ಲೇಖಕ: admin

ವಿರಾಜಪೇಟೆ ಸೆ.25 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ವಿರಾಜಪೇಟೆ ತಾಲೂಕಿನ ಕಾನೂರು ವಲಯದ ಪೊನ್ನಪ್ಪಸಂತೆ ಕಾರ್ಯಕ್ಷೇತ್ರದ ಕಲ್ಲುಗುಡ್ಡೇಶ್ವರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪೊನ್ನಪ್ಪಸಂತೆ ಎ.ಟಿ.ಶಂಕರ್ ಕಾರ್ಯಕ್ರಮವನ್ನು ಕುರಿತು ಮಾತನಾಡಿ ಕ್ಷೇತ್ರದ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನ ವ್ಯಕ್ತಪಡಿಸಿ ಮಹಿಳೆಯರ ಅಭಿವೃದ್ಧಿಗೆ ಸ್ವಾವಲಂಬಿ ಬದುಕನ್ನು ನಡೆಸಲು ಉತ್ತಮವಾದ ಕಾರ್ಯಕ್ರಮದ ಆಯೋಜನೆ ಮಾಡುತ್ತಿದ್ದು, ಎಲ್ಲರಿಗೂ ಶುಭ ಹಾರೈಸಿದರು. ಒಕ್ಕೂಟದ ಅಧ್ಯಕ್ಷರು ಹಾಗೂ ಕೇಂದ್ರದ ಸದಸ್ಯರಾದ ಶೀನಾ ಅವರು ಮಾತನಾಡಿ ನಾವು ಜ್ಞಾನ ವಿಕಾಸ ಕಾರ್ಯಕ್ರಮಗಳಿಂದ ಅತ್ಯುತ್ತಮವಾದ ಮಾಹಿತಿಗಳನ್ನು ತಿಳಿದುಕೊಂಡಿದ್ದೇವೆ. ಆರೋಗ್ಯ, ಕಾನೂನಿನ, ಶಿಕ್ಷಣ, ಕುಟುಂಬ ನಿರ್ವಹಣೆ ಸ್ವಉದ್ಯೋಗಗಳು ಇನ್ನೂ ಹಲವಾರು ವಿಷಯಗಳ ಬಗ್ಗೆ ಮಾಹಿತಿಯನ್ನ ತಿಳಿದುಕೊಂಡಿದ್ದೇವೆ. ಜ್ಞಾನ ವಿಕಾಸವು ನಮಗೆ ವೇದಿಕೆಯನ್ನ ಕೊಟ್ಟಿದೆ ವಿಷಯಗಳನ್ನು ತಿಳಿದುಕೊಳ್ಳಲು ಸಹಾಯಕವಾಗಿದೆ ಎಂದರು. ಕೇಂದ್ರದ ಅಧ್ಯಕ್ಷರಾದ ಗೀತಾ ಕೇಂದ್ರದ ಸಾಧನ ವರದಿಯನ್ನು ಮಂಡನೆ ಮಾಡಿದರು. ಕಾರ್ಯಕ್ರಮದಲ್ಲಿ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.…

Read More

ಮಡಿಕೇರಿ NEWS DESK ಸೆ.24 : ಪ್ರಸ್ತುತ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರ್ಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸಲು ಪಿರಿಯಾಪಟ್ಟಣ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಪಿರಿಯಾಪಟ್ಟಣ ಗೌಡ ಸಮಾಜದ ಅಧ್ಯಕ್ಷ ಕೆಮ್ಮರ ವಸಂತ ಅವರು ಕೊಡಗು ಜಿಲ್ಲೆಯ ಅರೆಭಾಷೆ ಗೌಡರು ಜಾತಿ ಜನಗಣತಿ ಸಂದರ್ಭ GOWDA (ಗೌಡ) ಎಂದು ನಮೂದಿಸುವಂತೆ ಮನವಿ ಮಾಡಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿರುವುದು ನಿಜ. ಆದರೆ ಅರೆಭಾಷೆ ಗೌಡರ ಶೈಕ್ಷಣಿಕ ಮತ್ತು ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಾಗಿರುವುದರಿಂದ ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅರೆಭಾಷೆ ಗೌಡ…

