ಮಡಿಕೇರಿ NEWS DESK ಫೆ.5 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಜಾಕ್ ಎಂ.ಎ ಆಯ್ಕೆಯಾಗಿದ್ದಾರೆ. ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಮಿಕ ಮಾಹಿತಿ ಶಿಬಿರ ಕುಶಾಲನಗರದ ಇಂದಿರಾ ಬಡಾವಣೆಯ ಮಲಯಾಳಿ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಇಬ್ರಾಹಿಂ ಹೊಸ ತೋಟ, ಕಾರ್ಯದರ್ಶಿಯಾಗಿ ಆಲಿ ಕೂಡಿಗೆ, ಸದಸ್ಯರಾಗಿ ಅಲ್ತಾಫ್ ಕೊಂಡಂಗೇರಿ, ಮೊಹಿದ್ದೀನ್ ಮಡಿಕೇರಿ, ಇಲ್ಯಾಸ್ ಕುಶಾಲನಗರ, ಹಸೀನಾ ಮಡಿಕೇರಿ ಹಾಗೂ ಅಜೀಜ್ ಕುಶಾಲನಗರ ಆಯ್ಕೆಯಾದರು. ನೂತನ ಜಿಲ್ಲಾ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಸಿ ಮಾತನಾಡಿದ ಎಸ್ಡಿಟಿಯು ರಾಜ್ಯ ಸಂಚಾಲಕ ಅಥಾವುಲ್ಲ ಜೋಕಟ್ಟೆ ಕಾರ್ಮಿಕರ ಹೋರಾಟ ಮತ್ತು ತ್ಯಾಗದ ಫಲವಾಗಿ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆ ಹಾಗೂ ಕಾನೂನು ವಿವಿಧ ದೇಶಗಳಲ್ಲಿ ಅಸ್ತಿತ್ವಕ್ಕೆ ಬಂತು. ಭಾರತದಲ್ಲಿ ಸ್ವಾತಂತ್ರ್ಯ ನಂತರ ಹಲವು ರಾಜಕೀಯ ಪಕ್ಷಗಳು ವಿವಿಧ ಕಾರ್ಮಿಕ ಯೂನಿಯನ್ ಗಳನ್ನು ಹುಟ್ಟು…
ಲೇಖಕ: admin
ಮಡಿಕೇರಿ NEWS DESK ಫೆ.5 : ಮಾಯಮುಡಿ ಗ್ರಾಮ ಪಂಚಾಯಿತಿಯ ಗಾಂಧಿ ಗ್ರಾಮ ಪುರಸ್ಕಾರದ ಸಭಾಂಗಣ ಉದ್ಘಾಟನಾ ಸಮಾರಂಭ ಫೆ.7 ರಂದು ನಡೆಯಲಿದೆ. ಕೊಡಗು ಜಿ.ಪಂ, ಪೊನ್ನಂಪೇಟೆ ತಾ.ಪಂ ಮತ್ತು ಮಾಯಮುಡಿ ಗ್ರಾ.ಪಂ ಸಹಯೋಗದಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾಯಮುಡಿ ಗ್ರಾ.ಪಂ ಕಚೇರಿ ಕಟ್ಟಡದಲ್ಲಿ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಭಾಂಗಣವನ್ನು ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಮಂಡೇಪAಡ ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ ಹಾಗೂ…
ಮಡಿಕೇರಿ NEWS DESK ಫೆ.5 : ಮಡಿಕೇರಿ ಕ್ಷೇತ್ರದ ಜನಸ್ನೇಹಿ ಶಾಸಕ ಡಾ.ಮಂತರ್ ಗೌಡ ಅವರು ಇತ್ತೀಚೆಗೆ ಹಿಂದೂ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ವಿಚಾರವನ್ನು ಕೆಲವರು ದೊಡ್ಡದು ಮಾಡಿ ಕ್ಷುಲ್ಲಕ ರಾಜಕಾರಣ ಮಾಡುತ್ತಿರುವುದು ಸರಿಯಲ್ಲವೆಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿವಿಧತೆಯಲ್ಲಿ ಏಕತೆ ಮತ್ತು ಸಮಾನತೆಯ ಆಶಯಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕ ಡಾ.