ಮಡಿಕೇರಿ NEWS DESK ಸೆ.21 : ಅಹ್ಮದಿಯಾ ಮುಸ್ಲಿಂ ಜಮಾಅತಿನ ಮಡಿಕೇರಿ ಘಟಕದ ವತಿಯಿಂದ ‘ಹ್ಯುಮಾನಿಟಿ ಫಸ್ಟ್’ನ 30ನೇ ವರ್ಷ ಮತ್ತು ಅಂತಾರಾಷ್ಟ್ರೀಯ ಶಾಂತಿ ದಿನವನ್ನು ನಡಿಗೆ, ಓಟ ಮತ್ತು ಸೈಕಲಿಂಗ್ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. “ಎಲ್ಲರಲ್ಲೂ ಪ್ರೀತಿ,ಯಾರೊಂದಿಗೂ ದ್ವೇಷವಿಲ್ಲ” ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮಕ್ಕೆ ನಗರದ ‘ಬೈತುಲ್ ಹುದಾ’ ಮಸೀದಿಯಲ್ಲಿ ಧರ್ಮಗುರುಗಳಾದ ಕಲೀಂ ಖಾನ್ ಸಾಹೇಬ್ ಅವರು ಚಾಲನೆ ನೀಡಿದರು.ನಂತರ ಶಾಂತಿ ಸಂದೇಶಗಳ ಫಲಕಗಳೊಂದಿಗೆ ನಡಿಗೆಯ ಮೂಲಕ ಮಾರುಕಟ್ಟೆ, ಇಂದಿರಾ ಗಾಂಧಿ ವೃತ್ತ, ಕಾಲೇಜು ರಸ್ತೆ, ರೇಸ್ ಕೋರ್ಸ್ ರಸ್ತೆ ಮಾರ್ಗವಾಗಿ ರಾಜಾಸೀಟ್ ವರೆಗೆ ಜಾಥಾ ನಡೆಸಲಾಯಿತು. “ವಿಶ್ವಯುದ್ಧ 3 ನಿಲ್ಲಿಸಿ” ಎಂಬ ವಿಶೇಷ ಅಭಿಯಾನದೊಂದಿಗೆ ಶಾಂತಿ, ಸಾಮರಸ್ಯ ಮತ್ತು ಸೌಹಾರ್ದದ ಸಂದೇಶಗಳನ್ನು ಸಾರುವ ಮೂಲಕ ಜಾಗತಿಕ ಸಂಘರ್ಷವನ್ನು ತಡೆಗಟ್ಟಲು ಪರಸ್ಪರ ಸಹಕಾರದ ತುರ್ತು ಅವಶ್ಯಕತೆ,ಶಾಂತಿ ಹಾಗೂ ಏಕತೆಯ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.’ಹ್ಯುಮಾನಿಟಿ ಫಸ್ಟ್’ ಸಂಸ್ಥೆಯ ಜಿಲ್ಲಾ ಸಂಚಾಲಕರಾದ ಮೊಹಮ್ಮದ್ ಶರೀಫ್ ಅವರು ಮಾತನಾಡಿ “ಹ್ಯುಮಾನಿಟಿ ಫಸ್ಟ್” ಸಂಸ್ಥೆಯು ಸ್ಥಾಪನೆಗೊಂಡು ಇದೀಗ…
ಲೇಖಕ: admin
ಮಡಿಕೇರಿ NEWS DESK ಸೆ.21 : ಮಡಿಕೇರಿ ದಸರಾ- ಜನೋತ್ಸವ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹತ್ತು ದಿನಗಳ ಸಂಭ್ರಮದ ವಾತಾವರಣ ಕಂಡುಬರಲಿದೆ. ಮಡಿಕೇರಿ ನಗರ ದಸರಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ತಾ.23ರಿಂದ ಅಕ್ಟೋಬರ್ 2ರವರೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಸಂಜೆ 6 ಗಂಟೆಯಿಂದ ಕಾರ್ಯಕ್ರಮಗಳು ಜರುಗಲಿವೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ತಾ.23ರಂದು