ಸುಂಟಿಕೊಪ್ಪ ಜೂ.24 NEWS DESK : ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರಾಮ ಮಂದಿರದಲ್ಲಿ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ವೈದ್ಯಕೀಯ ಶಿಕ್ಷಣ ಸಂಸ್ಥೆ ಪ್ರಕೃತಿ ಚಿಕಿತ್ಸಾಕ ಮತ್ತು ಸಲಹೆಗಾರರಾದ ಡಾ. ಪಿ.ಜಿ.ಅರುಣ್ ಕುಮಾರ್ ಅವರು ಯೋಗದ ಪರಿಪೂರ್ಣ ಅರ್ಥ, ಜೀವನಶೈಲಿ ಹಾಗೂ ದೃಷ್ಟಿಕೋನಗಳ ಮೇಲೆ ಅದರ ಪ್ರಭಾವವನ್ನು ವಿವರಿಸಿದರಲ್ಲದೆ, ಅದನ್ನು ಸರಳವಾಗಿ ವಿವರಿಸಿ ಅದರ ಪ್ರಾಯೋಜನಗಳು ಮತ್ತು ಪ್ರತಿದಿನದ ಅನುಷ್ಠಾನ ವಿಧಾನಗಳನ್ನು ವಿವರಿಸಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಅವರು 45 ನಿಮಿಷಗಳ ಕಾಲ ಯೋಗದ ಮೂಲ ಶಾಂತ ಮತ್ತು ಅನುಶಾಸನಾತ್ಮಕ ತತ್ತ್ವಗಳ ಮೇಲೆ ಗಮನವನ್ನು ಕೇಂದ್ರಿಕೃತಗೊಳಿಸಿ ಜನರಿಗೆ ಯೋಗಭ್ಯಾಗಸದ ಬಗ್ಗೆ ಮಾಹಿತಿ ನೀಡಿದರು. ನಾವು ನಿತ್ಯ ಯೋಗ ಮಾಡುವುದರಿಂದ ನಮ್ಮ ಆರೋಗ್ಯವು ಕ್ರೀಯಾಶೀಲತೆಯಿಂದ ಹಾಗೂ ನಿತ್ಯವು ಲವಲವಿಕೆಯಿಂದ ಹುರುಪುಗೊಳ್ಳುತ್ತೇವೆ ಅಲ್ಲದೆ, ದೈಹಿಕ ಮತ್ತು ಮಾನಸಿಕ ದೃಢತೆಯನ್ನು ಕಾಯ್ದುಕೊಳ್ಳಬಹುದಾಗಿದೆ. ವಿವಿಧ ರೋಗಗಳಿಗೆ ರಾಮಾಬಾಣ ಯೋಗವೇ ಯೋಗ ಎಂದು ಅವರು ಹೇಳಿದರು. ಗಗನ್ ಕ್ಲಿನಿಕ್ ನ ವೈದ್ಯರಾದ ಪಾರ್ವತಿ…
ಲೇಖಕ: admin
ಸುಂಟಿಕೊಪ್ಪ ಜೂ.24 NEWS DESK : ಯುವ ಪೀಳಿಗೆ ದುಶ್ಚಟಗಳಿಗೆ ಸಿಲುಕಿ ತಮ್ಮ ಬದುಕನ್ನು ವಿನಾಶಗೊಳಿಸಿಕೊಳ್ಳುತ್ತಿರುವುದು ಅಘಾತಕಾರಿ ಸಂಗತಿ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಅನಂತ್ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸುಂಟಿಕೊಪ್ಪದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿಗಳಲ್ಲಿ ಜಾಗೃತಿ ಹಾಗೂ ಮಾದಕ ವಸ್ತು ವಿರೋಧಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಯುವ ಪೀಳಿಗೆಯು ಮಾದಕ ದ್ರವ್ಯ, ಧೂಮಪಾನ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ದಾಸರಾಗಿ ಬಲಿಯಾಗುತ್ತಿರುವುದು ಪೋಷಕರಿಗೂ ಸಮಾಜಕ್ಕೂ ಆತಂಕಕಾರಿ ವಿಚಾರವಾಗಿದೆ. ಇದನ್ನು ತಡೆಯಲು ಮತ್ತು ಅವುಗಳಿಂದ ಆರೋಗ್ಯ ಹಾಗೂ ಭವಿಷ್ಯದ ಮೇಲಾಗುವ ಭೀಕರ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮನವರಿಕೆ ಮಾಡಿಕೊಡಲಾಯಿತು. ಮಾದಕ ವಸ್ತುಗಳ ಬಳಕೆಯ ವಿರುದ್ಧ ಧ್ವನಿ ಎತ್ತುಬೇಕು ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಂದ ದೂರವಿರಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ದೇಶಕ್ಕೆ ಮತ್ತು ಪೋಷಕರಿಗೆ ಕೀರ್ತಿ ತರುವ ಮೂಲಕ ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳುಬೇಕೆಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಅವರ…
ಮಡಿಕೇರಿ ಜೂ.24 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ಹೆಸರಾಂತ ನಾಣ್ಯ ಸಂಗ್ರಹಕಾರ ಪಿ.ಕೆ. ಕೇಶವಮೂರ್ತಿ ಅವರಿಂದ 177ನೇ ನಾಣ್ಯ ಮತ್ತು ನೋಟುಗಳ ಪ್ರದರ್ಶನ ಆಯೋಜಿತವಾಗಿತ್ತು. ಕೊಡಗು ವಿದ್ಯಾಲಯದ ಗ್ರಂಥಾಲಯದಲ್ಲಿ ಖ್ಯಾತ ನಾಣ್ಯಶಾಸ್ತ್ರಜ್ಞ ಹಾಗೂ ಅಂಚೆಚೀಟಿ ಸಂಗ್ರಹಕಾರರಾದ ಪಿ.ಕೆ. ಕೇಶವಮೂರ್ತಿ ತಮ್ಮ 177ನೇ ನಾಣ್ಯ ಮತ್ತು ನೋಟುಗಳ ಪ್ರದರ್ಶನವನ್ನು ಆಯೋಜಿಸಿದ್ದರು. 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಪರೂಪದ ಹಾಗೂ ಐತಿಹಾಸಿಕ ಮಹತ್ವವುಳ್ಳ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳನ್ನು ವೀಕ್ಷಿಸಿದರು. ವಿವಿಧ ಕಾಲಘಟ್ಟಗಳ ಇತಿಹಾಸ, ಸಂಸ್ಕೃತಿ ಹಾಗೂ ಆರ್ಥಿಕ ಬೆಳವಣಿಗೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಪ್ರದಶ೯ನ ನೆರವಾಯಿತು. ಹಳೆಯ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಈ ಪ್ರದರ್ಶನದ ಮುಖ್ಯ ಉದ್ದೇಶವಾಗಿತ್ತು. ಸಂಗ್ರಹವನ್ನು ವೀಕ್ಷಿಸಿದ ವಿದ್ಯಾರ್ಥಿಗಳು ಸ್ಫೂರ್ತಿ ಹೊಂದಿ, ತಮ್ಮ ಅಧ್ಯಯನಕ್ಕೆ ಪೂರಕವಾದ ಅಮೂಲ್ಯ ಮಾಹಿತಿಯನ್ನು ಪಡೆದುಕೊಂಡರು. ಡಾ. ಅಂಜಲಿ ಬೋಪಯ್ಯ…
