ಮಡಿಕೇರಿ ಸೆ.20 NEWS DESK : ಕೊಡವ ಹಾಕಿ ಅಕಾಡೆಮಿಯ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ ನಡೆಯಬೇಕೆನ್ನುವ ಕೂಗು ಸರಿಯಲ್ಲ. ಯಾವುದೇ ಸಂಸ್ಥೆಯಲ್ಲಿ ಕಾರಣವಿಲ್ಲದೆ ಬದಲಾವಣೆಯ ಕೂಗು ಬರುವುದಿಲ್ಲ, ಚುನಾವಣೆ ನಡೆಯುವುದು ಸೂಕ್ತ ಎಂದು ಅಕಾಡೆಮಿಯ ವಿವಿಧ ಸ್ಥಾನಾಕಾಂಕ್ಷಿಗಳು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿರುವ ಮಚ್ಚಾರಂಡ ಪ್ರವೀಣ್ ತಿಮ್ಮಯ್ಯ ಅವರು ಕೊಡವ ಹಾಕಿ ಅಕಾಡೆಮಿಯನ್ನು ಸ್ಥಾಪಿಸಿದ ದಿ.ಪಾಂಡಂಡ ಕುಟ್ಟಪ್ಪ ಅವರು, ಮಹಾಸಭೆಯ ಒಪ್ಪಿಗೆ ಮೇರೆ ಬೈಲಾ ರಚಿಸಿ, ಅನುಮೋದನೆ ಪಡೆದು ಸಹಕಾರ ಕಾಯ್ದೆ ಅನ್ವಯ ನೋಂದಣಿ ಮಾಡಿರುತ್ತಾರೆ. ಈ ಬೈಲಾ ಅನುಸಾರ ಅಕಾಡೆಮಿಯ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಆಯ್ಕೆ ಮೂರು ವರ್ಷಗಳಿಗೊಮ್ಮೆ ನಡೆಸಬೇಕಾಗುತ್ತದೆ. ಅದರಂತೆ ಇದೀಗ ಚುನಾವಣೆಯನ್ನು ಘೋಷಿಸಲಾಗಿದ್ದು, ಚುನಾವಣೆ ನಡೆಯಲೇಬೇಕೆಂದು ಹೇಳಿದರು. ಚುನಾವಣೆ ಘೋಷಣೆಯಾದ ನಂತರ ಮೇಕೇರಿರ ರವಿ ಪೆಮ್ಮಯ್ಯ ಹಾಗೂ ಪಾಂಡಂಡ ಕುಟ್ಟಪ್ಪ ಅವರ ಪುತ್ರ ಬೋಪಣ್ಣ ಅವರ ತಂಡ ಕಣಕ್ಕಿಳಿದಿದೆ. ಈ ಹಂತದಲ್ಲಿ ಜಿಲ್ಲೆಯ ಕೆಲವು ಕೊಡವ ಮುಖಂಡರು ಚುನಾವಣೆ ಇಲ್ಲದೆ…
ಲೇಖಕ: admin
ಮಡಿಕೇರಿ ಸೆ.20 NEWS DESK : ರಾಜ್ಯ ಸರಕಾರದ ಮೂಲಕ ನಡೆಯಲಿರುವ ಜಾತಿ ಜನಗಣತಿ ಸಂದರ್ಭ ಸರ್ವ ಕೊಡವರು ಧರ್ಮವನ್ನು ಹಿಂದೂ ಮತ್ತು ಜಾತಿಯನ್ನು ಕೊಡವ ಎಂದು ಯಾವುದೇ ಗೊಂದಲವಿಲ್ಲದೆ ನಮೂದಿಸುವಂತೆ ವಿವಿಧ ಕೊಡವ ಸಮಾಜಗಳ ಪ್ರಮುಖರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ನಾಪೋಕ್ಲು ಕೊಡವ ಸಮಾಜದ ಮಾಜಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅವರು, ಜಾತಿ ಹಾಗೂ ಧರ್ಮ ಎರಡನ್ನೂ ಕೊಡವ ಎಂದು ನಮೂದಿಸುವಂತೆ ಕೆಲವರು ಕರೆ ನೀಡಿರುವುದು ವಿಷಾದನೀಯ ಮತ್ತು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡವರು ಸಾಮರಸ್ಯದಿಂದ ಬದುಕು ಸಾಗಿಸುತ್ತಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕೊಡವ ಜನಾಂಗ ವಿಶಿಷ್ಟವಾದ ಭವ್ಯ ಸಂಸ್ಕೃತಿಯನ್ನು ಹೊಂದಿದೆ. ಕೊಡವ ಸಂಸ್ಕೃತಿ ಹಿಂದೂ ಧರ್ಮದೊಂದಿಗೆ ಹೊಂದಿಕೊಂಡಿದೆ. ಕೊಡವರು ನಾಗನಸ್ಥಾನ, ಅಯ್ಯಪ್ಪ ಬನ ಮತ್ತು ಊರಿನಲ್ಲಿ ಭಗವತಿಯನ್ನು ಹಿಂದೂ ಸಂಪ್ರದಾಯದ ಪ್ರಕಾರವೇ ಪೂಜಿಸುತ್ತಾರೆ. ಪ್ರತಿವರ್ಷ ಭಗವತಿ ಉತ್ಸವ ಹಿಂದು ಸಂಪ್ರದಾಯದಂತೆಯೇ ನಡೆಯುತ್ತದೆ. ಭಗವತಿ ದೇವಾಲಯಗಳಲ್ಲಿ ಕೊಡವರೇ ತಕ್ಕ ಮುಖ್ಯಸ್ಥರಾಗಿರುತ್ತಾರೆ. ತಲಕಾವೇರಿಯಲ್ಲಿ ಕುಲದೇವತೆ…
