ಮಡಿಕೇರಿ NEWS DESK ಸೆ.23 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಸೋಮವಾರಪೇಟೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸೋಮವಾರಪೇಟೆ ಗೌಡ ಸಮಾಜದ ಅಧ್ಯಕ್ಷ ದಂಡಿನ ಉತ್ತಯ್ಯ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ ಉಔWಆಂ (ಗೌಡ) ಎಂದು ನಮೂದಿಸಲು ನಿರ್ಣಯ ಕೈಗೊಂಡಿದ್ದು, ಇದಕ್ಕೆ ಸೋಮವಾರಪೇಟೆ ಗೌಡ ಸಮಾಜದ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ರಾಜ್ಯ ಸರಕಾರ…
ಲೇಖಕ: admin
ಮಡಿಕೇರಿ ಸೆ.23 NEWS DESK : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ‘ಬಹುಭಾಷಾ ಕವಿ ಗೋಷ್ಠಿ’ ಸೆ.25 ರಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಿನ ಪೂರ್ತಿ ನಡೆಯುವ ಮೂಲಕ, ಸಾಹಿತ್ಯ ಪ್ರೇಮಿಗಳಿಗೆ ರಸದೌತಣ ಉಣಬಡಿಸಲಿದೆಯೆಂದು ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷರಾದ ಉಜ್ವಲ್ ರಂಜಿತ್ ತಿಳಿಸಿದ್ದಾರೆ. ಬಹುಭಾಷಾ ಕವಿಗೋಷ್ಠಿಯ ಆರಂಭಕ್ಕೂ ಮುನ್ನ ಅಂದು ಬೆಳಗ್ಗೆ 9 ಗಾಂಧಿ ಮೈದಾನ ರಸ್ತೆಯ ಬಳಿಯಲ್ಲಿರುವ, ಡಿಸಿಸಿ ಬ್ಯಾಂಕ್ ಮುಂಭಾಗದ ‘ಕುವೆಂಪು ಪುತ್ತಳಿ’ಗೆ ಪುಷ್ಪನಮನ ಸಲ್ಲಿಸುವ ಮೂಲಕ ಕವಿಗೋಷ್ಠಿಯ ಅಧ್ಯಕ್ಷರಾದ ಸಾಹಿತಿ ಸುನೀತಾ ಲೋಕೇಶ್ ಅವರು, ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷರಾದ ಉಜ್ವಲ್ ರಂಜಿತ್ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಸಾಹಿತ್ಯಾಸಕ್ತರ ಸಮ್ಮುಖದಲ್ಲಿ ಚಾಲನೆ ನೀಡಲಿದ್ದಾರೆೆ. ಕಲಾ ಸಂಭ್ರಮ ವೇದಿಕೆಯಲ್ಲಿ ಬಳಿಕ ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳುವ ಬಹುಭಾಷಾ ಕವಿಗೋಷ್ಠಿಯನ್ನು ಕರ್ನಾಟಕ ಒಕ್ಕಲಿಗರ ಸಂಘದ ಕೊಡಗು ಜಿಲ್ಲಾ ನಿರ್ದೇಶಕರು, ಸಮಾಜಸೇವಕರಾದ ಹರಪಳ್ಳಿ ರವೀಂದ್ರ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು…
ವಿರಾಜಪೇಟೆ ಸೆ.23 NEWS DESK : ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಮಾಜಿ ಸೈನಿಕ ಹಾಗೂ ಉದಯೋನ್ಮುಖ ಉದ್ಯಮಿ ಎಂ.ಕೆ.ಸಲಾಂ ಅವರನ್ನು ಸನ್ಮಾನಿಸಲಾಯಿತು. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಎಂ.ಕೆ.ಸಲಾಂ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಲೆಯ ಹಳೆಯ ವಿದ್ಯಾರ್ಥಿ, ಸೈನಿಕ ಎಂ.ಕೆ.