Read More

ಮಡಿಕೇರಿ ಸೆ.24 NEWS DESK : ಕಾಫಿಗೆ ಉತ್ತಮ ದರವಿದ್ದರೂ ಸಹ ಕಾಫಿ ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಾಫಿ ಬೆಳೆಗಾರರ ಸಂಕಷ್ಟವನ್ನು ಪರಿಹರಿಸುವಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ, ಕೂರ್ಗ್ ಪ್ಲಾಂಟಸ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ನಗರದ ಗಾಂಧಿ ಮೈದಾನದ ಕರ್ನಾಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ದಿ.ಸಾಕಮ್ಮ ಸಭಾಂಗಣದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಕಾಫಿ ದಸರಾದಲ್ಲಿ ಅವರು ಮಾತನಾಡಿದರು. ಕಾಫಿ ಬೆಳೆಗೆ ಒಳ್ಳೆಯ ದರ ಇದ್ದರೂ ಸಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಾಫಿ ಉತ್ಪಾದನೆಯಲ್ಲಿ ಸಣ್ಣ ಬೆಳೆಗಾರರು ಸಹ ಇದ್ದು, ಹಲವು ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದರು. ರಾಷ್ಟ್ರದಲ್ಲಿ ಕಾಫಿ ಬೆಳೆಗೆ 250 ರಿಂದ 300 ವರ್ಷಗಳ ಇತಿಹಾಸವಿದ್ದು, ಕಾಫಿ ಬೆಳೆಗೆ ಒಳ್ಳೆಯ ದರವಿದ್ದರೂ ಸಹ ಕಾರ್ಮಿಕರ ಕೊರತೆ, ವಾತಾವರಣದಲ್ಲಿನ ಬದಲಾವಣೆ ಸೇರಿದಂತೆ ಹಲವು ಸಮಸ್ಯೆ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ಡಾ.ಮಂತರ್…

Read More

ಮಡಿಕೇರಿ NEWS DESK ಸೆ.24 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ವಿರಾಜಪೇಟೆೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವಿರಾಜಪೇಟೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ವಾಸು ಗಣಪತಿ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ನಡೆಸಲಿದೆ.…

Read More

ಸೋಮವಾರಪೇಟೆ ಸೆ.24 NEWS DESK : ಧರ್ಮ ಉಳಿಯಬೇಕು, ಧಾರ್ಮಿಕ ಕ್ಷೇತ್ರಗಳ ರಕ್ಷಣೆಯಾಗಬೇಕು ಎಂದು ಮುಳ್ಳೂರು ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು.  ಪಟ್ಟಣಕ್ಕೆ ಸಮೀಪದ ನೇಗಳೆ ಕರ್ಕಳ್ಳಿ ವೀರಭದ್ರ ದೇವಾಲಯ ಹಾಗೂ ಗ್ರಾಮ ಸಮಿತಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ವೀರಭದ್ರೇಶ್ವರ ವರ್ಧಂತಿ ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.  ಈ ಭವ್ಯ ಭಾರತ ಸನಾತನ ಹಿಂದೂ ಧರ್ಮವನ್ನು, ಸಂಸ್ಕೃತಿಯನ್ನು ಹೊಂದಿದೆ. ಬಹಳ ಹಿಂದಿನಿಂದಲೂ ನಮ್ಮ ಧರ್ಮದ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಬಂದಿದೆ, ಇಂದಿಗೂ ನಡೆಯುತ್ತಿದೆ. ಆದರೆ ನಾವುಗಳು ಜಗ್ಗಿಲ್ಲಾ ನಮ್ಮ ಧರ್ಮವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಹಿಂದೂಗಳೆಲ್ಲಾರಮೇಲು ಇದೆ. ನಮ್ಮ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು. ಧರ್ಮ ಹಾಗೂ ಧಾರ್ಮಿಕ ಕ್ಷೇತ್ರ ಗಳಿಗೆ ಅಪಚಾರ ವಾದಾಗ, ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ದುಷ್ಟರ ಸಂಹಾರಕ್ಕೆ ಅವತರಿಸಿದ ವೀರಭದ್ರನಂತೆ ಆರ್ಭಟಿಸಬೇಕೆಂದರು.  ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವೀರಭದ್ರ ಸ್ವಾಮಿ ವರ್ಧಂತಿ ಮಹೋತ್ಸವದ ರಾಷ್ಟ್ರೀಯ…

