ಲೇಖಕ: admin

ಮಡಿಕೇರಿ ನ.1 NEWS DESK : `ಕನ್ನಡ’ ತಾಯಿಯ ತೇರನೆಳೆಯುವ ಕಾರ್ಯಕ್ಕೆ ಕನ್ನಡಿಗರೆಲ್ಲರೂ ಕೈಜೋಡಿಸುವಂತೆ ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿಗಳಾದ ಟಿ.ಪಿ.ರಮೇಶ್ ಕರೆ ನೀಡಿದರು. ಕೊಡಗು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ ಕೇಶವಕಾಮತ್ ಅವರು ಕನ್ನಡ ಧ್ವಜಾರೋಹಣವನ್ನು ನೆರವೇರಿಸಿ ಶುಭಕೋರಿದರು. ಈ ಸಂದರ್ಭ ಟಿ.ಪಿ.ರಮೇಶ್ ಮಾತನಾಡಿ, ಹರಿದು ಹಂಚಿಹೋಗಿದ್ದ ಕನ್ನಡ ನಾಡಿನ ಏಕೀಕರಣಕ್ಕೆ ಹಲ ಮಹನೀಯರು ಶ್ರಮಿಸಿದ್ದಾರೆಂದು ತಿಳಿಸಿ, ಕನ್ನಡದ ಸಾಹಿತ್ಯ , ಪರಂಪರೆ, ಸಂಸ್ಕøತಿಯ ಬೆಳವಣಿಗೆಗಳಿಗೆ ಪ್ರತಿಯೊಬ್ಬರು ಶ್ರಮಿಸುವಂತೆ ತಿಳಿಸಿದರು. ಈ ಸಂದರ್ಭ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್, ಹಿರಿಯ ಟ್ರಸ್ಟಿಗಳಾದ ವಿ.ಪಿ.ಸುರೇಶ್, ಶ್ರೀಧರ್ ಹೂವಲ್ಲಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಬಿ.ಎಂ.ವಾಸು ರೈ, ಪುದಿಯನೆರವನ ರೇವತಿ ರಮೇಶ್, ಸಿಬ್ಬಂದಿಗಳಾದ ಯಮುನಾ ಬಜೆಕೋಡಿ, ಶೈನಿ ಆಲ್ವಿನ್ ರಾಜೇಶ್, ಉದ್ಯಮಿಗಳಾದ ಅಶ್ರಫ್, ರೆಹಮಾನ್ ಪುಟಾಣಿಗಳಾದ ತರುಣ್ ಬಜೆಕೋಡಿ, ಮತ್ತು ದೇಶಿಕ…

Read More

ಮಡಿಕೇರಿ NEWS DESK  ಅ.31 : ಕೂರ್ಗ್ ಪ್ಲಾಂಟರ್ಸ್ ಎಸೋಸಿಯೇಷನ್’ನ 146 ನೇ ವಾರ್ಷಿಕ ಸಮ್ಮೇಳನ ಸಿದ್ದಾಪುರದಲ್ಲಿ ನಡೆಯಿತು. ಆರೆಂಜ್ ಕೌಂಟಿ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು ಶತಮಾನಗಳಿಗೂ ಅಧಿಕ ಇತಿಹಾಸವುಳ್ಳ ಕೂರ್ಗ್ ಪ್ಲಾಂಟೇಶನ್ ಅಸೋಸಿಯೇಷನ್, ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ. ಕೊಡಗಿನ ಬೆಳೆಗಾರರಿಗೆ ಅನುಕೂಲ ಆಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಪ್ಲಾಂಟರ್ ಎಸ್ಸೋಸಿಯೇಷನ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಅ.24 : ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸುವ ಉದ್ದೇಶದದಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.1 ರಂದು ನವದೆಹಲಿ ಚಲೋ ಕೊಡವ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂವಿಧಾನದ 6 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಮೂಲಕ ಸ್ವ-ನಿರ್ಣಯ ಮತ್ತು ಸ್ವ-ಆಡಳಿತದ ಹಕ್ಕೊತ್ತಾಯಗಳ ಪರ ಹೋರಾಟ ನಡೆಸುತ್ತಿರುವ ಸಿಎನ್‌ಸಿ ಸಂಘಟನೆ ನ.1ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಶಾಂತಿಯುತ ಸತ್ಯಾಗ್ರಹವನ್ನು ನಡೆಸಲಿದೆ. ರಾಜ್ಯ ಮರುಸಂಘಟನಾ ದಿನವನ್ನು “ಕೊಡವ ನೆಲದ ದುರಾಕ್ರಮಣದ ದಿನ” ಎಂದು ಆಚರಿಸುವುದಾಗಿ ಮಾಹಿತಿ ನೀಡಿದ್ದಾರೆ. 1956 ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರೀತಿಯ ತಾಯ್ನಾಡನ್ನು ಅಂದರೆ ಹಿಂದಿನ “ಸಿ” ಭಾಗವಾದ ಕೊಡವರ ರಾಜ್ಯವನ್ನು ಕಳೆದುಕೊಂಡ ದಿನ. ಇದು 20 ನೇ ಶತಮಾನದ ಅತ್ಯಂತ ದೊಡ್ಡ ಭೌಗೋಳಿಕ-ರಾಜಕೀಯ ಉತ್ಪಾತವಾಗಿದೆ. ರಾಜ್ಯ ಮರುಸಂಘಟನಾ ಕಾಯ್ದೆಯಡಿ ನಮ್ಮ ರಾಜ್ಯವನ್ನು ವಿಲೀನಗೊಳಿಸಿದ ನಂತರ ಕೊಡವರು ತಮ್ಮ ಸ್ವಂತ ತಾಯ್ನಾಡಿನಲ್ಲಿ…

Read More

ಮಡಿಕೇರಿ NEWS DESK ಅ.31 : ಕಳೆದ 60 ವರ್ಷಗಳಿಂದ ಸಮಾಜಮುಖಿಯಾಗಿ ನಿರಂತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮಡಿಕೇರಿ ಲಯನ್ಸ್ ಸಂಸ್ಥೆ ವಜ್ರ ಮಹೋತ್ಸವ ಸಮಾರಂಭವನ್ನು ಆಚರಿಸಿಕೊಂಡಿತು. ಲಯನ್ಸ್ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್  ಶೆಣೈ ಅವರು ಅಧಿಕೃತ ಭೇಟಿ ನೀಡಿ ಸಂಸ್ಥೆಯ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಜ್ಯಪಾಲರು ಲಯನ್ಸ್ ಸಂಸ್ಥೆಯಲ್ಲಿ ಅನುಭವಿಗಳು ಹಾಗೂ ಹಿರಿಯ ಸದಸ್ಯರು ವಿವಿಧ ಸ್ಥಾನಗಳನ್ನು ಅಲಂಕರಿಸಿದ್ದು, ಈ ವಯಸ್ಸಿನಲ್ಲೂ   ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯವೆಂದರು. ಮಡಿಕೇರಿ ಸೇರಿದಂತೆ ಸುಂಟಿಕೊಪ್ಪ, ಕುಶಾಲನಗರ ಮತ್ತು ಸೋಮವಾರಪೇಟೆ ಲಯನ್ಸ್ ಸಂಸ್ಥೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಮಾಜಕ್ಕೆ ಮಾದರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. *ಸನ್ಮಾನ* ಸ್ಥಾಪಕ ಕಾರ್ಯದರ್ಶಿ ದಿವಂಗತ ಲಯನ್ ಕೊಡಂದೇರ ಎಂ.ಬೋಪಯ್ಯ ಅವರನ್ನು ಸ್ಮರಿಸುತ್ತಾ ಮರಣೋತ್ತರ ಉಲ್ಲೇಖದೊಂದಿಗೆ ಅವರ ಪುತ್ರಿ   ಪಟ್ಟಮಾಡ ಕವಿತಾ ಮುತ್ತಣ್ಣ ಅವರನ್ನು ಸನ್ಮಾನಿಸಲಾಯಿತು. ವಜ್ರ ಮಹೋತ್ಸವದ ಅಂಗವಾಗಿ ಮಡಿಕೇರಿ ಲಯನ್ಸ್  ಸಂಸ್ಥೆಯ…

Read More

ಮಡಿಕೇರಿ NEWS DESK ಅ.31 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಸಂಸ್ಮರಣಾ ದಿನಾಚರಣೆ ನಗರದಲ್ಲಿ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕಾರ್ಯದರ್ಶಿ ಪೇರಿಯನ ಉದಯಕುಮಾರ್, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ಲು, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಕರ್ನಾಟಕ…

