ಮಡಿಕೇರಿ NEWS DESK ಅ.28 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಮತ್ತು ಕೋಟೆ ಆವರಣದಲ್ಲಿ ಸಂಸ್ಮರಣಾ ದಿನದ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ…
ಲೇಖಕ: admin
ಮಡಿಕೇರಿ ಅ.28 NEWS DESK : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತಿತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅರ್ಹರಿಗೆ ಬಿಪಿಎಲ್ನಿಂದ ಎಪಿಎಲ್ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸುವಂತಾಗಬೇಕು. ಇದರಿಂದ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಆ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರು ನಿರ್ದೇಶನ ನೀಡಿದರು. ಅನ್ನಭಾಗ್ಯ ಯೋಜನೆಯಡಿ ಪ್ರತೀ ಫಲಾನುಭವಿಗೆ 10 ಕೆ.ಜಿ. ಅಕ್ಕಿ ವಿತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ…
ಮಡಿಕೇರಿ ಅ.28 NEWS DESK : ಮಡಿಕೇರಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ರೋಟರಿ ಮಡಿಕೇರಿ ವತಿಯಿಂದ ರೋಟರಾಕ್ಟ್ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ರೋಟರಾಕ್ಟ್ ಸಂಘದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೀವನ್ ಹೆಚ್.ಕೆ, ಉಪಾಧ್ಯಕ್ಷರಾಗಿ ನಿಷ್ಮ, ಕಾರ್ಯದರ್ಶಿಯಾಗಿ ರಾಹುಲ್ ಪಿ.ಆರ್, ಸಾಜೆರ್ಂಟ್ ಅಟ್ ಅಮ್ರ್ಸ್ ಆಗಿ ಮಮತಾ, ಖಜಾಂಚಿ ಗಾಯತ್ರಿ, ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಮೇಘನಾ ಹಾಗೂ ಸಮುದಾಯ ಸೇವಾ ನಿರ್ದೇಶಕರಾಗಿ ಅಕ್ಷತಾ ಅವರು ಅಧಿಕಾರ ವಹಿಸಿಕೊಂಡರು. ಅನುಸ್ಥಾಪನ ಅಧಿಕಾರಿಯಾಗಿ ಉಪಸ್ಥಿತರಿದ್ದ ರೋ.ಮನೋಹರ್ ಹೆಚ್. ಕಾಮತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ರೋಟರಿ ಕಾರ್ಯಚಟುವಟಿಕೆಯ ಕುರಿತು ವಿವರಿಸಿದರು ಮತ್ತು ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ರೋಟರಿ ಮಡಿಕೇರಿಯ ಅಧ್ಯಕ್ಷರಾದ ರೋ.ಲಲಿತ ರಾಘವನ್ ಅವರು ರೋಟರಿ ಸಂಸ್ಥೆ ಮತ್ತು ಶುಚಿತ್ವದ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕಾಲೇಜ್ ನ ಪ್ರಾಂಶುಪಾಲರಾದ ಡಾ.ವೆಂಕಟೇಶ ಪ್ರಸನ್ನ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕರಾದ ಡಾ.ಅನುಪಮಾ ಸಭಾಪತಿ, ರೋಟರಾಕ್ಟ್ ಸಂಯೋಜಕರಾದ ಸುಪ್ರಿಯಾ, ಕಳೆದ…
ಸುಂಟಿಕೊಪ್ಪ ಅ.28 NEWS DESK : ಜಿಲ್ಲಾ ಮಟ್ಟದ ಟೇಬಲ್ಟೆನ್ನಿಸ್ ಪಂದ್ಯಾವಳಿಯಲ್ಲಿ ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯ ಬಾಲಕಿಯರ ತಂಡವು ಜಿಲ್ಲಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಜಿಲ್ಲಾ ಮಟ್ಟದ 14ರ ವಯೋಮನದವರಿಗೆ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ಆಯೋಜಿಸಲಾಗಿದ್ದು, ಪಂದ್ಯಾವಳಿಯಲ್ಲಿ ಜಿಲ್ಲೆಯ 5 ತಾಲ್ಲೂಕುಗಳ ತಂಡಗಳು ಭಾಗವಹಿಸಿದ್ದವು. ಅತಿಥೇಯ ಶಾಂತಿನೀಕೇತನದ ಬಾಲಕಿಯರ ತಂಡವು ಮಡಿಕೇರಿ ತಾಲ್ಲೂಕು ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಗೊಂಡಿತು.
