ಲೇಖಕ: admin

ಮಡಿಕೇರಿ ಸೆ.17 NEWS DESK  : ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಚನೆಗೊಂಡಿರುವ ಕನ್ನಡ ಜಾಗೃತಿ ಸಮಿತಿಯ ಕೊಡಗು ಜಿಲ್ಲಾ ಸದಸ್ಯರುಗಳನ್ನಾಗಿ ಕುಶಾಲನಗರದ ಬಿ.ಎಸ್.ಲೋಕೇಶ್ ಸಾಗರ್, ಪಾಲಿಬೆಟ್ಟದ ಡಾ.ಕಾವೇರಿ ಹೆಚ್.ಎಂ, ಮಡಿಕೇರಿಯ ಅಮೀನ್ ಮೊಹಿಸಿನ್, ಅರಮೇರಿ ಗ್ರಾಮದ ಡಾ.ರಾಧಿಕ ಕುಟ್ಟಪ್ಪ ಹಾಗೂ ವಿರಾಜಪೇಟೆಯ ಕೆ.ವಿ.ಸುನಿಲ್ ಕುಮಾರ್ ಅವರುಗಳನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.

Read More

ಮಡಿಕೇರಿ ಸೆ.17 NEWS DESK : ಕೊಡಗು ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್  ಅವರು ಸ್ಮಾರ್ಟ್ ಕಾರ್ಡ್ ವಿತರಣೆ ವಿತರಣೆ ಮಾಡಿದರು. ನಗರದ  ಹಿಲ್ ಡೆಲ್ ರೆಸಾರ್ಟ್ (ಕ್ರಿಸ್ಟಲ್ ಕೋರ್ಟ್) ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡು ಮಾತನಾಡಿ, ಕರ್ನಾಟಕ ರಾಜ್ಯ ಸರಕಾರದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಅಸಂಘಟಿತ ಕಾರ್ಮಿಕರ ಏಳಿಗೆಗಾಗಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಅತ್ಯಂತ ಸಂತೋಷದ ವಿಷಯ. ಅದರಂತೆ ಇಂದು ಕೊಡಗಿನ ಅಸಂಘಟಿತ ಕಾರ್ಮಿಕರಿಗೆ ಬಹು ಉಪಯೋಗಿ  ಸ್ಮಾರ್ಟ್ ಕಾರ್ಡ್ ಅನ್ನು ನೀಡುತ್ತಿರುವುದು ನಮ್ಮ ನಾಡಿನ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ತುಂಬಾ ಬಲವನ್ನು ನೀಡುತ್ತಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಯಾವಾಗಲೂ ತಳಮಟ್ಟದ ಕಾರ್ಮಿಕರಿಗೆ ಮಹತ್ವವನ್ನು ನೀಡುತ್ತಿದ್ದು, ಎಲ್ಲರೂ ಇದರ ಬಗ್ಗೆ ಹೆಮ್ಮೆ ಪಡಬೇಕೆಂದು ಕರೆ ನೀಡಿದರು. ಈ ಸಂದರ್ಭ ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ, ರಾಜ್ಯ…

Read More

ಮಡಿಕೇರಿ ಸೆ.17 NEWS DESK : ನಿವೇಶನ, ವಸತಿ, ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಕೊಡಗು ಜಿಲ್ಲೆಯ ಕಾರ್ಮಿಕರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸೂಚಿಸುವಂತೆ ಒತ್ತಾಯಿಸಿ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ (ಎಐಟಿಯುಸಿ) ಸಂಘಟನೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಪತ್ರ ಸಲ್ಲಿಸಿತು. ಮಡಿಕೇರಿಗೆ ಭೇಟಿ ನೀಡಿದ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ಜಿಲ್ಲೆಯ ಕಾರ್ಮಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದರು. ಕಾಫಿ, ಕರಿಮೆಣಸು, ಏಲಕ್ಕಿ, ಜೇನು ಸೇರಿದಂತೆ ವಾಣಿಜ್ಯ ಬೆಳೆಗಳ ಕೃಷಿಯ ಮೂಲಕ ಕೊಡಗು ಜಿಲ್ಲೆ ಕರ್ನಾಟಕ ರಾಜ್ಯಕ್ಕೆ ಗಣನೀಯ ಕೊಡುಗೆಯನ್ನು ನೀಡುತ್ತಿದೆ. ಜಿಲ್ಲೆಯ ತೋಟಗಳಲ್ಲಿ ಲಕ್ಷಾಂತರ ಸಂಖ್ಯೆಯ ಕಾರ್ಮಿಕರು ದುಡಿಯುತ್ತಿದ್ದು, ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತೋಟ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಹಮಾಲಿ ಕಾರ್ಮಿಕರು ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಮಿಕ ವರ್ಗ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಆದ್ದರಿಂದ ಕೊಡಗು ಜಿಲ್ಲಾಧಿಕಾರಿಗಳು ಕಾರ್ಮಿಕ ಸಂಘಟನೆಗಳ ನಾಯಕರ…