ಮಡಿಕೇರಿ ಸೆ.20 NEWS DESK : ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ಆಡಳಿತದ ವೇಗವನ್ನು ಕಂಡು ಗಲಿಬಿಲಿಗೊಂಡಿರುವ ಕಾಂಗ್ರೆಸ್ಸಿಗರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ನಗರದ ರಸ್ತೆಗಳ ಗುಂಡಿಮುಚ್ಚುವ ಕಾರ್ಯ ಟೆಂಡರ್ ಪ್ರಕ್ರಿಯೆಯ ಮೂಲಕವೇ ನಡೆಯಬೇಕು ಎಂಬ ಉದ್ದೇಶದಿಂದ ನಿಯಮ ಬಾಹಿರವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡದೆ ಮತ್ತು ಟೆಂಡರ್ ಪ್ರಕ್ರಿಯೆ ನಡೆಸದೆ ಎನ್ಡಿಆರ್ಎಫ್ ಹಣದಲ್ಲಿ ಏಕಾಏಕಿ ಗುಂಡಿಮುಚ್ಚುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದನ್ನು ಪ್ರಶ್ನಿಸಿದ ನಮ್ಮ ವಿರುದ್ಧ ಕಾಂಗ್ರೆಸ್ ವಕ್ತಾರರು ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ ಎನ್ನುವ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುಮಾರು 43 ಲಕ್ಷ ರೂ.ಗಳ ಕಾಮಗಾರಿಯನ್ನು ಒಬ್ಬನೇ ಗುತ್ತಿಗೆದಾರ ನಿರ್ವಹಿಸುತ್ತಿದ್ದಾರೆ. ಇದನ್ನು ಗಮನಿಸಿದ ನಗರದ ಇತರ ಗುತ್ತಿಗೆದಾರರು ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆ ಅಧ್ಯಕ್ಷರು ಟೆಂಡರ್ ನಡೆಸದೆ ನಡೆಯುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ. ಎಲ್ಲಾ…
ನಾಪೋಕ್ಲು ಸೆ.19 NEWS DESK : ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ “ಬದುಕಿಗೊಂದು ಆಸರೆಯಾಗೋಣ” ಕಾರ್ಯಕ್ರಮದ ಅಡಿಯಲ್ಲಿ ಸಂಗ್ರಹಿಸಿದ ಸಹಾಯಧನವನ್ನು ಸಮುದಾಯದ ನೊಂದ ಕುಟುಂಬಕ್ಕೆ ನೀಡಿ ಸಾಂತ್ವನ ಹೇಳಿದರು. ಅನಾರೋಗ್ಯದಿಂದ ಬಳಲುತ್ತಿರುವ ಚೇರಂಬಾಣೆಯ ಶಿವಣ್ಣ ಅವರ ಪತ್ನಿ ಗೀತಾ ಅವರ ಚಿಕಿತ್ಸೆಗೆ ಜಿಲ್ಲೆಯ ಕುಲಬಾಂಧವರಿಂದ ಸಂಗ್ರಹಗೊಂಡ 40,700 ರೂ. ಸಹಾಯಧವನ್ನು ಜಿಲ್ಲಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅವರ ಮನೆಗೆ ತೆರಳಿ, ಯೋಗಕ್ಷೇಮ ವಿಚಾರಿಸಿ ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ ಮೂಲ್ಯ, ಜಿಲ್ಲೆಯ ಮತ್ತು ಹೊರ ಜಿಲ್ಲೆಯ ಕುಲಬಾಂಧವರು ನೀಡಿದ ದೇಣಿಗೆಯನ್ನು ಶಿವಣ್ಣ ದಂಪತಿಗಳಿಗೆ ನೀಡಲಾಗಿದೆ. ಸರ್ವ ರೀತಿಯ ಸಹಕಾರ ನೀಡಿದ ಜಿಲ್ಲೆಯ ಮತ್ತು ಹೊರ ಜಿಲ್ಲೆಯ ಕುಲಬಾಂಧವರಿಗೆ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದರು. ಮುಂದೆಯೂ ಇದೇ ರೀತಿಯ ಸಹಕಾರ ದೊರಕಲಿ ಎಂದು ವಿನಂತಿಸಿದರು. ಕೊಡಗು ಜಿಲ್ಲಾ ಕುಲಾಲ ಕುಂಬಾರ…
