ನಾಪೋಕ್ಲು ನ.3 NEWS DESK : 2000 ವರ್ಷಗಳ ಇತಿಹಾಸವಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡ ನಾಡಿನ ಪ್ರತಿಯೊಬ್ಬರು ಭಾಷೆಯನ್ನು ಬಳಸಿ ಬೆಳೆಸಬೇಕು ಎಂದು ಶಿಕ್ಷಕಿ ಚಂದ್ರಕಲಾ ಹೇಳಿದರು. ನಾಪೋಕ್ಲು ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯ ಶಿಕ್ಷಕಿ ಬಿ.ಎಂ.ಶಾರದೆ ಮಾತನಾಡಿ, ಕನ್ನಡದ ಏಕೀಕರಣದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ಸ್ಮಿತಾ ಟಿ.ಜೆ.ಕನ್ನಡದ ಹಿರಿಮೆ ಗರಿಮೆಗಳ ಬಗ್ಗೆ ಮಾತನಾಡಿದರು. ವಿದ್ಯಾರ್ಥಿ ಸೋನಲ್ ಕೆ.ವಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸಹನ ಹಾಗೂ ಸಮನ್ವಿತ ಕಾರ್ಯಕ್ರಮ ನಿರೂಪಿಸಿದರು. ಶ್ರಾವ್ಯ ವಂದಿಸಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಲಾಯಿತು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಪೊನ್ನಂಪೇಟೆ ನ.3 NEWS DESK : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್. ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಲಾಯಿತು. ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್ ಅವರ ನೇತೃತ್ವದ ನಿಯೋಗ ಗೋಣಿಕೊಪ್ಪಲಿನ ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿದರಲ್ಲದೆ, ಸಂಸ್ಥೆಯ ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ಪಡೆಯಿತು. ಈ ಸಂದರ್ಭದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಕೆ.ಎಂ.ಎಸ್.ಎ. ಅಧ್ಯಕ್ಷರಾದ ರಶೀದ್, ಸಂಸ್ಥೆ ಕ್ರೀಡಾ ಚಟುವಟಿಕೆಗಳ ಆಯೋಜನೆಗಿಂತ ಅವಕಾಶ ವಂಚಿತ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಸೃಷ್ಟಿಸಲು ಮೊದಲ ಆದ್ಯತೆ ನೀಡುತ್ತದೆ. ಸಂಸ್ಥೆಯ ಈ ಉದ್ದೇಶಕ್ಕೆ ಸರಕಾರದ ನೆರವು ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಅರುಣ್ ಮಾಚಯ್ಯ ಅವರಲ್ಲಿ ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಅರುಣ್ ಮಾಚಯ್ಯ ಅವರು, ಕೆ.ಎಂ.ಎಸ್.ಎ. ಎಲ್ಲ ಕಾರ್ಯ ಚಟುವಟಿಕೆಗಳಿಗೆ ಪೂರ್ಣ…
ವಿರಾಜಪೇಟೆ ನ.3 NEWS DESK : ವಿರಾಜಪೇಟೆಯ ಪುರಸಭೆಯ ವತಿಯಿಂದ ಕಚೇರಿಯ ಮುಂಭಾಗದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿ, ಪ್ರತಿ ವರ್ಷ ನ.1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಕರ್ನಾಟಕ ಏಕೀಕೃತ ರಾಜ್ಯವಾದದ್ದು, ನವೆಂಬರ್ 1, 1973 ರಂದು, ಕರ್ನಾಟಕ ರಾಜ್ಯವೆಂದು ಮರುನಾಮಕರಣಗೊಂಡು 70 ವರ್ಷ ಪೂರ್ಣಗೊಂಡಿರುವ ಸುದಿನ. ಈ ಬಾರಿಯೂ ನಮ್ಮ ಕನ್ನಡದ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದರ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಬೇಕು. ಕನ್ನಡಿಗರಾದ ನಾವು ನುಡಿ ಕನ್ನಡ, ನಡೆ ಕನ್ನಡ, ಉಸಿರು ಕನ್ನಡ ಎಂದು ಜೀವಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ನವೆಂಬರ್ 01 ರಂದು ಮಾತ್ರವಲ್ಲದೇ ಇಡೀ ತಿಂಗಳು ರಾಜ್ಯದ ಎಲ್ಲೆಡೆ ಮಾತ್ರವಲ್ಲದೇ…
ಮಡಿಕೇರಿ NEWS DESK ನ.2 : 70ನೇ ಕನ್ನಡ ರಾಜ್ಯೋತ್ಸವ ಹಾಗೂ ಮಾಜಿ ಸಚಿವ, ಅರಕಲಗೋಡು ಶಾಶಕ ಎ.ಮಂಜು ಅವರ ಜನ್ಮ ದಿನಾಚರಣೆ ಸಂಭ್ರಮದಿಂದ ನಡೆಯಿತು. ಮಡಿಕೇರಿ ಶಾಸಕ ಹಾಗೂ ಎ.ಮಂಜು ಅವರ ಪುತ್ರ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಜನ್ಮ ದಿನಾಚರಣೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಿತು. ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಸಂಗೀತ ಗಮನ ಸೆಳೆಯಿತು. ದಿವ್ಯಾ ಮಂತರ್ ಗೌಡ ಮತ್ತಿತರರು ಉಪಸ್ಥಿತರಿದ್ದು ಎ.ಮಂಜು ಅವರಿಗೆ ಶುಭ ಕೋರಿದರು.
