ಮಡಿಕೇರಿ ಸೆ.18 NEWS DESK : ನೆಲ್ಲಿಹುದಿಕೇರಿಯ ಶ್ರೀ ವಿಘ್ನೇಶ್ವರ ಮಿತ್ರ ಮಂಡಳಿ ವತಿಯಿಂದ ಗೌರಿ ಗಣೇಶೋತ್ಸವ ಅಂಗವಾಗಿ ಬರಡಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣೇಶ ಮೂರ್ತಿ ಯನ್ನು ಶ್ರದ್ಧಾಭಕ್ತಿಯಿಂದ ವಿಸರ್ಜಿಸಲಾಯಿತು. ಮುಂಜಾನೆಯಿಂದ ಅರ್ಚಕರಾದ ಯೋಗೇಶ್ ಭಟ್ ಅವರ ನೇತೃತ್ವದಲ್ಲಿ ಗಣಪತಿಗೆ ಹೋಮ, ಮಂಗಳಾರತಿ, ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಸಿದ್ದಾಪುರ, ಅಮ್ಮತ್ತಿ ಸೇರಿದಂತೆ ಸುತ್ತಮುತ್ತಲ ಗ್ರಾಮ ವ್ಯಾಪ್ತಿಯ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಬಳಿಕ ಪುಷ್ಪಾಲಂಕಾರ ಭವ್ಯ ಮಂಟಪದಲ್ಲಿ ಮೂರ್ತಿಗಳನ್ನು ಕುಳ್ಳಿರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಗಣೇಶ ಮೂರ್ತಿಯನ್ನು ಕೊಂಡೊಯ್ದು ಬರಡಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ಗಣಪತಿ ಬಪ್ಪ ಮೋರಿಯ ಎಂಬ ಘೋಷ ಮೊಳಗಿತು. ಮಹಿಳೆಯರು ಮಕ್ಕಳು ಯುವಕರು ಡಿಜೆಗೆ ಹೆಜ್ಜೆ ಹಾಕಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದರು. ಶ್ರೀ ವಿಘ್ನೇಶ್ವರ ಮಿತ್ರ ಮಂಡಳಿಯ ಅಧ್ಯಕ್ಷರಾದ ಅನಿಲ್ ಕುಮಾರ್, ಪದಾಧಿಕಾರಿಗಳು, ಸದಸ್ಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.…
ಲೇಖಕ: admin
ಮಡಿಕೇರಿ ಸೆ.18 NEWS DESK : ಕೊಡಗು ಪತ್ರಕರ್ತರ ಸಂಘ(ರಿ.) ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯಿಂದ 2025 ರ ಸೆ.19 ರಂದು ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗದವರು, ಪತ್ರಿಕಾ ಕ್ಷೇತ್ರದ ಸಿಬ್ಬಂದಿಗಳು, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ 15 ವಿಭಾಗಗಳ ನುರಿತ ತಜ್ಞರುಗಳು ಹಾಗೂ ವೈದ್ಯರುಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ.ಎನ್.ಟಿ. ತಜ್ಞರು, ಶ್ವಾಸಕೋಶ ತಜ್ಞರು, ದಂತ ವೈದ್ಯಕೀಯ, ಶಸ್ತ್ರ ಚಿಕಿತ್ಸಕರು, ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಶ್ರವಣ ಆರೋಗ್ಯ ತಜ್ಞರು, ಮಾನಸಿಕ ಆರೋಗ್ಯ ತಜ್ಞರು ಮುಂತಾದ 15 ವಿಭಾಗಗಳ ನುರಿತ ತಜ್ಞರು ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಆರೋಗ್ಯಕ್ಕೆ ಸಂಬಂಧಿಸಿದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಆಯುಷ್ಮಾನ್ ಭಾರತ್…
ವಿರಾಜಪೇಟೆ ಸೆ.18 NEWS DESK : ಮಾನಸ ಗಂಗೋತ್ರಿಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಸೆ.23 ರಂದು ನಡೆಯುವ ದಸರಾ ಕವಿಗೋಷ್ಠಿಗಳ ಪ್ರಭಾತ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲು ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಜಯಲಕ್ಷ್ಮಿ ಕೆ. ಆಯ್ಕೆಯಾಗಿದ್ದಾರೆ.
ನಾಪೋಕ್ಲು ಸೆ.18 NEWS DESK : ನಾಲ್ಕುನಾಡ್ ವ್ಯಾಪ್ತಿಯ ನಾಪೋಕ್ಲು ಮುಸ್ಲಿಂ ಜಮಾಅತ್ ಅಧೀನದಲ್ಲಿ ಆಯೋಜಿಸಲಾಗಿದ್ದ ಮದದೇ ಮದೀನ ಮಿಲಾದ್ ಬೃಹತ್ ಸಮಾವೇಶ ರ್ಯಾಲಿಯಲ್ಲಿ ಕುಂಜಿಲ-ಪಯ್ನರಿ ಯುವಕರ ದಫ್ ತಂಡವು ಅತ್ಯುತ್ತಮ ದಫ್ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದೆ. ಈ ಬಹುಮಾನವನ್ನು ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರಿಂದ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ತಂಡದ ತರಬೇತುದಾರ ಪಯ್ಯಡಿ ರಶೀದ್ ಉಸ್ತಾದ್, ನಾಯಕ ರಝಕ್ ಅಲಿ (ಜಜ್ಜು) ಮತ್ತು ಪಯ್ನರಿ ಸುನ್ನಿ ಮುಸ್ಲಿಂ ಜಮಾಅತ್ತಿನ ಅಧ್ಯಕ್ಷರಾದ ಸೌಕತ್ ಅಲಿ ಮಕ್ಕಿ, ಖಲೀಲ್ ಮತ್ತು ಅಝರುದ್ದೀನ್ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.18 NEWS DESK : 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆ ನೀಡಲು ರಾಜ್ಯ ಸರ್ಕಾರವು ‘ಯುವನಿಧಿ’ ಯೋಜನೆ ಅನುಷ್ಠಾನಗೊಳಿಸಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಇಂಡಸ್ಟ್ರೀ ಲಿಂಕೇಜ್ ಸೆಲ್ ಅಡಿ ಭವಿಷ್ಯ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಅದರಂತೆ ಇಂಡಸ್ಟ್ರೀ ಲಿಂಕೇಜ್ ಸೆಲ್ ಅಡಿ ಮತ್ತು ಪ್ಯೂಚರ್ ಸ್ಕಿಲ್ಸ್ ಕಾರ್ಯಕ್ರಮದಡಿ ಕೈಗಾರಿಕೆ/ ಕೈಗಾರಿಕಾ ಸಂಸ್ಥೆಗಳ ತರಬೇತಿ ಕೇಂದ್ರಗಳು ಮತ್ತು ಸರ್ಕಾರಿ ತರಬೇತಿ ಸಂಸ್ಥೆಗಳ ಮೂಲಕ ತಾಂತ್ರಿಕ ಉದ್ದಿಮೆ/ ಕೈಗಾರಿಕೆ ಆಧಾರಿತ ಹಾಗೂ ಉದ್ಯಮಶೀಲತೆಯ ತರಬೇತಿ ನೀಡುವುದರೊಂದಿಗೆ ಕಾರ್ಯಕ್ರಮ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ. ಯುವನಿಧಿ ಯೋಜನೆಯಡಿ ನೋಂದಾಯಿಸಿ ನೇರ ನಗದು ವರ್ಗಾವಣೆ ಮೂಲಕ ನಿರಂತರವಾಗಿ ಆರು ತಿಂಗಳು ನಿರುದ್ಯೋಗ ಭತ್ಯೆ ಪಡೆದಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ಕೌಶಲ್ಕರ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ನೋಂದಾಯಿಸುವಂತೆ ಹಾಗೂ ಒಂದು ವೇಳೆ ತರಬೇತಿ ಪಡೆಯಲು ನೋಂದಾಯಿಸದೆ ಇದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನಿರುದ್ಯೋಗ ಭತ್ಯೆಯನ್ನು…
ಸುಂಟಿಕೊಪ್ಪ ಸೆ.1 NEWS DESK : ಸುಂಟಿಕೊಪ್ಪ ಸಂತ ಮೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಫುಟ್ಬಾಲ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಗೋಣಿಕೊಪ್ಪದ ಕಾಪ್ಸ್ ಶಾಲಾ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ವಿಭಾಗದಲ್ಲಿ ಸಂತಮೇರಿ ಪದವಿ ಕಾಲೇಜು ಬಾಲಕರು ಜಯಗಳಿಸುವ ಮೂಲಕ ದಾವಣೆಗೆರೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವ್ಯವಸ್ಥಾಪಕರಾದ ರೇ.ಫಾ.ವಿಜಯಕುಮಾರ್ ಹಾಗೂ ಪ್ರಾಚಾರ್ಯರಾದ ಆರ್.ಸೇಲ್ವರಾಜ್, ಬಾಲಕರ ತಂಡಕ್ಕೆ ಹಾಗೂ ತರಬೇತುದಾರ ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಅವರಿಗೆ ಶುಭಹಾರೈಸಿ ಬೀಳ್ಕೊಟ್ಟರು.
