ಮಡಿಕೇರಿ ಸೆ.19 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಹಾಗೂ ಎಫ್11 ಗಾಳಿಬೀಡು ಫೀಡರ್ನಲ್ಲಿ ಸೆಪ್ಟೆಂಬರ್, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಸರಾ ಹಬ್ಬದ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್, ಮಹದೇವಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐ.ಟಿಐ ಹಿಂಭಾಗ, ಕಾವೇರಿ ಬಡಾವಣೆ, ಟಿಜಾನ್ ಬಡಾವಣೆ, ಅಬ್ದುಲ್ ಕಲಾಂ ಬಡಾವಣೆ, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕುಡಿಯುವ ನೀರು, ಕೂಟುಹೊಳೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಸೆ.19 NEWS DESK : ಮಿತವಾದ ಆಹಾರ ಸೇವನೆಯಿಂದ ಆರೋಗ್ಯಕರ ಚಟುವಟಿಕೆಯಿಂದ ಇರಲು ಸಾಧ್ಯವೆಂದು ಆಹಾರ ಸುರಕ್ಷತಾ ಸಹಾಯಕ ಅಧಿಕಾರಿ ಮಂಜುನಾಥ್ ಅಭಿಪ್ರಾಯಿಸಿದರು. ಕೋಪಟ್ಟಿ ಸಮೀಪದ ಚೆರಂಡೇಟಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನದ ಅಡಿಯಲ್ಲಿ ಅರಿವು ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮತೋಲನ ಆಹಾರದ ಕುರಿತು ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿದಿನದ ಬದುಕಿನ ಭಾಗವಾಗಬೇಕು ಎಂದು ತಿಳಿಸಿದರು. ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಮಾತನಾಡಿ, ಪ್ರತಿದಿನದ ಆಹಾರದಲ್ಲಿ ಸಮತೋಲನ ಆಹಾರ ಸೇವನೆ ಅಗತ್ಯವಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸಿಗುವ ಹಸಿರು ಸೊಪ್ಪು, ತರಕಾರಿ, ಕಾಳು, ಹಾಲು, ಮೊಟ್ಟೆ ಹೆಚ್ಚು ಹೆಚ್ಚು ಸೇವಿಸಬೇಕು ಉದಾಸೀನ ಮಾಡಿದರೆ ಹಲವಾರು ಕಾಯಿಲೆಗಳಿಗೆ ನಾವೇ ಆಸ್ಪಾದ ನೀಡಿದಂತಾಗುತ್ತದೆ ಎಂದು ಎಚ್ಚರಿಸಿದರು. ಸರ್ಕಾರ ಹಲವಾರು ಯೋಜನೆಗಳ ಮೂಲಕ ಗರ್ಭಿಣಿಯರು, ಮಕ್ಕಳಿಗೆ ಮತ್ತು ರೋಗಿಗಳಿಗೆ ಸೌಲಭ್ಯ ನೀಡುತ್ತಿದ್ದರೂ ಇನ್ನೂ ರಕ್ತಹೀನತೆ ಯಿಂದ ಸಾವುಗಳು ಸಂಭವಿಸುತ್ತಿರುವುದು ಬೇಸರ ಎಂದರು. ಆಹಾರ ಪದ್ದತಿ, ಜೀವನ ಶೈಲಿಯಲ್ಲಿ ಬದಲಾವಣೆಯಿಂದ ಸ್ವಸ್ಥ ಆರೋಗ್ಯಕರ…
ಮಡಿಕೇರಿ ಸೆ.19 NEWS DESK : ನಗರದ ತ್ಯಾಗರಾಜ ಕಾಲೋನಿ ಮತ್ತು ಗದ್ದಿಗೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮನೆ ಮನೆಗೆ ತೆರಳಿ ಜ್ವರ ಸಮೀಕ್ಷೆ ನಡೆಸಿ ಜನರಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸಲಾಯಿತು. ಸಮೀಕ್ಷೆ ಕಾರ್ಯದಲ್ಲಿ ನಗರಸಭೆ ಸದಸ್ಯರಾದ ಮೇರಿ ವೆಜಿಲ್ ಅವರು ಪಾಲ್ಗೊಂಡು ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸುವಂತೆ ಜನರಿಗೆ ಕರೆ ನೀಡಿ ನಗರಸಭೆಯಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದರು. ಜಿಲ್ಲಾ ಎಂಟಮಾಲಿಜಿಸ್ಟ್ ಮಂಜುನಾಥ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿ ಇಟ್ಟುಕೊಂಡರೆ ಡೆಂಗ್ಯೂ, ಇಲಿ ಜ್ವರ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಬರುವುದಿಲ. ಯಾವುದೇ ಜ್ವರವಿರಲಿ ಹತ್ತಿರದ ಆಸ್ಪತ್ರೆಯ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಕೃತ ಅವರು ಪ್ರತಿ ಮನೆಯ ಮುಂದಿನ ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು, ಮನೆಯ ಒಳಗೆ ಮತ್ತು ಹೊರಗೆ ನೀರು ತುಂಬಿಸುವ ತಾಣಗಳನ್ನು…
ಮಡಿಕೇರಿ ಸೆ.19 NEWS DESK : ಜಿಲ್ಲೆಯ ಜನತೆಯ ಬಹುದಿನಗಳ ನಿರೀಕ್ಷೆಯಂತೆ ಸುಮಾರು 10.50 ಕೋಟಿ ರೂ. ವೆಚ್ಚದ ‘ಹೃದ್ರೋಗ ತಪಾಸಣಾ ಕೇಂದ್ರ’ ಶೀಘ್ರದಲ್ಲೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ಆರಂಭಗೊಳ್ಳಲ್ಳಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಹೆಚ್.ಕೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಸಹಕಾರದೊಂದಿಗೆ ನಗರದ ಕಾವೇರಿ ಹಾಲ್ನಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬ ವರ್ಗದವರಿಗೆ ಆಯೋಜಿಸಲಾಗಿದ್ದ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಡಿಕೇರಿ ಕ್ಷೇತ್ರದ ಶಾಸಕರ ಅವಿರತ ಪರಿಶ್ರಮದಿಂದ ಹೃದ್ರೋಗ ತಪಾಸಣಾ ಕೇಂದ್ರದ ಸೌಲಭ್ಯ ಜಿಲ್ಲೆಗೆ ಲಭ್ಯವಾಗುತ್ತಿದೆ. ಉದ್ದೇಶಿತ ಹೃದ್ರೋಗ ತಪಾಸಣಾ ಕೇಂದ್ರವು ‘ಪಿಪಿಪಿ’ ಯೋಜನೆಯಡಿ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ಉದ್ದೇಶಿತ ಹೃದ್ರೋಗ ತಪಾಸಣಾ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲನಾ ಕಾರ್ಯ ನಡೆದಿದೆ ಎಂದರು. ಇಲ್ಲಿಯವರೆಗು ಗಂಭೀರ ಆರೋಗ್ಯ ಸಮಸ್ಯೆಗಳ ಸಂದರ್ಭ ಸಾರ್ವಜನಿಕರು…
ಮಡಿಕೇರಿ ಸೆ.19 NEWS DESK : ಮಡಿಕೇರಿ ದಸರಾ ಜನೋತ್ಸವಕ್ಕೆ ವಿಶೇಷ ಮೆರುಗು ನೀಡುವ ಉದ್ದೇಶದಿಂದ ದಸರಾ ದಶಮಮಂಟಪ ಸಮಿತಿ ದೀಪಾಲಂಕಾರ, ರಂಗೋಲಿ ಮತ್ತು ಸೆಲ್ಫಿ ಸ್ಪರ್ಧೆಯನ್ನು ಆಯೋಜಿಸಿದೆ. ಸೆ.22 ರಂದು ಕರಗೋತ್ಸವ ಆರಂಭಗೊಳ್ಳುವ ಸಂಜೆ ಮನೆ ಮತ್ತು ಅಂಗಡಿಗಳನ್ನು ಹಣತೆ, ಕಾಲುದೀಪ, ತೂಗುದೀಪಗಳಿಂದ ಅಲಂಕರಿಸಬೇಕು. ಅಲ್ಲದೆ ಮನೆಗಳ ಮುಂದೆ ಸುಂದರವಾದ ವರ್ಣರಂಜಿತ ಚುಕ್ಕಿ ರಂಗೋಲಿಯನ್ನು ಬಿಡಿಸಬೇಕು. ಈ ಎರಡೂ ಸ್ಪರ್ಧೆಗಳ ವಿಜೇತರಿಗೆ ವಿಶೇಷ ಬಹುಮಾನವನ್ನು ನೀಡಲಾಗುವುದು ಎಂದು ದಸರಾ ದಶಮಮಂಟಪ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಸೆಲ್ಫಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಆಸಕ್ತರು ಸಾಂಪ್ರದಾಯಿಕ ಉಡುಪಿನಲ್ಲಿ ಕುಟುಂಬದ ಸದಸ್ಯರ ಸಹಿತ ಸೆಲ್ಫಿ ತೆಗೆಯಬೇಕು. ವಿಜೇತ ಕುಟುಂಬಕ್ಕೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು. ಸೆಲ್ಫಿ ಸ್ಪರ್ಧೆಗಾಗಿ ಮೂರು ಸೆಲ್ಫಿ ಪಾಯಿಂಟ್ ಗಳನ್ನು ನಿಗಧಿ ಮಾಡಲಾಗಿದೆ. ಬನ್ನಿ ಮಂಟಪದ ಮುಂಭಾಗದ ಅಕ್ಷಯ ಲಾಡ್ಜ್, ಮಹದೇವಪೇಟೆಯ ಅರವಿಂದ್ ಜ್ಯುವೆಲ್ಲರಿ ಮತ್ತು ಸ್ಕೈಗೋಲ್ಡ್ ಎದುರು ಸೆಲ್ಫಿ ತೆಗೆಯಬೇಕು…