ಸೋಮವಾರಪೇಟೆ NEWS DESK ನ.2 : ವಿದ್ಯೆ ಎಂಬುವುದು ಅಪೂರ್ವ ಸಂಪತ್ತು, ವಿದ್ಯಾದಾನ ಮಹಾನ್ ಕಾರ್ಯ, ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು, ನಾನು ಸಹಾಯ ಮಾಡುತ್ತೇನೆ ಎಂದು ಶಾಸಕ ಡಾ.ಮಂತರ್ಗೌಡ ಭರವಸೆ ನೀಡಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನೂತನ ಕೊಠಡಿಗಳನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಮಕ್ಕಳು ಓದಲೇಬೇಕು. ವಿದ್ಯೆಯೇ ನಮ್ಮನ್ನು ಉನ್ನತ ಸ್ಥಾನಕ್ಕೆ ತಲುಪಿಸುತ್ತದೆ. ಕಲಿತ ವಿದ್ಯೆಯನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಇತ್ತೀಚಿನ ವರ್ಷಗಳಲ್ಲಿ ಅತೀ ಹೆಚ್ಚು ರ್ಯಾಂಕ್ಗಳನ್ನು ಗ್ರಾಮೀಣ ಮಕ್ಕಳು ಪಡೆಯುತ್ತಿದ್ದಾರೆ ಎಂಬುದೇ ನಮಗೆ ಹೆಮ್ಮೆ ಎನಿಸುತ್ತದೆ. ಮಕ್ಕಳ ಕಲಿಕೆಗೆ ಪೋಷಕರು, ಶಿಕ್ಷಕರು ಪ್ರೋತ್ಸಾಹ ನೀಡುವುದು ಅವರ ಜವಾಬ್ದಾರಿಯಾಗಿದೆ. ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು. ನಾನು ಕೂಡ ಎಲ್ಲಾ ಸಂದರ್ಭದಲ್ಲೂ ಸಹಾಯ ಮಾಡುತ್ತೇನೆ. ಸಂಘ-ಸAಸ್ಥೆಗಳು, ದಾನಿಗಳು ಕೂಡ ಶಿಕ್ಷಣ ಮುಂದುವರಿಸಲು ಅವಶ್ಕಕತೆಯಿದ್ದವರಿಗೆ ಸಹಾಯ ಮಾಡುತ್ತಾರೆ ಎಂದು ಹೇಳಿದರು.…
ಮಡಿಕೇರಿ NEWS DESK ನ.2 : ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಬೆಂಗಳೂರು ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು. 2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು. ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಸಚಿವರಾದ ಬೈರತಿ ಸುರೇಶ್, ಶಿವರಾಜ್ ತಂಗಡಗಿ ಹಾಗೂ ಚೇನಂಡ…
ಮಡಿಕೇರಿ NEWS DESK ನ.2 : ಕುಶಾಲನಗರ ಸಮೀಪದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನ್ಯಾಷನಲ್ ಕಾಲೇಜ್ ನ ಪ್ರಾಧ್ಯಾಪಕ ಡಾ.ಕೃಷ್ಣೇಗೌಡ ಅವರು ಇತಿಹಾಸ, ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಹೋರಾಟಗಾರರು, ಕನ್ನಡ ನಾಡಿನ ಶಿಲ್ಪಕಲೆ, ಸಾಹಿತ್ಯ, ಸಂಸ್ಕೃತಿ, ಆಚಾರ, ವಿಚಾರ ಮತ್ತು ಕನ್ನಡಿಗರು ವಿವಿಧ ಕ್ಷೇತ್ರಗಳಿಗೆ ನೀಡಿರುವ ಅಪಾರ ಕೊಡುಗೆಯ ಕುರಿತು ವಿವರಿಸಿದರು. ಚಂದದ ಬೀಡು, ಗಂಧದ ನಾಡಾದ ಕರ್ನಾಟಕವನ್ನು ಮತ್ತಷ್ಟು ಶ್ರೀಮಂತಗೊಳಿಸಲು ಎಲ್ಲರೂ ಶ್ರಮಿಸಬೇಕೆಂದು ಕರೆ ನೀಡಿದರು. ಜ್ಞಾನಗಂಗಾ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಅವರು ಮಾತನಾಡಿ ಕನ್ನಡ ಒಂದು ಸುಂದರ ಮತ್ತು ಶ್ರೀಮಂತ ಭಾಷೆಯಾಗಿದೆ, ಕನ್ನಡ ಭಾಷೆಯನ್ನು ಲಿಪಿಗಳ ರಾಣಿ ಎಂದು ಕರೆಯುತ್ತಾರೆ. ಅದು ನಮಗೆ ಹೆಮ್ಮೆಯ ವಿಚಾರವಾಗಿದೆ. ಒಂದು ಭಾಷೆ ನಾಶವಾದರೆ ಜನಾಂಗವೇ ನಾಶವಾದಂತೆ, ಹಾಗಾಗಿ ಜನ್ಮ ಕೊಟ್ಟ ತಾಯಿಯಷ್ಟೇ ನಮ್ಮ ಭಾತೃಭಾಷೆಯನ್ನು ನಾವು ಪ್ರೀತಿಸಿ, ಗೌರವಿಸಿ, ಬೆಳೆಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಬೇಕು…