ಮಡಿಕೇರಿ ಜೂ.24 NEWS DESK : ಅತ್ಯುತ್ತಮ ಸಾಮಾಜಿಕ ಸೇವಾ ಕಾಯ೯ಗಳಿಗಾಗಿ ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಯುವ ರೋಟರಿ ಜಿಲ್ಲಾ ಮಟ್ಟದ ಡೈಮಂಡ್ ಪ್ಲಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮೈಸೂರಿನ ಮೈಸೂರು ಯೂನಿಯನ್ ಸಭಾಂಗಣದಲ್ಲಿ ರೋಟರಿ ಜಿಲ್ಲೆ 3181 ನ ವಾಷಿ೯ಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರೋಟರಿಯ ವಿವಿಧ ಜಿಲ್ಲಾ ಯೋಜನೆಗಳ ಅತ್ಯುತ್ತಮ ಕಾಯ೯ನಿವ೯ಹಣೆಗಾಗಿ ಮಡಿಕೇರಿಯ ಮಿಸ್ಟಿ ಹಿಲ್ಸ್ ಸಂಸ್ಥೆಗೆ ಡೈಮಂಡ್ ಪ್ಲಸ್ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ ಪ್ರಶಸ್ತಿಯನ್ನು ರೋಟರಿ ಜಿಲ್ಲಾ ರಾಜ್ಯಪಾಲ ಪಿ.ಕೆ. ರಾಮಕೖಷ್ಣ ಅವರಿಂದ ಪಡೆದುಕೊಂಡರು. ರೋಟರಿಯ ಮುಂದಿನ ಸಾಲಿನ ಗವನ೯ರ್ ಸತೀಶ್ ಬೋಳಾರ್, ನಿಯೋಜಿತ ಗವನ೯ರ್ ಯಶಸ್ವಿನಿ ಸೋಮಶೇಖರ್, ಪ್ರಶಸ್ತಿ ಸಮಿತಿ ಪ್ರಮುಖರಾದ ವಿಕ್ರಂದತ್ತ, ಅರವಿಂದ್ ಭಟ್, ರಿತೇಶ್ ಭಾಳಿಗ, ಉಮೇಶ್ ಹಾಜರಿದ್ದರು. ರೋಟರಿ ಮಿಸ್ಟಿ ಹಿಲ್ಸ್ ನ ನಿದೇ೯ಶಕರು ಪ್ರಶಸ್ತಿ ಸ್ವೀಕಾರ ಸಂದಭ೯ ಇದ್ದರು.
ಮಡಿಕೇರಿ ಜೂ.24 NEWS DESK : ಲವ್ ಜಿಹಾದ್ ಮತ್ತು ಮತಾಂತರ ಪ್ರಕರಣಗಳ ವಿರುದ್ಧ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಜೂ.30ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಜನ ಜಾಗೃತಿ ಜನಾಂದೋಲನಕ್ಕೆ ಕೊಡಗು ಹಿಂದೂ ಮಲೆಯಾಳಿ ಸಮಾಜ ಸಂಪೂರ್ಣ ಬೆಂಬಲ ಸೂಚಿಸಲಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ.ವಿಜಯನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೂ ವಿವಾಹಿತ ಮಹಿಳೆ ಹಾಗೂ ಆಕೆಯ ಮಗನನ್ನು ಬಲವಂತವಾಗಿ ಕೇರಳಕ್ಕೆ ಕರೆದೊಯ್ದು ಮತಾಂತರ ಮಾಡಿದ ಪ್ರಕರಣ ನಡೆದಿದೆ. ಇದನ್ನು ಹಿಂದೂ ಮಲೆಯಾಳಿ ಸಮಾಜ ತೀವ್ರವಾಗಿ ಖಂಡಿಸುತ್ತದೆ. ಅಪ್ರಾಪ್ತ ಬಾಲಕನಿಗೆ ಕಾನೂನು ಬಾಹಿರವಾಗಿ ಸುನ್ನತ್ ಮಾಡಿರುವ ಕ್ರಮ ಹಿಂಸಾತ್ಮಕವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು. ಘಟನೆ ನಡೆದ ಸ್ಥಳವನ್ನು ಪೊಲೀಸರು ಮಹಜರು ನಡೆಸಬೇಕು ಎಂದು ಆಗ್ರಹಿಸಿದರು. ಜೂ.30ರಂದು ನಡೆಯುವ ಹಿಂದೂ ಜನ ಜಾಗೃತಿ ಸಮಾವೇಶಕ್ಕೆ ಬೆಂಬಲ ನೀಡಲಿದ್ದು, ಎಲ್ಲಾ ಮಲೆಯಾಳಿ ಸಮಾಜ ಬಂಧುಗಳು ಸಮಾವೇಶದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭಟನೆ ದಾಖಲಿಸಬೇಕು ಎಂದು ಕರೆ ನೀಡಿದರು.…
