ಮಡಿಕೇರಿ NEWS DESK ಸೆ.25 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ, ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ಸರ್ವ ಅರೆಭಾಷೆ ಗೌಡರು ನಮೂದಿಸಬೇಕೆಂದು ಯಲಹಂಕ ಗೌಡ ಸಮಾಜದ ಅಧ್ಯಕ್ಷ ಕುಂಞಳಿಯನ ಅಜಿತ್ ಕುಮಾರ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಉಪಜಾತಿ ಎನ್ನುವ ಕಾಲಂನಲ್ಲಿ ಅರೆಭಾಷೆ ಗೌಡ ಎಂದು ಸೂಚಿಸಬೇಕು. ಅರೆಭಾಷೆ ಗೌಡ ಸಮುದಾಯ ಬಾಂಧವರು ಈ ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಕಡ್ಡಾಯವಾಗಿ ರಾಜ್ಯ ಮತ್ತು ಕೇಂದ್ರದ ಗಣತಿಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮೂಲತಃ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ. ಆದರೆ…
ಲೇಖಕ: admin
ಮಡಿಕೇರಿ NEWS DESK ಸೆ.25 : ಕೊಡವರು ದೊಡ್ಡ ಧಾರ್ಮಿಕ ಗುಂಪಿನೊಂದಿಗೆ ವಿಲೀನಗೊಂಡು ಗುರುತಿಸಿಕೊಳ್ಳುವ ಮೂಲಕ ಎಲ್ಲಾ ಸರಕಾರಿ ದಾಖಲೆಗಳಲ್ಲಿ ‘ಕೊಡವ’ ಎಂಬ ಹೆಗ್ಗುರುತನ್ನು ಉಳಿಸಿಕೊಳ್ಳಲು ವಿಫಲವಾದರೆ ಅದು ಕೊಡವರ ಪವಿತ್ರ, ಧಾರ್ಮಿಕ ಸಂಸ್ಕಾರ ಬಂದೂಕು ಹಕ್ಕುಗಳ ಮುಂದುವರಿಕೆಗೆ ಹಾನಿಯಾಗುವ ಸಾಧ್ಯತೆಗಳಿರುವುದರಿಂದ ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆಯಲ್ಲಿನ ಸಂಭಾವ್ಯ ಬದಲಾವಣೆಯ ಪರಿಣಾಮಗಳನ್ನು ಕೊಡವರು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರಕಾರವು ಜಾರಿಗೆ ತಂದ ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆ, 2019, ಕೊಡವ ಶಸ್ತ್ರಾಸ್ತ್ರ ವಿನಾಯಿತಿ 2029 ರವರೆಗೆ ಮಾತ್ರ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸುತ್ತದೆ. ಈ ಪರಿಸ್ಥಿತಿಯಲ್ಲಿ ಕೊಡವರು ತಮ್ಮ ಹಕ್ಕುಗಳ ಕುರಿತು ಆಳವಾಗಿ ಚಿಂತಿಸಿ ಜನಗಣತಿಯಲ್ಲಿ ಎಚ್ಚರದಿಂದಿರುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. ಕೊಡವ ಸಮುದಾಯವು ಬಂದೂಕು ಮಾಲೀಕತ್ವದ ವಿಶಿಷ್ಟ ಸಾಂಸ್ಕೃತಿಕ ಸಂಪ್ರದಾಯವನ್ನು ಹೊಂದಿದೆ ಮತ್ತು ಶಸ್ತಾçಸ್ತçಗಳನ್ನು ಹೊಂದುವ ಅವರ ಹಕ್ಕು ಅವರ ಗುರುತಿನ ಅವಿಭಾಜ್ಯ ಅಂಗವಾಗಿದೆ. ವಿನಾಯಿತಿ…
ಮಡಿಕೇರಿ NEWS DESK ಸೆ.25 : ಮಂಡ್ಯದಲ್ಲಿ 3 ದಿನಗಳ ಕಾಲ ನಡೆದ 42ನೇ ಓಟೋರಿನೋಲಾರಿಂಗೋಲಜಿಸ್ಟ್ ಆಫ್ ಇಂಡಿಯಾ ರಾಜ್ಯ ಸಮ್ಮೇಳನದಲ್ಲಿ ಕೊಡಗಿನ ಸಂಸ್ಕೃತಿ ಸಿರಿ ಟ್ರಸ್ಟ್ ನಿಂದ ನಡೆದ ಕೊಡವ ಸಂಸ್ಕೃತಿಯ ನೃತ್ಯ ಆಕರ್ಷಿಸಿತು. ಮಂಡ್ಯದ ಅಮರಾವತಿ ಹೋಟೆಲ್ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನರಿ ಮಂಗಲ, ಉಮ್ಮತ್ತಾಟ್, ಗೆಜ್ಜೆ ತಂಡ್, ಪುತ್ತರಿ, ಉರ್ ಟಿ ಕೊಟ್ಟ್ ಆಟ್ ಹಾಗೂ ಕೊಡವ ವಾಲಗ ಕಾರ್ಯಕ್ರಮ ಅಗತ್ಯ ಮಾಹಿತಿಯೊಂದಿಗೆ ನಡೆಯಿತು. ಕೊಡವ ಸಾಂಪ್ರದಾಯಿಕ ಸೀರೆ, ಬಿಳಿ ಮತ್ತು ಕಪ್ಪು ಕುಪ್ಯಾಧಾರಿಗಳು ಉತ್ತಮ ನೃತ್ಯ ಪ್ರದರ್ಶನ ನೀಡಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ವೈದ್ಯರುಗಳ ಪ್ರಸಂಸೆಗೆ ಪಾತ್ರರಾದರು. ಕೊಡಗಿನ ನಟಿ, ನಿರ್ಮಾಪಕಿ, ಕವಿಯತ್ರಿ ಹಾಗೂ ಸಂಸ್ಕೃತಿ ಸಿರಿ ಟ್ರಸ್ಟ್ ನ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅವರು ನೃತ್ಯರೂಪಕದ ನೇತೃತ್ವ ವಹಿಸಿ ಕೊಡವ ಸಂಸ್ಕೃತಿ ಮತ್ತು ನೃತ್ಯಬಗೆಯ ವಿವರ ನೀಡಿದರು. ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಉಪಾಧ್ಯಕ್ಷೆ ಕೋಲೆಯಂಡ ನಿಶಾ ಮೋಹನ್, ಗೌರವ ಕಾರ್ಯದರ್ಶಿ…
ಮಡಿಕೇರಿ ಸೆ.25 NEWS DESK : 66/11ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಶನಿವಾರಸಂತೆ ಶಾಖಾ ವ್ಯಾಪ್ತಿಯ ಗುಡುಗಳಲೆ ಮತ್ತು ಮಧ್ಯಪೇಟೆಯಲ್ಲಿ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸೆಪ್ಟೆಂಬರ್, 26 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗುಡುಗಳಲೆ ಹಾಗೂ ಮಧ್ಯಪೇಟೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಸೆ.25 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಲು ಹಾಗೂ ಕಾನೂನು ಸೇವಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಅರ್ಜಿ ಸಲ್ಲಿಸಬಹುದು. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಶಿಕ್ಷಕರು, ನಿವೃತ್ತ ಶಿಕ್ಷಕರು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು, ನಿವೃತ್ತ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಕಾನೂನು ಕ್ಷೇತ್ರದಲ್ಲಿ ತೊಡಗಿಸಿಕೊಂಡ ಸಾಮಾಜಿಕ ಕಾರ್ಯಕರ್ತರು, ಎಂಎಸ್ಡಬ್ಲ್ಯೂ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಾನೂನು ವಿದ್ಯಾರ್ಥಿಗಳು, ರಾಜಕೀಯ ಪಕ್ಷಕ್ಕೆ ಸೇರದ ಸಂಘದವರು, ಸ್ವ ಸಹಾಯ ಮಹಿಳಾ ಗುಂಪಿನವರು, ಮಾಜಿ ಸೈನಿಕರು ಹಾಗೂ ಸೈನಿಕರ ಪತ್ನಿಯರು ಅಥವಾ ವಯಸ್ಕ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಸಮಿತಿ…
ಮಡಿಕೇರಿ ಸೆ.25 NEWS DESK : ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕೊಡವ ಭಾಷಿಕರು ಜಾತಿಯಲ್ಲಿ ಕೊಡವ ಎಂದು, ಉಪ ಜಾತಿಯಲ್ಲಿ 21 ಸಮಾಜಗಳು ತಮ್ಮ ತಮ್ಮ ಉಪಜಾತಿ, ಧರ್ಮದಲ್ಲಿ ‘ಕೊಡವ’ ಎಂದು ನಮೂದಿಸುವಂತಾಗಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಕರೆ ನೀಡಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಮೂರ್ನಾಡು ಕೊಡವ ಸಮಾಜ ಇವರ ಸಹಯೋಗದಲ್ಲಿ ಮೂರ್ನಾಡು ಕೊಡವ ಸಮಾಜದಲ್ಲಿ ಗುರುವಾರ ನಡೆದ ‘ಕೊಡವಾಮೆರ ಬಟ್ಟೆ-ಬೊಳಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಸ್ಕೃತಿಯು ಧರ್ಮದ ಮೂಲ ಬೇರಾಗಿದೆ. ಧರ್ಮ ಮತ್ತು ಸಂಸ್ಕೃತಿಯನ್ನು ಬೇರೆ ಬೇರೆಯಾಗಿ ವಿಂಗಡಿಸಲು ಅಸಾಧ್ಯ. ಆ ದಿಸೆಯಲ್ಲಿ ಕೊಡವ ಧರ್ಮ ಎಂದು ನಮೂದಿಸುವಂತಾಗಬೇಕು ಎಂದು ಪ್ರತಿಪಾದಿಸಿದರು. ಕೊಡವ ಭಾಷಿಕರ ಅಸ್ಮಿತೆಯನ್ನು ಉಳಿಸುವಲ್ಲಿ ಕೊಡವ ಭಾಷಿಕರು ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಮನವಿ ಮಾಡಿದರು. ಕೊಡವ ಭಾಷಿಕರಲ್ಲಿ 21 ಸಮಾಜಗಳು ಇದ್ದು, ಎಲ್ಲರೂ ಒಟ್ಟುಗೂಡಿ ಕೊಡವ…
ಮಡಿಕೇರಿ ಸೆ.25 NEWS DESK : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ದೇಶಭಕ್ತಿ ಮತ್ತು ದೇಶ ರಕ್ಷಣೆಯ ಕುರಿತು ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವ ಎಂ.ಸುರೇಶ್ ಕರೆ ನೀಡಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಎನ್ಸಿಸಿ ಘಟಕದ ವತಿಯಿಂದ ‘ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಲಕ್ಷಣಗಳು’ ಎಂಬ ವಿಷಯದ ಕುರಿತು ನಡೆದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಎನ್ಸಿಸಿಗೆ ಸೇರುವುದರ ಮೂಲಕ ಶಿಸ್ತನ್ನು ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕಬೇಕು. ತಮ್ಮ ಭವಿಷ್ಯದ ಗುರಿಯನ್ನು ತಲುಪಬೇಕಾದರೆ ಶ್ರಮ ಮತ್ತು ಹೋರಾಟ ಮನೋಭಾವ ಹೊಂದಿರಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಐಕ್ಯುಎಸಿ ಹಾಗೂ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಪಿ.ನಾಗರಾಜು ಅವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಧೈರ್ಯ, ಕ್ರೀಡಾ ಸ್ಫೂರ್ತಿ, ಛಲ ಮತ್ತು ನಾಯಕತ್ವದ ಗುಣಗಳನ್ನು ಅಳವಡಿಸಿಕೊಂಡರೆ ಸಮರ್ಥ ನಾಯಕನಾಗಬಹುದು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…
ಸೋಮವಾರಪೇಟೆ, ಸೆ.25 NEWS DESK : ಸಮಾಜದಲ್ಲಿ ಮೌಢ್ಯಾಚರಣೆ ಹೆಸರಿನಲ್ಲಿ ಕೆಲವು ದೇವಮಾನವ ರೆಂಬ ಸೋಗಿನಲ್ಲಿ ಜನರಿಗೆ ಮೋಸ, ವಂಚನೆ ಮಾಡುತ್ತಿರುವುದು ಕಂಡುಬರುತ್ತಿದೆ. ಕೆಲವು ಮುಗ್ಧರು ಇದನ್ನು ನಂಬಿ ಶೋಷಣೆಗೆ ಒಳಗಾಗು ತ್ತಿದ್ದಾರೆ. ಇಂತಹ ಶೋಷಣೆಯನ್ನು ತಡೆಗಟ್ಟುವ ದಿಸೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಶಿಕ್ಷಣ ಸಂಸ್ಥೆಗಳು ಮತ್ತು ಪ್ರಗತಿಪರ ಸಂಘಟನೆಗಳು ಮುಂದಾಗಬೇಕಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಹಾಗೂ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಅಧ್ಯಾಪಕ ಎಂ.ಎನ್.