ಲೇಖಕ: admin

ಮಡಿಕೇರಿ ಮಾ.26 NEWS DESK : ಮಹಿಳೆಯರು ಸಬಲರಾದಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಕೋಟಿ ಅವರು ಹೇಳಿದರು. ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ವತಿಯಿಂದ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಮಹಿಳಾ ಸಂಭ್ರಮ-2026ಅನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಮಹಿಳೆಯರಿಗೆ ಸರ್ಕಾರದ ಹತ್ತು ಹಲವು ಯೋಜನೆಗಳಿದ್ದು, ಅದನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು. ಆ ಮೂಲಕ ಬದುಕನ್ನು ಭದ್ರವಾಗಿ ರೂಪಿಸಿಕೊಳ್ಳಬೇಕು. ಮಹಿಳಾ ಘಟಕದ ಇಂತಹ ಕಾರ್ಯಕ್ರಮವು ಮಹಿಳೆಯರ ಸಂಘಟನೆಯ ಜೊತೆಗೆ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘಟನೆಗೆ ಪೂರಕವಾಗಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾದ ಲತಾ ಮಡಿಕೆಬೀಡು ಮಾತನಾಡಿ, ಮಹಿಳೆಯರು ಸಂಘಟಿತಗೊಳ್ಳುವ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿಯಬಹುದು. ಈ ರೀತಿಯ ಸ್ಪಂದನೆ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಬೆಳವಣಿಗೆಗೆ ಇನ್ನಷ್ಟು ಪೂರಕವಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಮಡಿಕೇರಿ ಮಾ.26 NEWS DESK : ರೋಟರಿ ಮಡಿಕೇರಿ ವತಿಯಿಂದ ನಗರದ ಶ್ರೀ ರಾಜರಾಜೇಶ್ವರಿ ಶಾಲೆ ಮತ್ತು ಶ್ರೀ ರಮಾದೇವಿ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಕ್ಕೆ ದಹನ ಯಂತ್ರ (ಸ್ಯಾನಿಟರಿ ನ್ಯಾಪ್ಕಿನ್ ಇನ್ಸಿನರೇಟರ್) ವನ್ನು ವಿತರಿಸಲಾಯಿತು. ರೋಟರಿ ಸಂಸ್ಥೆಯು ಸಾಮಾಜಿಕ ಕಳಕಳಿ, ಶಿಕ್ಷಣ, ಆರೋಗ್ಯ ಜಾಗೃತಿ, ವೃತ್ತಿಪರ ಕೌಶಲ್ಯ, ಸ್ವಚ್ಛತೆ ಮತ್ತು ಪರಿಸರದ ಬಗ್ಗೆ ಹೆಚ್ಚು ಕಾಳಜಿ ಹೊಂದಿದೆ. ದಹನ ಯಂತ್ರ ವಿತರಿಸುವ ಮೂಲಕ ಇದನ್ನು ಸಾಬೀತು ಪಡಿಸಿದೆ ಎಂದು ರೋಟರಿ ಮಡಿಕೇರಿ ಪ್ರಮುಖರು ತಿಳಿಸಿದರು. ರೋಟರಿ ಮಡಿಕೇರಿ ಅಧ್ಯಕ್ಷೆ ಲಲಿತಾ ರಾಘವನ್, ಸಮುದಾಯ ಸೇವಾ ವಿಭಾಗದ ನಿರ್ದೇಶಕ ಸುದಯ್ ನಾಣಯ್ಯ, ಯುವಸೇವಾ ನಿರ್ದೇಶಕ ಅನಿಲ್ ಕೃಷ್ಣಾನಿ, ಮಲ್ಲಿಗೆ ಪೈ, ರೋ.ಈಶ್ವರ್ ಭಟ್, ಶ್ರೀ ರಾಜರಾಜೇಶ್ವರಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಶ್ರೀ ರಮಾದೇವಿ ವಸತಿ ನಿಲಯದ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ NEWS DESK ಮಾ.26 : ಮಹಿಳಾ ಸಬಲೀಕರಣಕ್ಕಾಗಿ ವೃತ್ತಿಪರ ಕೌಶಲ್ಯ ಶಿಬಿರದಡಿ ರೋಟರಿ ಮಡಿಕೇರಿ ವತಿಯಿಂದ ಆಯೋಜಿಸಿರುವ ಟೈಲರಿಂಗ್ ತರಬೇತಿಗೆ ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಚಾಲನೆ ನೀಡಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರಕಾರಿ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲ ಡಾ.ವೆಂಕಟೇಶ್ ಪ್ರಸನ್ನ ಅವರು ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ ತರಗತಿಗಳನ್ನು ನಡೆಸಿ ಸ್ವಾವಲಂಬಿ ಬದುಕಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು. ಬ್ಯೂಟಿಷಿಯನ್ ಮತ್ತು ಉತ್ತಮ ಆತಿಥ್ಯಕ್ಕೆ ಸಂಬAಧಿಸಿದ ತರಬೇತಿಗಳನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದ ನಂತರ ಎದೆಗುಂದದೆ ಸ್ವಯಂ ಉದ್ಯೋಗ ಸೃಷ್ಟಿಸಿಕೊಳ್ಳಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಇದೀಗ ಸಾಮಾಜಿಕ ಕಳಕಳಿ ಹೊಂದಿರುವ ರೋಟರಿ ಮಡಿಕೇರಿ ಸಂಸ್ಥೆ ಕೂಡ ವಿದ್ಯಾರ್ಥಿನಿಯರಿಗೆ ಟೈಲರಿಂಗ್ ತರಬೇತಿ ನೀಡಲು ಮುಂದೆ ಬಂದಿರುವುದು ಹೆಚ್ಚು ಉಪಯುಕ್ತವೆನಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಮಡಿಕೇರಿ ಅಧ್ಯಕ್ಷರಾದ ಲಲಿತಾ ರಾಘವನ್ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು…

