ವಿರಾಜಪೇಟೆ ನ.3 NEWS DESK : ಬಳಕೆದಾರರ ಮತ್ತು ಗುತ್ತಿಗೆದಾರರ ಸಮ್ಮೇಳನ ವಿರಾಜಪೇಟೆಯ ಸ್ಪೀಂಗ್ ಫೀಲ್ಡ್ ರೆಸಾರ್ಟ್ ನಲ್ಲಿ ನಡೆಯಿತು. ಕಾರ್ಯಕ್ರಮದ ಅದ್ಯಕ್ಷತೆಯನ್ನು ಮಾಜಿ ಯೋಧ ಸಲಾಂ ಅಬ್ದುಲ್ಲ ಕಡಂಗ ವಹಿಸಿದ್ದರು. ಎ.ಸಿ.ಸಿ.ಸಿಮೆಂಟ್ ಸಂಸ್ಥೆಯ ರಾಜ್ಯ ನಿರ್ದೇಶಕರಾದ ಜೀವನ್ ಅವರು ಮಾತನಾಡಿ, ನಮ್ಮ ಸಂಸ್ಥೆಯು 1936 ನೇ ಇಸವಿಯಲ್ಲಿ ಆರಂಭಗೊಂಡಿತು. ಸ್ವತಂತ್ರ ಪೂರ್ವದಲ್ಲಿ ನಮ್ಮ ಸಂಸ್ಥೆಯು ಆರಂಭ ಗೊಂಡಿತು. 1984 ರಿಂದ ಹೊರದೇಶದ ಕಂಪನಿಗಳು ನಡೆಸುತ್ತಿದ್ದವು, ನಂತರ 2022 ರಲ್ಲಿ ಅಂಬಾನಿ ಅದಾನಿ ಕಂಪನಿಯು ಮರಳಿ ಪಡೆಯಲು ಯಶಸ್ವಿಯಾಯಿತು. ಮೊದಲು 50 ಮಿಲಿಯನ್ ಟನ್ ಸಿಮೆಂಟ್ ಉತ್ಪಾದನೆ ಮಾಡುತ್ತಿತ್ತು. ಪ್ರಸ್ತುತ ನೂತನ ಆಡಳಿತ ಮಂಡಳಿಯ ರಚನೆಯಾದ ನಂತರ 110 ಮಿಲಿಯನ್ ಡನ್ ಸಿಮೆಂಟ್ ಉತ್ಪಾದನೆಯಾಗುತ್ತಿದೆ ಎಂದು ತಿಳಿಸಿದರು. ದೇಶದಲ್ಲಿ ಎಸಿಸಿ ಸಿಮೆಂಟ್ ನಲ್ಲಿ ಯಾವುದೇ ಕಲಬೆರಕೆ ಇಲ್ಲ. ಅಂಬುಜ ಎಂಬ ಸಿಮೆಂಟ್ ಕೂಡ ನಮ್ಮ ಸಂಸ್ಥೆಯೆ ನಿರ್ವಹಣೆ ಮಾಡುತ್ತಿದೆ ಎಂದು ತಿಳಿಸಿದರು. ಈ ಬಾರಿ ಅತಿ ಹೆಚ್ಚು ಸಿಮೆಂಟ್ ಖರೀದಿ ಮಾಡಿದ…
ಲೇಖಕ: admin
ಪುತ್ತೂರು ನ.3 NEWS DESK : ಸ್ವಚ್ಚ ಭಾರತ ಸ್ವಸ್ಥ ಭಾರತ ಎನ್ನುವ ಕೇಂದ್ರ ಸರ್ಕಾರದ ಪರಿಕಲ್ಪನೆಯನ್ವಯ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್ಎಸ್ಎಸ್ ವಿಭಾಗದ ವಿದ್ಯಾರ್ಥಿಗಳು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಳದ ಸುತ್ತಮುತ್ತ ಸ್ವಚ್ಚತಾ ಕಾರ್ಯವನ್ನು ನಡೆಸಿದರು. ವಿದ್ಯಾರ್ಥಿಗಳಲ್ಲಿ ಮತ್ತು ಸ್ಥಳೀಯ ಜನರಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸುವುದಕ್ಕಾಗಿ ನಡೆದ ಈ ಅಭಿಯಾನದಲ್ಲಿ 58 ಎನ್ಎಸ್ಎಸ್ ಸ್ವಯಂಸೇವಕರು ಮತ್ತು ಅಧಿಕಾರಿಗಳು ಭಾಗವಹಿಸಿದರು. ಸ್ವಚ್ಚ ಸಮುದಾಯ ಮತ್ತು ಸಾಮಾಜಿಕ ಜವಾಬ್ಧಾರಿಯನ್ನು ಉತ್ತೇಜಿಸುವ ಈ ಕಾರ್ಯಕ್ರಮವನ್ನು ದೇವಳದ ಆಡಳಿತ ಮಂಡಳಿಯವರು ಶ್ಲಾಘಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಪುತ್ತೂರು ನ.3 NEWS DESK : ಇಂಜಿನಿಯರಿಂಗ್ ಎಂದರೆ ಕೇವಲ ಪ್ರೊಗ್ರಾಮಿಂಗ್ ಲ್ಯಾಂಗ್ವೇಜ್ಗಳನ್ನು ಕಲಿಯುವುದಲ್ಲ ಬದಲಾಗಿ ನೈಜ ಜಗತ್ತಿನ ಸಾಮಾಜಿಕ ಸಮಸ್ಯೆಗಳನ್ನು ಅರಿತುಕೊಂಡು ಅದಕ್ಕೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದೇಆಗಿದೆ ಎಂದು ಐಇಇಇ ಮಂಗಳೂರು ಉಪ ವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ್.ಪಿ.ಎಸ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಐಇಇಇ ವಿದ್ಯಾರ್ಥಿ ವಿಭಾಗ, ಐಇಇಇ ಮಂಗಳೂರು ಉಪ ವಿಭಾಗ ಮತ್ತು ಐಇಇಇ ಬೆಂಗಳೂರು ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ಉಪವಿಭಾಗ ಮಟ್ಟದ ಪ್ರಾಥಮಿಕ ಸುತ್ತಿನ ಬಹುವಿಭಾಗೀಯ ಹ್ಯಾಕಥಾನ್ ಸ್ಪರ್ಧೆ ಅನ್ವೇಶಣ್-2025 ಕ್ಕೆ ಚಾಲನೆ ನೀಡಿ ಅವರು ಮಾತಾಡಿದರು. ಗೌರವ ಅತಿಥಿಗಳಾಗಿದ್ದ ಐಇಇಇ ಮಂಗಳೂರು ಉಪ ವಿಭಾಗದ ಕಾರ್ಯದರ್ಶಿ ಡಾ.ವಿನಯ್ ಕುಮಾರ್ ಜಾಧವ್ ಮಾತನಾಡಿ, ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾದಾಗ ಅದಕ್ಕೆ ಸೃಜನಾತ್ಮಕವಾಗಿ ಉತ್ತಮ ಕಾರ್ಯತಂತ್ರದೊಂದಿಗೆ ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದರು. ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ, ಮಂಗಳೂರು ಉಪವಿಭಾಗದಾದ್ಯಂತ 21 ಕಾಲೇಜುಗಳ 58 ತಂಡಗಳು ಇಲ್ಲಿ ಭಾಗವಹಿಸುತ್ತಿದ್ದು, ನಾವೀನ್ಯತೆ,…
ಮಡಿಕೇರಿ ನ.3 NEWS DESK : ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸೌಹಾರ್ದತೆ, ಒಗ್ಗಟ್ಟು ಸಾಧ್ಯವಿದೆ ಎಂದು ಮಡಿಕೇರಿಯ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ನಗರದ ಪೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜಿನ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ರೋಟರಿ ವಲಯ 6 ರ ಕಲಾಕಲರವ ಸಾಂಸ್ಕೃತಿಕ ಸ್ಪಧೆ೯ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ರೋಟರಿ ಸಂಸ್ಥೆಯು ಸ್ವಾಥ೯ರಹಿತವಾಗಿ ಸಾಮಾಜಿಕ ಕಳಕಳಿಯೊಂದಿಗೆ ನಿರಂತವಾಗಿ ಸೇವೆ ಸಲ್ಲಿಸುತ್ತಾ ಬಂದಿದೆ. ರೋಟರಿ ಕೇವಲ ಸಂಸ್ಥೆಯಾಗಿ ಮಾತ್ರವಲ್ಲದೇ ಸಮಾಜದಲ್ಲಿಯೂ ಜನರನ್ನು ಒಗ್ಗೂಡಿಸುವ ಸಂದೇಶಗಳನ್ನು ಸಾರಿ ಹೇಳುತ್ತಾ ಬಂದಿದೆ. ಅವಿಭಕ್ತ ಕುಟುಂಬ ಪದ್ದತಿ ಕ್ಷೀಣಿಸುತ್ತಿರುವ ಇಂದಿನ ದಿನಗಳಲ್ಲಿ ರೋಟರಿಯಂಥ ಸಂಸ್ಥೆ ಎಲ್ಲರನ್ನೂ ಒಗ್ಗೂಡಿಸಿ ಸ್ವಾಥ೯ ರಹಿತ ಸಮಾಜ ಸೇವಗೆ ಕಾರ್ಯಪ್ರವೃತ್ತವಾಗಿರುವುದು ಭವಿಷ್ಯದ ಸಮಾಜದ ದೖಷ್ಟಿಯಿಂದ ಆಶಾದಾಯಕವಾಗಿದೆ ಎಂದು ಶ್ಲಾಘಿಸಿದರು. ಈಗಿನ ಕಾಲದಲ್ಲಿ ಜನ ಸ್ವಾಥ೯ದ ಉದ್ದೇಶದ ಕಾಯ೯ಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಎಲ್ಲವೂ ತನಗೆ ಮಾತ್ರ ಎಂಬ ಸ್ವಾಥ೯ ಮನೋಭಾವ.ಕಂಡುಬರುತ್ತಿದೆ. ಆದರೆ…
ಮಡಿಕೇರಿ ನ.3 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು, ಮೂರ್ನಾಡು ಹೋಬಳಿ ಘಟಕ, ಮೂರ್ನಾಡು ಗ್ರಾಮ ಪಂಚಾಯಿತಿ, ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನ.6 ರಂದು ಮೂರ್ನಾಡುವಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ “ಕನ್ನಡ ಹಬ್ಬ” ಸಂಭ್ರಮದಿಂದ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ ನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರು ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಮೂರ್ನಾಡುವಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಭವ್ಯ ಮೆರವಣಿಗೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವಿ.ದೀರ್ಘಕೇಶಿ ಶಿವಣ್ಣ ಅವರು ಉದ್ಘಾಟಿಸಲಿದ್ದಾರೆ. 10.30 ಗಂಟೆಗೆ ಶಾಸಕರು ರಾಷ್ಟ್ರಧ್ವಜ ಹಾಗೂ ಕನ್ನಡ ಸಾಹಿತ್ಯ ಪರಿಷತ್…
ಮಡಿಕೇರಿ ನ.3 NEWS DESK : ಅವಕಾಡೊ ಹಣ್ಣು ಕುಯ್ಯುವ ವೇಳೆ ಮರದಿಂದ ಬಿದ್ದು, ಸೊಂಟದ ಮೂಳೆ ಮುರಿದು ತೀವ್ರ ತೊಂದರೆಯಿಂದ ನರಳುತ್ತಿದ್ದ ಕೂಲಿ ಕಾರ್ಮಿಕ ರಾಮಚಂದ್ರಪ್ಪ ಅವರು ಗುಣಮುಖರಾಗಿದ್ದು, ಚಿಕಿತ್ಸೆಗೆ ಸಹಕರಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದ ಸಂದರ್ಭ ಪಾಲಿಬೆಟ್ಟದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗಣೇಶ್ ಚೆನ್ನಯನಕೋಟೆ ಅವರು ತಕ್ಷಣವೇ ಮೈಸೂರು ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಿಸಿದರು. ವೈದ್ಯರು ಶಸ್ತ್ರಚಿಕಿತ್ಸೆಗೆ ಸುಮಾರು ರೂ.3 ಲಕ್ಷ ವೆಚ್ಚ ಬರುವುದಾಗಿ ತಿಳಿಸಿದರು. ಈ ಬಗ್ಗೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮಾಹಿತಿ ನೀಡಿದ ಮೇರೆಗೆ ಶಾಸಕರು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ , ಕೆ.ಆರ್.ಆಸ್ಪತ್ರೆಯ ನಿರ್ದೇಶಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ತಕ್ಷಣವೇ ತಮ್ಮ ಕಾರ್ಯದರ್ಶಿಗಳ ಮೂಲಕ ಶಿಫಾರಸು ಪತ್ರ ನೀಡಿ, ಸರ್ಕಾರದ ಸಹಾಯದಡಿ 3 ಲಕ್ಷ ರೂಪಾಯಿಗಳ ವೆಚ್ಚದ ಉಚಿತ ಶಸ್ತ್ರಚಿಕಿತ್ಸೆ ನಡೆಸಿ ಕೊಡುವಲ್ಲಿ ಮಾನವೀಯತೆ ಮೆರೆದಿದ್ದಾರೆ. ಇಂದು ರಾಮಚಂದ್ರಪ್ಪ…
ಬೆಂಗಳೂರು ನ.3 NEWS DESK : ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ನ.13 ರಿಂದ 19 ರ ವರೆಗೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ಏರ್ಪಡಿಸಲಾಗಿದೆ. ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆ ರಾಜ್ಯದ ಅಭ್ಯರ್ಥಿಗಳಿಗೆ 30 ಜೂನ್ 2025 ರಿಂದ 10 ಜುಲೈ 2025 ರವರೆಗೆ ನಡೆಸಲಾದ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ವರ್ಗಗಳ ಅರ್ಜಿದಾರರನ್ನು (ಅನ್ವಯವಾಗುವಂತೆ) ವರ್ಗವಾರು ರ್ಯಾಲಿಗೆ ಕರೆಯಲಾಗಿದೆ. :: ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ರಾಜ್ಯ ಮತ್ತು ಜಿಲ್ಲೆಗಳ ವಿವಿಧ ವರ್ಗ: ಅಗ್ನಿವೀರ್ ಸಾಮಾನ್ಯ ಕರ್ತವ್ಯ ಮಾತ್ರ(ಅಗ್ನಿವೀರ್ ಸಾಮಾನ್ಯ ಕರ್ತವ್ಯ ವರ್ಗಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು): ಕರ್ನಾಟಕ ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ವಿಜಯನಗರ. :: ಅಗ್ನಿವೀರ್ ಜನರಲ್ ಡ್ಯೂಟಿ ವರ್ಗ (ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್…