ಸಂಜೆ 6ಗಂಟೆಗೆ ಭಾಗಮಂಡಲ ಜಾನ್ ಡ್ಯಾನ್ಸ್ ಗ್ಯಾಲರಿ ತಂಡದಿಂದ ನೃತ್ಯ ವೈಭವ, ಮೈಸೂರಿನ ನಿತ್ಯ ನಿರಂತರ ಟ್ರಸ್ಟ್ನ ವಿಶೇಷ ಚೇತನ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯ, ಬೆಂಗಳೂರು ಸ್ವರ ಸಿಂಚನ ತಂಡದಿಂದ ಸಂಗೀತ ರಸಮಂಜರಿ. 24ರಂದು ಬೆಳಿಗ್ಗೆ 10 ಗಂಟೆಗೆ ಕಾಫಿ ದಸರಾ, ಸಂಜೆ 6 ಗಂಟೆಯಿಂದ ಅಓತರ ರಾಷ್ಟ್ರೀಯ ಖ್ಯಾತಿಯ ಹರಿ,ಚೇತನ ಮತ್ತು ತಂಡದವರಿಂದ ಆಕರ್ಷಕ ಕಥಕ್ ನೃತ್ಯ, ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಸಾಂಸ್ಕೃತಿಕ ವೈವಿಧ್ಯ, ಮಡಿಕೇರಿ ಡ್ಯಾನ್ಸ್ ಲ್ಯಾಬ್…
ಸೋಮವಾರಪೇಟೆ NEWS DESK ಸೆ.21 : ಕೊಡಗು ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕಾಗಿ ಆಯ್ಕೆ ಪ್ರಕ್ರಿಯೆ ಸೋಮವಾರಪೇಟೆಯ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ನಡೆಯಿತು. ಸೋಮವಾರಪೇಟೆಯ ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ಅವಿನಾಶ್ ಅವರು ಕಾರ್ಯಕ್ರಮವನ್ನು ಉದ್ಘಾಟಸಿದರು. ಜಿಲ್ಲೆಯ ವಿವಿಧ ಪದವಿ ಕಾಲೇಜುಗಳಿಂದ ಆಗಮಿಸಿದ್ದ 50 ವಿದ್ಯಾರ್ಥಿಗಳು ತಮ್ಮ ಕಬಡ್ಡಿ ಕೌಶಲ್ಯವನ್ನು ಪ್ರದರ್ಶಿಸಿದರು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ಅಂತಾರಾಷ್ಟ್ರೀಯ ಹ್ಯಾಂಡ್ಬಾಲ್ ಆಟಗಾರ ಗ್ರೀನಿಡ್ಜ್ ಡಿ. ಕುನ್ಹಾ, ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಆಟಗಾರರಿಗೆ ಕಬಡ್ಡಿ ಆಟದ ತಂತ್ರಗಾರಿಕೆ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡಾ ಚಟುವಟಿಕೆಯಲ್ಲೂ ಭಾಗವಹಿಸಬೇಕು. ಕ್ರೀಡೆಯಿಂದ ಮಾನಸಿಕ ಹಾಗು ದೈಹಿಕ ಅರೋಗ್ಯ ವೃದ್ದಿಸುತ್ತದೆ. ಕ್ಷೇತ್ರ ಕ್ಷೇತ್ರದಲ್ಲೂ ಉದ್ಯೋಗದ ಅವಕಾಶ ಹೆಚ್ಚಿವೆ. ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದವರು ಶಿಸ್ತು ಮತ್ತು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಕಿವಿಮಾತು ಹೇಳಿದರು. ಗ್ರೀನಿಡ್ಜ್ ಡಿ.ಕುನ್ಹಾ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ…