ಸಲಾಂ ಅವರು, ತನ್ನ ಯಶಸ್ವಿಗೆ ಮೂಲ ಕಾರಣಕರ್ತರಾದ ತಂದೆ ಅಬ್ದುಲ್ಲಾ ಹಾಗೂ ತಾಯಿ ರುಕೀಯ ಅವರ ಆಶೀರ್ವಾದ ಎಲ್ಲಾ ವಿದ್ಯಾರ್ಥಿಗಳಿಗೂ ಇರಲಿ ಎಂದು ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಾರಂಭಿಸಿ ಒಂದನೇ ತರಗತಿಯಿಂದ 7ನೇ ತರಗತಿಯಲ್ಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರದಂತೆ ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ ಧನ ಸಹಾಯವನ್ನು ಶಾಲೆಗೆ ನೀಡಿದರು. ತನ್ನ ಕೈಯಲ್ಲಿ ಸಾಧ್ಯವಾಗವರೆಗೂ ಇದನ್ನು ಮುಂದುವರಿಸಲಿಕ್ಕೆ ಸಾಧ್ಯವಾಗಲಿ ಎಂದು ಆಶಿಸಿ ಶಾಲೆಯ ಪ್ರತಿಯೊಂದು ಏಳಿಗೆ ಕೆಲಸದಲ್ಲಿ ಕೈ ಜೋಡಿಸುತ್ತೆನೆ ಎಂಬ ಭರವಸೆಯನ್ನು ನೀಡಿದರು. ಬಳಿಕ ಶಾಲೆಯಲ್ಲಿ ಪ್ರಾರಂಭಿಸಿದ ತರಕಾರಿ ಉದ್ಯಾನವನಕ್ಕೆ ಬೇಲಿ ಹಾಕಲು ಬೇಕಾದ…
ವಿರಾಜಪೇಟೆ ಸೆ.23 NEWS DESK : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯದ ಹಣ ಬಿಡುಗಡೆ ಮಾಡುವುದು ಸೇರಿದಂತೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎ.ಸಿ.ಸಾಬು ಅವರ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೊಪ್ಪಳ ನಗರದಲ್ಲಿ ನಡೆದ ಐದನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಕಟ್ಟಡ ನಿರ್ಮಾಣ ವಲಯದ ಸ್ಥಿತಿಗತಿ, ಕಾರ್ಮಿಕರ ಪರಿಸ್ಥಿತಿ, ಅಲ್ಲಿ ಸಂಭವಿಸುವ ಅಪಘಾತ ಸಾವು ನೋವು ಕಾರ್ಮಿಕರು ಅನುಭವಿಸುವ ಸಂಕಟಗಳು ಸರಕಾರದ ನೀತಿಗಳು ಅವುಗಳ ಪರಿಣಾಮಗಳ ಬಗ್ಗೆ ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಲ್ಲಿ ಏಕಕಾಲದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ರಾಜ್ಯ ವ್ಯಾಪ್ತಿ ಪ್ರತಿಭಟನೆ ನಡೆಸುವಂತೆ ತೀರ್ಮಾನವಾದ ಹಿನ್ನಲೆಯಲ್ಲಿ ವಿರಾಜಪೇಟೆಯಲ್ಲಿ ಕಾರ್ಮಿಕ ಅಧಿಕಾರಿಗಳಿಗೆ ವಿವಿಧ ಬೇಡಿಕೆಗಳ ಮನವಿಯನ್ನು ಕಾರ್ಮಿಕ ಸಂಘಟನೆಯವರು ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಎ.ಸಿ ಸಾಬು ಅವರು, ಕಟ್ಟಡ ಕಾರ್ಮಿಕರಿಗೆ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನು ಬದ್ಧವಾಗಿ ಇದುವರೆಗೂ ಸಿಗುತ್ತಿದ್ದ ಸೌಲಭ್ಯಗಳು ಸಿಗುತ್ತಿಲ್ಲ…
ಮಡಿಕೇರಿ NEWS DESK ಸೆ.23 : ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸುವಂತೆ ಮರಗೋಡು ಗೌಡ ಸಮಾಜದ ಅಧ್ಯಕ್ಷ ಕಟ್ಟೆಮನೆ ಜನಾರ್ಧನ್ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ಆರಂಭಿಸಲಿದ್ದು, ಎರಡೂ ಪ್ರಕ್ರಿಯೆಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ ಗೌಡ, ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೋರಿದ್ದಾರೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಉಪಜಾತಿ ಎನ್ನುವ ಕಾಲಂನಲ್ಲಿ…
