳನ್ನು ಬಳಸಲಾಗುತ್ತಿದೆ. ಸ್ವಚ್ಛ ಪರಿಸರಕ್ಕಾಗಿ ತಕ್ಷಣ ಇದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಸಗಟು ವ್ಯಾಪಾರಸ್ಥರು ಹಾಗೂ ಚಿಲ್ಲರೆ ಮಾರಾಟ ಅಂಗಡಿ ಮಾಲೀಕರಲ್ಲಿ ಕಳೆದ ಜನವರಿಯಿಂದ ಮನವಿ ಮಾಡಿಕೊಂಡು ಬರಲಾಗಿದೆ. ಇದೇ ಆ.1 ರಿಂದ ಈ…

Read More

ಮಡಿಕೇರಿ NEWS DESK ಸೆ.26 : ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮತ್ತು ಜಾತಿ ಜನಗಣತಿಯಲ್ಲಿ ಹಾಗೂ ಕೇಂದ್ರ ಸರಕಾರ ನಡೆಸಲು ಉದ್ದೇಶಿಸಿರುವ ಜಾತಿ ಸಮೀಕ್ಷೆಗಳಲ್ಲಿ ಎಲ್ಲಾ ಅರೆಭಾಷಿಕ ಗೌಡರು ಧರ್ಮದ ಕಾಲಂನಲ್ಲಿ ಹಿಂದೂ ಎಂದು, ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಅಭಿವೃದ್ಧಿ ಸಂಘದ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಮತ್ತು ಕೇಂದ್ರ ಸರಕಾರದ ಎರಡೂ ಗಣತಿಯಲ್ಲೂ ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಮಾತನಾಡುವವರು ಅರೆಭಾಷೆ ಗೌಡ, ತುಳುಭಾಷೆ ಮಾತನಾಡುವವರು ತುಳುಭಾಷೆ ಗೌಡ ಎಂದು ಹಾಗೂ ಮಾತೃಭಾಷೆಯ ಕಾಲಂನಲ್ಲಿ ಅರೆಭಾಷೆ/ ತುಳುಭಾಷೆ ಎಂದು ಕಡ್ಡಾಯವಾಗಿ ಬರೆಸುವಂತೆ ತಿಳಿಸಿದ್ದಾರೆ. ಈ ಕುರಿತು ಈಗಾಗಲೇ ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಅಭಿವೃದ್ಧಿ ಸಂಘ ಅರೆಭಾಷೆ ಹಾಗೂ ತುಳುಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ ವಿಸ್ತೃತವಾದ…

Read More

ಮಡಿಕೇರಿ NEWS DESK ಸೆ.26 : ರಾಜ್ಯ ಸರಕಾರದ ಜಾತಿವಾರು ಗಣತಿಯ ಎಲ್ಲಾ ಮೂರು ಕಾಲಂಗಳಲ್ಲಿ “ಕೊಡವ” ಎಂದು ನಮೂದಿಸಬೇಕು ಸೇರಿದಂತೆ ವಿವಿಧ ವಿಚಾರಗಳ ಕುರಿತು ಜನಜಾಗೃತಿ ಮೂಡಿಸಲು ಮತ್ತು ಸರಕಾರದ ಗಮನ ಸೆಳೆಯಲು ಸೆ.30 ರಂದು ಬೇಂಗ್ ನಾಡಿನ ಚೇರಂಬಾಣೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ 14ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಲಾಗುವುದು ಮತ್ತು ರಾಜ್ಯ ಸರಕಾರದ ವತಿಯಿಂದ ಅ.7ರ ವರೆಗೆ 15 ದಿನಗಳ ಕಾಲ ನಡೆಯಲಿರುವ ಜಾತಿವಾರು ಗಣತಿಯ ಎಲ್ಲಾ ಮೂರು ಕಾಲಂಗಳಲ್ಲಿ…

