ಮಡಿಕೇರಿ ಸೆ.17 NEWS DESK : ಚಿಲಿಯ ಕೊರಾಲ್ಕೊದಲ್ಲಿ ನಡೆದ ಅಂತಾರಾಷ್ಟ್ರೀಯ ಕ್ರಾಸ್-ಕಂಟ್ರಿ ಸ್ಕೀಯಿಂಗ್ ಎಫ್ಐಎಸ್ ಚಾಂಪಿಯನ್ಶಿಪ್ನಲ್ಲಿ ಕೊಡಗಿನ ತೆಕ್ಕಡ ಭವಾನಿ ಕಂಚಿನ ಪದಕ ಗೆದ್ದು, ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸ್ಕೀಯಿಂಗ್ ನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳೆ ಎಂಬ ಕೀರ್ತಿಗೆ ತೆಕ್ಕಡ ಭವಾನಿ ಪಾತ್ರರಾಗಿದ್ದಾರೆ.
ಲೇಖಕ: admin
ಮಡಿಕೇರಿ ಸೆ.17 NEWS DESK : ಕುಶಾಲನಗರದಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ನಂದಕುಮಾರ್, ಆರ್.ಪಿ.ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಮುನಿರ್ ಅಹಮದ್, ಕವನ್ ಕೊತ್ತೋಳಿ ಸೇರಿದಂತೆ ಇತರ ಕಾರ್ಯಕರ್ತರು ಸಚಿವ ಸಂತೋಷ್ ಲಾಡ್ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.
ಮಡಿಕೇರಿ ಸೆ.17 NEWS DESK : ಕೊಡಗು ಜಿಲ್ಲೆಗೆ ಆಗಮಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.
ಮಡಿಕೇರಿ NEWS DESK ಸೆ.16 : ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕಾರ್ಯದರ್ಶಿಯಾಗಿ ಜಿಲ್ಲೆಯ ಕಾರ್ಮಿಕ ಮುಖಂಡ ಪಿ.ಆರ್.ಭರತ್ ಅವರು ಆಯ್ಕೆಯಾಗಿದ್ದಾರೆ. ಯಾದಗಿರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ 9ನೇ ರಾಜ್ಯ ಸಮ್ಮೇಳನದಲ್ಲಿ ಪಿ.ಆರ್.ಭರತ್ ಅವರನ್ನು ರಾಜ್ಯ ಸಮಿತಿಗೆ ಆಯ್ಕೆ ಮಾಡಲಾಯಿತು.
ಮಡಿಕೇರಿ ಸೆ.16 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್ನಲ್ಲಿ ಸೆಪ್ಟೆಂಬರ್, 18 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತಲಕಾವೇರಿ ಜಾತ್ರೆ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಲಿದೆ. ಆದ್ದರಿಂದ ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಸೆ.16 NEWS DESK : ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಸೆ.17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಸೆ.17 ರಂದು ಬೆಳಗ್ಗೆ 9 ಗಂಟೆಗೆ ನಗರದ ಐಬಿಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ ನಗರದ ಹಿಲ್ಡೇಲ್ ರೆಸಾರ್ಟ್(ಕ್ರಿಸ್ಟಲ್ ಹಾಲ್)ನಲ್ಲಿ ಕೊಡಗು ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊಡಗು ಜಿಲ್ಲೆಯ ವಿವಿಧ ಸಂಸ್ಥೆಗಳ ಪ್ರಮುಖರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕಾರ್ಮಿಕ ಸಚಿವರ ಆಪ್ತ ಕಾರ್ಯದರ್ಶಿ ಪಿ.ಕುಮಾರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಸೆ.16 NEWS DESK : ತಲಕಾವೇರಿಯಲ್ಲಿ ಅ.17 ರಂದು ಜರುಗುವ ಪವಿತ್ರ ಕಾವೇರಿ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಅ.17 ರಂದು ಮಧ್ಯಾಹ್ನ 1.44 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಸಚಿವರು ಸೂಚಿಸಿದರು. ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…
