ಮಡಿಕೇರಿ ಸೆ.23 NEWS DESK : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ಗೌಳಿ ಬೀದಿಯಲ್ಲಿ ಚಾಲನೆ ನೀಡಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಆರಂಭವಾಗಿದ್ದು, ಆ ನಿಟ್ಟಿನಲ್ಲಿ ಸಮೀಕ್ಷೆಗೆ ಚಾಲನೆ ನೀಡಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ತಹಶೀಲ್ದಾರ್ ಶ್ರೀಧರ, ಸಮೀಕ್ಷೆದಾರರು ಇತರರು ಇದ್ದರು.ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಅರ್ಹ ಹಿಂದುಳಿದ ವರ್ಗಗಳನ್ನು ನಿಖರವಾಗಿ ಗುರುತಿಸಿ, ಸರ್ಕಾರದ ಸೌಲಭ್ಯವನ್ನು ಸಮಪರ್ಕವಾಗಿ ತಲುಪಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಆ…
ಲೇಖಕ: admin
ಮಡಿಕೇರಿ ಸೆ.23 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಿಗೆ ದಸರಾದ ಎರಡನೇ ದಿನವಾದ ಇಂದು ಪಂಚ ಪುಷ್ಪ ಅಲಂಕಾರದಲ್ಲಿ ಗಮನ ಸೆಳೆಯುತ್ತಿದೆ. ನೂರಾರು ಭಕ್ತರು ಪೂಜೆ ಸಲ್ಲಿಸಿ ವಿಶೇಷ ಅಲಂಕಾರವನ್ನು ವೀಕ್ಷಿಸಿದರು. ನವರಾತ್ರಿಯ ಪ್ರಯುಕ್ತ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಪ್ರತಿದಿನ ವಿಶೇಷ ಅಲಂಕಾರ ಸೇವೆ ಮತ್ತು ವಿಶೇಷ ಪೂಜೆ ನಡೆಯುತ್ತಿದೆ. ಸೆ.24 ರಂದು ವಿಳ್ಯೆದೆಲೆ ಅಲಂಕಾರ ನಡೆಯಲಿದೆ.
Grand Opening Invitation! >>> Dear Food Lovers, We are thrilled to welcome you to the Grand Opening of Bandhiraaa, a one-of-its-kind Kodava cuisine restaurant in the heart of Madikeri! Janatha Bazar Building, Opposite Madikeri Fort Tuesday, 23rd September 2025 ..Come experience the authentic taste of Kodava tradition served with love and warmth. Let’s celebrate flavors, culture, and togetherness at Bandhiraaa, where every dish tells a story of Kodagu! Join us and be part of this delicious beginning!
ಮಡಿಕೇರಿ ಸೆ.23 NEWS DESK : ದಿನನಿತ್ಯ ಆಯುರ್ವೇದ ಆಚರಣೆ ಮಾಡುವುದು ನಮ್ಮೆಲ್ಲರ ಆಶಯ ಎಂದು ಕೊಡಗು ಜಿಲ್ಲಾ ನೀಮಾ ಅಧ್ಯಕ್ಷರಾದ ಡಾ.