ಗೋಣಿಕೊಪ್ಪ ನ.15 NEWS DESK : ಶಿಕ್ಷಣ ಕ್ಷೇತ್ರದ ಸಾಧನೆಗೆ ಕರುನಾಡ ರತ್ನ ಪ್ರಶಸ್ತಿಯನ್ನು ಹರಿಶ್ಚಂದ್ರಪುರ ಅಂಗನವಾಡಿ ಶಿಕ್ಷಕಿ ಲತಾ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕರ್ನಾಟಕ ಸಾಂಸ್ಕøತಿಕ ಅಕಾಡೆಮಿ, ಈ ಪ್ರಶಸ್ತಿಯನ್ನು ನೀಡುತ್ತಿದೆ. ಬೆಂಗಳೂರಿನ ಕಲಾಗ್ರಾಮ ವೇದಿಕೆಯಲ್ಲಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಲೇಖಕ: admin
ಮಡಿಕೇರಿ ನ.15 NEWS DESK : ವಿದ್ಯಾರ್ಥಿಗಳು ಪ್ರತಿಭೆಯನ್ನು ಸರಿಯಾದ ಸಮಯಕ್ಕೆ ಬಳಸಿಕೊಳ್ಳುವುದು ಒಂದು ಆಶಯವಾಗಿದೆ ಎಂದು ವೈದ್ಯಕೀಯ ಸಮುದಾಯ ಸಂಸ್ಥೆಯ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ವತಿಯಿಂದ ಕಾಲೇಜು ಆವರಣದಲ್ಲಿ ನಡೆದ ಸಾಂಸ್ಕøತಿಕ, ಕ್ರೀಡಾ ಮತ್ತು ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಿ ಎಂದು ಹಾರೈಸಿದರು ಹಾಗೂ ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳುವುದು ಮುಖ್ಯ ಎಂದು ಹೇಳಿದರು. ಮಾದಾಪುರ, ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಸಿ. ಜಿ ಮಂದಪ್ಪ, ಅವರು ಮಾತನಾಡಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವ್ಯಕ್ತಿತ್ವದ ವಿಕಾಸವನ್ನು ಬೆಳೆಸಿಕೊಳ್ಳುವುದು ಮಹತ್ವವಾಗಿದೆ. ಬಡತನ ಎಂಬುದು ಶಿಕ್ಷಣಕ್ಕೆ ಎಂದಿಗೂ ಅಡ್ಡಿಯಾಗಬಾರದು ಹಾಗೂ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ದೇಶಕ್ಕೆ ಕೊಡುಗೆ ನೀಡಿ ಎಂದು ಹೇಳಿದರು. 2025 ನೇ ಸಾಲಿನ ಗೌರಮ್ಮ ದತ್ತಿನಿಧಿ ಪ್ರಶಸ್ತಿ ವಿಜೇತರು…
ಮಡಿಕೇರಿ ನ.15 NEWS DESK : ಸರ್ಕಾರ ಕಾಫಿ ಬೆಳೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ವಿಶ್ವ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ ಸಂಪಾಜೆ, ಕರಿಕೆ, ಪೆರಾಜೆ, ಚೆಂಬು ಭಾಗದಲ್ಲಿಯೂ ಸಹ ಕಾಫಿ ಬೆಳೆಯುವಂತಾಗಬೇಕು ಎಂದು ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್ ಸಲಹೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ಹಾಗೂ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರ ಕಾಫಿ ಉತ್ಪಾದನೆಗೆ ಸಹಾಯಧನ ಕಲ್ಪಿಸುತ್ತಿದೆ. ಜತೆಗೆ ಪ್ರೋತ್ಸಾಹ ನೀಡುತ್ತಿದೆ. ಹಾಗಾಗಿ ಅಡಿಕೆ, ರಬ್ಬರ್, ಗೇರು ಜೊತೆಗೆ ಕಾಫಿ…
ಮಡಿಕೇರಿ NEWS DESK ನ.14 : ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದ ಕುಡಿಯ ಸಮೂಹ ವಾಸವಿರುವ ಎರಡು ಕಾಲೋನಿಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಇಲ್ಲಿನ ನಿವಾಸಿಗಳು ನಗರದ ಪತ್ರಿಕಾ ಭವನದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಬೆಟ್ಟತ್ತೂರು ಗ್ರಾಮದ ಕೊಯಿನಾಲ್ಮಲೆ ಅರಣ್ಯ ಪ್ರದೇಶದ ಕಾಲೋನಿಗಳಿಗೆ ಇಂದಿಗೂ ವಿದ್ಯುತ್ ಸಂಪರ್ಕವಿಲ್ಲ. ಈ ಬಗ್ಗೆ ನೂರಾರು ಬಾರಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದೇವೆ, ಪರಿಹಾರ ಮಾತ್ರ ದೊರಕಿಲ್ಲ. ಕಾಲೋನಿಗಳಿಗೆ ವಿದ್ಯುತ್ ಸೌಲಭ್ಯ ಪಡೆದುಕೊಳ್ಳಲು ‘ಅರಣ್ಯ ಇಲಾಖೆ’ಯೆ ಅಡ್ಡಿಯಾಗಿದೆಯೆಂದು ಅಲ್ಲಿನ ನಿವಾಸಿ ಕೆ.