ಲೇಖಕ: admin

ಸೋಮವಾರಪೇಟೆ ಸೆ.16 NEWS DESK :  ಶ್ರೀ ನಾರಾಯಣ ಗುರು ಸೇವಾ ಸಮಿತಿ, ಸೋಮವಾರಪೇಟೆ ತುಳುನಾಡು ಬಿಲ್ಲವ ಮಹಿಳಾ ಸಂಘ ಸಂಯುಕ್ತ ಆಶ್ರಯದಲ್ಲಿ 10ನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ನಡೆಯಿತು. ಸೋಮವಾರಪೇಟೆ  ಮಾನಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ, ಮಾತನಾಡಿ ಜನಾಂಗದ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದೆ. ಪೋಷಕರು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು ಎಂದು ಹೇಳಿದರು. ಶ್ರೀನಾರಾಯಣ ಗುರು ಒಬ್ಬ ತತ್ವಜ್ಞಾನಿ, ಸಮಾಜ ಸುಧಾರಕರಾಗಿದ್ದರು. ಸೋಮವಾರಪೇಟೆಯಲ್ಲಿ ಶ್ರೀ ನಾರಾಯಣ ಗುರು ಸೇವಾ ಸಮಿತಿ ಕಟ್ಟಡೆ ನಿರ್ಮಾಣಕ್ಕೆ 5ಲಕ್ಷ ರೂ.ಗಳ ಅನುದಾನ ಕಲ್ಪಿಸುವುದಾಗಿ ಭರವಸೆ ನೀಡಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಒಂದು ಜಾತಿ, ಒಂದು ಧರ್ಮ, ಎಲ್ಲಾ ಮಾನವರಿಗೆ ಒಂದೇ ದೇವರು ಎಂದು ಬೋಧನೆ ಮಾಡಿದರು. ಶಿಕ್ಷಣ ಮತ್ತು ಕೃಷಿಯನ್ನು ಪ್ರೋತ್ಸಾಹಿಸಿದರು ಎಂದು ಹೇಳಿದರು. ಕುದ್ರೋಳಿ…

Read More

ಮಡಿಕೇರಿ ಸೆ.16 NEWS DESK  : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಸುಣ್ಣದ ಬೀದಿಯಲ್ಲಿರುವ ಪ್ರಸಿದ್ಧ ತುಳಸಿ ಮಾರಿಯಮ್ಮ ದೇವಸ್ಥಾನಕ್ಕೆ ವಿರಾಜಪೇಟೆ ಪುರಸಭೆ ವತಿಯಿಂದ ಕುರ್ಚಿಗಳನ್ನು ನೀಡಲಾಯಿತು. ದೇವಸ್ಥಾನ ಸಮಿತಿಯವರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಕುರ್ಚಿಗಳನ್ನು ವಿತರಿಸಿ, ಮಾತನಾಡಿ ಭಕ್ತಾದಿಗಳಿಗೆ ಅನುಕೂಲ ಆಗಲಿ ಎಂದು ಪುರಸಭೆಯವರು ಮಾಡುತ್ತಿರುವ ಈ ಸತ್ಕಾರ್ಯ ಶ್ಲಾಘನೀಯ. ತಾಯಿ ತುಳಸಿ ಮಾರಿಯಮ್ಮ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಮುಖ್ಯ ಅಧಿಕಾರಿ ನಾಚಪ್ಪ, ಪುರಸಭೆ ಸದಸ್ಯರಾದ ರಾಜೇಶ್ ಪದ್ಮನಾಭ, ಹಮೀದ್, ಸಾಯಿ ಸಮಿತಿ ಅಧ್ಯಕ್ಷರಾದ ಜಲೀಲ್, ಪುರಸಭೆ ಅಧಿಕಾರಿಗಳು, ತುಳಸಿ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ನಾಪೋಕ್ಲು ಸೆ.16 NEWS DESK : ಕೊಡಗಿನ ವಿಶಿಷ್ಟ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಚೇರಂಬಾಣೆ ಗೌಡ ಸಮಾಜದಲ್ಲಿ ಆಯೋಜಿಸಲಾಗಿದ್ದ ಕೈಲ್ ಮುಹೂರ್ತ ಸಂತೋಷಕೂಟ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಕೊಡಗಿನಲ್ಲಿ ವಿವಿಧ ಜನಾಂಗದವರು ತಮ್ಮ ಆಚಾರ, ವಿಚಾರ ಸಂಪ್ರದಾಯಗಳನ್ನು ಪಾಲಿಸುತ್ತಾ ಬಂದಿದ್ದಾರೆ. ಗೌಡ ಸಮಾಜ ಕೊಡಗಿನಲ್ಲಿ ಮಾತ್ರವಲ್ಲ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಗೌಡ ಜನಾಂಗದವರು ರಾಜಕೀಯ, ಕ್ರೀಡೆ, ಸೈನ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ಕೊಡುಗೆಯನ್ನು ಸಮಾಜಕ್ಕೆ ನೀಡಿದ್ದಾರೆ ಎಂದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಗೌಡ ಸಮಾಜದ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲಾ ಭಾಗದ ಜನರು ಒಗ್ಗೂಡಬೇಕು. ಶಿಸ್ತುಬದ್ಧ ಕಾರ್ಯಕ್ರಮ ಸಂತಸ ತಂದಿದೆ. ಸಮಾಜವನ್ನು ಒಗ್ಗೂಡಿಸುವ ಕೆಲಸವನ್ನು ಮಾಡಬೇಕು. ಬೇರೆ ಸಮಾಜದವರೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಅಗತ್ಯ. ಗೌಡ ಸಮಾಜದವರು…