Read More

ವಿರಾಜಪೇಟೆ NEWS DESK ಅ.31 : ಕೊಡಗು ಜಿಲ್ಲಾ ಪೊಲೀಸ್ ವಿರಾಜಪೇಟೆ ಉಪ ವಿಭಾಗ, ವಿರಾಜಪೇಟೆ ವೃತ್ತ, ವಿರಾಜಪೇಟೆ ನಗರ ಠಾಣೆ ಹಾಗೂ ವಿರಾಜಪೇಟೆ ಗ್ರಾಮಾಂತರ ಠಾಣೆ ಇವರ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆಯಲ್ಲಿ  ರಾಷ್ಟ್ರೀಯ ಏಕತಾ ದಿನಾಚರಣೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು “ಏಕತೆಗಾಗಿ ಓಟ 2025” ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಮೈದಾನದಿಂದ ವಿರಾಜಪೇಟೆ ನಗರದಾದ್ಯಂತ ಕಾಲ್ನಡಿಗೆ ಮೂಲಕ ಆಯೋಜಕರೊಂದಿಗೆ ಹೆಜ್ಜೆ ಹಾಕಿದ ಶಾಸಕರು ಏಕತೆಯ ಸಂದೇಶ ಸಾರಿದರು. ಭಾರತದ ಸಾರ್ವಭೌಮತೆ ಉಳಿಸಿಕೊಳ್ಳಲು ದೇಶದ ನಾಗರೀಕರಲ್ಲಿ ಏಕತಾ ಭಾವನೆ ಅತೀ ಮುಖ್ಯವಾಗಿದೆ. ಬ್ರಿಟಿಷರ ಕಪಿಮುಷ್ಠಿಯಿಂದ ಸ್ವಾತಂತ್ರ್ಯ ಹೋರಾಟಗಾರರು ನಮಗೆ ತಂದುಕೊಟ್ಟ ಸ್ವತಂತ್ರ ಭಾರತದ ಸ್ವರ್ಣ ಯುಗವನ್ನು ಮುಂದುವರಿಸಲು ಪ್ರತಿಯೊಬ್ಬ ಭಾರತೀಯನು ಒಗ್ಗಟ್ಟಾಗಿ ಇರುವುದು ಅತಿ ಅವಶ್ಯಕವಾಗಿದೆ. ದೇಶದ ವಿಷಯ ಬಂದ ಸಂದರ್ಭದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ದೇಶದ ಪ್ರಜೆಗಳಾದ ನಮ್ಮೊಳಗೆ ಮೂಡಬಾರದು ಎಂಬ ಸದುದ್ದೇಶದಿಂದ ಹಾಗೂ ಏಕತೆಯ ಸಂದೇಶವನ್ನು ಸಾರಲು…

Read More

ಸೋಮವಾರಪೇಟೆ NEWS DESK ಅ.31 : ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ-ಎಡದಂಟೆ ಗ್ರಾಮಕ್ಕೆ ಶಾಸಕರಾದ ಡಾ.ಮಂತರ್‌ಗೌಡ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಎಡದಂಟೆ ಜಲಪಾತ ವೀಕ್ಷಿಸಿದ ಶಾಸಕರು, ಪ್ರವಾಸಿಗರಿಗೆ ಜಲಪಾತ ವೀಕ್ಷಣೆಗೆ ಅವಕಾಶ ಮಾಡಿಕೊಡಲು, ಜಲಪಾತ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಕಲ್ಪಿಸಲಾಗುವುದು ಎಂದು ಹೇಳಿದರು. ಮೊದಲು ಮೆಟ್ಟಿಲುಗಳನ್ನು ನಿರ್ಮಿಸಲು ಅಂದಾಜುಪಟ್ಟಿಯನ್ನು ತಯಾರಿಸುವಂತೆ ಲೋಕೋಪಯೋಗಿ ಇಲಾಖೆ ಎಇಇ ಅವರಿಗೆ ಸೂಚಿಸಿದರು. ಕೂತಿ ಮುಖ್ಯ ರಸ್ತೆಯಿಂದ ಎಡದಂಟೆ ಗ್ರಾಮಕ್ಕೆ ಒಂದೂವರೆ ಕಿ.ಮೀ.ರಸ್ತೆ ಅಭಿವೃದ್ಧಿಗೆ ಅನುದಾನ ಕಲ್ಪಿಸುವಂತೆ ಎಡದಂಟೆ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ವೈ.ಎಂ.ರವಿ ಮನವಿ ಮಾಡಿದರು. ರಸ್ತೆ ಅಭಿವೃದ್ದಿಗೆ ಅನುದಾನ ಕಲ್ಪಿಸುವ ಭರವಸೆಯನ್ನು ಶಾಸಕರು ನೀಡಿದರು. ಜಲಪಾತ ಅಭಿವೃದ್ಧಿ ಹಾಗು ಅದೇ ಮಾರ್ಗವಾಗಿ ರುದ್ರಗಿರಿ ಬೆಟ್ಟಕ್ಕೆ ಸಂಪರ್ಕ ರಸ್ತೆಗಾಗಿ 5 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಈ ಹಿಂದಿಯೆ ಪ್ರವಾಸೋಧ್ಯಮ ಇಲಾಖೆಗೆ ಸಲ್ಲಿಸಲಾಗಿದೆ. ಆದರೆ ಅನುದಾನ ಸಿಕ್ಕಿಲ್ಲ ಎಂದು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎಂ.ಲವ ಶಾಸಕರ ಗಮನಕ್ಕೆ ತಂದರು.…

