ಮಡಿಕೇರಿ ಅ.22 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ ಇವರ ವತಿಯಿಂದ ಪ್ರತಿ ವರ್ಷದಂತೆ 2025-26ನೇ ಸಾಲಿಗೆ ಜಿಲ್ಲೆಯ ವಿವಿಧ ಸಂಘ- ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ (ಗಣಪತಿ ಉತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಇತರೆ ಕಾರ್ಯಕ್ರಮಗಳನ್ನು ಹೊರತುಪಡಿಸಿ) ವೇದಿಕೆ ಹಾಗೂ ಮೆರವಣಿಗೆಗೆ ಸಂಬಂಧಿಸಿದಂತೆ ಕಲಾತಂಡ ನಿಯೋಜಿಸಲು ಅವಕಾಶವಿದ್ದು, ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಕಾರ್ಯಕ್ರಮಗಳು ರೂಪಿಸಿಕೊಂಡ ಸಂಘ-ಸಂಸ್ಥೆಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೇದಿಕೆ ಹಾಗೂ ಮೆರವಣಿಗೆಗೆ ಕಲಾತಂಡಗಳನ್ನು ಪ್ರಾಯೋಜಿಸಲು ತಮ್ಮ ಪೂರ್ಣ ವಿವರಗಳೊಂದಿಗೆ ಸಕಾಲದ ಸೇವಾಸಿಂಧುವಿನಡಿ ಕಾರ್ಯಕ್ರಮ ನಡೆಯುವ 15 ದಿನಗಳ ಮುಂಚಿತವಾಗಿ ಮನವಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228490 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಅ.21 : ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವ ಎಂದು ದಾಖಲೀಕರಣಗೊಂಡರೆ ಮಾತ್ರ ಕೊಡವರು ಸಂವಿಧಾನಬದ್ಧವಾದ ಹಕ್ಕುಗಳನ್ನು ಸಾಧಿಸಲು ಸಾಧ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಉಮ್ಮತ್ ನಾಡಿನ ಅಮ್ಮತ್ತಿಯಲ್ಲಿ ಸಿಎನ್ಸಿ ವತಿಯಿಂದ ನಡೆದ 16ನೇ ಕೊಡವ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು. ಆದಿಮಸಂಜಾತ, ಇಂಡಿಜಿನಸ್, ಆನಿಮಿಸ್ಟಿಕ್ ನಂಬಿಗೆಯ ಏಕ ಜನಾಂಗೀಯ ಕೊಡವರ ಪ್ರತ್ಯೇಕ ಗುರುತು ನೋಂದವಣೆಯ ಪ್ರಕ್ರಿಯೆ ರಾಷ್ಟ್ರೀಯ ಜನಗಣತಿಯಲ್ಲಿ ದಾಖಲಿಕರಣವಾದರೆ ಮಾತ್ರ ನಮಗೆ ಸಂವಿಧಾನ ಬದ್ಧ ಹಕ್ಕು ದೊರೆಯಲಿದೆ. ಕೊಡವರ ಪೂರ್ವಾರ್ಜಿತ ಭೂಹಕ್ಕು ಮತ್ತು ಕೊಡವರ ಧಾರ್ಮಿಕ ಸಂಸ್ಕಾರ ತೋಕ್-ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಲಿದೆ ಎಂದರು. 2026-27 ರಲ್ಲಿ ನಡೆಯಲಿರುವ…
ಮಡಿಕೇರಿ ಅ.21 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ಹಿರಿಯ ನಾಗರಿಕರಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಏರ್ಪಡಿಸಿದೆ. ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಅಪಾರವಾಗಿ ಅನುಭವಿರುವ ಹಿರಿಯ ನಾಗರಿಕರು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಅವರು ತಮ್ಮ ಸ್ವರಚಿತ ಕವನವನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡತಕ್ಕದ್ದು. ಕವನಗಳನ್ನು ಪರಿಶೀಲಿಸಿ ಆಯ್ಕೆಗೊಳಿಸಲು ಸಮಿತಿ ರಚಿಸಲಾಗುವುದು. ಕವನ 16 ಗೆರೆಗಳನ್ನು ಮೀರಿರಬಾರದು. ಒಬ್ಬರು ಒಂದು ಕವನವನ್ನು ಮಾತ್ರ ಕಳುಹಿಸಬಹುದು ಕನ್ನಡ ಭಾಷೆಯ ಚುಟುಕು ಕವನ(4 ಸಾಲಿನ ಗರಿಷ್ಠ 4 ಕವನ) ಗಳನ್ನೂ ಕಳುಹಿಸಬಹುದು. ಲಕೊಟೆಯ ಮೇಲೆ *ರಾಜ್ಯೋತ್ಸವ ಹಿರಿಯರ ಕವಿಗೋಷ್ಠಿ*ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಮಾತ್ರ ಅವಕಾಶ. ಕವನಗಳನ್ನು ಕಳುಹಿಸಲು ಕಡೆಯ ದಿನಾಂಕ 05.11.2025. ಈ ಕೆಳಗಿನ ಮೊಬೈಲ್ ಗಳಿಗೆ ವಾಟ್ಸಪ್ ಮೂಲಕವೂ ಕಳುಹಿಸಬಹುದು. ಕವನದ ಜೊತೆಗೆ ಆಧಾರ್ ಕಾರ್ಡ್ ಅಥವಾ ಹಿರಿಯ ನಾಗರಿಕ ದೃಢೀಕರಣ ಪತ್ರದ ನಕಲನ್ನು ಕಳುಹಿಸಿತಕ್ಕದ್ದು. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು,…
ಮಡಿಕೇರಿ ಅ.21 NEWS DESK : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನ.1, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೊಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕ ಕೊಡಬೇಕಾಗಿಲ್ಲ. ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವವರಿಗೆ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿ ದೊರೆಯಲಿದೆ. ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ…
ಮಡಿಕೇರಿ ಅ.21 NEWS DESK : ಜಿಲ್ಲಾ ಪೊಲೀಸ್ ಘಟಕ ವತಿಯಿಂದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ ಗಣ್ಯರು ಹಾಗೂ ಅತಿಥಿಗಳು ಗೌರವ ನಮನ ಸಲ್ಲಿಸಿದರು. ಪೊಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪೆರೆಡ್ ಕಮಾಂಡರ್ ಆರ್.ಪಿ.ಗಣೇಶ್ ಅವರು ಗೌರವ ವಂದನೆ ಸಲ್ಲಿಸಿ, ಮುಖ್ಯ ಅತಿಥಿಗಳಿಂದ ಅನುಮತಿ ಪಡೆದರು. ಬಳಿಕ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಕುಮಾರ್, ಗುಪ್ತದಳ ವಿಭಾಗದ ಪೊಲೀಸ್ ನಿರೀಕ್ಷರಾದ ಐ.ಪಿ.ಮೇದಪ್ಪ, ಜಿಲ್ಲಾ ಪೊಲೀಸ್ ಲಿಪಿಕ ಸಿಬ್ಬಂದಿಗಳ ಪರವಾಗಿ ಪಿ.ಎ.ನಂಜಪ್ಪ, ನಿವೃತ್ತ ಪೊಲೀಸ್ ಅಧಿಕಾರಿಗಳ ಪರವಾಗಿ ಅಪ್ಪಯ್ಯ, ನಿವೃತ್ತ ಸೇನಾಧಿಕಾರಿಗಳ ಪರವಾಗಿ ಮೊಣ್ಣಪ್ಪ, ಜಿಲ್ಲಾ ಕಾರಾಗೃಹ ಪರವಾಗಿ ಸಂಜಯ್ ಜತ್ತಿ, ನಗರಸಭೆ ಪರವಾಗಿ ಅಧ್ಯಕ್ಷರಾದ ಪಿ.ಕಲಾವತಿ ಹಾಗೂ ಸದಸ್ಯರಾದ ಅನಿತಾ ಪೂವಯ್ಯ,…
