ಮಡಿಕೇರಿ ಸೆ.18 NEWS DESK : ಅಲ್ಲಾರಂಡ ರಂಗಚಾವಡಿ ಮತ್ತು ಮಡಿಕೇರಿ ಕೊಡವ ಸಮಾಜದ ವತಿಯಿಂದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 158ನೇ ಜನ್ಮ ದಿನವನ್ನು ನಗರದಲ್ಲಿ ಸೆ.21 ರಂದು ಆಚರಿಸಲಾಗುತ್ತದೆಂದು ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೊಡವ ಸಮಾಜದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಅಪ್ಪಚ್ಚಕವಿ ಕಲಾ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಅಪ್ಪನೆರವಂಡ ಮನೋಜ್ ಮಂದಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಲ್ಲಾರಂಡ ರಂಗಚಾವಡಿ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಪಾಲ್ಗೊಳ್ಳಲಿದ್ದಾರೆಂದರು. :: ಸಾಕ್ಷ್ಯ ಚಿತ್ರ ಪ್ರದರ್ಶನ :: ಕಾರ್ಯಕ್ರಮದಲ್ಲಿ ತನ್ನ ನಿರ್ದೇಶನ ಮತ್ತು ನಿರ್ಮಾಣದ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿಗೆ ಸಂಬಂಧಿಸಿದ ಸಾಕ್ಷ್ಯ ಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿದೆಯೆಂದು ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದರು. ಸಾಕ್ಷ್ಯ ಚಿತ್ರ 30 ನಿಮಿಷದ್ದಾಗಿದ್ದು, ಪ್ರದರ್ಶನವನ್ನು ಕೊಡವ ಸಿನಿಮಾ…
ಲೇಖಕ: admin
ಮಡಿಕೇರಿ ಸೆ.18 NEWS DESK : ಬಾಂಗ್ಲಾದೇಶಿಗರು, ರೋಹಿಂಗ್ಯಗಳು, ಜಾರ್ಖಂಡ್, ಅಸ್ಸಾಂ ಮತ್ತು ಮಧ್ಯಪ್ರದೇಶದ ಅಕ್ರಮ ವಲಸಿಗರು ಕೊಡಗು ಜಿಲ್ಲೆಯಲ್ಲಿ ಕಾರ್ಮಿಕರ ರೂಪದಲ್ಲಿ ಆಶ್ರಯ ಪಡೆದಿದ್ದಾರೆ. ಜಾತಿ ಜನಗಣತಿಯ ಸಂದರ್ಭ ಇವರುಗಳನ್ನು ಸಕ್ರಮಗೊಳಿಸಿದರೆ ಮತ್ತು ಇವರುಗಳಿಂದ ಕಾನೂನು ಉಲ್ಲಂಘನೆಯಾದರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಎಚ್ಚರಿಕೆ ನೀಡಿದ್ದಾರೆ. ಜಾತಿ ಜನಗಣತಿಯ ಸಂದರ್ಭ ಕೊಡವರು ಜಾತಿ-ಭಾಷೆ-ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆನ್ನುವ ಕುರಿತು ಮತ್ತು ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮೂರ್ನಾಡಿನಲ್ಲಿ ನಡೆಸಿದ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಸರಕಾರದ ವತಿಯಿಂದ ಇದೇ ಸೆ.22 ರಿಂದ ಅ.7ರ ವರೆಗೆ ನಡೆಯಲಿರುವ ಜಾತಿವಾರು ಗಣತಿಯ ಸಂದರ್ಭ ಜಾತಿ-ಭಾಷೆ-ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ಬರೆಸುವ ಮೂಲಕ ಆ್ಯನಿಮಿಸ್ಟಿಕ್ ಏಕ-ಜನಾಂಗೀಯ ಆದಿಮಸಂಜಾತ ಕೊಡವರ ಸಮಗ್ರ…