Read More

ಸೋಮವಾರಪೇಟೆ ಅ.31 : ನಾವು ಪ್ರತಿಷ್ಠಾನದ ವತಿಯಿಂದ ಶಾಲಾ ಆರೋಗ್ಯ ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮ ಕಾರ್ಯಕ್ರಮ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು. ಪ್ರತಿಷ್ಠಾನದ ಸ್ಥಾಪಕರಾದ ಗೌತಮ್ ಕಿರಗಂದೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕಿ ಸುಮನಾ ಮ್ಯಾಥ್ಯು ಮಾತನಾಡಿ, ರಾಷ್ಟ್ರೀಯ ಅರೋಗ್ಯ ಮಿಷನ್‌ನಡಿಯಲ್ಲಿ 2020ರಲ್ಲಿ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಜೀವನಶೈಲಿ, ಅರೋಗ್ಯಕರ ನಡವಳಿಕೆ ಮುಂತಾದ ವಿಷಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಕಾರ್ಯಕ್ರಮದಲ್ಲಿ ಮಕ್ಕಳು ಮುಕ್ತವಾಗಿ ತಮ್ಮ ಬೇಕು ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ ಎಂದು ಹೇಳಿದರು. ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಬೆಂಗಳೂರು, ಯುನಿಸೆಫ್ ಜಂಟಿಯಾಗಿ ಕಾರ್ಯಕ್ರಮ ರೂಪಿಸುತ್ತಿದೆ. ನಾವು ಪ್ರತಿಷ್ಠಾನ ಕೊಡಗು ಜಿಲ್ಲೆಯ ಶಾಲೆಗಳ ಜವಾಬ್ದಾರಿ ತೆಗೆದುಕೊಂಡಿದೆ. ಪ್ರಸಕ್ತ ವರ್ಷ ಸೋಮವಾರಪೇಟೆ ತಾಲೂಕಿನ ಆಯ್ದ 5 ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಹೇಳಿದರು. ಸರ್ಕಾರಿ ಪ್ರೌಢಶಾಲೆಯ ಎಂಟನೇ ಮತ್ತು ಒಂಬತ್ತನೆ ತರಗತಿ ಮಕ್ಕಳಿಗೆ…

Read More

ಮಡಿಕೇರಿ NEWS DESK ಅ.31 : ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಯಿತು. ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ‘ಏಕತಾ ಯಾತ್ರೆ’ ನಡೆಯಿತು. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ‘ಏಕತಾ ಯಾತ್ರೆ’ ಸಾಗಿತು. ರಾಷ್ಟçದ ಏಕತೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವುದರೊಂದಿಗೆ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಪಕ್ಷದ ಪ್ರಮುಖರು ತಿಳಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಬಿಜೆಪಿ ಮಾಜಿ ಅಧ್ಯಕ್ಷರುಗಳಾದ ರವಿ ಕುಶಾಲಪ್ಪ, ಬಿ.ಬಿ.ಭಾರತೀಶ್, ರಾಬಿನ್ ದೇವಯ್ಯ, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ನಗರಸಭಾ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪ್ರಮುಖರು ಹಾಗೂ ಕಾರ್ಯಕರ್ತರು ‘ಏಕತಾ ಯಾತ್ರೆ’ಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಅ.30 NEWS DESK : ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಫೆಡರೇಷನ್ ನ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ಗಣೇಶ್ ನಾಯ್ಡು ಅವರು ನೇಮಕಗೊಂಡಿದ್ದಾರೆ. ಮಜ್ದೂರ್ ಕಾಂಗ್ರೆಸ್ ಫೆಡರೇಷನ್ ನ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿನಾಥ್ ಜೈಸ್ವಾಲ್ ಅವರ ಅನುಮೋದನೆ ಮತ್ತು ಫೆಡರೇಷನ್ ನ ಕರ್ನಾಟಕ ರಾಜ್ಯಾಧ್ಯಕ್ಷ ನಂದಾ ಎನ್. ಅವರ ಆದೇಶದ ಮೇರೆಗೆ ಗಣೇಶ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ. ಮಹಿಳೆಯರು, ಹಿಂದುಳಿದ ವರ್ಗ, ಪರಿಶಿಷ್ಟರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರನ್ನು ಪಕ್ಷದೆಡೆಗೆ ಸೆಳೆದು ಸದಸ್ಯತ್ವವನ್ನು ಹೆಚ್ಚಿಸಲಾಗುವುದು. ಪಕ್ಷದ ಮುಖಂಡರ ಮಾರ್ಗದರ್ಶನ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದ್ದಾರೆ. ಮೂರ್ನಾಡುವಿನ ಗಣೇಶ್ ನಾಯ್ಡು ಅವರು ಶ್ರೀಯೋಗಿ ನಾರಾಯಣ ಕೊಡಗು ಬಲಿಜ ಸಮಾಜದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More