ಮಡಿಕೇರಿ ನ.1 NEWS DESK : ಯುವ ಜನಾಂಗ ನಮ್ಮ ನಾಡಿನ ಅಮೂಲ್ಯ ಆಸ್ತಿ. ಅವರಲ್ಲಿ ಭಾಷೆ, ಸಂಸ್ಕೃತಿಯ ಬಗ್ಗೆ ಗೌರವ ಬೆಳೆಯುವ ಹಾಗೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ಕನ್ನಡಿಗನ ಕರ್ತವ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ಬಿ.ರಾಘವ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು. ನಮ್ಮ ನಾಡು ಎನ್ನುವ ಭಾವನೆ ಉಂಟು ಮಾಡಿದ ಮಹಾನ್ ವ್ಯಕ್ತಿಗಳಾದ ಕರ್ನಾಟಕ ಗತ ವೈಭವ ಕೃತಿಕಾರರಾದ ಆಲೂರು ವೆಂಕಟರಾಯರು, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದ ಹುಯಿಳಗೋಳ್ ನಾರಾಯಣರಾಯರು, ಬಿ.ಎಂ.ಶ್ರೀ, ಗೋವಿಂದ ಪೈ ಮುಂತಾದವರನ್ನು ಸ್ಮರಿಸುತ್ತ ಭಾಷಾವಾರು ರಾಜ್ಯಗಳ ವಿಂಗಡಣೆ, 2008ರಲ್ಲಿ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಲಭ್ಯವಾಯಿತು. ಕನ್ನಡ ಭಾಷೆಯ ಹಿರಿಮೆಯನ್ನು ಕುರಿತು 8 ಜ್ಞಾನಪೀಠ ಪ್ರಶಸ್ತಿ ಸಿಕ್ಕಿದೆ. ಇತ್ತೀಚಿಗೆ ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿಯನ್ನು ತಂದುಕೊಟ್ಟ ಬಾನು…
ಲೇಖಕ: admin
ಪುತ್ತೂರು ನ.1 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ವರ್ಷಿತಾ.ಪಿ.ಆಳ್ವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕಬಡ್ಡಿ ತಂಡಕ್ಕೆ ಆಯ್ಕೆಗೊಂಡಿದ್ದಾರೆ. ತಮಿಳ್ನಾಡಿನ ವಿನಾಯಕ ಮಿಷನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪಂದ್ಯಾವಳಿಯಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಗೋಣಿಕೊಪ್ಪ ನ.1 NEWS DESK : ಹರಿಚಂದ್ರಪುರ ಚೇಂಬರ್ ಆಫ್ ಕಾಮರ್ಸ್ ಕಚೇರಿ ಕಟ್ಟಡ ಮುಂಭಾಗದಲ್ಲಿ ಕನ್ನಡದ ಧ್ವಜಾರೋಹಣ ಮಾಡುವ ಮೂಲಕ 70ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಕಲಾವಿದ ನಾರಾಯಣಸ್ವಾಮಿ ನಾಯ್ಡು ಅವರ ನೇತೃತ್ವದಲ್ಲಿ ಆಚರಿಸಲಾಯಿತು. ಪತ್ರಕರ್ತ ಜಗದೀಶ್ ಜೋಡುಬೀಟಿ ಮಾತನಾಡಿ, ಕನ್ನಡ ನಾಡು ನುಡಿಯ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಹೊಂದಿರಬೇಕು. ಕನ್ನಡ ನಾಡನ್ನು ಕಟ್ಟಲು ಹಲವಾರು ಮಹನೀಯರು ಹೋರಾಟದ ಮೂಲಕ ತ್ಯಾಗ ಮಾಡಿದ್ದಾರೆ. ಇಲ್ಲಿನ ಭವ್ಯ ಪರಂಪರನೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ. ಕನ್ನಡ ಪರ ಸಂಘಟನೆಗಳು ರಾಜ್ಯೊತ್ಸವವನ್ನು ಗೋಣಿಕೊಪ್ಪ ನಗರದಲ್ಲಿ ಸಂಭ್ರಮದಿಂದ ಆಚರಿಸುವಂತಾಗಬೇಕಾಗಿದೆ. ಈ ನಿಟ್ಟಿನಲ್ಲಿ ನಾಯ್ಡು ಸಂಸ್ಥೆ ಈ ಕಾರ್ಯಕ್ಕೆ ಮುಂದಾಗಿರುವುದು ಉತ್ತಮ ಬೆಳವಣಿಗೆಯೆಂದು ಹೇಳಿದರು. ಕಲಾವಿದ ನಾರಾಯಣಸ್ವಾಮಿ ಮಾತನಾಡಿ, ಪ್ರಥಮ ವರ್ಷದ ಆಚರಣೆಯಾಗಿ 70ನೇ ವರ್ಷದ ರಾಜ್ಯೋತ್ಸವವನ್ನು ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿದೆ. ಮುಂದಿನ ವರ್ಷ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಕನ್ನಡದ ಹಬ್ಬವನ್ನು ವೈಭವಯುತವಾಗಿ ಆಚರಿಸಲು ಚಿಂತನೆ ಹರಿಸಲಾಗಿದೆ ಎಂದು ಹೇಳಿದರು. ಗೋಣಿಕೊಪ್ಪ ಗ್ರಾಪಂ…
ಕುಶಾಲನಗರ ನ.1 NEWS DESK : ಭಾಷೆ ಕೇವಲ ಮಾತಿಗೆ ಸೀಮಿತವಾಗಬಾರದು, ನಿರಂತರ ಬಳಕೆ ಮಾಡುವ ಮೂಲಕ ಕನ್ನಡದ ಬೆಳವಣಿಗೆ ಆಗಬೇಕಾಗಿದೆ ಎಂದು ಕುಶಾಲನಗರ ತಾಲ್ಲೂಕು ತಹಸಿಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ತಾಲೂಕು ಅಧ್ಯಕ್ಷರು ಕಿರಣ್ ಜಿ ಗೌರಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದ ಮೈದಾನದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಮಾತನಾಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆ ಕ್ಷೀಣಗೊಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ, ಮಕ್ಕಳಲ್ಲಿ ಭಾಷಾ ಪ್ರೇಮ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಏಕೀಕರಣದ ನಂತರ ರಾಜ್ಯ ಶರವೇಗದಲ್ಲಿ ಬೆಳವಣಿಗೆಯೊಂದಿಗೆ ಅಭಿವೃದ್ಧಿ ಕಂಡಿದೆ ಎಂದು ತಿಳಿಸಿದರು. ಅತಿ ಹೆಚ್ಚಿನ ಜ್ಞಾನಪೀಠ ಪ್ರಶಸ್ತಿಗೆ ಪಾತ್ರವಾಗಿರುವ ಹೆಗ್ಗಳಿಕೆ ಕನ್ನಡ ಭಾಷೆಯದ್ದಾಗಿದೆ. ಭಾಷೆ ಬಗ್ಗೆ ಚಿಂತನೆಗಳು ಕೇವಲ ನವಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ತಾಲೂಕು ಗ್ಯಾರೆಂಟಿ…
ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಚಾಂಪಿಯನ್ಸ್ ಟ್ರೋಫಿ-2025 ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಮೂರ್ನಾಡಿನ ಶ್ರೀ ಬಾಚಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡ ಈ ಪಂದ್ಯಾವಳಿಗೆ ಶುಭ ಕೋರಿದ ಶಾಸಕರು, ಕ್ರೀಡೆಯು ಕೊಡಗಿನ ಜನತೆಯ ಉಸಿರಿನಲ್ಲಿ ಹಾಸುಹೊಕ್ಕಿದೆ. ಇಂತಹ ಕ್ರೀಡಾಕೂಟಗಳು ಕ್ರೀಡಾ ಪ್ರತಿಭೆಯನ್ನು ಸಮಾಜದ ಮುನ್ನೆಲೆಗೆ ತರಲು ಅತ್ಯಂತ ಸಹಕಾರಿಯಾಗಲಿದೆ. ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಆಟವಾಡಿ, ತಮ್ಮ ಸಾಮರ್ಥ್ಯ ಪ್ರದರ್ಶಿಸುವುದರೊಂದಿಗೆ ಜೀವನದಲ್ಲಿ ಯಶಸ್ಸು ಕಾಣಲು ಮುನ್ನುಡಿ ಬರೆಯಬೇಕೆಂದು ಕರೆ ನೀಡಿದರು. ಕ್ರೀಡೆಯನ್ನು ಕ್ರೀಡಾ ಸ್ಪೂರ್ತಿಯಿಂದ ಆಸ್ವಾದಿಸುತ್ತಾ, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶಕ್ಕೆ ನಾಂದಿ ಹಾಡಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಸಂಘದ ಅಧ್ಯಕ್ಷ ಕೆ.ಕುಶಾಲಪ್ಪ, ಉಪಾಧ್ಯಕ್ಷ ದಾಮೋದರ್, ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್, ಖಜಾಂಚಿ ಗಿರೀಶ್, ಮೂರ್ನಾಡು ಗ್ರಾ.ಪಂ…
ಮಡಿಕೇರಿ ನ.1 NEWS DESK : ಸಂವಿಧಾನದ 244 ವಿಧಿ 6 ಮತ್ತು 8ನೇ ಶೆಡ್ಯೂಲ್ ಪಟ್ಟಿ ಅಡಿಯಲ್ಲಿ ‘ಕೊಡವ ಲ್ಯಾಂಡ್’ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು ಎರಡನೇ ರಾಜ್ಯಗಳ ಪುನರ್-ಸಂಘಟನಾ ಆಯೋಗವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನವದೆಹಲಿಯ ಜಂತರ್ ಮಂತರ್ ನಲ್ಲಿ ಇಂದು ಶಾಂತಿಯುತ ಸತ್ಯಾಗ್ರಹ ನಡೆಸಿತು. ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿಶ್ವ ರಾಷ್ಟ್ರ ಸಂಸ್ಥೆ ಮತ್ತು ಅದರ ನಂತರದ ಒಪ್ಪಂದಗಳು ಹಾಗೂ ಘೋಷಣೆಗಳು ಪ್ರಪಂಚದಾದ್ಯಂತದ ಆದಿಮಸಂಜಾತ ಜನರ ಸ್ವ-ನಿರ್ಣಯದ ಹಕ್ಕುಗಳನ್ನು ಎತ್ತಿಹಿಡಿಯುತ್ತವೆ. ಇದರಲ್ಲಿ ಭಾರತ ಸರ್ಕಾರವು ಸಹಿ ಹಾಕಿದೆ. ಎರಡನೇ ರಾಜ್ಯಗಳ ಪುನರ್-ಸಂಘಟನಾ ಆಯೋಗ ರಚನೆಗಾಗಿ ಒತ್ತಾಯಿಸಿ ಈಗಾಗಲೇ ಕೇಂದ್ರದ ಮಾಜಿ ಸಚಿವ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಮೂಲಕ ಸಿಎನ್ಸಿ ಸಂಘಟನೆ ಹೈಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದು, ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೊಡವರ ಸಾಂಪ್ರದಾಯಿಕ ತಾಯ್ನಾಡು ‘ಸಿ’ ರಾಜ್ಯ…
ಪುತ್ತೂರು ನ.1 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದು, ಇವರ ಸಾಧನೆಯಿಂದ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದೆ. ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತೃತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್ರಾಮ್ ಜಗದೀಶ್ ಭಂಡಾರಿ 71 ಕೆಜಿ ವಿಭಾಗದಲ್ಲಿ ಸ್ನಾಚ್ನಲ್ಲಿ 85 ಕೆಜಿ ಹಾಗೂ ಕ್ಲೀನ್ ಎಂಡ್ ಜರ್ಕ್ನಲ್ಲಿ 110 ಕೆಜಿ ಹೀಗೆ ಒಟ್ಟು 195 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕದ ಸಾಧನೆಯನ್ನು ಮಾಡಿದ್ದಾರೆ. ಇದೇ ಕ್ರೀಡಾಕೂಟದ 65 ಕೆಜಿ ವಿಭಾಗದಲ್ಲಿ ತೃತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದ ಸ್ಕಂದ ಪ್ರಸಾದ್ ಸ್ನಾಚ್ನಲ್ಲಿ 67 ಕೆಜಿ ಹಾಗೂ ಕ್ಲೀನ್ ಎಂಡ್ ಜರ್ಕ್ನಲ್ಲಿ 90…