ರಾಜಾರಾಮ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ‘ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಆಯುರ್ವೇದವನ್ನು ದಿನನಿತ್ಯ ಪಾಲಿಸುವಂತಾಗಬೇಕು ಮತ್ತು ಸಮಯಕ್ಕೆ ಸರಿಯಾಗಿ ಆಹಾರವನ್ನು ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆ ನಿಟ್ಟಿನಲ್ಲಿ ಯೋಗ ಮತ್ತು ಪ್ರಾಣಾಯಾಮ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳ ಬಹುದಾಗಿದೆ ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಜಿ. ಮಾತನಾಡಿ ಇತ್ತೀಚಿನ ದಿನಗಳಲ್ಲಿ ಆಯುರ್ವೇದಕ್ಕೆ ಮಾನ್ಯತೆ ದೊರೆತಿರುವುದು ವಿಶೇಷವಾಗಿದೆ. ನಮ್ಮ ಶರೀರ ಮತ್ತು ಮನಸ್ಸು ಒಂದೇ ಸಮತೋಲನವಾಗಿದ್ದರೆ ಆರೋಗ್ಯಕರವಾಗಿರಲು ಸಾಧ್ಯ ಎಂದು ಹೇಳಿದರು. ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂದರು. ತಾಲೂಕು ಆಸ್ಪತ್ರೆಗಳಲ್ಲಿ 8 ಸರ್ಕಾರಿ…
ಕುಶಾಲನಗರ, ಸೆ.23 NEWS DESK : ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬಾಲಕರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿರಂಗಾಲ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಬಾಲಕರು ಮತ್ತು ಬಾಲಕಿಯರ ಖೋ- ಖೋ ಪಂದ್ಯಾವಳಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಕೂಡ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ತಿಳಿಸಿದ್ದಾರೆ. ಎಲ್ಲಾ ಪಂದ್ಯಾವಳಿಗಳಲ್ಲಿ ಈ ತಂಡಗಳು ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಪಂದ್ಯಾವಳಿಗೆ ಆಯ್ಕೆಗೊಂಡಿರುವುದು ಕಾಲೇಜಿಗೆ ಕೀರ್ತಿ ತಂದಿದೆ ಎಂದು ತಿಳಿಸಿದ್ದಾರೆ. ಈ ಪಂದ್ಯಾವಳಿಗಳ ತಂಡದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದ ಉಪನ್ಯಾಸಕರಾದ ಎಂ.ಟಿ.ರಮೇಶ್ ಮತ್ತು ನಂದಿನಿ ಅವರಿಗೆ ಹಾಗೂ ಕ್ರೀಡಾಪಟುಗಳಿಗೆ…
ಮಡಿಕೇರಿ NEWS DESK ಸೆ.22 : ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿರುವ ಕುರಿತು, ಕಾಂಗ್ರೆಸ್ಸಿಗರಲ್ಲೇ ವಿರೋಧ ವ್ಯಕ್ತವಾಗಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ಅವರು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಬಿಜೆಪಿ ಮೂಲಕ ತಂತ್ರಗಾರಿಕೆ ಹೂಡಿದ್ದ ಅಪ್ರು ರವೀಂದ್ರ ಅವರ ಸೇರ್ಪಡೆಯನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದ್ದಾರೆ. ಮೊದಲು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ನಂತರ ಬಿಜೆಪಿಗೆ ಸೇರ್ಪಡೆಯಾಗಿ ಕಾಂಗ್ರೆಸ್ ವಿರುದ್ಧ ರಾಜಕೀಯ ಮಾಡಿದ ವ್ಯಕ್ತಿ ಇಂದು ಪಕ್ಷ ಅಧಿಕಾರದಲ್ಲಿದೆ ಎನ್ನುವ ಕಾರಣಕ್ಕೆ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಸೋಲಿಗೆ ಪ್ರಯತ್ನಿಸಿದವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿರುವ ನಾಯಕರ ನಿಲುವು ಕಾರ್ಯಕರ್ತರ ಭಾವನೆಗೆ ವಿರುದ್ಧವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇಂದು…