ಮಡಿಕೇರಿ ಸೆ.16 NEWS DESK : ಕಳೆದ ನಾಲ್ಕು ತಿಂಗಳು ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, ಕಳೆದ ನಾಲ್ಕು ತಿಂಗಳು ಸುರಿದ ಧಾರಾಕಾರ ಮಳೆಯಿಂದ ರಸ್ತೆ, ಸೇತುವೆ, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು, ಹಾಗೆಯೇ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ಆಗಿದ್ದು, ಈ ಬಗ್ಗೆ ನಿಖರ ಅಂಕಿ ಅಂಶ ನೀಡುವಂತೆ ಸಚಿವರು ನಿರ್ದೇಶನ ನೀಡಿದರು. ಸಭೆಯ ಆರಂಭದಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಈ ಬಾರಿ ಜೂನ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, 2025 ರ ಜ.1 ರಿಂದ ಸೆ.14 ರವರೆಗೆ 2,331…
ಮಡಿಕೇರಿ ಸೆ.16 NEWS DESK : ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು. ತಮ್ಮ ಅನುದಾನದ ರೂ.5 ಲಕ್ಷದಲ್ಲಿ ನಿರ್ಮಾಣಗೊಂಡ ಲೂಡ್ಸ್ ಶಾಲೆಗೆ ತೆರಳುವ ರಸ್ತೆಯನ್ನು ಲೋಕಾರ್ಪಣೆ ಮಾಡಿದ ಬಳಿಕ, ರೂ.8 ಲಕ್ಷದಲ್ಲಿ ನಿರ್ಮಾಣವಾದ ಸರಕಾರಿ ಪದವಿಪೂರ್ವ ಕಾಲೇಜಿಗೆ ತೆರಳುವ ನೂತನ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು. ಬಳಿಕ ಶಾಸಕರು ಸ್ಥಳೀಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ವಾಲಿಬಾಲ್ ಟೂರ್ನಿಯನ್ನು ಉದ್ಘಾಟಿಸಿ ಶುಭ ಕೋರಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷರಾದ ಕಾಳಪ್ಪ, ಪಂಚಾಯಿತಿ ಸದಸ್ಯರು ನಜರ್, ಕೆಡಿಪಿ ಸದಸ್ಯರು ಗಣೇಶ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಮಲ್ದಾರೆ ಪಂಚಾಯಿತಿ ಸದಸ್ಯರಾದ ಲಲಿತಾ, ಪಕ್ಷದ ಪ್ರಮುಖರು ಮಿಲನ್ ಸುಬ್ಬಯ್ಯ, ಕಾಲೇಜು ಪ್ರಾಂಶುಪಾಲರಾದ ಶೈನಿ, ದರ್ಶನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕುಶಾಲನಗರ ಸೆ.16 NEWS DESK : ಕುಶಾಲನಗರದ ಶ್ರೀ ಅಮರ ನಾರಾಯಣ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸ್ಥಳೀಯ ಟಿಟಿಡಿ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಟಿ.ಬಿ. ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಳೆದ ಸಾಲಿನ ವಾರ್ಷಿಕ ವಹಿವಾಟಿನ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ನೂತನ ನಿರ್ದೇಶಕರಾಗಿ ಟಿ.ಎ ಪ್ರಕಾಶ್, ಸುಬ್ರಮಣಿಯವರನ್ನು ಸೇರ್ಪಡೆಗೊಳಿಸಲಾಯಿತು. ಸಭೆಯಲ್ಲಿ ಕುಶಾಲನಗರ ಕೈವಾರ ತಾತಯ್ಯ ಬಲಿಜ ಸಮಾಜದ ಅಧ್ಯಕ್ಷ ಬಾಬಣ್ಣ, ಕೊಡಗು ಬಲಿಜ ಸಮಾಜದ ಅಧ್ಯಕ್ಷ ಗಣೇಶ್ ನಾಯ್ಡು, ಶ್ರೀ ಅಮರ ನಾರಾಯಣ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಲೋಕೇಶ್, ನಿರ್ದೇಶಕರಾದ ವೆಂಕಟೇಶಲು, ಮದನ್, ರಮ್ಯಾ, ಶ್ವೇತ, ಜಯರಾಮ್ , ಎಂ.ಆರ್.ಗಣೇಶ್, ಟಿ.ಆರ್.ಜಗದೀಶ್, ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್.ಸುಪ್ರೀತಾ ಹಾಜರಿದ್ದರು.