ವೆಂಕಟನಾಯಕ್ ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಮಾದಾಪುರ ಶ್ರೀಮತಿ ಡಿ.ಚನ್ನಮ್ಮ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ( ಎನ್ಎಸ್ಎಸ್ ) ಘಟಕದ ವತಿಯಿಂದ “ನಶಮುಕ್ತ ಭಾರತ ಅಭಿಯಾನ:2025” ಎಂಬ ಕೇಂದ್ರ ವಿಷಯದಡಿ ಗರಗಂದೂರು ಗ್ರಾಮದಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಏರ್ಪಡಿಸಿದ್ದ ಪವಾಡ ರಹಸ್ಯ ಬಯಲು ಕಾರ್ಯಕ್ರಮ…
ಪುತ್ತೂರು ಸೆ.25 NEWS DESK : ರಾಷ್ಟ್ರೀಯ ಸೇವಾ ಯೋಜನೆಯು ವಿಫುಲ ಅವಕಾಶಗಳ ಆಗರವಾಗಿದೆ, ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ತನ್ನನ್ನು ತಾನು ಎತ್ತರಿಸಿಕೊಳ್ಳುವ ಜತೆಯಲ್ಲಿ ರಾಷ್ಟ್ರ ಸೇವೆಯಲ್ಲಿಯೂ ತೊಡಗಿಸಿಕೊಳ್ಳಬಹುದು ಎಂದು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಡಾ.ಕೆ.ಚಂದ್ರಶೇಖರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯೂತ್ ರೆಡ್ ಕ್ರಾಸ್ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸಾವರ್ಕರ್ ಸಬಾಭವನದಲ್ಲಿ ನಡೆದ ಸಮಾರಂಭದಲ್ಲಿ ಯುವಜನತೆ ಮತ್ತು ಸಾಮಾಜಿಕ ಸೇವೆ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಕುಸಿತಗಳಾದರೆ ರಾಷ್ಟ್ರದ ಬಲವೇ ಕಡಿಮೆಯಾದಂತೆ ಆದುದರಿಂದ ಮಕ್ಕಳಿಗಾಗಲೀ ವಿದ್ಯಾರ್ಥಿಗಳಿಗಾಗಲೀ ಸರಿಯಾದ ನೈತಿಕ ಶಿಕ್ಷಣವನ್ನು ನೀಡಬೇಕು ಎಂದರು. ಯಾವುದೇ ಕೆಲಸವನ್ನು ಪ್ರಾರಂಭಿಸುವ ಮೊದಲು ಪೂರ್ವ ತಯಾರಿ ಅಗತ್ಯ. ಅದರ ಒಳಿತು ಕೆಡುಕುಗಳನ್ನು ತಿಳಿದುಕೊಂಡರೆ ಯಶಸ್ಸು ಗಳಿಸುವುದು ಸಾಧ್ಯ ಎಂದರು.…
ಸೋಮವಾರಪೇಟೆ ಸೆ.25 NEWS DESK : ಪೌರ ಕಾರ್ಮಿಕರ ಸೇವೆ ಅನನ್ಯವಾಗಿದ್ದು, ಅವರ ಸೇವೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಪಟ್ಟಣದ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ಸೋಮವಾರಪೇಟೆ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಪೌರಕಾರ್ಮಿಕರನ್ನು ಭೇಟಿ ಮಾಡಿ, ಪೌರಕಾರ್ಮಿಕರ ದಿನಾಚರಣೆಯ ಶುಭಾಶಯ ತಿಳಿಸಿ ಅವರ ಯೋಗಕ್ಷೇಮ ವಿಚಾರಿಸಿದರು. ನಿಮ್ಮ ವೃತ್ತಿಯ ಬಗ್ಗೆ ಹೆಮ್ಮೆ ಇದೆ,ಕೀಳಿರಿಮೆ ಬೇಡ ಯಾಕೆಂದರೆ ಯಾರು ಮಾಡಲು ಮುಂದೆ ಬರದಂತಹ ಸೇವೆಯನ್ನು ನೀವು ಮಾಡುತ್ತಿದ್ದೀರಿ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಸ್.ಮಹೇಶ್ ಪೌರ ಕಾರ್ಮಿಕರಿಗೆ ಪ್ರತಿವರ್ಷದಂತೆ ಸಿಹಿ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್,ಅಭಿಯಂತರ ಹೇಮಂತ್ ಕುಮಾರ್, ಆರೋಗ್ಯ ನಿರೀಕ್ಷಕ ಜಾಸಿಂಖಾನ್, ಸಿಬ್ಬಂದಿ ಜೀವನ್, ಪೌರಕಾರ್ಮಿಕ ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಮುಂತಾದವರು ಹಾಜರಿದ್ದರು.