ನಾಪೋಕ್ಲು NEWS DESK : ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಪ್ರಯುಕ್ತ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರಮದಾನ ಮಾಡಲಾಯಿತು. ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಸದಸ್ಯರು ಹಿಂದೂ ರುದ್ರಭೂಮಿಯ ಆವರಣದಲ್ಲಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ತೆರವುಗೊಳಿಸುವುದರ ಮೂಲಕ ಸ್ವಚ್ಚತಾ ಕಾರ್ಯ ನಡೆಸಿ ಶ್ರಮದಾನ ಮಾಡಲಾಯಿತು. ಈ ಸಂದರ್ಭ ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಅಂಬಿ ಕಾರ್ಯಪ್ಪ ಸಹ ಪ್ರಮುಖರು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರುಗಳಿಗೆ ಹಣ್ಣು ಹಂಪಲು ಹಾಗೂ ಜ್ಯೂಸ್ ವಿತರಿಸುವ ಮೂಲಕ ನರೇಂದ್ರ ಮೋದಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಂ.ಪ್ರತೀಪ, ಪ್ರವೀಣ ಬಿ.ಎಸ್, ಲೋಹಿತ್ ಕೆ.ಎಸ್., ಸಂದೇಶ್, ಜೀವನ್, ಶಾಜೇಶ್, ಜಗದೀಶ್ ಕೆ.ವಿ, ನವೀನ್, ಗಿರೀಶ್ ಬಿ.ಎಸ್, ಗಿರೀಶ್ ಬಿ.ಜಿ.ಕಿರಣ, ದರ್ಶನ್, ಮಹೇಶ್, ಶೇಕರ ಹಾಗೂ ಇತರ ಕಾರ್ಯಕರ್ತರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.18 NEWS DESK : ನಾಪೋಕ್ಲು ನಾಡ್ ಕೊಡವ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ, 2024-25ನೇ ಸಾಲಿನ ಸಹಕಾರಿಯ 7ನೇ ವಾರ್ಷಿಕ ಮಹಾಸಭೆಯು ನಾಪೋಕ್ಲು ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಅಪ್ಪಾರಂಡ ಎಸ್.ಅಯ್ಯಪ್ಪ, ಪ್ರಸ್ತುತ ಸಂಘದಲ್ಲಿ ಒಟ್ಟು 793 ಸದಸ್ಯರಿದ್ದು, ಈ ವರ್ಷ ನಮ್ಮ ಸಂಘವು 4,12,605/-ರಷ್ಟು ಲಾಭಗಳಿಸಿ ಉತ್ತಮ ರೀತಿಯಲ್ಲಿ ಸಾಗುತ್ತಿದೆ ಎಂದರು. ಸಂಘವು 2024-2025ನೇ ಸಾಲಿನನಲ್ಲಿ 10 ಸೆಂಟ್ ನಿವೇಶನ ಖರೀದಿಸಿರುವ ಬಗ್ಗೆ ಮಾಹಿತಿ ನೀಡಿದ್ದರು ಹಾಗೂ ಸಂಘದ ದ್ಯೆಯೋದ್ದೇಶಗಳ ಬಗ್ಗೆ ಬಗ್ಗೆ ಮಾತನಾಡಿ ಸಂಘದ ಏಳಿಗೆಗಾಗಿ ಸದಸ್ಯರು ಸಹಕರಿಸುವಂತೆ ಕೇಳಿಕೊಂಡರು. ಈ ಸಂದರ್ಭ ಸಂಘದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಸದಸ್ಯರು ಮತ್ತು ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮುಂಡಂಡ.ಸಿ.ನಾಣಯ್ಯ ನಿರ್ದೇಶಕರಾದ, ಬಿದ್ದಾಟಂಡ ರಮೇಶ್ ಚಂಗಪ್ಪ, ಬೊಳ್ಯಯಂಡ.ಪಿ.ಹರೀಶ್ ಕಾರ್ಯಪ್ಪ, ಕನ್ನಂಬೀರ.ಸಿ.ತಿಮ್ಮಯ್ಯ,…