Read More

ಮಡಿಕೇರಿ ಜು.16 NEWS DESK : ದೇವಾಲಯಗಳು ಹಿಂದೂಗಳ ಶ್ರದ್ಧಾಭಕ್ತಿಯ ಧಾರ್ಮಿಕ ಕೇಂದ್ರಗಳಾಗಿದ್ದು, ಸಾಮಾಜಿಕ ಸಾಮರಸ್ಯದ ಜೊತೆಗೆ ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದು ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ ರಾಜ್ಯ ಸಂಯೋಜಕ ಮನೋಹರ ಮಠದ್ ಹೇಳಿದರು. ನಗರದ ನಂದನ ಸಭಾಂಗಣದಲ್ಲಿ ನಡೆದ ದೇವಾಲಯಗಳ ಅರ್ಚಕರು ಮತ್ತು ಸಮಿತಿ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇವಾಲಯಗಳು ಹಿಂದಿನಿಂದಲೂ ಶೈಕ್ಷಣಿಕ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಿ ವಿದ್ಯಾರ್ಜನೆಯ ಕೇಂದ್ರಗಳಾಗಿತ್ತು. ರಾಜ ಮಹಾರಾಜರುಗಳ ಕಾಲದಿಂದಲೂ ಧಾರ್ಮಿಕ ಕೇಂದ್ರಗಳು ಅನೇಕ ವಿಶ್ವವಿದ್ಯಾನಿಲಯಗಳಾಗಿ ವಿದ್ಯಾರ್ಜನೆಯನ್ನು ನೀಡುವ ಮೂಲಕ ಜ್ಞಾನಕ್ಕೆ ಹೆಚ್ಚು ಒತ್ತು ನೀಡಿದ್ದವು. ಅದರ ಜೊತೆಗೆ ಸಾಂಸ್ಕೃತಿಕ ಪರಂಪರೆಯ ಕೇಂದ್ರಗಳು ಆಗಿದ್ದವು. ಅನೇಕ ಗುರುಕುಲ ಶಿಕ್ಷಣ ಪದ್ಧತಿಯು ದೇವಾಲಯದ ಅಧೀನದಲ್ಲಿ ನಡೆಯುತ್ತಿದ್ದವು. ಹೊಯ್ಸಳರು, ಚಾಲುಕ್ಯರು ಸೇರಿದಂತೆ ಅನೇಕ ರಾಜ ಮನೆತನಗಳು ಜ್ಞಾನಕ್ಕೆ ಒತ್ತು ನೀಡಿ ಅನೇಕ ವಿದ್ಯಾ ಕೇಂದ್ರಗಳನ್ನು ಸ್ಥಾಪಿಸಿದ್ದ ಉದಾಹರಣೆಗಳು ಇತಿಹಾಸದಲ್ಲಿ ಸಿಗುತ್ತವೆ. ಅಂತಹ ಅನೇಕ ವಿಶ್ವವಿದ್ಯಾನಿಲಗಳು ಈಗಲೂ ನಮ್ಮ ಕಣ್ಣಮುಂದಿವೆ ಎಂದು…

Read More

ಮಡಿಕೇರಿ ಜು.16 NEWS DESK : ಮಡಿಕೇರಿಯ ಜನತಾ ಬಜಾರ್ ನ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪ್ರಮುಖ ಕೆದಂಬಾಡಿ ಎಸ್.ಪ್ರಕಾಶ್ (76) ಅವರು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸೆ.17 ರಂದು ಮಡಿಕೇರಿಯಲ್ಲಿ ನಡೆಯಲಿದೆ.