ಗೋಣಿಕೊಪ್ಪ ನ.1 NEWS DESK : ಗೋಣಿಕೊಪ್ಪ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳ ಉದ್ದೇಶಿಸಿ ಮಾತನಾಡಿದ ಅವರು, ಈ ನಾಡು ಭಾಷೆ ಸಂಸ್ಕೃತಿ, ಸಾಹಿತ್ಯ, ಆಚಾರ, ವಿಚಾರ, ಪದ್ಧತಿ, ಪರಂಪರೆಗಳಿಂದ ಸಮೃದ್ಧಿಗೊಂಡಿದೆ. ಕವಿಗಳು, ಸಾಹಿತಿಗಳು, ಕಲಾವಿದರು, ಸೇರಿದಂತೆ ಕನ್ನಡಪರ ಹೋರಾಟದ ಧ್ವನಿಗಳಿಂದ ಈ ನಾಡು ಕಟ್ಟಲಾಗಿದೆ. ರಾಜರ ಕಾಲದ ಆಳ್ವಿಕೆಯಿಂದ ಈ ನಾಡು ಬಹುದೊಡ್ಡ ವಿಸ್ತರತೆಯಲ್ಲಿ ಗುರುತಿಸಿಕೊಂಡಿತು. ನಂತರ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡುವ ಮೂಲಕ ಇಲ್ಲಿನ ಧರ್ಮ, ಜಾತಿ, ಭಾಷೆ, ಜನಾಂಗಗಳ ಒಗ್ಗೂಡುವಿಕೆ ಸಾಧ್ಯವಾಯಿತು ಎಂದು ಹೇಳಿದರು. ವಿದ್ಯಾರ್ಥಿಗಳು ಈ ನಾಡಿನ ಪರಂಪರೆ, ಇತಿಹಾಸ, ಹೋರಾಟ ಎಲ್ಲದರ ಬಗ್ಗೆ ಮಾಹಿತಿ ಪಡೆದುಕೊಂಡು ಕನ್ನಡತನವನ್ನು ಎತ್ತಿ ಹಿಡಿಯಬೇಕು. ಕನ್ನಡದ ಅಭಿಮಾನವನ್ನು ವೃದ್ಧಿಗೊಳಿಸುತ್ತಾ ಈ ನಾಡಿಗಾಗಿ ಶ್ರಮಿಸಬೇಕು. ಈ ನಾಡಿನ ಕೀರ್ತಿಯನ್ನು ಬೆಳಗಿಸಬೇಕು ಎಂದು ಸಲಹೆ…
ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾ ವಿಶೇಷ ಚೇತನರ ಸಂಘ ಹಾಗೂ ವಿಕಲಚೇತನರ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಮಡಿಕೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಕನ್ನಡ ರಾಜ್ಯೋತ್ಸವನ್ನು ಸಂಘದ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ್ ಹಾಗೂ ಪದಾಧಿಕಾರಿಗಳು ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಬಿ.ಎಂ.ತಿರುಮಲೇಶ್ವರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಹಸ್ಸನ್, ಉಪಾಧ್ಯಕ್ಷೆ ಎಂ.ಎನ್.ವೀಣಾ, ನಿರ್ದೇಶಕರಾದ ಪಿ.ಡಿ.ಹೇಮಾವತಿ, ಟಿ.ಮಿಲನ, ಕವನ, ಜಿತೇಶ್, ಜುಬೇರ್ ರಾಮಚಂದ್ರ ಹಾಗೂ ಇತರ ಸಂಘದ ನಿರ್ದೇಶಕರು ಭಾಗವಹಿಸಿದ್ದರು.
ಮಡಿಕೇರಿ ನ.1 NEWS DESK : ಮಡಿಕೇರಿ ತಾಲ್ಲೂಕು ಚೆಟ್ಟಿಮನಿ ಭಾಗದಲ್ಲಿ ಪೂವ್ವಲಮಾನಿ ಭಾಗದಲ್ಲಿ ಆಯೋಜಿಸಿದ 4ನೇ ವರ್ಷದ ಶಾರದ ಪೂಜಾ ಹಾಗೂ ಕಿರು ಕ್ರೀಡಾಕೂಟವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಪೂವ್ವಲಮಾನಿಯ ನಾಗರಿಕ ಸೇವಾ ಸಮಿತಿಯವರು ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಶಾರದ ಪೂಜೆಯ ಪ್ರಸಾದ ಸ್ವೀಕರಿಸಿದ ಬಳಿಕ, ಕಿರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ದಿನೇಶ್, ಸುರೇಂದ್ರ, ಚೆಟ್ಟಿಮನಿ ವಲಯ ಅಧ್ಯಕ್ಷರು ಕೀರ್ತಿ ಉತ್ತಪ್ಪ, ಕುಂದಚೇರಿ ಗ್ರಾಮ ಪಂಚಾಯಿತಿ ಸದಸ್ಯರು ಹ್ಯಾರೀಶ್, ಸುನಿಲ್ ಪತ್ ರಾವ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.