ಕುಶಾಲನಗರ ನ.3 NEWS DESK: ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ಶ್ರೀ ಯೋಗಿ ನಾರೇಯಣ ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಕುಶಾಲನಗರದ ಆರ್.ಸೋಮಶೇಖರ್ ಆಯ್ಕೆಯಾಗಿದ್ದಾರೆ. ಕುಶಾಲನಗರದ ಸಂಘದ ಭವನದಲ್ಲಿ ಹಿಂದಿನ ಅಧ್ಯಕ್ಷ ಬಿಎಸ್ ಆರ್ ಬಾಬಣ್ಣ ಅವರ ಅಧ್ಯಕ್ಷತೆಯಲ್ಲಿ ಸಂಘದ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸಂಘದ ಗೌರವ ಅಧ್ಯಕ್ಷರಾಗಿ ಆರ್.ಬಾಬಣ್ಣ, ಉಪಾಧ್ಯಕ್ಷರುಗಳಾಗಿ ಟಿ.ಎಸ್.ನಿರಂಜನ್, ಟಿ.ಆರ್.ಜಗದೀಶ್, ಸಿ.ಆರ್.ಮದನ್, ಕಾರ್ಯದರ್ಶಿಯಾಗಿ ಟಿ.ಎನ್.ಜಯರಾಮ್, ಸಹಕಾರ್ಯದರ್ಶಿಯಾಗಿ ಸಿ.ಜಗದೀಶ್, ಖಜಾಂಚಿಯಾಗಿ ಜಿ.ಆರ್.ಸಂಧ್ಯಾಗಣೇಶ್, ನಿರ್ದೇಶಕರುಗಳಾಗಿ ಕೆ.ಬಾಲಸುಬ್ರಮಣ್ಯಂ, ಉಮೇಶ್, ಕಿರಣ್, ಕುಶ, ನೂತನ್, ಸವಿತಾ ದಯಾನಂದ, ಮಂಜುಳಾ, ಗೌರವ ಸಲಹೆಗಾರರಾಗಿ ಟಿ.ಎಸ್.ಬಾಲಕೃಷ್ಣ, ಟಿ.ಬಿ.ಸತೀಶ್, ಟಿ.ಡಿ.ದಯಾನಂದ, ಎಂ.ಆರ್.ಗಣೇಶ್ ನೇಮಕವಾಗಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಜಯರಾಮ್ ತಿಳಿಸಿದ್ದಾರೆ. ನೂತನ ಅಧ್ಯಕ್ಷರಾದ ಸೋಮಶೇಖರ್ ಮಾತನಾಡಿ, ಕುಶಾಲನಗರ ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ ಇರುವ ಯೋಗಿ ನಾರೇಯಣ ಬಲಿಜ ಸಮಾಜದ ಬೆಳವಣಿಗೆಗೆ ಶಕ್ತಿ ಮೀರಿ ಶ್ರಮಿಸಲಾಗುವುದು. ಸಂಘದ ಸದಸ್ಯರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದು ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ದಿ ಹೊಂದಬೇಕಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ…
ಸೋಮವಾರಪೇಟೆ ನ.3 NEWS DESK : ವಲಯ 14ರ “ಜೂನಿಯರ್ ಚೇಂಬರ್ ಇಂಟರ್ನ್ಯಾಷನಲ್” (JCI) ಸಮ್ಮೇಳನ “ವಿಜಯಪರ್ವ – 2025” ಕಾರ್ಯಕ್ರಮವು ಚಿಕ್ಕಮಗಳೂರಿನ ಹೋಟೆಲ್ ಸಿ.