Read More

ಮಡಿಕೇರಿ ಸೆ.16 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ಪ್ರಥಮ ಬಾರಿ ರಾಜ್ಯಾಂದ್ಯಂತ ಸರ್ಕಾರದ ಆದೇಶನ್ವಯ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಸಮೀಕ್ಷೆಯನ್ನು ಏರ್ಪಡಿಸಲಾಗಿದೆ. ಸಮೀಕ್ಷೆ ಕಾರ್ಯವು ಸುಲಲಿತವಾಗಿ ನಡೆಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಈಗಾಗಲೇ ರಚನೆಯಾಗಿರುತ್ತದೆ. ಲಿಂಗತ್ವ ಅಲ್ಪಸಂಖ್ಯಾತ ಅವರನ್ನು ಮುಖ್ಯವಾಹಿನಿಗೆ ತರಲು, ಉದ್ಯೋಗ, ಶಿಕ್ಷಣ, ಮೀಸಲಾತಿ ಒದಗಿಸುವುದು, ಸಮುದಾಯದ ಜನಸಂಖ್ಯೆ, ಶೈಕ್ಷಣಿಕ ಮಟ್ಟ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಮಾಹಿತಿಯನ್ನು ಕ್ರೋಢಿಕರಿಸಿ ಸಮುದಾಯದವರೆಗೆ ಅಗತ್ಯ ಸೌಲಭ್ಯಗಳನ್ನು ನೀಡುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ. 15 ಸೆಪ್ಟಂಬರ್ 2025 ರಿಂದ 45 ದಿನಗಳ ಕಾಲ ಲಿಂಗತ್ವ ಅಲ್ಪಸಂಖ್ಯಾತ ಸಮೀಕ್ಷೆ ನಡೆಸಲು ದಿನಾಂಕ ನಿಗಧಿಯಾಗಿ ಡಿಎಫ್‍ಡಿಯು ಸಮೀಕ್ಷೆ ನಡೆಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಳ ನಿಗಧಿಯಾಗಿರುತ್ತದೆ. ಸಮುದಾಯ ಆಧಾರಿತ 5 ಸಮೀಕ್ಷೆದಾರರಿಗೆ ಸಮೀಕ್ಷೆ ನಡೆಸಲು ತರಬೇತಿ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಲಿಂಗತ್ವ…

Read More

ನಾಪೋಕ್ಲು ಸೆ.16 NEWS DESK : ಎಲ್ಲಾ ಜಾತಿ ಧರ್ಮದವರು ಒಗ್ಗೂಡಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಸುನ್ನೀ ಮುಹಿಯದ್ದೀನ್ ಜುಮಾ ಮಸೀದಿ ವತಿಯಿಂದ  ಆಯೋಜಿಸಲಾಗಿದ್ದ  ಮದದೇ ಮದೀನ ಮಿಲಾದ್  ಬೃಹತ್ ಸಮಾವೇಶ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸರ್ವಧರ್ಮ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ ಎಲ್ಲಾ ವರ್ಗದ ಜನರು ಶಾಂತಿಯುತ ಬದುಕನ್ನು ನಡೆಸುತ್ತಾ ಬಂದಿದ್ದಾರೆ. ಆಚರಣೆಗಳಲ್ಲಿ ಭಿನ್ನತೆ ಇದ್ದರೂ ಎಲ್ಲ ಧರ್ಮದವರು ಶಾಂತಿಯನ್ನು ಕಾಪಾಡಬೇಕಾದದ್ದು ಅತ್ಯಗತ್ಯ. ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಶ್ರಮವಹಿಸಿ ಇಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ತಾವು ಬಾಹ್ಯವನ್ನು ಉದ್ದರಿಸುವುದಕ್ಕಿಂತ ನಮ್ಮನ್ನು ನಾವು ಉದ್ದರಿಸಿಕೊಂಡು ಜೀವನ ಸಾಗಿಸಬೇಕು. ಸಾಮಾಜಿಕವಾಗಿರುವ ಎಲ್ಲ ಚೌಕಟ್ಟುಗಳನ್ನು ಕಳಿಸಿಕೊಂಡು ಇಡೀ ಮನುಕುಲವನ್ನು ಪ್ರೀತಿಸುವುದು ಸಹಜವಾದ ಧರ್ಮ ಎಂದರು. ನಾಪೆÇೀಕ್ಲುವಿನ  ಸಂತಮೇರಿ ಚರ್ಚ್ ನ ಜ್ಞಾನಪ್ರಕಾಶ್…

