ಲೇಖಕ: admin

ಮಡಿಕೇರಿ ಸೆ.16 NEWS DESK : ನಿವೇಶನ ರಹಿತ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ನಿವೇಶನ ಹೋರಾಟ ಸಮಿತಿ ಚೆಟ್ಟಳ್ಳಿಯಲ್ಲಿ ಪ್ರತಿಭಟನೆ ನಡೆಸಿತು. ಚೆಟ್ಟಳ್ಳಿ ಗ್ರಾ.ಪಂ ಎದುರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ ಸಮಿತಿಯ ಪ್ರಮುಖರು ಹಾಗೂ ನಿವೇಶನ ರಹಿತರು ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅವರು, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತವಾಗಿ ವಾಸಿಸಲು ಮನೆಯಿಲ್ಲದ ಸುಮಾರು 100ಕ್ಕಿಂತಲೂ ಹೆಚ್ಚು ಕುಟುಂಬಗಳು ತೋಟದ ಲೈನ್‍ಮನೆಗಳಲ್ಲಿ, ಅಪಾಯಕಾರಿ ಪ್ರದೇಶಗಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳೇ ಕಳೆದಿದ್ದರೂ ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಕನಸು ನನಸಾಗಲಿಲ್ಲ. ಸಂವಿಧಾನದ ಆಶಯಗಳು ಸಮರ್ಪಕವಾಗಿ ಜಾರಿಯಾಗದೆ ಇರುವುದರಿಂದ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಆದಿವಾಸಿ, ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಹಾಗೂ ಅನೇಕ ಸಣ್ಣ ಸಮುದಾಯಗಳು ನೈಜ ಸ್ವಾತಂತ್ರ್ಯವನ್ನು ಅನುಭವಿಸಲಾಗದ ಪರಿಸ್ಥಿತಿಯಲ್ಲಿವೆ. ಸರಕಾರಿ ಭೂಮಿ ಒತ್ತುವರಿಯಾಗಿ ಉಳ್ಳವರ…

Read More

ಸೋಮವಾರಪೇಟೆ ಸೆ.16 NEWS DESK : ಸೋಮವಾರಪೇಟೆ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿಗೊಂಡಿರುವ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. ಯೋಜನಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನ ಪರಿ಼ಷತ್‌ ಮಾಜಿ ಸದಸ್ಯ ಎಸ್‌.ಜಿ.ಮೇದಪ್ಪ ಉದ್ಘಾಟಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಶ್ರದ್ಧೆ, ಭಕ್ತಿ, ಹಠ ಛಲದಿಂದ ವಿದ್ಯಾಭ್ಯಾಸವನ್ನು ಮಾಡಬೇಕು, ಇಲ್ಲಿ ಬಂದಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡುವವರಾಗಿದ್ದು, ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಉತ್ತಮ ಹುದ್ದೆಯನ್ನು ಅಲಂಕರಿಸಿ, ಜನರ ಸೇವೆಯನ್ನು ಮಾಡುವಂತಾಗಬೇಕು ಎಂದು ತಿಳಿಸಿದರು. ಪರಮ ಪೂಜ್ಯ ಹೆಗ್ಗಡೆಯವರು ಸಮಾಜದ ಬಡ ವಿದ್ಯಾರ್ಥಿಗಳು ಕೂಡ ಉನ್ನತ ವ್ಯಾಸಂಗ ಮಾಡುವಂತಾಗಬೇಕು ಎಂದು ಈ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮವನ್ನು ರೂಪಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಶ್ರೀಮತಿ ಲೀಲಾವತಿರವರು ಮಾತನಾಡುತ್ತಾ ಬಡವರು ಬಡವರಾಗಿಯೇ ಇರಬಾರದು, ತನ್ನ ಹುಟ್ಟು-ಸಾವಿನ ಮಧ್ಯದಲ್ಲಿ ಇರುವ ಸಮಯದಲ್ಲಿ ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕೆನ್ನುವ ಕನಸನ್ನು ಕಟ್ಟಿಕೊಳ್ಳಬೇಕು.…