Read More

ವಿರಾಜಪೇಟೆ ಸೆ.24 NEWS DESK : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ  ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ ವ್ಯವಸ್ಥೆ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್ ಹಾಗೂ ಇಂಟರ್ನ್ ಷಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ ಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್ ಗಳಲ್ಲೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ. ಜೊತೆಗೆ ಗ್ರಾಮೀಣ ಭಾಗದ…

Read More

ಮಡಿಕೇರಿ ಸೆ.24 NEWS DESK : ಗೋಣಿಕೊಪ್ಪ ಕಾಲ್ಸ್ ಶಾಲಾ ಮೈದಾನದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘ ಹಾಗೂ ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ವತಿಯಿಂದ 1ನೇ ಕರ್ನಾಟಕ ರಾಜ್ಯ ಕಿವುಡರ ಇಂಟರ್ ಶಾಲಾ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಕ್ರೀಡಾಕೂಟ ನಡೆಯಿತು. ರಾಜ್ಯದ ವಿವಿಧ ಜಿಲ್ಲೆಗಳಾದ ಬಾಗಲಕೋಟೆ, ಗದಗ, ಕೋಲಾರ, ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು ಸೇರಿದಂತೆ 16 ಜಿಲ್ಲೆಯ ಶಾಲೆಗಳ ಒಟ್ಟು 250 ವಿಶೇಷಚೇತನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ಕ್ರೀಡಾಕೂಟದಲ್ಲಿ 800ಮೀ, 400ಮೀ, 200ಮೀ, 100 ಮೀ ಓಟ, ಎತ್ತರ ಜಿಗಿತ, ಉದ್ದ ಜಿಗಿತ, ಭಾರದ ಗುಂಡು ಎಸೆತ ಇನ್ನಿತರ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಕ್ರೀಡೆಯಲ್ಲಿ ಜಯಗಳಿಸಿದ ವಿಶೇಷಚೇತನ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಪದಕವನ್ನು ಸಂಸ್ಥೆಯ ವತಿಯಿಂದ ನೀಡಲಾಯಿತು. ಕ್ರೀಡಾಕೂಟವನ್ನು ಕಾಲ್ಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಗೌರಮ್ಮ ನಾಚಪ್ಪ ಶುಭ ಹಾರೈಸಿದರು. ಕೊಡಗು ಜಿಲ್ಲಾ ಕಿವುಡರ ಸಂಘದ ಜಿಲ್ಲಾಧ್ಯಕ್ಷರಾದ ಗೌರು ಸೋಮಣ್ಣ ಮಾತನಾಡಿ, ಈ ರೀತಿಯ…

Read More

ಮಡಿಕೇರಿ ಸೆ.24 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 22ನೇ ವಾರ್ಷಿಕೋತ್ಸವವು ಸೆ.24 (ಇಂದು) ರಿಂದ 26ರ ವರೆಗೆ ನಡೆಯಲಿದೆ.  ಸೆ.24 (ಇಂದು) ರಂದು ಸಂಜೆ 6 ಗಂಟೆಗೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸೆ.25 ರಂದು ಬೆಳಿಗ್ಗೆ 8 ಗಂಟೆಗೆ ಚಂಡಿಕಾ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಜರುಗಲಿದ್ದು, ನಂತರ ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ. ಸಂಜೆ 6 ಗಂಟೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ.  ಸೆ.26 ರಂದು ಬೆಳಿಗ್ಗೆ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.…