ಮಡಿಕೇರಿ NEWS DESK ನ.2 : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಖಿಲ ಕೊಡಗು ಕೆಂಬಟ್ಟಿ ಸಮಾಜದ ನಿಯೋಗ ಅಧ್ಯಕ್ಷ ಬಿಲ್ಲರೀಕುಟ್ಟಡ ಪ್ರಭು ಅಯ್ಯಪ್ಪ ಅವರ ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಕೆಂಬಟ್ಟಿ ಸಮಾಜದ ಪ್ರಮುಖರು ಕೆಂಬಟ್ಟಿ ಹೆಸರನ್ನು ಜಾತಿ ಪಟ್ಟಿಯಲ್ಲಿ ಸೇರಿಸಬೇಕೆಂದು ಮನವಿ ಮಾಡಿದರು. ಅಲ್ಲದೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಿದರು. ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ಪೊನ್ನಣ್ಣ ಅವರು ಕೆಂಬಟ್ಟಿ ಸಮಾಜದ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು. ನಿಯೋಗದಲ್ಲಿ ನಿತೇಶ್, ಜೀವನ್, ಉದಯ್ ಮಾದಪ್ಪ, ಸುಬ್ರಮಣಿ, ಸಾಗರ್ ಪೂವಣ್ಣ, ದಿನೇಶ್ ಪೆಗ್ಗೋಲಿ, ಚಿಮ್ಮ ಅಯ್ಯಪ್ಪ, ವಿನೋದ್, ಅನಿಕೇತನ್, ರಂಜಿತ್, ಚರಣ್, ಕಿರಣ್ ಕಾವೇರಪ್ಪ, ಡಾಲಿ, ಮಹೇಶ್, ವಿಲ್ಮ, ರೋಹಿಣಿ, ವೈಶಾಲಿ, ದೀಪಿಕಾ, ತಿಲಕ್, ಉದಯ್ ಮಾದಪ್ಪ ನೇತುರ್ತ್ ದಲಿ, ಮನವಿ ಕೊಟ್ಟಿದ್ರು, ಅಖಿಲ ಕೊಡಗು ಕೆಂಬಟ್ಟಿ ಸಮಾಜ ಅಧ್ಯಕ್ಷರು ಆದ ಬಿಲ್ಲಿರಿ ಕುಟ್ಟ ಪ್ರಭು ಅಯ್ಯಪ್ಪ,…
ಮಡಿಕೇರಿ NEWS DESK ಅ.2 : ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.5ರಂದು ಬಿಟ್ಟಂಗಾಲದಲ್ಲಿ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸುವುದಾಗಿ ಹೇಳಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಬಿಟ್ಟಂಗಾಲದಲ್ಲಿ ಶಾಂತಿಯುತವಾಗಿ ಮಾನವ…
ಮಡಿಕೇರಿ ನ.1 NEWS DESK : ಕರಿಕೆ ಗ್ರಾಮ ಪಂಚಾಯತ್ ಮತ್ತು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರದಿಂದ ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷಾರಾದ ಎನ್.ಬಾಲಚಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರಾದ ಎನ್. ಬಾಲಚಂದ್ರನ್ ನಾಯರ್ ಮತ್ತು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ರಾಜಶೇಖರ್ ಕನ್ನಡ ರಾಜ್ಯೋತ್ಸವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಪಂಚಾಯತ್ ಸದಸ್ಯರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸಹಕಾರ ಸಂಘದ ನಿರ್ದೇಶಕರುಗಳು, ಎಸ್.ಡಿ.ಎಂಸಿ ಅಧ್ಯಕ್ಷರುಗಳು, ಸದಸ್ಯರುಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಪಂಚಾಯತ್ ಸಿಬ್ಬಂದಿ ವರ್ಗ ಪಾಲ್ಗೊಂಡರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿಪಿನ್ ಸ್ವಾಗತಿಸಿದರು, ಗ್ರಂಥಪಾಲಕರಾದ ಸಾವಿತ್ರಿ ವಂದಿಸಿದರು. ಪ್ರೌಢ ಶಾಲೆಯಿಂದ ಆರಂಭಗೊಂಡ ಮೆರವಣಿಗೆ ಎಳ್ಳುಕೊಚ್ಚಿ ಪೇಟೆಯಲ್ಲಿ ಸಮಾಪ್ತಿಯಾಯಿತು.