ಮಡಿಕೇರಿ NEWS DESK ಸೆ.17 : ಮಹಾಭಾರತದಲ್ಲಿ ಶ್ರೀಕೃಷ್ಣ ತನ್ನ ತಂಗಿ ಸುಭದ್ರೆಗೆ ಯುದ್ಧದಲ್ಲಿನ ಅಭೇದ್ಯವ್ಯೂಹಗಳ ಭೇದನೆಯನ್ನು ವಿವರಿಸುವಾಗ ಗರ್ಭದಲ್ಲಿದ್ದ ಅಭಿಮನ್ಯು ಅದನ್ನು ಕೇಳಿ ತಿಳಿದು, ಮುಂದೆ ಧನುರ್ವಿದ್ಯಾಪಾರಂಗತನಾದ. ವೈಜ್ಞಾನಿಕ ಸಂಶೋಧನೆಯ ಪ್ರಗತಿಯಿಂದ ಗರ್ಭಾಶಯವು ಶಬ್ದರಹಿತವಲ್ಲ ಎಂಬುದು ತಿಳಿದುಬಂದಿದೆ. ಗರ್ಭದೊಳಗಿನ ಮಗುವಿಗೆ ಹೊರ ಜಗತ್ತಿನಿಂದ ಬರುವ ಜೋರಾದ ಶಬ್ದಗಳು ಗರ್ಭರಸದ ( ಅಮ್ನಿಯೋಟಿಕ್ ಫ್ಲೂಯಿಡ್) ಮೂಲಕ ತಲುಪಬಹುದು ಮತ್ತು ನೇರವಾಗಿ ಹಾನಿಕರ ಪರಿಣಾಮ ಬೀರಬಹುದು ಎಂಬುದು ಸಾಬೀತಾಗಿದೆ. ಗರ್ಭದಲ್ಲಿ ಮಗು ಶಬ್ದವನ್ನು ಹೇಗೆ ಕೇಳುತ್ತದೆ?… ಮಗುವಿನ ಶ್ರವಣ ಶಕ್ತಿಯು ಗರ್ಭಾವಸ್ಥೆಯ ಆರಂಭದಲ್ಲಿಯೇ ಬೆಳವಣಿಗೆಯಾಗಲು ಪ್ರಾರಂಭವಾಗುತ್ತದೆ. ಸುಮಾರು ಹದಿನೆಂಟು ವಾರಗಳಲ್ಲಿ, ತಾಯಿಯ ದೇಹದ ಒಳಗಿನ ಶಬ್ದಗಳಾದ ಹೃದಯ ಬಡಿತ, ಜೀರ್ಣಕ್ರಿಯೆಯ ಶಬ್ದ ಮತ್ತು ತಾಯಿಯ ಧ್ವನಿಯನ್ನು ಕೇಳುವಷ್ಟು ಕಿವಿಯ ರಚನೆಯು ಬೆಳೆದಿರುತ್ತದೆ. ಮೂರನೇ ತ್ರೈಮಾಸಿಕದ ವೇಳೆಗೆ, ಮಗುವು ಹೊರಗಿನ ಜಗತ್ತಿನಿಂದ ಬರುವ ಶಬ್ದಗಳಾದ ಸಂಗೀತ ಮತ್ತು ಧ್ವನಿಗಳನ್ನು ಗುರುತಿಸಬಹುದು ಮತ್ತು ಅವುಗಳಿಗೆ ಪ್ರತಿಕ್ರಿಯಿಸಬಹುದು. *ಜೋರಾದ ಶಬ್ದದಿಂದ ಉಂಟಾಗುವ ಅಪಾಯಗಳು…* ತಾಯಿಯ ದೇಹದ ಹೊದಿಕೆಗಳಾದ ಹೊಟ್ಟೆಯ ಗೋಡೆ…
ಮಡಿಕೇರಿ NEWS DESK ಸೆ.17 : ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಅಸಂಘಟಿತ ಕಾರ್ಮಿಕರು ಕಡ್ಡಾಯವಾಗಿ ಹೆಸರು ನೋಂದಾಯಿಸುವಂತೆ ಕಾರ್ಮಿಕ ಸಚಿವ ಸಂತೋಷ್.ಎಸ್.ಲಾಡ್ ಅವರು ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ನಗರದ ಕ್ರಿಸ್ಟಲ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಮಂಡಳಿಯ ವಿವಿಧ ಯೋಜನೆಗಳ ಕುರಿತು ಬುಧವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು. ಕಾರ್ಮಿಕ ಇಲಾಖೆಯಲ್ಲಿ 26 ರಿಂದ 101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಂತೋಷ್ ಎಸ್.ಲಾಡ್ ಅವರು ಕೋರಿದರು. ಸರ್ಕಾರ ಪ್ರಮುಖವಾಗಿ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಿರುವುದು ಇಡೀ ದೇಶದಲ್ಲಿ ವಿಶೇಷವಾಗಿದೆ ಎಂದರು. ಸ್ವಿಗ್ಗಿ,…