ನಾಪೋಕ್ಲು ಸೆ.20 NEWS DESK : ಜೀವನದಲ್ಲಿ ಹೋರಾಡುವ ಶಕ್ತಿ ಕ್ರೀಡಾಂಗಣದಲ್ಲಿ ಸಿಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಲ್.ಚಿದಾನಂದ ಕುಮಾರ್ ಹೇಳಿದರು. ಕೊಡಗು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನಾಪೋಕ್ಲುವಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಚೆರಿಯಪರಂಬುವಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಮಡಿಕೇರಿ ತಾಲ್ಲುಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ, ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆ ಒಂದು ಗುರುವಿನ ಹಾಗೆ. ಸೋಲು ಗೆಲುವೆಂಬ ಸಮಬಾಳ್ವೆಯ ಪಾಠವನ್ನು ಕಲಿಸುತ್ತದೆ ಎಂದರು. ಕ್ರೀಡಾಕೂಟದ ಧ್ವಜಾರೋಹಣವನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ನೆರವೇರಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಎಸ್ಡಿಎಂಸಿ ಉಪಾಧ್ಯಕ್ಷರಾದ ಎನ್.ಎಸ್.ಉದಯಶಂಕರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ತಮ್ಮ ಅನಿಸಿಕೆ ವ್ಯಕ್ತಪಡಿಸಿರು. ಕ್ರೀಡಾಕೂಟದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿಶಾಲ ಕುಶಾಲಪ್ಪ, ಮಡಿಕೇರಿ ತಾಲೂಕುವಿನ ವಿವಿಧ ಪದವಿ ಪೂರ್ವ ಕಾಲೇಜುಗಳ ಬೋಧಕರು…
ನಾಪೋಕ್ಲು ಸೆ.22 NEWS DESK : ಮೂರ್ನಾಡು ಪದವಿ ಕಾಲೇಜಿನ ಎನ್ಎಸ್ಎಸ್ ಘಟಕವನ್ನು ಉದ್ಘಾಟಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮೂರ್ನಾಡು ಮಾರುತಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಎಂ.ಡಿ.ಹೇಮಾವತಿ ಅವರು ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ಪೋಷಕರು ಹಾಗೂ ಶಿಕ್ಷಕರಿಗೆ ವಿಧೇಯರಾಗಿ ಸಮಾಜಕ್ಕೆ ಆಸ್ತಿ ಆಗಬೇಕು ಎಂದು ಕರೆ ನೀಡಿದರು. ಕಾಲೇಜಿನ ನಿರ್ದೇಶಕರಾದ ಎಂ.ಕೆ.ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಲ್ಮಾ, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಎನ್ಎಸ್ಎಸ್ ಘಟಕದ ಯೋಜನಾಧಿಕಾರಿಗಳಾದ ಕಲ್ಪನಾ ಪ್ರತಿಜ್ಞಾವಿಧಿ ಬೋಧಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಸೆ.20 NEWS DESK : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಶರನ್ನವರಾತ್ರಿ ಅಂಗವಾಗಿ ಸೆ.22 ರಿಂದ ಅ.2ರ ವರೆಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ. ಪ್ರತೀ ದಿನ ಬೆಳಿಗ್ಗೆ 9.30 ಗಂಟೆಗೆ ಅಲಂಕಾರ ಪೂಜೆ ಜರುಗಲಿದೆ. ಸೆ.30 ರಂದು ದುರ್ಗಾಷ್ಟಮಿಯ ಅಂಗವಾಗಿ ಬೆಳಿಗ್ಗೆ 9.30 ಗಂಟೆಗೆ ಗಣಪತಿ ಹೋಮ, ಶ್ರೀ ದುರ್ಗಾ ಹವನ ನಡೆಯಲಿದೆ. ಮಧ್ಯಾಹ್ನ ಅನ್ನ ಸಂಪರ್ತಣೆ ನೆರವೇರಲಿದ್ದು, ಸಂಜೆ 7 ಗಂಟೆಗೆ ವಿಶೇಷ ದುರ್ಗಾ ಪೂಜೆ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