Read More

ಮಡಿಕೇರಿ ಸೆ.26 NEWS DESK : ಕೊಡಗು ಜಾನಪದ ಪರಿಷತ್ ವತಿಯಿಂದ ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಸಹಯೋಗದಲ್ಲಿ ಸೆ.29 ರಂದು 5ನೇ ವಷ೯ದ ಜಾನಪದ ದಸರಾ ಆಯೋಜಿತವಾಗಿದ್ದು, ಜಾನಪದ ಕಲಾ ತಂಡಗಳಿಂದ ವೈವಿಧ್ಯಮಯ ಜಾನಪದ ಕಲಾ ಪ್ರದಶ೯ನದ ಸೊಬಗು ಕಲಾಪ್ರೇಮಿಗಳ ಮನಸೂರೆಗೊಳ್ಳಲಿದೆ ಎಂದು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ ಮಾಹಿತಿ ನೀಡಿದ್ದಾರೆ. ಸೆ.29 ರಂದು ಸೋಮವಾರ ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಸಕಾ೯ರಿ ಅತಿಥಿಗೖಹದ ಆವರಣದಿಂದ ಸಾಗಲಿರುವ ರಾಮನಗರದ ವೈವಿಧ್ಯಮಯ ತಂಡಗಳೂ ಸೇರಿದಂತೆ ಜಿಲ್ಲೆಯ ಕಲಾತಂಡಗಳ ಕಲಾ ಜಾಥಾವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಉದ್ಘಾಟಸಲಿದ್ದಾರೆ ಬೆಳಗ್ಗೆ 10 ಗಂಟೆಗೆ ಗಾಂದಿ ಮೈದಾನದ ಕಲಾ ಸಂಭ್ರಮ ವೇದಿಕೆ ಮುಂಭಾಗದಲ್ಲಿ ಪೊನ್ನಚ್ಚನ ಮಧೂಸೂದನ್ ಅವರ ಸಂಗ್ರಹದಲ್ಲಿನ ಜಾನಪದ ವಸ್ತುಗಳ ಪ್ರದಶ೯ನ ಉದ್ಘಾಟನೆಗೊಳ್ಳಲಿದೆ. ಬೆಳಗ್ಗೆ 10.15 ಗಂಟೆಗೆ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ದಸರಾವನ್ನು ವೀರಾಜಪೇಟೆ ಕ್ಷೇತ್ರ ಶಾಸಕ…

Read More

ಮಡಿಕೇರಿ ಸೆ.26 NEWS DESK : ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಸೇನಾನಿ ವೀರ ಭಗತ್ ಸಿಂಗ್ ಜನ್ಮದಿನದ ಪ್ರಯುಕ್ತ ಸೆ.28 ರಂದು ಆಮ್ ಆದ್ಮಿ ಪಾರ್ಟಿಯಿಂದ ಕೊಡಗು ಸೇರಿದಂತೆ ರಾಜ್ಯವ್ಯಾಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಇದೇ ಸೆ.28 ರಂದು ರಾಜ್ಯಾದ್ಯಂತ ಆಮ್ ಆದ್ಮಿ ಪಾರ್ಟಿ “ಒಂದು ದಿನ ಭಗತ್ ಗಾಗಿ” ಎಂಬ ಘೋಷವಾಕ್ಯದೊಂದಿಗೆ ಭಗತ್ ಸಿಂಗ್ ಅವರ ಜನ್ಮದಿನವನ್ನು ಆಚರಿಸಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಜಿಲ್ಲಾ, ತಾಲ್ಲೂಕು ಕೇಂದ್ರಗಳ ಪಕ್ಷದ ಕಛೇರಿಯಲ್ಲಿ ಭಗತ್ ಸಿಂಗ್ ಗೆ ಪುಷ್ಪನಮನ ಸಲ್ಲಿಸಿ, ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿ ಭಗತ್ ಸಿಂಗ್ ಅವರ ಸ್ವಾತಂತ್ರ್ಯ ಹೋರಾಟ ಮತ್ತು ಆದರ್ಶಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಗುವುದು. ಆಕಾಶವಾಣಿ, ಟಿವಿ ಮಾಧ್ಯಮ, ಪತ್ರಿಕಾ ಸಂವಾದ, ಬೈಕ್ ರ್ಯಾಲಿ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಮಾತ್ರವಲ್ಲದೆ ಸಾರ್ವಜನಿಕರು ಕೂಡ…