Read More

ಮಡಿಕೇರಿ NEWS DESK ಮಾ.26 : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲುನಲ್ಲಿ ನಡೆಯಲಿರುವ ಹಿಂದು ಜನ ಜಾಗೃತಿ ಸಮಾವೇಶ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್ 1 ರಂದು ಬೆಳಗ್ಗೆ 6 ಗಂಟೆಯಿoದ ಮಧ್ಯರಾತ್ರಿ 12 ಗಂಟೆಯವರೆಗೆ ನಾಪೋಕ್ಲು ಹಾಗೂ ಅದರ ಸುತ್ತಮುತ್ತಲಿನ 01 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಹಾಗೂ ಹೋಮ್‌ಮೇಡ್ ವೈನ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ NEWS DESK ಮಾ.26 : ಜಿಲ್ಲಾ ಕೇಂದ್ರ ಮಡಿಕೇರಿಯ ಸಮೀಪದ ಇಬ್ನಿವಳವಾಡಿ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಹುಲಿಯ ಪತ್ತೆಗಾಗಿ ಅರಣ್ಯ ಇಲಾಖೆ ಸಾಕಾನೆಗಳು ಮತ್ತು ಆಧುನಿಕ ಡ್ರೋನ್ ಬಳಸಿ ಕಾರ್ಯಾಚರಣೆ ಆರಂಭಿಸಿದೆ. ಇಬ್ನಿವಳವಾಡಿ ಗ್ರಾಮದ ಕಾಫಿ ತೋಟವೊಂದರಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಬುಧವಾರ ಬೆಳಗ್ಗೆ ನಿರಾತಂಕವಾಗಿ ಸಂಚರಿಸುತ್ತಿರುವ ಹುಲಿಯ ದೃಶ್ಯ ಸೆರೆಯಾಗಿತ್ತು. ಹುಲಿ ಸಂಚಾರದಿoದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇಬ್ನಿವಳವಾಡಿ ಗ್ರಾಮದ ಪಕ್ಕದಲ್ಲೆ ಇರುವ ಅರಣ್ಯ ಪ್ರದೇಶ, ಸಿಂಕೋನ, ಕಗ್ಗೋಡ್ಲು ಮತ್ತಿತರ ಗ್ರಾಮಗಳಲ್ಲಿ ಹುಲಿ ತೆರಳಿರುವ ಸಾಧ್ಯತೆಗಳಿರುವ ಕಾರಣ ಅರಣ್ಯ ಇಲಾಖೆ, ಹುಲಿಯ ಶೋಧ ಕಾರ್ಯಕ್ಕೆ ಸಾಕಾನೆಗಳನ್ನು ಬಳಸಿಕೊಂಡಿದೆ. ಸಾಕಾನೆಗಳಾದ ಕಂಜನ್, ಈಶ್ವರ್, ಪ್ರಶಾಂತ್ ಆನೆಗಳನ್ನು ಬಳಸಿಕೊಂಡು ಇಬ್ನಿವಳವಾಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಲಿಯ ಶೋಧ ಕಾರ್ಯವನ್ನು ಇಲಾಖಾ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಸಾಕಾನೆಗಳೊಂದಿಗೆ ಅತ್ಯಾಧುನಿಕ ಥರ್ಮಲ್ ಡ್ರೋನ್ ಬಳಸಿ ಇಬ್ನಿವಳವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಲಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆಯಾದರು, ಇಲ್ಲಿಯವರೆಗು ಸುಳಿವು ದೊರಕಿಲ್ಲ. ಅರಣ್ಯ ಇಲಾಖೆಯ ಡಿಸಿಎಫ್, ಎಸಿಎಫ್…

