ಲೇಖಕ: admin

ಮಡಿಕೇರಿ NEWS DESK ಮಾ.25 : 1785 ಡಿ.12 ರಂದು ಕೊಡವರ ನರಮೇಧ ನಡೆದ ದೇವಟ್ ಪರಂಬುವಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪುಷ್ಪನಮನ ಸಲ್ಲಿಸಿತು. ಮರಣ ಹೊಂದಿದ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ ಹೋರಾಟಕ್ಕೆ ಜಯ ಕೋರಿದರು. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಪ್ರಾದೇಶಿಕ ಸ್ವಾಯತ್ತತೆ ನೀಡಬೇಕು, ಬುಡಕಟ್ಟು ಸ್ಥಾನಮಾನ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಂಸ್ಕೃತಿ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರö್ಯಕ್ಕಾಗಿ ಸಂವಿಧಾನದಡಿ  ವಿಶೇಷ ಖಾತರಿ ನೀಡಬೇಕು, ದೇವಟ್‌ಪರಂಬುವಿನಲ್ಲಿ ಸ್ಮಾರಕ ತಾಣ ಸ್ಥಾಪಿಸಬೇಕು, ವಿಶ್ವ ರಾಷ್ಟ್ರ ಸಂಸ್ಥೆಯ ಹತ್ಯಾಕಾಂಡ ಸ್ಮಾರಕ ಪಟ್ಟಿಯಲ್ಲಿ ದೇವಟ್ ಪರಂಬ್ ಕೊಡವ ನರಮೇಧವನ್ನು ಸೇರಿಸಬೇಕು, ಕೊಡವ ಇತಿಹಾಸ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಬೇಕು, ಕೊಡವ ಇತಿಹಾಸವನ್ನು ತಿರುಚಿ ವಿರೂಪಗೊಳಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, 2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವ ಸಮುದಾಯಕ್ಕೆ ಪ್ರತ್ಯೇಕ “ಕೋಡ್” ಮತ್ತು “ಕಾಲಂ” (ಅಂಕಣ) ನೀಡಬೇಕು, ಕೊಡವ ಸಮುದಾಯವನ್ನು ಒಂದು ವಿಶಿಷ್ಟವಾದ ಆದಿಮಸಂಜಾತ ಗುಂಪಾಗಿ ಗುರುತಿಸಬೇಕು, ನಿಖರವಾದ…

Read More

ಮಡಿಕೇರಿ ಮಾ.25 NEWS DESK : ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯಲು ಹೆಣ್ಣು ಮಕ್ಕಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ನೀಡುವ ಕಾರ್ಯಕ್ಕೆ ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ  ದೊರೆಯಿತು. ಈ ಸಂದರ್ಭ ಆಡಳಿತ ವೈದ್ಯಾಧಿಕಾರಿ ಡಾ.ಪಾರ್ವತಿ ಮಾತನಾಡಿ, ಅಪಾಯಕಾರಿ ಕ್ಯಾನ್ಸರ್ ನಂತಹ ಪಿಡುಗು ತೊಲಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 14 ವರ್ಷದ ಮೇಲ್ಪಟ್ಟು 15 ವರ್ಷದ ಒಳಗಿನ ಎಲ್ಲಾ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹೆಚ್‍ಪಿವಿ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಮಕ್ಕಳ ಭವಿಷ್ಯಕ್ಕಾಗಿ ಎಲ್ಲಾ ಪೋಷಕರು ಈ ಅಭಿಯಾನದಲ್ಲಿ ಇಲಾಖೆಯೊಂದಿಗೆ ಸಹಕಾರ ನೀಡಿ, ಲಸಿಕೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಲಸಿಕೆಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಅತ್ಯುತ್ತಮ ಮತ್ತು ಸುರಕ್ಷಿತ ಗುಣಮಟ್ಟದ ಲಸಿಕೆ ಇದಾಗಿದ್ದು ಯಾವ ರೀತಿಯ ಅಡ್ಡ ಪರಿಣಾಮ ಇರುವುದಿಲ್ಲ ಎಂದು ತಿಳಿಸಿದರು.  ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಮಿಲನ ಮುತ್ತಮ್ಮ, ಬಿಂದು ಹಾಗೂ ಸಮುದಾಯ ಆರೋಗ್ಯ ಅಧಿಕಾರಿ…