ಮಡಿಕೇರಿ ಜೂ.24 NEWS DESK : ಪುನರ್ ರಚನೆಯಾದ ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ, ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶವನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಾಗಿ ವಿಭಜಿಸಿ, ಪ್ರತಿ ಕ್ಷೇತ್ರದ ಹೆಸರು, ಕ್ಷೇತ್ರದ ವ್ಯಾಪ್ತಿ ಹಾಗೂ ಆ ಕ್ಷೇತ್ರಕ್ಕೆ ಹಂಚಿಕೆ ಮಾಡಲ್ಪಟ್ಟ ಸದಸ್ಯ ಸ್ಥಾನಗಳ ಸಂಖ್ಯೆಯನ್ನು ನಿಗದಿಪಡಿಸಿ ಕರಡು ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಹೊರಡಿಸಿದ್ದಾರೆ. ಕರಡು ಅಧಿಸೂಚನೆಯಿಂದ ಭಾದಿತರಾಗಬಹುದಾದ ಸಾರ್ವಜನಿಕರು, ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಯ ದಿನಾಂಕದಿಂದ 7 (ಏಳು) ದಿನಗಳ ಒಳಗಾಗಿ ಅಂದರೆ ದಿನಾಂಕ 23-06-2026 ರಿಂದ ದಿನಾಂಕ 30-06-2026ರ ಸಂಜೆ 5 ಗಂಟೆಯೊಳಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಜಿಲ್ಲಾಧಿಕಾರಿಯವರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಅಂಚೆಯ ಮೂಲಕ ಸಲ್ಲಿಸಿದಾಗಲೂ, ಈ ಕಚೇರಿಯಿಂದ ನಮೂದಿಸಿದ ದಿನಾಂಕದೊಳಗೆ ಸಲ್ಲಿಸಬೇಕು. ನಂತರ ಸ್ವೀಕೃತವಾಗುವ ಆಕ್ಷೇಪಣೆ ಪರಿಗಣಿಸಲಾಗುವುದಿಲ್ಲ ಹಾಗೂ ಅಂಚೆ ಇಲಾಖೆಯ ವಿಳಂಭಕ್ಕೆ ಜಿಲ್ಲಾಡಳಿತ/ ಜಿಲ್ಲಾಧಿಕಾರಿ ಕಚೇರಿ ಜವಾಬ್ದಾರರಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.…
ಮಡಿಕೇರಿ ಜೂ.24 NEWS DESK : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ವಿಶೇಷ ಕೋಪ್ಟಾ ಕಾರ್ಯಾಚರಣೆ ಹಮ್ಮಿಕೊಳ್ಳಲಾಗುತ್ತದೆ. ಜೊತೆಗೆ ಕೋಪ್ಟಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮತ್ತಷ್ಟು ಕಾರ್ಯಕ್ರಮ ರೂಪಿಸುವಂತೆ ನಿರ್ದೇಶನ ನೀಡಿದರು. ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ಶಿಬಿರವನ್ನು ಪ್ರತೀ ತಿಂಗಳು ಏರ್ಪಡಿಸುವಂತಾಗಬೇಕು. ಧೂಮಪಾನ ಮಾಡುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಈ ಬಗ್ಗೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಶೈಕ್ಷಣಿಕ ವಾತಾವರಣ ನಿರ್ಮಿಸುವಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. ಶಾಲಾ-ಕಾಲೇಜುಗಳಲ್ಲಿ ರ್ಯಾಲಿ, ಜಾಥಾ…
ಸಿದ್ದಾಪುರ ಜೂ.24 NEWS DESK : ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿಯ ಅಂಗವಾಗಿ ಕೊಡಗು ಎಸ್.ಎನ್.ಡಿ.ಪಿ ಯೂನಿಯನ್ ವತಿಯಿಂದ ಆಯೋಜಿಸುವ ಕಾರ್ಯಕ್ರಮದ ಕುರಿತ ಪೂರ್ವಭಾವಿ ಸಭೆ ನಡೆಯಿತು. ಸಿದ್ದಾಪುರದ ಎಸ್.ಎನ್ ಡಿ.ಪಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ವಿ.ಕೆ.ಲೊಕೇಶ್, ಆಧ್ಯಾತ್ಮಿಕ ಚಿಂತಕ, ಸಮಾಜ ಸುಧಾರಕ, ತತ್ವಜ್ಞಾನಿ ಬ್ರಹ್ಮಶ್ರೀ ನಾರಾಯಣ ಗುರುಗಳು ತುಳಿತಕ್ಕೊಳಗಾದ ಸಮಾಜದ ಏಳಿಗೆಗೆ ಶ್ರಮಿಸಿದ್ದರು. ಸಂಘಟನೆ, ವಿದ್ಯೆ ಆದ್ಯತೆ ನೀಡಿ, ಬಡವರ ಏಳಿಗೆಗೆ ಶ್ರಮಿಸಿದ್ದರು. ಪ್ರತಿ ವರ್ಷವೂ ಕೊಡಗು ಎಸ್.ಎನ್.ಡಿ.ಪಿ ಯೂನಿಯನ್ ವತಿಯಿಂದ ಅದ್ಧೂರಿಯಿಂದ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸುತ್ತಿದ್ದು, ಈ ವರ್ಷ ಮತ್ತಷ್ಟು ವಿಜ್ರಂಭಣೆಯಿಂದ ಜಯಂತಿ ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಹಿಂದೂ ಮಲಯಾಳಿ ಜನರಿದ್ದು, ಆ.28 ರಂದು ಸಿದ್ದಾಪುರಲ್ಲಿ ಬೃಹತ್ ಮೆರವಣಿಗೆಯೊಂದಿಗೆ ಗುರು ಜಯಂತಿ ಆಚರಿಸಲಾಗುವುದು ಎಂದರು. ಇದೇ ಸಂದರ್ಭ ಜಯಂತಿ ಆಚರಣಾ ಸಮಿತಿಗೆ ಅಧ್ಯಕ್ಷರಾಗಿ ಹರಿದಾಸ್, ಕಾರ್ಯದರ್ಶಿಯಾಗಿ ರೆಜಿತ್ ಕುಮಾರ್ ಆಯ್ಕೆ ಮಾಡಲಾಯಿತು. ಈ ವೇಳೆ…
ವಿರಾಜಪೇಟೆ ಜೂ.24 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸುವ ಸಲುವಾಗಿ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ರಚನೆ ಮಾಡಲು ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆಗಾಗಿ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ [ಇವಿಎಂ] ಮೂಲಕ ತಮ್ಮ ಮತವನ್ನು ಚಲಾಯಿಸಿದರು. ಈ ಸಂದರ್ಭದಲ್ಲಿ ಚುನಾವಣೆಯ ಮತಗಟ್ಟೆ ಅಧಿಕಾರಿಯಾಗಿ ಮುಖ್ಯ ಶಿಕ್ಷಕಿ ಪಿ.