ಮಡಿಕೇರಿ ನ.1 NEWS DESK : ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಆಟೋಟ ಹಾಗೂ ಕ್ರೀಡಾಸ್ಪರ್ಧೆಗಳಲ್ಲಿ ಸ್ಪರ್ದಿಸಿದ್ದ ಮಡಿಕೇರಿಯ ಸಂತ ಜೋಸೆಫರ ಕಾಲೇಜಿನ ಈ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಕೆ.ಯು.ಪ್ರಜ್ಞಾ-ಟ್ರಿಪಲ್ ಜಂಪ್, ಐಝಾನ್ ವಸಿಂ – ಟೇಬಲ್ ಟೆನಿಸ್ ಮತ್ತು ಅದಿತ್ರೀ ಕೆದಂಬಾಡಿ ಚೇತನ್ – ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ವಿದ್ಯಾರ್ಥಿ ವೃಂದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶುಭ ಹಾರೈಸಿದ್ದಾರೆ.
ಲೇಖಕ: admin
ಕುಶಾಲನಗರ ನ.1 NEWS DESK : ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷರೂ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೆಚ್.ಬಿ.ಚಂದ್ರಪ್ಪ ಜಯಭೇರಿ ಬಾರಿಸಿದ್ದಾರೆ. ಎಪಿಸಿಎಂಎಸ್ಸಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಸಂಘದಕುಶಾಲನಗರ, ನಂಜರಾಯಪಟ್ಟಣ ಹಾಗೂ ಹೆಬ್ಬಾಲೆ ವಿಭಾಗದಿಂದ ಒಟ್ಟು 12 ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಎಪಿಸಿಎಂಎಸ್ಸಿ ಸಭಾಂಗಣದಲ್ಲಿ ನಡೆದ ಮತ ಏಣಿಕೆ ಕಾರ್ಯದಲ್ಲಿ ಹೆಬ್ಬಾಲೆ ವಿಭಾಗದಿಂದ ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಚ್.ಬಿ.ಚಂದ್ರಪ್ಪ 370 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಜಿ.ಕುಮಾರಸ್ವಾಮಿ 213 ಹಾಗೂ ಸುಂದರ್ಗೆ 125 ಮತಗಳು ಲಭಿಸಿ,ಕುಶಾಲನಗರ ತಾಲ್ಲೂಕಿನ ಎಪಿಸಿಎಂಸ್ಸಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿ ಮೇಲುಗೈ ಸಾಧಿಸಿದರು ಸೋಲುಂಡರು. ಹಿಂದುಳಿದ ವರ್ಗ(ಬಿಸಿಎಂಎ) ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಚ್.ಎನ್. ಮಹಾದೇವ 382 ಮತ ಪಡೆದು ಗೆದ್ದರು. ಪ್ರತಿಸ್ಪರ್ಧಿ ಕಾಂಗ್ರೆಸ್…
ಮಡಿಕೇರಿ ನ.1 NEWS DESK : ಕರ್ನಾಟಕ ಎಂಬುವುದು ಕೇವಲ ನೆಲವಲ್ಲ, ಅದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸಚಿವರು ಮಾತನಾಡಿದರು. ಕನ್ನಡ, ಕರ್ನಾಟಕ, ಕರುನಾಡು ಎಂಬುವುದು ಕೇವಲ ನೆಲ ಮತ್ತು ಭಾಷೆಯಲ್ಲ. ಅದು ಕನ್ನಡಿಗರ ಭಾವನೆ ಹಾಗೂ ಬಾಂಧವ್ಯವಾಗಿದ್ದು, ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದರು. ದೇಶದಲ್ಲಿ ಕನ್ನಡ ಭಾಷಾ ಸಾಹಿತ್ಯಕ್ಕೆ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ದೊರೆತ್ತಿರುವುದು ಹೆಮ್ಮೆಯ ವಿಚಾರ. ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಮ್ಮ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಅಂತಹ ಎಲ್ಲಾ ಮಹಾನ್ ಚೇತನಗಳನ್ನು ಅತ್ಯಂತ ಕೃತಜ್ಞತೆಯಿಂದ ಸ್ಮರಿಸಿಕೊಳ್ಳಬೇಕು…
ವಿರಾಜಪೇಟೆ ನ.1 NEW DESK : ವಿರಾಜಪೇಟೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಕನ್ನಡ ಧ್ವಜಾರೋಹಣ ಮಾಡಿ, ಧ್ವಜ ವಂದನೆ ಸಲ್ಲಿಸಿದರು. ಬಳಿಕ ಗೌರವ ಸ್ವೀಕರಿಸಿ ಮಾತನಾಡಿದ ಶಾಸಕರು, ಸಮಸ್ತ ಕರ್ನಾಟಕದ ಜನತೆ ಇಂದು ಹೆಮ್ಮೆಪಡುವ ದಿನ. ನಮ್ಮ ಭಾಷೆ ನಮ್ಮ ನೆಲ ನಮ್ಮ ಜಲ ಸದಾ ನಮ್ಮೊಂದಿಗಿರುತ್ತದೆ. ನಮ್ಮತನವನ್ನು ಸದಾ ಉಳಿಸಿಕೊಳ್ಳಲು ನಾವು ನಮ್ಮ ಭಾಷೆಗೆ ನೀಡುವ ಗೌರವ, ಅಭಿಮಾನದಿಂದ ಪೋಷಿಸುವ ರೀತಿಯ ಮೇಲೆ ಅವಲಂಬಿತವಾಗಿರುತ್ತದೆ. ಕನ್ನಡ ಭಾಷೆಯ ಬಗ್ಗೆನ ಅಭಿಮಾನ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ, ಸದಾ ಕನ್ನಡಾಭಿಮಾನ, ಕನ್ನಡದ ನಾಡು, ಜಲ, ಭಾಷೆಯ ಬಗ್ಗೆ ಪ್ರೇಮವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು ಸುಜಾ ಕುಶಾಲಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ತಹಶೀಲ್ದಾರ್ ಪ್ರವೀಣ್, ಪುರಸಭೆ ಉಪಅಧ್ಯಕ್ಷೆ…
ಮಡಿಕೇರಿ ನ.1 NEWS DESK : ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯ ಬಳಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಉಸ್ತುವಾರಿ ಸಚಿವ ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ ಶಿಲನ್ಯಾಸ ನೆರವೇರಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳು, ಮಾಜಿ ಸಚಿವರುಗಳು, ಮಾಜಿ ಶಾಸಕರುಗಳು ಹಾಗೂ ಆಹ್ವಾನಿತ ಅತಿಥಿ ಗಣ್ಯರು ಉಪಸ್ಥಿತರಿದ್ದರು. ಬಳಿಕ ಶುಭಕೋರಿದ ಶಾಸಕ ಎ.ಎಸ್.ಪೊನ್ನಣ್ಣ, ನಿಗದಿತ ಸಮಯದಲ್ಲಿ ಕಾಂಗ್ರೆಸ್ ಭವನ ಪೂರ್ಣಗೊಳ್ಳಲಿದ್ದು, ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು. ಆದಷ್ಟು ಬೇಗ ಈ ನೂತನ ಭವನದಲ್ಲಿ ಪಕ್ಷದ ಕಾರ್ಯ ಚಟುವಟಿಕೆಗಳು ಯಶಸ್ಸು ಕಾಣುವುದರೊಂದಿಗೆ ಕಾಂಗ್ರೆಸ್ ಪಕ್ಷದ ಗತವೈಭವ ಮರುಕಳಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದರು. ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಮಾತನಾಡಿ, ಶುಭ ಕೋರಿದರು. ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯರುಗಳು,…
ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ(ಐಟಿಡಿಪಿ) ನೂತನ ಕಚೇರಿ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ನೂತನ ಕಟ್ಟಡದಲ್ಲಿ ಅಧಿಕಾರಿಗಳು ಸರಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪರಿಣಾಮಕಾರಿ ರೀತಿಯಲ್ಲಿ ಗಿರಿಜನರ ಅಭಿವೃದ್ಧಿಗೆ ತಲುಪಿಸಲು ಶ್ರಮ ವಹಿಸಬೇಕೆಂದು ಕರೆ ನೀಡಿ, ಎಲ್ಲರಿಗೂ ಶುಭ ಕೋರಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ, ನಿರ್ಮಿತಿ ಕೇಂದ್ರದ ಯೋಜನಾ…
ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ನಾಗರಹೊಳೆಯಲ್ಲಿ 1.80 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಅದಿವಾಸಿ ಬುಡಕಟ್ಟು ವಸತಿ ಶಾಲೆಯ ನವೀಕರಣ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಶುಕ್ರವಾರ ಉದ್ಘಾಟಿಸಿದರು. ಬಳಿಕ ಶಾಲಾ ಕೊಠಡಿ ವೀಕ್ಷಿಸಿದ ಸಚಿವರು ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದರು. ಶಿಕ್ಷಕರು ಪಾಠ ಪ್ರವಚನ ಮನ ಮುಟ್ಟುವಂತೆ ಹೇಳುತ್ತಿದ್ದಾರೆಯೇ, ಪ್ರತಿನಿತ್ಯ ಆಹಾರದ ಪಟ್ಟಿಯಂತೆ ಊಟೋಪಾಚಾರ ಕಲ್ಪಿಸಲಾಗುತ್ತಿದೆಯೇ, ಮೊಟ್ಟೆ ಬಾಳೆಹಣ್ಣು, ಚಿಕ್ಕಿ ವಿತರಿಸಲಾಗುತ್ತಿದೆಯೇ ಎಂದು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಶುಕ್ರವಾರ ಯಾವ ಊಟ ಬಡಿಸಿದರು ಎಂಬ ಸಚಿವರ ಪ್ರಶ್ನೆಗೆ ವಿದ್ಯಾರ್ಥಿಗಳು ಅನ್ನ ಸಾಂಬಾರು, ಮುದ್ದೆ ಎಂದು ಉತ್ತರಿಸಿದರು, ಇದಕ್ಕೆ ಸಚಿವರು, ಯಾವ ಸಾಂಬಾರು ಎಂದು ಮರು ಪ್ರಶ್ನಿಸಿದರು, ಇದಕ್ಕೆ ವಿದ್ಯಾರ್ಥಿಗಳು ಕಡ್ಲೆಕಾಳು, ತರಕಾರಿ ಸಾಂಬಾರು ಎಂದು ಉತ್ತರಿಸಿದರು. ಬಳಿಕ ಸಚಿವರು…
ಸುಂಟಿಕೊಪ್ಪ ನ.1 NEWS DESK : ಭಾರತಾಂಭೆಯ ಸೇವೆಯಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳಲು ಕನ್ನಡ ರಾಜ್ಯೋತ್ಸವ ನಮಗೆಲ್ಲರಿಗೂ ಪ್ರೇರಣೆ ನೀಡುವಂತ ಆಚರಣೆಯಾಗಬೇಕೆಂದು ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಕರೆ ನೀಡಿದ್ದಾರೆ. ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಆಚರಣೆಯಲ್ಲ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು. ಭಾಷಾವರು ಪಾಂತ್ಯಗಳಾಗಿ ರಚನೆಯಾದ ಸಂದರ್ಭ ಮೈಸೂರು 1956 ರಲ್ಲಿ ಅಸಿತ್ವಕ್ಕೆ ಬಂದು ಮುಂದೆ 1973 ನವೆಂಬರ್ 1 ರಂದು ಕರ್ನಾಟಕವೆಂದು ಹೆಸರಾಯಿತು. ಅಂದಿನಿಂದ ಪ್ರತಿ ವರ್ಷವೂ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾ ಕನ್ನಡ ನಾಡು ನುಡಿ ಸಂಸ್ಕøತಿ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲಾರೂ ಮತ್ತೆ ಮತ್ತೆ ಕಟ್ಟಿಬದ್ದರಾಗಬೇಕೆಂದು ಅವರು ಕರೆ ನೀಡಿದರು. ಸುಂಟಿಕೊಪ್ಪ ಗ್ರೇಡ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್.