Read More

ಮಡಿಕೇರಿ ಸೆ.16 NEWS DESK : ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ(ಆತ್ಮ) ಯೋಜನೆಯಡಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2025-26ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಬಿ ಎಸ್ಸಿ, ಎಂಎಸ್ಸಿ (ಕೃಷಿ /ತೋಟಗಾರಿಕೆ/ ಮೀನುಗಾರಿಗೆ/ಅರಣ್ಯ ರೇಷ್ಮೆ) ಹೊಂದಿರಬೇಕು. 1 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಆಫಿಸ್‍ನಲ್ಲಿ ಪರಿಣತಿ ಹೊಂದಿರತಕ್ಕದ್ದು. 45 ವರ್ಷದೊಳಗಿರಬೇಕು. ಮಾಸಿಕ ಗೌರವ ಧನ ರೂ.25 ಸಾವಿರ ಆಗಿದೆ. ಈ ಹುದ್ದೆಗೆ ಅರ್ಹರಿರುವ ಆಭ್ಯರ್ಥಿಗಳು ಸೆಪ್ಟೆಂಬರ್, 30 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಿದೆ, ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಆತ್ಮ ವಿಭಾಗ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು…

Read More

ಬೆಂಗಳೂರು NEWS DESK ಸೆ.15 : ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ? ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿಯಲು ನಮ್ಮ‌ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ. ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಯು ಟ್ಯೂಬ್ ಚಾನಲ್ ಗಳ…

Read More

ಮಡಿಕೇರಿ NEWS DESK ಸೆ.15 : ವಿರಾಜಪೇಟೆ ತಾಲ್ಲೂಕಿನ ಮೈತಾಡಿ ಗ್ರಾಮದ ನಿವಾಸಿ ಬೊಳ್ಳಪಂಡ ಎಂ.ಭೀಮಯ್ಯ ಎಂಬುವವರಿಗೆ ಸೇರಿದ ಹಸುವನ್ನು ಕಳ್ಳತನ ಮಾಡಿದ ಆರೋಪದಡಿ ಮೂವರು ಆರೋಪಿಗಳನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ತಾಲ್ಲೂಕು ಕೊಂಡಂಗೇರಿ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಆಶಿಕ್(22), ಶಾಹಿದ್(25) ಹಾಗೂ ಹ್ಯಾರೀಸ್(34) ಬಂಧಿತ ಆರೋಪಿಗಳಾಗಿದ್ದಾರೆ. ಸೆ.5ರಂದು ಬೊಳ್ಳಪಂಡ ಎಂ.ಭೀಮಯ್ಯ ಅವರ ಹಸು ಕಾಣೆಯಾಗಿರುವ ಕುರಿತು ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಶೇಷ ತಂಡ ರಚಿಸಿ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದರು. ಹ್ಯಾರೀಸ್ ಎಂಬಾತ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024ರಲ್ಲಿ ನಡೆದ ಗೋವು ಕಳವು ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿವೈಎಸ್‌ಪಿ ಮಹೇಶ್ ಕುಮಾರ್.ಎಸ್, ವಿರಾಜಪೇಟೆ ವೃತ್ತ ನಿರೀಕ್ಷಕ ಪಿ.ಅನೂಪ್ ಮಾದಪ್ಪ, ಗ್ರಾಮಾಂತರ ಠಾಣಾಧಿಕಾರಿ ಲತಾ.ಎನ್.ಜೆ, ಸಿಬ್ಬಂದಿಗಳಾದ ಸಾಜನ್, ಜೋಸ್ ನಿಶಾಂತ್, ಸಂತೋಷ್ ಚೌಹನ್, ಅಬ್ದುಲ್ ಮಜೀದ್, ಬೋಪಣ್ಣ ಅವರುಗಳು ಕಾರ್ಯಾಚರಣೆ ನಡೆಸಿದರು.

Read More