ಎ.ಸೋಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ನೋವನ್ನು ತೋಡಿಕೊಂಡರು. ಈ ಹಿಂದಿನ ಸರಕಾರದ ಅವಧಿಯಲ್ಲಿ ಬೆಟ್ಟತ್ತೂರಿನ ಈ ಕಾಲೋನಿಗಳ ಬಳಿಯ ಸಮುದಾಯ ಭವನಕ್ಕೆ ವಿದ್ಯುತ್ ಸೌಲಭ್ಯವನ್ನು ಗ್ರಾಮೀಣ ವಿದ್ಯುದೀಕರಣ ಯೋಜನೆಯಡಿ ಒದಗಿಸಲಾಗಿದೆ. ಹೀಗಿದ್ದೂ ಅಲ್ಲೇ ಸಮೀಪದ ಮನೆಗಳು ಇಂದಿಗೂ ಕಗ್ಗತ್ತಲೆಯಲ್ಲೇ ಉಳಿದು ಬಿಟ್ಟಿವೆ. ಕಾಲೋನಿ ನಿವಾಸಿ ಕೆ.ಎ.ಸೋಮಯ್ಯ ಹೇಳುವಂತೆ, ಕಳೆದ ಚುನಾವಣೆಯ ಸಂದರ್ಭ ಕಾಲೋನಿಗೆ ವಿದ್ಯುತ್ ಒದಗಿಸುವುದಾಗಿ ಸುಮಾರು ಎಂಭತ್ತು ವಿದ್ಯುತ್ ಕಂಬಗಳನ್ನು ತಂದು ಹಾಕಲಾಗಿತ್ತು. ಚುನಾವಣೆ ಕಳೆದ…
ಗೋಣಿಕೊಪ್ಪ ನ.14 NEWS DESK : ಭಾರತದ ಮೊದಲ ಪ್ರಧಾನಿ ನೆಹರು ಅವರ ಜನ್ಮ ದಿನವನ್ನು ಗೋಣಿಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಂಭ್ರಮವಾಗಿಸಿದರು. ಶಾರದ ಪೂಜೆ ನೆರವೇರಿಸುವ ಮೂಲಕ ವಿದ್ಯೆಗಾಗಿ ಪ್ರಾರ್ಥಿಸಿದ ವಿದ್ಯಾರ್ಥಿಗಳು, ನಂತರ ಶಾಲೆಯಲ್ಲಿ ಆಯೋಜಿಸಿದ ಜಾದು ಪ್ರದರ್ಶನವನ್ನು ಕಣ್ತುಂಬಿ ಕೊಂಡು ನೆಹರು ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆಯಾಗಿ ಅರ್ಥಪೂರ್ಣಗೊಳಿಸಿದರು. ನಂತರ ಪೆÇೀಷಕರ ಮಹಾಸಭೆ ಶಾಲೆಯ ಮೇಲುಸ್ತುವರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಭಾಗವಹಿಸಿದರು, ಈ ಸಂದರ್ಭ ಮಾತನಾಡಿದ ಅವರು, ಚಾಚಾ ನೆಹರು ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ಬಹು ಹೆಮ್ಮೆಯ ವಿಚಾರ. ಸರ್ಕಾರಿ ಶಾಲೆಯಲ್ಲಿ ಓದಿದ ಬಹುತೇಕ ವಿದ್ಯಾರ್ಥಿಗಳು, ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇಂತಹ ಸ್ಪೂರ್ತಿದಾಯಕ ನಡೆಗಳನ್ನು ಉತ್ತೇಜಿಸಿ, ಮಕ್ಕಳು ದೇಶಕ್ಕಾಗಿ ಸೇವಿ ಸಲ್ಲಿಸುವಂತ, ದೇಶಭಕ್ತಿ ಮತ್ತು ಆತ್ಮವಿಶ್ವಾಸ ಬೆಳೆಸಿ ಓದಿನ ಕಡೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.…
ಮಡಿಕೇರಿ ನ.14 NEWS DESK : ಉದಯೋನ್ಮುಖ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೊಡಗಿನ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ರಾಜ್ಯ ಸರಕಾರ ಕೋಟ್ಯಾಂತರ ಅನುದಾನ ನೀಡುತ್ತಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ನಾಲ್ಕನೇ ವರ್ಷದ ಐಪಿಎಲ್ ಮಾದರಿಯ ಕೊಡವ ಪ್ರೀಮಿಯರ್ ಲೀಗ್ ಸೀಸನ್-4 ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ಕ್ರಿಕೆಟ್ ಪಂದ್ಯಾಟವು ಇಂದು ದೇಶದ ಎಲ್ಲಾ ಕ್ರೀಡಾ ಪ್ರೇಮಿಗಳು ಇಷ್ಟಪಡುವ ಕ್ರೀಡೆಯಾಗಿದೆ. ಕ್ರೀಡಾ ಜಿಲ್ಲೆ ಕೊಡಗಿನಲ್ಲಿ ಕೂಡ ಈ ರೀತಿಯ ಪಂದ್ಯಾವಳಿಗಳು ನಡೆಯುತ್ತಿರುವುದರಿಂದ ಪ್ರತಿಭಾವಂತ ಕ್ರಿಕೆಟ್ ಪಟುಗಳ ಬೆಳಕಿಗೆ ಬರಲು ಸಾಧ್ಯವಾಗುತ್ತಿದೆ ಎಂದರು. ಕೊಡಗು ಜಿಲ್ಲೆಯ ಹತ್ತಾರು ಶ್ರೇಷ್ಠ ಕ್ರಿಕೆಟ್ ಆಟಗಾರರು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದ್ದಾರೆ. ಕೊಡಗಿನಲ್ಲಿ ಕ್ರೀಡೆಗೆ ಪ್ರೋತ್ಸಾಹ…