ವಿರಾಜಪೇಟೆ ಸೆ.20 NEWS DESK : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ ವ್ಯವಸ್ಥೆ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್ ಹಾಗೂ ಇಂಟರ್ನ್ ಷಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ ಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್ ಗಳಲ್ಲೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ. ಜೊತೆಗೆ ಗ್ರಾಮೀಣ ಭಾಗದ…
ಸೋಮವಾರಪೇಟೆ, ಸೆ.19 NEWS DESK : ಕೊಡಗು ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಸೋಮವಾರಪೇಟೆಯ ಸೇಂಟ್ ಜೋಸೆಫ್ ಪದವಿ ಕಾಲೇಜಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಬೆಳಿಗ್ಗೆ ಆರಂಭವಾದ ಟ್ರಯಲ್ಸ್ನಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಬಂದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸಂದರ್ಭ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ಅಂತರರಾಷ್ಟ್ರೀಯ ಹ್ಯಾಂಡ್ಬಾಲ್ ಆಟಗಾರ ಗ್ರೀನಿಡ್ಜ್ ಡಿ.ಕುನ್ಹಾ ಟ್ರಯಲ್ಸ್ ಉದ್ಘಾಟಿಸಿ, ಆಟಗಾರರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಸೋಮವಾರಪೇಟೆಯ ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರಾದ ರೆವರೆಂಡ್ ಫಾದರ್ ಅವಿನಾಶ್ ಹಾಜರಿದ್ದರು. ಆಯ್ಕೆ ಪ್ರಕ್ರಿಯೆಯ ಮೇಲ್ವಿಚಾರಣೆಗೆ, ಗ್ರೀನಿಡ್ಜ್ ಡಿ . ಕುನ್ಹಾ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಸೋಮವಾರಪೇಟೆಯ BTCG ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗುರು ಪ್ರಸಾದ್, ಹಾಗೂ ಆತಿಥೇಯ ಸೇಂಟ್ ಜೋಸೆಫ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಿವಕುಮಾರ್ ಕೆ.ಆರ್ ಅವರನ್ನೊಳಗೊಂಡ ಸಮಿತಿಯು ನೇತೃತ್ವ ವಹಿಸಿತು. ಸುಮಾರು…
ಸೋಮವಾರಪೇಟೆ ಸೆ.19 NEWS DESK : ಕಾಗಡಿಕಟ್ಟೆ ಆರೋಗ್ಯ ಉಪಕೇಂದ್ರದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಸರ್ಕಾರ ಗರ್ಭಿಣಿಯರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಅಪೌಷ್ಟಿಕತೆ ತಡೆಗಟ್ಟುವುದು, ರಕ್ತಹೀನತೆ ನಿವಾರಣೆ, ಸೀಮಂತ, ಅನ್ನಪ್ರಾಶನ ಮತ್ತು ಪೋಷಣಾ ಅಭಿಯಾನದ ಬಗ್ಗೆ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ದಿವ್ಯ ತಿಳಿಸಿದರು. ಪಂಚಾಯಿತಿ ಉಪಾಧ್ಯಕ್ಷೆ ರಶೀದ, ಪಿಡಿಓ ಸ್ಮಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಸವಿತಾ, ಪೂರ್ಣಿಮ, ಸಿಬ್ಬಂದಿಗಳಾದ ಮಧುಸೂದನ್, ವಿಶ್ವರೂಪಚಾರ್ಯ ಇದ್ದರು.






