ಬೆಂಗಳೂರು ಸೆ.26 NEWS DESK : ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ–ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗವು ಭೇಟಿ ನೀಡಿತು. ಈ ಸಂದರ್ಭ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ಕೇಂದ್ರದ ಧ್ಯೇಯ, ಮುಂದುವರೆದ ಸಾಮಥ್ರ್ಯಗಳು, ಬೆಳೆ ಮೇಲ್ವಿಚಾರಣೆ ಹಾಗೂ ವಿಪತ್ತು ನಿರ್ವಹಣೆಯಿಂದ ನಗರ ಯೋಜನೆ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆವರೆಗೆ ಬಾಹ್ಯಾಕಾಶ ಆಧಾರಿತ ಆಡಳಿತ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ವೈವಿಧ್ಯಮಯ ಅನ್ವಯಿಕೆಗಳನ್ನು ಪ್ರಸ್ತುತಪಡಿಸಿದರು. ಕಿಟ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಪ್ರಮೋದ್ ಎಲ್.ಪಾಟೀಲ್ ಅವರು, ಕರಡು ಕರ್ನಾಟಕ ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳನ್ನು ಹಂಚಿಕೊಂಡು ಜಾಗತಿಕ ಸಾಮಥ್ರ್ಯ ಕೇಂದ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವುದನ್ನು ತಿಳಿಸಿದರು. ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ (ಜಿಐಎ) ಅಡಿಯಲ್ಲಿ ಸುಗಮಗೊಳಿಸಲಾದ ಈ…
ಲೇಖಕ: admin
ಗೋಣಿಕೊಪ್ಪ ಸೆ.26 NEWS DESK : ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಗಮನ ಸೆಳೆದ ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜರ್ಸಿಗಳನ್ನು ವಿತರಿಸಲಾಯಿತು. ಗಿರಿಜನ ಮಕ್ಕಳ ಕ್ರೀಡಾ ಸ್ಫೂರ್ತಿಯನ್ನು ಮನಗಂಡು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎನ್.ದಿನೇಶ್ ಅವರ ನೇತೃತ್ವದಲ್ಲಿ ಜರ್ಸಿ ವಿತರಿಸಿದರು. ಶಾಲೆಯ ಮುಖ್ಯೋಪಾಧ್ಯಾಯನಿ ಮಂಗಳ ಮಾತನಾಡಿ, ಕ್ರೀಡಾ ಮನೋಭಾವನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪತ್ರಕರ್ತರು ಮಕ್ಕಳನ್ನು ಗುರುತಿಸಿರುವುದು ವಿದ್ಯಾರ್ಥಿಗಳಿಗೆ ಬಹುದೊಡ್ಡ ಪ್ರೋತ್ಸಾಹವಾಗಿದೆ ಎಂದು ಹೇಳಿದರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಜಗದೀಶ್ ಜೋಡುಬೀಟಿ ಮಾತನಾಡಿ, ಕ್ರೀಡಾ ಮನೋಭಾವನೆ ಹೊಂದುವುದರಿಂದ ಸಕರಾತ್ಮಕ ಚಿಂತನೆಗಳು ಹುಟ್ಟಿಕೊಳ್ಳುತ್ತದೆ. ಈ ಮೂಲಕ ಸಮಾಜದಲ್ಲಿ ಆತ್ಮಸ್ಥೈರ್ಯದಿಂದ ಬದುಕಲು ಸಾಧ್ಯ ಎಂದರು. ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡಾಗ ವ್ಯಸನಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯವಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ, ಸಹ ಶಿಕ್ಷಕರುಗಳಾದ ಪ್ರೇಮ, ಹರ್ಶಿತಾ,…
