ಮಡಿಕೇರಿ NEWS DESK ಸೆ.15 : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರದ ಕಾಫಿ ಎಸ್ಟೇಟ್ ಲೈನ್ಮನೆಯ ನಿವಾಸಿಗಳಾದ ಪಶ್ಚಿಮ ಬಂಗಾಳ ರಾಜ್ಯ ನಾದಿಯ ಜಿಲ್ಲೆ ಮೂಲದ ಅರ್ಚನಾ ಸರ್ದಾರ್(30) ಹಾಗೂ ತಪಾನ್ ಸರ್ದಾರ್(38) ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರ ಬಳಿಯಿಂದ 1 ಕೆ.ಜಿ 166 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ. ಬಾಡಗ ಬಾಣಂಗಾಲ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿರಾಜಪೇಟೆ ಡಿವೈಎಸ್ಪಿ ಸೂರಜ್.ಪಿ.ಎ, ಮಡಿಕೇರಿ ನಗರ ವೃತ್ತ ನಿರೀಕ್ಷಕ ರಾಜು.ಪಿ.ಕೆ, ಸಿದ್ದಾಪುರ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಲೇಖಕ: admin
ಮಡಿಕೇರಿ ಸೆ.15 NEWS DESK : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘಕ್ಕೆ ರೂ.11,86,453 ನಿವ್ವಳ ಲಾಭ ದೊರೆತ್ತಿದ್ದು, ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ತಿಳಿಸಿದ್ದಾರೆ. ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.17 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕೆಳಗಿನ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸಂಘದಲ್ಲಿ ಒಟ್ಟು 3168 ಸದಸ್ಯರಿದ್ದಾರೆ, ಅವರಲ್ಲಿ ಇಂದಿನವರೆಗೆ ಸುಮಾರು 1020 ಸದಸ್ಯರು ಪೂರ್ಣ ಪಾಲುಹಣ ಹೊಂದಿದ್ದು 534 ಮಂದಿ ಮರಣನಿಧಿಯ ಅವಕಾಶವನ್ನು ಪಡೆದುಕೊಂಡಿದ್ದಾರೆ. ಏಲಕ್ಕಿ ಬೆಳೆ ಜಿಲ್ಲೆಯಲ್ಲಿ ಕಳೆದ ಮೂವತೈದು ವರ್ಷಗಳಿಂದ ಕಟ್ಟೆರೋಗ ಮತ್ತಿತರ ಕಾರಣಗಳಿಂದ ಕುಂಠಿತವಾದ ಹಿನ್ನಲೆ ಮಡಿಕೇರಿ ಕೇಂದ್ರ ಕಛೇರಿ ಮತ್ತು ಸೋಮವಾರಪೇಟೆ ಶಾಖೆಯಲ್ಲಿ ಹತ್ಯಾರು ಮಳಿಗೆಯನ್ನು ಸ್ಥಾಪಿಸಿ ಸದಸ್ಯರಿಗೆ ಬೇಕಾದ ಉಪಕರಣ, ಗೊಬ್ಬರ, ಔಷಧಿ ಮುಂತಾದವುಗಳನ್ನು ಮಾರಾಟ ಮಾಡುವ ಮೂಲಕ ಸಂಘವನ್ನು ಮುನ್ನಡೆಸಿಕೊಂಡು ಬರಲಾಗುತ್ತಿದೆ. ಕಳೆದ 3 ವರ್ಷಗಳಿಂದ ಕೇಂದ್ರ ಕಛೇರಿಯ ಕಟ್ಟಡದಲ್ಲಿ…