ಮಡಿಕೇರಿ ಸೆ.23 NEWS DESK : ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಆಸ್ಪತ್ರೆಯ ಸ್ಥಳವನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಪರಿಶೀಲಿಸಿದರು. ನಂತರ ಸಚಿವರು ಹಾಗೂ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಶಾಸಕರು ಸಚಿವರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಿ, ಆಸ್ಪತ್ರೆಯ ಶೀಘ್ರ ಕಾಮಗಾರಿಗೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು. ಈ ಸಂದರ್ಭ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಸತೀಶ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಯತೀರಾಜ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಹಶೀಲ್ದಾರ್ ಮೋಹನ್, ಕಂದಾಯ ಅಧಿಕಾರಿ ಸುದಿಂದ್ರ, ಡಿಸಿಸಿ ಸದಸ್ಯರು ಮುಕಟ್ಟೀರ ಸಂದೀಪ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಲಾಲಾ ಅಪ್ಪಣ್ಣ, ಹಿರಿಯರಾದ ಮುಕಳೇರ ಕುಶಾಲಪ್ಪ, ಜಿಮಿ ಅಣ್ಣಯ್ಯ, ಎರ್ಮು ಹಾಜಿ, ಚೆಕ್ಕೇರ ವಾಸು ಕುಟ್ಟಪ್ಪ, ಸುಧೀರ್, ಪೆಮ್ಮಂಡ ಪೊನ್ನಪ್ಪ, ಅಜ್ಜಿಕುಟ್ಟಿರ ಗಿರೀಶ್, ಪ್ರಶಾಂತ್, ದಿಲ್ಲು, ಹುದಿಕೇರಿ ವಲಯ ಅಧ್ಯಕ್ಷರು ಸೂರಜ್, ಭವಿನ್ ಕುಶಾಲಪ್ಪ,…
ಮಡಿಕೇರಿ ಸೆ.23 NEWS DESK : ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ ನೀಡಿದರು. ಕಳೆದ ಅಧಿವೇಶನದಲ್ಲಿ ವಿರಾಜಪೇಟೆ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಅನುದಾನವನ್ನು ಒದಗಿಸಿತ್ತು. ಆ ನಿಟ್ಟಿನಲ್ಲಿ ಈಗಾಗಲೇ ಮೇಲು ದರ್ಜೆಗೇರಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶಾಸಕರು ಹಾಗೂ ಸಚಿವರು ಭೇಟಿ ಸಂದರ್ಭದಲ್ಲಿ ಪರಿಶೀಲಿಸಿದರು. ಆಸ್ಪತ್ರೆ ಬಗೆಗಿನ ಎಲ್ಲಾ ಮಾಹಿತಿಯನ್ನು ಶಾಸಕರು, ಸಚಿವರಿಗೆ ಒದಗಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಸತೀಶ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಯತೀರಾಜ್, ಬಗರ್ ಹುಕುಂ ತಾಲೂಕು ಅಧ್ಯಕ್ಷರು ಸಲಾಂ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಸದಸ್ಯರು ಮತೀನ್, ಪೃಥ್ವಿನಾಥ್, ರಜಿನಿಕಾಂತ್, ಹಮೀದ್, ಸಾಯಿ ಸಮಿತಿ ಅಧ್ಯಕ್ಷರು ಜಲೀಲ್, ಅರೋಗ್ಯ ರಕ್ಷಾ ಸಮಿತಿ ಸದಸ್ಯರು ಕುಂಡಚೀರ ಮಂಜು ದೇವಯ್ಯ,ಕಿಶೋರ್,ಸಿಬಾ ಪೃಥ್ವಿನಾಥ್, ಅನಿತಾ, ಮಂಡೆಟೀರ ಅನಿಲ್, ಶಬೀರ್, ವಿರಾಜಪೇಟೆ ವಿಧಾನ ಸಭಾ ಕ್ಷೆತ್ರದ ಅಧ್ಯಕ್ಷರು…