ಮಂತರ್ ಗೌಡ ಅವರು ಸರ್ವಧರ್ಮೀಯರ ನೆಚ್ಚಿನ ಜನಪ್ರತಿನಿಧಿಯಾಗಿದ್ದಾರೆ. ಶಾಸಕರಾದವರು ಒಂದು ಧರ್ಮ ಅಥವಾ ಒಂದು ಸಮುದಾಯಕ್ಕೆ ಸೀಮಿತವಾಗಿರುವುದಿಲ್ಲ. ಅವರು ಪ್ರತಿಯೊಬ್ಬರನ್ನೂ ಪ್ರತಿನಿಧಿಸಬೇಕಾಗುತ್ತದೆ, ಆ ಕೆಲಸವನ್ನು ಮಡಿಕೇರಿ ಶಾಸಕರು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಓಲೈಕೆ ರಾಜಕಾರಣಕ್ಕಾಗಿ ತಮ್ಮತನವನ್ನು ಬಿಟ್ಟು ಮುಖವಾಡದ ರಾಜಕಾರಣವನ್ನು ಡಾ.ಮಂತರ್ ಗೌಡ ಅವರು ಎಂದಿಗೂ ಮಾಡಿಲ್ಲ. ಅಭಿವೃದ್ಧಿ ಕಾರ್ಯಗಳಲ್ಲಿ ಕೂಡ ತಾರತಮ್ಯ ಮಾಡದೆ ಪ್ರತಿಯೊಂದು ಜನಾಂಗಕ್ಕೂ ಮತ್ತು ಪ್ರತಿಯೊಂದು ಕ್ಷೇತ್ರಕ್ಕೂ ಸಮಾನ ಆದ್ಯತೆ ನೀಡುತ್ತಿದ್ದಾರೆ. ಮಡಿಕೇರಿ ಶಾಸಕರ ಸರಳತೆ ಮತ್ತು ಘನತೆಯ ಕುರಿತು ಮಕ್ಕಳಿಂದ…
ಮಡಿಕೇರಿ ಫೆ.4 NEWS DESK : 66/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಸದರಿ ಕೇಂದ್ರದಿಂದ ಹೊರಹೊಮ್ಮುವ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ, ಅರಪಟ್ಟು-ಪಾಲಂಗಾಲ, ಕ್ಲಬ್ ಮಹೀಂದ್ರ, ಕದನೂರು ಭಗವತಿ ದೇವಸ್ಥಾನ ವ್ಯಾಪ್ತಿ, ಚರ್ಚ್ ಕೆದಮುಳ್ಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಫೆಬ್ರವರಿ, 07 ರಂದು ಬೆಳಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ NEWS DESK ಫೆ.4 : ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ, ಗ್ರಾಮದ ನಿವಾಸಿ ವಿಶಾಲಾಕ್ಷಮ್ಮ ಅವರ ಪುತ್ರಿ ಹೇಮಲತ ಜಿ. ಎಂ. ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ. ಹೇಮಲತ ಅವರು ದಾವಣಗೆರೆ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಶ್ವನಾಥ್ ಹೆಚ್. ಅವರ ಮಾರ್ಗದರ್ಶನದಲ್ಲಿ “ವೀಣಾ ಶಾಂತೇಶ್ವರ ಮತ್ತು ದು. ಸರಸ್ವತಿಯವರ ಸಾಹಿತ್ಯದಲ್ಲಿ ಪ್ರತಿಭಟನಾತ್ಮಕ ನೆಲೆಗಳು” ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರ ಉಪಸ್ಥಿತಿಯಲ್ಲಿ ಹೇಮಲತ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.