ಸೋಮವಾರಪೇಟೆ NEWS DESK ಸೆ.21 :ಸಂತ ಜೋಸೆಫರ ಪದವಿ ಕಾಲೇಜ್ ನ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಅವಿನಾಶ್ ಮತ್ತು ಆರ್ಎಫ್ಒ ಶೈಲೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಮೈಸೂರು ಸಂತ ಜೋಸೆಫರ ನರ್ಸಿಂಗ್ ಕಾಲೇಜಿನ ವೈದ್ಯರಾದ ಡಿ.ಜಿ.ಮಮತ, ಕಾಲೇಜಿನ ಪ್ರಾಂಶುಪಾಲ ಬಿ.ಆರ್. ಹರೀಶ್, ದೇವಾಲಯ ಪಾಲಾನ ಸಮಿತಿ ಕಾರ್ಯದರ್ಶಿ ಶೀಲಾ ಡಿಸೋಜ, ಸದಸ್ಯರುಗಳಾದ ಶಾಂತಿ ಡಿಸಿಲ್ವಾ, ಜೋಸ್ಟಿನ್ ಡಿಸೋಜ ಇದ್ದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಸ್.ಪಿ.ನವನೀತ್, ಜಂಟಿ ಕಾರ್ಯದರ್ಶಿ ನಿರ್ಮಿತಾ, ಖಜಾಂಚಿ ಚೇತನ್, ಸಾಂಸ್ಕೃತಿಕ ಕಾರ್ಯದರ್ಶಿ ಚರಣ್, ಸಹ ಕಾರ್ಯದರ್ಶಿ ಸೃಜನಾ, ಕ್ರೀಡಾ ಕಾರ್ಯದರ್ಶಿ ಸೃಜನ್, ಸಹ ಕಾರ್ಯದರ್ಶಿ ಆಶಿತ, ಶಿಸ್ತು ನಾಯಕ ದೀಪಕ್, ನಾಯಕಿ ದೀಪ್ತಿ ಅವರುಗಳಿಗೆ ಅವಿನಾಶ್ ಪ್ರತಿಜ್ಞಾವಿಧಿ ಬೋಧಿಸಿದರು.
ಸೋಮವಾರಪೇಟೆ NEWS DESK ಸೆ.21 : ಸಮಾಜದಲ್ಲಿ ಅಪೌಷ್ಠಿಕತೆ ಹೋಗಲಾಡಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಪಟ್ಟಣದ ಸ್ತ್ರೀ ಶಕ್ತಿ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದು ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಬೇಕು. ಯಾರೂ ಕೂಡ ಸೌಲಭ್ಯಗಳಿಂದ ವಂಚಿತರಾಗಬಾರದು. ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಡಿಗಳಿದ್ದು, ಅಲ್ಲಿ ಯಾರೂ ಕೂಡ ಸರ್ಕಾರದ ಸೌಲಭ್ಯಗಳಿಂದ ದೂರ ಉಳಿಯದಂತೆ ಎಚ್ಚರಿಕೆ ವಹಿಸಬೇಕೆಂದರು. ಪೌಷ್ಠಿಕ ಆಹಾರಗಳನ್ನು ಹೆಚ್ಚು ಹೆಚ್ಚಾಗಿ ಸೇವಿಸುವ ಮೂಲಕ ತಾಯಿ ಹಾಗು ಮಗುವಿನ ಆರೋಗ್ಯ ವೃದ್ಧಿಯಾದರೆ ಅದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅಡಿಗಲ್ಲು. ಗರ್ಭಿಣಿಯರು, ಬಾಣಂತಿಯರು, ತಾಯಂದಿರು ತಮ್ಮ ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪೌಷ್ಠಿಕಾಂಶಭರಿತ ಆಹಾರಗಳನ್ನೇ ಸೇವಿಸಬೇಕೆಂದು ಆರೋಗ್ಯ ಶಿಕ್ಷಣಾಧಿಕಾರಿ…