ಯು.ಪಾರ್ವತಿ, ಸಹ ಅಧಿಕಾರಿಯಾಗಿ ಬಿ.ಪಿ.ಉಷಾ ಹಾಗೂ ಸಿ ಲೀನಾ ದೇವಯ್ಯ ಕಾರ್ಯನಿರ್ವಹಿಸಿದ್ದರು. ಶಾಲಾ ಸಂಸತ್ತು ಚುನಾವಣೆಯಲ್ಲಿ ಶಾಲಾ ನಾಯಕನಾಗಿ ಬೋವ್ವೇರಿಯಂಡ ಹನ್ಸಿಕ ಪೊನ್ನಪ್ಪ, ಉಪ ನಾಯಕಿಯಾಗಿ ಪಟ್ಟಡ ಬಿ.ದೇಚಮ್ಮ ಕ್ರೀಡಾ ನಾಯಕಿ ಕರ್ನಂಡ ಎಸ್.ಕೃತಿಕಾ ಅಕ್ಕಮ್ಮಾ, ಉಪ ನಾಯಕಿಯಾಗಿ ಕರ್ನಂಡ ಎಸ್.ಶತಕ ಕಾವೇರಮ್ಮ, ಸಾಂಸ್ಕೃತಿಕ ನಾಯಕಿಯಾಗಿ ಕುಲ್ಲಚಂಡ ಎಸ್.ಭೂಮಿಕಾ ಬೋಜಮ್ಮ, ಉಪ ನಾಯಕಿಯಾಗಿ ಚೋಕಂಡ ದಿತಿ ದೇಚಮ್ಮ, ಆರೋಗ್ಯ ನಾಯಕಿಯಾಗಿ ಐ.ಎಂ.ಅಮಾನ ಮನ್ನ, ಉಪ ಆರೋಗ್ಯ ನಾಯಕಿಯಾಗಿ ಕಾಳಚಂಡ ಎಂ.ದೇಚಮ್ಮ, ಶಿಸ್ತಿನ ನಾಯಕಿಯಾಗಿ ಸನಾ ಕೆ.ಎಸ್, ಉಪ ಶಿಸ್ತಿನ ನಾಯಕಿಯಾಗಿ ಅಜಾನ್ ಎಂ.ಎ,…
ಮಡಿಕೇರಿ NEWS DESK ಜೂ.23 : ಕೊಡಗು ಜಿಲ್ಲೆಯ ಕೃಷಿಕರ ಬದುಕಿಗೆ ಸಂಕಷ್ಟವನ್ನು ತಂದೊಡ್ಡುತ್ತಿರುವ ಕಾಡಾನೆ ಸೇರಿದಂತೆ ವಿವಿಧ ವನ್ಯಜೀವಿಗಳ ಹಾವಳಿಯನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಭಾರತೀಯ ಕಿಸಾನ್ ಸಂಘದ ರಾಷ್ಟಿçÃಯ ಅಧ್ಯಕ್ಷ ಕೆ.ಸಾಯಿರೆಡ್ಡಿ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿನಲ್ಲಿ ಕಳೆದೊಂದು ವರ್ಷದಲ್ಲಿ 17 ಮತ್ತು ಆರು ವರ್ಷಗಳ ಅವಧಿಯಲ್ಲಿ 78 ಮಂದಿ ಜೀವ ಕಳೆದುಕೊಂಡಿದ್ದಾರೆ. ಸಮಸ್ಯೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದ್ದು, ಸರಕಾರಗಳು ತುರ್ತು ಪರಿಹಾರೋಪಾಯಗಳನ್ನು ರೂಪಿಸಬೇಕು ಎಂದರು. ಸಂಘವು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಕೃಷಿಕರ ಸಂಕಷ್ಟಗಳನ್ನು ತಿಳಿದುಕೊಂಡಿದೆ. ಇದೀಗ ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದು, ಇಲ್ಲಿನ ಮೂಲಭೂತವಾದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದರು. *ಟೌನ್ ಶಿಪ್ಗೆ ತೀವ್ರ ವಿರೋಧ* ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿಯಲ್ಲಿರುವ ಕೃಷಿಕರ ಫಲವತ್ತಾದ ಭೂಮಿಯನ್ನು ಟೌನ್ಶಿಪ್ಗೆ ಬಳಕೆ ಮಾಡುವುದನ್ನು ಭಾರತೀಯ ಕಿಸಾನ್ ಸಂಘ ತೀವ್ರವಾಗಿ ವಿರೋಧಿಸುವುದಾಗಿ ಸ್ಪಷ್ಟಪಡಿಸಿದರು. 2027 ರಲ್ಲಿ…