Read More

ಸೋಮವಾರಪೇಟೆ ಸೆ.16 NEWS DESK : ತೋಳೂರು ಶೆಟ್ಟಳ್ಳಿಯ ಶುಭಾಸ್ ನಗರದಲ್ಲಿ ಶ್ರೀ ವಿನಾಯಕ ಯುವಕ ಸಂಘದ ವತಿಯಿಂದ 9ನೇ ವರ್ಷದ ಗೌರಿ ಗಣೇಶ ಮೂರ್ತಿ ವಿಸರ್ಜನ ಕಾರ್ಯಕ್ರಮ ನಡೆಯಿತು. ಡಿಜೆ ಸೌಂಡ್ ಹಾಗೂ ಗೊಂಬೆ ಕುಣಿತದೊಂದಿಗೆ ವಿದ್ಯುತ್ ದೀಪಾಲಂಕಾರಗೊಂಡ ವಾಹನದಲ್ಲಿ ಗೌರಿ ಗಣೇಶ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ನಡೆಸಿ, ತೋಳೂರು ಶೆಟ್ಟಳ್ಳಿ ಬಸವೇಶ್ವರ ದೇವಸ್ಥಾನದ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಸಂದರ್ಭ ಯುವಕ ಸಂಘದ ಅಧ್ಯಕ್ಷ ಟಿ.ಎನ್.ಬಸವರಾಜು, ಕಾರ್ಯದರ್ಶಿ ಕೆ.ಎಸ್.ನಂದೀಶ್, ಖಜಾಂಚಿ ಸತೀಶ್ (ದಾಮು), ಟಿ.ವಿ.ಅಭಿಜಿತ್, ಚಂದನ್, ರಾಜೇಶ್, ದರ್ಶನ್ ಮತ್ತು ಅರ್ಚಕ ಸುಧಾಕರ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK  ಸೆ.16 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2024-25ನೇ ಸಾಲಿನಲ್ಲಿ 78 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಮುಂದೆಯೂ ಹಲವು ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ವತಿಯಿಂದ 2024-25ನೇ ಸಾಲಿನಲ್ಲಿ ಎಂಟು ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು, ಹೋಬಳಿ ಮಟ್ಟದಲ್ಲಿಯೂ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿದೆ ಎಂದರು. ಕೊಡಗಿನ ದಾನಿಗಳು ನೀಡಿದ ದತ್ತಿನಿಧಿಯಿಂದ 51 ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ದಿನಾಚರಣೆ ಅಲ್ಲದೆ ಜಿಲ್ಲೆಯ ತಾಲ್ಲೂಕು, ಹೋಬಳಿ ಸಮಿತಿಗಳು ಸೇರಿ ಹತ್ತಕ್ಕೂ ಹೆಚ್ಚು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ನಡೆಸಿದೆ ಎಂದು ತಿಳಿಸಿದರು. ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬಂದ ಕನ್ನಡ ಜೋತಿಹೊತ್ತ ರಥವನ್ನು ಜಿಲ್ಲೆಯ ಗಡಿಭಾಗ…

Read More

ಮಡಿಕೇರಿ NEWS DESK ಸೆ.16 : ರಾಜ್ಯ ಸರ್ಕಾರದ ವತಿಯಿಂದ ಸೆ.22 ರಿಂದ ಅ.12 ರವರೆಗೆ ಹಿಂದುಳಿದ ಆಯೋಗದಿಂದ ನಡೆಯುವ ಜನತೆಯ ಶೈಕ್ಷಣಿಕ ಹಾಗೂ ಸಾಮಾಜಿಕ, ಆರ್ಥಿಕ ಜನಗಣತಿಯಲ್ಲಿ ವೀರಶೈವ ಲಿಂಗಾಯಿತ ಸಮುದಾಯದವರು ತಪ್ಪದೆ “ವೀರಶೈವ ಲಿಂಗಾಯಿತ” ಎಂದು ಬರೆಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮೀಕ್ಷೆ ಅನುಸೂಚಿಯ 8ರ ಧರ್ಮದ ಕಾಲಂನಲ್ಲಿ ನೀಡಿರುವ 11ನೇ ಕೋಡ್ ನ ‘ಇತರೆ’ ಎಂದಿರುವ ಸ್ಥಳದಲ್ಲಿ ‘ವೀರಶೈವ ಲಿಂಗಾಯಿತ ಎಂದು ಮತ್ತು 9 ರ ಜಾತಿ ಕಾಲಂ ನಲ್ಲಿ ಲಿಂಗಾಯಿತ ಅಥಾವ ವೀರಶೈವ ಎಂದು ನಿಗದಿತ ಸಂಕೇತ ಸಂಖ್ಯೆಯನ್ನು ನೀಡಿ ನಮೂದಿಸಬೇಕು. 10ರ ಉಪಜಾತಿ ಕಾಲಂ ನಲ್ಲಿ ತಮ್ಮ ಉಪಜಾತಿಗಳನ್ನು ಕೋಡ್ ಸಮೇತ ದಾಖಲಿಸಿ ಮಾಹಿತಿಗಳನ್ನು ತಪ್ಪಿಲ್ಲದಂತೆ ನೀಡಲು ಸಲಹೆ ನೀಡಿದರು. ಸಾರ್ಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಜಾತಿಗಣತಿಯ ದತ್ತಾಂಶಗಳನ್ನು ಉಪಯೋಗಿಸಿಕೊಳ್ಳುಲು ಅನುಕೂಲವಾಗುತ್ತದೆ. ಆದ…

Read More

ಮಡಿಕೇರಿ NEWS DESK  ಸೆ.16 : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರೂ ಆದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಸಂಸದ ಅಜಯ್ ಮಾರ್ಕನ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಸಾಕಾನೆ ಶಿಬಿರದಲ್ಲಿರುವ ಸೌಲಭ್ಯಗಳು, ಅಗತ್ಯವಿರುವ ವ್ಯವಸ್ಥೆಗಳು ಮತ್ತು ಆಹಾರ, ವಿಹಾರದ ಕುರಿತು ಶಾಸಕರು ಸಿಬ್ಬಂದಿಗಳೊಂದಿಗೆ ಚರ್ಚಿಸಿದರು. ಶಿಬಿರದಲ್ಲಿರುವ ಸಾಕಾನೆಗಳ ಸಂಖ್ಯೆ ಮತ್ತು ಅದಕ್ಕನುಗುಣವಾಗಿ ಇರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಿತಿಮತಿ ವಲಯ ಅಧ್ಯಕ್ಷ ನವೀನ್, ದೇವರಪುರ ವಲಯ ಅಧ್ಯಕ್ಷ ಬಸ್ ವಂತ್, ಕಾಂಗ್ರೆಸ್ ಪ್ರಮುಖರಾದ ಬೆನ್ನಿ, ಪಂಕಜ, ಹರೀಶ್ ಪೂವಯ್ಯ, ಚಿಣ್ಣಪ್ಪ, ಎ.ಜೆ.ಬಾಬು, ರಾಜು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಸೋಮಣ್ಣ, ಅಲಿರ ರಶೀದ್, ಸಂತೋಷ್, ಕುಂಡಚೀರ ಮಂಜು…

Read More

ಮಡಿಕೇರಿ ಸೆ.28 NEWS DESK : ನಾಕೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್  ಸಹಯೋಗದೊಂದಿಗೆ ಸುಂಟಿಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ವ್ಯವಸ್ಥಾಪಕ ಅನಿಕೇತ್,  ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ಹಾಗೂ ವಾರ್ಷಿಕವಾಗಿ 436/-ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000/-ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು .ಎರಡನ್ನೂ…

Read More

ಮಡಿಕೇರಿ ಸೆ.16 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಸೆ.24 ರಂದು ಎರಡನೇ ವಷ೯ದ ಕಾಫಿ ದಸರಾ ಪ್ರಯುಕ್ತ ಕಾಫಿಯಿಂದ ತಯಾರಿಸಲ್ಪಡುವ ವೈವಿಧ್ಯಮಯ ಖಾದ್ಯಗಳ ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಮತ್ತು ಕಾಫಿ ದಸರಾ ಸಮಿತಿ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.  ಕಾಫಿಯ ಮಹತ್ವ ತಿಳಿಸಲು ಮಾಹಿತಿಯುಕ್ತ ಸ್ಪಧೆ೯ಯನ್ನು ಸೆ.24 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಕಾಫಿ ಫ್ಲೆವರ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಕಪ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಬ್ರೌನಿ ವಿಭಾಗ, ಕಾಫಿ ಫ್ಲೆವರ್ ಬಿಸ್ಕತ್ ವಿಭಾಗ, ಕಾಫಿ ಫ್ಲೆವರ್ ಪುಡ್ಡಿಂಗ್ ವಿಭಾಗ. ವಿಭಿನ್ನ ರುಚಿಯಿರುವ ಕಾಫಿ ಪಾನೀಯವಿಭಾಗ ಮತ್ತು ಕಾಫಿ ಫ್ಲೇವರ್ ಚಾಕಲೇಟ್ ವಿಭಾಗ ಒಳಗೊಂಡಂತೆ 7 ವಿಭಾಗಗಳಲ್ಲಿ ಸ್ಪಧೆ೯ಗಳು ಆಯೋಜಿತವಾಗಿದೆ. ಸೆ.22 ರೊಳಗಾಗಿ ಸ್ಪಧಿ೯ಗಳು ತಮ್ಮ ಹೆಸರು ನೋಂದಾಯಿಸಲು ಸಂಪಕಿ೯ಸಬೇಕಾದ ಸಂಖ್ಯೆ – ಮೇಪಾಡಂಡ ಸವಿತಾ…