ಮಡಿಕೇರಿ NEWS DESK ಸೆ.21 : ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನಲೆಯಲ್ಲಿ ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದಿಂದ ಕಾರುಗುಂದದಲ್ಲಿ ವಿದ್ಯಾಥಿ೯ಗಳಿಗೆ ಸವಿಕಾಫಿಯನ್ನು ನೀಡಲಾಯಿತು. ಕೊಡಗು ಕಾಫಿ ಜಾಗ್ರತಿ ಸಂಘದಿಂದ ಶಾಲೆಗಳಲ್ಲಿ ಮಕ್ಕಳಿಗೆ ಕಾಫಿ ಪಾನೀಯದ ಜಾಗ್ರತಿ ಮೂಡಿಸುವ ಕಾಯ೯ಕ್ರಮದ ಅಂಗವಾಗಿ ಕಾರುಗುಂದ ಸಕಾ೯ರಿ ಶಾಲಾ ವಿದ್ಯಾಥಿ೯ಗಳಿಗೆ ಸವಿಯಾದ ಕಾಫಿ ನೀಡಲಾಯಿತು. ಆರೋಗ್ಯದ ಮೇಲೆ ಕಾಫಿಯಿಂದ ಉಂಟಾಗುವ ಉತ್ತಮ ಪರಿಣಾಮಗಳನ್ನು ವಿವರಿಸಲಾಯಿತು. ಕಾಫಿಯಿಂದಾಗಿ ಪ್ರತಿ ನಿತ್ಯ ಮನುಷ್ಯನಿಗೆ ಹೆಚ್ಚು ಲವಲವಿಕೆ ಬರುತ್ತದೆ ಎಂದೂ ತಿಳಿಸಲಾಯಿತು. ಕೊಡಗಿನಲ್ಲಿ ಕಾಫಿ ಹೆಚ್ಚಾಗಿ ಬೆಳೆಯಲಾಗುತ್ತಿದ್ದು ಈ ನಿಟ್ಟಿನಲ್ಲಿ ಕೖಷಿಕರು ಮತ್ತು ಕಾಮಿ೯ಕರ ಶ್ರಮವನ್ನೂ ಶಾಲಾ ವಿದ್ಯಾಥಿ೯ಗಳಿಗೆ ತಿಳಿಸಲಾಯಿತು. ಸಂಸ್ಥೆಯ ಪ್ರಮುಖರಾದ ಕುಟ್ಟೇಟಿರ ಕುಮಾರಿ ಕುಂಜ್ಞಪ್ಪ, ನಾಟೋಳಂಡ ಗಿರಿಜಾ ಚಮ೯ಣ್ಣ, ಕುಟ್ಟೇಟಿರ ಗೌರಮ್ಮ ಕಾವೇರಪ್ಪ, ಜರೀನ್ ಉತ್ತಪ್ಪ, ಮೊಟ್ಟೆಯಂಡ ಲೀನಾ ಕುಟ್ಟಪ್ಪ, ಪಟ್ಟಮಾಡ ಲೇಖಾ ಪೊನ್ನಪ್ಪ, ಕಬ್ಬಚ್ಚಿರ ಸಬಿತ ಉತ್ತಯ್ಯ, ಶಾಲಾ ಮುಖ್ಯಶಿಕ್ಷಕಿ ಪವೀ೯ನ್ ಹಾಜರಿದ್ದು ಕಾಫಿ ಕುರಿತು ಮಾಹಿತಿ ನೀಡಿದರು.
ವಿರಾಜಪೇಟೆ ಸೆ.20 NEWS DESK : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ ವ್ಯವಸ್ಥೆ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್ ಹಾಗೂ ಇಂಟರ್ನ್ ಷಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ ಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್ ಗಳಲ್ಲೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ. ಜೊತೆಗೆ ಗ್ರಾಮೀಣ ಭಾಗದ…