Read More

ಸುಂಟಿಕೊಪ್ಪ ಮಾ.25 NEWS DESK : ಮಹಿಳೆಯರು ಸ್ವಾಲಂಬಿಗಳಾಗಿ ಬದುಕಲು ಅವಶ್ಯಕವಾಗಿರುವ ಶಿಕ್ಷಣ, ಕರಕುಶಲ, ಸೇರಿದಂತೆ ಹತ್ತಾರು ತರಬೇತಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸುವ ಮೂಲಕ ಸಂಸ್ಥೆಯು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಸಹಕಾರಿಯಾಗಿದೆ ಎಂದು ಸಂಜೀವಿನಿ ಒಕ್ಕೂಟದ ಕೃಷಿಸಖಿಯಾದ ಬ್ರಿಜಿಟ್ ಡಿಸೋಜ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್‍ಬೈಲ್ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಮಹಿಳೆಯರಿಗೆ ಸ್ವಾಲಂಬಿ ಬದುಕಿಗಾಗಿ 3 ತಿಂಗಳ ಹೊಲಿಗೆ ತರಬೇತಿಯನ್ನು ನೀಡಲಾಗಿದೆ. ತರಬೇತಿದಾರರಿಗೆ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದ ಬ್ರಿಜಿಟ್ ಡಿಸೋಜ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಶ್ಯಕತೆ ಇರುವ ಮಾಹಿತಿಗಳನ್ನು ಹಾಗೂ ಸ್ವಾವಲಂಬಿ ಜೀವನವನ್ನು ನಡೆಸಲು ಮಹಿಳೆಯರಿಗೆ ಅಗತ್ಯವಾದ ತರಬೇತಿಗಳ ಸೌಲಭ್ಯವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಹಕಾರವಾಗಿದೆ ಮುಂದಿನ ದಿನಗಳಲ್ಲಿಯೂ ಈ ಭಾಗದ ಮಹಿಳೆಯರು ಇನ್ನಿತರ ತರಬೇತಿಗಳಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳುವಂತೆ…

Read More

ಮಡಿಕೇರಿ, NEWS DESK ಮಾ.25:-ಇದೇ ಏಪ್ರಿಲ್, 05 ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119 ನೇ ಮತ್ತು ಏಪ್ರಿಲ್, 14 ರಂದು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು. ಏಪ್ರಿಲ್, 14 ರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ನಗರದ ಕಾವೇರಿ ಕಲಾಕ್ಷೇತ್ರ ಬಳಿಯಿಂದ ಗಾಂಧಿಭವನದ ವರೆಗೆ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ…