ಕುಶಾಲನಗರ ನ.14 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ವತಿಯಿಂದ ಮಕ್ಕಳ ದಿನಾಚರಣೆ : 2025 ಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಶಾಲೆಗಳಲ್ಲಿ ಆಯೋಜಿಸಲಾಗಿದ್ದ ಮಕ್ಕಳ ವೇಷಭೂಷಣ ಸ್ಪರ್ಧೆ,ಭಾಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ವಿವಿಧ ದಿರಿಸುಗಳನ್ನು ತೊಟ್ಟು ಗಮನ ಸೆಳೆದರು. ಮಕ್ಕಳು ಸಂಭ್ರಮದಿಂದ ಪ್ರತಿಭೆಯ ಅನಾವರಣಗೊಳಿಸಿ ಖುಷಿ ಪಟ್ಟರು. ಶೈಕ್ಷಣಿಕ ಹಾಗೂ ಇನ್ನಿತರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಕುರಿತು ವಿಚಾರ ಮಂಡಿಸುವ ಮೂಲಕ ಗಮನ ಸೆಳೆದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳಿಗೆ ವಿವಿಧ ಉಚಿತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಸಮುದಾಯ ಹೆಚ್ಚಿನ ಸಹಕಾರ ನೀಡಬೇಕು ಎಂದು…
ಮಡಿಕೇರಿ ನ.14 NEWS DESK : ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಕ್ರೀಡಾ ಸ್ಪರ್ಧೆಯಲ್ಲಿ ಮಡಿಕೇರಿಯ ಸಂತ ಜೋಸೆಫರ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯ -ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫುಟ್ಬಾಲ್ ಆಟದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕೆ.ಎನ್.ವಿಧಿತ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ಎಂಟನೇ ತರಗತಿಯ ವಿದ್ಯಾರ್ಥಿನಿ ಬಿ.ಡಿ.ಧೃತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿಯವರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ವೃಂದ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.
ಮಡಿಕೇರಿ ನ.14 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು(ಕಸಾಪ), ಕುಶಾಲನಗರ ತಾಲೂಕು ಕಸಾಪ ಘಟಕ ಹಾಗೂ ಹೆಬ್ಬಾಲೆ ಕಸಾಪ ಹೋಬಳಿ ಘಟಕದ ಸಂಯುಕ್ತಾಶ್ರಯದಲ್ಲಿ ನ.20 ರಂದು ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಗ್ರಾಮದ ಶ್ರೀ ಬನಶಂಕರಿ ಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವರಚಿತ ಕವನವಾಚನ ಕವಿಗೋಷ್ಠಿಯನ್ನು ಏರ್ಪಡಿಲಾಗಿದೆ. ಉದಯೋನ್ಮುಖ ಕವಿಗಳು ಹಾಗೂ ಆಸಕ್ತ ಕವಿಗಳು ತಮ್ಮ ಸ್ವರಚಿತ ಕವನ ವಾಚನವನ್ನು ವಾಚಿಸಲು ಆಹ್ವಾನಿಸಲಾಗಿದ್ದು, ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಕಾರ್ಯಕ್ರಮವನ್ನು ಹೆಬ್ಬಾಲೆ ಶ್ರೀ ಬನಶಂಕರಿ ಅಮ್ಮನವರ ದೇವಾಲಯದ ಆವರಣದಲ್ಲಿ ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ತಿನ ಹೆಬ್ಬಾಲೆ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀ ಎನ್.ಎಂ. ಮೂರ್ತಿ ಹಾಗೂ ಕಾರ್ಯದರ್ಶಿಯಾದ ಎಚ್.ಎನ್.ಸುಬ್ರಮಣ್ಯ ಅವರನ್ನು ಸಂಪರ್ಕಿಸಬೇಕಾಗಿ ವಿನಂತಿಸಿಕೊಳ್ಳಲಾಗಿದೆ. ಅಧ್ಯಕ್ಷರು: ಮೊ:7353732674, ಕಾರ್ಯದರ್ಶಿ ಮೊ:9449334654
ಬೆಂಗಳೂರು ನ.14 NEWS DESK : ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದರು. :: ತಿಮ್ಮಕ್ಕ ಅವರ ಕೊನೆ ಆಸೆ: ಪರಿಶೀಲಿಸಿ ಕ್ರಮ :: ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು…