ಮಡಿಕೇರಿ ಅ.21 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯ ವತಿಯಿಂದ ಕಾರ್ತಿಕ ಮಾಸದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಉತ್ಸವಾದಿಗಳು ಶಾಸ್ತ್ರೋಕ್ತವಾಗಿ ನಡೆಯಲಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಅಧ್ಯಕ್ಷರಾದ ಚುಮ್ಮಿ ದೇವಯ್ಯ ಅವರು ತಿಳಿಸಿದ್ದಾರೆ. ಅ.22 ರಂದು ಸಂಜೆ 6 ಗಂಟೆಗೆ ಗೋಪೂಜೆ ನಡೆಯಲಿದೆ. ಅಕ್ಟೋಬರ್ 22 ರಿಂದ ನವೆಂಬರ್ 2 ರವರೆಗೆ 12 ದಿನಗಳ ಕಾಲ ಸಂಜೆ 6.30 ಗಂಟೆಯಿಂದ ತುಳಸಿ ಪೂಜೆ ನಡೆಯಲಿದ್ದು, ತುಳಸಿ ಪೂಜೆ ಮಾಡಿಸ ಬಯಸುವ ಭಕ್ತಾಧಿಗಳು 100 ಸೇವಾ ದರ ಪಾವತಿಸಿ, ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರವಾಗಿಬೇಕಾಗಿ ಕೋರಿದ್ದಾರೆ. ನವೆಂಬರ್ 2 ರಂದು ಬೆಳಗ್ಗೆ 10.30 ಗಂಟೆಗೆ ತುಳಸಿ ಕಲ್ಪೋಕ ಪೂಜೆ ನಡೆಯಲಿದೆ. ಹಾಗೆಯೇ ನವೆಂಬರ್ 5 ರಂದು ಸಂಜೆ 6 ಗಂಟೆಗೆ ಮಹಾಪೂಜೆ ನಡೆಯಲಿದೆ. ಜೊತೆಗೆ ಸಂಜೆ 6.30 ಗಂಟೆಗೆ ತೆಪ್ಪೋತ್ಸವ, ದಟ್ಟೋತ್ಸವ ಮತ್ತು ಪಲ್ಲಕ್ಕಿ ಉತ್ಸವ ನಡೆಯಲಿದೆ. ಕಾರ್ತಿಕ ಹುಣ್ಣಿಮೆಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ…
ಮಡಿಕೇರಿ ಅ.21 NEWS DESK : ನಗರದ ಶ್ರೀ ರಾಘವೇಂದ್ರ ದೇವಸ್ಥಾನದ ಬಳಿಯ ಕಲಾ ನಗರ ಸಾಂಸ್ಕೃತಿಕ ಕಲಾ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 12ನೇ ವರ್ಷದ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಅ.26 ಹಾಗೂ ನ.22 ರಂದು ರಂದು ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಆರ್.ಮಹೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಬೆಳಿಗ್ಗೆ 9 ಗಂಟೆಗೆ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರಿಡಾಂಗಣದಲ್ಲಿ ಶ್ರೀ ರಾಘವೇಂದ್ರ ದೇವಸ್ಥಾನ ವ್ಯಾಪ್ತಿಯ ನಿವಾಸಿಗಳು, ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಚೈನ್ ಗೇಟ್ ನಿವಾಸಿಗಳಿಗೆ ಸೀಮಿತವಾಗಿ ಆಟೋಟ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಅಂದು ಕ್ರಿಕೆಟ್ ಪಂದ್ಯಾವಳಿ, ವಿವಿಧ ವಿಭಾಗಗಳಲ್ಲಿ 100 ಮೀಟರ್ ಓಟದ ಸ್ಪರ್ಧೆ, ಹಗ್ಗಜಗ್ಗಾಟ, 50 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ವೇಗದ ನಡಿಗೆ ಸ್ಪರ್ಧೆ, ಮನೋರಂಜನಾ ಸ್ಪರ್ಧೆಗಳು ನಡೆಯಲಿದ್ದು, ಮಧ್ಯಾಹ್ನದ ನಂತರ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. *ಸಾಂಸ್ಕೃತಿಕ ಸ್ಪರ್ಧೆ* ನ.22 ರಂದು ಬೆಳಿಗ್ಗೆ 9…
ಮಡಿಕೇರಿ ಅ.21 NEWS DESK : ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ನೇತೃತ್ವದಲ್ಲಿ ಎರಡನೇ ಅವಧಿಯ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದು ಆರು ತಿಂಗಳುಗಳೇ ಕಳೆದಿದ್ದರೂ ನಿಯಮಾನುಸಾರ ಸಭೆ ನಡೆಸದೆ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಲಾಗಿದೆ. ಮುಂದಿನ ಎರಡು ವಾರದೊಳಗೆ ಸಾಮಾನ್ಯ ಸಭೆಯನ್ನು ನಡೆಸದಿದ್ದರೆ ಪ್ರಕರಣ ಸಂಖ್ಯೆ 47(3) ಪ್ರಕಾರ ಅಭಿವೃದ್ಧಿಯ ದೃಷ್ಟಿಯಿಂದ ನಾವುಗಳೇ ಸಭೆ ಕರೆಯುತ್ತೇವೆ ಎಂದು ನಗರಸಭೆಯ ವಿರೋಧ ಪಕ್ಷ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ, ಎಸ್ಡಿಪಿಐ ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಅವರು ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಪ್ರಕರಣ 47(1) ರ ಪ್ರಕಾರ ಪ್ರತಿ ತಿಂಗಳು ಕನಿಷ್ಠ ಒಂದು ಸಭೆಯನ್ನಾದರೂ ನಡೆಸಬೇಕು. ಆದರೆ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಕಳೆದ ಆರು ತಿಂಗಳಿನಲ್ಲಿ ಕೇವಲ ಒಂದು ಸಾಮಾನ್ಯ ಸಭೆ ಮತ್ತು ಒಂದು ತುರ್ತು ಸಭೆಯನ್ನು ಮಾತ್ರ ನಡೆಸಿ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು…
ಮಡಿಕೇರಿ ಅ.21 NEWS DESK : ಬೆಂಗಳೂರಿನ ಸತ್ಯ ಪ್ರಕಾಶ್ ಅವರು ರಚಿಸಿರುವ ಬ್ಲಾಕ್ ಚೈನ್ (BLOCK CHAIN) ಇಂಗ್ಲೀಷ್ ಕೃತಿ ಮಡಿಕೇರಿಯಲ್ಲಿ ಬಿಡುಗಡೆಗೊಂಡಿತು. ಕ್ಲಬ್ ಮಹೀಂದ್ರದಲ್ಲಿ ಜಿಲ್ಲೆಯ ಸರಕಾರಿ ಅಭಿಯೋಜಕ ಶ್ರೀಧರನ್ ನಾಯರ್ ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಪತ್ರಿಕಾ ಭವನದ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್, ಹಿರಿಯ ವಕೀಲರಾದ ರಮೇಶ್ ಚಂದರ್ ನಂಬಿಯಾರ್, ಕೆ.ಎಂ.ರಾಜನ್ ಹಾಗೂ ಕೃತಿ ರಚನೆಕಾರ ಸತ್ಯ ಪ್ರಕಾಶ್ ಉಪಸ್ಥಿತರಿದ್ದರು. ಸತ್ಯ ಪ್ರಕಾಶ್ ಅವರು ಕೇರಳ ಉಚ್ಚನ್ಯಾಯಾಲಯದ ಹಿರಿಯ ವಕೀಲ ರಮೇಶ್ ಚಂದರ್ ನಂಬಿಯಾರ್ ಅವರ ಅಳಿಯ.
ಮೈಸೂರು ಅ.21 NEWS DESK : ದೀಪಾವಳಿ ಅಮಾವಾಸ್ಯೆ ಸಂದರ್ಭದಲ್ಲಿ ಐತಿಹಾಸಿಕ ಪಿರಿಯಾಪಟ್ಟಣ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ ದೇವರ ದರ್ಶನ ಪಡೆದಿದ್ದು ಧನ್ಯತಾ ಭಾವ ಮೂಡಿಸಿತು ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿರುವ ಐತಿಹಾಸಿಕ ಶ್ರೀ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ಯದುವೀರ್ ಒಡೆಯರ್ ಸಮಸ್ತ ಭಕ್ತಾದಿಗಳೊಡನೆ ಪಾದಯಾತ್ರೆ ಮೂಲಕ ಹತ್ತಿ ಶ್ರೀ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಭಕ್ತಿಯಿಂದ ಪ್ರಾರ್ಥಿಸಿದರು. :: ವಿಶೇಷ ಅನುಭೂತಿ :: ನಂತರ ಮಾಹಿತಿ ನೀಡಿದ ಸಂಸದರು, ನಮ್ಮ ಕ್ಷೇತ್ರದ ಸಾವಿರಾರು ಭಕ್ತರೊಂದಿಗೆ ಪಾದಯಾತ್ರೆ ಕೈಗೊಂಡು, ದರ್ಶನ ಪಡೆದಿದ್ದು ವಿಶೇಷ ಅನುಭೂತಿ ದೊರೆಯಿತು ಎಂದರು. :: ನಾಡು ಸುಭಿಕ್ಷವಾಗಲಿ :: ಬೆಳಕಿನ ಹಬ್ಬ ದೀಪಾವಳಿ ನಾಡಿನ ಪ್ರತಿಯೊಬ್ಬರಿಗೂ ಸುಖ, ಶಾಂತಿ, ಸಮೃದ್ಧಿ ತರಲಿ. ನಾಡು ಸದಾ ಸುಭಿಕ್ಷವಾಗಿರಲಿ ಎಂದು ಸಂಸದರು ಇದೇ ಸಂದರ್ಭದಲ್ಲಿ ಶುಭ ಕೋರಿದರು. ::…