ಸೋಮವಾರಪೇಟೆ NEWS DESK ಫೆ.4 : ಬಿಜೆಪಿ ಶಾಸಕರು 25 ವರ್ಷಗಳಲ್ಲಿ ಮಾಡದ ಅಭಿವೃದ್ಧಿ ಕಾಮಗಾರಿಗಳನ್ನು ಹಾಲಿ ಶಾಸಕರಾದ ಡಾ.ಮಂತರ್ಗೌಡ ಅವರು ಎರಡೂವರೆ ವರ್ಷಗಳಲ್ಲಿ ಮಾಡಿದ್ದಾರೆ ಎಂದು ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ಡಾ.ಮಂತರ್ಗೌಡ ಅವರ ಅಭಿವೃದ್ಧಿ ಕೆಲಸವನ್ನು ಕಂಡು ಬಿಜೆಪಿ ಭ್ರಮನಿರಸನಗೊಂಡು, ಪ್ರತಿಭಟನೆ ನೆಪದಲ್ಲಿ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಸಂತೋಷ ಪಡುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬಿಜೆಪಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿಬೇಕು, ಚುನಾವಣೆ ಸಂದರ್ಭದಲ್ಲಿ ಮಾತ್ರ ಅವಶ್ಯಕತೆ ಇದ್ದಷ್ಟು ರಾಜಕೀಯ ಮಾಡಿದರೆ, ವ್ಯವಸ್ಥೆಗೂ ಒಳ್ಳೆಯದು ಎಂದು ಹೇಳಿದ ಅವರು, ಕ್ಷೇತ್ರದ ಜನರು ಬಿಜೆಪಿಯನ್ನು ಮರೆಯುತ್ತಿದ್ದಾರೆ ಎಂಬ ಆತಂಕದಿAದ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ದೂರಿದರು. ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಹೆಚ್ಚಿನ ಬೂತ್ಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳು ಬೀಳುತ್ತಿವೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯವಾಗಿದೆ. ಆದರೂ ಕಳೆದ 25 ವರ್ಷಗಳಿಂದ ತೋಳೂರುಶೆಟ್ಟಳ್ಳಿ, ಕೂತಿ ಮಾರ್ಗದ ರಸ್ತೆ ಅಭಿವೃದ್ಧಿಗೆ ಅಂದಿನ ಬಿಜೆಪಿ ಶಾಸಕರು ಅನುದಾನ ಕೊಡಲಿಲ್ಲ. ರಸ್ತೆ ಮಾಡಲು ಕಾಂಗ್ರೆಸ್…
ಸೋಮವಾರಪೇಟೆ NEWS DESK ಫೆ.4 : ಸನಾತನ ಹಿಂದೂ ಧರ್ಮ-ಪರಂಪರೆ, ಸಂಸ್ಕೃತಿಯ ರಕ್ಷಣೆಗೆ ಒಗ್ಗಟ್ಟು ಅವಶ್ಯ. ಈ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತರಾಗಬೇಕು. ಹಾಗಾದಾಗ ಹಲವಷ್ಟು ಸಮಸ್ಯೆಗಳು ತನ್ನಿಂತಾನೇ ಬಗೆಹರಿಯುತ್ತವೆ. ಮನೆ ಹಾಗೂ ಮನಗಳಲ್ಲಿ ಧರ್ಮ ಇರಬೇಕು. ಎಲ್ಲರೂ ಸಂಸ್ಕಾರವಂತರಾಗಿ ಬಾಳಬೇಕು ಎಂದು ಯಸಳೂರು ತೆಂಕಲಗೋಡು ಮಠಾಧೀಶರಾದ ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು. ಹಿಂದೂ ಸಂಗಮ ಆಯೋಜನಾ ಸಮಿತಿಯ ವತಿಯಿಂದ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ದೇವಾಲಯದ ಮುಂಭಾಗ ಆಯೋಜಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷ ಸ್ಥಾನಮಾನವಿದೆ. ಪವಿತ್ರವಾದ ನಾಡಿನಲ್ಲಿ ನಾವೆಲ್ಲರೂ ಬದುಕುತ್ತಿದ್ದೇವೆ. ಕಣಕಣದಲ್ಲೂ ಶಕ್ತಿ, ಭಕ್ತಿ, ಧರ್ಮವನ್ನು ಈ ಮಣ್ಣು ಒಳಗೊಂಡಿದೆ. ಇತರ ಎಲ್ಲಾ ಧರ್ಮದವರಿಗೆ ಜೀವಿಸಲು ಸಾಕಷ್ಟು ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ತಮ್ಮ ಧರ್ಮದ ಅನುಸಾರ ಜೀವನ ನಡೆಸಲು ಇರುವುದೊಂದೇ ಹಿಂದೂಸ್ಥಾನ. ಇದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಮನೆ, ಆಸ್ತಿಗಳನ್ನು ಭದ್ರಗೊಳಿಸುವ ನಾವುಗಳು ತಾಯಿ ಭಾರತಾಂಭೆಯನ್ನೂ ರಕ್ಷಿಸಬೇಕು. ದೇಶ, ಧರ್ಮ ರಕ್ಷಣೆಯಾದರೆ…
ಮಡಿಕೇರಿ NEWS DESK ಫೆ.4 : ಐಗೂರಿನಲ್ಲಿ ನಡೆಯುವ ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಸಮಾರೋಪ ಸಮಾರಂಭದಲ್ಲಿ ದತ್ತಿ ದಾನಿಗಳಾದ ಹೆಚ್.ಬಿ.ಜಯಮ್ಮ ಶನಿವಾರಸಂತೆ, ಸ್ನೇಹಾ ಬಸಮ್ಮ ಕೊಡ್ಲಿಪೇಟೆ,ಎಸ್.ಪಿ. ಪ್ರಸನ್ನ ಸೋಮವಾರಪೇಟೆ, ಜೆ.ಸಿ. ಶೇಖರ್ ಅವರನ್ನು ಸನ್ಮಾನಿಸಲಾಗುತ್ತದೆ. ಸಮಾಜ ಸೇವೆಯಲ್ಲಿ ಶಾರದ ಮಂದಣ್ಣ, ಕೆ.ಪಿ.ಚಂದ್ರಕಲಾ, ಎ.ಆರ್.ಮುತ್ತಣ್ಣ, ಎಸ್.ಎಂ.ಚಂಗಪ್ಪ, ಡಿ.ಎಸ್.ನಿರ್ವಾಣಪ್ಪ, ಕೇಶವಮೂರ್ತಿ, ಶಿಕ್ಷಣ ಕ್ಷೇತ್ರದಲ್ಲಿ ಪಿ.ಕೆ.ಸೋಮಯ್ಯ, ಡಾ.ಕೆ.ಎ. ಮುಸ್ತಾಪ, ಕುಮಾರಿ ತಾನ್ಯ ಮುರಳೀಧರ್, ಕು.ಮನ್ವಿತ್ ಮೋಹನ್ ಎಂ., ವೈದ್ಯಕೀಯ ಕ್ಷೇತ್ರದಲ್ಲಿ ಎಸ್.ಎಂ.ಡಿಸಿಲ್ವಾ, ಡಾ.ಸತ್ತಾರ್ ಖಾನ್, ಡಾ.ಮೋನಿಶ್, ಜೇನುಕುರುಬರ ಸೀತಜ್ಜಿ, ಕೆ.ಪಿ.ಪಾರ್ವತಿ, ರಜಿನ, ಸಹಕಾರ ಕ್ಷೇತ್ರದಲ್ಲಿ ಜಯೇಂದ್ರ ಬಿ.ಇ., ಶ್ರೀಜಿತ್ ವಿ.ಕೆ., ದರ್ಶನ್ ಕೆ.ಎಂ. ಕೃಷಿ ಕ್ಷೇತ್ರದಲ್ಲಿ ಕೆ.ಪಿ.ದಿನೇಶ್, ಸೃಜನ್ ಬಿ.ಎಂ., ರಕ್ಷಣಾ ಕ್ಷೇತ್ರದಲ್ಲಿ ಅಂತೋಣಿ ಡಿಸೋಜ, ಲಿಂಗರಾಜು, ಮೊಗಪ್ಪ ಆರ್.ಎನ್., ಹುತಾತ್ಮ ಪಳಂಗೋಟು ದಿವಿನ್, ಕ್ರೀಡಾ ಕ್ಷೇತ್ರದಲ್ಲಿ ಕೆ.ಪಿ.ರಾಯ್, ಕು.ಕೌಶಿಕ್ ಯು.ಸಿ., ಪತ್ರಿಕಾ ಕ್ಷೇತ್ರದಲ್ಲಿ ಡಿ.ಪಿ. ಲೋಕೇಶ್, ವಿಜಯ್ ಹಾನಗಲ್, ಸುಕುಮಾರ್ ಎಂ.ಎ.,…
ಮಡಿಕೇರಿ NEWS DESK ಜ.4 : ಕನ್ನಡಾಂಬೆಗೆ ಕನ್ನಡದ ಅಕ್ಷರಗಳ ಪುಷ್ಪಮಾಲೆಯನ್ನು ತೊಡಿಸಿ ಸಂಭ್ರಮಿಸುವ ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಐಗೂರಿನಲ್ಲಿ ಭರದ ಸಿದ್ಧತೆಗಳು ನಡೆಯುತ್ತಿದ್ದು, ಫೆ.9ರಂದು ಸಮ್ಮೇಳನ ಸಂಭ್ರಮದಿಂದ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎ.ಪಿ. ಕೇಶವ ಕಾಮತ್ ಅವರು ಮಾತನಾಡಿ, ಐಗೂರಿನಲ್ಲಿ ಆಯೋಜಿತವಾಗಿರುವ 9ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ತನ್ನನ್ನು ಒಳಗೊಂಡಂತೆ ಗೌರವಾಧ್ಯಕ್ಷರಾಗಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ತಾಲ್ಲೂಕು ಕಸಾಪ ಅಧ್ಯಕ್ಷ ಎಸ್.ಡಿ.ವಿಜೇತ್ ಅವರ ನೇತೃತ್ವದಲ್ಲಿ ವಿವಿಧ ಹನ್ನೊಂದು ಉಪಸಮಿತಿಗಳನ್ನು ರಚಿಸಿಕೊಂಡು, ಕನ್ನಡದ ನುಡಿ ಹಬ್ಬವನ್ನು ಯಶಸ್ವಿಗೊಳಿಸಲು ಗ್ರಾಮಸ್ಥರ ಸಹಕಾರದೊಂದಿಗೆ ಶ್ರಮಿಸಲಾಗುತ್ತಿದೆಯೆಂದು ತಿಳಿಸಿದರು. ಜಲಜಾ ಶೇಖರ್ ಸಭಾಧ್ಯಕ್ಷತೆಯಲ್ಲಿ ಸಮ್ಮೇಳನ – ಸಾಹಿತಿ ಜಲಜಾ ಶೇಖರ್ ಅವರ ಸರ್ವಾಧ್ಯಕ್ಷತೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆ.9 ರಂದು ಬೆಳಗ್ಗೆ 8.50 ಕ್ಕೆ ಐಗೂರು ಕಬ್ಬಿಣ ಸೇತುವೆ ಬಳಿಯಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನು ಒಳಗೊಂಡಂತೆ ಜನಾಕರ್ಷಕವಾಗಿ ನಡೆಯಲಿದೆಯೆಂದು…
ಮಡಿಕೇರಿ NEWS DESK ಫೆ.4 : ತಮ್ಮ ರಚನೆಯ ಹಲವು ಲೇಖನಗಳ “ಬಹುರೂಪಿ”ಯನ್ನು ಹಿರಿಯ ರಾಜಕಾರಣಿ ಹಾಗೂ ವಿಚಾರವಾದಿಗಳಾಗಿದ್ದ ದಿವಂಗತ ಎ.ಕೆ.ಸುಬ್ಬಯ್ಯ ಅವರಿಗೆ ಅರ್ಪಣೆ ಮಾಡುತ್ತಿದ್ದು, ಪುಸ್ತಕ ಅನಾವರಣ ಕಾರ್ಯಕ್ರಮ ಫೆ.5ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಕೃತಿಯ ಲೇಖಕ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 56 ಲೇಖನಗಳನ್ನು ಒಳಗೊಂಡ, 300 ಪುಟಗಳ ಬಹುರೂಪಿ ಪುಸ್ತಕದಲ್ಲಿ, ಎ.ಕೆ.ಸುಬ್ಬಯ್ಯ ಅವರು 2018ರಲ್ಲಿ ತಮಗೆ ಬರೆದು ಕೊಟ್ಟಿರುವ ವಿಚಾರವನ್ನು ಪುಸ್ತಕದ ಆರಂಭದಲ್ಲೆ ಬಳಸಿಕೊಳ್ಳಲಾಗಿದೆ. ಪುಸ್ತಕದ ಮುನ್ನಡಿಯನ್ನು ಕನ್ನಡ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ತಂಬAಡ ವಿಜು ಪೂಣಚ್ಚ ಅವರು ಬರೆದಿದ್ದಾರೆ, ಬೆನ್ನುಡಿಯನ್ನು ವಿಮರ್ಶಕರು ಹಾಗೂ ಅನುವಾದಕರಾದ ಒ.ಎಲ್.ನಾಗಭೂಷಣ ಸ್ವಾಮಿ ಅವರು ಬರೆದಿದ್ದಾರೆಂದು ಮಾಹಿತಿಯನ್ನಿತ್ತರು. ಎ.ಕೆ.ಎಸ್. ಪುತ್ರನಿಗೆ ಮೊದಲ ಪ್ರತಿ- ಪುಸ್ತಕ ಅನಾವರಣ ಸಮಾರಂಭದಲ್ಲಿ ಬಹುರೂಪಿಯ ಮೊದಲ ಪ್ರತಿಯನ್ನು ಎ.ಕೆ.ಸುಬ್ಬಯ್ಯ ಅವರ ಪುತ್ರ ಅಜ್ಜಿಕುಟ್ಟೀರ ನರೇಶ್ ಅವರಿಗೆ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಎಕೆಎಸ್ ಅವರ ಮತ್ತೋರ್ವ ಪುತ್ರರಾದ ಶಾಸಕರು…