ಮಡಿಕೇರಿ ಸೆ.22 : ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ಸಂಭ್ರಮ ಇಂದು ಆರಂಭಗೊಂಡಿತು. ಇತಿಹಾಸ ಪ್ರಸಿದ್ಧ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ನಗರದ ಪಂಪಿನ ಕೆರೆಯ ಬನ್ನಿ ಮಂಟಪದಲ್ಲಿ ಸಾಂಪ್ರದಾಯಿಕವಾಗಿ ವಿಶೇಷ ಪೂಜೆಯನ್ನು ಸಲ್ಲಿಸಿ ಕರಗೋತ್ಸವದ ನಗರ ಸಂಚಾರಕ್ಕೆ ಚಾಲನೆ ನೀಡಲಾಯಿತು. ಹಾಲೇರಿ ರಾಜವಂಶಸ್ಥರ ಆಳ್ವಿಕೆಯ ಕಾಲದಿಂದ ನಡೆದುಕೊಂಡು ಬಂದಿರುವ ಮಡಿಕೇರಿಯ ದಸರಾ ಉತ್ಸವಕ್ಕೆ ಒಂದೂವರೆ ಶತಮಾನದ ಭವ್ಯ ಇತಿಹಾಸವಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ದಸರಾ ಉತ್ಸವದಲ್ಲಿ ಅಗ್ರ ಸ್ಥಾನವನ್ನು ನೀಡಲಾಗಿದೆ. ನವರಾತ್ರಿಯ ವಿಶೇಷವಾಗಿ ಕರಗಗಳ ನಗರ ಪ್ರದಕ್ಷಿಣೆ ನಡೆಯಲಿದೆ. ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ನಗರದ ರಾಜಾಸೀಟು ಬಳಿಯ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಪಿ.ಚಾಮಿ, ಗೌಳಿಬೀದಿಯ ಶ್ರೀಕಂಚಿಕಾಮಾಕ್ಷಿಯಮ್ಮ ದೇವಾಲಯದ ಕರಗವನ್ನು ಪಿ.ಸಿ.ಉಮೇಶ್, ಶ್ರೀದಂಡಿನ ಮಾರಿಯಮ್ಮ ದೇವಾಲಯದ ಕರಗವನ್ನು ಜಿ.ಎ.ಉಮೇಶ್ ಹಾಗೂ ಶ್ರೀಕೋಟೆ ಮಾರಿಯಮ್ಮ ದೇವಾಲಯದ ಕರಗವನ್ನು ಪಿ.ಬಿ.ಅನೀಶ್ ಕುಮಾರ್ ಹೊರುವ ಮೂಲಕ ನಗರ ಪ್ರದಕ್ಷಿಣೆಯನ್ನು ಆರಂಭಿಸಿದರು. ನವರಾತ್ರಿ ಉತ್ಸವದ ಆರಂಭದ…
ಮಡಿಕೇರಿ ಸೆ.22 NEWS DESK : ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ ಸೆ.24 ರಂದು ಜಿಲ್ಲೆಯ ಪ್ರಮುಖ ಪಟ್ಟಣ ಪ್ರದೇಶಗಳಲ್ಲಿ ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಏಕ ಕಾಲಕ್ಕೆ ರಸ್ತೆ ತಡೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟ ರಾಜ್ಯವ್ಯಾಪಿ ನಡೆಯಲಿದೆ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದಷ್ಟೆ ರಸ್ತೆಗಳು ಹದಗೆಟ್ಟಿದೆ ಎಂದರೆ ಅದು ಸಮರ್ಥನೀಯವಲ್ಲ. ಜಿಲ್ಲೆಯಲ್ಲಿ 2018ರಿಂದ ನಿರಂತರವಾಗಿ ಪ್ರತಿ ವರ್ಷ ಅಧಿಕ ಮಳೆಯಾಗುತ್ತಿದೆ. ಹೀಗಿದ್ದೂ ಹಿಂದಿನ ಬಿಜೆಪಿ ಅವಧಿಯಲ್ಲಿ ಆಯಾ ಸಂದರ್ಭಗಳಲ್ಲಿ ದುರಸ್ತಿ ಕಾರ್ಯಗಳೊಂದಿಗೆ ರಸ್ತೆಗಳನ್ನು ವ್ಯವಸ್ಥಿತವಾಗಿ ಇಡುವ ಪ್ರಯತ್ನ ನಡೆಯುತಿತ್ತು. ಆದರೆ, 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿಯವರೆಗು ರಸ್ತೆಗಳ ಕನಿಷ್ಟ ನಿರ್ವಹಣಾ ಕಾರ್ಯವೂ ಇಲ್ಲದೆ, ಬಹುತೇಕ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿರುವುದಾಗಿ ಆರೋಪಿಸಿದರು. *ಮೋದಿ ಕೊಡುಗೆ* ನವರಾತ್ರಿ ಉತ್ಸವದ ಆರಂಭದಲ್ಲೆ ಪ್ರಧಾನಿ ನರೇಂದ್ರ ಮೊದಿ ಅವರು ಬಡವರ್ಗ ಮತ್ತು ಮಧ್ಯಮ ವರ್ಗವನ್ನು ಕೇಂದ್ರೀಕರಿಸಿ ಜಿಎಸ್ಟಿ…
ಮಡಿಕೇರಿ ಸೆ.22 NEWS DESK : ಕೊಡವರು ಕೊಡವ ಧರ್ಮಕ್ಕೆ ಸೇರಿದವರಾಗಿರುವುದರಿಂದ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಂದರ್ಭ ಕೊಡವರು ತಮ್ಮ ಜಾತಿ, ಧರ್ಮವನ್ನು ‘ಕೊಡವ’ ಎಂದೇ ನಮೂದಿಸಬೇಕೆಂದು ಹಿರಿಯ ಕೊಡವ ಅಭಿಮಾನಿಗಳ ಸಂಘದ ಪ್ರಮುಖ ಉಳ್ಳಿಯಡ ಎಂ.ಪೂವಯ್ಯ ಅವರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡವ ಧರ್ಮ’ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಕೊಡವ ಸಮಾಜದಿಂದ ಕರೆಯಲಾಗಿದ್ದ ಸಭೆಯಲ್ಲಿ, ಒಂದು ಗುಂಪಿನ ಕೆಲವರು ವಿನಾಕಾರಣ ಗದ್ದಲವೆಬ್ಬಿಸಿ ಸಭೆಯನ್ನೇ ನಡೆಯದಂತೆ ಮಾಡಿರುವುದು ಖಂಡನೀಯವೆಂದು ತಿಳಿಸಿದರು. ಕೊಡವರು ಮೂಲದಲ್ಲಿ ‘ಕೊಡವ ಧರ್ಮ’ದವರೇ ಆಗಿದ್ದಾರೆ. 15ನೇ ಶತಮಾನದವರೆಗೂ ಇತರೆ ಯಾವುದೇ ಧರ್ಮಗಳ ಚೌಕಟ್ಟಿಗೆ ಒಳಪಡದೆ ತಮ್ಮದೇ ಆದ ಬದುಕಿನ ಪದ್ಧತಿ, ರೀತಿ ರಿವಾಜುಗಳೊಂದಿಗೆ ಬದುಕುತ್ತಿದ್ದರು. 16ನೇ ಶತಮಾನದ ಮಧ್ಯಭಾಗ 1540ರಿಂದ ಇಕ್ಕೇರಿ ರಾಜವಂಶಸ್ಥ ಲಿಂಗಾಯಿತ ರಾಜರು 1834ರವರೆಗೆ ಕೊಡಗನ್ನಾಳಿದರು. ಈ ಹಂತದಲ್ಲಿ ಕೊಡಗಿನ ಕೊಡವರ ಕೊಡವ ಧರ್ಮದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬಂದವು, ನಮ್ಮಲ್ಲಿ ಇಲ್ಲದ ಹಬ್ಬಗಳ ಆಚರಣೆಗಳನ್ನು ಅನುಸರಿಸಲಾರಂಭಿಸಿದರು ಎಂದು…
ಮಡಿಕೇರಿ ಸೆ.22 NEWS DESK : ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಉದ್ಘಾಟಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಪಪ್ಪ, ನಗರಸಭೆ ಸದಸ್ಯರಾದ ಸತೀಶ್ ಎಸ್.ಸಿ., ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ.ಕವಿತಾ ಕೆ.ಆರ್. ಇತರರು ಇದ್ದರು. ಶಾಸಕರಾದ ಡಾ,ಮಂತರ್ ಗೌಡ ಅವರು ಮಾತನಾಡಿ ಸರ್ಕಾರ ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದರು. ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾಲೇಜಿಗೆ ಸೇರುವಂತಾಗಬೇಕು. ಪ್ರಾಧ್ಯಾಪಕರು ಸಹ ಹೆಚ್ಚಿನ ಶ್ರಮವಹಿಸಿ ಪಾಠ ಪ್ರವಚನ ಮಾಡಬೇಕು ಎಂದು ಸಲಹೆ ನೀಡಿದರು. ಸರ್ಕಾರ ಈಗಾಗಲೇ…