ಮಡಿಕೇರಿ ಅ.28 NEWS DESK : ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಕನ್ನಡ ಚಲನಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು. ಮೇಕೇರಿಯ ಕೂರ್ಗ್ ಗವದನ ರೆಸಾರ್ಟ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಯಶೋಧ ಪ್ರಕಾಶ್ ಅವರು ನನ್ನ ನಿರ್ದೇಶನದ ‘ಕಂದೀಲು’ ಕನ್ನಡ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರತ್ತಿರುವುದು ಸಂತೋಷ ಮತ್ತು ಹೆಮ್ಮೆ ಎನಿಸಿದೆ. ಈ ಪ್ರಶಸ್ತಿ ಸಿನಿರಂಗದಲ್ಲಿ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು. ಒಂದು ಕುಟುಂಬದಂತೆ ಕಾರ್ಯನಿರ್ವಹಿಸುತ್ತಿರುವ ಸಂಸ್ಕøತಿ ಸಿರಿ ಬಳಗ ಟ್ರಸ್ಟ್ ಕಲಾವಿದರನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲೂ ಟ್ರಸ್ಟ್ ಉತ್ತಮ ಕಾರ್ಯಚಟುವಟಿಕೆಗಳೊಂದಿಗೆ ಮತ್ತಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು. ಟ್ರಸ್ಟ್ ನ ಗೌರವಾಧ್ಯಕ್ಷ ಹಾಗೂ ಸರಕಾರಿ ಆಸ್ಪತ್ರೆಯ ತುರ್ತು ಘಟಕದ ಮುಖ್ಯಸ್ಥ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ಅವರು ಮಾತನಾಡಿ ಏಳುಬೀಳಿನ ಸಿನಿಮಾರಂಗದಲ್ಲಿ ಚಿತ್ರ ನಿರ್ಮಾಣ ಕಷ್ಟದ ಕೆಲಸವಾಗಿದೆ. ಆದರೆ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ…
ಮಡಿಕೇರಿ ಅ.28 NEWS DESK : ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ನಡೆದ ಪ್ರೌಢ ಹಾಗೂ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಢಶಾಲಾ ವಿಭಾಗದ ಪಂದ್ಯಾವಳಿಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಸೃಷ್ಟಿ ಬಿ.ಎಸ್, ಶ್ರೀವತ್ಸ ಯು.ಜಿ ಹಾಗೂ ತರುಣ್ ಎನ್.ಎಂ., ಪ್ರಾಥಮಿಕ ವಿಭಾಗದ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಮಾಲೆಟ್ಟಿರ ಚಾಲ್ಸಿ, ಎಂ.ಎ.ಅಜಾನ್ ಸ್ಪರ್ಧಿಸಿದ್ದರು. ಇವರಿಗೆ ಚೆಸ್ ಮಾಸ್ಟರ್ ಮಣಿ ಮಾರ್ಗದರ್ಶನ ನೀಡಿದ್ದಾರೆ. ಈ ಒಂದು ಸಂದರ್ಭದಲ್ಲಿ ಕಾವೇರಿ ಶಾಲಾ ಅಧ್ಯಕ್ಷರಾದ ಸುದೇಶ್ ಬಿ.ಎಸ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ಶುಭಹಾರೈಸಿದರು.