ಮಡಿಕೇರಿ NEWS DESK ಸೆ.21 : ರಾಜ್ಯ ಸರಕಾರ ನಡೆಸುತ್ತಿರುವ ಜಾತಿ ಜನಗಣತಿ ಸಂದರ್ಭ ಕೊಡಗು ಜಿಲ್ಲೆಯ ಮರಾಠ ಮರಾಟಿ ಸಮಾಜ ಬಾಂಧವರು ಜಾತಿಯನ್ನು ಮರಾಠ ಎಂದು ನಮೂದಿಸುವಂತೆ ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಎಂ.ಪರಮೇಶ್ವರ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರದ ಗೆಜೆಟೆಡ್ ನೋಟಿಫಿಕೇಶನ್ ನಲ್ಲಿ ‘ಮರಾಠ’ ಎಂದು ಇರುವುದರಿಂದ ಯಾವುದೇ ವ್ಯತ್ಯಾಸಗಳನ್ನು ಮಾಡದೆ ಮತ್ತು ತಪ್ಪು ಮಾಹಿತಿ ನೀಡದೆ ಸಹಕರಿಸಬೇಕೆಂದು ತಿಳಿಸಿದ್ದಾರೆ. ಮುಂದೆ ಕೊಡಗಿನಲ್ಲಿ ‘ಮರಾಠ’ ಎಂದು ಒಂದೇ ಜಾತಿಯ ದೃಢೀಕರಣವನ್ನು ಪಡೆಯಲು ಸಂಘದ ಮೂಲಕ ಶ್ರಮಿಸಲಾಗುವುದು. ಈಗಾಗಲೇ ಮಾರಾಠಿ, ಮಾರಾಟ, ಮಾರಾಟಿ ಮರಾಠ ಈ ರೀತಿಯ ವ್ಯತ್ಯಾಸಗಳಿದ್ದು, ಯಾವುದೇ ಗೊಂದಲವಿಲ್ಲದೆ ಜಿಲ್ಲಾ ಸಂಘದ ಸೂಚನೆಯಂತೆ ‘ಮರಾಠ’ ಎಂದು ನಮೂದಿಸಬೇಕು. ಭಾಷೆಯನ್ನು ಮರಾಠ ಅಥವಾ ಕನ್ನಡ ಅಥವಾ ತುಳು ಎಂದು ನಮೂದಿಸಬೇಕು. ಅಂತರ್ಜಾತಿ ವಿವಾಹ ಆದವರು ಕೂಡ ತಮ್ಮ ಮೂಲ ಜಾತಿ ‘ಮರಾಠ’ ಎಂದೇ ನಮೂದಿಸಬೇಕು. ಈ ಮಾಹಿತಿಯನ್ನು ಸಂಘದ…
*ಸೋಮವಾರಪೇಟೆಯಲ್ಲಿ ನವ್-ವೈಭವ್* ಸೋಮವಾರ ಸೆಪ್ಟೆಂಬರ್ 22 ರಂದು ಸೋಮವಾರಪೇಟೆಯ ಸಾಕ್ಷಿ ಕನ್ವೆಷನ್ ಹಾಲ್ ನಲ್ಲಿ ಲಾಸ್ಯ -ರಿಧಿ ಆಯೋಜಿಸಿರುವ ಪ್ರದರ್ಶನ ಹಾಗೂ ಮಾರಾಟ. ನಾಡಹಬ್ಬವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಸುವರ್ಣಾವಕಾಶ. ನಾಡಿನ ಸುಪ್ರಸಿದ್ದ ಸಂಸ್ಥೆಗಳಿಂದ ವಿನ್ಯಾಸಗೊಂಡ ರೆಡಿಮೇಡ್ ಉಡುಪುಗಳು – ಮಹಿಳೆಯರ ಡಿಸೈನರ್ ಸೀರೆಗಳು ಹಾಗೂ ಉಡುಗೆಗಳು – ಗೃಹಬಳಕೆ ಸಾಮಗ್ರಿಗಳು – ಆರ್ಗಾನಿಕ್ ಉತ್ಪನ್ನಗಳು – ಆಯ್ದ ವಿನೂತನ ಶೈಲಿಯ ಆಭರಣಗಳು – ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯ ಇರುತ್ತವೆ. ಬಳಸಿದ ಜರಿರೇಶ್ಮೆ ಸೀರೆಗಳನ್ನು ಜರಿಯ ಮೌಲ್ಯ ನಿರ್ಧರಿಸಿ ಖರೀದಿಸಲಾಗುತ್ತದೆ. ಗ್ರಾಹಕರಿಗೆ ಆಹ್ಲಾದ ನೀಡಲು ಕಾಫಿ ಶಾಪ್ ವಿವಿಧ ಬಗೆಯ ವಿಶೇಷ ಕೇಕ್ ಮುಂತಾದ ಬೇಕಿಂಗ್ ಉತ್ಪನ್ನಗಳು ಕೊಡಗಿನ ಸಾಂಪ್ರದಾಯಿಕ ಶೈಲಿಯಲ್ಲಿ ಸಿದ್ಧಪಡಿಸಿದ ವೆಜ್ ಹಾಗೂ ನಾನ್ ವೆಜ್ ಖಾದ್ಯಗಳು. ಇನ್ ಡೋರ್ ಗಿಡಗಳನ್ನು ಬೆಳೆಸುವ ಮಣ್ಣು ಹಾಗೂ ಸೆರಾಮಿಕ್ ಪಾಟ್ ಗಳು. ಮರ ಹಾಗೂ ಲೋಹದಿಂದ ತಯಾರಿಸಿದ ಅಲಂಕಾರಿಕ ಕರಕುಶಲ ವಸ್ತುಗಳು. ಬನ್ನಿ… ದಸರಾ ನವರಾತ್ರಿಯ ಪವಿತ್ರ ನಾಡಹಬ್ಬಕ್ಕೆ ಮೆರಗು ನೀಡುವ ನವ್-ವೈಭವ್ ಪ್ರದರ್ಶನ ಹಾಗೂ ಮಾರಾಟಕ್ಕೆ ನಿಮ್ಮ ಆತ್ಮೀಯರನ್ನೂ ಕರೆತನ್ನಿ. ನೆನಪಿಡಿ ಸೆಪ್ಟೆಂಬರ್ 22,…
ಮಡಿಕೇರಿ NEWS DESK ಸೆ.21 : ಕೊಡವರು ಸಾಮೂಹಿಕವಾಗಿ ಸಾಂವಿಧಾನಿಕ ಮಾನ್ಯತೆಯನ್ನು ಪಡೆಯುವಾಗ, ನಮ್ಮ ಪ್ರಾಚೀನತೆಯನ್ನು ಜನಾಂಗೀಯ ಮತ್ತು ಮಾನವಶಾಸ್ತ್ರೀಯ ಗುಣಲಕ್ಷಣಗಳ ಮೂಲಕ ದೃಢೀಕರಿಸಬೇಕು, ಅದು ಅಂತಿಮವಾಗಿ ನಮ್ಮ ಹಕ್ಕನ್ನು ಗಟ್ಟಿಗೊಳಿಸುತ್ತದೆ. ಈ ಕಾರಣಕ್ಕಾಗಿ ಸರ್ವ ಕೊಡವರು ಜಾತಿ ಜನಗಣತಿಯ ಸಂದರ್ಭ ‘ಕೊಡವ’ ಎಂದು ನಮೂದಿಸುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಂದಿನ ಯುಗದಲ್ಲಿ ನಮ್ಮ ಪೂರ್ವಜರು ಬರೆದ ಕೊಡವ ಜನಾಂಗೀಯ ತತ್ವಗಳ ಪ್ರಕಾರ, ಕೊಡವರು ಒಂದು ಜಾತಿಯಲ್ಲ, ಕೊಡವರು ಚತುರ್ಭುಜ ಜಾತಿ ವ್ಯವಸ್ಥೆಯಡಿಯಲ್ಲಿ ಬರುವುದಿಲ್ಲ. ಕೊಡವರು ಒಂದೇ ಜನಾಂಗ, ಏಕ ಜನಾಂಗೀಯ ಸಮುದಾಯ ಎಂದು ಉಲ್ಲೇಖಿಸಿದ್ದಾರೆ. ಕೊಡವರ ಕುರಿತಾದ ಸ್ವಾತಂತ್ರö್ಯಪೂರ್ವದ ದಾಖಲೆಗಳು ಹೆಚ್ಚಿನ ಮೌಲ್ಯವನ್ನು ಹೊಂದಿವೆ ಎಂದು ತಿಳಿಸಿದ್ದಾರೆ. ಕೊಡವ ಜನಾಂಗೀಯ ಸಮುದಾಯ ಆನಿಮಿಸ್ಟಿಕ್ ನಂಬಿಕೆಯುಳ್ಳವರಾಗಿದ್ದಾರೆ. ಪೂರ್ವಜರನ್ನು (ಗುರು-ಕಾರೋಣ), ಅಗಲಿದ ಆತ್ಮಗಳು, ಸಮಾಧಿ ಸ್ಥಳಗಳು, ಯುದ್ಧಭೂಮಿಗಳು, ನರಮೇಧದ ಸ್ಮಾರಕಗಳು, ಯುದ್ಧ ಸ್ಮಾರಕಗಳು, ಪರ್ವತ ದೇವತೆ, ಪವಿತ್ರ ಮಂದ್(ಪವಿತ್ರ…