ಮಡಿಕೇರಿ ಸೆ.26 NEWS DESK : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಅಪೌಷ್ಟಿಕ ಮಕ್ಕಳ ಪೌಷ್ಠಿಕ ಪುನಃಚೇತನ ಕೇಂದ್ರ ನಡೆಸಲಾಗುತ್ತಿದೆ. ಇದು ಸರ್ಕಾರದ ಯೋಜನೆಯಾಗಿದೆ. ಪೌಷ್ಟಿಕ ವಿಭಾಗವು ರಾಜ್ಯದ ಅನುದಾನದ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನಡೆಸಲಾಗುತ್ತಿದೆ. 0-6 ವರ್ಷದೊಳಗಿನ, ಅಪೌಷ್ಟಿಕತೆ ಮತ್ತು ಸಾಧಾರಣ ಅಪೌಷ್ಟಿಕತೆಯುಳ್ಳ ಅಪೌಷ್ಟಿಕ ಮಕ್ಕಳನ್ನು ಇಲ್ಲಿ ದಾಖಲಿಸಿಕೊಳ್ಳಲಾಗುತ್ತದೆ. :: ಮಾನದಂಡಗಳು :: ವಿಶ್ವ ಆರೋಗ್ಯ ಸಂಸ್ಥೆಯ ಬೆಳವಣಿಗೆ ನಕ್ಷೆಯ ಪ್ರಕಾರ ಎತ್ತರಕ್ಕೆ ತಕ್ಕ ತೂಕ ಕಡಿಮೆ ಇರುವ ಮಕ್ಕಳು ತೋಳಿನ ಸುತ್ತಳತೆ (11.5 ಸೆಂ.ಮೀ.) ಒಳಗೆ (ತೀವ್ರ ಪೌಷ್ಟಿಕತೆ) ತೋಳಿನ ಸುತ್ತಳತೆ 11.5 -12.5 ಸೆಂ.ಮೀ. ಒಳಗೆ (ಸಾಧಾರಣ ಅಪೌಷ್ಟಿಕತೆ) ಮಕ್ಕಳು ಪಾದದಲ್ಲಿ ಊತ (ಪೀಡಲ್ ಎಡಿಮಾ), ಇದ್ದಾಗ, 0-6 ವರ್ಷದೊಳಗಿನ ಅಪೌಷ್ಟಿಕತೆಯೊಂದಿಗೆ ರಕ್ತಹೀನತೆ ಉಳ್ಳ ಮಕ್ಕಳನ್ನು ಮತ್ತು ಸಿವಿಯರ್ ವೇಸ್ಟಿಂಗ್ (ಶರೀರದಲ್ಲಿ ಮೂಳೆಗಳು ಎದ್ದು ಕಾಣುವುದು) ಇಂತಹ…
ಮಡಿಕೇರಿ ಸೆ.25 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಐದನೇ ದಿನವಾದ ಇಂದು ಶ್ರೀ ಮಹಾಲಕ್ಷ್ಮಿ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಸೆ.27 ರಂದು ಚಾಮುಂಡೇಶ್ವರಿ ಅಲಂಕಾರ ಪೂಜೆ ನಡೆಯಲಿದೆ.
ಬೆಂಗಳೂರು ಸೆ.26 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಮುಖಂಡರು ವಸತಿ ಹಾಗೂ ಅಲ್ಪಸಂಖ್ಯಾತರ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಸಮಾಲೋಚಿಸಿದರು. ಬೆಂಗಳೂರಿನ ವಸಂತನಗರದಲ್ಲಿ ಇರುವ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ವಸತಿ ಸಚಿವರ ಅದ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಕ್ರಿಶ್ಚಿಯನ್ ಸಮುದಾಯದ ಮೂಲ ಸೌಲಭ್ಯಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲಾಯಿತಲ್ಲದೆ, ಸಚಿವರು ಮುಖಂಡರುಗಳ ಅಹವಾಲುಗಳನ್ನು ಸ್ವೀಕರಿಸಿ ಶೀಘ್ರ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಿರಾಜಪೇಟೆ ತಾಲೂಕಿನ ಕ್ರಿಶ್ಚಿಯನ್ ಧರ್ಮ ಗುರಗಳು, ಕಾಂಗ್ರೆಸ್ ಮುಖಂಡರುಗಳಾದ ಜೋಕಿಮ್, ಜಾನ್ಸನ್, ಬಾಬು, ರೋಬಿನ್, ಅಂಟೋನಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. 20 gkl 01
ಮಡಿಕೇರಿ ಸೆ.26 NEWS DESK : ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರ ಸಭೆ ನಡೆಯಿತು. ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್, ಸಚಿವರುಗಳಾದ ಸಂತೋಷ್ ಲಾಡ್, ಎನ್.ಎಸ್ ಭೋಸರಾಜು, ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿ.ಆರ್.ಸುದರ್ಶನ್, ಸೀತಾರಾಮ್, ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಸೇರಿದಂತೆ ಮುಖಂಡರು ಸಭೆಯಲ್ಲಿ ಭಾಗವಹಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು ‘ಜನಸಂಖ್ಯೆಗೆ ತಕ್ಕ ಪಾಲು ನಮ್ಮ ಹಕ್ಕು’ ಸಮೀಕ್ಷೆಯಲ್ಲಿ ಪತ್ತೆಯಾಗುವ ಅಂಕಿ ಅಂಶದ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು ಎಂದು ತಿಳಿಸಿದರು.