Read More

ಮಡಿಕೇರಿ ಸೆ.24 NEWS DESK : ನಿರ್ಲಕ್ಷಿಸಲ್ಪಟ್ಟ ಮತ್ತು ಅಳಿವಿನಂಚಿನ ಸಮುದಾಯಗಳ ರಕ್ಷಣೆ ನಾಗರೀಕ ಸಮಾಜದ ಹೊಣೆಯಾಗಬೇಕು ಎಂದು ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಕತ್ತೂರು ಸರಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನ ಹಲವು ಸಮುದಾಯಗಳು ಇಂದು ಅಳಿವಿನಂಚಿಗೆ ಬಂದು ತಲುಪಿದ್ದು, ಅದರಲ್ಲಿ ಅರಮನೆಪಾಲೆ ಸಮುದಾಯವು ಒಂದು. ಇದು ಕೊಡಗಿನಲ್ಲಿ ತನ್ನದೇ ಆದ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿದೆ. ಕೊಡಗಿನ ಕೊಡವ ಸಂಸ್ಕೃತಿಯ ಮೂಲ ಬೇರುಗಳನ್ನು ಹೊಂದಿರುವ ಈ ಸಮುದಾಯವನ್ನು ಸರಕಾರ ಇಲ್ಲಿಯವರೆಗೆ ಗುರುತಿಸದೆ ಇರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು. ನಿರ್ಲಕ್ಷ್ಯಕ್ಕೆ ಒಳಗಾಗುವ ಸಮುದಾಯಗಳ ರಕ್ಷಣೆ ನಾಗರೀಕ ಸಮಾಜದ  ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಕೊಡವ ಭಾಷಿಕ ಸಮುದಾಯಗಳ ಕೂಟ ಎಲ್ಲಾ ರೀತಿಯ ಸಲಹೆ, ಸಹಕಾರ ನೀಡಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಸದಾ ಸಿದ್ಧವಿದೆ ಎಂದು ಡಾ.ಸುಭಾಷ್ ನಾಣಯ್ಯ…

Read More

ಮಡಿಕೇರಿ ಸೆ.24 NEWS DESK : ಕೊಡಗು ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ನೀಮಾ) ಹಾಗೂ ಆಯುಷ್ ಇಲಾಖೆ ವತಿಯಿಂದ ಹತ್ತನೆಯ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಮೇಕೇರಿಯಲ್ಲಿ ಆಚರಿಸಲಾಯಿತು.  ಕೇಂದ್ರ ಸರ್ಕಾರ ಈ ವರ್ಷ ಆರೋಗ್ಯಕ್ಕಾಗಿ ಆಯುರ್ವೇದ ಎಲ್ಲರಿಗೂ ಆಯುರ್ವೇದ ಎಂಬ ಧ್ಯೇಯದೊಂದಿಗೆ ಪ್ರತಿ ಮನೆಯಲ್ಲಿಯೂ ಮದ್ದಿನ ಗಿಡದ ಪ್ರಾಮುಖ್ಯತೆ ತಿಳಿಸುವ ಯೋಜನೆಗೆ ಪೂರಕವಾಗಿ “ನೀಮಾ-ಕೊಡಗು” ವತಿಯಿಂದ ಕೊಡಗಿನ ಅಳಿವಿನಂಚಿನಲ್ಲಿರುವ ಹಾಗೂ ವಿಶೇಷ ಔಷಧೀಯ ಗುಣಗಳನ್ನು ಹೊಂದಿರುವ “ಮೂಲಿಕಾ ವನ” ವನ್ನು ನಿರ್ಮಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಗಜರಾಜ ನಾಯ್ಡು ಅವರು ಸಂಘಕ್ಕೆ ಒಂದು ಎಕರೆಗೂ ಮೀರಿದ ಜಾಗವನ್ನು ಉದಾರವಾಗಿ  ಹಸ್ತಂತರಿಸಿದರು. ಮುಂದಿನ ದಿನಗಳಲ್ಲಿ ನಾಗರಿಕರಿಗೆ, ವಿದ್ಯಾರ್ಥಿಗಳಿಗೆ, ಆಯುರ್ವೇದ ತಜ್ಞರಿಗೆ, ಪ್ರಕೃತಿ ಪ್ರಿಯರಿಗೆ ಸಹಕಾರಿ ಆಗುವಂತೆ ಈ ಜಾಗವನ್ನು ಮೂಲಿಕಾ ವನವಾಗಿ ಬೆಳೆಸುವ ಯೋಜನೆಯನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದು “ನೀಮಾ” ಅಧ್ಯಕ್ಷ ಡಾ.ರಾಜಾರಾಮ್ ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ. ಜ್ಯೋತಿ, ಡಾ. ಸಾವಿತ್ರಿ, ಡಾ.ರಾಜಗೋಪಾಲ್.ಹೆಚ್.ಆರ್, ಆಯುಷ್ ಇಲಾಖೆಯ ಡಾ.ಅರುಣ್, ಡಾ.ಶೋಭಾ,  ಆಯುಷ್…

Read More