ಮಡಿಕೇರಿ ಸೆ.15 NEWS DESK : ಪ್ರಜಾಪ್ರಭುತ್ವ ಇತಿಹಾಸವನ್ನು ಹೊಂದಿದಂತಹ ಭಾರತದಲ್ಲಿ ಜನಿಸಲು ನಾವೇ ಪುಣ್ಯವಂತರು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶ ಅಭಿವೃದ್ಧಿಯಾಗುತ್ತದೆ, ಜನಸಂಖ್ಯೆಯಲ್ಲಿ ವ್ಯತ್ಯಾಸ ಕಾಣುತ್ತಿದೆ. ದೇಶವು ಸುಸ್ಥಿರವಾಗಿದೆ. ಜಾತಿ ಧರ್ಮ ಭೇದಭಾವ ಇಲ್ಲದೆ ಹೀಗೆ ಸಾಗಬೇಕೆಂದರೆ ನಮ್ಮ ಮತ-ನಮ್ಮ ಹಕ್ಕು ಎನ್ನುವ ಘೋಷ ವಾಕ್ಯವನ್ನು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಯೂ ಮತ ಚಲಾಯಿಸುವ ಮುಖಾಂತರ ಪಾಲಿಸಬೇಕು ಎಂದರು. ಪ್ರಜಾಪ್ರಭುತ್ವ ಆಡಳಿತದ ಮೇಲೆ ಯುವ ಪೀಳಿಗೆ ಒಲವು ಮೂಡಿಸುವ ಕಾರ್ಯಕ್ರಮ ಹೆಚ್ಚಿಸಬೇಕು. ರಾಜಕೀಯದ ಆಡಳಿತ ಕುರಿತು ಶಿಕ್ಷಣವನ್ನು ನೀಡಬೇಕು. ಯುವ ಪೀಳಿಗೆಯನ್ನು ಸೇರಿಸಿಕೊಂಡು ರಾಜಕೀಯ ಕಾರ್ಯಕ್ರಮಗಳನ್ನು ನಡೆಸುವಂತಾಗಬೇಕು. ಆಗಲೇ ರಾಜ್ಯವು ಸುಸ್ಥಿರವಾಗಿರುವುದು ಎಂದು ನುಡಿದರು. ಅಕ್ಕ-ಪಕ್ಕದ ರಾಷ್ಟ್ರದಲ್ಲಿ…
ಕೊಡಗು ಸೆ.15 NEWS DESK : ಪಿರಿಯಾಪಟ್ಟಣದ ಮಲಬಾರ್ ಜುಮಾ ಮಸೀದಿ ಕಮಿಟಿ ವತಿಯಿಂದ ಎರಡು ದಿನಗಳ ಕಾಲ ನಡೆದ ಮಜ್ದೇ ಮದೀನ ಮಿಲಾದ್ ಫೆಸ್ಟ್ ಸಮ್ಮೇಳನ ಸಂಭ್ರಮದಿಂದ ನಡೆಯಿತು.ಸಮಾರೋಪ ಸಮಾರಂಭದಲ್ಲಿ ಅಂತರಾಷ್ಟ್ರೀಯ ವಾಗ್ಮಿ ಉಸ್ತಾದ್ ನೌಶಾದ್ ಬಾಖವಿ ಮಾತನಾಡಿ, ಗ್ರಾಮಗಳಲ್ಲಿ ನಡೆಯುವ ಹಬ್ಬ ಆಚರಣೆಗಳ ಮೂಲಕ ಶಾಂತಿ ಸಹ ಬಾಳ್ವೆಯ ಸಂದೇಶದೊಂದಿಗೆ ಸೌಹಾರ್ದತೆ ನೆಲಸುವಂತಾಗಲಿ. ಮಿಲಾದ್ ಆಚರಣೆ ಸಂದರ್ಭದಲ್ಲಿ ಎಲ್ಲಾ ಬಾಂಧವರು ಪಾಲ್ಗೊಳ್ಳುವಿಕೆಯೊಂದಿಗೆ ಪಿರಿಯಾಪಟ್ಟಣ ಗ್ರಾಮ ಮಾದರಿಯಾಗಿದೆ. ಪ್ರತಿಯೊಬ್ಬರು ಶಾಂತಿ ಸಹ ಬಾಳ್ವೆಯೊಂದಿಗೆ ನೆಮ್ಮದಿಯ ಜೀವನ ನಡೆಸಿದ್ದಲ್ಲಿ ಸೌಹಾರ್ದತ್ತ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದ ಅವರು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಜಾಗೃತಿ ಮೂಡಿಸಬೇಕಾಗಿದೆ. ಯುವ ಸಮೂಹ ದುಶ್ಚಟಗಳಿಂದ ದೂರವಾಗಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದರು. ಸಮಸ್ತ ಕೇಂದ್ರ ಮುಸಾವರ ಸದಸ್ಯ ಹಾಗೂ ಕೊಡಗು ಉಪ ಖಾಝಿ ಎಂ.ಎಂ.ಅಬ್ದುಲ್ಲಾ ಫೈಝಿ ಕಾರ್ಯಕ್ರಮ ಉದ್ಘಾಟಿಸಿ ದುವಾ ನೇತೃತ್ವ ವಹಿಸಿದ್ದರು. ಮಲಬಾರ್ ಮಸೀದಿ ಕಮಿಟಿ ಅಧ್ಯಕ್ಷ…
ಮಡಿಕೇರಿ ಸೆ.15 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ನೀಮಾ)ನ ಕೊಡಗು ಘಟಕವು ಇಪ್ಪತ್ತೈದನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಮುಂದಿನ ಅ.18ರ ಧನ್ವಂತರಿ ಜಯಂತಿಯಂದು ಸಂಸ್ಥೆಯ ‘ಬೆಳ್ಳಿ ಹಬ್ಬ’ವನ್ನು ಆಚರಿಸಿಕೊಳ್ಳಲಿದೆಯೆಂದು ನೀಮಾ ಅಧ್ಯಕ್ಷ ಡಾ. ರಾಜಾರಾಮ ಎ.ಆರ್. ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಸಾಲಿನ ಧನ್ವಂತರಿ ಜಯಂತಿಯ ಬಳಿಕ ನೀಮಾ ಕೊಡಗು ಘಟಕದ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ವೈವಿಧ್ಯಮಯವಾದ ಇಪ್ಪತ್ತೈದು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದೀಗ ಬೆಳ್ಳಿ ಹಬ್ಬದ ಸಮಾರಂಭವನ್ನು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ತಿಳಿಸಿದರು. :: 25 ಮಂದಿ ಸಾಧಕರಿಗೆ ಸನ್ಮಾನ :: ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ನೀಮಾ ಪ್ರಕೃತಿಗಾಗಿ, ನೈಸರ್ಗಿಕ ಚಿಕಿತ್ಸೆಗಾಗಿ ಅಥವಾ ಜನರ ಆರೋಗ್ಯಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ 25 ಸಾಧಕರನ್ನು ಗುರುತಿಸಿ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಸನ್ಮಾನಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಸೂಕ್ತ ಹೆಸರನ್ನು ಸೂಚಿಸುವಂತೆ ಕೊಡಗು ನೀಮಾ ಅಧ್ಯಕ್ಷ ಡಾ. ರಾಜಾರಾಮ ಅವರು…
ಮಡಿಕೇರಿ ಸೆ.15 NEWS DESK : ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಹಳೆಮುಡಿ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಸೆ.15 NEWS DESK : ಸುಂಟಿಕೊಪ್ಪ ಹೃದಯಭಾಗದಲ್ಲಿರುವ ಫ್ಯಾಷನ್ ಜ್ಯುವೆಲ್ಲರಿ ಶಾಪ್ನಿಂದ 22 ಗ್ರಾಂ. ತೂಕದ ಚಿನ್ನದ ಸರ ಕಳುವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಮಳಿಗೆ ಮುಚ್ಚುವ ಮೊದಲು ದಾಸ್ತಾನು ಪರಿಶೀಲಿಸುವ ಸಂದರ್ಭ ಚಿನ್ನದ ಸರ ಕಳುವು ಆಗಿರುವುದು ಅಂಗಡಿಯವರ ಗಮನಕ್ಕೆ ಬಂದಿದೆ. ತಕ್ಷಣ ಸಿಸಿ ಕ್ಯಾಮರ ಪರಿಶೀಲಿಸಿದಾಗ ಸಂಜೆ 5 ರ ಸುಮಾರಿಗೆ ಮಗುವಿನೊಂದಿಗೆ ಬಂದಿದ್ದ ಮೂವರು ಮಹಿಳೆಯರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಅಂಗಡಿ ಮಾಲೀಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಳಿಗೆಗೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
*ಕಾವೇರಿ ತೀರ್ಥೋದ್ಭವದ ಸಮಯ*
*ಸೋಮವಾರಪೇಟೆಯಲ್ಲಿ ನವ್-ವೈಭವ್* ಸೋಮವಾರ ಸೆಪ್ಟೆಂಬರ್ 22 ರಂದು ಸೋಮವಾರಪೇಟೆಯ ಸಾಕ್ಷಿ ಕನ್ವೆಷನ್ ಹಾಲ್ ನಲ್ಲಿ ಲಾಸ್ಯ -ರಿಧಿ ಆಯೋಜಿಸಿರುವ ಪ್ರದರ್ಶನ ಹಾಗೂ ಮಾರಾಟ. ನಾಡಹಬ್ಬವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಸುವರ್ಣಾವಕಾಶ. ನಾಡಿನ ಸುಪ್ರಸಿದ್ದ ಸಂಸ್ಥೆಗಳಿಂದ ವಿನ್ಯಾಸಗೊಂಡ ರೆಡಿಮೇಡ್ ಉಡುಪುಗಳು – ಮಹಿಳೆಯರ ಡಿಸೈನರ್ ಸೀರೆಗಳು ಹಾಗೂ ಉಡುಗೆಗಳು – ಗೃಹಬಳಕೆ ಸಾಮಗ್ರಿಗಳು – ಆರ್ಗಾನಿಕ್ ಉತ್ಪನ್ನಗಳು – ಆಯ್ದ ವಿನೂತನ ಶೈಲಿಯ ಆಭರಣಗಳು – ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯ ಇರುತ್ತವೆ. ಬಳಸಿದ ಜರಿರೇಶ್ಮೆ ಸೀರೆಗಳನ್ನು ಜರಿಯ ಮೌಲ್ಯ ನಿರ್ಧರಿಸಿ ಖರೀದಿಸಲಾಗುತ್ತದೆ. ಗ್ರಾಹಕರಿಗೆ ಆಹ್ಲಾದ ನೀಡಲು ಕಾಫಿ ಶಾಪ್ ವಿವಿಧ ಬಗೆಯ ವಿಶೇಷ ಕೇಕ್ ಮುಂತಾದ ಬೇಕಿಂಗ್ ಉತ್ಪನ್ನಗಳು ಕೊಡಗಿನ ಸಾಂಪ್ರದಾಯಿಕ ಶೈಲಿಯಲ್ಲಿ ಸಿದ್ಧಪಡಿಸಿದ ವೆಜ್ ಹಾಗೂ ನಾನ್ ವೆಜ್ ಖಾದ್ಯಗಳು. ಇನ್ ಡೋರ್ ಗಿಡಗಳನ್ನು ಬೆಳೆಸುವ ಮಣ್ಣು ಹಾಗೂ ಸೆರಾಮಿಕ್ ಪಾಟ್ ಗಳು. ಮರ ಹಾಗೂ ಲೋಹದಿಂದ ತಯಾರಿಸಿದ ಅಲಂಕಾರಿಕ ಕರಕುಶಲ ವಸ್ತುಗಳು. ಬನ್ನಿ… ದಸರಾ ನವರಾತ್ರಿಯ ಪವಿತ್ರ ನಾಡಹಬ್ಬಕ್ಕೆ ಮೆರಗು ನೀಡುವ ನವ್-ವೈಭವ್ ಪ್ರದರ್ಶನ ಹಾಗೂ ಮಾರಾಟಕ್ಕೆ ನಿಮ್ಮ ಆತ್ಮೀಯರನ್ನೂ ಕರೆತನ್ನಿ. ನೆನಪಿಡಿ ಸೆಪ್ಟೆಂಬರ್ 22,…
ಮಡಿಕೇರಿ ಸೆ.15 NEWS DESK : ಕನ್ನಡ ನಾಡಿನ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಸೆ.21 ರಂದು ಮಡಿಕೇರಿಯಲ್ಲಿ ‘ಕರುನಾಡು ಗಾಟ್ ಟ್ಯಾಲೆಂಟ್ ಸೆಷನ್-ಸೀಸನ್-2’ ಆಡಿಷನ್ ಆಯೋಜಿತವಾಗಿದೆಯೆಂದು ಕಾರ್ಯಕ್ರಮದ ಸಹಾಯಕ ನಿರ್ದೇಶಕರಾದ ಪಿ.ಎನ್.ದಿನೇಶ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಈವೆಂಟ್ ಕ್ಯುರೇಟರ್ಗಳಾದ ಕಿಂಬರ್ಲಿ ಕೂರ್ಗ್ ಸಹಯೋಗದಲ್ಲಿ, ನಗರದ ರಾಜಾಸೀಟ್ ರಸ್ತೆಯಲ್ಲಿನ ಹೋಟೆಲ್ ನ್ಯೂ ರಾಜದರ್ಶನ್ನಲ್ಲಿ ಸೂಚಿತ ದಿನದಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಆಡಿಷನ್ ಆಯೋಜಿತವಾಗಿದೆ. ಆಸಕ್ತರು ಅಂದು ಬೆಳಗ್ಗೆ ತಮ್ಮ ಪ್ರದರ್ಶನಕ್ಕೆ ಅಗತ್ಯವಾದ ಸಲಕರಣೆಗಳೊಂದಿಗೆ, ನಿಗದಿತ ಶುಲ್ಕ ಪಾವತಿಸಿ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.6362250778, 9164831989ನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಆಡಿಷನ್ನಲ್ಲಿ ನೃತ್ಯ, ಹಾಡುಗಾರಿಕೆ, ಮಿಮಿಕ್ರಿ, ಯೋಗ, ಜಾದು, ನಾಟಕ, ಹಾಡುಗಾರಿಕೆ, ಸಂಗೀತ ವಾದ್ಯ, ಕಲೆ, ಸಾಹಿತ್ಯ ಮತ್ತು ಇನ್ನಿತರ ಯಾವುದೇ ಪ್ರಾಕಾರಗಳಲ್ಲಿನ ತಮ್ಮ ಪ್ರತಿಭೆಯನ್ನು ಪ್ರಸ್ತುತ ಪಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ತೀರ್ಪುಗಾರರಾಗಿ ಸುಮಿತ್ ಅಮೀನ್, ಸುರಕ್ಷಾ…