Read More

ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ 22 ರವರೆಗೆ ವಾರ್ಷಿಕ ಬೇಸಿಗೆ ಶಿಬಿರ ‘ಸಮಾಗಮ 2026’ ಆಯೋಜಿತವಾಗಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕೊಡಗು ವಿದ್ಯಾಲಯದ ಬೇಸಿಗೆ ಶಿಬಿರದ ಸಂಯೋಜಕಿಯರಾದ ಬಿಂದು ಮತ್ತು ಅಂಜನಾ, ಈ ಶಿಬಿರವು ಮಕ್ಕಳಿಗೆ ಪಠ್ಯೇತರ ಜ್ಞಾನ, ಆನಂದ ಮತ್ತು ಅರ್ಥಪೂರ್ಣ ಕಲಿಕೆಯ ಅನುಭವವನ್ನು ಒದಗಿಸುವ ಉದ್ದೇಶದಿಂದ ವಿಶೇಷವಾಗಿ ರೂಪಿಸಲಾಗಿದೆ. ಈ ಶಿಬಿರದ ಮೂಲಕ ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅನ್ವೇಷಿಸಿ, ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳುವ ಜೊತೆಗೆ ಸೃಜನಶೀಲತೆ, ಶಿಸ್ತನ್ನು ಅಭಿವೃದ್ಧಿಪಡಿಸಿಕೊಳ್ಳಲಿದ್ದಾರೆ. ದೈಹಿಕ ಕ್ಷಮತೆ, ಏಕಾಗ್ರತೆ ಮತ್ತು ಸಾಮಾಜಿಕ ಕೌಶಲ್ಯಗಳ ಬೆಳವಣಿಗೆಗೂ ಇದು ನೆರವಾಗಲಿದೆ ಎಂದು ತಿಳಿಸಿದರು.. ಮಕ್ಕಳ ಬೇಸಿಗೆ ರಜೆಯನ್ನು ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ, ಪ್ರತಿದಿನ ಬೆಳಗ್ಗೆ 6:30 ರಿಂದ ಸಂಜೆ 6:00 ರವರೆಗೆ ರಚನಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಸುಮಾರು 25 ವರ್ಷಗಳ ಪರಂಪರೆಯನ್ನು ಹೊಂದಿರುವ ಈ ಕ್ರೀಡಾ ಶಿಬಿರವು ಪ್ರತಿವರ್ಷ ಯಶಸ್ವಿಯಾಗಿ ನಡೆಯುತ್ತಿದ್ದು, 300ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದೂ ಉಪನ್ಯಾಸಕಿಯರು ಮಾಹಿತಿ ನೀಡಿದರು.…

Read More

ಮಡಿಕೇರಿ, NEWS DESK ಮಾರ್ಚ್ 25: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜಿನಲ್ಲಿ 6ನೇ ಬ್ಯಾಚ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ದೀಪ ಬೆಳಗುವಿಕೆ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು 4ನೇ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಆಶಿತಾ ರವರ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ನಂತರ ಗಣ್ಯ ಅತಿಥಿಗಳ ಸಾನಿಧ್ಯದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನಡೆಯಿತು. ಡೀನ್ ಹಾಗೂ ನಿರ್ದೇಶಕರಾದ ಡಾ. ಲೋಕೆಶ್ ಎ.ಜೆ ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು ಸರ್ಕಾರಿ ಶುಶ್ರೂಷಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಂಜುಳ ಎ.ಕೆ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ದೀಪ ಬೆಳಗುವಿಕೆ ಹಾಗೂ ಪ್ರತಿಜ್ಞಾ ವಿಧಿ ನರ್ಸಿಂಗ್ ವೃತ್ತಿಯ ಪವಿತ್ರ ಸಾಂಪ್ರದಾಯಿಕ ಆಚರಣೆ ಎಂದು ವಿವರಿಸಿ, ವಿದ್ಯಾರ್ಥಿಗಳು ಸೇವಾಭಾವನೆ ಮತ್ತು ಶಿಸ್ತಿನಿಂದ ವೃತ್ತಿಯನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ದೀಪ ಹಚ್ಚಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಸಹ ಪ್ರಾಧ್ಯಾಪಕರಾದ ಗುರುಪಾದ ಕೆ.ಪಿ ಅವರು ಕಾಲೇಜಿನ…