Read More

ಸೋಮವಾರಪೇಟೆ ಸೆ.17 NEWS DESK : ಸೋಮವಾರಪೇಟೆ ತಾಲ್ಲೂಕಿನಲ್ಲಿರುವ ಐತಿಹಾಸಿಕ ಹಿನ್ನೆಲೆಯುಳ್ಳ ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ರೂ.ಗಳ ಅನುದಾನ ಕಲ್ಪಿಸುವುದಾಗಿ ಶಾಸಕ ಡಾ.ಮಂತರ್ ಗೌಡ ಅವರು ಭರವಸೆ ನೀಡಿದರು. ಸೋಮವಾರಪೇಟೆ ಹಾಗೂ ಶಾಂತಳ್ಳಿ ಹೋಬಳಿಯ 7 ಗ್ರಾಮಗಳಿಗೆ ಭೇಟಿ ನೀಡಿದ ಶಾಸಕರು ಮತ್ತು ಅಧಿಕಾರಿಗಳ ತಂಡ ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಯಡೂರು ಗ್ರಾಮದ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಹಿಳೆಯರು ತಮ್ಮೂರಿನ ರಸ್ತೆಯ ಸಮಸ್ಯೆಯ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿಕೊಟ್ಟರು. ಗ್ರಾಮದೊಳಗಿನ ರಸ್ತೆಯಲ್ಲಿ ತಿರುಗಾಡಲು ಸಮಸ್ಯೆಯಾಗಿದೆ. ರಸ್ತೆ ಡಾಮರೀಕರಣಕ್ಕೆ ಅನುದಾನ ಕಲ್ಪಿಸಬೇಕೆಂದು ಮನವಿ ಮಾಡಿದರು. ಚೌಡ್ಲು ಗ್ರಾಮದಲ್ಲಿ ನಡೆದ ಸಭೆಯಲ್ಲಿ ಚೌಡ್ಲು ಸುಗ್ಗಿ ಕಟ್ಟೆ ಅಭಿವೃದ್ಧಿಗೆ 10 ಲಕ್ಷ ರೂ.ಗಳ ಅನುದಾನ ಹಾಗೂ 50 ಲಕ್ಷ ರೂ.ಗಳ ವೆಚ್ಚದಲ್ಲಿ ಚನ್ನಬಸಪ್ಪ ಸಭಾಂಗಣದಿಂದ ಚೌಡ್ಲು ಗ್ರಾಮದೊಳಗಿನ ರಸ್ತೆ ಕಾಮಗಾರಿ ನಡೆಯಲಿದೆ ಎಂದು ಹೇಳಿದರು. ಹಾನಗಲ್ಲು ಶೆಟ್ಟಳ್ಳಿ ಗ್ರಾಮಸ್ಥರು ರಸ್ತೆ, ತಡೆಗೋಡೆ, ಹಾಗು ಸಮುದಾಯಭವನಕ್ಕೆ ಅನುದಾನ ನೀಡುವಂತೆ…