Read More

ಸಿದ್ದಾಪುರ ಸೆ.16 NEWS DESK : ಹೈದರಾಬಾದ್‌ ನಲ್ಲಿ ನಡೆದ ರಾಷ್ಟ್ರ ಮಟ್ಟದ ಫ್ಲಾಗ್ ಫುಟ್ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ  ಕರ್ನಾಟಕ ತಂಡದ ನಾಯಕಿಯಾಗಿ ಪ್ರತಿನಿದಿಸಿದ್ದ ಬಿ.ಎಂ.ದೀನಾ ಅಕ್ಟೋಬರ್ ನಲ್ಲಿ ಚೈನಾ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.  ಹಲವು ವರ್ಷಗಳಿಂದಲೂ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆ ಮಾಡಿರುವ ದೀನಾ ತರಬೇತುದಾರರಾಗಿ ಹಾಗೂ ರಾಜ್ಯ ಮಟ್ಟದ ತಂಡಗಳ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ದೀನಾ ರಾಜ್ಯ ಪ್ರಶಸ್ತಿ ವಿಜೇತೆ ಚನ್ನಯ್ಯನ ಕೋಟೆ ಸರ್ಕಾರಿ ಶಾಲಾ ಶಿಕ್ಷಕಿ ಬಿ.ಬಿ.ಜಾಜಿ ಹಾಗೂ ಅಂಚೆ ಕಚೇರಿ ಪೋಸ್ಟ್ ಮಾಸ್ಟರ್ ಮೋಹನ್ ಕುಮಾರ್ ದಂಪತಿಗಳ ಪುತ್ರಿ.

Read More

ಮಡಿಕೇರಿ NEWS DESK ಸೆ.16 : ಜಾತಿ ಜನಗಣತಿಯ ದಾಖಲೆಯಲ್ಲಿ “ಕೊಡವ” ಎಂದು ನಮೂದಿಸುವುದರಿಂದ ಕೊಡವರ ಶಾಸನಬದ್ಧ ಮತ್ತು ಸಾಂವಿಧಾನಿಕ ಹಕ್ಕುಗಳ ಅನುಮೋದನೆಗೆ ಮಹತ್ವದ ಮೈಲಿಗಲ್ಲಾಗಲಿದೆ. ಇದು ಕೊಡವರ ಹಕ್ಕನ್ನು ನಿರ್ಧರಿಸುತ್ತದೆ ಮತ್ತು ಸರ್ವತೋಮುಖ ಸಬಲೀಕರಣವನ್ನು ಖಚಿತಪಡಿಸುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪ್ರತಿಪಾದಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವರ ಆನಿಮಿಸ್ಟಿಕ್ ನಂಬಿಕೆಗಳು ಪ್ರಕೃತಿಯೊಂದಿಗಿನ ಅವರ ಸಂಪರ್ಕ ಮತ್ತು ನೈಸರ್ಗಿಕ ಪ್ರಪಂಚದ ವಿವಿಧ ಅಂಶಗಳಿಗೆ ಅವರು ಹೊಂದಿರುವ ಗೌರವದಲ್ಲಿ ಆಳವಾಗಿ ಬೇರೂರಿವೆ. ಅವರ ಆಧ್ಯಾತ್ಮಿಕ ಅಭ್ಯಾಸಗಳು ವ್ಯಾಪಕ ಶ್ರೇಣಿಯ ಅಂಶಗಳನ್ನು ಒಳಗೊಂಡಿವೆ ಎಂದು ವಿವರಿಸಿದ್ದಾರೆ. *ಪ್ರಕೃತಿ ಆರಾಧನೆ* ಭೂಮಿ ತಾಯಿ, ಪ್ರಕೃತಿ ಮಾತೆ ಮತ್ತು ದೈವಿಕ ನದಿ ಕಾವೇರಿಯನ್ನು ಪೂಜಿಸುವುದು. *ಪವಿತ್ರ ಸ್ಥಳಗಳು* ಸಮಾಧಿ ಸ್ಥಳಗಳು, ಪವಿತ್ರ ಮಂದ್, ದೈವಿಕ ಕಾಡುಗಳು ಮತ್ತು ಪವಿತ್ರ ಪರ್ವತಗಳನ್ನು ಗೌರವಿಸುವುದು.  *ಪೂರ್ವಜರ ಪೂಜೆ* ಅಗಲಿದ ಆತ್ಮಗಳು ಮತ್ತು ಪೂರ್ವಜರಿಗೆ ಗೌರವ ಸಲ್ಲಿಸುವುದು. ಸಾಂಕೇತಿಕ ಅಂಶಗಳು* ಸಂಸ್ಕಾರದ ಆಯುಧಗಳನ್ನು…

Read More