ಮಡಿಕೇರಿ ಸೆ.18 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ- 2025 ರಲ್ಲಿ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕೊಡಗು ಜಿಲ್ಲಾ ಸಮಿತಿ ಭಾಗವಹಿಸದಿರಲು ನಿರ್ಧಾರ ಕೈಗೊಂಡಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟ್ರಾಜಾ ಅವರಿಗೆ ಮನವಿ ಸಲ್ಲಿಸಿದ ಸಂಘದ ಪ್ರಮುಖರು, ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡೆ ಪೂರ್ಣಿಮಾ ಬಸಪ್ಪ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಅನುಮೋದನೆ ನೀಡಿ ಆದೇಶಿಸಿದೆ. ಅಲ್ಲದೇ ಇದಕ್ಕಾಗಿ 2000 ರೂ. ಗೌರವಧನ ನಿಗದಿಗೊಳಿಸಲಾಗಿದೆ. ಆದರೆ ಸಮೀಕ್ಷೆ ವೇಳೆ ಆಶಾ ಕಾರ್ಯಕರ್ತೆಯರು ಮನೆ…
ಮಡಿಕೇರಿ ಸೆ.18 NEWS DESK : ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಅಂಗವಾಗಿ ಇದೇ ಸೆ.22ರಿಂದ 30ರವರೆಗೆ ವೈವಿಧ್ಯಮಯ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದು ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸೆ.22 ರಂದು ಬೆಳಗ್ಗೆ 6 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಿಂದ ಕ್ಯಾಪಿಟಲ್ ವಿಲೇಜ್ವರೆಗಿನ ರಸ್ತೆಯಲ್ಲಿ ಪುರುಷರು, ಮಹಿಳೆಯರು ಸೇರಿದಂತೆ ವಿದ್ಯಾರ್ಥಿಗಳಿಗಾಗಿ ನಾಲ್ಕು ವಿಭಾಗಗಳಲ್ಲಿ ಮೆರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸೆ.23 ರಂದು ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪುರುಷರಿಗೆ ಬಾಸ್ಕೆಟ್ ಬಾಲ್, ಸಾರ್ವಜನಿಕರಿಗೆ ಮತ್ತು 15 ವರ್ಷದೊಳಗಿನ ಶಾಲಾ ಮಕ್ಕಳಿಗೆ 5+2 ಆಟಗಾರರ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು. ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.24 ರಂದು ಬೆಳಗ್ಗೆ ದಸರಾ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಗುತ್ತದೆ. ಈ ಸಂದರ್ಭ ಬನ್ನಿ ಮಂಟಪದಿಂದ ಶ್ರೀ ರಾಜರಾಜೇಶ್ವರಿ ಶಾಲಾ ವಿದ್ಯಾರ್ಥಿಗಳೊಂದಿಗೆ ಕ್ರೀಡಾಜ್ಯೋತಿಯನ್ನು ಮೈದಾನಕ್ಕೆ ತರಲಾಗುತ್ತದೆ. ಅಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕ…
ಮಡಿಕೇರಿ ಸೆ.18 NEWS DESK : ಹೋಂಸ್ಟೇ, ಹೊಟೇಲ್ ಸೇರಿದಂತೆ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಸುರಕ್ಷತೆಗೆ ಒತ್ತು ನೀಡಬೇಕು. ಸಿಸಿಟಿವಿ ಅಳವಡಿಸುವುದು, ಸಂಚಾರಿ ದೂರವಾಣಿ ಸಂಖ್ಯೆ ಸೇರಿದಂತೆ ವಾಸ್ತವ್ಯ ಹೂಡುವವರ ಮಾಹಿತಿ ಇರಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಮಿಕ ಸಂಘಟನೆಗಳು, ಹೋಂಸ್ಟೇ ಹಾಗೂ ಹೊಟೇಲ್ ಅಸೋಸಿಯೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಮಾತನಾಡಿದ ಸಚಿವರು ಕಾರ್ಮಿಕರಿಗೆ ಕನಿಷ್ಠ ವೇತನ ಕಲ್ಪಿಸಬೇಕು. ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳುವಂತಾಗಲು ಕಾರ್ಮಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು. ಹೋಂ ಸ್ಟೇ ನೋಂದಣಿ, ಪರವಾನಗಿ, ನವೀಕರಣ ಸಂಬಂಧ ಪ್ರವಾಸೋದ್ಯಮ, ಪೌರಾಡಳಿತ ಹಾಗೂ ಪಂಚಾಯತ್ ರಾಜ್ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ಕಾರ್ಮಿಕ ಸಚಿವರು ತಿಳಿಸಿದರು. ಜೊತೆಗೆ ಶಾಸಕರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಲು ನಿಯೋಗ ತೆರಳುವಂತೆ ಸಲಹೆ ಮಾಡಿದರು. ಹೋಂ ಸ್ಟೇ ನೋಂದಣಿ, ಪರವಾನಗಿ ನೋಂದಣಿ ಮತ್ತಿತರ…
ಮಡಿಕೇರಿ ಸೆ.18 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಕರಗ ಉತ್ಸವವು ಸೆ.22 ರಿಂದ ಆರಂಭವಾಗಲಿದ್ದು, ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಸೋಮವಾರ ಬೆಳಿಗ್ಗೆ 8.30 ಗಂಟೆಗೆ ದೇವಾಲಯದಲ್ಲಿ ಗಣಪತಿ ಹೋಮ ಹಾಗೂ ನವರಾತ್ರಿ ಕೊನೆಗೊಳ್ಳುವ ತನಕ ದೇವಾಲಯದ ಟ್ರಸ್ಟ್ ಮತ್ತು ದಾನಿಗಳ ಸಹಕಾರದಿಂದ ಮಧ್ಯಾಹ್ನ 1 ಗಂಟೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಲಿದೆ. ಮಧ್ಯಾಹ್ನ 2 ಗಂಟೆಗೆ ಕರಗ ಕಟ್ಟಿ ಅಲಂಕರಿಸಲ್ಪಡುವ ಸ್ಥಳವಾದ ಪಂಪಿನ ಕೆರೆಗೆ ಕರಗ ತೆರಳಲಿದೆ. :: ಪೂಜಾ ಕಾರ್ಯಕ್ರಮಗಳು ಹಾಗೂ ಕರಗ ಸಂಚರಿಸುವ ಮಾರ್ಗ :: ಸೆ.22 ರಂದು ಸಂಜೆ 5 ಗಂಟೆಗೆ ಸಾಂಪ್ರದಾಯಿಕ ಪೂಜಾ ವಿಧಿ-ವಿಧಾನಗಳೊಂದಿಗೆ ಅಲಂಕೃತ ಕರಗವನ್ನು ಮೆರವಣಿಗೆ ಮೂಲಕ ಮಡಿಕೇರಿಯ ರಾಜಬೀದಿ ಮಾರ್ಗವಾಗಿ ಮಹದೇವಪೇಟೆ ಶ್ರೀ ಚೌಡೇಶ್ವರಿ ದೇವಾಲಯ ಹಾಗೂ ಕಾಲೇಜು ರಸ್ತೆಯ ಪೇಟೆ ಶ್ರೀ ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿ ದೇವಾಲಯಕ್ಕೆ ಹಿಂತಿರುಗಲಿದೆ. ಸೆ.23 ರಂದು ಬೆಳಿಗ್ಗೆ 11.30ಕ್ಕೆ ಶ್ರೀ ಅಮ್ಮನವರಿಗೆ…
ಮಡಿಕೇರಿ ಸೆ.18 NEWS DESK : ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಮಹಾಸಭೆ ಸೆ.21 ರಂದು ಬೆಳಿಗ್ಗೆ 10 ಗಂಟೆಗೆ ಹಾಕತ್ತೂರು ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜದ ಪ್ರಧಾನ ಸಂಘಟಕ ಮಂದಣ್ಣ ಪಿ.ಕೆ. ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಪ್ರಧಾನ ಸಂಚಾಲಕ ಅರಮನೆಪಾಲೆರ ಮಂಜುನಾಥ್ ಜಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಮಹಾಸಭೆಯನ್ನು ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಉದ್ಘಾಟಿಸಲಿದ್ದು, ತಾವು ಪ್ರಾಸ್ತಾವಿಕ ಭಾಷಣ ಮಾಡುವುದಾಗಿ ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ಭಾಷಿಕ ಸಮುದಾಯಗಳ ಕೂಟದ ನಿರ್ದೇಶಕ ಅರಮನೆಪಾಲೆರ ದೇವಯ್ಯ, ಮಾಜಿ ಯೋಧರಾದ ಅರಮನೆಪಾಲೆರ ಸುಭಾಷ್, ಅರಮನೆಪಾಲೆರ ಸಿ.ಶಿವಪ್ಪ, ಅರಮನೆಪಾಲೆ ಸಮಾಜದ ಕಾರ್ಯದರ್ಶಿ ಅರಮನೆಪಾಲೆರ ದೇವಯ್ಯ ಹಾಕತ್ತೂರು, ನಿರ್ದೇಶಕರಾದ ಅರಮನೆಪಾಲೆರ ಗಣೇಶ್ ಹಾಗೂ ಅರಮನೆಪಾಲೆರ ವಿಶ್ವನಾಥ್ ಪಾಲ್ಗೊಳ್ಳಲಿದ್ದಾರೆ. ನಿರ್ದೇಶಕರಾದ ಅರಮನೆಪಾಲೆರ ಜೋಯಪ್ಪ, ಕಾರ್ಯಕ್ರಮ ಸಂಯೋಜಕ ಅರಮನೆಪಾಲೆರ ಲೋಕೇಶ್, ಮರಣ ಧನಸಹಾಯನಿಧಿಯ…