ಮಡಿಕೇರಿ ಸೆ.26 NEWS DESK : ಮಡಿಕೇರಿ ದಸರಾ ಸಮಿತಿ ಮತ್ತು ಯುವ ದಸರಾ ಸಮಿತಿ ವತಿಯಿಂದ ಸೆ.26 ಮತ್ತು 27ರಂದು ಯುವ ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಕವನ್ ಕೊತ್ತೋಳಿ ತಿಳಿಸಿದರು. ನಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಯುವ ದಸರಾವನ್ನು ವಿಜೃಂಭಣೆಯಿಂದ ನಡೆಸಲು ಯುವಕರ ತಂಡ ಸಜ್ಜಾಗಿದ್ದು, ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು. ಸೆ.26 ರಂದು ನಗರದ ಬಾಲಭವನದಲ್ಲಿ ಉದ್ಯೋಗ ವಿನಿಮಯ ಕಚೇರಿ ಸಹಭಾಗಿತ್ವದಲ್ಲಿ ಮೊದಲ ಬಾರಿಗೆ ಯುವದಸರಾದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಹಲವು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುತ್ತಿದ್ದು, ಯುವಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕವನ್ ಕೊತ್ತೋಳಿ ಮನವಿ ಮಾಡಿದರು. ಅಂದು ಬೆಳಗ್ಗೆ 10 ಗಂಟೆಗೆ ನಗರಸಭೆ ಅಧ್ಯಕ್ಷೆ ಹಾಗೂ ದಸರಾ ಸಮಿತಿ ಅಧ್ಯಕ್ಷೆ ಪಿ.ಕಲಾವತಿ ಅವರು ಅಧ್ಯಕ್ಷತೆ ವಹಿಸಲಿದ್ದು, ಪ್ರಮುಖರಾದ ಪ್ರಕಾಶ್ ಆಚಾರ್ಯ, ಹರಿಪ್ರಸಾದ್ ಕೋಚನ, ಹಬೀಬ್ ಅಹ್ಮದ್, ಶರಣ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಅಲ್ಲದೆ ಬೆಳಗ್ಗೆ 10.30…
ಗೋಣಿಕೊಪ್ಪ ಸೆ.26 NEWS DESK : ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಅವರನ್ನು ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಶಾಲೆ ಅಭಿವೃದ್ಧಿ ಸಮಿತಿ ಸಭೆಯ ನಂತರ ಸನ್ಮಾನ ಕಾರ್ಯಕ್ರಮ ಸಹ ಶಿಕ್ಷರ ಉಪಸ್ಥಿತಿಯಲ್ಲಿ ನಡೆಯಿತು. ಶಾಲೆಯ ಅಭಿವೃದ್ಧಿಗೆ ಪೂರಕವಾದ ಮನಸ್ಥಿತಿಯ ನಡೆಯಿಂದ ಮುಖ್ಯ ಶಿಕ್ಷಕರಿಗೆ ಪ್ರಶಸ್ತಿ ಬರಲು ಸಾಧ್ಯವಾಗಿದೆ ಇದು ಶಾಲೆಗೆ ಹೆಮ್ಮೆಪಡುವ ವಿಚಾರವಾಗಿದೆ. ಈ ಪ್ರಶಸ್ತಿಯಿಂದ ಶಾಲೆಯು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ ಮತ್ತಷ್ಟು ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಉನ್ನತಿಕರಣ ಗೊಳ್ಳುವ ಮೂಲಕ ಪ್ರತಿಯೊಬ್ಬ ಶಿಕ್ಷಕನು ಗೌರವಕ್ಕೆ ಪಾತ್ರರಾಗಬೇಕು