ಬೆಂಗಳೂರು ಸೆ.19 NEWS DESK : ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದರು. :: ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು :: ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ , ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು…
ಸುಂಟಿಕೊಪ್ಪ ಸೆ.19 NEWS DESK : ನಾಕೂರು ಶಿರಂಗಾಲ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಎಸ್.ಶಿವಮ್ಮ ಅವರನ್ನು ನಾಕೂರು ಗ್ರಾಮದ ಲಕ್ಷ್ಮಿ ಮಹಿಳಾ ಒಕ್ಕಲಿಗ ಗೌಡ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಕಳೆದ 16 ವರ್ಷಗಳ ಕಾಲ ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಎಸ್.ಶಿವಮ್ಮ ಅವರನ್ನು ಸಂಘದ ಅಧ್ಯಕ್ಷೆ ಜಾಜಿ ಪುಟ್ಟರಾಜು, ಕಾರ್ಯದರ್ಶಿ ಶಿಲ್ಪ ಗಿರೀಶ್ ಹಾಗೂ ಸಂಘ ಪದಾಧಿಕಾರಿಗಳು ಸೇವೆಯನ್ನು ಪರಿಗಣಿಸಿ ಗ್ರಾಮದಲ್ಲಿ ಶಾಲು ಹೊದಿಸಿ ಫಲ ತಾಂಬೂಲ ನೀಡಿ ಸನ್ಮಾನಿಸಿ ಗೌರವಿಸಿದರು.
ಸುಂಟಿಕೊಪ್ಪ ಸೆ.19 NEWS DESK : ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 42,36,318 ರೂ ಗಳ ಲಾಭಗಳಿಸಿದ್ದು ‘ಎ’ ತರಗತಿಯನ್ನು ಹೊಂದಿದೆ. ಸದಸ್ಯರಿಗೆ ಶೇ.18 ರಷ್ಟು ಡಿವಿಡೆಂಡ್ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಎನ್.ಎಂ.ಉತ್ತಪ್ಪ ಹೇಳಿದರು. ಸಂಘದ ಸಭಾಂಗಣದಲ್ಲಿ ನಡೆದ ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದಲ್ಲಿ 1,670 ಮಂದಿ ಸದಸ್ಯರುಗಳಿದ್ದು, ಒಟ್ಟು ಪಾಲು ಬಂಡವಾಳ ರೂ.1,29,40,235 ಆಗಿರುತ್ತದೆ. 31-03-2025 ಸಂಘವು 10,80,76,290 ರೂಗಳ ಠೇವಣಿ ಸಂಗ್ರಹಿಸಲಾಗಿದೆ. ಕಳೆದ ಬಾರಿಗಿಂತ 1,28,43,961 ಹೆಚ್ಚಿಗೆ ಠೇವಣಿ ಸಂಗ್ರವಾಗಿದೆ. ಕೆಸಿಸಿ ಸಾಲ 380 ಸದಸ್ಯರಿಗೆ 9,8341,500 ರೂ. ನೀಡಲಾಗಿದೆ. ಈ ಪೈಕಿ ರೂ.9,55,18,500 ಡಿಸಿಸಿ ಬ್ಯಾಂಕ್ನಿಂದ ಹಾಗೂ ಸ್ವಂತ ಬಂಡವಾಳದಿಂದ 28,23000 ರೂ. ಸಾಲ ನೀಡಲಾಗಿದೆ. ಜಾಮೀನು ಸಾಲ 31.03.2025 ರವರೆಗೆ 91,95,000 ರೂ.ವಿತರಿಸಲಾಗಿದೆ. ಈ ಪೈಕಿ ರೂ81,399 ವಾಯಿದೆ ಮೀರಿದ ಸಾಲವಿದೆ ವಾಹನ ಸಾಲ ಆಭರಣ ಸಾಲ, ಗೊಬ್ಬರ ಸಾಲ,…