ಮಡಿಕೇರಿ NEWS DESK ಸೆ.23 : ಕೊಡಗು ಜಿಲ್ಲೆಯ ಅರೆಭಾಷೆ ಗೌಡರು ಜಾತಿ ಜನಗಣತಿ ಸಂದರ್ಭ ಗೌಡ ಎಂದು ನಮೂದಿಸುವಂತೆ ಮಡಿಕೇರಿ GOWDA (ಗೌಡ) ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರು ಪ್ರಸ್ತುತ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಗಣತಿಯಲ್ಲಿ ಹಾಗೂ ಮುಂದೆ ನಡೆಯಲಿರುವ ಕೇಂದ್ರ ಸರ್ಕಾರದ ಜಾತಿ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃ ಭಾಷೆ ಅರೆಭಾಷೆ ಎಂದು ನಮೂದಿಸಲು ಮನವಿ ಮಾಡಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿರುವುದು ನಿಜ. ಆದರೆ ಅರೆಭಾಷೆ ಗೌಡರ ಶೈಕ್ಷಣಿಕ ಮತ್ತು ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ಗೌಡ ಎಂದೇ ನಮೂದಾಗಿರುವುದರಿಂದ ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು…
ಮಡಿಕೇರಿ ಸೆ.23 NEWS DESK : ಆರು ದಶಕಗಳ ಕಾಲ ಉಳ್ಳಾಲವನ್ನು ಕೇಂದ್ರೀಕರಿಸಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಗೆ ನಾಯಕತ್ವ ನೀಡಿದ್ದ ಅಧ್ಯಾತ್ಮ ಗುರು ತಾಜುಲ್ ಉಲಮಾ ಸೈಯದ್ ಅಬ್ದುಲ್ ರಹ್ಮಾನ್ ಅಲ್ ಬುಖಾರಿ ಉಳ್ಳಾಳ್ ತಙಳ್ ಅವರ 12ನೇ ಉರೂಸ್ ಕಾರ್ಯಕ್ರಮ ಸೆ.23 ರಿಂದ 25 ವರೆಗೆ ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂ ದರ್ಗಾ ಶರೀಫಿನಲ್ಲಿ ಹಲವಾರು ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಹಲವಾರು ಉಲಮಾ, ಉಮರಾ ನೇತಾರರು ಭಾಗವಹಿಸುವ ಈ ಉರೂಸ್ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಕೊಡಗು ಜಿಲ್ಲಾ ಮದನೀಸ್ ಅಸೋಸಿಯೇಷನ್ ಕರೆ ನೀಡಿದೆ.
ನಾಪೋಕ್ಲು ಸೆ.23 NEWS DESK : ಬಲಮುರಿ ಶ್ರೀ ಮಹಾದೇವ ಸ್ಪೋರ್ಟ್ಸ್ ಕ್ಲಬ್ನ 73ನೇ ವಾರ್ಷಿಕ ಮಹಾಸಭೆಯು ಕ್ಲಬ್ ನ ಕಚೇರಿಯಲ್ಲಿ ನಡೆಯಿತು. ಕ್ಲಬ್ ನ ಅಧ್ಯಕ್ಷರಾದ ತೊತ್ತಿಯಂಡ ಬನ್ಸಿ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ಲಬ್ ನ ವತಿಯಿಂದ ಆಯೋಜಿಸಲ್ಪಟ್ಟ ಹಾಗೂ ಇತರಡೆ ನಡೆಸಿದ ಕಾರ್ಯಕ್ರಮಗಳು, ಕ್ರೀಡಾಕೂಟಗಳ ಬಗ್ಗೆ ಹಾಗೂ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳು ನಡೆದು ಅನುಮೋದನೆಗೊಂಡವು. ಮಹಾದೇವ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತರ ಕ್ರೀಡಾಕೂಟಗಳಲ್ಲಿ ಜಯಶೀಲರಾದ ತಂಡಗಳನ್ನು ಹಾಗೂ ವೈಯಕ್ತಿಕ ವಿಜೇತರನ್ನು ಅಭಿನಂದಿಸಲಾಯಿತು. ಬರುವ ನವೆಂಬರ್ ತಿಂಗಳಿನಲ್ಲಿ ಕ್ಲಬ್ ವತಿಯಿಂದ ಜಿಲ್ಲಾಮಟ್ಟದಲ್ಲಿ ಮಹಿಳೆಯರಿಗೆ ಥ್ರೋಬಾಲ್, ಪುರುಷರಿಗೆ ವಾಲಿಬಾಲ್ ಹಾಗೂ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಏರ್ಪಡಿಸುಲು ತೀರ್ಮಾನಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಕರಾದ ಚೈಯ್ಯಂಡ ರಘು ತಿಮ್ಮಯ್ಯ ಹಾಗೂ ಹಿರಿಯರಾದ ಬೊಳ್ಳಚೆಟ್ಟಿರ ಚೆಟ್ಟಿಚ್ಚ ಅವರು ಇದರ ಬಗ್ಗೆ ಸೂಕ್ತ ಮಾಹಿತಿ ಸಲಹೆ ಸೂಚನೆಯನ್ನು ನೀಡಿ ಮತ್ತೊಂದು ಸಭೆ ನಡೆಸಿ ಕ್ರೀಡಾಕೂಟ ನಡೆಸುವ ದಿನಾಂಕ ನಿಗದಿಪಡಿಸುವುದಾಗಿ ತಿಳಿಸಿದರು. ಈ…