ಎಂದು ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ತಿಳಿಸಿದರು. ಸನ್ಮಾನಕ್ಕೂ ಮೊದಲು ನಡೆದ ಸಮಿತಿ ಸಭೆಯಲ್ಲಿ ಶಾಲೆಯ ಅಭಿವೃದ್ಧಿಗೆ ಸಮಿತಿಯ ಸದಸ್ಯರು ತೊಡಗಿಸಿಕೊಳ್ಳುವ ಹಾಗೂ ಮಕ್ಕಳ ಪಠ್ಯ ಪ್ರವಚನ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಮಧ್ಯಾಹ್ನದ ಬಿಸಿ ಊಟ…
ಮಡಿಕೇರಿ NEWS DESK ಸೆ.25 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಸರ್ವ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕರಿಕೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕರಿಕೆ ಗೌಡ ಸಮಾಜದ ಅಧ್ಯಕ್ಷ ಕೋಡಿ ಪೊನ್ನಪ್ಪ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ GOWDA (ಗೌಡ) ಎಂದು ನಮೂದಿಸಲು ನಿರ್ಣಯ ಕೈಗೊಂಡಿದ್ದು, ಇದಕ್ಕೆ ಕರಿಕೆ ಗೌಡ ಸಮಾಜದ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ…
ಸಿದ್ದಾಪುರ NEWS DESK ಸೆ.25 : ಶ್ರೀ ಸಿದ್ದಿ ವಿನಾಯಕ ಮಿತ್ರ ಮಂಡಳಿ ವತಿಯಿಂದ 16 ನೇ ವರ್ಷದ ಗೌರಿ ಗಣೇಶೋತ್ಸವ ಅಂಗವಾಗಿ ಇಲ್ಲಿನ ಅಂಬೇಡ್ಕರ್ ನಗರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ವಿಜೃಂಭಣೆಯಿಂದ ನಡೆಯಿತು. ಅರ್ಚಕರಾದ ರಘು ಭಟ್ಟರ ನೇತೃತ್ವದಲ್ಲಿ ಗಣಪನಿಗೆ ಹೋಮ ಮಂಗಳಾರತಿ ವಿಶೇಷ ಪೂಜಾ ಕೈಂಕರ್ಯ ನಡೆಯಿತು. ಸಿದ್ದಾಪುರ ನೆಲ್ಯಹುದಿಕೇರಿ ಅಮ್ಮತ್ತಿ ವಿರಾಜಪೇಟೆ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ವಿಶೇಷ ಪೂಜೆ ಬಳಿಕ ಪುಷ್ಪಾಲಂಕೃತ ಭವ್ಯ ಮಂಟಪದಲ್ಲಿ ಮೂರ್ತಿಗಳನ್ನು ಕುಳ್ಳಿರಿಸಿ ಸಿದ್ದಾಪುರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ಕಾವೇರಿ ನದಿಗೆ ವಿಸರ್ಜಿಸಲಾಯಿತು. ಶ್ರೀ ಸಿದ್ದಿ ವಿನಾಯಕ ಮಿತ್ರ ಮಂಡಳಿ ವತಿಯಿಂದ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಸೇರಿದಂತೆ ಹಲವು ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮ ಪಂಚಾಯತಿ ಸದಸ್ಯ ಜಾಫರ್ ಅಲಿ ಮಾತನಾಡಿ ಹಬ್ಬಗಳ ಆಚರಣೆ ಮೂಲಕ ಸುಂದರ…