ಎನ್. ವಿಂಡ್ಸರ್ ನಲ್ಲಿ ಜೇಸಿಐ ಚಿಕ್ಕಮಂಗಳೂರು ಮಲ್ನಾಡ್ ಘಟಕದ ಆತಿಥ್ಯದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕವು ಶೇ.100ರಷ್ಟು ಪರಿಣಾಮಕಾರಿಯಾಗಿ ತನ್ನ ವಾರ್ಷಿಕ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣ ವರ್ಷದ ಶೇ.100 ಶ್ರೇಷ್ಠ ಕಾರ್ಯಕ್ಷಮತೆ ಪ್ರಶಸ್ತಿ” ಗೌರವವನ್ನು ಪಡೆದಿದೆ. ವಲಯ 14ರ ಅಧ್ಯಕ್ಷರಾದ ಜೇಸಿ ವಿಜಯಕುಮಾರ್ ಅವರು ಈ ಪ್ರಶಸ್ತಿಯನ್ನು ಘಟಕದ ಅಧ್ಯಕ್ಷರಾದ ಜೇಸಿ ಜಗದಾಂಬ ಗುರುಪ್ರಸಾದ್ ಅವರಿಗೆ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ವಲಯ ನಿರ್ದೇಶಕಿ ಮಾಯಾ ಗಿರೀಶ್, ಜೇಸಿ ಗಿರೀಶ್, ಜೆಎಸಿ ಮಮತಾ ಹಾಗೂ ಜೇಸಿ ಗುರುಪ್ರಸಾದ್ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷ ಜೇಸಿ ಜಗದಾಂಬ ಗುರುಪ್ರಸಾದ್ ಅವರು ಮಾತನಾಡಿ “ಈ ಗೌರವ ನಮ್ಮ ಘಟಕದ ಪ್ರತಿಯೊಬ್ಬ ಸದಸ್ಯರ ಶ್ರಮ, ನಿಷ್ಠೆ ಮತ್ತು ಸೇವಾಭಾವನೆಯ ಫಲ. ಸಮಾಜಮುಖಿ ಚಟುವಟಿಕೆಗಳು ಮತ್ತು ಯುವ ನಾಯಕತ್ವದ…
ಸೋಮವಾರಪೇಟೆ ನ.3 NEWS DESK : ಮಕ್ಕಳ ಹಕ್ಕು ಸಂರಕ್ಷಣೆ ಹಾಗೂ ಜಾಗೃತಿಗಾಗಿ ಜಿಲ್ಲಾಮಟ್ಟದ ಮಕ್ಕಳ ಸಂಸತ್ತು ಕಾರ್ಯಕ್ರಮ ಸೋಮವಾರಪೇಟೆಯಲ್ಲಿ ನಡೆಯಿತು. ಮಕ್ಕಳ ಹಕ್ಕುಗಳ ನಿಗಾಕೇಂದ್ರ, ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು, ಯುನಿಸೆಫ್ ಹಾಗೂ ನಾವು ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಉದ್ಘಾಟಿಸಿದರು. ನಾವು ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕಿ ಸುಮನಾ ಮಾತನಾಡಿ, 18ವರ್ಷದ ಒಳಗಿನವರನ್ನು ಮಕ್ಕಳೆಂದು ಪರಿಗಣಿಸಲಾಗುತ್ತದೆ. ಅವರಿಗೂ ಹಕ್ಕುಗಳಿವೆ ಅದು ಎಲ್ಲಾರಿಗೂ ಸಿಗುವಂತಾಗಬೇಕು ಮತ್ತು ರಕ್ಷಿಸಬೇಕೆಂದು ತಿಳಿಸಿದರು. ಎಲ್ಲಾ ಮಕ್ಕಳ ಬದುಕು, ರಕ್ಷಣೆ, ಅಭಿವೃದ್ಧಿ ಹಾಗೂ ಭಾಗವಹಿಸುವ ಹಕ್ಕುಗಳನ್ನು ಖಾತ್ರಿಪಡಿಸುವುದು ಕಾರ್ಯಕ್ರಮದ ಉದ್ದೇಶವೆಂದು ತಿಳಿಸಿದರು. ಪಡುವಲಹಿಪ್ಪೆಯ ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸಂಜೀವಕುಮಾರ ಎಲೆಬಳ್ಳಿ, ನಿವೃತ್ತ ಉಪನ್ಯಾಸಕಿ ತಿಲೋತ್ತಮೆ, ಮಹಿಳಾ ಸಮಾಜದ ಅಧ್ಯಕ್ಷ ವಿಜಯಲಕ್ಷ್ಮಿ, ನಾವು ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ತಿತರಿದ್ದರು.