ಮಡಿಕೇರಿ ಅ.28 NEWS DESK : ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು, ಅಮೃತ ಪ್ರಕಾಶ ಪತ್ರಿಕೆಯ ಸರಣಿ, 45ನೇಯ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಕಾವೇರಿ ಎಂಬ ಕೃತಿ ಬಿಡುಗಡೆಗೊಂಡಿತು. ಮಂಗಳೂರಿನ ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಾಂಡ ಕೃತಿ ಸೋಮಯ್ಯ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿ, ಕಾವೇರಿ ಮಾತೆಯ ಆದಿಯನ್ನು ವಿವರಣೆ ಮತ್ತು ವರ್ಣ ಚಿತ್ರದ ಮೂಲಕ ಕಣ್ಣಿಗೆ ಬಿ.ಕೆ.ಗಣೇಶ್ ರೈ ಅವರು ಕಟ್ಟಿಕೊಟ್ಟಿದ್ದಾರೆ. ಎಲ್ಲರಿಗೂ ಕಾವೇರಿ ಮಾತೆಯ ಪುರಾಣ ಕಥೆಗಳ ಪರಿಚಯ ಇರುವುದಿಲ್ಲ. ಈ ಕೃತಿಯ ಓದುಗರ ಮೂಲಕ ಕಥೆಯ ಸಾಕ್ಷಾತ್ಕಾರವಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಅರೇಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಗೌಡ ಮಾವಜಿ, ಕಾವೇರಿ ಮಾತೆಯ…
ವಿರಾಜಪೇಟೆ ಅ.28 NEWS DESK : ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದಲ್ಲಿರುವ ಶಕ್ತಿ ವ್ರದ್ಧಾಶ್ರಮದಲ್ಲಿ 12 ವರ್ಷದ ಬಾಲಕಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಮೂಲಕ ಮಾನವೀಯತೆ ಮೆರೆದಿದ್ದಾಳೆ. ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ನಿವಾಸಿ ಕಿರಣ್ ಹಾಗೂ ರಜಿತ ದಂಪತಿಗಳ ಪುತ್ರಿ ಕೆ.ಈಶಾನ್ವಿ(ನಮನ) ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ವೃದ್ಧಾಶ್ರಮದಲ್ಲಿ ಆಚರಣೆ ಮಾಡಿಕೊಳ್ಳುತ್ತಿದ್ದು, ಈ ಬಾರಿಯೂ ವೃದ್ಧ ಜೀವಗಳೊಂದಿಗೆ ಬೆರೆತು ಕೆಕ್ ಕತ್ತರಿಸಿ, ಸಿಹಿ ಹಂಚಿ ಅವರ ಸಂತೋಷಕ್ಕೆ ಕಾರಣಕರ್ತಳಾದಳು. ಕೆ.ಈಶಾನ್ವಿ(ನಮನ) ವಿರಾಜಪೇಟೆಯ ಅರಮೇರಿಯ ಎಸ್ಎಂಎಸ್ ಶಾಲೆಯಲ್ಲಿ 7 ತರಗತಿಯಲ್ಲಿ ಓದುತ್ತಿದ್ದಾಳೆ. ಆಸರೆ ಇಲ್ಲದ ವೃದರಿಗೆ ಸಹಾಯ ಮಾಡಬೇಕು, ಅವರೊಂದಿಗೆ ನಾವಿದ್ದೇವೆ ಅನ್ನುವ ಸಂದೇಶ ಕೊಡಬೇಕು, ಅವರು ಯಾವಾಗಲು ಸಂತೋಷದಿಂದ ಇರಬೇಕು, ಹಿರಿಯರನ್ನು ಗೌರವಿಸಬೇಕು ಅನ್ನುವ ಉದ್ದೇಶ. ಎಲ್ಲಕ್ಕಿಂತ ಮಿಗಿಲಾಗಿ ಮಾನವ ಯಾವಾಗಲು ಮಾನವೀಯ ನೆಲೆಗಟ್ಟಿನಲ್ಲಿ ಬದುಕಬೇಕು, ಮಾನವೀಯತೆ ಮೈಗೂಡಿಸಿಕೊಂಡು ಜೀವನ ಸಾಗಿಸಬೇಕು. ಏಕೆಂದರೆ ಮಾನವೀಯತೆ ಮರೆತರೆ ಸಮಾಜದಲ್ಲಿ ಬದುಕಲು ಸಾಧ್ಯವಿಲ್ಲ. ಈ ಹಿಂದೆ ನಮ್ಮ ಕುಟುಂಬದಲ್ಲಿ ಉಂಟಾದ ಅನಾರೋಗ್ಯ, ಅಪಘಾತ…