Read More

ಮಡಿಕೇರಿ ಸೆ.17 NEWS DESK : ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಎಂ.ಸಿ ನಾಣಯ್ಯ ಅವರ ಮನೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್,  ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ಕುಶಲೋಪರಿ ವಿಚಾರಿಸಿದರು.  ಜನ್ಮದಿನ ಸಂಭ್ರಮದಲ್ಲಿದ್ದ ಎಂ.ಸಿ.ನಾಣಯ್ಯ ಅವರನ್ನು ಅಭಿನಂದಿಸಿ, ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ  ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ  ಧರ್ಮಜ ಉತ್ತಪ್ಪ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.17 NEWS DESK : ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಸುವ ಕರ್ನಾಟಕ ರಾಜ್ಯದ ಸಮಗ್ರ ಜನತೆಯ ಜಾತಿ ಜನಗಣತಿಯ ಸಂದರ್ಭ ಕೊಡವ ಭಾಷಿಕ ಜನಾಂಗದವರು ಧರ್ಮವನ್ನು “ಹಿಂದೂ”, ಜಾತಿಯನ್ನು ಸರಕಾರದ ಜಾತಿವಾರು ಪಟ್ಟಿಯಲ್ಲಿ ಈಗಾಲೇ ಗುರುತಿಸಲ್ಪಟ್ಟಿರುವ ತಮ್ಮ ಜಾತಿಯ ಹೆಸರನ್ನು ಮತ್ತು ಭಾಷೆ ಕಾಲಂನಲ್ಲಿ ಕೊಡವ ಭಾಷೆ ಎಂದು ನಿಖರ ಮಾಹಿತಿ ನೀಡುವಂತೆ ಕೊಡವ ಭಾಷಿಕ ಸಮುದಾಯಗಳ ಕೂಟ ಮನವಿ ಮಾಡಿದೆ. ವಿರಾಜಪೇಟೆಯ ಜಯಶ್ರೀ ಸಭಾಂಗಣದಲ್ಲಿ ನಡೆದ ಕೊಡವ ಭಾಷಿಕ ಸಮುದಾಯಗಳ ಕೂಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಜಾತಿ ಜನಗಣತಿ ಸಂದರ್ಭ ನಿಖರ ಮಾಹಿತಿ ನೀಡಿ ಸಹಕರಿಸುವಂತೆ ತಿಳಿಸಿದರು. ಗಣತಿದಾರರು ಮನೆಗೆ ಭೇಟಿ ನೀಡಿದಾಗ ಶೈಕ್ಷಣಿಕ, ಉದ್ಯೋಗ, ಅರ್ಥಿಕ, ಸಾಮಾಜಿಕ ಮತ್ತಿತರ ಮಾಹಿತಿಯನ್ನು ಯಾವುದೇ ತಪ್ಪಿಲ್ಲದೆ ಸ್ಪಷ್ಟವಾಗಿ ನೀಡಬೇಕು. ಸರಿಯಾದ ಮಾಹಿತಿ ನೀಡುವುದರಿಂದ ಮುಂದಿನ ದಿನಗಳಲ್ಲಿ…

Read More

ವಿರಾಜಪೇಟೆ ಸೆ.17 NEWS DESK : ಶಿವಕೇರಿಯ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಸೆ.22 ರಿಂದ ಅ.1 ರವರೆಗೆ ವಿಶೇಷ ಪೂಜೆಗಳು ನಡೆಯಲಿದೆ. 9 ದಿವಸ ನವದುರ್ಗಿ ಮಾತೆಯ 9 ಅವತಾರದ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮ ನಿತ್ಯ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕೆಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Read More

ವಿರಾಜಪೇಟೆ ಸೆ.17 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.20 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ಪಟ್ರಪಂಡ ಗೀತಾ ಬೆಳ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮಹಾಸಭೆಗೆ ಮಹಿಳಾ ಸಹಕಾರ ಸಂಘದ ಎಲ್ಲ ಸದಸ್ಯರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪುತ್ತೂರು ಸೆ.17 NEWS DESK : ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಮೌಲ್ಯಯುತವಾಗಿ ಬಳಸಿಕೊಂಡರೆ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಬಹುದು ಎಂದು ಜಗತ್ತಿಗೆ ತಿಳಿಸಿಕೊಟ್ಟ ಸರ್.ಎಂ.ವಿಶ್ವೇಶ್ವರಯ್ಯನವರ ಜೀವನವು ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಪರವಾನಿಗೆ ಪಡೆದ ಭೂಮಾಪಕ ವಿನೋದ್ ಕುಮಾರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು. ಸಿವಿಲ್ ಇಂಜಿನಿಯರಿಂಗ್ ಮುಗಿಸಿದವರಿಗೆ ಸಾಕಷ್ಟು ಸರಕಾರಿ ಕೆಲಸಗಳು ಲಭ್ಯವಿದೆ, ಇದಕ್ಕಾಗಿ ಒಂದಷ್ಟು ಪೂರ್ವ ತಯಾರಿಯ ಅಗತ್ಯವಿದೆ ಎಂದರು. ಯಾವುದೇ ಕೆಲಸ ಮಾಡುವಾಗ ತಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಬೇಕು, ದಿನದಿಂದ ದಿನಕ್ಕೆ ಬದಲಾಗುವ ತಂತ್ರಜ್ಞಾನವನ್ನು ಇಂಜಿನಿಯರುಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ಸಮಾಜದ ಉನ್ನತಿಗೆ ಮತ್ತು ರಾಷ್ಟ್ರದ ಏಳಿಗೆಗೆ ಶ್ರಮಿಸಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಮೂಲಸೌಕರ್ಯದಿಂದ ಹಿಡಿದು…

Read More

ಕಾರ್ಕಳ ಸೆ.17 NEWS DESK : ನಿಟ್ಟೆ ಎನ್.ಎಂ.ಎ.ಎಂ.ಐ.ಟಿ ಯಲ್ಲಿ ನಡೆದ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಹ್ಯಾನ್ಸೆಲ್ ಇಮ್ಯಾನುಯೆಲ್ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾನೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

Read More