ಮಡಿಕೇರಿ NEWS DESK ಸೆ.18 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯ ಸಂದರ್ಭ ಅಗತ್ಯ ಧ್ವನಿವರ್ಧಕಗಳನ್ನು ಬಳಸಲು ನಿಯಮಗಳನ್ನು ಸಡಿಲಿಸಬೇಕು ಮತ್ತು ಈ ಕುರಿತು ಅವಕಾಶ ನೀಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿ ಮಡಿಕೇರಿ ದಸರಾ ದಶಮಂಟಪ ಸಮಿತಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರಿಗೆ ಮನವಿ ಸಲ್ಲಿದೆ. ಸಂಸದರು ಇಂದು ನಗರದ ದಶ ದೇವಾಲಯಗಳಿಗೆ ಭೇಟಿ ನೀಡಿ ದಸರಾ ಆಚರಣೆಯ ಕುರಿತು ದಸರಾ ಸಮಿತಿ ಮತ್ತು ದಶಮಂಟಪ ಸಮಿತಿಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭ ಮನವಿ ಪತ್ರ ಸಲ್ಲಿಸಿದ ದಶ ಮಂಟಪ ಸಮಿತಿಯ ಪ್ರಮುಖರು ಮಡಿಕೇರಿ ದಸರಾ ಜನೋತ್ಸವ ಮೈಸೂರು ದಸರಾದಂತೆಯೇ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಮತ್ತು ನಗರ ಸಂಚಾರ ಭಕ್ತಿಪೂರ್ವಕವಾಗಿ ನಡೆಯುತ್ತದೆ. ವಿಜಯದಶಮಿಯಂದು ದಶಮಂಟಪಗಳ ಶೋಭಾಯಾತ್ರೆ ಜನಾಕರ್ಷಣೆಯನ್ನು ಪಡೆದುಕೊಳ್ಳುತ್ತದೆ. ಪ್ರತಿ ಮಂಟಪವನ್ನು ತಯಾರಿಸಲು ಸುಮಾರು 25ರಿಂದ 30ಲಕ್ಷ ರೂ.ಗಳಷ್ಟು ಖರ್ಚು ಮಾಡಲಾಗುತ್ತಿದೆ. ಆದರೆ…
ಮಡಿಕೇರಿ. ಸೆ.18 NEWS DESK : ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.24 ರಂದು ಬುಧವಾರ ಕಾಫಿ ದಸರಾ ಸಂಭ್ರಮ ಮೇಳೈಸಲಿದ್ದು, ಕಾಫಿ ಕೃಷಿಕರಿಗೆ ಸನ್ಮಾನ ಮತ್ತು ಕಾಫಿ ಕೖಷಿ ಸಂಬಂಧಿತ ಮಾಹಿತಿ ದೊರಕಲಿದೆ ಎಂದು ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಪರಿಕಲ್ಪನೆಯಲ್ಲಿ ಕಳೆದ ವಷ೯ದಿಂದ ಮಡಿಕೇರಿ ದಸರಾಕ್ಕೆ ಪರಿಚಯಿಸಲ್ಪಟ್ಟ ಕಾಫಿ ದಸರಾಕ್ಕೆ ಉತ್ತಮ ಸ್ಪಂದನ ದೊರಕಿದ್ದ ಹಿನ್ನಲೆಯಲ್ಲಿ ಈ ವಷ೯ವೂ ಕಾಫಿ ದಸರಾ ಆಯೋಜಿಸಲಾಗಿದೆ. ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿತ ಎರಡನೇ ವಷ೯ದ ಕಾಫಿ ದಸರಾವನ್ನು ಸೆ.24 ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ಕನಾ೯ಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ಕೊಡಗಿನ ದಿ.ಸಾಕಮ್ಮ ಸ್ಮರಣಾಥ೯ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜ್ ಅವರು ಕಾಫಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ವೇದಿಕೆಯ ಕಾಯ೯ಕ್ರಮಗಳನ್ನು ಭಾರತೀಯ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ದೇವವೖಂದ ಉದ್ಘಾಟಿಸಲಿದ್ದಾರೆ.…
ಮಡಿಕೇರಿ ಸೆ.19 NEWS DESK : ಕೊಡಗು ಪತ್ರಕರ್ತರ ಸಂಘದ ಸದಸ್ಯ ಮೋಹನ್ ರಾಜ್ ಅವರ ತಂದೆ ಕರುಪಯ್ಯ (76) ಪಳ್ಳಕೆರೆಯಲ್ಲಿ ಇಂದು ಮೃತಪಟ್ಟಿದ್ದಾರೆ.