ಸುನಿಲ್ಕುಮಾರ್ ಮಾತನಾಡಿ, ಕನ್ನಡ ವೃತ್ತದ ಐತಿಹಾಸಿಕ ಹಿನ್ನಲೆಯನ್ನು ಗತೌರವಿಸಿ ಕನ್ನಡ ರಾಜ್ಯೋತ್ಸವ ತಿಂಗಳಾದ ನವೆಂಬರ್ನಲ್ಲಿ ವೈವಿದ್ಯಮಯ ಭಾಷ ಸಂಸ್ಕøತಿ ಮೈಳಾಯಿಸಿದ ಹಮ್ಮಿಕೊಳ್ಳುವಂತಾಗಬೇಕೆಂದು ಕರೆ ನೀಡಿ,…
ಮಡಿಕೇರಿ NEWS DESK ನ.1 : ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ರೋಟರಿ ಸದಸ್ಯರಿಗಾಗಿ ನ.2 ರಂದು ಭಾನುವಾರ ಕಲಾಕಲರವ ಸಾಂಸ್ಕೖತಿಕ ಸ್ಪದೆ೯ಗಳು ಆಯೋಜಿಸಲ್ಪಟ್ಟಿದೆ ಎಂದು ಸಮಿತಿ ಸಂಚಾಲಕ ಜಯಂತ್ ಪೂಜಾರಿ ತಿಳಿಸಿದ್ದಾರೆ. ನ.2 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ರೋಟರಿ ವಲಯ 6 ರ ಸದಸ್ಯರಿಗಾಗಿ ಆಯೋಜಿತ ಸ್ಪಧೆ೯ಗಳಿಗೆ ನಗರದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಪ್ರಾಂಶುಪಾಲ ಮೇಜರ್ ಬಿ. ರಾಘವ ಚಾಲನೆ ನೀಡಲಿದ್ದಾರೆ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ, ರಾಜುಗೌಡ, ಉಲ್ಲಾಸ್ ಕೖಷ್ಣ. ಸಾಂಸ್ಕೖತಿಕ ಸಮಿತಿಯ ವಲಯಾಧ್ಯಕ್ಷೆ ತೋಟಂಬೈಲು ಶುಭಾಷಿಣಿ ಸೇರಿದಂತೆ ಗಣ್ಯರು ಹಾಜರಿರುತ್ತಾರೆ. ವಲಯ 6 ಕ್ಕೆ ಸೇರಿರುವ ರೋಟರಿಯ 14 ಕ್ಲಬ್ ಗಳ ಸದಸ್ಯರು, ಕುಟುಂಬ ವಗ೯ದ 220 ಸದಸ್ಯರು ಸಾಂಸ್ಕೖತಿಕ ಸ್ಪಧೆ೯ಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದೂ ಜಯಂತ್ ಪೂಜಾರಿ ಮಾಹಿತಿ ನೀಡಿದ್ದಾರೆ.
ನಾಪೋಕ್ಲು ನ.1 NEWS DESK : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ ನಾಪೋಕ್ಲುವಿನಲ್ಲಿ ರಾಷ್ಟರೀಯ ಏಕತಾ ಓಟ ನಡೆಯಿತು. ನಾಪೋಕ್ಲು ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಫ್ರಾನ್ಸಿಸ್ ಅವರ ನೇತೃತ್ವದಲ್ಲಿ ಪೊಲೀಸರು ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಮಾಚೇಟಿರ ಕುಸು ಕುಶಾಲಪ್ಪ, ಅಶ್ರಫ್ ಕೆ.ವೈ., ನಾಪೋಕ್ಲು ಪಟ್ಟಣದ ಬಸ್ ನಿಲ್ದಾಣದಿಂದ ಮಾರುಕಟ್ಟೆ ವರೆಗೆ ಏಕತಾ ಓಟವನ್ನು ನಡೆಸಿ ಏಕತಾ ಸಂದೇಶವನ್ನು ಸಾರಿದರು. ಈ ಸಂದರ್ಭ ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿಗಳು, ಸಾರ್ವಜನಿಕರು, ಆಟೋ ಚಾಲಕರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.