Read More

ಮಡಿಕೇರಿ ಮಾ.25 NEWS DESK : ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ 10ನೇ ತರಗತಿ ಪರೀಕ್ಷೆ ಬರೆಯಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ದಿನವಾದ ಭಾನುವಾರ ಖಾಸಗಿ ಹೊಟೇಲ್‍ನಲ್ಲಿ ಪ್ರವೇಶ ಪತ್ರ ನೀಡಿರುವುದು ನಿಯಮಬಾಹಿರ ಕ್ರಮವಾಗಿದ್ದು, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ತಳೂರು ಎ.ಕಿಶೋರ್ ಕುಮಾರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ದಿನಾಂಕ 22-03-2026 ರ ಭಾನುವಾರ ರಜೆ ದಿನ ಶಾಸಕರ ಸಮ್ಮುಖದಲ್ಲಿ ಖಾಸಾಗಿ ಹೊಟೇಲ್‍ನಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರವೇಶ ಪತ್ರ ನೀಡಿರುವುದು ಎಷ್ಟು ಸರಿ. ಶಾಸಕರು ಅಧಿಕಾರಿಯನ್ನು ಹಿಡಿತದಲ್ಲಿಟ್ಟುಕೊಂಡು ಕೆಲಸ ಮಾಡಿಸುವ ಬದಲು ಪ್ರವೇಶ ಪತ್ರ ನೀಡುವ ಅಗತ್ಯವೇನಿತ್ತು, ಶಾಸಕರೇ ಪ್ರವೇಶ ಪತ್ರ ನೀಡುವುದಾದರೆ ಸ್ಥಳೀಯ ಉಪನಿರ್ದೆಶಕರು, ಕ್ಷೇತ್ರ ಶಿಕ್ಷಣಾದಿಕಾರಿಗಳ ಕರ್ತವ್ಯ ಏನು ಎಂದು ಪ್ರಶ್ನಿಸಿದ್ದಾರೆ. ಬೇಜವಾಬ್ದಾರಿ ವರ್ತನೆ ತೋರಿದ…

Read More

ಮಡಿಕೇರಿ NEWS DESK ಮಾ.25 : ಸೋಮವಾರಪೇಟೆಯ ಸಾಮಾಜಿಕ ಹೋರಾಟಗಾರ್ತಿ ಡಾ.ಕಾವೇರಿ ಹೆಚ್.ಎಂ ಅವರು ದಕ್ಷಿಣ ಏಷ್ಯಾ ದೇಶಗಳ ಆದಿವಾಸಿಗಳ ಪಾರಂಪರಿಕ ಜ್ಞಾನ, ಗ್ರಾಮೀಣ ನಾಯಕತ್ವ ಮತ್ತು ಗ್ರಾಮೀಣ ಅಭಿವೃದ್ಧಿ ಕುರಿತು ಜಪಾನ್ ದೇಶದಲ್ಲಿ ನಡೆಯುತ್ತಿರುವ ತರಬೇತಿ ಹಾಗೂ ಅಧ್ಯಯನ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ. ಇದು 9 ತಿಂಗಳ ಕಾರ್ಯಕ್ರಮವಾಗಿದ್ದು, ಈ ತರಬೇತಿ ಮೂಲಕ ಗ್ರಾಮೀಣ ಅಭಿವೃದ್ಧಿ ಹಾಗೂ ಪಾರಂಪರಿಕ ಜ್ಞಾನ ವ್ಯವಸ್ಥೆಗಳ ಬಗ್ಗೆ ಜಾಗತಿಕ ಅನುಭವವನ್ನು ಪಡೆಯುವ ಅವಕಾಶ ದೊರೆಯಲಿದೆ. ಡಾ.ಕಾವೇರಿ ಹೆಚ್.ಎಂ ಅವರಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಶುಭ ಹಾರೈಸಿದ್ದಾರೆ.

Read More

ಮಡಿಕೇರಿ NEWS DESK ಮಾ.25 : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ ರಾಜಾರೋಷವಾಗಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹೊವಯ್ಯ ಹಾನಗಲ್ ಅವರು ಇಂದು ಬೆಳಿಗ್ಗೆ ನಿಧನರಾದರು. ಇವರು ಪತ್ರಕರ್ತ ಜಯಪ್ಪ ಹಾನಗಲ್ ಅವರ ಸಹೋದರ.

Read More