ವಿರಾಜಪೇಟೆ ಅ.28 NEWS DESK : ಮೈಸೂರಿನ ವಿ.ಯನ್.ಯೋಧ ಮಾರ್ಷಲ್ ಆಟ್ರ್ಸ್ ಅಕಾಡೆಮಿ ವತಿಯಿಂದ ಮೈಸೂರಿನ ಟೆರೆಷಿಯನ್ ಕಾಲೇಜಿನಲ್ಲಿ ನಡೆಸಲಾದ ಐದನೇ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಮೋಕ್ಷಿತಾ ಜಿ.ಎಸ್.ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಮೋಕ್ಷಿತಾ ಕುಮಿತೆ ವಿಭಾಗದಲ್ಲಿ ದ್ವಿತೀಯ ಮತ್ತು ಕತಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗೋಜೋ ಕಾಯ್ ಕರಾಟೆ ಶಾಲೆಯಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದು, ಕರಾಟೆ ಶಿಕ್ಷಕರಾದ ಸೆನ್ಸಾಯಿ ಎಂ.ಬಿ. ಚಂದ್ರನ್ ತರಬೇತಿ ನೀಡಿದ್ದಾರೆ. ಇವರು ವಿರಾಜಪೇಟೆಯ ದಿವ್ಯ ಹಾಗೂ ಶಶಿ ಕುಮಾರ್ ಅವರ ಪುತ್ರಿ.
ಮಡಿಕೇರಿ ಅ.28 NEWS DESK : ಮಕ್ಕಳ ಕ್ರೀಯಾಶೀಲ ಹಾಗೂ ಸೃಜನಶೀಲ ಚಟುವಟಿಕೆಗೆ ವಿದ್ಯಾರ್ಥಿಗಳ ಶ್ರಮ ಜೊತೆಗೆ, ಪೋಷಕರು ಹಾಗೂ ಗುರುಗಳ ಮಾರ್ಗದರ್ಶನವು ಅತ್ಯಗತ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿನಿ ಸಿಂಚನ ಅವರ ಯೋಗ ಸಾಧನೆ ಮೆಚ್ಚುವಂತದ್ದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಪರಮಪೂಜ್ಯ ಜಗದ್ಗುರು ಶ್ರೀಮನ್ನಿರಂಜನ ಪ್ರಣವ ಸ್ವರೂಪಿ ಶ್ರೀವಿಧ ದಾಸೋಹಿ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದಗಳೊಂದಿಗೆ ಕುಮಾರಿ ಸಿಂಚನ ಅವರು ಯೋಗದಲ್ಲಿ 3 ವಿಶ್ವ ದಾಖಲೆ(ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್)ಯ ಪ್ರದರ್ಶನದ ಕಾರ್ಯಕ್ರಮವು ಮದೆನಾಡು ಬಿಜಿಎಸ್ ಶಾಲೆ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಬಿಜಿಎಸ್ ಸಂಸ್ಥೆ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು. ಬಿಜಿಎಸ್ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿದೆ. ಬಡ ವಿದ್ಯಾರ್ಥಿಗಳ ಏಳಿಗೆಗೆ…