Read More

ಮಡಿಕೇರಿ NEWS DESK ಮಾ.26 : ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆಯಲಿರುವ ರಾಮನವಮಿ ಉತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮಾರ್ಚ್, 27 ರಂದು ಬೆಳಗ್ಗೆ 6 ಗಂಟೆಯಿoದ ಮಧ್ಯರಾತ್ರಿ 12 ಗಂಟೆಯವರೆಗೆ ಸೋಮವಾರಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿ, ಅಬ್ಬೂರ ಕಟ್ಟೆ ಗ್ರಾಮ, ಐಗೂರು ಗ್ರಾಮ ಮತ್ತು ಮಾದಾಪುರ ಗ್ರಾಮ ಹಾಗೂ ಅದರ ಸುತ್ತಮುತ್ತಲಿನ 01 ಕಿ.ಮೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಹಾಗೂ ಹೋಮ್ ಮೇಡ್ ವೈನ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ ಮಾ.25 NEWS DESK : ದಕ್ಷಿಣ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಕೊಡಗು  ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ನಂತರ ಅಧಿಕಾರಿಗಳೊಂದಿಗೆ ಅಪರಾಧ ಪ್ರಕರಣಗಳ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಅವಲೋಕನ ಸಭೆ ನಡೆಸಿದರು.

Read More

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 27 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.25 NEWS DESK : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ ರಾಜಾರೋಷವಾಗಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.  ಕಳೆದ ಎರಡು ತಿಂಗಳಿನಿಂದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಸಂಚರಿಸುತ್ತಿದ್ದು, ಜನರು ಭಯದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಅವಧಿಯಲ್ಲಿ ನಮ್ಮ ಕರುಗಳು, ಹಸುಗಳು ಮತ್ತು ಎತ್ತುಗಳು ದಾಳಿಗೆ ಒಳಗಾದರೂ, ನಾವು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಳ್ಳಲಾಗಲಿಲ್ಲ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನವರಿ ತಿಂಗಳಲ್ಲಿ ಚೆಟ್ರಂಡ ನಾಣಯ್ಯ ಎಂಬುವವರ 4 ಜಾನುವಾರುಗಳು ಹುಲಿ ದಾಳಿಗೆ ಒಳಗಾಗಿ ಮೃತಪಟ್ಟಿವೆ. ಫೆ.18ರಂದು ಸೋಮಯ್ಯ ಅವರ ಹಸು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮಾ.15ರಂದು ಮೃತಪಟ್ಟಿದೆ. ಕಳೆದ ಒಂದು ವಾರದಲ್ಲಿ ಮತ್ತೊಂದು ಹಸು ಕೂಡ ಸಾವನ್ನಪ್ಪಿದೆ. ಇಷ್ಟೊಂದು ನಷ್ಟಗಳಾದರೂ ಅಧಿಕಾರಿಗಳಿಂದ ಯಾವುದೇ…

Read More

ಕುಶಾಲನಗರ ಮಾ.25 NEWS DESK : ಪ್ರವಾಹ, ಭೂಕಂಪ, ಚಂಡಮಾರುತ ಮೊದಲಾದ ನೈಸರ್ಗಿಕ ವಿಕೋಪಗಳು ಮತ್ತು ಮಾನವ ನಿರ್ಮಿತ ವಿಪತ್ತುಗಳು ಎದುರಾದ ಸಂದರ್ಭಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ತಕ್ಷಣದಲ್ಲಿ ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ ಬಂದಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮತ್ತು ಕೊಡಗು ವಿಶ್ವವಿದ್ಯಾಲಯ ಸಹಯೋಗದಲ್ಲಿ  ಕಾಲೇಜಿನ ಜ್ಞಾನ ಕಾವೇರಿ ಆವರಣದಲ್ಲಿ  ನಡೆದ ಯುವ ಆಪತ್ ಮಿತ್ರ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಪತ್ತೆಹಚ್ಚಿ ರಕ್ಷಿಸುವಂತಹ ಮತ್ತು ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತಹ ಧೈರ್ಯ ಮತ್ತು ವೃತ್ತಿಪರತೆಯಿಂದ ಜೀವ ರಕ್ಷಣೆ ಮಾಡುತ್ತದೆ. ಗಾಯಗೊಂಡವರಿಗೆ ತಕ್ಷಣದ ಪ್ರಾಥಮಿಕ ಚಿಕಿತ್ಸೆ ಮತ್ತು ತುರ್ತು ವೈದ್ಯಕೀಯ ಆರೈಕೆಯನ್ನು ಒದಗಿಸುತ್ತದೆ. ರಾಸಾಯನಿಕ, ಜೈವಿಕ, ವಿಕಿರಣಶೀಲ ಮತ್ತು ಪರಮಾಣು ವಿಪತ್ತುಗಳನ್ನು ಎದುರಿಸಲು ವಿಶೇಷ ತರಬೇತಿ ನೀಡುತ್ತದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಗಳು ಸ್ಥಳೀಯ…

Read More