ವಿರಾಜಪೇಟೆ ಸೆ.19 NEWS DESK : ಮಗ್ಗುಲದ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾ ಸಂಸ್ಥೆಯ ವತಿಯಿಂದ ನಾಂಗಲದಲ್ಲಿ ಪುನರ್ ನವೀಕರಿಸಲಾದ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿದರು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಆಡಳಿತ ಮಂಡಳಿಯು ತನ್ನ ಸ್ವಂತ ಖರ್ಚಿನಿಂದಲೇ ಬಸ್ ತಂಗುದಾಣವನ್ನು ಪುನರ್ ನವೀಕರಿಸಿ ಸಾರ್ವಜನಿಕ ಸೇವೆಗೆ ಒದಗಿಸಿತು. ಈ ಸಂದರ್ಭ ಮಾತನಾಡಿದ ಶ್ರವಣ ಹೀನರ ಸಂಘದ ಅಧ್ಯಕ್ಷ ಜಿ.ವಿಲಿಯಮ್, ಪರಸ್ಪರ ಸಹಕಾರ ಮನೋಭಾವನೆಯು ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಗೌರವಯುತ ಬಾಳ್ವೆ, ಸೇವಾ ಮನೋಭಾವನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು. ನಾವು ಸೇವೆಗಳನ್ನು ಮಾಡುವುದರಿಂದ ಸಮಾಜದಲ್ಲಿ ನಮ್ಮ ಪಾಲ್ಗೊಳ್ಳುವಿಕೆಯನ್ನು ವ್ಯಕ್ತಪಡಿಸಲು ಸಾಧ್ಯ ಎಂದರು. ಬಿಟ್ಟಂಗಾಲ ಗ್ರಾ.ಪಂ ಅಧ್ಯಕ್ಷರಾದ ಪ್ರಸನ್ನ ಸುಬ್ಬಯ್ಯ ಮಾತನಾಡಿ, ನಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಬಸ್ ತಂಗುದಾಣವನ್ನು ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾ ಸಂಸ್ಥೆಯು ಸುಸಜ್ಜಿತವಾಗಿ ನವೀಕರಣಗೊಳಿಸಿದೆ. ವಿದ್ಯಾ ಸಂಸ್ಥೆಯ ಸಾಮಾಜಿಕ ಕಳಕಳಿ ಮಾದರಿಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಹಂತದಿಂದಲೇ ವೈವಿಧ್ಯತೆಯಲ್ಲಿ ಏಕತೆ ಎನ್ನುವ ದ್ಯೇಯ ವಾಕ್ಯದೊಂದಿಗೆ ವಿದ್ಯಾಭ್ಯಾಸವನ್ನು…
ಕುಶಾಲನಗರ ಸೆ.19 NEWS DESK : ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಗತಿಕರು ಹಾಗೂ ವಿಕಲಚೇತನ ಕುಟುಂಬವೊಂದಕ್ಕೆ ನಿರ್ಮಿಸಿಕೊಡಲು ಉದ್ದೇಶಿಸಿರುವ ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಕುಶಾಲನಗರ ಜನತಾ ಕಾಲೊನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ವಿಕಲಚೇತನ ಕುಟುಂಬ ನಾದ್ಯ ಎಂಬುವವರಿಗೆ ಟ್ರಸ್ಟ್ ವತಿಯಿಂದ ಸುಂದರನಗರ ಗ್ರಾಮದಲ್ಲಿ 3 ಸೆಂಟ್ ಜಾಗ ಖರೀದಿ ಮಾಡಿ ಅಂದಾಜು ರೂ.8.5 ಲಕ್ಷ ವೆಚ್ಚದಲ್ಲಿ ವಸತಿ ಭಾಗ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಕೂಡಿಗೆ ಜುಮ್ಮಾ ಮಸೀದಿ ಧರ್ಮಗುರು ಹೈದರಾಲಿ ಶಾಹದಿ ಖತ್ತಿಬ್ ಹಾಗೂ ಟ್ರಸ್ಟ್ ಅಧ್ಯಕ್ಷ ಎಂ.ಹೆಚ್.ಮಹಮ್ಮದ್ ಹಾಗೂ ಪದಾಧಿಕಾರಿಗಳು ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು. ಅಧ್ಯಕ್ಷ ಎಂ.ಹೆಚ್.ಮಹಮ್ಮದ್ ಮಾತನಾಡಿ ಕೊಡಗಿನ ಬಡವರ ಬೆಳಕು ಚಾರಿಟೇಬಲ್ ಟ್ರಸ್ಟ್ ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಜಾತಿ, ಭೇದ, ಧರ್ಮ ಮರೆತು ಸಮಾಜದಲ್ಲಿ ಬಡವರ ಹಾಗೂ ನಿರ್ಗತಿಕರ ಏಳಿಗೆಗೆ ಶ್ರಮಿಸುತ್ತಿದೆ. ಬಡ ಹೆಣ್ಣು ಮಕ್ಕಳಿಗೆ ಕಲ್ಯಾಣ ಭಾಗ್ಯ, ವಸತಿ…