Read More

ಮಡಿಕೇರಿ NEWS DESK ಸೆ.26 : ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮತ್ತು ಜಾತಿಜನಗಣತಿಯ ಸಂದರ್ಭ ಕೊಡಗು ಜಿಲ್ಲೆಯಲ್ಲಿ ವಾಸವಿರುವ ಬಲಿಜ ಸಮಾಜದ ಸರ್ವ ಬಂಧುಗಳು ಜಾತಿಯ ಕಾಲಂನಲ್ಲಿ ‘ಬಲಿಜ’ ಎಂದು ನಮೂದಿಸುವಂತೆ ಶ್ರೀ ಯೋಗಿ ನಾರಾಯಣ ಕೊಡಗು ಬಲಿಜ ಸಮಾಜದ ಅಧ್ಯಕ್ಷ ಗಣೇಶ್ ನಾಯ್ಡು ಹಾಗೂ ಕಾರ್ಯದರ್ಶಿ ಸುಬ್ರಮಣಿ ಅವರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗಣತಿದಾರರು ಬಂದಾಗ ನಿಖರವಾದ ಮಾಹಿತಿಯನ್ನು ನೀಡಬೇಕು. ಜಾತಿಯ ಕಾಲಂನಲ್ಲಿ ‘ಬಲಿಜ’ ಎಂದು ನಮೂದಿಸುವುದರಿಂದ ಜಿಲ್ಲೆಯಲ್ಲಿರುವ ಬಲಿಜ ಸಮುದಾಯದವರ ಸಂಖ್ಯೆ ಎಷ್ಟು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ. ಅಲ್ಲದೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಮುಂದೆ ನಡೆಯುವ ಕೇಂದ್ರ ಸರಕಾರದ ಜಾತಿಗಣತಿಯಲ್ಲೂ ಜಾತಿಯ ಕಾಲಂನಲ್ಲಿ ‘ಬಲಿಜ’ ಎಂದು ನಮೂದಿಸುವಂತೆ ಕೋರಿದ್ದಾರೆ.

Read More

ಮಡಿಕೇರಿ ಸೆ.26 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಭೈರತಿ ಸುರೇಶ್, ಹೆಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.26 NEWS DESK : ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಏಕತಾ ರ‍್ಯಾಲಿಯಲ್ಲಿ ಕೊಡಗಿನ ಇಬ್ಬರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ. ನಿಫಾ (ನ್ಯಾಶನಲ್ ಇಂಟೆಗ್ರೇಟೆಡ್ ಫಾರಂ ಆಫ್‌ ಆರ್ಟಿಸ್ಟ್ಸ್ ಮತ್ತು  ಆಕ್ಟಿವಿಸ್ಟ್ಸ್) ಸಿಲ್ವರ್ ಜ್ಯೂಬಿಲಿ ಅಂಗವಾಗಿ ನಿಫಾ ಮತ್ತು ವರ್ಲ್ಡ್‌ ರೆಕಾರ್ಡ್ಸ್ ಆಫ್ ಎಕ್ಸೆಲೆನ್ಸ್ ಇಂಗ್ಲೆಂಡ್ ಭಾರತದಾದ್ಯಂತ ಎಲ್ಲಾ ರಾಜ್ಯ ಹಾಗೂ ಜಿಲ್ಲೆಗಳಿಂದಲೂ ಆಯ್ದ ಸಮಾಜಸೇವಕರಿಗಾಗಿ ನವದೆಹಲಿಯಲ್ಲಿ ಆಯೋಜಿಸಿದ ರಾಷ್ಟ್ರೀಯ ಏಕತಾ ರ‍್ಯಾಲಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿ ರಾಷ್ಟ್ರೀಯ ಯುವ ಸಾಮಾಜಿಕ ಕಾರ್ಯಕರ್ತ-ಯಂಗ್ ಕಮ್ಯುನಿಟಿ ಚಾಂಪಿಯನ್ ಪುರುಷ ವಿಭಾಗದಲ್ಲಿ ಪ್ರವೀಣ್ ಸಿದ್ದಾಪುರ  ಹಾಗೂ ಮಹಿಳಾ ವಿಭಾಗದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಕೊಡಗು ಮೂಲದ ಆರ್.ಗಾಯತ್ರಿ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹರಿಯ‍ಾಣದ ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ರಾವ್ ನರ್ಬೀರ್ ಸಿಂಗ್ ಪ್ರಶಸ್ತಿ ಪ್ರದಾನ ಮಾಡಿದರು.

Read More

ಮಡಿಕೇರಿ ಸೆ.26 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸಹಯೋಗದೊಂದಿಗೆ ಕೆನರಾ ಬ್ಯಾಂಕ್ ಹಾಗೂ ಕರ್ನಾಟಕ ಬ್ಯಾಂಕ್ ವತಿಯಿಂದ ಕೊಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿಡ್ಡಳ್ಳಿ ಹಾಡಿಯಲ್ಲಿ ಜನ ಸುರಕ್ಷಾ ಆಂದೋಲನ ನಡೆಯಿತು.  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್ಥಿಕ ಸಮಾಲೋಚಕರಾದ ನಬಿ, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ.ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ.ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000 ರೂ.…

Read More